ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಲಯ್ಯ ಬಯಲಾಸೆ ಬಿಡದು ಪ ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ಅ ಜ್ಯೋತಿರ್ಮಯವಾದ ದೀಪದ ಬೆಳಕಿಗೆ ತಾನುಕಾತರಿಸಿ ಬೀಳುವ ಪತಂಗದಂದದಲಿಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ 1 ಅಂದವಹ ಸಂಪಗೆಯ ಅರಳ ಪರಿಮಳವುಂಡುಮುಂದುವರಿಯದೆ ಬೀಳ್ವ ಮಧುಪನಂತೆಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂಗಂಧ ವಾಸಿಸುವ ಘ್ರಾಣೇಂದ್ರಿಯಕೆ 2 ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡುಪ್ರಾಣಾಹುತಿಯೆಂದು ಸವಿವ ಮೀನಿನಂತೆಏಣಾಕ್ಷಿಯರ ಚೆಂದುಟಿಯ ಸವಿಯ ಸವಿಸವಿದುಜಾಣತನದಲಿ ನಲಿವ ಜಿಹ್ವೇಂದ್ರಿಯಕೆ 3 ದಿಮಿದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ-ಣಮವೆಂದು ತೋಷಿಸುವ ಕರ್ಣೇಂದ್ರಿಯಕೆ 4 ತ್ವಕ್ಕು ಮೊದಲಾದ ಪಂಚೇಂದ್ರಿಯಗಳೊಳು ಸಿಕ್ಕಿಕಕ್ಕುಲಿತೆಗೊಂಬುದಿದ ನೀನು ಬಿಡಿಸೊಸಿಕ್ಕಿಸದಿರು ಸಿಕ್ಕಿಗೆ ಆದಿಕೇಶವರಾಯದಿಕ್ಕಾಗಿ ನಿನ್ನಂಘ್ರಿಯೊಳೆನ್ನ ಮನವನಿರಿಸೊ 5
--------------
ಕನಕದಾಸ
ನಳಿನಜಾಂಡತಲೆಯದೂಗೆ |ಇಳೆಯು ನಲಿದು ಮೋಹಿಸುತಿರಲು ||ಕೊಳಲ ಪಿಡಿದು ಬಾರಿಸಿದನು |ಚೆಲುವ ಕೃಷ್ಣರಾಯನು ಪಪೊಳೆವ ಪೊಂಬಟ್ಟೆಯ ದಟ್ಟಿ |ಅಳವಡಿಸಿ ನೆಗಹಿನಿಂದ ||ಹಲವು ರನ್ನದುಂಗುರವಿಟ್ಟ |ಚೆಲುವ ಬೆರಳ ನಟಿಸುತ |||ಲಲಿತವಾಮಭಾಗತೋಳ-|ಲೊಲಿದು ಓರೆನೋಟದಿಂದ ||ಬಲದಪಾದಎಡಕೆ ಚಾಚೆ |ನಳಿನಪದಗಳೊಪ್ಪುತಿರಲು 1ಸೆಳನಡುವಿನೊಳಗೆ ಕತ್ತರಿ |ಕಳೆಯ ಸಂಚಿ, ಗಜುಗು ಚೀಲ ||ಬಿಳಿಯ ಮಣಿಯು ಗುಳ್ಳೆಗಳಿರಲು |ಮಲಯಜಾನು ಲೇಪನ ||ಜಲಜನೇತ್ರ ಕೌಸ್ತುಬಾಧಿ-|ಗಳದಿ ಸ್ವರಗಳೊಪ್ಪುತಿರಲು ||ಲಲಿತವೇಣುಕಲ್ಪನೆಯಲಿ ಗೋ-|ವಳರೆಲ್ಲರು ಕುಣಿಯಲು 2ಮಾರವಿ ದೇಸಿ ಗುರ್ಜರಿ ಭೈರವಿ |ಗೌರಿನಾಟಿಸಾವೇರಿ ಆಹೇರಿ ||ಪೂರವಿ ಕಾಂಬೋದಿ ಪಾಡಿ ದೇಶಾಕ್ಷಿ ಶಂ-|ಶಕರಾಭರಣ ರಾಗದಿ ||ಪೂರವಿ ಕಲ್ಯಾಣಿ ವಸಂತ ತೋಡಿ |ವರಾಳಿ ಗುಂಡಕ್ರಿ ಸಾರಂಗ ಸಾಳಗ ||---------------------ಸೋರಟ ಭೂಪಾಳಿ ಶ್ರೀ ರಾಗದಿಂದಲಿ 3ಹರುಷದಿ ಬಾರಿಸುವ ರವಕೆ |ಪುರದ ಸ್ತ್ರೀ ಜನರು ಎಲ್ಲ ||ಮರೆದು ಮಕ್ಕಳ ಮನೆಯ ಕೆಲಸ |ಮರೆದು ಹರಿಯ ಬಳಸಲು ||ಕರಿಯು ಮೃಗವುಕೇಸರಿಶರಭ|ಹರಿಣ ನವಿಲುಉರಗಮೋಹಿಸಿ ||ನೆರೆದು ಮರೆದು ಜಾತಿವೈರವ |ಸ್ವರವ ಕೇಳುತಿರಲು 4ಕರಗೆ ಗಿರಿಯ ಕಲ್ಲು ತರುಗ-|ಳೆರಗಿ ಪಕ್ಷಿ ತತಿಗಳಿರಲು ||ಸುರರುಸುಮನ ಸುರಿಯುತಿರಲು |ಧರೆಯು ಮುದದಿ ಕುಣಿಯುತಿರಲು ||ಶರಧಿಉಕ್ಕಿಸರಿತುಸೊಕ್ಕಿ |ಪುರರಿಪುವಿಧಿಪೊಗಳುತಿರಲು ||ವಿರಚಿಸಿದ ಪುರಂದರವಿಠಲ |ಮುರಲಿಗಾನ ಮಾಡಿದ 5
--------------
ಪುರಂದರದಾಸರು
ಸತ್ಸಂಗವಿಡಿದು ಸರ್ವೋತ್ತಮನೆ ಗತಿಯೆಂದುನೆಚ್ಚಿ ಅರ್ಚಿಸು ಗಡ ಮನುಜ ಪ.ವಿರಹ ಶಬ್ದಗಳ ಮೈಯ್ಯೊಲಿದೊಲಿದುಕೇಳಿಸತಿಯರ ಧ್ವನಿಗೆ ಮಗುಳೆ ಮೋಹಿಸುತಹರಿಣ ಘಂಟಾರವಕೆ ಬಲೆ ಬೀಳುವಂತಾಗದಿರುಹರಿಕಥೆಯಕೇಳಿಬಾಳು1ಅರಿಯದರ್ಭಕನು ಕೆಂಡವ ಮುಟ್ಟಿ ಅಳುವಂತೆಪರಸ್ತ್ರೀಯ ಸರಸಕೊಳಗಾಗಿನರಕದೊಳು ಬೀಳ್ವ ಪಾಮರನೆ ಹರಿಚರಣಾಬ್ಜಸ್ಪರುಶ ದೊರಕುವುದೆಂತೊ ನಿನಗೆ 2ದೀಪ ಕಾಶಕೆ ಪತಂಗವು ಕೆಡೆವ ಪರಿಯು ಸಲ್ಲಾಪವು ಪರಸತಿಯರೊಡನೆಶ್ರೀಪತಿಯ ಮೂರುತಿಯ ಕಂಡೆರಗು ಮೂಢಮತಿಪಾಪ ಬುದ್ಧಿಗಳನ್ನುಜರಿದು3ಶಸ್ತ್ರ್ತಧಾರೆಯ ಮಧುವ ಬಯಸುವಂತನ್ಯೋತ್ತಮ ಸ್ತ್ರೀಯರಧರಸುಧೆಬಯಸಿಚಿತ್ತವ್ಯಸ್ತವ ಮಾಣದೊಮ್ಮೆಗಾದರೆಹರಿಭಕ್ತಿರಸವೀಂಟಿ ಸುಖಿಯಾಗು 4ವನಜವನವಂ ಬಿಟ್ಟು ಅಳಿವೃಂದ ಚಂಪಕದನನೆಗೈದಿ ಪ್ರಾಣ ಬಿಡುವಂತೆವನಿತೆಯರ ವಾಸನೆಯೆ ನಿರಯದೌತಣವೆಂದುವನಜಾಕ್ಷ ನಿರ್ಮಾಲ್ಯ ಸೂಡು 5ಇಂತೆಂಬ ಪಂಚಭೌತಿಕದೇಹದಾಸೆಯೊಳುಸಂತತದಿಲಂಪಟನೀನಾಗಿಅಂತ್ಯದೊಳುಜರೆಕಾಡುವಾಗ ಕಫ ವಾತವೆಮುಂತಾದ ವ್ಯಥೆ ಬೆನ್ನ ಬಿಡವು 6ಭಸ್ಮಕ್ರಿಮಿಕೀಟವಾಗಿ ಪೋಪ ಕಾಯಕೆ ನಂಬಿವಿಸ್ಮರಣೆ ಬೇಡ ಹರಿಪದಕೆಕಶ್ಮಲಾನ್ವಿತವಾದ ಯೋನಿಗಳ ಬರವರಿತುವಿಸ್ಮರಣೆ ಬೇಡ ಹರಿಪದಕೆ 7ಬಲ್ಲಿದರ ಸಿರಿಯ ಸೈರಿಸಲಾರೆನೆಂದೆಂಬಕ್ಷುಲ್ಲಕರ ನುಡಿಯನಾಡದಿರುಎಲ್ಲಿ ಭಾಗವತರ ನಿಕೇತನಾಜೆÕಯ ಕೇಳೆಅಲ್ಲಿ ಮಧುಕರವೃತ್ತಿತಾಳು8ಹರಿದಾಸರ ವಿಲಾಸವೆ ಎನ್ನ ಸಿರಿಯೆಂದುಹರಿದಾಸರಡಿಗೆ ಮಗುಳೆರಗಿಹರಿದಾಡುವ ಮನಕೆ ಸೆರಯಿಕ್ಕಿ ಹರಿಯನೆ ನೆನೆದುಹರುಷ ಪುಳಕಿತನಾಗಿ ಬಾಳು 9ದಶಇಂದ್ರಿಯಂಗಳಿಗೆ ವಶವಾಗದಿರು ಏಕಾದಶಿ ವ್ರತಕೆ ವಿಮುಖವಾಗದಿರುದಶಶಿರಾರಿಯ ನಾಮದಶನವೆಭುಂಜಿಸುದಿಶೆಯರಿತೂ ಕಾಣನಾಗದಿರು 10ಪದ್ಮನಾಭನ ಪಾದಪದ್ಮವೆ ಗತಿಯೆಂದುಪದ್ಮಜನ ಪದಕೆ ಪೋಗುವನಪದ್ಧತಿಯವಿಡಿದುವರಪದ್ಮಪತಿ ವಾಸ ತ್ರೈಸದ್ಮನಿಗೆ ಉದ್ಯೋಗಮಾಡು11ಕಡು ಬಂಧುಬಳಗ ಸತಿಸುತರುಂಟು ವೃತ್ತಿಯೊಳುಕಡಿಮಿಲ್ಲವೆಂಬ ಪಾಶವನುಕಡಿದು ಕಡಲೊಡೆಯನೆ ಸಲಹೆಂದು ಗರ್ಜಿಸಲುಕಡೆಹಾಯಿಸಬಲ್ಲದಿದು ನಿನಗೆ 12ಆವಾಗೆ ಜಗಕೆ ಸರ್ವೋತ್ತಮನೆ ಹರಿಯೆಂದುಜೀವೋತ್ತಮನೆ ವಾಯುವೆಂದುಭಾವಶುದ್ಧಿಗಳಿಂದ ಬಯಲುಡಂಬಕಬಿಟ್ಟುಜೀವಿಸಲು ಸ್ವರೂಪ ಸುಖವಾಹುದು 13ವರಊಧ್ರ್ವಪುಂಡ್ರಹರಿಮುದ್ರೆಯನಲಂಕರಿಸುಶಿರಿ ತುಲಸಿ ಪದ್ಮಸರ ಧರಿಸುಸ್ಮರನ ಶರಕಂಜದರಿಯಾರುವರ್ಗವನೊದೆದುಹರಿದು ಬಹ ದುರಿತಗಳ ಸದೆದು 14ಏಸುಜನ್ಮದಿ ಬಂದು ನೊಂದೆ ಭವಾಟವಿಯೊಳುಮೋಸ ಹೋಗದಿರಿನ್ನು ತಿಳಿದುಬೇಸರದೆ ಉರಗಾದ್ರಿವರದ ಪ್ರಸನ್ವೆಂಕಟೇಶನಂಘ್ರಿಯ ಬಿಡದೆ ಭಜಿಸು 15
--------------
ಪ್ರಸನ್ನವೆಂಕಟದಾಸರು