ಒಟ್ಟು 90 ಕಡೆಗಳಲ್ಲಿ , 41 ದಾಸರು , 83 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
ಕನಸನು ಕಂಡೆನು ಕೇಳೌ ಘನ ಶ್ರೀ ಗುರು ಬಂದು ಶಾಸ್ತ್ರ ತತ್ವವ ಪೇಳ್ದಂ ಮನಸಿನ ಸಂಶಯವಳಿಯಿಸಿ ತನಯಗೆ ರಾತ್ರಿಯೊಳು ತೋರಿದಂ ಸತ್ಪಥಮಂ ಕಂದ ಕನಸನು ಕಂಡೆನು ಕೇಳೌ ಶ್ರೀಗುರುಭರದಿಂ ತಾ ಬಂದೂ ಪ ತನಯನ ಸಂಶಯವಳಿಯಿಸಿ ಪರತರ ಗತಿಯನು ತಾ ಕೊಡುವ ಅ.ಪ ಶ್ರೀಹರಿ ಪೂಜೆಯು ಸ್ತೋತ್ರವು ಚಿಂತನೆ-ಶ್ರೀಹರಿಮಂತ್ರವನೂ ಶ್ರೀಹರಿ ಲಾಂಛನ ಧರಿಸುತ ಸಂತತ ವಿಠಲನ ಭಜಿಸೆಂದು 1 ಬಂಧುರದೇಗುಲ ವರಕ್ಷೇತ್ರದೊಳಾನಂದವನೋಡುತಲೀ ನಿಂದಿಹ ಪರಿಪರಿ ಸಾಧುವೈಷ್ಣವರಿಗೊಂದನೆಮಾಡೆಂದ 2 ಸತ್ಯಪ್ರಬಂಧವು ಅಷ್ಟಾಕ್ಷರಿಜಪತತ್ವ ಸುದ್ವಯಮಂತ್ರ ನಿತ್ಯಹೃದಯದೊಳು ಸೋಹಂಭಾವದಿ ಭಕ್ತಿಯೊಳ್ಬೆರೆಯೆಂದ 3 ವರಮಹದೇವನ ಪುರಶ್ರೀರಂಗನಚರಣವ ಗುರಿಮಾಡೀ ಮರೆಯದೆ ಧ್ಯಾನಿಸು ನಾನೇ ನಿನ್ನನು ಪೊರೆಯುವೆನೆಂತೆಂದ 4
--------------
ರಂಗದಾಸರು
ರಂಗ ನಿನ್ನಯ ಮುಖ ತೋರಯ್ಯ ಪ ಅರ್ಧರಾತ್ರಿಯಲ್ಲವತರಿಸಿದ್ಯೊ ಹೋಗಿ ಮುದ್ದು ಗೋಪಿಯ ಸುತನೆನಿಸಿದ್ಯೊ ಭದ್ರದೇವಿಯರ ನೀ ಕಳಿಸಿದ್ಯೊ ಬಂ ದಿದ್ದ ಪೂತಣಿಯ ಸಂಹರಿಸಿದ್ಯೊ 1 ವತ್ಸಕಾಯುತಲ್ಹೋಗಿ ವನದೊಳು ಬಂದ ಕಿಚ್ಚು ನುಂಗಿದೆ ನಿನ್ವದನದೊಳು ಸ್ವಚ್ಛಮಾಡಿದಿ ಕಾಳಿಜಲಗಳು ತೋರೆ ಕುಕ್ಷಿಯೊಳಗೆ ತ್ರಿಜಗಂಗಳು 2 ದೇವಕ್ಕಿದೇವಿ ಯಶೋದಾನೆ ವಸು ದೇವ ನಂದ ಬಲರಾಮಗೆ ಎದುರು ಬಾರೋ ಭೂದೇವಿರಮಣನೆ ಭೀಮೇಶ ಕೃಷ್ಣನೆÀ ಶ್ಯಾಮವರಣನೆ3
--------------
ಹರಪನಹಳ್ಳಿಭೀಮವ್ವ
ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದು ಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿ ಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟು ಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿ ಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡು ದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನ ಸ್ಥಾ(ಸ್ಥ)ಳವ ಶುದ್ಧ ಮಾಡು ಸ್ಥಿರವಾದ ಮನಸಿನ ಸೂತ್ರವಿಡಿದು ಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿ ಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರ ಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆ ಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತ ದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನು ಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿ ವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾ ಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟು ವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ತಿಮಿರ ನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪ ಪರಮ ಸಾಧು ಹರಹರಾ 31 ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ನರಸಿಂಹ
ಅಧ್ಯಾಯ ಎರಡು ಪದ:ರಾಗ:ಯರಕಲಕಾಂಬೋದಿ ತಾಳ:ಬಿಲಂದಿ, ಸ್ವರ ಷಡ್ಜ ದೇವಕಿಯಲಿ ಅವತರಿಸಿದ ದೇವಾಧೀಶನ ಕಂಡು ಆ ವಸುದೇವನು ಸ್ತುತಿಸಿದ ಕೇವಲ ಭಕುತಿಯಲಿ | ಲಾವಣ್ಯಾಂಬುಧಿಯನಿಸುವ ಭಯದಿಂದ || 1 ಲೋಕಾಧೀಶನೆ ನಿನ್ನ ಅತೌಕಿಕ ರೂಪಾವು ಕಂಡು ಆ ಕಂಸನ ಭಯದಲ್ಲಿ ನಾ ವ್ಯಾಕುಲಳಾಗಿರುವೆ| ಸಾಕೀಕಾಲಕ ಈ ಅಪ್ರಾಕೃತರೂಪವು ಎÀÀನಲು ಶ್ರೀಕಾಂತನು ಆಕ್ಷಣದಲಿ ಪ್ರಾಕೃತ ಶಿಶುವಾದಾ|| 2 ಆ ಕಾಲದಲ್ಯಾದುರ್ಗಾ ತಾ ಕಾಲವ ಕಳಿಯದಲೆ ಗೋಕುಲದಲ್ಲಿ ಪುರುಷೆಂದಾಕಿಯು ತಿಳಿಯದೆ ನಿದ್ರಿಲಯಲ್ಯಾಕ್ರಾಂತಾದಳು ಹುಟ್ಟಿರುವಾಕಿಯ ಮಹಿಮೆ ಇದು|| 3 ಪಟ್ಟಣದಲಿ ಸರ್ವರು ಭಯಬಿಟ್ಟು ನಡರಾತ್ರಿಯೋಳ್ ತಟ್ಟಲು ಬಹುನಿದ್ರಿ ಸೃತಿಗೆಟ್ಟು ಮಲಗಿರಲು | ಹÀುಟ್ಟಿದ ಬಾಲಕನ ನಾ ಬಚ್ಚಿಟ್ಟು ಬರುವೆನೆಂದ ಥಟ್ಟನೆ ನಡದನು ಕೃಷ್ಣನ ಘಡ್ದ್ಹಡದು ಶೌರಿ|| 4 ಕಾಲೊಳಗಿನ ಬೇಡಿಯು ತತ್ಕಾಲಕ ಕಡದಿತು ಬಾಗಿಲಕೀಲಿಗಳೆಲ್ಲಾ ಸಾಲ್ಹಿಡದಿಂದ್ಗರಂತೆ| ಬೈಲಾದವು ಬಾಗಿಲಗಳಾ ಕಾಲದಿ ಹೀಂಗಾದದ್ದು ಬಾಲಕ ಹರಿ ಬದಿಲಿದ್ದ ಮ್ಯಾಲೇನಾಶ್ಚರ್ಯ 5 ವಾಸದ ವೃಷ್ಟಿಯ ಮಾಡಲು ಶೇಷನು ಬೆನ್ನಿಲೆ ಬಂದು ಸೂಸಿ ಬಾಹುವ ಯಮುನಿ ವಾಸುದೇವನ ಕಂಡು ಘಾಸಿಯು ಮಾಡದೆ ಕೂಟ್ಟಳು ಅಸಮಯಕೆ ಹಾದಿ 6 ಗೋಕುಲಕ್ಹೋಗುತ ಶೌರಿಯು ಶ್ರೀ ಕೃಷ್ಣನ ಅಲ್ಲಿಟ್ಟು ಆ ಕನ್ನಿಕೆಯ ತಂದು ತನ್ನಕಿಯ ಬದಿಲಿಟ್ಟಾ| ಆ ಕಾಲಕ ಆ ಬೇಡಿಯ ತಾಕಾಲಗಳಲ್ಲಿತಟ್ಟು|| ಶ್ರೀ ಕಾಂತನ ಸ್ಮರಿಸುತಲೆ ಏಕಾಂತದಲ್ಲಿರುವಾ|| 7 ಬಾಗಿಲುಗಳು ಎಲ್ಲಾ ಮತ್ಥಾಂಗೆ ಕೀಲಿಗಳ್ಯಲ್ಲಾ ಬ್ಯಾಗನೆ ಆದವು ಮುಂಚಿನ್ಹಾಂಗೆ ತಿಳಿಗೂಡದೆ| ಆಗಾ ಕೂಸಿನ ಧ್ವನಿ ಛಂದಾಗಿ ಕಿವಿಯಲಿ ಬೀಳಲು ಬಾಗಿಲಕಾಯುವ ಭೃತ್ಯರು ಬ್ಯಾಗನೆದ್ದರು ಭಯದಿ|| 8 ಗಡಿಬಿಡಿಯಿಂದಲ್ಯವರು ಯಡವುತ ಮುಗ್ಗುತ ತ್ಯೋಡುತ ನಡಿದರು ನಿಂದಿರದಲೆ ಬಹುಸಡಗರದರಮನಿಗೆ| ಒಡಿಯಾನಂತಾದ್ರೀಶನ ಖಡುದ್ವೇಷ ಆಸವಗೆ ನುಡಿದರು ದೇವಕಿದೇವಿಯು ಹಡಿದಾಳೆಂತೆಂದು|| 9 ಪದ್ಯ ನುಡಿಯ ಕೇಳೀಪರಿಯ ಖಡುಪಾಪಿ ಕಂಸ ಗಡವಡಿಸಿ ಕೊಂಡೆದ್ದು ಭಯ ಬಡುವತಲೆ ಶ್ವಾಸವನು ಬಿಡುವುತಲೆ ಭರದಿಂದ ಎಡವುತಲೆ ಮುಗ್ಗುತಲೆ ನಡದನಾ ದೇವಕಿಗೆ ಕುಡು ಕೂಸು ಎಂತ್ಯಂದು ನುಡಿಕೇಳಿ ಮನದಲ್ಲಿ ಮಿಡುಕುತಲೆ ದೇವಕಿಯು ದೃಢವಾಗಿ ಕೈಯೊಳಗೆ ಹಿಡಿದು ಆಕೂಸಿನಾ ಕುಡದೆ ಕಂಸನ ಮುಂದೆ ನುಡಿದಳೀ ಪರಿಯು|| 1 ಪದ:ರಾಗ:ನೀಲಾಂಬರಿ ತಾಳ:ತ್ರಿವಿಡಿ ಕುಡಲಾರೆ ಕೂಸಿನ್ನನಾ ನಿನಗೆ || ಅಣ್ಣ ಕುಡಲಾರೆ ಒಡ್ಡಿ ಬೇಡುವೆ ಕಡಿ ಹುಟ್ಟ ಹೆಣ್ಣದು|| ಪ ಸೂಸಿಯು ನಿನಗೆ ಈಕಿ ತಿಳಿ ನೀನು | ಮತ್ತು ಹಸಗೂಸು ಎಂಬುವದರಿಯೇನು | ಇಂಥಾ ಶಿಶುವಿನಳಿದಾರೆ ಪಾಪ ಬರದೇನು| ವಸುಧಿ ಒಳಗೆ ಬಹು ಹೆಸರಾದವನೋ ನೀನು|| 1 ಹಿರಿಯಣ್ಣನಲ್ಲೇನೊ ನೀ ಎನಗೆ | ಸ್ವಲ್ಪ ಕರುಣಾವಿಲ್ಲವೋ ಎನ್ನೊಳು ನಿನಗೆ|| ಮಕ್ಕಳಿರಧಾಂಗ ಮಾಡಿದಿ ಮನಿಯೋಳಗೆ ಗುರುತಕ್ಕಿದು ಒಂದು ನೋಡಿ ಮರೆತೆನ್ಹಿಂದಿನ ದುಃಖ|| 2 ನಾ ಏನು ನಿನಗೆ ಮಾಡಿದೆ ಪೇಳು | ಬಹು ಬಾಯಿತಗುವೆ ಕೋಪವು ತಾಳು| ಇಂಥಾ ಮಾಯಾ ಮೋಹತಳಿಗಿ|| 3 ಪದ್ಯ ಅಪ್ಪ ಕುಡಲಾರೆಂದು ತಪ್ಪದಲೆ ಆ ಕೂಸಿನಪ್ಪಿಕೊಂಡಳುವಾಗ ಕಲ್ಲ ಮ್ಯಾಲಪ್ಪಳಿಸಲಾಕೂಸು ತಪ್ಪನ್ಹಾರಿತು ಮ್ಯಾಲೆ ಅಷ್ಟು ಚಿನ್ಹಿಗಳಂದ ಉಟ್ಟ ಪೀತಾಂಬರದಿ ತೊಟ್ಟ ಹೀಂಗೆ ಸ್ಪಷ್ಟಪೇಳಿದಳು| ಪದ ರಾಗ:ತೋಡಿ ತಾಳ ಬಿಲಂದಿ ಮಂದ ಮತಿಯೇ ಕಂದರನ್ನ ಕೂಂದರೇನು ಫಲವೂ| ಇಂದು ಎನ್ನ ಕೂಂದ ವ್ಯೂಲ ಮುಂದೆ ಬರುವದೇನು| 1 ವೈರಿ ಅನ್ಯರಲ್ಲಿ ಇನ್ನ ಬೆಳೆವುತಿಹನೊ| ಮುನ್ನ ಬಂದು ತನ್ನ ಬಲದಿ ನಿನ್ನ ಕೊಲ್ಲುವೊನು 2 ಅಂತಕನ್ನ ನಿಂತು ಕೊಲ್ಲುವ ಭ್ರಾಂತಿ ಬಿಡೆಲೊ ನೀನು| ಅನಂತಾನಂತಾದ್ರೀಶನಂತು ತಿಳುವದೇನೇ|| 3 ಪದ್ಯ ಆ ಮಹಾ ಪಾಪಿ ಗ್ಯಾಡೀ ಮಾತು ದೇವಿ ತಾ ಭೂಮಿಯಲಿ ಬಂದು ಬಹುಗ್ರಾಮದಲೆ ನಿಂತು ಬಹುನಾವು ಉಳ್ಳವಳಾಗಿ ಕಾಮಿತಾರ್ಥಗಳನ್ನೂ ಪ್ರೇಮದಲಿ ಕುಡುತಿಹಳು ನೇಮದಿಂದಾ|| ಆ ಮಾಯಿ ವಚÀನವನು ಪಾಮರನು ತಾ ಕೇಳಿ ರೋಮಾಂಚಗಳು ಉಬ್ಬಿ ನಾ ಮಾಡಿದಲ್ಲೆಂದು ನೇಮದಲಿ ಇಬ್ಬರಿಗೆ ನೇಮಿಸಿದ ಬೇಡಿಯನು ತಾ ಮೋಚನವು ಮಾಡಿ ಪ್ರೇಮದಿ ನುಡದಾ|| 1 ಪದ:ರಾಗ :ಸಾರಂಗ ಅದಿತಾಳ ಸ್ವರ ಮಧ್ಯಮ ಎಲೆ ತಂಗಿಯೆ ಎಲೊ ಶಾಲಕ ಬಲು ಪಾಪಿಯು ನಾನು| ಬಲು ಮಂದಿ ಮಕ್ಕಳನ ಛಲದಿಂದ ಕೊಂದೆ| ತಿಳಿಯದೆ ನಾ ಇಂಥ ಕೆಲಸಕ್ಕೆ ತೊಡಕಿ ಪರಿ ಪಾಪದ ಫಲ ಭೋಗಿಯು ಆದೆ|| 1 ಅಶರೀರದ ವಾಣಿಯು ಹುಸಿ ಅಯಿತು ಇಂದು ವಸುಧಿಯೋಳಿರುವಾ ಮಾನುಷರಾ ಪಾಡೇನು|| ಶಶಿಮುಖಿ ನಾನಿಮ್ಮ ಶಿಶುಗಳ ಕೂಂದೆ||2 ಅಮಿತಾ ಅಪರಾಧಾಯಿತು ಕ್ಷಮಾ ಮಾಡಿರಿ ನೀವು|| ವಿಮಲ ಮನಸಿನಿಂದ ನಮಿಸಿದೆ ನಿಮಗೆ|| ಕಮಲೋದ್ಭವ ಬರದಂಥಾ ಕ್ರಮ ತಪ್ಪದು ಎಂದು ಶ್ರಮಯಾತಕ ಸುಖದುಃಖವ ಸಮಮಾಡಿರಿ ನೀವು|| 3 ತಿಳಗೇಡಿಯು ಆ ಕಂಸ ತಿಳಿಹೇಳಿಪರಿಯು ಸ್ಥಳಬಿಟ್ಟು ತಾ ತನ್ನ ಸ್ಥಳಕ್ಹೋದನು ಬ್ಯಾಗೆ\ ಬ್ಯಳಗಾಗಲು ಎಲ್ಲಾರಿಗೆ ತಿಳಿಸೀದನು ಆಗೆ ಹೊಳುವಾ ದೇವಿಯ ಮಾತುಗಳನೆಲ್ಲ ಬಿಡದೆ || 4 ಖಳರಂದರು ನಾವಿನ್ನ ಇಳಿಯೊಳ್ಹುಟ್ದರುವಾ| ಉಳದಾ ಬಾಲಕೃಷ್ಣಕರನ್ನ ಕೊಲ್ಲು ವುದ ಸತ್ಯಾ| ತಿಳದೀಪರಿ ಅವರನ್ನ ಕಳಸೀದ ಕಂಸಾ ಚಲುವಾನಂತಾದ್ರೀಶನ ಕೊಲ್ಲವೊದು ಎಂದು|| 5 ಪದ್ಯ ಮುಂದ ಗೋಕುಲದಲ್ಲಿ ನಂದಗೋಪನು ತನ್ನ ಕಂದನಾ ಮುಖವನ್ನು ಛಂದದಲಿ ನೋಡಿ ಆನಂದ ಹಿಡಿಸದೆ ತಾನು ಬಂದ ಬಂದವರಿಗ್ಯಾನಂದ ಬಡಸಿದ ಮನಕ ಬಂದದ್ದು ಕೂಟ್ಟು| ನಂದನಂದನನ ವದನೇಂದು ದರ್ಶನಕಾಗಿ ಬಂಧು ಬಾಂಧವರೆಲ್ಲ ಬಂದು ಒದಗಿದರಲ್ಲೆ ದುಂದುಬಿಯು ಮೊದಲಾದ ಛಂದಾದ ವಾದ್ಯಗಳು ಒಂದಾಗಿ ನುಡದÀವಾನಂದದಿಂದಾ| ಗೀತ ಬಲ್ಲವರು ಸಂಗೀತವನು ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ತಾತನವ ತನ್ನಲ್ಲೆ ಜಾತನಾಥಂಥವಗೆ ಜಾತಕರ್ಮವು ಮಾಡಿ ಪ್ರೀತನಾದಾ| ಪ್ರೀತಗೋಕುಲದಲ್ಲಿ ನೂತನೈಶ್ವರ್ಯಗಳು ಜಾತವಾದವು ಸರ್ವಜಾತಿಗಳಿಗ್ಯಾದರೂ ಯಾತಕ್ಕೂ ಕಡಿಮಿಲ್ಲ ಸೋತಂಥ ದಾರಿದ್ರ್ಯ ಯಾತಕಿರುವದು ರಮಾನಾಥ ಇರಲು|| 1 ಸ್ಥಿರ ಮನಸಿನಿಂದಲ್ಲೆ ಸ್ಥಿರವಾಗಿ ಕುಳಿತು ಈ ಚರಿತವನು ಕೇಳಿದವರ ಪರಿಪರಿಯ ಅಭಿಲಾಷ ಪರಿಪೂರ್ಣವಾಗುವದು ಚರಿಸದಲೆ ಅವರಲ್ಲಿ ಸ್ಥಿರಳಾಗಿ ಇರುವವಳು ವರಮಹಾಲಕ್ಷ್ಮೀ| ಧರಿಯೊಳಗ ಇರುವಂಥ ವರಕವೀಶ್ವರರಂತೆ ಸ್ಥಿರವಲ್ಲ ಗೋಕುಲದಲ್ಲಿ ತ್ವರ ಅವನೇ ಮುಗಿಸಿದಿಲ್ಯರಡು ಅಧ್ಯಾಯಾ|| 2 “ಶ್ರೀ ಕೃಷ್ಣಾರ್ಪಣ ಮಸ್ತು” ಎರಡನೆಯ ಅಧ್ಯಾಯವು ಸಂಪೂರ್ಣವು”
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ನಾಲ್ಕು ಮೃಗಯಾಯೈ ಹಯಾರೂಢಂ ಗಹನೆ ಹಸ್ತಿನಾಹೃತಂ ಪದ್ಮಾವತೀ ಕಟಾಕ್ಷೇಷು ತಾಡಿತಂ ನËಮಿ ಶ್ರೀಪತಂ ವಚನ ಅಂದಿಗಾವೇಂಕಟನು ಇಂದು ಪೋಗಲಿಬೇಕೆಂದು ಸ್ಮರಿಸಿದ ಆ ಕ್ಷಣದಿ ಚೆಂದಾದ ಮೈ ಬಣ್ಣದಿಂದ ಇರುವುದು ಸ್ವರ್ಣ ಬಿಂದುಗಳು ಅಲ್ಲಲ್ಲೆ ಮೇಲ್ಗರಿಯಂ ಒಂದೊಂದು ಚಂದದರÀಳಲೆಯು ದೂರದಿಂದ ಹೊಳೆಯುವುದು 1 ಮತ್ತೆ ಸರಗಳನೆಲ್ಲ ಮತ್ತೆ ಪರಿಮಿತಿಯಿಲ್ಲ ಉತ್ತಮಾಶ್ವವ ತಾನು ಮತ್ತೆ ಮೇಲೆ ಸುತ್ತಿದನು ಕೌಸ್ತುಭ ಶಕ್ತವಸ್ತ್ರಾ2 ಊಧ್ರ್ವಪುಂಡ್ರಾಂಕಿತನು ಆಗಿ ಅಕಳಂಕಕೇಸರ ಕುಂಕುಮಾಂಕಿತ ಶ್ರೀಗಂಧ ಪೊಂಕದಲ್ಲಿ ಪಂಕಜಗಳಿಗೆ ಟೊಂಕದಲಿ ಏಲೆ ಅಡಿಕೆಸಣ್ಣ ಕೊಂಕು ಇಲ್ಲದ ಕನ್ನಡಿ ಕಟ್ಟಿದನು ವಸ್ತ್ರಾದಿಂದÀ 3 ಕಂಠದಲಿ ಇಟ್ಟು ಜರತಾರಿ ಒಂಟಿ ಚಾದರವನ್ನು ಕಂಠದಲಿ ಚಲ್ಲರಿಪುಕಂಟ- ಕಾಗಿರುವಂಥ ಒಂಟಿ ಬಂಟನಾಗಿ ಅಂಟರಾ ಬಿಗಿದು ನೂರೆಂಟು ವೈಕುಂಠನಾಥನು ಎಂಬ ಬಂಟನ ಕುದುರೆ ಹೊರಗ್ಹೊಂಟಿತಾಗ 4 ವೇಂಕಟನು ವನದಲ್ಲಿ ಘನವಾದ ಮದ್ದಾನೆಯನು ಹತ್ತಿ ನಡೆದ ವನಜ ಓಡುತ್ತ ಮುಂದೆ ಸಮ್ಮುಖವಾಗಿ ವಿನಯದಿಂದಲಿ ಸೊಂಡೆಯನು ಮೇಲೆತ್ತಿ ಗರ್ಜನವ ಮಾಡುತಲೆ 5 ಕಂಡು ಗಡಬಡಿಸಿದರು ಮುಗ್ಗುತಲೆ ಒಡಗೂಡಿ ಅಡಗಿದರು ಬೇಗ ದೃಢಭಕ್ತಿ ನಡೆದು ಅಲ್ಲಿಂದ ಹಣಹಣಿಕೆ ನೋಡ್ಯಡಗಿದರು ನಡೆಸಿದನು ಕುದರೆ 6 ಒದರಿದಳು ಅಮ್ಮಯ್ಯ ಏರಿ ನಮ್ಮೆದುರಿಗೆ ಚದುರನಾಗಿ ಮಧುರ ಹೆದರೆ ಬೇಡಿರಿ ನೀವು ಚದುರ ವೃತ್ತಾಂತವನು ಕೆದರಿ ಕೇಳಿರಿ ಅವನ ಇದರಿಗ್ಹೋಗಿ 7 ಬಂದು ಪುರುಷನ ನೋಡಿ ಇಂದು ಇಲ್ಲಿಗೆ ನೀನು ಬಂದ ಗಮನ ತಂದೆತಾಯಿಗಳ್ಯಾರು ಬಂಧು ಮಂದಿ ಎಲ್ಲರು ಏನೆಂದು ಕರೆವರು ನಿನಗೆ ಚಂದಾಗಿ ಕುಲಗೋತ್ರ ಒಂದು ಬಿಡದಲೆ ನಮ್ಮ ಮುಂದೆ ನೀಪೇಳು 8 ಇಂದು ನಮ್ಮ ಮುಂದೆ ಕೇಳಿರಿ ನಮ್ಮ ಕ್ರಮದಿಂದ ಹೇಳುವೆನು ಬಂಧು ತಾ ಬಲರಾಮ ಇಂದು ಸುಭದ್ರೆಯೆಂದೆನಿಸುವಳು ತಂಗಿ ಸುಂದರಾರ್ಜುನ ನಮ್ಮ ಹೊಂದಿರ್ದ ಬೀಗ 9 ಕೃಷ್ಣ ಪಕ್ಷದಲ್ಲಿ ನಾ ಕರೆವರು ಯೆನಗೆ ಕಿವಿಯಲ್ಲಿ ಇಟ್ಟು ಬಹುಸಂತೋಷ ಪೇಳಿರಿ ಎನಲು ಥಟ್ಟನೆ ನುಡಿದಳು ದಿಟ್ಟಪದ್ಮಾವತಿಯು ಸ್ಪಷ್ಟತಾನೆ 10 ಸುವಿವೇಕದ ವೃತ್ತಾಂತ ಶ್ರೀಕರಾತ್ರಿಯ ಗೋತ್ರ ಧರಣೀ ದೇವಿ ವಸುಧಾನ ತಾ ಖೂನ ಪದ್ಮಾವತಿಯು ನೀ ಕೇಳಿ ಆಕೆಯಮೇಲೆ ಸ್ವಲ್ಪ ಪುತ್ರಿ ತಾ ಕೋಪವನು ಎಂದಳಾ ಕಾಲದಲಿ ಹರಿ ವಿವೇಕದಲಿನುಡಿದ11 ಧ್ವನಿ ರಾಗ :ಶಂಕರಾಭರಣ ಭಿಲಂದಿತಾಳ ಇಷ್ಟು ಎನ್ನ ಮೇಲೆ ಏಕೆ ಸಿಟ್ಟು ಮಾಡುವಿ ಬಟ್ಟ ಕುಚದ ಬಾಲೆ ಬಹಳ ನಿಷ್ಠುರಾಡುವಿ 1 ಧಿಟ್ಟ ಪುರುಷ ನೀನು ನಡತೆಗೆಟ್ಟು ಇರುವರೆ ಖೊಟ್ಟಿ ಕುದುರೆಯೇರಿ ಮೈಯ ಮುಟ್ಟ ಬರುವರೆ 2 ಮೆಚ್ಚಿ ಬಂದೆ ನಿನಗೆ ನಾನು ಹೆಚ್ಚಿನ್ಹೆಂಗಳೆ ಇಚ್ಛೆ ಪೂರ್ಣಮಾಡು ನೀನು ಮಚ್ಚಕಂಗಳೆ 3 ಹೆಚ್ಚು ಕಡಿಮೆ ಆಡದೀರು ಹೆಚ್ಚಿನಾತನೆ ಎಚ್ಚರಿಲ್ಲ ಮೈಯ ಮೇಲೆ ಹುಚ್ಚು ಪುರಷನೆ4 ಏನು ಹೆಚ್ಚು ಕಡಿಮೆ ಆಡಿದೇನು ಅನುಚಿತ ನೀನು ಕನ್ಯಾ ನಾನು ವರನು ಏನು ಅನುಚಿತ 5 ಮೂಢನೀನು ಇಂಥ ಮಾತು ಆಡೋದುಚಿತವೆ ಬೇಡ ಅರಸಗ್ಹೇಳಿ ನಿನಗೆ ಬೇಡಿ ಬಿಗಿಸುವೆ 6 ಮಡದಿ ನಿನ್ನ ಕಡೆಯುಗಣ್ಣು ಕುಡಿಯ ಹುಬ್ಬುಗಳ್ ಕಡಿಯದಂಥ ಬೇಡಿ ಎನಗೆ ಕಡೆಗೆ ಅಲ್ಲವೆ 7 ಇಂದು ಪ್ರಾಣವ ತಂದೆ ಕಂಡರೀಗ ನಿನ್ನ ಕೊಂದು ಹಾಕುವ 8 ಜಾಣೆ ನಿನ್ನ ಬಿಡೆನು ಎನ್ನ ಪ್ರಾಣ ಹೋದರೂ ಪ್ರಾಣದರಸಿ ಎನಿಸು ಪಟ್ಟರಾಣಿಯಾಗಿರು 9 ಇಂದು ವ್ಯರ್ಥವು ಹಂದಿನಾಯಿ ಹದ್ದು ಕಾಗೆ ತಿಂದು ಬಿಡುವವು 10 ಎನ್ನ ಫಣಿಯಲ್ಲಿದ್ದ ಲಿಖಿತ ಮುನ್ನ ತಪ್ಪದು ಚನ್ನವಾಗಿ ನಿನ್ನಕೂಡಿ ಇನ್ನು ಇರುವುದು11 ಸೊಲ್ಲ ಕೇಳಿ ಸಿಟ್ಟಿನಿಂದ ನಿಲ್ಲೋ ಎಂದಳು ಎಲ್ಲ ಗೆಳತೆರಿಂದ ಕೂಡಿಕಲ್ಲು ಒಗೆದಳು 12 ಕಲ್ಲು ತಾಗಿ ಕುದುರೆ ಭೂಮಿಯಲ್ಲಿ ಬಿದ್ದಿತು ಬಲ್ಲಿ ದಾನಂತಾದ್ರೀಶನಲ್ಲಿ ಸ್ಮರಿಸಿತು 13 ವಚನ ಆ ಕುದುರೆಯನು ಆಗುತ ವಿವೇಕದಲಿ ಪರಿ ಆಯಿತೀಕಾಲದಲ್ಲೀ ಲೋಕದಲಿ ಕಾಲಬೀಳದಲೆ ಆಕಾಲ ದಲಿ ಹೊರಟೆ ಆ ಕಾರಣದಿಂದೆನಗೆ ಸಂಕಟವು ಸೋಕಿತಿ ಮಾಡಿದ ಕರ್ಮಫಲ ದೊರೆಯದಿರದು 1 ಗಿರಿಯೇರುತಲೆ ತಾನು ಮೂಕತನದಲಿ ಶೇಷಾಯಿಯಂತೆ ಮುಂದಕೆ ಅನೇಕ ಕರೆದು ಕೊಡುವವನ ಶ್ರೀ ಕರುಣದಿ ಆಯಿತು ನಾಲ್ಕು ಅಧ್ಯಾಯ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಹತ್ತು ತಾಕ್ರ್ಷಸ್ಕಂಧ ಸಮಾರೂಢಃ ಶ್ರೀ ಬ್ರಹ್ಮಾದಿಭಿರಾವ್ನತಃ | ಧ್ವನಿ ಪರಿ ಪರಿ ಪ ಗರುಡನೇರಿದ ಶ್ರೀನಿವಾಸನು ರಾಜ ವರ ಹಂಸವನೇರಿದ ಬ್ರಹ್ಮನು ತ್ವರ ನಂದಿಯೇರಿದ ರುದ್ರನು ಅ ವರ ನಡುಮಧ್ಯೆ ನಡೆದ ಶ್ರೀಹರಿ ತಾನು 1 ದೇವಿಯೇರಿದಳಾಗ ರಥದಲಿ ಬಕುಲಾ ದೇವಿ ಯೇರಿದಳೊಂದು ರಥದಲಿ ಕೇವಲ ತಮ್ಮ ತಮ್ಮ ರಥದಲಿ ಉಳಿದ ದೇವಿಯರೇರಿ ಕೊಂಡರು ಅಲ್ಲಿ 2 ಉತ್ತಮ ಮಂಗಳವಾದ್ಯವು ನË ಬತ್ತು ನಗಾರಿಗಳಾದವು ಮತ್ತೆ ಉಳಿದ ಎಲ್ಲ ವಾದ್ಯಗಳು ಬಹು ವತ್ತಿ ಶಬ್ದಮಾಡಿ ನುಡಿದವು 3 ನಡೆದರು ಋಷಿಗಂಧರ್ವರು ಬಹು ಸಡಗರದಿಂದಲ್ಲೆ ಅಪ್ಸರರು ಬಡವ ಬಗ್ಗರು ಉಳಿದ ಮನುಜರು ಬಹು ಗಡಿಬಿಡಿಯಿಂದಲ್ಲೆ ನಡೆದರು 4 ಕುಂಟರು ಕುರುಡರು ಕಲ್ಲು ಕಂಟಕ ಕಾಲಿಲೆ ತುಳಿವವರೂ ಗಂಟು ತಲಿಯಲಿಟ್ಟುನಡಿಯುವರು ತಪ್ಪ ಗಂಟಾಗಿ ಒದರುತಲಿಹರು 5 ಕೆಲವರು ಗಂಡನ ಒದರುವರು ಮತ್ತ ಕೆಲವರು ಮಕ್ಕಳನೊದರುವರು ಕೆಲವರು ಎಡವುತಲಿರುವರು ಮತ್ತು ಕೆಲವರು ಭರದಿಂದ ಬೀಳುವರು 6 ಕೆಲವರೆಳೆದು ಎಬ್ಬಿಸುವರು ಮತ್ತು ಕೆಲವರು ನೋಡುತ ನಗುವವರು ಬಾಲರಳುವ ಧ್ವನಿ ಆಯಿತು ಜಗತ್ ಪಾಲನಸೈನ್ಯ ನಡೆಯಿತು ಮೇಲಾದನಂ ತಾಂದ್ರೀ ಇಳಿಯಿತು ಭೂಪಾಲಪುರದ್ಹಾದಿ ಹಿಡಿಯಿತು7 ವಚನ ಶೈಲವನು ಹಿಡಿದು ಭೂಪಾಲನಪುರತನಕ ಸಾಲ್ಹಿಡಿದು ನಡೆವಂಥ ಕಾಲದಲಿ ಮತ್ತಲ್ಲಿಡುವದಕ್ಕೆ ಎಳ್ಳು ಕಾಳಷ್ಟು ಸ್ಥಳವಿಲ್ಲ ಶ್ರೀಲಲಾಮನು ಮಧ್ಯಸಾಲಿನ ಮಧ್ಯಾಹ್ನ ಕಾಲ ದಲಿ ಶುಕಮುನಿಯ ಆಲಯಕೆ ಬಂದು ಕಾಲಿಗೆರಗಿದನು ಆಕಾಲಕೆ ಮುನಿ ಬಂದು ಹೇಳಿಕೊಂಡೀ ಪರಿಯು ಶೈಲ ಭೋಜನವು ಎನ್ನ ಮೇಲೆ ಕರುಣಿಯಿಂದಾ 1 ಹೀಗೆಂದು ನುಡಿದ ಶುಕಯೋಗಿಯ ವಚನವ ಕೇಳಿ ಬಾಗಿ ತಾ ನಮಿಸುತಲೆ ಆಗ ಶ್ರೀಹರಿ ನುಡಿದ ಯೋಗಿಗಳು ನಾ ಸಂಸಾರಿ ಆಗಿ ಇರವೆ ಇಲ್ಲೆ ಉಂಡರೆ ಮಿತಿಯ ಇಲ್ಲದಲೆ ಪುರದಲ್ಲೆ ಪೋಗುವುದು 2 ಮುನಿ ಮಂಡಲೇಶನು ಕೇಳಿಕೊಂಡು ಹೀಗೆಂದು ಬ್ರಹ್ಮಾಂಡ ಪತಿಯೆ ಒಬ್ಬ ಉಂಡರೆ ಜಗವೆಲ್ಲ ಉಂಡಂತೆ ಆಗುವುದು ಪುಂಡರೀಕಾಕ್ಷಾ ಭಾಳ ಕೇಳುತಲೆ ಮುಂದೆ ಬಾಲಕನ ಮುಖನೊಡಿ ಬಾಲೆ ನುಡಿದಳು ಬಕುಲ ಮಾಲಿಕೆಯು ತಾನು3 ಧ್ವನಿ:ವಸಂತಭೈರವಿ ಆದಿತಾಳ ತರವೆ ಹರಿಯೆ ಈ ಪರಿಯ ಮಾಡುವದುಪ ಸುಖಕರವಾಗಿಹ ಶುಕಮುನಿ ವಚನವು || ಲಕ್ಷಿಸದೆ ಶುಭಕಾರ್ಯಕೆ ಪೋಗುವದೂ 1 ಬಲ್ಲಿದ ಶಕುನವು ಇಲ್ಲೆನಿನಗೆ ತಿಳಿ| ಊಟಕೆ ಒಲ್ಲೆನೆಂಬುವದೂ 2 ಶ್ರೀಶ ಅನಂತಾದ್ರೀಶ ಮಹಾತ್ಮರ|| ಭಾಷೆಯ ಕೇವಲುದಾಸೀನ ಮಾಳ್ಪುದು 3 ವಚನ ಹೆತ್ತಾಯಿ ಪರಿಯಾಗಿ ಹೊತ್ತು ಹೊತ್ತಿಗೆ ತನಗೆ ಅತ್ಯಂತ ಹಿತ ಮಾಡುತಿರ್ದ ಬಕುಲಾವತಿ ಸತ್ಯವಚನ ಹರಿಯು ಮತ್ತು ಶುಕಮುನಿಗೆ ಉತ್ತರವ ಕೇಳಿ ಮುನಿ ಉತ್ತರಣೆಯು ಬೀಜ ಒತ್ತಿಕೈಯಲಿ ಮಾಡಿ ವೃತ್ತಾದ ಗುಳ್ಳ ಫಲದುತ್ತಮೋತ್ತಮಶಾಕ ತಿಂತ್ರಿಣಿಯ ರಸಸಹಿತ ಪಾತ್ರದಲಿ ಬಡಿಸಿ ಸತ್ಪಾತ್ರನಾಗಿರುವ ಸರ್ವೋತ್ತಮಗೆ ಅರ್ಪಿಸಿದ ಭಕ್ತಿಯಿಂದ 1 ತೃಪ್ತನಾದನು ನಿತ್ಯತೃಪ್ತ ಹರಿ ತಾ ಉಂಡು ಮತ್ತೆ ಮುನಿಗಳು ಎದ್ದರತ್ಯಂತ ಕೋಪದಲಿ ಚಿತ್ತಜನ ಪಿತ ಅವರ ಚಿತ್ತವೃತ್ತಿ ಸತ್ಯದಲಿ ಎಲ್ಲರಿಗೂ ತೃಪ್ತಿಯಾಗಲಿ ಎಂದು ತಿಳಿದು ಪೂತ್ಕಾರ ಮಾಡಿದನು ತತ್ಕಾಲದಲ್ಲಿ ಉತ್ತಮಳು ಶ್ರೀರಮಾ ಮತ್ತೆ ಬ್ರಹ್ಮಾದಿಗಳು ಸುತ್ತಸನ ಶುಕ ಸತ್ವ ಶೀಲರು ಉಳಿದ ಸುತ್ತೆಲ್ಲ ಜನರು ಸಂತೃಪ್ತರಾದರು ಹರಿಯ ಫೂತ್ಕಾರದಿಂದ 2 ನಿದ್ರೆಯನು ಮಾಡಿ ಅಲ್ಲಿದ್ದು ಆ ರಾತ್ರಿಯಲಿ ಎದ್ದು ಮರು ಕೂಡಿ ವಾದ್ಯ ವೈಭವ ದಿಂದ, ಸಿದ್ಧಾಗಿ ಬಂದರು ವಿಯದ್ರಾಜನ ಪುರಕೆ ಶುದ್ಧ ಸಂಜೆಯಲಿ ಮುದ್ದು ವೇಂಕಟ ಬಂದ ಸುದ್ದಿಯನು ಕೇಳುತ ವಿಯದ್ರಾಜ ತಾ ಬಹಳ ಉದ್ರೇಕದಿಂದಲೆ ಇದ್ದ ಜನರನು ವೈಭವದಿಂದ ಸಿದ್ಧನಾಗಿ3 ಧ್ವನಿ:ಕಾಂಬೋಧಿ ಆದಿತಾಳ ಆಕಾಲದಲಿ ಕಂಡನು ಹರಿಯಮುಖ ಆಕಾಲದಲಿ ಕಂಡನು ಎಲ್ಲರ ಕೂಡ ಆಕಾಶ ರಾಜನು ತಾನು1 ಹರುಷದಿಂದಲಿ ಉಬ್ಬಿದ ಹರಿಯ ಕಂಡು ಹರುಷದಿಂದಲಿ ಎದರುಗೊಂಡು ವರಪೂಜೆಯನು ಮಾಡಿದ 2 ಅಳಿಯಗಾಭರಣವನು ವಸ್ತ್ರವ ಕೊಟ್ಟು ಅಳಿಯಗಾಭರಣವನು ಉತ್ಸವದಿಂದೆ ಕಳಿಸಿ ಮನೆಗೆ ಪೋದನು3 ಶ್ರೀನಾಥದೇವ ತಾನು ಆ ಕಾಲಕ್ಕೆ ಶ್ರೀನಾಥದೇವ ತಾನು ಕರೆದುತೊಂಡ ಮಾನರಾಜಗೆ ನುಡಿದನು 4 ಹಸಿದು ಬಂದೆವು ನಾವೆಲ್ಲ ಉಣ್ಣದೆ ಬಹಳ ಹಸಿದು ಬಂದೆವು ನಾವೆಲ್ಲ ಬೇಗನೆ ಪಾಕ ಹಸನಾಗಿ ಮಾಡಿಸೆಲ್ಲ5 ಅಕ್ಕರದಲಿ ರಾಜನು ಆನುಡಿ ಕೇಳಿ ಅಕ್ಕರದಲಿ ಮಾಡಿಸಿದನು ರುಕ್ಕೋತದಡಿಗೆಯನು 6 ಮಂಡಿಗೆ ಗುಳ್ಳೋರಿಗೆ ಶಾವಿಗೆ ಮೊದಲು ತೊಂಡಮಾನÀನು ಚಂದಾಗಿ 7 ಹರಿಗೆ ಅರ್ಪಣೆ ಮಾಡಿದ ಎಲ್ಲರ ಕೂಡಿ ಹರಿಯು ಭೋಜನ ಮಾಡಿದ 8 ಆನಂದದಿಂದಿದ್ದನು ಆ ರಾತ್ರಿಯೊಳ್ ಆನಂದದಿಂದಿದ್ದನು ಮಾಡಿದ ನಿದ್ರೆ `ಅನಂತಾದ್ರೀಶ' ತಾನು 9 ವಚನ ಶ್ರೀನಿವಾಸ ಎದ್ದು ತಾನು ಮರುದಿನದಲಿ ಮಾನಿತ ವಶಿಷ್ಠ ಲಕ್ಷ್ಮೀಸಹಿತ ನೀನು ಬ್ರಹ್ಮನು ಮತ್ತೆ ಮಾನಿತಳು ಎನ್ನತಾಯಿ ತಾನು ಐವರು ಅನ್ನಹೀನರಗಿರುವುದು ಖೂನದಲಿ ಕನ್ನಿಕೆಯ ದಾನ ಪರ್ಯಂತ ಮಾನಿತನು ಆರಾಜಮಾನಿನಿಯು ಮತ್ತೆ ವಸು ದಾನರಾಜನು ಅನ್ನರಹಿತರೈವರು ಅವರು ಖೂನದಲಿ ಕನ್ನಿಕೆಯ ದಾನಪರ್ಯಂತ 1 ಪೇಳು ಅರಸನಿಗೆಂದು ಹರಿಯು ಹೇಳಿದಂತಾ ಭೂಮಿಪಾಲ ಮಾಡಿದನು ಮುನಿಹೇಳಿದಂತೆ ಮೇಲೆ ಮುನ್ನ ಸಾಯಾಹ್ನಕಾಲದಲಿ ಚತುರಂಗ ಸಾಲ ಸೈನ್ಯವು ನಡೆಸಿ ಕಾಳಿ, ಕರ್ಣಿಯ ತೂರ್ಯ, ತಾಳಮದ್ದಲೆ ಮೊದಲು ಭಾಳವಾದ್ಯ ಗಳಿಂದ ಮೇಲಾದ ಗುರುಮುಂದೆ ಮೇಲೆ ತನ್ನವರಿಂದ ಕಾಲನಡುತಿಯಲೆ ಹರಿಯ ಆಲಯಕೆ ಬಂದ 2 ಈ ವ್ಯಾಳ್ಯದಲಿ ಧರಣಿದೇವಿ ತಾ ಲಜ್ಜೆಯಲಿ ದೇವ ಗುರು ಬ್ರಹಸ್ಪತಿಯ ಕೇವಲಾಜ್ಞದಿ ದೇವದೇವ ಎನಿಸುವ ಅಳಿಯ ಶಾವಿಗೆಯ ಪರಮಾನ್ನ ವಿಯದ್ರಾಜ ಮುಂದಾ ವೇಳೆಯಲಿ ಐರಾವತದ ಮೇಲೆ ದೇವನ ಕುಳ್ಳಿರಿಸಿ ಬಂದನು ಮನೆಗೆ ತೀವ್ರದಿಂದ 3 ಆಕಾಲದಲಿ ತೋಂಡ ಸತಿ ನಿವಾಳಿಸುವತ ಚಲ್ಲಿದಳು ಶೈಲದೊಡೆಯನು ಗಜದ ಮೇಲಿಂದ ಇಳಿದು ಆಮೇಲೆ ತಾ ಬಂದಾ ಸುವಿಶಾಲ ಮಂಟಪಕೆ ಮೇಲಾದ ಗದ್ದಿಗೆಯ ಮೇಲೆ ವೇಂಕಟರಮಣನು ಕಾಲಿಟ್ಟು ಕುಳಿತನಾಮೇಲೆ ಬ್ರಹ್ಮಾದಿ ಗಳು ಗಾಲವ, ವಶಿಷ್ಠಮುನಿ ವಾಲ್ಮೀಕಿ ಭೃಗು ಜಟಾಜಾಲ ಸಂಪನ್ನ, ಶುಕ, ದಾಲ್ಭ್ಯ ಮೊದಲಾದವರು ಸಾಲ್ಹಿಡಿದು ಕುಳಿತರಾ ಕಾಲಕ್ಕೆ ಎಲ್ಲಾ ಒದಗಿ ಬೇಗನೆ ವಿಷ್ಣು ಪದರಾಜ4 ತೊಳೆದು ಆ ಉದಿಕ ಮಧುಸೂದನನ ಪೂಜೆ ಮಧುಪರ್ಕದಿಂದ ಬುಧಜನರು ಪೇಳಿದಾಜ್ಞೆಯಲಿ ಗೃಹ ದೇವತಾಸನದಲಿ ಹರಿಯ ಧ್ಯಾನದಲಿ ಇರುತಿರುವ ಮದನ ಮೋಹನ ಸನ್ನಿಧಿಗೆ ಸಮ್ಮುಖವಾಗಿ ಮುದದಿ ಇರಿಸಿದನಾಗ ಬದಿಲಿದ್ದ ಬೃಹಸ್ಪತಿಯ ಒದಗಿ ವಧು ವರಗಳಿಗೆ ವಿಹಿತದ ಅಂತಃಪÀಟವ ಮುದದಿ ಮಧ್ಯದಲ್ಲಿ ಪಿಡಿದು ಒದರಿದನು ಈ ಪರಿಯು ಮದವೆಯ ಕಾಲಕ್ಕೆ ಮಧುರÉೂೀಕ್ತಿಯಿಂದ5 ಧ್ವನಿ:ಸೌರಾಷ್ಟ್ರ ಅಟತಾಳ ಸಾವಧಾನ ಧೇ ವಾಧೀಶನ ಲಗ್ನ ದಿವ್ಯ ವೇಳೆಯಲ್ಲಿ ಸಾವಧಾನ ಪ ಪದ್ಮನಾಭನೆ ನೀನು ಸಿದ್ಧಾಗಿ ಇರು ಕಂಡ್ಯ ಸಾವಧಾನ ಪದ್ಮಾವತಿಯೆ ನೀನು ಪದ್ಮನಾಭನ ಸ್ಮರಿಸು ಸಾವಧಾನ 1 ಫಲಕಾಲದಲಿ ಚಂಚಲರಾಗದಲೆ ನೀವು ಸಾವಧಾನ ಕುಲದೇವಿ ಸ್ಮರಣಿ ನಿರ್ಮಲವಾಗಿ ಮಾಡಿರಿ ಸಾವಧಾನ 2 ಶ್ರೇಷ್ಠಾದ ಅತಿ ವಶಿಷ್ಠ ಮುನಿಗಳೆಲ್ಲ ಸಾವಧಾನ ಸ್ಪಷ್ಟಾಗಿ ಶ್ರೀ ಮಂಗಳಾಷ್ಟಕ ಪಠಿಸಿರಿ ಸಾವಧಾನ 3 ಮಂಗಳ ಮೂರುತಿ ಮನದಿಂ ಸ್ಮರಿಸಿರಿ ಸಾವಧಾನ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಸಿಸ್ಟೆಂಟ್ ಅಮಲ್ದಾರ್ರು ಹೇಳಿಕಳುಹಿಸಿದ್ದಾರೆ ಪ ಬಿಸಿ ನೀರು ನಿನಗಾಗಿ ಹಸನಾದ ಪನ್ನೀರ- ರಿಸಿನ ಕುಂಕುಮ ಕಳಶ ಕನ್ನಡಿಗಳಾ ಶಶಿಮುಖಿಯರೆಲ್ಲರು ತಂದು ಕಾದಿಹೆವಿಲ್ಲಿ ಕುಸುಮಾಸ್ತ್ರ ನಾಟದಲಿ ನಿಶಿ ನಿದ್ರೆ ಇಲ್ಲವೇನೋ 1 ಒಬ್ಬ ಒಡವೆಗಳು ಮತ್ತೊಬ್ಬ ಸೀರೆಗಳು | ಇ ನ್ನೊಬ್ಬ ಪರಿಮಳ ದ್ರವ್ಯ ತಂದು ಕೊಡುವಾ ಹಬ್ಬ ಪ್ರತಿದಿನ ರಾತ್ರಿಯಾಗುತ್ತಲೆ ನಿನಗೆ ನಮ್ಮ ಸುಬ್ಬ ಪೋಲೀಸನವರಿಂದ ಬಿಡಿಸಲಿಲ್ಲವೆ 2 ಹೊನ್ನು ಹಣಗಳಿಗೇನು ಕಡಿಮೆಯಿಲ್ಲ ಇನ್ನಾದರು ಸ್ಮರಿಸಿ ಕಣ್ದೆರೆದು ನೋಡೆ 3
--------------
ಗುರುರಾಮವಿಠಲ
ಆ ವೆಂಕಟಗಿರಿನಿಲಯನಂಘ್ರಿ ರಾ ಜೀವಯುಗಳಗಾನಮಿಸುವೆನು ಪ ಸೇವಿಪ ಜನರಿಗಮರ ತರುವೆನಿಸಿ ಧ ರಾವಲಯಾಖ್ಯ ದಿವಿಯೊಳೆಸವ ಅ.ಪ. ನಿಖಿಳ ಜಗತ್ತಿಗೆ ಪಾವನತರವೆಂದೆನಿಸುವುದು ಶ್ರೀ ವಿಧಿಭವ ಶಕ್ರಾದ್ಯರು ಆವನ ಸೇವಕ ಸೇವಕರೆನಿಸುವರು ತಾ ಉತ್ತಮ ಪುರುಷನೆನಿಸಿ ಜಗವ ಸ ದಾವಕಾಲ ಸಂತೈಸುವನು ಜೀವಾಂತರ್ಗತನಾಗಿ ವಿವಿಧ ವೇ ದಾವಳಿಯಿಂದ ತುತಿಸಿ ಕೊಂಬಾ 1 ಪಾತನೊಳಹಿಪ ವಿರೋಧಿಸೆ ತವಸ ತ್ವಾತಿಶಯನ ತೋರೆಂದೆನುತಾ ಜಾತರೂಪ ಶೈಲಾತ್ಮಜನಪ್ಪಿರೆ ವೀತಿ ಹೋತ್ರ ಸಖ ಕಿತ್ತೊಗೆಯೆ ವೀತ ಕರ್ನನಳವಳಿದು ವೇಗ ಧಾತ ಮಹಿಳೆ ತೀರ್ಥದಿ ಭೂ ಲಕ್ಷ್ಮೀಸ ಮೇತನಾಗಿ ಮೋದಿಸುತಿಪ್ಪೆ 2 ಭೂಸುರನೊರ್ವನು ತೊಂಡಮಾನ ಧರ ಣೀಶÀನ ನಿಲಯದೊಳುಳುಹಿ ಸತಿಯ ನೃಪತಿ ಮರೆಯೆ ನಿ ಶ್ವಾಸ ವನೈದಿದಳಾ ಸತಿಯು ಆ ಸಮಯದಿ ದ್ವಿಜವರ್ಯನು ಬೆಸಗೊಳೆ ಕ್ಲೇಶದಿ ಭೂಮಿಪ ಸಂಸ್ತುತಿಸೆ ಕೇಶವ ತಾನಸ್ಥಿಗಳ ತರಿಸಿ ಸು ವಾಸಿನಿ ಶಿಶು ಸಹ ಒಲಿದಿತ್ತಾ 3 ವೃದ್ಧ ಬ್ರಾಹ್ಮಣನು ತುತಿಸೆ ಸಲಿಲದೊಳ ಗದ್ದಿ ಕುಮಾರತ್ವವನಿತ್ತ ಅಧ್ವರವೆಸಗಿದ ಋಷಿಗಳ ಮಂತ್ರದ ಪದ್ದತಿ ತಿದ್ದಿಯಜ್ಞವ ಮಾಡ್ದ ಮಧ್ಯರಾತ್ರಿಯೊಳು ಬೆಸಗೊಂಡ ನೃಪನು ಪದ್ರವ ಕಳೆದಾಯುಧವಿತ್ತು ಮೃದ್ಭಾಂಡವ ರಚಿಸುವನಿಗೊಲಿದವನ ಚೋದ್ಯ ತೋಂಡಮಾನಗೆ ತೋರ್ದ 4 ಸಂಚಿತ ಕುಕರ್ಮಗಳ ಮನೆಯ ಮುರಿದು ಆಗಾಮಿ ಫಲಂಗಳ ಅನುಭವಕೀಯದೆ ಪ್ರಾರಬ್ದಾ ಮೂರ್ತಿ ಚಿಂ ತನೆ ಇತ್ತು ಸ್ವರೂಪಸುಖಾ ಅನುದಿನದಲಿ ವ್ಯಕ್ತಮಾಡಿಸಿ ಕೊ ಟ್ಟನಿಮಿತ್ತಾಪ್ತನೆನಿಸುತಿಪ್ಪ 5 ಏಕಮೇವ ರತ್ನಾಕರ ಮಂದಿರ ಆಕೂತಿಜ ಯಜ್ಞಾಕರನೇ ಲೊಕವಿಲಕ್ಷಣ ಸೂಕರಾತ್ಮ ಪಿ ವಿನುತ ಲಕ್ಷ್ಮೀ ಕಾಂತಾ ಗೋಕುಲ ಮಂದಿರ ಏಕಾಂತಿಗಳ ನಿ ರಾಕರಿಸಿದೆ ಲೋಕೈಕ ಸುಖ ಶೋಕ ರಹಿತ ನಿಜಲೋಕವಿತ್ತು ನಿ ರಾಕುಲ ಸುಖಗಳ ತಾ ಕೊಡುವಾ 6 ದಿನಪನೊಳಗೆ ವೃಜಿನಿ ವಸು ತಾ ಎಂ ದೆನಿಸಿ ಜಯಾಪತಿ ಪ್ರದ್ಯುಮ್ನ ಅನಿರುದ್ಧಾದಿ ಚತುರ್ಮೂತ್ರ್ಯಾತ್ಮಕ ತನಗೆ ತಾನೆ ಪೂಜಕ ಪೂಜ್ಯ ಅನುಪಮ ನಾಮದಿ ಕರೆಸುತಲಿಹ ತ ನ್ನನು ಈ ಪರಿಧೇನಿಸುತಿಪ್ಪ ಮನುಜರಿಗೊಲಿದು ಜಗನ್ನಾಥವಿಠ್ಠಲ ಜನನ ಮರಣಗಳ ಪರಿಹರಿಪಾ 7
--------------
ಜಗನ್ನಾಥದಾಸರು
ಇಂದು ನೋಡುವ ಇಂದಿರಾಪತಿ ಶ್ರೀಪಾದವ ಎಂದೆಂದು ಬಿಡದೆ ಮನದಲಿ ತಂದೆ ಮುಕುಂದನ ಹೊಂದಿ ಭಜಿಸುವ ಧ್ರುವ ಭಾವಭಕುತಿಗಳ ವಿಡಿವ ಭವಬಂಧನದ ಪಾಶ ಕಡಿವ ದಿವಾರಾತ್ರಿಯಲಿ ಹರುಷಬಡುವ ಕಾವಕರುಣನ ಕೃಪೆಯ ಪಡೆವ 1 ಮನಕರಗಿ ಮೈಯ್ಯಮರೆವ ಘನಸುಖದ ಸುಸ್ಮರಣಿಯಲಿರುವ ಆನಂದಮಯಸ್ವರೂಪದಿ ಬೆರೆಯುವ ತನುಮನವು ಶ್ರೀಹರಿ ಗೊಪ್ಪಿಸುವ 2 ಎರಗಿ ಏಕವಾಗಿ ನೊಡುವ ಹರಿಚರಣದಿ ಬೆರೆದು ಕೊಡುವ ಪರಮಗತಿ ಸಾಯೋಜ್ಯಪಡುವ ಧರೆಯೊಳು ನಲಿ ನಲಿದಾಡುವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉದಯ ಕಾಲವದಗಿತೀಗಲೂ ನಿನ್ನಿನ್ನಂತೆ ರವಿ ಪಪದುಮನಾಭನ ಸ್ಮರಿಸುತ ಮೋ-ದದಿಯಾನ್ಹೀಕ ಬುಧರು ಮಾಳ್ಪ ಅ.ಪಅಪರಾತ್ರಿಯಲ್ಲಿ ಎದ್ದುಚಪಲಚಿತ್ತರಾಗದಲೆ ಸು-ರಪನ ದೆಸೆಯ ನೋಡಿ ನಮಿಸಿಸುಫಲಗಳನು ಪಡೆಯುವರಿಗೆ 1 ಕಣ್ಣುತೆರೆದು ಕೈಗಳುಜ್ಜಿ ಕನ್ನಡಿಯನು ನೋಡಿ ಶೌಚ ವನ್ನು ತೀರಿಸಿ ಸ್ನಾನ ಸಂಧೆÀ್ಯಗ- ಳನ್ನು ಮಾಳ್ಪ ಸದ್ವಿಜರಿಗೆ2 ಬ್ರಂಹ್ಮಯಜ್ಞ ಜಪವು ಮುಖ್ಯ ಕರ್ಮಗಳಿಂ ಸವಿತೃನಾಮಕ ಒಮ್ಮನದಲಿ ಧ್ಯಾನಿಸುವರಿಗೆ 3
--------------
ಗುರುರಾಮವಿಠಲ
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಎಂದೊಡನಾಡುವೆ ಎಂದರ್ಥಿಬಡುವೆ ಎಂದಿಗೆ ತಕ್ರ್ಕೈಸಿ ಸಂತೋಷಬಡುವೆ ಪ ಉತ್ಸವ ಮಂಟಪದೊಳಗೆ ಕುಳಿತು ಭಕ್ತ ವತ್ಸಲನೆಂದು ನುತಿಸಿಕೊಂಬನ ಕೂಡ 1 ಸಕಲ ಭೂಷಿತನಾಗಿ ಅಜಹರ ಸುರಮುನಿ ನಿಕರ ಕೈಯಿಂದ ಸ್ತುತಿಸಿಕೊಂಬನ ಕೂಡ 2 ಆಪೋಹಿಷ್ಠಾ ಮಯೋಭುವನೆಂಬೋ ಮಂತ್ರ ಆ ಪುರೋಹಿತರಿಂದ ಕಲಿತುಕೊಂಬನ ಕೂಡ 3 ನಾಲ್ವತ್ತುಮೂರು ಪದಂಗಳು ಮಾಡೆಂದು ಹೇಳಿದ ಹೇಮಾದ್ರಿ ಶಿಖರಾಕಾರನಕೂಡೆ 4 ದಂಡಿಗೆ ಕರೆದಲ್ಲಿ ಕೊಟ್ಟು ಅಮೃತದ ಕರ ಮಂಡೆಯಲ್ಲಿಟ್ಟ ಮಹಮಹಿಮನ ಕೂಡ 5 ಪಲ್ಲಕ್ಕಿ ಏರಿ ಪವಳಿಯ ಸುತ್ತಿ ಸರ್ರಗೆ ನಿಲ್ಲದೆ ಗುಡಿಪೊಕ್ಕ ನಿರ್ಮಳನ ಕೂಡ6 ವಾರಶನಿ ಚತುರ್ದಶಿ ಕೃಷ್ಣಪುಷ್ಯದಿ ಈ ರೀತಿಯಲಿ ಕೂಡ ಇಂದಿರೇಶನ ಕೂಡ 7 ರೌದ್ರಿ ಸಂವತ್ಸರ ಅರ್ಧರಾತ್ರಿಯಲಿ ಭದ್ರ ಮೂರುತಿಯಾದ ಭವಹರ ಕೂಡ 8 ಗುರುಪುರಂದರ ಉಪದೇಶನ ಬಲದಿಂದ ಸಿರಿ ವಿಜಯವಿಠ್ಠಲನ ಚರಣ ತಕ್ರ್ಕೈಸಿ 9
--------------
ವಿಜಯದಾಸ
ಎನ್ನ ಸಲಹುದೋ ರಂಗಾ ಎನ್ನ ಸಲಹು| ನಿನ್ನ ಚರಣ ಕಮಲದೋರಿ| ಗಮನ ರಂಗಾ ಪ ನಷ್ಟ ಪರಮ ಪತಿತ ಗತಿಯ|ಗೆಟ್ಟು ಅಜಮಿಳ ತನ್ನ| ಕಷ್ಟ ಬಡುವ ಕಾಲದಲ್ಲಿ ಸುತನ ಪೆಸರನು| ಮುಟ್ಟಿ ಕರಿಯೇ ತೃಪ್ತನಾಗಿ|ಅಷ್ಟರಿಂದ ಅವಗ ನಿನ್ನ| ಪಟ್ಟಣಕ ನೀ ಅಟ್ಟಿ ಗತಿಯ|ಕೊಟ್ಟು ಸಲುಹಿದೆ ರಂಗಾ 1 ಸಂಧಿಸಿ ಮಧ್ಯರಾತ್ರಿಯೊಳಗ|ಬಂದು ದೂರ್ವಾಸನ್ನವ ಬೇಡ| ಲಂದು ದೃಪದ ನಂದನೆ|ನಿನ್ನೆ ಸ್ಮರಿಸೆ ತ್ವರಿತದಿ| ಬಂದು ನಿಂದು ಬೇಡಿದುದನು|ಛಂದದಿಂದಲಿತ್ತು ದ್ವಿಜರಾಜ| ನಂದ ಬಿಡಿಸಿ ಐವರ ಮಾನ ಕುಂದಂತೆ ಕಾಯ್ದೆ ರಂಗಾ 2 ಐದು ವರುಷ ಹಸುಮಗನಾ|ಬೈದು ಮಲತಾಯಿ ಪೊರಗೆ| ಹಾಕಲಾಗ ಧೃವನು ನಿನ್ನ ಕುರಿತು ಧ್ಯಾನವಾ| ಗೈಯ್ಯಲಾಗಿ ಅಚಲ ಪದಕ|ಒಯ್ದು ಇಟ್ಟು ನೀನು ಅವನ| ಕಾಯ್ದೆ ಮಹಿಪತಿ ನಂದನೊಡೆಯನಾದ ದೇವ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ