ಒಟ್ಟು 5 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆ ನಾ ಬ್ರಹ್ಮಾಂಡಯೊಡೆಯ ಶ್ರೀ ವೆಂಕಟೇಶನ ಪ ಕಂಡೆ ನಾ ಭಕುತರ ಹಿಂಡುಗಳು ನೆರೆ ಕೊಂಡಾಡುತಲಿದೆ ಪದಪುಂಡರೀಕವ ನಾ ಅ.ಪ ತುಂಗ ಮಹಿಮ ಸತ್ಸಂಗವಿತ್ತು ಮನದಂತರ ವರಿ- ತಾಂಗೀರಸದೀ ಮಂಗಳ ಪೌರ್ಣಿಮೆಭಾರ್ಗವವಾಸರದಿ ಭಾರ್ಗವಿಪತಿ ನಿನ್ನನು ಗ್ರಹದಿ ನಗದೊಡೆಯ ಭಕ್ತ- ರಘಹರಿಸುತ ಪನ್ನಗಗಿರಿಯೊಡೆಯ ನಿನ್ನಯ ಗುಡಿಯನ್ನು ಬಗೆ ಬಗೆ ಸುತ್ತಿಪರ ಹಿಂಡನ್ನು ನಾ ಕಂಡೆನೋ ಜಾಗು ಮಾಡದೆ ಬಾಯಿಬೀಗವ ಕೈಕೊಂಡು ಸಾಗಿ ಕಾಸಾರದಿ ಸ್ನಾನ ಮಾಡಿಕೊಂಡು ಬಾಗಿ ವರಾಹದೇವರ ವಂದಿಸಿ ಬೇಗದಿ ಹರಕೆ ಕೈಕೊಂಡಿಹ ದೇವನ 1 ಮುಕ್ತರೊಡೆಯ ಪುರುಷೋತ್ತಮ ನಿನ್ನಯ ಭಕ್ತರ ವಿಪತ್ತುಗಳೆಲ್ಲ ಹರಿಸಿಶಕ್ತ್ಯಾನುಸಾರ ತ್ವ- ದ್ಭಕ್ತರೆಸಗುವ ಅತ್ಯಲ್ಪಭಕ್ತಿಯ ಸ್ವೀಕರಿಸಿ ಭಕ್ತಿಯಿಂದ ಪ್ರಾಕಾರದಿ ಸುತ್ತಲು ಹೊತ್ತಗಂಡದೀಪಸಾರುತಲಿ ನಿತ್ಯನೂತನ ನಿನ್ನ ಸ್ತುತಿಸುತಲೀ ಮತ್ತೆ ಉರುಳುತಲೀ ಉತ್ತಮಗತಿಪ್ರದ ವ್ಯಕ್ತನಹುದೊ ತ್ವ- ದ್ಭಕ್ತರ ಮನೋರಥ ಪೂರ್ತಿಮಾಡುವ ಭಕ್ತವತ್ಸಲನೆಂಬ ಬಿರುದು ಪೊತ್ತ ಸ- ರ್ವೋತ್ತಮ ಶ್ರೀ ಪುರುಷೋತ್ತಮ ನಿನ್ನನು2 ಬೊಮ್ಮಜನಕ ಪರಬೊಮ್ಮನೆ ನಿನ್ನಯ ಸನ್ಮಹಿಮೆಯ ನಾ ಒಮ್ಮನದೀ ಒಮ್ಮೆಯಾದರು ಮನ್ಮನದಲಿ ನಿನ್ನಯ ಸನ್ಮಂಗಳರೂಪವ ನಿಲ್ಲಿಸದೆ ಸುಮ್ಮನೆಕುಳಿತು ಇಮ್ಮನನಾಗಿರೆ ಘಮ್ಮನೆ ಎನ್ನನು ಒಳಕ್ವೈದೆ ಕಣ್ಮನದೆದುರಲಿ ನೀ ನಿಂದೆ ನೀನೆನ್ನಯ ತಂದೆ ಸನ್ಮುದದಿಂದೆ ಪಾಮರನೆಂದೆನ್ನ ಪ್ರೇಮದಿ ಕರುಣಿಸಿ ಸನ್ಮಹಿಮೆಯ ತೋರ್ದೆ ಜಗದೀಶ ಕಾಮಿತಜನರ ಕಲ್ಪದ್ರುಮ ನೀನೆಲೊ ಈ ಮೇಲುಗಿರೀಶ ಶ್ರೀ ವೆಂಕಟೇಶಾ ನಿನ್ನ3
--------------
ಉರಗಾದ್ರಿವಾಸವಿಠಲದಾಸರು
ಮೊರೆಯ ಹೊಕ್ಕೆನು ನಿನ್ನಾ | ಚರಣ ಕಮಲಕ ಸಿರಿಪತಿ ಭವರೋಗ ವೈದ್ಯ ನೆಂಬದು ಕೇಳಿ ಪ ಅನ್ಯವಾರ್ತೆಯ ಕೇಳಿ ಕಿವಿಬಧಿರಾಗದೆ ನಿನ್ನ ಕಥಾಶ್ರವಣದ ರಸದೀ ಇನ್ನು ಕೇಳುವ ಪರಿಮಾಡೋ ಅವಿದ್ಯದಾ ಕಣ್ಣಿನ ಪರಿಗೆ ಜ್ಞಾನಾಂಜನವಿಡೋದೇವಾ 1 ವಿಷಯನಂಜಲಿ ತಾಪವೆಡಗೋಂಡದೇಹಕೆ ಅಸಮಸತ್ಸಂಗ ಕಷಾಯಕೊಟ್ಟು ಹುಸಿ ನುಡಿ ಪರನಿಂದೆಯಾಡಿದ ರೋಗದಿ ಹಸಗೆಟ್ಟ ನಾಲಿಗೆ ನಾಮಾಮೃತವ ನೀಡೋ 2 ನಾಸಿಕ ಕೊರಡಾಯಿತಿಭೋಗ ದ್ರವ್ಯದಿ ವಾಸನೆ ಕೊಡು ತುಳಸಿಯಾರ್ಪಿತವಾ ಧ್ಯಾಸತೈಲದಿ ಮನಸಿನ ಕರ್ಮವಾತವಾ ದೋಷಬಿಡಿಸಿ ಕಾಯೋ ಗುರು ಮಹಿಪತಿ ಸ್ವಾಮಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾಕ ಸ್ಮರಸದೀ ಮನಸಿಗೇ ಪ ಯಾಕ ಸ್ಮರಸದೀ ಮನಸಿಗೆ | ಲೋಕದೊಳು ತನ್ನ ಸುಖಗೆ | ಮಾಕಾಂತ ನಡಿಗಳ ಮರೆಹೊಕ್ಕು | ವಿ ವೇಕ ಸೌಖ್ಯ ಪಡಿಯದೀಗ 1 ಉತ್ತಮ ಸಂಗವ ನೆರೆಮಾಡಿ ತನ್ನ | ಚಿತ್ತದ ಚಂಚಲ ನೀಡ್ಯಾಡೀ | ನಿತ್ಯದಿ ಗುರು ಹಿರಿಯರ ಶೇವೆಯಲಿ| ಹೊತ್ತು ಸಾರ್ಥಕ ಕಳಿಯದು ನೋಡು 2 ಸಣ್ಣ ದೊಡ್ಡವರಿಂದ ಭಲರೇಯಾ ಯಂದು | ಮನ್ನಿಸಿಕೊಳ್ಳದೇ ಅವರ ಕೈಯ್ಯಾ | ಕುನ್ನಿಯ ಛೀ ಸುಡು ಸುಡು ಯಂದು | ನಿನ್ನ ಜನ್ಮಕೆನಿಸುವದು ಬಲು ಕುಂದು 3 ವಿಹಿತವೇ ಅಹಿತವೆಂದು ಬಗೆವದು ತನ್ನ | ಸ್ವಹಿತವೇ ಅಹಿತೆಂದಾಚರಿಸುವುದು | ಇಹಪರ ಲೋಕಕ ಸಲ್ಲದು ಆಗಿ | ಕುಹಕ ಬುದ್ಧಿಯಿಂದಲೇ ಬಾಳುದು 4 ಜನಲಜ್ಜಾ ಮನಲಜ್ಜಾ ವೆರಡಿಲ್ಲಾ ಇದ | ಕೇನೋ ಮುಂದಣಗತಿ ಶಿವಬಲ್ಲಾ | ಅನುಮಾನ ವಿಲ್ಲಿದರೊಳು ಕಂಡು ಕೇಳಿ | ಘನಗುರು ಮಹಿಪತಿ ಜನ ಸೊಲ್ಲಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಸೆಗೆ ಬಾರೊ ಕುಸುಮನಯನ ಕುಶಲದಿಂದಲಿ ಬೇಗನೆಶಶಿಮುಖಿಯರ್ ಕರೆವರು ನಿನ್ನ ವಸುಧೆಪಾಲ ರಾಮನೊಪಅಸಮ ವೀರನನೆ ಗೆಲಿದು ಪಶುಪತಿಯ ಬಿಲ್ಲಮುರಿದುಕುಸುಮಬಾಲೆ ಕೊರಳೊಳ್ ಧರಿಸಿವಸುಧೆಸುತೆಯಕರವಪಿಡಿದು1ಕುಶಲದೀ ನಗುನಗುತಾ ಪಸರಿಸುವಿ ಮಂಟಪಕೆ ಹಸೆಗೆಧರಣಿ ಪಾಲರ್ ಲಜ್ಜೆವೆರಸಿ ಮೆರೆವ ಕೀರ್ತಿ ವಿಬುಧರೊಲಿಸೆದುರುಳದೈತ್ಯ ಕ್ರೋಧವರಿಸಿ ಸುರರುರಗದಲ್ಲಿನಿಂದುಹರುಷದಿ ಸುಮ ವರ್ಷವನ್ನು ಕರೆಯುವರೈ ಸರಸದೀ2ಜನಕರಾಯ ಹರುಷದಿಂದ ಜನಕೆ ಓಲೆ ಬರೆಯೆ ಕಂಡುಘನದಿ ದಿಬ್ಬಣ ಕೂಡಿ ಬಂದ ಜನಕ ಜನನಿಯರಿಗೆ ನಮಿಸಿಅನುನಯದಿಂ ಮನ ಓಲೈಸಿ ದನುಜಾಂತಕ ಗೋವಿಂದನೇ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ