ಒಟ್ಟು 25 ಕಡೆಗಳಲ್ಲಿ , 18 ದಾಸರು , 25 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಇದು ಎಂಥ ಸವಿ ಇಹ್ಯದು ಶ್ರೀಹರಿ ನಾಮ ಮಧುಗಿಂತ ಮಧುವಿಹ್ಯದು ಪ ಅಧಮ ಮನಸೇ ನೀನು ಸ್ವಾದ ಸವಿದುನೋಡೋ ಅಧಿಕ ಅಮೃತಕಿಂತ ಮಾಧುರ್ಯ ತುಂಬಿಹ್ಯದು ಅ.ಪ ಸುಧೆಗಿಂತ ಸುಧೆಯಿಹ್ಯದು ಮೃಷ್ಟಾನ್ನದ ಮೃದುಗಿಂತ ಮೃದುವಿಹ್ಯದು ವದನದೊಳಿಟ್ಟರೆ ವಿಧವಿಧದ್ಹಸುತೃಷೆ ಸದೆದು ಸದಮಲಸುಖ ಒದಗಿಸಿ ಕೊಡುವುದು 1 ಶುಚಿಗಿಂತ ಶುಚಿಯಿಹ್ಯದು ಹೆಚ್ಚಿಗೆ ಹೆಚ್ಚು ರುಚಿಗಿಂತ ರುಚಿಯಿದ್ಯದೋ ಉಚ್ಚಿಷ್ಟರಾಗದೆ ಬಚ್ಚಿಟ್ಟು ಸುರಿವರ್ಗೆ ನಿಶ್ಚಲಸುಖಪದ ಮೆಚ್ಚಿ ತಾ ಕೊಡುವುದು 2 ಶಾಶ್ವತಸುಖವೀಯ್ವುದೋ ಭವರೋಗ ಕೌಷಧ ಮಾಗಿಹ್ಯದೋ ದಾಸಜನರಿಗನುಮೇಷ ಸವಿಯುದೋರಿ ಪೋಷಿಸುತಿರುವುದು ಶ್ರೀಶ ಶ್ರೀರಾಮನಾಮ 3
--------------
ರಾಮದಾಸರು
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ಏಳು ಬೆಳಗಾಯಿತು ಯದುಕುಲೋತ್ತಮ | ಪರಮೇಷ್ಠಿ ಹರ ಸುರಪಾಲಕರು ಪ ಆಳುಸಹಿತದಲಿ ರಂಗಾಅ.ಪ. ವೇದವನು ತಮ ಕದ್ದು ಒಯ್ದನು | ಆಧಾರಾಗದೆ ಅದ್ರಿ ಮುಣಗಿತು || ಮೇದಿನಿಯ ಬಳಕೊಂಡು ಹೋದನು | ಅದಿತಿಯ ಸುತನು ಭಾದಿಗಾಗದಲೆ ಬಂದು ಸಕಲರು || ಆದರಣೆಯಿಂದ ಕೈಯ ಮುಗಿದು ನೀ | ದಯಾನಿಧಿ ಎಂದು ಹೊರಗೆ ಕಾದು ಐದಾರೆ ರಂಗ 1 ಅಟ್ಟುಳಿ ಹೆಚ್ಚಿತು ವೆ ಗ್ಗಳಿಸಿದರು ಛತ್ರಿಯರು ಈರೈದು ತಲೆಯವನು || ಬಲವಂತನಾದನು ಆರಿಗೊಶವಿಲ್ಲ | ಇಳೆಗೆ ಭಾರವು ತೂಕವಾಯಿತು ಕಳ-| ವಳಗೊಳಲಾರೆವೆನುತಲಿ ಅಳುಕಿ ಭಯದಲಿ | ನಿಮ್ಮ ಬಾಗಿಲ ಬಳಿಯ ಸಾರಿದರೊ ರಂಗಾ2 ಮೂರು ಪುರದವರೀಗ ನಮ್ಮನ್ನ ಮೀರಿದರು | ಕಲಿಪುರುಷ ಸುಜನರ ಮೇರೆದಪ್ಪಿಸಿ ನಡೆಸಿ || ಬಲು ವಿಕಾರ ಮಾಡಿದನು ಈ ರೀತಿ ಶ್ರಮವೆಂದು | ಸಿರಿ ವಿಜಯ- || ವಿಠ್ಠಲ ಕಾರಣಾರ್ಧವ ಕಳೆದು | ಮುಂದೆ ಉದ್ಧಾರ ಮಾಡಿದನು 3
--------------
ವಿಜಯದಾಸ
ಕಾಲ ಭುಜಗವೇಣಿಯೆ ಪೊರೆಯೆ ಲೋಲೆ ಶ್ರೀ ವರಲಕ್ಷ್ಮಿಯೆ ಪ ಫಾಲ ವಿರಾಜಿತೆ ಅ.ಪ ಇಂದು ಸುಂದರ ಭಾಸಿತೆ ವಿನುತೆ ಬಂಧುರಾಲಕ ಭೂಷಿತೆ ಇಂದಿರೆ ವಿಮಲೆ 1 ಅಂಬುಜಾನನೆ ಕಾಮಿನಿ ವಿಮಲೆ ಬಿಂಬರದನ ವಾಸೆಯೆ ಶಂಬರವೈರಿ ಶುಭಂಕರಿ ಮಹಿತೆ 2 ಪೊಳೆವ ಲೋಚನ ಥಳಕು ದೇವಿ ಬೆಳೆವ ಮಿಂಚಿನ ಬೆಳಕು ದಳಿತ ಕುಸುಮಾವಳಿ ಕಲಿತ ಮುಖಾಮಲೆ 3 ಭೃಂಗವೇಣಿಯೆ ಭಜಿಪೆ ತಾಯೆ ಶೃಂಗಾರ ಭೂಷೆ ಮಂಗಳೆ ಮಾಧವ ಮಂಗಳರೂಪೆ 4 ಮಾನಿನಿ ಗುಣಭೂಷಿತೆ ಸತತಂ ಸಾನುರಾಗದೆ ಸಲಹು ಸರ್ವಸುಖ ಸಂಪದೆ ವರದೆ5
--------------
ಬೇಟೆರಾಯ ದೀಕ್ಷಿತರು
ಕೊಡು ತೊಡಿಯ ಮೇಲೆ ನೋಡು ಗಿಣಿಯು ತನ್ನಗೂಡಿನೊಳಗೆ ಹ್ಯಾಂಗೆ ಆಡುತಲಿಹುದು ಪ ಅತ್ತರೆ ನೀನು ಎನ್ಹತ್ತಿರನಿರುವನು ಗುಮ್ಮಾಪಟ್ಟಣದೊಳಗೆ ಪುತ್ರರನೊಯ್ಯುವನು 1 ಓಡಿ ಬರುತಲುಣ್ಣು ಜೋಡು ಮಾವಿನ ಹಣ್ಣುನೀಡುವೆ ರಂಗಣ್ಣಿ ನೋಡು ಬಾ ಸಖಿಯೆ 2 ಬುತ್ತಿ ಉಣ್ಣಿಸುವೆನು ವಕ್ರ ತೇಜಿಯನೇ ಎನ್ನಹಿತ್ತಲ ಗುಬ್ಬಿಯೇ ಎನ್ನ ಹತ್ತಿರ ಕೂಡೋ 3 ಪುಟ್ಟ ಮಗುವೆ ನೀರು ಗುಟುಕು ಕುಡಿದು ಉಣ್ಣುಕೊಟ್ಟು ಹೋಗೆಲೋ ಉಮ್ಮ ಅಷ್ಟು ಹುಡುಗರೊಳು 4 ಕೂಸು ಪಡೆದವಳಿಂಥಾ ಏಸು ತಪಸು ಮಾಡಿಬೇಸರಾಗದೆ ಇಂದಿರೇಶನ ಸಲಹುವಳು 5
--------------
ಇಂದಿರೇಶರು
ಜಯ ಜಯ ನಿಮಗೆ ಜಯವಣ್ಣ ಭಯವಿಲ್ಲೀನುಡಿ ಕೇಳ್ ಚಿಣ್ಣ ಪ ಶ್ರೀ ಮನೋಹರನ ಲೀಲೆಯಿದು ಸು ಕ್ಷೇಮವಹುದು ಸತ್ಪುರುಷರಿಗೆ1 ಈ ಜಗತ್ತನೂ ಈಶ್ವರನೂ ತಾ ರಾಜನಾಗಿ ಕಾಪಾಡುವನು 2 ಕುರುಡರು ತಾವ್ ಕೆಡುವರು ಕೊನೆಗೆ 3 ಇದರೊಳುಂಟು ಬಹುವಿಧ ಭೇದ ವದರುತಿಪ್ಪದು ಸಕಲವೇದ4 ಅಂತ್ಯವಿಲ್ಲದಿಹ ಕಾರಣದಿ ಅ ನಂತ್ಯವೆಂದು ಪೇಳ್ವರು ಭರದಿ 5 ಮನುಜ ಜನ್ಮ ಬಹುದುರ್ಲಭವು ಮನನಶೀಲರಿಗಹುದು ಶುಭವು 6 ಮರೆಯಬೇಡಿ ಜನರೆ ನೀವು ಅರಿತು ಅರಿಯದವರಿಗೆ ನೋವು 7 ಕತ್ತಲೆ ಕೊನೆಯಿಲ್ಲದ ಘೋರ 8 ವುಳಿಯದು ನಿಮಗದು ಕೇಳ್ ಜನರೆ 6 ಧರ್ಮವೆಂಬ ಮೂಟೆಯ ಕಟ್ಟೆ ಬಟ್ಟೆ 10 ಗುರುವಾಜ್ಞೆಯ ಮೀರುವುದು ಸಲ್ಲ ಈ ದುರುಳತನ ನಿಮಗೆ ಸರಿಯಲ್ಲ 11 ನಾನೇ ಶ್ರೇಷ್ಠನೆಂಬುವ ಮಾತು ಶಾನೆ ವಡಕು ಗಡಿಗೆಯು ತೂತು 12 ಹಿಂದಿನವರ ಕಷ್ಟವ ನೋಡಿ ಮುಂದಕೆ ಸತ್ ಸಾಧನೆ ಮಾಡಿ 13 ಮೂರು ಕರಣ ಶುದ್ಧಿಯು ಬೇಕು ಧೀರ ಜನರಿಗಿಷ್ಟೇ ಸಾಕು 14 ಜನರ ನೋಡಿ ನಡೆಯಲಿಬೇಡಿ ಕೊನೆಗೆ ನಿಮಗೆ ಕಾಲಿಗೆ ಬೇಡಿ 15 ಹೆಚ್ಚಪೇಕ್ಷಿಸೆ ಬರುವುದಿಲ್ಲ ಮೆಚ್ಚನು ನಿಮಗೆ ಸಿರಿಯನಲ್ಲ 16 ನಿರ್ಮಲ ಮಾರ್ಗ ಹುಡುಕಿದಿರಾ 17 ಜ್ಞಾನರತ್ನ ಸಂಪಾದನೆಯು ಹೀನ ಜನರಿಗಾಗದು ಕೊನೆಯು 18 ದುರಾಸೆಯಲಿ ಕೆಡುವರು ಕೆಲರು ನರಾಧಮರು ಎಂದೆನಿಸುವರು 19 ಪರಿಯಂತ ತಂ ತಮ್ಮಟ್ಟಿಗಿಹುದು ಅಂತ 20 ಗೂಡಿನ ಮೇಲೆ ದುರಭಿಮಾನ ಮಾಡಿ ಮಾಡಿ ಕೆಡುತಿಹರು ಜನ 21 ಯೀಗೂಡಿಗೆವೊಂದಾಧಾರ ಯೋಗಿಗಳರಿವರಿದರಸಾರ 22 ವರ ರಸಗಳು ನಾಲ್ಕು ತೊಗರು 23 ಹಂಚೇಳರಿಂ ಮಾಡಿಹದೇವ 24 ಘಟಿಸಿರುವುದು ಪತ್ತಲೆಯಿದರೊಳ್ 25 ಮರನಿದೆಂದು ಶಾಸ್ತ್ರದ ಮೂಲ ಅರಿಯದೆ ನಾನೆಂಬೆನು ಬಾಲ 26 ಪಕ್ಷಿಗಳೆರಡೀ ಮರದಲ್ಲಿ ಸಾಕ್ಷಿ ಒಂದು ಒಂದಕೆ ಅಲ್ಲಿ 27 ಮರದ ಪಣ್ಣು ತಿಂಬುವದೊಂದು ನಿರುತವು ನೋಡುತಿರುವದೊಂದು 28 ದ್ವಾಸುಪರ್ಣ ಶೃತಿ ಇದರರ್ಥ ದಾಸನಾಗದಿರುವನು ವ್ಯರ್ಥ 29 ಅಧ್ಯಾತ್ಮ ವಿದ್ಯದಲಿ ತೋರುವುದೇ 30 ಜೀವನಾಮ ಆತ್ಮನಿಗುಂಟು ದೇವತಾನು ತಬ್ಬಿದ ಗಂಟು 31 ಅಭೇದ ಶೃತಿಗಳೇನಕ ವಿಧ ಸ್ವಭಾವದಿರುನಡೆ ತೋರುವದ32 ಸುರರುತ್ತಮರು ನರರಾನಿತ್ಯ ಸುರೇತರರು ನೀಚರು ಸತ್ಯ 33 ನೂರು ವರುಷ ಬದುಕುವರೆಂದು ಮೀರಿ ಮನದಿ ಯೋಚಿಸಿ ಮುಂದು 34 ಬಹು ಧನಾರ್ಜನೆಯ ವೂಹೆಯಲಿ 35 ಮೊದಲು ಅನ್ನಕಿಲ್ಲೆಂದು ಮತಿ ವಿಧ ವಿಧ ವಸ್ತ್ರಗಳಲಿ ಪ್ರೀತಿ 36 ನಾಬಡವನು ಎಂದಗಲಿರುಳು 37 ತನಗೆ ಬೇಕಂತ ಚಿಂತೆಯೊಳು 38 ಇತರರ ನೋಡಿ ತನಗಪೇಕ್ಷೆ ಗತಿ ಇಲ್ಲದೆ ಇರುವುದೆ ಶಿಕ್ಷೆ 39 ತಾವ್ ಸಮಂಜಸದಿ ಪೇಳಿದರು 40 ಪ್ರವೃತ್ತಿ ಮಾರ್ಗದ ಸಂಪತ್ತು ಭವಾಂಬುಧಿ ಸುಳಿಯು ವಿಪತ್ತು 41 ಫಲವ ಕೋರಿ ಕರ್ಮವ ಮಾಡಿ ಹಲವು ಯೋನಿಗಳೊಳೋಡಾಡಿ42 ಮರಳಿ ಮರಳಿ ಜನನ ಮರಣದೆ ದರಿಯ ಕಾಂಬ ಬಗೆ ದಾರಿಯದೆ 43 ಇದುವೆ ದೊಡ್ಡ ಸಂಸೃತಿ ವೃಕ್ಷ ತುದಿ ಮೊದಲಿಗು ದೊರಕದು ಮೋಕ್ಷ 44 ಇನ್ನು ಅಕ್ಕ ತಂಗಿಯು ಮೊದಲು 45 ಸತಿ ಸುತರು ಬಳಗಗಳು 46 ಇವರು ತನ್ನವರಿತರರಲ್ಲ ಭವ ಜಲಧಿಯ ಜಂತುಗಳೆಲ್ಲ 47 ಕೊಡದಿದ್ದರೆ ಕೋಪವು ಬಹಳ 48 ವಿತ್ತವಿರಲು ಬಂಧುಗಳೆಲ್ಲ ಹತ್ತಿ ಇವನ ಬಾಧಿಪರೆಲ್ಲ 49 ಸುಳ್ಳುಹೇಳಿದರೆ ಬಹುನಂಬಿಕೆ 50 ಹಿತೋಪದೇಶದಿ ಬಹುಕೋಪ ಪತಿತ ಜನರಿಗೆ ಇದು ಪಾಪ 51 ಒಬ್ಬ ದೈವಲೋಕಕೆ ಸತ್ಯ ಹಬ್ಬವವನ ಭಜಿಪುದಗತ್ಯ 52 ಕಾಮುಕರಿಗೆ ಕಡೆಗೂ ದುಃಖ ನೇಮವದಕೆ ಮೂಲವುರೊಕ್ಕ 53 ಸ್ಪøಹದಿಂದಲೆ ಕೋಪವು ಬಹುದು ವಿಹಿತವೆಂದು ನಗುವನೆ ಸಾಧು 54 ಲೋಭದಿಂದ ಮೂಲಕೆ ನಾಶ ಸ್ವಾಭಾವ್ಯದಿ ದುರ್ಜನಕಾಶಾ 55 ರಾಶಿ ಧನವ ಕೊಳ್ಳೆಯು ಕೊಡುವ 56 ದಾನಕೆಂದರಿಲ್ಲವು ಕಾಸು ದಂಡಕೊಡುವುದಕೆ ಬಹುಲೇಸು 57 ನಷ್ಟವಾದರೂ ಮನಕಿಷ್ಟ ದುಷ್ಟಾತ್ಮರು ಪಡುವರು ಕಷ್ಟ 58 ಆರ್ಯರುಕ್ತಿ ಕೇಳುವುದಿಲ್ಲ ಕಾರ್ಯದಲಿ ವಿಘಾತವೆ ಎಲ್ಲ 59 ಧನವಿದ್ದರು ಸೌಖ್ಯವು ಕಾಣೆ ಘನದುರಾಸೆ ಕುಜನರಿಗೆ ಆಣೆ 60 ಭೂಮಿ ಉಂಟು ತನಗೆಂಬುವರು ನೇಮದಿ ದಂಡವ ತೆರುತಿಹರು 61 ಮಳೆಬೆಳೆಯನು ನಿಂದಿಪರು ಕೆಲರು ಖಳರು ಸುಮನಸರ ದೂಷಿಪರು62 ಮೊದಲು ತುದಿಯಲಿ ದುರಭಿಮಾನ 63 ವ್ಯಾಪಾರದಿ ಧನ ಕಳಕೊಂಡು ಕೋಪ ವ್ಯಾಜ್ಯಕೆಳೆವದೆ ಫಂಡು 64 ಬಲುಧನವ ಕೂಡಿಸುತಲಿ ಮುಂದು 65 ಮುಖದಾಕ್ಷಿಣ್ಯದಿ ಮಾತಾಡಿ ವಿಕಲರನರ ಸ್ನೇಹದಿ ಕೂಡಿ66 ದೊಡ್ಡದಾಗಿ ಮನೆಯನು ಕಟ್ಟಿ ದುಷ್ಟತನದಿ ವಾದಿಸಿ ಬಿಟ್ಟಿ 67 ಕೂಲಿಯವರ ಹೊಟ್ಟೆಗೆ ಕೊಡದೆ ಲೋಲನಾಗಿ ವಂಚನೆ ಬಿಡದೆ 68 ಸಂಸಾರವಿದೆ ಸ್ಥಿರವೆಂದು ಹಿಂಸೆಪಡುತಲಿ ಸದಾನೊಂದು 69 ಚತುರ ಶೀತಿ ಲಕ್ಷಯೋನಿಗಳೊಳ್ ಮತಿಹೀನರಾಗಿ ಜನಿಸುತಲೂ 70 ಭದ್ರವು ತಮಗೆಂದು ಪ್ರಾಣಿಗಳು 71 ಇದಕ್ಕಾಗಿ ಪರಾಧೀನದಲಿ ಪದೇ ಪದೆಗೆ ತಾವು ನೋಯುತಲಿ 72 ಮನುಜ ಜನ್ಮ ಬರುವುದೆ ಕಷ್ಟ ಮಾನಿತನಾದವನೆ ಅತಿ ಶ್ರೇಷ್ಠ 73 ಭೋಧಿಸುವಾತನೆ ಶುಭತಮನು 74 ಸುಜನರಿಲ್ಲವವರದೆ ಪಂಥ 75 ಕರ್ಮಾರ್ಥ ಶೃತಿ ಗಹನದಲಿ ನಿರ್ಮಲರಾಗದೆ ಚಿಂತೆಯಲಿ&ಟಿbsಠಿ
--------------
ಗುರುರಾಮವಿಠಲ
ಜೋ ಜೋ ಜೋನಂತ ಸದ್ಗುಣಧಾಮಾ ಜೋ ಜೋ ಜೋ ಯದುವಂಶಲಲಾಮ ಜೋ ಜೋ ಸಕಲ ಮಲಾಪಹ ನಾಮ ಜೋ ಜೋ ಸಮಾಲಿಂಗಿಹ ಸತ್ಯಧಾಮ ಪ. ನಿಗಮತತಿಗಳೆಲ್ಲ ಪೊಗಳುತ್ತಲಿಹನ ನಗಚಾಪ ಪಿತನನ್ನು ನಗುತ ಪೆತ್ತವನ ಸ್ವಗತ ಭೇದಶೂನ್ಯ ಖಗಪ ವಾಹನನ ಮಗುವೆಂದು ಕೂಗುವ ಮಾರಜನಕನ 1 ಮೂರು ಗುಣಂಗಳ ಮೀರಿದ ಸಿರಿನಲ್ಲ ಚೋರತನದಿ ಬೆಣ್ಣೆ ಮೆಲುವರೆ ಬಲ್ಲ ಈರೇಳು ಭುವನವ ಮೂರಡಿ ಮಾಡಿದ ಧೀರಗೆ ತಕ್ಕ ತೊಟ್ಟಿಲ ಕಾಣೆನಲ್ಲ 2 ಜಾಗ್ರತ್ಸ್ವಪ್ನ ಸುಷುಪ್ತಿ ಭಾವಗಳು ಭೋಗಿ ಶಯನತ್ವದಧೀನವಾಗಿರಲು ವಾಗೀಶವಾಯುಗಳರ್ಚಿಪ ನಿನ್ನನು ತೂಗುವ ರಾಗವ್ಯಾವದೊ ಪೇಳೊ ರನ್ನ 3 ಆದರು ಕಲುಷಾವನೋದನ ನಿನ್ನಯ ಪಾದಕಮಲಗಳ ಪೊಗಳಿ ಪಾಡುವರ ಕಾದುಕೊಳ್ಳುವೆನೆಂಬ ವೇದ ಸಾರವನ್ನು ನೀ ದಯ ಮಾಡಿದರೋದುವೆನಿದನು 4 ನೀರೊಳಗಾಡಬ್ಯಾಡೆಂದರೆ ಕೇಳದೆ ಮಂದರ ಪೊತ್ತು ಬೇರನೆ ಕಿತ್ತಿ ಘೋರ ದೈತ್ಯನ ಸೀಳಿ ತೋರಿ ವಾಮನ ಮೂರ್ತಿ ಧಾರುಣೀಶರ ಕೊಂದ ಧೀರ ರಾಘವನೆ 5 ಚಿಕ್ಕತನದಿ ಬಹು ರಕ್ಕಸ ಕುಲವ ಧಿಕ್ಕರಿಸುತ ಕೈಗೆ ಸಿಕ್ಕದೆ ಓಡಿ ಮಕ್ಕಳಾಟಿಕೆಯಿಂದ ಫಕ್ಕನೆ ಮಾವನ ಸೊಕ್ಕ ಮುರಿದು ನೆಲ ತಿಕ್ಕಿದ ಹರಿಯೆ 6 ಘೋರ ಜರಾಸಂಧ ಸಾಲ್ವೈಕಲವ್ಯರ ಗಾರಗೆಡಿಸಿ ದ್ವಾರಕಾ ಪುರ ರಚಿಸಿ ಕೌರವನೊಶದಲಿ ಸೇರಿದ ಧರಣಿಯ ಮಾರುತಿಯಲಿ ಪ್ರೇಮದೋರಿ ಪಾಲಿಸಿರಿ 7 ಎರಡು ಹೆಂಗಳನಾಳುವುದೆ ಬಹು ಘೋರ ಎರಡೆಂಟು ಸಾವಿರ ಮತ್ತೆಂಟು ನೂರ ನೆರಹಿಕೊಂಡರೆ ನಿನಗಾಗದೆ ಭಾರ ಪರಮಾತ್ಮ ನಿನಗಿದು ಲೀಲಾವತಾರ 8 ಬತ್ತಲೆ ತಿರುಗಿದರಾಗದೆ ದೃಷ್ಟಿ ಕರವಾಳ ಮುಷ್ಟಿ ಸುತ್ತ ತಿರುಹಿ ಪಾಪಿಗಳ ಕೊಂದ ಜಟ್ಟಿಯ ನಿತ್ಯ ನಂಬಿದಪರಿಗಾನಂದ ಪುಷ್ಟಿ 9 ಅಣುಗಳಿಗೆ ಪರಮಾಣುವಾಗಿ ನಿಲುವಿ ಘನಕಿಂತ ಘನವಾಗಿದನುಜರ ಕೊಲುವಿ ಕನಡಿಲಿ ಪ್ರತಿಫಲಿಸುವ ವೋಲಿರುವಿ ಕನಲುತ ಭಕ್ತರು ನೆನೆವಲ್ಲಿ ಒಲಿವಿ 10 ಜೋಗಿ ಜನರ ಸಹವಾಸ ಬೇಡೆಂದರೆ ಪೋಗಿ ಪೋಗಿ ಅವರ ಮನದೊಳಗಿರುವಿ ಶ್ರೀ ಗುರು ಮಧ್ವಮುನಿಯ ಮೇಲೆ ಕರುಣದಿ ಸಾಗಿ ಬಂದಿರುವೀಗ ರೌಪ್ಯ ಪೀಠದಲಿ 11 ಶೃಂಗಾರ ವಾರುಧಿ ಶ್ರೀ ಕೃಷ್ಣಜೀಯ ಮಂಗಳ ದೇವಿಯ ಮೋಹಿಪಕಾಯ ಗಂಗೆಯ ಪಡದಂಗುಷ್ಠವನಿಟ್ಟಪಾಯ ರಂಗನಾಥ ಶ್ರೀ ವೆಂಕಟರಾಯ 12
--------------
ತುಪಾಕಿ ವೆಂಕಟರಮಣಾಚಾರ್ಯ
ನೀಚಮತಿ ಎಲೆ ನೀಚಮತಿ ಊಚನೆನಿಸಿಕೊಂಬ ಯೋಚನೆ ಬಿಡುಕಂಡ್ಯ ಪ ತರಿಯದೆ ಕುಟಿಲತ್ವ ಮರೆಯದೆ ದುಶ್ಚಟ ಧರೆಯ ಭೋಗವ ನೆಚ್ಚಿ ಶರಣರ್ವೇಷÀವÀ ತಾಳಿ ಮರವೆ ಮಾಯದಿ ಬಿದ್ದು ಒರಲುವ ನರರಿಗೆ ಬರಿದೆ ಬೋಧಿಪೆನೆಂಬ ಭ್ರಮೆಯಿಂದ ಫಲವೆ 1 ಮಾಯಮೋಹಿಗಳ ಉಪಾಯದಿ ಕೂಡಿಸಿ ಸೇವಿಸದಾಹಾರ ಸೇವಿಸುತನುದಿನ ಕಾಯಬಲಿಸಿ ಕುಣಿವ ಮಾಯಮೋಹಿಯ ಬರಿ ಬಾಯ ಬ್ರಹ್ಮತ್ಯಬಂಧ ಬಯಲಪ್ಪುದೇನೆಲೆ 2 ಧರಿಸಿದ ಲಾಂಛನ ಅರಿಯದೆ ಮೇಲೆ ನೀ ಬರಿದೆ ಕಾವಿಯನ್ಹೊದ್ದು ಕರದಿ ಕಮಂಡಲ ಧರಿಸಿ ಮರುಳರಿಗೆಲ್ಲ ಪರತತ್ತ್ವವರಿಯಲು ಜರೆಮರಣದು:ಖವು ಪರಹಾರಮೆಂತೆಲೆ 3 ಭವಭವದಲಿ ಬಟ್ಟಬವಣೆಯ ಸ್ಮರಿಸಿದೆ ಭವಗೆಲಿಸುವ ಅನುಭವ ತಿಳಿಯದೆ ಸ ದ್ಭವಿಗಳ ನೆರೆಯಿಸಿ ಕವಿತೆ ಬಿಡಿಸಿ ಬಹು ಸವಿಮಾತ್ಹೇಳಲು ಮೂಲಭವಭೀಜಳಿಯುವುದೆ 4 ತನ್ನ ತನ್ನದುಯೆಂಬ ಭಿನ್ನವಿಲ್ಲದೆಸದಾ ತನ್ನ ಸ್ವರೂಪ ಪರರನ್ನು ಬಗೆದು ನಿತ್ಯ ಸನ್ನುತ ಶ್ರೀರಾಮನುನ್ನತಂಘ್ರಿಗೆ ಪೊಂದಿ ಧನ್ಯರಾಗದೆ ನರಕುನ್ನಿಯೆನಿಸುವರೇನೋ5
--------------
ರಾಮದಾಸರು
ನೀನೆನಗೆರವೆ ನಾನಿನ್ನೆಂತಗಲುವೆಬಾ ನನ್ನ ತನುವೆ ಸದ್ಗುರುವಿಗೊಂದಿಸುವರೆ ಪಮೊದಲಿಗಮಿತ ದುಷ್ಟತನುಗಳ ಸಂಗದಿಕುದಿದು ಸಂಸಾರಾಗ್ನಿಯೊಳು ಬಳಲಿದೆನುಅದರಿಂದ ನಿನ್ನ ನಿಗ್ರಹಿಸಿದೆನಲ್ಲದೆಪದರದಿರೆನ್ನೊಳು ಪಡೆಯೆ ನಿನ್ನೊಂದನೂ 1ಗುರುಸೇವೆಗಲಸದೆ ಛಳಿಮಳೆಯೆನ್ನದೆಬರಿಯ ಬಯಲ ಸಂಸಾರ ಭೋಗದಲಿಎರಗದಿರೆನ್ನ ದಾರಿಗೆ ಬಾ ನಿನ್ನಾರೈಕೆುರಲೆನ್ನೊಳಿನ್ನು ತಪಿಸಿ ಕಂಗೆಡಿಪುದಿಲ್ಲ 2ಶ್ರವಣ ಸುಖದಿ ನನ್ನ ಬೆರೆದು ಬೇರಾಗದೆಭವಶರಧಿಯ ದಾಂಟುನಂತೆ ನೀ ಮಾಡುವಿವರಿಸಿ ಹರಿಗುಣ ಕಥೆಗಳನೆಮ್ಮೊಳುಕವಿದಿಪ್ಪ ತಮವ ತೊಲಗಿಸಿಕೊಂಬ ನಾವಿನ್ನು 3ನಿನ್ನಿಂದ ಸಂಸಾರ ವಿಷಯ ಸುಖದ ಲಾಭನಿನ್ನಿಂದ ಕೃಛ್ರಾದಿ ತಪಸಿನ ಲಾಭನಿನ್ನಿಂದ ಸತ್ಕರ್ಮತೀರ್ಥಯಾತ್ರೆಯ ಲಾಭನಿನ್ನಿಂದ ವೈರಾಗ್ಯ ಭಾಗ್ಯದ ಲಾಭ 4ನಿನ್ನೊಳಗಿರುವಿಂದ್ರಿಯಂಗಳಿಂದ್ರಿಯಗಳೊಳುಣ್ಣುವ ಮನ ಮನದೊಳು ಕೂಡ್ವ ಜೀವಎನ್ನುವರೆನ್ನನೆನ್ನಿರವನರಿಯೆನಿದನಿನ್ನಿಂದ ಗುರುಕೃಪೆವಡೆದು ತಿಳಿಯಬೇಕೂ 5ನೆವವಿಲ್ಲದುಪಕಾರಗೈವೆ ನೀನೆನಗಾಗಿವಿವಿಧ ಭೋಗದ ಸುಖವೆನಗೆ ನಿನ್ನಿಂದವಿವರಿಸೆ ನಿನಗೆ ಉಂಟು ಲಾಭವು ಮತ್ತೆನವೆವೆಯಲ್ಲದೆ ವೃದ್ಧಿಯಾಗುವೆಯಾ ಪೇಳು 6ನಿನ್ನಿಂದ ಸುಖಬಟ್ಟು ನಿನ್ನ ಬಾಳಿಸಲಾರದೆನ್ನನುಳುಹುವದೆಂತನ್ಯಾಯ ಸುಖವುಉಣ್ಣುವರಾರಿದನುಂಡು ಬದುಕಿರುವಅಣ್ಣನ ತಿಳಿಯಲು ಗುರುವೆ ಗತಿ ಕಂಡ್ಯಾ 7ವಂದಿಸಿಯೂಳಿಗಗೈವಲ್ಲಿಯಲಸದೆದಂದುಗ ಸುಖಕಾಗಿ ದಾರಿದೆಗೆಯದೆಒಂದಾಗಿ ಯೆನ್ನೊಳಿದ್ದರೆ ನನ್ನ ಸುಖವ ನಾಹೊಂದಲು ನಿನಗಾನಂದವಪ್ಪುದೆ ಕೇಳು 8ಮರುಗಿ ಮನದಿ ನಮ್ಮ ಮರವೆಯಾಟವ ಕಂಡುತಿರುಪತಿ ವೆಂಕಟರಮಣನು ತಾನೆಗುರುವಾಸುದೇವಾರ್ಯನಾಗಿಹನಾತನಚರಣವ ಮರೆಯೊಕ್ಕು ಬದುಕುವ ನಡೆಬೇಗ 9ಕಂ||ಜೀವನ ನುಡಿಯನು ಲಾಲಿಸಿಭಾವದಿ ಸರಿಬಂದ ಬಗೆಯ ಕಾಣದೆ ಗರ್ವದಿತಾವೊಲಿವರೆ ಮನಬಾರದುನೀವೊಬ್ಬನೆ ಸಾಧಿಸೆನೆ ಮನ ಕೆರಳಿ ನುಡಿದುದೂ
--------------
ತಿಮ್ಮಪ್ಪದಾಸರು
ಪರಿಣಯ ಮಹೋತ್ಸವವು ಪ ಮಂಗಳ ಮಂಟಪವು ಚಪ್ಪರದಲ್ಲಿ .ಶೃಂಗಾರ ವರ ಪೀಠವು ಕಂಗೊಳಿಪ ರುಚಿರಾಂಬರಾಳಿಯು ಮಂಗಳ ಸುವಾದ್ಯಂಗಳಿಂದಲಿ 1 ಸುತ್ತ ದೀಪಾವಳಿಯು ಸುವರ್ಣದ ಮುತ್ತಿನ ತೋರಣವು ವಜ್ರ ಪದ್ಮವು ಸುತ್ತು ವೀಳೆಯ ಪುಷ್ಪ ನಿಚಯವು ಸುತ್ತೆ ಜವ್ವಾಜಿಗಳ ಪರಿಮಳ ಸುತ್ತಿ ಸುಳಿವ ಸುಗಂಧ ಲಹರಿಯು 2 ಬೀಗರು ಹಸೆಯೊಳಿರೆ ಆ ಮಧ್ಯದಿ ಬೀಗಿತ್ತಿಯರು ಕುಳ್ಳಿರೆ ಆಗ ನಿಶ್ಚಿತ ಲಗ್ನದಲ್ಲಿ ವಧೂವರರ ಪೂಜಿಯನು ಗೈಯಲು ತುಂಬಿರಲು ಸಭೆಯೊಳು 3 ದಾರಾ ಮಹೊತ್ಸವವು ಅಕ್ಷತೆಗಳ ಸೇರೆಯೊಳೆರೆಯುವುದು ನಾರಿಯರ ವರದೇವತಾಸ್ತುತಿ ಸಾರೆ ಭೂಸುರರಾಶಿಷಂಗಳು ಸೇರೆ ಸಂಗೀತಗಳ ವೈಖರಿ ಸಾರಿ ಸುರಗಣ ಜಯಜಯನ್ನಲು 4 ಮಾಡೆ ದಾನದಕ್ಷಿಣೆಯಾಗಲು ಬಾನುರಾಗದೆ ಸರ್ವರನ್ನು ವಿನೋದದಿಂದುಪಚರಿಸುತಿರಲು ಹರಸೆ ಸಂತೋಷದಿ 5
--------------
ಬೇಟೆರಾಯ ದೀಕ್ಷಿತರು
ಪಾಲಿಸೆನ್ನ ಪಂಕಜಾಕ್ಷ ಪತಿತಪಾವನ ನೀಲಮೇಘಶ್ಯಾಮ ರಮಾಲೋಲ ಜಗನ್ಮೋಹನಾ ಪ ಭವವಿದಾರ ಭಯವಿದೂರ ಭಾರ್ಗವೀವರ ಭವ ಸುರೇಶವಂದಿತಾಂಘ್ರಿಯುಗಳ ಶ್ರೀಧರ 1 ನಿನ್ನನೇ ಮರೆಹೊಕ್ಕೆ ನಾನನ್ಯಭಾವದೆ ಪನ್ನಗಾದ್ರಿನಿಲಯ ಸಲಹು ಸಾನುರಾಗದೆ ಪಾಲೆಸೆನ್ನ 2
--------------
ನಂಜನಗೂಡು ತಿರುಮಲಾಂಬಾ
ಭಕುತರಪರಾಧವ ಬಗೆಯನೀ ದೇವಭಕುತರು ತಪ್ಪಿದರೆ ಬಲು ಭಯವೀವ ಪ . ಇಟ್ಟುಣಿಸಿದ ಬಲಿ ಕಟ್ಟಿದ ಯಶೋದೆಗೆಇಷ್ಟಾರ್ಥಗಳನಂದು ಕೊಟ್ಟು ಕಾಯನೆದುಷ್ಟತನದಿ ಧೃತರಾಷ್ಟ್ರತನಯ ತನ್ನಕಟ್ಟಲು ಹವಣಿಸೆ ಕಷ್ಟವನುಣಿಸನೆ 1 ಕಾಲಲಿ ತನ್ನ ಅಂಗವನೊದ್ದ ಮುನಿಪನಮೂಲೋಕವರಿಯೆ ಮುದ್ದಿಸಿ ಮೆರೆಯನೆತಾಳದೆ ನೃಪತಿಯ ತಾನೆಂದು ತಿಳಿಯನುಕಾಲಯವನ ಬಂದು ಕಾಳು ಮಾಡಿಸನೆ 2 ಪರವಶಚಿತ್ತನಾಗಿಫಲುಗುಣ ಜರೆಯಲುಹರಿ ದೂರಾಗದೆ ಹರಣವ ಕಾಯನೆಅರಸೆಂಬ ಗರ್ವದಿಂದ ಅರಿಭಟ ಪೌಂಡ್ರಕನಧುರಕೆ ಗುರಿಯ ಮಾಡಿ ಧುರದಿ ಕೊಲಿಸನೆ3 ಶರಕೆ ಗುರಿಯ ಮಾಡಿ ಸಮರದೊಳೊಡ್ಡಿದಸುರವ್ರತÀಗಂದು ಶುಭವನೀಯನೆಹರನ ಮೆಚ್ಚಿಸಿ ತನ್ನ ಗೆಲುವ ಬಿಲ್ಲ ಬೇಡಿದಶರೀರ ಸಂಬಂಧಿಯ ಕೊಲಿಸನೆ 4 ಮಕುಟವ ಕದ್ದೊಯ್ಯಲು ಮಹಾಬಲಿಯ ಬಾಗಿಲಅಕಳಂಕನಂದು ಕಾವುದ ಬಿಟ್ಟನೆಈ ಕೃಷ್ಣ ಹಯವದನನಿಂದುಡುಪಿನ ಜನಕೆಶೋಕವಿತ್ತ ಕಳ್ಳನಿಗೆ ಶೂಲಗತಿಯೀಯನೆ5
--------------
ವಾದಿರಾಜ
ಮಂಗಳಾರತಿ ಎತ್ತಿರೆಲ್ಲ ಮಹಾತ್ಮರೆಲ್ಲ ಮಂಗಳಾರತಿ ಎತ್ತಿರೆಲ್ಲಮಂಗಳರೂಪಗೆ ಮಂಗಳ ಮಹಿಮಗೆ ಮಂಗಳಕರಗೆ ಮಂಗಳಪ್ರದಗೆ ಪ ಘೃತ ನೀಡಿಮುದದಿಂ ಚಿಜ್ಯೋತಿಯನೆ ಮುಟ್ಟಿಸಿಸದಮಲ ಸರ್ವ ಬ್ರಹ್ಮವೆ ಎಂದು 1 ತುಂಬಿ ಉಳಿವು ಇನ್ನು ಎಂಬೆಬಲುಪ್ರಭೆ ತಿಳಿಯೆ ಥಳಥಳ ಹೊಳೆಯೆ ತೊಳಗಿ ತೊಳಗಿ ಬೆಳಗಿ ಬೆಳಗಿ 2 ನಾನಾ ವರ್ಣವೆ ಪೊಳೆಯಲು ಅತ್ತಲಿತ್ತಲುನಾನಾ ವರ್ಣವ ತಾಳುತ್ತ ಎತ್ತಾಲೆತ್ತಲುತಾನು ಚಿದಾನಂದ ಗುರು ಬೇರಾಗದೆತಾನೆ ತಾನೆಯಾಗಿ3
--------------
ಚಿದಾನಂದ ಅವಧೂತರು
ಮಧ್ವರಾಯರ ಶುದ್ಧಸಿದ್ಧಾಂತ ಪದ್ಧತಿಯಲಿ ಇದ್ದ ಮನುಜಗೆ ಕರಸಿದ್ಧವೈಯ್ಯಾ ಮುಕುತೀ ಪ ಬಿದ್ದು ಪೋಗುವುದಘ ವೃಂದಗಳೆಲ್ಲವು ಶುದ್ಧಜ್ಞಾನದಿ ಸತ್ಯ ಉದ್ಭರಿಪ ಹರಿ ವೇದಸಿದ್ಧವಿದುಕಾಣೋ ಅ.ಪ. ಖ್ಯಾತಿಯಿಂದಲಿಲಂಕೆ ಸುಟ್ಟು ಪ್ರೀತಿಲಿ ರಾಮನ ಭಜಿಸಿದರೋ ವ್ರಾತಖಳಕುಲ ಘಾತಿ ಮಾಡಿಸಿ, ವೀತಿಹೋತ್ರಗೆ ತುತ್ತು ನೀಡುತ ನಾಥರಾಮನ ವರದಿ ಮುಂದಿನ ಧಾತನಾಗಿ ಬರುವ ನಮ್ಮ 1 ದ್ವಾಪರದಲಿವರು ಪಾಪಿ ದುರ್ಯೋಧನನ ಭೂಪನಂದದಿ ಅಳಿಸಿ ಶ್ರೀಪತಿಸೇವೆನಡಿಸಿದರೋ ಶ್ಯಾಮಸುಂದರ ಕೃಷ್ಣರಾಯನ ನೇಮದಿಂದಲಿನಾಮ ಪಠಿಸುತ ತಾಮಸಾರನು ಯಮಗೆ ಕಳಿಸಿ ಕಾಮವಿಲ್ಲದೆ ಯಜ್ಞವನಡೆಸಿದ ಭಾಮೆ ದ್ರೌಪದಿ ಪ್ರೇಮ ಪತಿಯಾದ2 ಕಲಿಯುಗ ಕಳ್ಳರು ಸಲ್ಲದರ್ಥಗಳನ್ನು ಸುರರು ಮೊರೆಯಿಡಲು ವಲ್ಲಭನು ಶ್ರೀನಲ್ಲ ನಲ್ಲದೆ ಇಲ್ಲ ಜಗದೊಳು ಎಂದು ಸ್ಥಾಪಿಸಿ ಎಲ್ಲವೇದದ ಎಲ್ಲನಾದವು ನಲ್ಲ ಹರಿ ಯಂತೆಂದು ತೋರಿದ 3 ಜೀವೇಶ ಬೇಧವು ಪಂಚಬೇಧವು ಸುಳ್ಳು ತಾವೆ ನಾಥರು ಜಗಕೆ ತಾರತಮ್ಯವು ಠಕ್ಕೂ ಶಿವನೆ ಸರ್ವೋತ್ತಮ ಬ್ರಹ್ಮನಿರ್ಗುಣನು ಈ ವಿಧವಾದವ ವೇದವ್ಯಾಸರ ಕಂಡು ಬದರಿಲಿ ಸೂತ್ರ ಭಾಷ್ಯವ ಮಾಧವನೆ ಜಗದಾದಿಕಾರಣ ಮೋದ ನೀಡಿದ 4 ಮಧ್ವರಾಯರವಾಣಿ ಶುದ್ಧವೇದದಸಾರ ವೇದವ್ಯಾಸರ ಮತವು ಇದುಸಿದ್ಧ ಹರಿ ಆಣೆ ಕೇಳಿ ಗದ್ದರಾಗದೆ ಬಿದ್ದು ಇವರಡಿ ತಿದ್ದಿ ಮನವನು ಒದ್ದುದುರ್ಮತ ಪದ್ಮನಾಭನ ಪಾದಧ್ಯಾನದಿ ಅದ್ದಿ ಚಿತ್ತವ ಸಿದ್ಧಮಾಡಿರೋ ಮುಕ್ತಿಪಥವ 5 ಪರಿಸರನೀತನು ಪರಮಾಪ್ತನುಹರಿಗೆ ಗುರುವೊ ಜಗಕೆಲ್ಲ ಬರುವ ಬ್ರಹ್ಮನು ಕಾಣೋ ಓಡಿಸುಮಾರಿಮತಗಳ ಇಲ್ಲವೊ ಹರಿಯ ಧಾಮವು 6 ಮೂರುಹತ್ತು ಎರಡು ಗುರುಲಕ್ಷಣ ಕಾಯರು ನಿರುತ ಹಂಸೋಪಾಸನೆ ಮೂರುವಿಧದಲ್ಲಿ ಮಾಳ್ವರು ಭಾರತೀಶನ ಸಾರಗುಣಗಳ ಸೂರಿಗಳಿಗಳವಲ್ಲ ಅರಿಯಲು ಚರಣಪಿಡಿಯಿರೋ 7 ದಶದಿಶೆಗಳ ವಳಗೆ ಬಿಸಜನಾಭನ ಕೀರ್ತಿ ಎಸೆದು ಹಿಗ್ಗುವ ನಮ್ಮ ಅಸಮ ಮಧ್ವರನೋಡೋ ನಾಶಮಾಡುತ ಭಾಸಕರು ಎಂದೆನಿಸಿದ 8 ಅನಿಲದೇವನ ನಾಮ ಕನಸಿಲಾದರು ಒಮ್ಮೆ ನೆನೆದವನೇ ಧನ್ಯ ಮಾನ್ಯನೋ ಜಗದೊಳಗೆ ದೀನನೆನಿಸುತಲಿ ದಾನಿ ಜಯಮುನಿ ಅನಿಲನಂತರ ಶ್ರೀನಿವಾಸ ಕೃಷ್ಣವಿಠಲಗೆ ಶರಣು, ಶರಣು, ಶರಣೆಂದು 9
--------------
ಕೃಷ್ಣವಿಠಲದಾಸರು