ಒಟ್ಟು 125 ಕಡೆಗಳಲ್ಲಿ , 38 ದಾಸರು , 96 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಂಡಲಿಶಯನನ ಕೋದಂಡಧರನಾ ಮಂಡಲಾಧಿಪ ತ್ರಿ------- ಬಲವಂತನ ಪ ಪುಂಡರೀಕ ವರದನ ಪುರಾಣ ಪುರುಷನ ಪಂಡರಪುರ ನಿಲಯ ಭಕ್ತರ ಚಲನ 1 ದಂಡಿ ದಾನವರನ ಛೇದನ ಮಾಡಿದನ -------ಕರುಣಿಸಿ ಕಾಯ್ದನ 2 ಪುಂಡರಾವಣನ ಶಿರಗಳ ತರಿದನ ಅಂಡಸೇರಿ ಶರಣಂದನ ಕಾಯ್ದನ 3 ಮಾನವ ದಯಮಾಡಿ ಕಾಯ್ದನ ಕವಿಜನ ರಕ್ಷಕ ಘನ ಶ್ರೀಕೃಷ್ಣನ 4 ಭುವಿನಾಯಕನ ಪೂರ್ಣ ಪ್ರಭಾಕರನ ರಾಜೀವ ನೇತ್ರನ 5 ಲವಕುಶ ಜನಕನ ರಘುಕುಲ ಶ್ರೇಷ್ಠನ -------------------- 6 ಭವಸುರ ವಂದ್ಯನ ಪರಮಾನಂದನ ಕಲೆಯುಕ್ತ ಶಿರಸೂರನ 7 -----ನಾಭನ ಪಾಂಡವ ಪಕ್ಷನ ಮುದನೂರ ವಾಸನ ಮುನಿಜನವಂದ್ಯನ 8 ಯದುಕುಲ ಭೂಷಣನ ------- ವೇದಾಂತ ವೇದ್ಯನ ವಿಶ್ವರೂಪನ 9 ಹೆನ್ನಪುರನಿಲವಾಸ 'ಹೆನ್ನೆವಿಠ್ಠಲನ’ ನಿನ್ನ ------ ಶ್ರೀತ ಜನಪೋಷಕನ 10
--------------
ಹೆನ್ನೆರಂಗದಾಸರು
ರಾಜೀವ ಲೋಚನ ಹರೇ ಮುರಾರೇ ಮಾಜೀವ ಮೋಹನ ಹರೇ ಮುರಾರೇ ಪ ರಾಜೇಂದ್ರ ನಂದನ ಹರೆ ಮುರಾರೇ ಓ ಜಾನಕೀ ಪ್ರಿಯ ಪಾಹಿ ಖರಾರೇಅ.ಪ ವಾರಾಶಿ ಗಂಭೀರ ಸಾಕೇತಧಾಮ ಮಾರಾರಿ ವಂದಿತ ಲೋಕಾಭಿರಾಮ ಘೋರಾಘಸಂಹಾರ ರಣರಂಗ ಭೀಮ ಶ್ರೀರಾಮ ಜಯರಾಮ ಕಲ್ಯಾಣರಾಮ 1 ಪವನಾತ್ಮಜಾನಂದದಾತಾಪರೇಶ ಭವನಾಶ ಜಗತೀಶ ದೈತೇಯನಾಶ ಸುವಿಲಾಸ ಮಾಂಪಾಹಿ ಶ್ರೀಮಾಂಗಿರೀಶಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
435(ಅ) ನಮೋ ಯತಿಕುಲಶಿಖಾಮಣಿಯೆ ಸುಗುಣನಿಧಿಯೆ ಮತಿಮತಾಂವರ ಮಾನಿನೇ ಪ. ಭುವನೇಂದ್ರತೀರ್ಥ ಯತಿಪ್ರವರಕರಸಂಜಾತ ಸುವಿವೇಕಿ ವರದೇಂದ್ರಕರಸಂಭವಾಯ ಗೀರ್ವಾಣ ತ- ರವ ಸುಕೃತೇಂದ್ರ ಸದ್ಗುರುವೆ ನಮೋಸ್ತುತೇ 1 ಕಾಶೀಮಠಾದಿಪತಿಯೇ ಸುಸನ್ಯಾಸಿ ಯೇ ಸ(ತ್ತ್ವ) ಗುಣಭೂಷಾಯ ತೇ ವ್ಯಾಸ ರಘುಪತಿಚರಣದಾಸವತ್ಪೂಜಕ ವಿ- ಶೇಷ ಭಕ್ತಿಜ್ಞಾನಶಾಲಿನೇ ತುಭ್ಯಂ 2 ಆಜಾನುಬಾಹುವೇ ಗೌಡಸಾರಸ್ವತ ಮ- ಹಾಜನಸಮಾಜಮಂಡಲವಾಸಿನೇ ರಾಜೀವನಯನಾಯ ನಮಿತಜನನಿಕರ ಸುರ ಭೂರಿ ರವಿತೇಜಸ್ವಿನೇ 3 ತುಷ್ಟಾಯ ಭಾಗವತನಿಷ್ಟಾಯ ದ್ವಿಜಕುಲವ ರಿಷ್ಠಾಯ ಷಡ್ವರ್ಗಜಿಷ್ಣವೇ ತುಭ್ಯಂ ದುಷ್ಟ ಜನ ದೂರಾಯ ಧೀರಾಯ ಭಕ್ತದ- ತ್ತೇಷ್ಟಾಯ ಮಹತೇ ಸಹಿಷ್ಣವೇ ಮಹತೇ 4 ಬ್ರಹ್ಮಚರ್ಯಾದಿ ವ್ರತಧರ್ಮಾತ್ಮನೇ ವಿಹಿತ ಕರ್ಮಣೇ ಸುಕೃತೇಂದ್ರ ಶರ್ಮಣೇ ತುಭ್ಯಂ ಬ್ರಹ್ಮಪಿತ ಲಕ್ಷ್ಮೀನಾರಾಯಣಾಂಘ್ರಿಧೃತಿ ಸು- ನಿರ್ಮಲಾಂತಃಕರಣ ಕರುಣನೀರಧಯೇ5
--------------
ತುಪಾಕಿ ವೆಂಕಟರಮಣಾಚಾರ್ಯ
ಇಂದಿರೆ ನಿನ್ನೊಳ್ ದೇವ ಶ್ರೀಹರಿಗಿಪ್ಪ ಪ್ರೇಮವ ಬಣ್ಣಿಸಲಸದಳ ಕಂಡ್ಯ ಪ ಜಕ್ಕ ಜವ್ವನ ಪೋಗಬಾರದೆಂದೆನುತಲಿ ಮಕ್ಕಳ ನಿನ್ನೊಳು ಜನಿಸನು ಕಂಡ್ಯ ಅಕ್ಕರೆಯನು ಶ್ರೀದೇವಿ ನೀ ಕಂಡ್ಯ 1 ಉರದೊಳು ತೊಡೆಯೊಳು ಕೊಳಲೊಳಾಭರಣದೊಳು ಕರಗಳಿಂದಲಿ ಪಾಶ್ರ್ವದೊಳಗಾಲಿಂಗಿಸಿದಾ ನೀರೊಳಕ್ರೂರಗೆ ಒಲಿಯುವಾಗಲು, ಮಹಾ ನೀರೊಳು ಪ್ರಳಯದಿ ನಿನ್ನನು ಬಿಡನು 2 ರಾಜಾಧೀರಾಜರು ಬಹುದಾರರೆಂಬರು ರಾಜೀವಾಕ್ಷನಿಗೆ ನೀನೊಬ್ಬಳೆ ಕಂಡ್ಯ ರಾಜೇಶಹಯಮುಖನಂಥ ಪ್ರೇಮಿಗಳುಂಟೆ ರಾಜೇಶ ಶ್ರೀರಾಮನರಸಿಯೊಬ್ಬಳೆ ಕಂಡ್ಯ 3
--------------
ವಿಶ್ವೇಂದ್ರತೀರ್ಥ
ಇಂದು ನೋಡಿದೆ ಗೋವಿಂದನಾ ಸರ್ವ ಸುಂದರಸಾರ ವೆಂಕಟ ರಮಣನಾ ಪ ಭಾಗೀರಥಿಯ ಪೆತ್ತವನಾ ಭವ ರೋಗವ ಕಳೆವ ರಾಜೀವನೇತ್ರನಾ ಸಾಗರದೊಳಗೆ ಒಪ್ಪುವನಾ ಭಕ್ತ ಕೂಗಲು ನಿಲ್ಲದೆ ಒದಗಿ ಬರುವನಾ1 ನಿಲ್ಲದೆಳಿಪಿಗೆ ಪೊಳೆದನಾ ಗೋ ಪಾಲಕರಿಗೆ ವೈಕುಂಠ ತೋರಿದನಾ ನೀಲಾದೇವಿಗೆ ಬಲಿದವನಾ ಭೂ ಪಾಲಗೆ ಮೆಚ್ಚಿ ಸತ್ವರವನಿತ್ತವನಾ2 ವಿಶ್ವ ಮಂಗಳದಾಯಕನಾ ಅಹಿ ವಿಷ್ಟಕಸೇನರಿಂದ ಪೂಜೆಗೊಂಬುವನಾ ವಿಶ್ವರೂಪ ವಿಲಕ್ಷಣನಾ ಸರ್ವ ವಿಶ್ವ ಪರಿಪಾಲ ಪ್ರಣತಾರ್ತಿ ಹÀರನ3 ಸುರ ಶಿರೋಮಣಿ ಸದ್ಗುಣನಾ ಸು ದರಶನ ಶಂಖ ಭಜಕರಿಗೆ ಕೊಟ್ಟವನಾ ನಿರುತ ಆನಂದ ಭರಿತನಾ ದಿವ್ಯ ಮಿರುಗುವಾಭರಣದಿಂದಲಿ ನಿಂದಿಹನಾ 4 ಶಾಮವರ್ಣ ಚತುರ್ಭುಜನಾ ನಿಜ ಕಾಮಿನಿ ಸಂಗಡ ನಲಿದಾಡುವನಾ ಹೇಮ ಗಿರಿಯಲಿದ್ದವನಾ ದೇವ ಸ್ವಾಮಿ ತೀರ್ಥವಾಸ ವಿಜಯವಿಠ್ಠಲನಾ5
--------------
ವಿಜಯದಾಸ
ಇದೇ ಇದೇ ಬ್ರಹ್ಮಮಯ ಸದಮಲಾನಂದೋದಯ ಸಾಧುಜನ ಹೃದಯ ಸದ್ಗುರು ದಯ ನಿಶ್ಚಯ ಧ್ರುವ ಸಾರಿಚಲ್ಲೆದ ಪೂರ್ಣ ಹರಿಯ ಸುಖ ನಿಧಾನ ಸುರಮುನಿಗಳ ಪ್ರಾಣ ಶರಣಜನರಾಭರಣ 1 ಬಣ್ಣಬಣ್ಣಭಾಸುವ ಪುಣ್ಯಶ್ಲೋಕರಾಜೀವ ಸಣ್ಣ ದೊಡ್ಡದಲ್ಲೀವ್ಹ ಕಣ್ಣಿಗೆ ಕಾಣಿಸುವ 2 ಗುಹ್ಯಕೆ ಗುಹ್ಯವಾದ ಮಹಾಮಹಿಮೆಯ ಬೋಧ ಮಹಿಪತಿ ಸದ್ಗೈಸಿದ ಮಹಾಗುರು ಸುಪ್ರಸಾದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನ್ನ ಕಂಗಳಿಗೆ ತೋರೊ ಶ್ರೀಕೃಷ್ಣಪ. ಕರಿಯ ಮೊರೆ ಲಾಲಿಸಿದಿ ಬೇಗನೆನೆರೆದ ಸಭೆಯಲಿ ದ್ರೌಪದಿಗೆ ಅಭಯವನಿತ್ತಿ ಅಡವಿಅರಣ್ಯದಿ ಅಹಲ್ಯೆಯ ಸಲಹಿದಿಮುಚುಕುಂದನ ರಕ್ಷಿಸಿದಿ 1 ಸೂರ್ಯನುದಿಸುತ ಅಂತ್ಯಕಾಲದಿಶರತಲ್ಪದಲಿ ಅವಗೆ ತೋರಿದಿಶರಣು ಕಾಳೀಪಣೆಯ ಮೇಲಿಟ್ಟ ಮುದ್ದುಚರಣವ ತೋರೊ ರಂಗನಾಥ 2 ಪುಟ್ಟ ಪ್ರಹ್ಲಾದನ ಸಲಹಿದಿಪಟ್ಟವನು ವಿಭೀಷಣನಿಗೆ ಸ[ಲಿಸಿ]ದಿನೆಟ್ಟನಡವಿಲಿ ಬಂದ ಧ್ರುವನಆದರಿಸಿ ಕಾಯ್ದಿ ರಂಗನಾಥ 3 ಘನವಾಗಿ ಕ್ಷೀರಾಬ್ಧಿಯಲಿ ನಿಂತಿಉನ್ನಂತವಾಗಿದ್ದ ಸತ್ಯಲೋಕವನಾಳಿದಿ ಪ್ರಸನ್ನನಾಗಿಕ್ಷ್ವಾಕು ಕಾಯಗೆಒಲಿದ ಪಾದವ ತೋರೊ ರಂಗನಾಥ 4 ಎಷ್ಟು ಹೇಳಲಿ ನಿಮ್ಮ ಮಹಿಮೆಯಸೃಷ್ಟಿಸ್ಥಿತಿಲಯವನ್ನು ಅಳೆದೀ ಪುಟ್ಟ ಪಾದವ ಎನ್ನ ಮನದಲಿಇಟ್ಟು ದಯಮಾಡೊ ಶ್ರೀಕೃಷ್ಣ ರಂಗನಾಥ 5 ದÀಕ್ಷಿಣಮುಖವಾಗಿ ಪವಡಿಸಿದಿ ದೇವಶಿಖಾಮಣಿ ಏಳೈ ಬಂದ ಭಕ್ತರಿ-ಗೆಲ್ಲ ಅಭಯ ಹಸ್ತವ ಕೊಡುವಿರಾಜೀವನೇತ್ರ ಹಯವದನ[ರಂಗನಾಥ] 6
--------------
ವಾದಿರಾಜ
ಎಲೆ ಮನ ಮುರಾರಿಯನು ಕೊಂಡಾಡು ಪ ಸಾಧನಕಿದು ಉಪಾಯ ನೋಡು ಅ.ಪ ಕಾಲನ ದೂತರ ಕಾಲಿಗೆ ಬಿದ್ದರೆ | ನಾಳೆಗೆ ನಿಲುವರೆ ನೋಡು 1 ಮಂದಿಯ ಮಾತಿಗೆ ಎಂದೆಂದು ಮರುಗದೆ | ಮುಂದಿನ ಗತಿ ನೀ ನೋಡು 2 ರಾಜೀವ ಮುಖಿಯರ ಸೋಜಿಗ ಮೆಚ್ಚದೆ | ವಿಜಯವಿಠಲನ ಪಾಡೋ3
--------------
ವಿಜಯದಾಸ
ಏಳಯ್ಯ ರಾಕ್ಷಸಾಂತಕ ದನುಜಸಂಹಾರ ಪ ಏಳಯ್ಯ ರಾಜೀವನಯನ ನವನೀತಚೋರ ಏಳು ಲಕ್ಷ್ಮೀಮನೋಹರ ಹರಿಯೆ ಅ.ಪ ದಿನಪನುದಯಂಗೆಯ್ಯೆ ದಿಕ್ಪಾಲಕರ್ನೆರೆಯೆ ಕನಕಭೂಷಣದ ಕಾಂತೆಯರು ಆರತಿಪಿಡಿಯೆ ಅನುಪಮಗೆ ಜಯವೆಂದು ಬಂದು ನಿಂದೈದಾರೆ ಇನಕುಲನೆ ನಲಿದುಪ್ಪವಡಿಸು ಶ್ರೀಹರಿಯೇ 1 ಪ್ರಹ್ಲಾದ ನಾರದರು ವಾಸಿಷ್ಠ ವಿಶ್ವಾಮಿತ್ರರು ಮಹಮುನಿಗಳತ್ರಿ ಭಾರದ್ವಾಜ ಜಮದಗ್ನಿ ಗೌತಮರು ಬಹುವಿಧದಿ ಕಶ್ಯಪರು ಹನುಮಂತ ತುಂಬುರರು ಹರುಷದಿ ಪಾಡುತ್ತಲೈದಾರೆ ಇನಕುಲನೆ ನಲಿದು 2 ದೇವಗಂಗೆಯಕೊಂಡು ದೇವರ್ಕಳೈದಿದರು ದೇವತಾವಳಿ ಬಂದು ದೇವ ಜಯವೆನುತಿಹರು ದೇವಪುರದಲಿ ನಿಂದ ದೇವಕಿಯ ವರಕಂದ ದೇವ ಲಕ್ಷ್ಮೀಪತಿಯ ದೇವ ನೀನೇಳೈ ಹರಿಯೇ 3
--------------
ಕವಿ ಲಕ್ಷ್ಮೀಶ
ಒಂದು ದಿನದಲಿ ಇಂದಿರೇಶನು ಚಂದದಿಂದಲಿ ವನಕೆ ಬಂದನು ಸುಂದರಾಂಗನು ಗೋಪ ವೃಂದದಿ ನಿಂದು ಕೊಳಲನು ಸ್ವರವಗೈದನು 1 ಕೊಳಲ ಧ್ವನಿಯನು ಕೇಳುತಾಕ್ಷಣ ಖಗಮೃಗಂಗಳು ಮಯ್ಯ ಮರತವು ತರುಣಿ ಮಣಿಯರು ಮನೆಯ ಕೆಲಸಕೆ ಮರತು ಮಯ್ಯನು ತೆರಳಿ ಬಂದರು 2 ಕೊಳಲ ಧ್ವನಿಯನು ಕೇಳಿ ಗೋಪೇರು ನಳಿನನಾಭನ ಬಳಿಗೆ ಬಂದರು ನಳಿನಮುಖಿಯರ ನೋಡಿ ಕೃಷ್ಣನು ಮುಗುಳುನಗೆಯಲಿ ಮಾತನಾಡಿದನು 3 ನಾರಿಮಣಿಯರೆ ರಾತ್ರಿ ವೇಳೆಯು ಈಗ ಇಲ್ಲಿಗೆ ಬಂದಿರೇತಕೆ ಮಾರನಯ್ಯನ ಮಾತುಕೇಳುತ ಮಡದಿ ಮಣಿಯರು ನುಡಿದರಾಗಲೆ4 ಬಾಲಕೃಷ್ಣನೆ ನಿನ್ನ ಕೊಳಲಿನ ಈಗಲೆಮ್ಮಯ ಮನವು ಹರುಷಿಸೆ ಬೇಗ ನಿನ್ನನು ಬೇಡಿಕೊಂಬೆವೊ 5 ಇಂತು ಕೃಷ್ಣನು ಸರಸವಾಡುತ ನಿಂತನವರಿಗೆ ಹರುಷ ತೋರುತ ಚಿಂತೆಯೆಲ್ಲವ ಬಿಟ್ಟು ಗೋಪೇರು ಅಂತರಾತ್ಮನ ಭಜಿಸುತಿದ್ದರು 6 ಏನು ಪುಣ್ಯವೊ ನಮ್ಮದೆನುತಲಿ ದಾನವಾರಿಯ ಸ್ಮರಿಸುತಿದ್ದರು ನಾರೇರೆಲ್ಲರ ನೋಡಿ ಕೃಷ್ಣನು ಬೇಗದಿಂದಲಿ ಅಂತರ್ಧಾನನಾದನು 7 ಸ್ಮರನ ಪಿತನನು ಸ್ಮರಿಸಿಪಾಡುವ ತರುಣಿಯರಿಗೆ ಮೈ ಸ್ಮರಣೆ ಮರೆತಿರೆ ಭರದಿ ಕಂಗಳ ತೆರೆದು ನೋಡಲು ಮುರಳೀಧರನ ಕಾಣದಲೆ ಚಿಂತಿಸಿ 8 ಜಾಜಿ ಸಂಪಿಗೆ ಸೂಜಿ ಮಲ್ಲಿಗೆ ರಾಜೀವಾಕ್ಷನ ಕಾಣಲಿಲ್ಲವೆ ಬಿಳಿಯ ಮಲ್ಲಿಗೆ ಎಳೆಯ ತುಳಸಿಯೆ ನಳಿನನಾಭನ ಸುಳಿವು ಕಾಣಿರಾ 9 ಸರಸದಿಂದಲಿ ಹರಿವ ಯಮುನೆಯೆ ಪಾದ ಕಾಣೆಯಾ ಚಿಗರಿ ಮರಿಗಳೆ ನಿಮ್ಮ ಕಂಗಳು ನಳಿನನಾಭನ ಸುಳವು ಕಾಣವೆ 10 ಯಾರ ಕೇಳಲು ಹರಿಯ ಕಾಣರು ನಾರಿಮಣಿಯರೆ ನಾವೆ ಕರೆಯುವ ಮುದ್ದು ಕೃಷ್ಣನೆ ಪದ್ಮನಾಭನೆ ಶ್ರದ್ಧೆಯಿಂದಲಿ ನಿಮ್ಮ ಭಜಿಪೆವೊ 11 ಜಯತು ಜಯತು ಶ್ರೀ ಲಕ್ಷ್ಮೀ ರಮಣನೆ ಜಯತು ಜಯತು ಶ್ರೀ ಗರುಡಗಮನನೆ ಜಯತು ಜಯತು ಶ್ರೀ ಉರಗಶಯನನೆ ಜಯತು ಜಯತು ಶ್ರೀ ಪರಮ ಪುರುಷನೆ 12 ಜಯತು ಜಾಹ್ನವಿಜನಕÀ ಶ್ರೀಶನೆ ಜಯತು ಭಕ್ತರ ಭಯವಿನಾಶನೆ ಜಯತು ಪಾವನ ಪುಣ್ಯ ಚರಿತನೆ ಜಯತು ಜಯತು ಲಾವಣ್ಯರೂಪನೆ 13 ಎಳೆಯ ಚಿಗುರಿನಂತಿರುವ ಪಾದವು ರುಳಿಯ ಗೆಜ್ಜೆಯು ಕಾಲಪೆಂಡೆಯು ಎಳೆಯ ಪಾದದಿ ಹೊಳೆವ ಪೈಜನಿ ಘಲಿರು ಘಲಿರು ಎಂದೆನುತ ಮೆರೆವುದು 14 ಪುಟ್ಟ ನಡುವಿಗೆ ಪಟ್ಟೆ ಮಡಿಗಳು ಇಟ್ಟ ಚಲ್ಲಣ ಪುಟ್ಟ ಕೃಷ್ಣಗೆ ಉಡುಗೆಜ್ಜೆಯು ಗಂಟೆ ಸರಪಳಿ ಒಪ್ಪಿ ಮೆರೆಯುವ ಕಾಂಚಿಧಾಮವು 15 ಚತುರ ಹಸ್ತದಿ ಶಂಖುಚಕ್ರವು ಗದೆಯು ಪದುಮವು ಹೊಳೆಯುತಿರುವುದು ಕಡಗ ಕಂಕಣ ತೋಳ ಬಾಪುರಿ ವಜ್ರದೊಂಕಿಯು ಮೆರೆಯುತಿರುವುದು 16 ಕೌಸ್ತುಭ ವೈಜಯಂತಿಯು ಸುರಗಿ ಸಂಪಿಗೆ ಸರಗಳೊಲಿಯುತ ಎಳೆಯ ತುಳಸಿಯ ಸರಗಳೊಪ್ಪುತ ಜರದವಲ್ಲಿಯು ಜಾರಿ ಬೀಳಲು 17 ವÀಕ್ಷ ಸ್ಥಳದಿ ಶ್ರೀಲಕ್ಷ್ಮಿ ಒಪ್ಪಿರೆ ರತ್ನ ಪದಕಗಳೆಲ್ಲ ಶೋಭಿಸೆ ಮಕರ ಕುಂಡಲ ರತ್ನದ್ಹಾರಗಳಿಂದ ಒಪ್ಪಿರೆ 18 ಗುರುಳು ಕೂದಲು ಹೊಳೆವೊ ಫಣೆಯಲಿ ತಿಲುಕ ಕಸ್ತೂರಿ ಶೋಭಿಸುತ್ತಿರೆ ಎಳೆಯ ಚಂದ್ರನ ಪೋಲ್ವ ಮುಖದಲಿ ಮುಗುಳು ನಗೆಯು ಬಾಯ್ದಂತ ಪಂಕ್ತಿಯು 19 ಪದ್ಮನೇತ್ರಗಳಿಂದ ಒಪ್ಪುತ ಪದ್ಮ ಕರದಲಿ ಪಿಡಿದು ತಿರುವುತ ಪದ್ಮಲೋಚನೆಯನ್ನು ನೋಡುತ ಪದ್ಮನಾಭನು ಕೊಳಲನೂದುತ 20 ರತ್ನ ಮುತ್ತಿನ ಕಿರೀಟ ಶಿರದಲಿ ಮತ್ತೆ ನವಿಲಿನ ಗರಿಗಳೊಪ್ಪಿರೆ ಹಸ್ತಿ ವರದನು ಎತ್ತಿ ಸ್ವರವನು ಮತ್ತೆ ಕೊಳಲನು ಊದೊ ದೇವನೆ 21 ಸುಂದರಾಂಗನೆ ಮಂದಹಾಸನೆ ಮಂದರೋದ್ಧರ ಬಾರೋ ಬೇಗನೆ ಇಂದಿರೇಶನೆ ಇಭರಾಜವರದನೆ ರಂಗನಾಥನೆ ಬಾರೊ ಬೇಗನೆ22 ಮದನ ಮೋಹನ ಪಾರಮಹಿಮನೆ ಬಾರೊ ಬೇಗನೆ ಶ್ರೀರಮಾಪತೆ ಶ್ರೀ ನಿಕೇತನ ವಾರಿಜಾಕ್ಷನೆ ಬಾರೊ ಬೇಗನೆ 23 ಹೀಗೆ ಗೋಪೇರು ಮೊರೆಯನಿಡುತಿರೆ ಮಂಗಳಾಂಗನು ಬಂದನೆದುರಿಗೆ ಧ್ವಜ ವಜ್ರಾಂಕುಶ ಪದ್ಮ ಪಾದವು ಅಡಿಯನಿಡುತಿರೆ ಧರಣಿ ನಲಿವಳು 24 ಹರಿಯ ನೋಡುತ ಪರಮ ಹರುಷದಿ ತರುಣಿಮಣಿಯರು ಹರುಷ ಪಡುತಲಿ ಪರಮ ಮಂಗಳ ಚರಿತ ದೇವಗೆ ಸ್ವರವನೆತ್ತಿ ಮಂಗಳವ ನುಡಿದರು 25 ಶುಭ ಕಂಬು ಕಂಠಗೆ ಮಂಗಳಂ ಮಹಾ ಮಾರನಯ್ಯಗೆ ಮಂಗಳಂ ಮಹಾ ಮುದ್ದುಕೃಷ್ಣಗೆ ಮಂಗಳಂ ಜಯ ಮಂಗಳಾಂಗಗೆ 26 ಕಮಲ ಮುಖಿಯರು ನಮಿಸಿ ಕೃಷ್ಣಗೆ ಸರಸವಾಡುತ ಹರುಷ ಪಡುತಲಿ ಕಮಲನಾಭ ವಿಠ್ಠಲನ ಕೂಡುತ ಮನದಿ ಸುಖವನು ಪಡುತಲಿದ್ದರು 27
--------------
ನಿಡಗುರುಕಿ ಜೀವೂಬಾಯಿ
ಕೃಷ್ಣ ಕೃಪಾಲ ಕರುಣಾದಾಯಕ ಕರುಣಾದಾಯಕ ದುಷ್ಟಮರ್ದನ ಶಿಷ್ಟಜನಪಾಲಕ ಧ್ರುವ ಮಾಧವ ಮಧುಸೂದನ ಮಧುಸೂದನ ಪಂಕಜನಾಭ ಪತಿತಪಾವನ ಶಂಖಚಕ್ರಧರ ಸಂಕರುಷಣ ಸಂಕುರಷಣ ಪತಿ ರಾಜೀವನಯನ 1 ಕಸ್ತೂರಿತಿಲಕ ಕೌಸ್ತುಭಭೂಷಣ ಕೌಸ್ತುಭಭೂಷಣ ಮಸ್ತಕ ಮುಗುಟ ಮದನಮೋಹನ ಭಕ್ತವತ್ಸಲ ಹರಿ ನಾರಾಯಣ ನಾರಾಯಣ ವಸ್ತುಪರಾತ್ಪರ ನಿಜನಿರ್ಗುಣ 2 ಗರುಡಗಮನ ಉರಗಶಯನ ಉರಗಶಯನ ಸುರಬ್ರಹ್ಮಾದಿ ವಂದಿತಚರಣ ಕರುಣಾನಂದ ಪರಿಪೂರಣ ಪರಿಪೂರಣ ತರಳ ಮಹಿಪತಿ ಜೀವಜೀವನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣಾತೀರದಿ ಕುಳಿತಿಷ್ಟವ ಸಲಿಸುವನ್ಯಾರೇ ಪೇಳಮ್ಮಯ್ಯ ಪ ಕಷ್ಟರಹಿತ ಸಂತುಷ್ಟರೆನಿಪ ಸತ್ಯೇಷ್ಟತೀರ್ಥ ಕರಜಪರಾಕ್ರಮರೇ ಅ.ಪ. ಬೋಧ ಮುನಿಯು ಮತ ಶುಭವಾರಿಧಿ ತಾರಕೆ ತಾರೆನೆನಿಪ ಜೀವತಾರ ಶಶಿಕಾಣಮ್ಮ 1 ಶುಭ ತಿಲುಕಾಂಕಿತದಿಂದೊಪ್ಪುವನ್ಯಾರೆ ಪೇಳಮ್ಮಯ್ಯಚಂದ್ರಕಂಠಮಾಲೆ ಕರದಿ ದಂಡವ ಧರಿಸಿಹನ್ಯಾರೆ ಪೇಳಮ್ಮಯ್ಯ ಚಂದ್ರಚರಣ ನಖಶಿಖ ಪರಿಪೂರ್ಣದಿಂದೊಪ್ಪುವ ಗುರುವರ್ಯ ಕಾಣಮ್ಮ 2 ವೃಂದಾವನವರ ಮಂದಿರ ಮಧ್ಯದಿ ರಾಜೀವನ್ಯಾರೇ ಪೇಳಮ್ಮಯ್ಯ ವೃಂದಾರಕ ವರವೃಂದ ವಿನುತನ್ಯಾರೆ ಪೇಳಮ್ಮಯ್ಯ ವೃಂದಾವನ ಸುಂದರ ಗುಣಗಳಿಂಧೊಳೆ ಯುವನ್ಯಾರೆ ಪೇಳಮ್ಮಯ್ಯ ವೃಂದಾವನದೊಳಗಾಶ್ರಿತ ತಂದೆವರದಗೋಪಾಲವಿಠಲನಸೇವಿಪರೇ 3
--------------
ತಂದೆವರದಗೋಪಾಲವಿಠಲರು
ಜನುಮ ಸಾರ್ಥಕವ ಮಾಡಿಸು ತಂದೇ ನೆನೆವರ ಕಾವನು ನೀನೆಂದು ಬಂದೇ ಪ ನಾನಿರುವುದು ಲೌಕಿಕರ ಸಮೂಹ ಏನ ಗೈವುದೋ ಪ್ರಪಂಚದ ಮೋಹ 1 ಅಜ್ಞನು ನಾ ನನ್ನದೆಂಬುದ ಬಿಡಿಸು ಸುಜ್ಞಾನದೀಪ ಕೊಟ್ಟು ಪ್ರಜ್ವಲಿಸು 2 ಅಜ್ಞನಾ ಯೆನ್ನಪರಾಧಾವ ಕ್ಷಮಿಸು ವಿಜ್ಞಾಪಿಸಿಕೊಂಬೇ ನೀ ಮನಸ್ಕರಿಸು 3 ಹಗಲಿರಳು ಯನ್ನ ಹೆಗಲೊಳು ಕುಳಿತು ಮಿಗಿಲಾಗಿಸು ದಿನ್ಯ ಸೇವೆಗಳನಿತು 4 ನಾಲಗೆ ಮಧ್ಯದಿ ನೀ ನಲಿದಾಡಿ ಬಾಳುವೆಯೆಲ್ಲವು ಭಜಿಪುದ ಮಾಡಿ 5 ಕಣ್ಣೆಲ್ಲಿ ಸುಳಿದರೆ ಅಲ್ಲಿನೀ ಕಂಡು ಉನ್ನತವೈಭವ ತೋರು ಮನಗೊಂಡು 6 ಜಾಜೀಕೇಶವ ಜಯ ಪದವಿತ್ತು ರಾಜೀವಾಂಬಕ ಪೊರೆ ಭಾರಪೊತ್ತು 7
--------------
ಶಾಮಶರ್ಮರು
ಜಯ ದೇವ ಜಯ ದೇವ ಜಯ ಜಗಜೀವನ ಕರ ರತ್ನ ಧ್ರುವ ಅಜ ಸುರ ಮುನಿ ಪ್ರಾಣ ರಾಜೀವ ನಯನ ಸುಜನ ಸುಭೂಷಣ ತ್ರಿಜಗ ಪಾವನ 1 ಭಕ್ತ ಜನ ಉದ್ಧಾರ ಘನಗುರು ದಾತಾರ ಪತಿತಪಾವನಮೂರ್ತಿ ಮುನಿಜನ ಮಂದಾರ ಅತಿಶಯಾನಂದ ಅನುಪಮ ವ್ಯಾಪಕ ನಿರ್ಧಾರ ಸತತ ಸುಪಥ ಸದ್ಗುರು ಸಹಕಾರ 2 ಸಹ್ಯಾದ್ರಿ ಗಿರಿವಾಸ ಶ್ರೀಗುರು ಸರ್ವೇಶ ಬಾಹ್ಯಾಂತ್ರ ಪರಿಪೂರ್ಣ ಜಗದೀಶ ಮಹಿಪತಿಸ್ವಾಮಿ ಶ್ರೀ ದೇವದೇವೇಶ ದಾತ ಭಾಸ್ಕರಕೋಟಿ ಪ್ರಕಾಶ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತೆರಳಿದರು ವ್ಯಾಸತತ್ವಜ್ಞರಿಂದು ಪುರುಷೋತ್ತಮನ ಗುಣಗಳರುಪಿ ಸುಜನರಿಗೆ ಪ ವರ ರೌದ್ರಿನಾಮ ಸಂವತ್ಸರದ ಶ್ರಾವಣ ಪರಪಕ್ಷ ಅಷ್ಟಮಿ ಭಾನುವಾರ ಭರಣಿ ನಕ್ಷತ್ರ ಪ್ರಾತಃಕಾಲದಲಿ ಸೋಮ ಪಾದ ಸನ್ನಿಧಿಗೆ 1 ಭಾಗವತ ಮೊದ ಲಾದ ಶಾಸ್ತ್ರಗಳ ಕೀರ್ತನೆಗೈಯುತಾ ಪಾದೋದಕವ ಶಿರದಿ ಧರಿಸುತಿಪ್ಪ ವರಘತಿ ರೋಧಾನಗೈಸಿ ಪರಗತಿ ಮಾರ್ಗವನು ತೋರಿ 2 ಸೋಜಿಗವಿದಲ್ಲ ಸಜ್ಜನರನುದ್ಧರಿಸುವುದು ನೈಜ ಜಗನ್ನಾಥ ವಿಠ್ಠಲನ ಪಾದ ರಾಜೀವಯುಗಳ ನಿವ್ರ್ಯಾಜದಲಿ ಭಜಿಪ ಪ್ರ ಯೋಜನನೊರೆದಿತರ ವ್ಯಾಪಾರ ತೊರೆದು 3
--------------
ಜಗನ್ನಾಥದಾಸರು