ಒಟ್ಟು 72 ಕಡೆಗಳಲ್ಲಿ , 32 ದಾಸರು , 70 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸಿ ವೃಷ್ಟಿಗರಿ ಕಮಲನಯನನರರಪರಾಧಗಳ ನೋಡದಲೆ ವೇಗದಲಿ ಪ ತ್ರಿವಿಧ ಸಾಧನ ಪೂರ್ತಿಪದು ||ಅನ್ನದಿಂದಲೆ ಅಭಿವೃಧ್ದಿ ಆಹದರಿಂದ ಪ-ರ್ಜನ್ಯದಿಂದಲಿ ಅನ್ನ ಜನಿಸುವ ಕಾರಣದಿ 1 `ಭೀಷ್ಮಾಸ್ಮಾದ್ವಹತಿ ಪವತಿ` ಎಂಬೋಕ್ತಿಯಲಿಈ ಸಮಸ್ತಮರರೂ ನಿನ್ನ ಭಯದಿ ||ಬ್ಯಾಸರವೆ ತಮ ತಮ್ಮ ವ್ಯಾಪಾರಗಳ ಮಾಡಿಪೋಷಿಸುವರು ಜಗವ ಪ್ರೀತಿಯಿಂದ 2 ಸುರರು ನಿಮಿತ್ಯ ಮಾತ್ರಪರಮ ಗುಣಸಾಂದ್ರ ಹೇ ಕರುಣಾಬ್ಧಿ ಚಂದ್ರ 3 ನರನೊಬ್ಬ ಪ್ರಭು ತನ್ನ ಪರಿಚಾರಿಗಳನ್ನು ಪರಮ ಅಭಿಮಾನದಲಿ ಪರಿಪಾಲಿಪ ||ಸುರರ ಬ್ರಹ್ಮಾದಿಗಳ ದೊರೆಯ ನಿನಗೀ ಮಾತುಸರಿಹೋದರೆ ವಚನ ಸಲಿಸು ಕೃಪೆಯಿಂದ 4 ಆವಾವ ಸಾಧನದಿ ಆವ ಸುಖವೈದುತಿರೆದೇವ ನಿನ್ನಯ ಕೀರ್ತಿ ಬರುವದೆಂತೋ ||ದೇವ ದೇವೇಶ ಗುರು ವಿಜಯ ವಿಠಲರೇಯ ಸಾವಧಾನದಲಿತ್ತು ಪರಿಪಾಲಿಪುದು ಬಿನ್ನಪವ 5
--------------
ಗುರುವಿಜಯವಿಠ್ಠಲರು
ಚಂದ್ರಶೇಖರ ಸುಮನಸೇಂದ್ರ ಪೂಜಿತ ಚರಣಾ ಹೀಂದ್ರ ಪದಯೋಗ್ಯ ವೈರಾಗ್ಯ | ವೈರಾಗ್ಯಾ ಪಾಲಿಸಮ ರೇಂದ್ರ ನಿನ್ನಡಿಗೆ ಶರಣೆಂಬೆ 1 327ನಂದಿವಾಹನ ವಿಮಲ ಮಂದಾಕಿನೀಧರನೆ ವೃಂದಾರಕೇಂದ್ರ ಗುಣಸಾಂದ್ರ | ಗುಣಸಾಂದ್ರ ಎನ್ನ ಮನ ಮಂದಿರದಿ ನೆಲೆಸಿ ಸುಖವೀಯೊ 2 328ಕೃತ್ತಿವಾಸನೆ ನಿನ್ನ ಭೃತ್ಯಾನುಭೃತ್ಯ ಎ ನ್ನತ್ತ ನೋಡಯ್ಯ ಶುಭಕಾಯ ಭಕ್ತರಪ ಮೃತ್ಯು ಪರಿಹರಿಸಿ ಸಲಹಯ್ಯ 3 329 ನೀಲಕಂಧರ ರುಂಡಮಾಲಿ ಮೃಗವರಪಾಣಿ ಶೈಲಜಾರಮಣ ಶಿವರೂಪಿ | ಶಿವರೂಪಿ ನಿನ್ನವರ ನಿತ್ಯ ಪರಮಾಪ್ತ 4 330ತ್ರಿಪುರಾರಿ ನಿತ್ಯವೆನ್ನಪರಾಧಗಳ ನೋಡಿ ಕುಪಿತನಾಗದಲೆ ಸಲಹಯ್ಯ | ಸಲಹಯ್ಯ ಬಿನ್ನೈಪೆ ಕೃಪಣವತ್ಸಲನೆ ಕೃಪೆಯಿಂದ 5 331ಪಂಚಾಸ್ಯ ಮನ್ಮನದ ಚಂಚಲವ ಪರಿಹರಿಸಿ ಸಂಚಿತಾಗಾಮಿ ಪ್ರಾರಬ್ಧ | ಪ್ರಾರಬ್ಧ ದಾಟಸು ವಿ ರಿಂಚಿಸಂಭವನೆ ಕೃತಯೋಗ 6 332 ಮಾನುಷಾನ್ನವನುಂಡು ಜ್ಞಾನ ಶೂನ್ಯನು ಆದೆ ಅನುದಿನ | ಅನುದಿನದಿ ನಾ ನಿನ್ನ ಧೀನದವನಯ್ಯ ಪ್ರಮಥೇಶ 7 333 ಅಷ್ಟಮೂತ್ರ್ಯಾತ್ಮಕನೆ ವೃಷ್ಟಿವರ್ಯನ ಹೃದಯಾ ಧಿಷ್ಠಾನದಲ್ಲಿ ಇರದೋರು | ಇರದೋರು ನೀ ದಯಾ ದೃಷ್ಟಿಯಲಿ ನೋಡೊ ಮಹದೇವ 8 334 ಪಾರ್ವತಿರಮಣ ಶುಕ ದೂರ್ವಾಸ ರೂಪದಲ್ಲಿ ಉರ್ವಿಯೊಳಗುಳ್ಳ ಭಕುತರ | ಭಕುತರ ಸಲಹು ಸುರ ಸಾರ್ವಭೌಮತ್ವ ವೈದಿದೆ 9 335 ಭಾಗಿಥಿಧರನೆ ಭಾಗವತ ಜನರ ಹೃ ದ್ರೋಗ ಪರಿಹರಿಸಿ ನಿನ್ನಲ್ಲಿ | ನಿನ್ನಲ್ಲಿ ಭಕ್ತಿ ಚೆ ನ್ನಾಗಿ ಕೊಡು ಎನಗೆ ಮರೆಯಾದೆ 10 336 ಮೃಡದೇವ ಎನ್ನ ಕೈಪಿಡಿಯೊ ನಿನ್ನವನೆಂದು ಬಡವ ನಿನ್ನಡಿಗೆ ಬಿನ್ನೈಪೆ | ಬಿನ್ನೈಪೆನೆನ್ನ ಮನ ದೃಢವಾಗಿ ಇರಲಿ ಹರಿಯಲ್ಲಿ 11 337 ವ್ಯೋಮ ಕೇಶನೆ ತ್ರಿಗುಣನಾಮ ದೇವೋತ್ತಮ ಉ ವಿರುಪಾಕ್ಷ ಮಮ ಗುರು ಸ್ವಾಮಿ ಎಮಗೆ ದಯವಾಗೊ 12 338 ಅಷ್ಟ ಪ್ರಕೃತಿಗನೆ ಸರ್ವೇಷ್ಟ ದಾಯಕನೆ ಪರ ಮೇಷ್ಟಿ ಸಂಭವನೆ ಪಂಮಾಪ್ತ | ಪರಮಾಪ್ತ ಎನ್ನದಯ ದೃಷ್ಟಿಯಿಂದ ನೋಡಿ ಸಲಹಯ್ಯ 13 339ಪಂಚಾಸ್ಯ ದೈತ್ಯಕುಲ ವಂಚಕನೆ ಭಾವಿ ವಿ ರಿಂಚಿ ಶೇಷನಲಿ ಜನಿಸಿದೆ | ಜನಿಸಿದೆ ಲೋಕತ್ರಯದಿ ಸಂಚಾರ ಮಾಳ್ಪೆ ಸಲಹಯ್ಯ 14 340 ಉಗ್ರತಪ ನಾ ನಿನ್ನನುಗ್ರಹದಿ ಜನಿಸಿದೆ ಪ ಸಂತೈಸಿ ಇಂದ್ರಿಯವ ನಿಗ್ರಹಿಪ ಶಕ್ತಿ ಕರುಣೀಸೊ 15 341 ಲೋಚನತ್ರಯ ನಿನ್ನ ಯಾಚಿಸುವೆ ಸಂತತವು ಗುಣರೂಪ ಕ್ರಿಯೆಗಳಾ ಲೋಚನೆಯ ಕೊಟ್ಟು ಸಲಹಯ್ಯ16 342ಮಾತಂಗ ಷಣ್ಮುಖರ ತಾತ ಸಂತತ ಜಗ ನ್ನಾಥ ವಿಠ್ಠಲನ ಮಹಿಮೆಯ | ಮಹಿಮೆಯನು ತಿಳಿಸು ಪ್ರೀತಿಯಿಂದಲೆಮಗೆ ಅಮರೇಶ 17 343 ಭೂತನಾಥನ ಗುಣ ಪ್ರಭಾತ ಕಾಲದಲೆದ್ದು ಪ್ರೀತಿಪೂರ್ವಕದಿ ಪಠಿಸುವ | ಪಠಿಸುವರ ಜಗ ನ್ನಾಥವಿಠಲನು ಸಲಹುವ 18
--------------
ಜಗನ್ನಾಥದಾಸರು
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(ಬಪ್ಪನಾಡಿನ ದೇವಿಯನ್ನು ಕುರಿತು) ದಯಮಾಡೆ ಬಾಗೆ ಶ್ರೀಪಂಚದುರ್ಗೆ ದಯಮಾಡೆ ಬಾಗೆಪ. ದಯಮಾಡೆ ಕೇವಲ ಭಯವಿಹ್ವಲನಲ್ಲಿ ದಯಸಾಗರೆ ಸೌಭಾಗ್ಯಸಂಪದವನ್ನುಅ.ಪ. ವೇದಾಂತವೇದ್ಯೆ ನಿಖಿಳಜಗದಾದಿವಿನೋದೆ ಮಧುರಬಿಂಬಾಧರೆ ನಿನ್ನಯ ಪರಿಹರಿಸಿ ಸರ್ವಾಪ- ರಾಧಗಳ ಕ್ಷಮಿಸಮ್ಮ ಕೈಟಭಸೂದನನ ಸೋದರಿ ಮಹೇಶ್ವರಿ 1 ಅಂಬುಜಚರಣೆ ಮಾಧುರ್ಯೋರುರಂಭಾಸಮಾನೆ ಲಂಬೋದರಪರಿರಂಭಕರಾಂಬುಜೆ ಮುಖೇಂದುಪದ್ಮ ದ- ರೋಲಂಬಕುಂತಳೆ ಶುಂಭ ಮರ್ದಿನಿ 2 ಸಿಂಧೂರನಯನೆ ನಿಖಿಲಾಮರವಂದಿತಚರಣೆ ನಿತ್ಯಾನಂದಪ್ರಕಾಶಿನಿ ಅಂಧಕಾಸುರವೈರಿಹೃದಯಾನಂದ ಪಾರಾವಾರ ಪೂರ್ಣಮಿ- ಸುರಥನರೇಂದ್ರವರದೆ ಮೃಗೇಂದ್ರವಾಹಿನಿ3 ರಜತಾದ್ರಿವಾಸೆ ಚಂಪಕನಾಸೆ ಸುಜದನೌಘಪೋಷೆ ಮಹಾಗಜಗೌರಿ ಶಂಕರಿ ತ್ರಿಜಗಜ್ಜನನಿ ಭಾವನಿ ಪಾರ್ವತಿ ಭುಜಗಭೂಷಣರಾಣಿ ಕಲುಷ- ದಿವಾಕರೆ ಮಾನಿತೋದ್ಧರೆ4 ತಪ್ಪು ಸಹಸ್ರವಿದ್ದರು ಮನದೊಳಿಪ್ಪುದಜಸ್ರ ಜಗದಾದಿಮಾಯೆ ಕಪ್ಪುಕಂಠನ ರಾಣಿ ವರಕಂದರ್ಪಧಿಕತರೂಪೆ ಸಾಧು ಪ- ದ ಪ್ರಸಾದವ ಪಾಲಿಸೆನ್ನಲಿ ಬಪ್ಪನಾಡಿನ ಭದ್ರದಾಯಕಿ5
--------------
ತುಪಾಕಿ ವೆಂಕಟರಮಣಾಚಾರ್ಯ
(ಮಂಗಳೂರಿನ ಪ್ರಾಣದೇವರನ್ನು ನೆನೆದು) ಪಾಲಿಸೆನ್ನ ಪಾವಮಾನಿ ಪಾವನಾತ್ಮ ಸುಜ್ಞಾನಿ ಪ. ಮೂರ್ಲೋಕದ ಸಚರಾಚರಜಾಲದಂತರಂಗ ಕರುಣಿ ಅ.ಪ. ಮೂರವತಾರವ ಗೈದು ಮುರಾರಿಯ ಪೂಜಿಸಿದೆ ಪಾರಮೇಷ್ಠಿಪದ ಪೊಂದಿದೆ ಭಾರತಿಮನೋಹರ 1 ಪಾರಗಾಣರು ನಿನ್ನ ಮಹಿಮೆ ಫಾಲನಯನಾದಿಗಳು ಕ್ರೂರಕರ್ಮಿಗಳೇನರಿವರು ಶ್ರೀರಾಮಶರಣ್ಯ 2 ಅರಿವರ್ಗಗಳತಿಕ್ರಮವ ಧಿಕ್ಕರಿಸೈ ಸುಜ್ಞಾನವಿತ್ತು 3 ಸರ್ವಾಪರಾಧಗಳನು ಸಾಧುವರದ ಕ್ಷಮಿಸು ಗರ್ವಹಂಕಾರವೀಯದೆ ಗಜವರದನ ಭಕ್ತಿಯಿತ್ತು 4 ಕರಣೀಕಾಗ್ರಣಿ ಮಂಗಲಪುರವರ ಪ್ರಾಣೇಶ ವರ ಲಕ್ಷ್ಮೀನಾರಾಯಣ ಶರಣಾಗತರೀಶ 5
--------------
ತುಪಾಕಿ ವೆಂಕಟರಮಣಾಚಾರ್ಯ
2. ಶ್ರೀ ವೆಂಕಟೇಶ ಸ್ತೋತ್ರ 6 ಶರಣಾಗತರ ಕಲ್ಪತರುವೆ ವೆಂಕಟ ಧರಾ ಧರನಾಥ ನಿನ್ನ ಚರಣಾಬ್ಜ | ಚರಣಾಬ್ಜಯುಗಳ ಸಂ ದರುಶನವ ಈಯೊ ಎಂದೆಂದು 1 7 ಸ್ವಾಮಿ ತೀರ್ಥ ನಿವಾಸ ಸು ಭಯಹಾರಿ ಸುರರ ಸಾರ್ವ ಭೌಮ ನೀ ಸಲಹೆಮ್ಮೆ 2 8ವೆಂಕಟಾಚಲನಿಲಯ ಪಂಕಜೋದ್ಭವನಯ್ಯ ಕಿಂಕರನೆನಿಸೊ ಶುಭಕಾಯ 3 9 ಸತ್ಯಸಂಕಲ್ಪ ಜಗದತ್ಯಂತ ಭಿನ್ನಸ ರ್ವೋತ್ತಮ ಪುರಾಣ ಪುರುಷೇಶ | ಪುರುಷೇಶ ಸತತತ್ವ ದ್ಭೈತ್ಯನ್ನ ಕಾಯೊ ಕರುಣಾಳೊ 4 10 ದೇವಶರ್ಮನ ತುತಿಗೆ ನೀನೊಲಿದು ಪಾಲಿಸಿದೆ ದೇವಕೀಕಂದ ದಯದಿಂದ | ದಯದಿಂದ ಒಲಿದೆನ್ನ ತಾವಕರೊಳಿಟ್ಟು ಸಲಹಯ್ಯ 5 11 ಕೃತಿಪತಿಯೆ ನಿನ್ನ ಸಂಸ್ಮøತಿಯೊಂದಿರಲಿ ಜನ್ಮ ಮೃತಿ ನರಕ ಭಯವು ಬರಲಂಜೆ | ಬರಲಂಜೆ ಎನಗೆಕೃಸಂ ತತ ನಿನ್ನ ಸ್ಮರಣೆ ಕರುಣೀಸೊ 6 12ಶುಚಿಸದ್ಮನೆ ಮನೋವಚನಾತ್ಮಕೃತ ಕರ್ಮ ನಿಚಯ ನಿನಗೀವೆ ಸುಚರಿತ್ರ | ಸುಚರಿತ್ರ ಸುಗುಣಗಳ ರಚನೆ ಸುಖವೀಯೊ ರುಚಿರಾಗ 7 13ಹೃದಯದಲಿ ತವರೂಪ ವದನದಲಿ ತವನಾಮ ಉದರದಲಿ ನೈವೇದ್ಯ ಶಿರದಲ್ಲಿ | ಶಿರದಲ್ಲಿ ನಿರ್ಮಾಲ್ಯ ಪದಜಲಗಳಿರಲು ಭಯವುಂಟೆ 8 14ಸತತ ಸ್ಮರಿಸುತ ನಿನ್ನ ನುತಿಸಿ ಬೇಡಿಕೊಳುವೆ ಹಿತದಿಂದ ನಿನ್ನ ವಿಜ್ಞಾನ | ವಿಜ್ಞಾನ ನಿಜ ಭಾಗ ವತರ ಸಂಗವನ್ನೇ ಕರುಣೀಸೊ 9 15ಪ್ರಕೃತಿ ಗುಣಗಳ ಕಾರ್ಯ ಸುಖ ದುಃಖ ಮೂಲ ಜಡ ಪತಿ ನಿನ್ನ ಭಕುತ ನಾನಯ್ಯ ಎಂದೆಂದು 10 16ಪುಣ್ಯಪಾಪಾದಿಗಳು ನಿನ್ನಾಧೀನದೊಳಿರಲು ಎನ್ನದೆಂದರುಹಿ ದಣಿಸುವಿ | ದಣಿಸುವುದು ಧರ್ಮವೇ ನಿನ್ನರಿವ ಜ್ಞಾನ ಕರುಣೀಸೊ 11 17ಝಷಕೇತು ಜನಕ ದುರ್ವಿಷಯಕೊಳಗಾಗಿ ಸಾ ಹಸ ಪಡುವ ಚಿತ್ತ ಪ್ರತಿದಿನ | ಪ್ರತಿದಿನಗಳಲ್ಲಿ ನಿನ್ನ ವಶಮಾಡಿಕೊಳ್ಳೊ ವನಜಾಕ್ಷ 12 18ಇನಿತಿದ್ದ ಬಳಿಕ ಯೋಚನೆ ಯಾಕೆ ಗರುಡವಾ ಹನನೆ ಮಹಲಕ್ಷ್ಮಿ ನರಸಿಂಹ/ನರಸಿಂಹ ಬಿನ್ನೈಪೆ ಘನತೆ ನಿನಗಲ್ಲ ಕರುಣಾಳು 13 19ಸುಲಭರಿನ್ನುಂಟೆ ನಿನ್ನುಳಿದು ಲೋಕತ್ರಯದಿ ಬಲವಂತರುಂಟೆ ಸುರರೊಳು/ಸುರರೊಳು ನೀನು ಬೆಂ ಬಲವಾಗಿ ಇರಲು ಭಯವುಂಟೆ 14 20ಹಯವದನ ಸೃಷ್ಟಿ ಸ್ಥಿತಿಲಯ ಕಾರಣನುನೀನೆ ದಯವಾಗಲೆಮಗೆ ದುರಿತೌಘ / ದುರಿತೌಘರ್ಕಳು ಬಟ್ಟ ಬಯಲಾಗುತಿಹವೊ ಸುಕೃತಿಯಿಂದ 15 21ಕಲುಷವರ್ಜಿತನೆ ಮಂಗಳ ಚರಿತ ಭಕ್ತವ ತ್ಸಲ ಭಾಗ್ಯವ ಪುಷ ಬಹುರೂಪಿ /ಬಹುರೂಪಿ ಎನಗೆಚಂ ಚಲ ಬಿಡಿಸಿ ನೀ ಕರುಣೀಸೊ 16 22ಫಾಲಾಕ್ಷಪ್ರಿಯ ನಿನ್ನ ಲೀಲೆಗಳ ಮರೆಯದಲೆ ಕಾಲಕಾಲದಲಿ ಸ್ಮರಿಸುವ/ ಸ್ಮರಿಸಿ ಹಿಗ್ಗುವ ಭಾಗ್ಯ ಪಾಲಿಸೊ ಎನಗೆ ಪರಮಾತ್ಮ 17 23ಚತುರವಿಧ ಪುರುಷಾರ್ಥ ಚತುರಾತ್ಮ ನೀನಿರಲು ಇತರ ಪುರುಷಾರ್ಥ ನಾನೊಲ್ಲೆ | ನಾನೊಲ್ಲೆ ತ್ವತ್ಪಾದ ರತಿ ಭಾಗ್ಯ ನೀನೆ ಕರುಣೀಸೊ 18 24 ಜಯ ಮತ್ಸ್ಯ ಕೂರ್ಮ ವರಹ ನರಸಿಂಹ ಭೃಗುರಾಮರಘುರಾಮ ಜಯ ಬೌದ್ಧ ಕಲಿಹರ್ತಾ 19 25 ಜಯ ವಿಶ್ವತೈಜಸನೆ ಜಯ ಪ್ರಾಜ್ಞ ತುರ್ಯಾತ್ಮ ಜಯ ಅಂತರಾತ್ಮ ಪರಮಾತ್ಮ | ಪರಮಾತ್ಮ ಜ್ಞಾನಾತ್ಮ ಅನಿರುದ್ಧ ಪ್ರದ್ಯುಮ್ನ 20 26 ಜಯ ಸಂಕರುಷಣನೆ ಜಯ ವಾಸುದೇವನೆಜಯ ಜಯತು ಲಕ್ಷ್ಮೀನಾರಾಯಣಾ |ನಾರಾಯಣಾನಂತ ಜಯತು ಗೋವಿಂದಾಚ್ಯುತ ಶ್ರೀ ಕೃಷ್ಣ 21 27ಜಯ ಪೂರ್ಣ ಜ್ಞಾವಾತ್ಮ ಜಯ ಪೂರ್ಣೈಶ್ವರ್ಯ ಜಯ ಪ್ರಭಾ ಪೂರ್ಣ ತೇಜಾತ್ಮ | ತೇಜಾತ್ಮ ನಂದಾತ್ಮ ಜಯತು ಶಕ್ತ್ಯಾತ್ಮ ಕೃದ್ಧೋಲ್ಕ 22 28ಜಯ ಜಯತು ಮಹೋಲ್ಕ ಜಯತು ವೀರೋಲ್ಕ ಜಯ ಜಯತು ದ್ಯುಲ್ಕ ಸಹಸ್ರೊಲ್ಕ | ಸಹಸ್ರೊಲ್ಕ ಜಯ ಜಯ ಜಯತು ಜಗನ್ನಾಥ ವಿಠಲಾರ್ಯ 23 29 ಶ್ರೀನಿವಾಸನ ಪೋಲ್ವ ದೀನವತ್ಸಲರುಂಟೆ ದಾನಿಗಳುಂಟೆ ಜಗದೊಳು |ಜಗದೊಳು ನೀನೆ ಗತಿಯೆಂದನರರಿಗೆ ಆನಂದವೀವೆ ಅನುಗಾಲ 24 30ಒಪ್ಪಿಡಿ ಅವಲಕ್ಕಿಗೊಪ್ಪಿಕೊಂಡು ಮುಕುಂದ ವಿಪ್ರನಿಗೆ ಕೊಟ್ಟ ಸೌಭಾಗ್ಯ | ಸೌಭಾಗ್ಯ ಕೊಟ್ಟ ನ ಮ್ಮಪ್ಪಗಿಂತಧಿಕ ದೊರೆಯುಂಟೆ 25 31ಏನು ಕರುಣಾ ನಿಧಿಯೊ ಶ್ರೀನಿತಂಬಿನಿರಮಣ ತಾನುಮ್ಮನಗಲಿ ಸೈರಿಸ | ಸೈರಿಸದ ಕರುಣಿಯ ನಾನೆಂತು ತುತಿಸಿ ಹಿಗ್ಗಲಿ 26 32ಶ್ರೀನಿಧೆ ನಿನ್ನವರ ನಾನಾಪರಾಧಗಳ ನೀನೆಣಿಸದವರ ಸಲಹುವಿ | ಸಲಹುವಿ ಸರ್ವಜ್ಞ ಏನೆಂಬೆ ನಿನ್ನ ಕರುಣಕ್ಕೆ 27 33ಎನ್ನ ಪೋಲುವ ಭಕ್ತರನ್ನಂತ ನಿನಗಿಹರು ನಿನ್ನಂಥ ಸ್ವಾಮಿ ಎನಗಿಲ್ಲ | ಎನಗಿಲ್ಲವದರಿಂದ ಬಿನ್ನೈಪೆನಿನ್ನು ಸಲಹೆಂದು 28 34ಅಚ್ಯುತನೆ ನಿನ್ನಂಥ ಹುಚ್ಚು ದೊರೆಯನು ಕಾಣೆ ಕಚ್ಚಿ ಬಯದೊಡ್ಡೆ ಭಕುತರ | ಭಕುತರಪರಾಧಗಳ ತುಚ್ಛಗೈದವರ ಸಲಹೀದೆ 29 35ಎನ್ನ ಬಂಧುಗಳೆಲ್ಲ ನಿನ್ನ ದಾಸರು ಸ್ವಾಮಿ ಮನ್ನಿಸಬೇಕು ಮಹರಾಯ | ಮಹರಾಯ ನೀನಲ್ಲ ದನ್ಯರು ಸಾಕಲರಿಯರು 30 36 ತಂದೆ ತಾಯಿಯು ಭ್ರಾತ ಸಖ ಗುರು ಪುತ್ರ ಎಂದೆಂದು ನೀನೆ ಗತಿ ಗೋತ್ರ | ಗತಿಗೋತ್ರ ಇಹಪರಕೆ ಇಂದಿರಾರಾಧ್ಯ ಸಲಹೆಮ್ಮ 31 37 ಪತಿತ ನಾನಾದರೂ ಪತಿತ ಪಾವನ ನೀನು ರತಿನಾಥ ನಗಪಾಣಿ | ನಗಪಾಣಿ ನೀನಿರಲು ಇತರ ಚಿಂತ್ಯಾಕೊ ಎನಗಿನ್ನು 32 38 ನಡೆ ನುಡಿಗಳಪರಾಧ ಒಡೆಯ ನೀನೆಣಿಸಿದರೆ ಬಡವ ನಾನೆಂತು ಬದುಕಲಿ | ಬದುಕಲಿ ಕರುಣಿಯೆ ಕಡೆ ಬೀಳ್ವುದೆಂತೊ ಭವದಿಂದ 33 39ಏಸೇಸು ಜನ್ಮದಲಿ ದಾಸ ನಾ ನಿನಗಯ್ಯ ಈಶ ನೀನೆಂಬೊ ನುಡಿಸಿದ್ಧ | ನುಡಿಸಿದವಾಗಿರಲು ದಾಸೀನ ಮಾಡೋದುಚಿತಲ್ಲ 34 40ಆವ ಯೋನಿಯಲಿರಿಸು ಆವ ಲೋಕದಲಿರಿಸು ಆವಾಗ್ಯೆ ನಿನ್ನ ನೆನೆವಂತೆ | ನೆನೆವಂತೆ ಕರುಣಿಸೊ ದೇವಕೀಕಂದ ದಯದಿಂದ 35 41ಶಿಷ್ಟನೆಂದೆನಿಸೆನ್ನ ಭ್ರಷ್ಟನೆಂದೆನಿಸು ಸ ಜನರಿಂದ ನುಡಿಸಿದ್ದು
--------------
ಜಗನ್ನಾಥದಾಸರು
ಅಭಿಮಾನ ಕಳೆವಂಥ | ಸುಲಭ ಮಾರ್ಗವನೇ |ಪ್ರಭುವೆ ಹರಿ ನಿನ್ನ ಸ್ಮøತಿ | ಸರ್ಬದಲಿ ಈಯೋ ಪ ಕರ್ಮ | ಸೃಷ್ಟಿ ನಡೆಸುವಲಿ |ಇಷ್ಟು ತತ್ವೇಶರನು | ಸುಷ್ಠು ಕರ್ಮವ ನಡೆಸೆಭ್ರಷ್ಟ ಎನ್ನಿಂದೆಂಬ | ಕರ್ತೃತ್ವದಲ್ಲಿರುವಾ 1 ಕರ್ಮ ಕರ್ಮ ನಾಮಕನೇ 2 ತನುನಿಷ್ಠ ತತ್ವೇಶರ | ಗಣಿತದ ಕರ್ಮಗಳತನು ತಮ್ಮ ಇಂದ್ರಿಯದಿ | ಅನುನಯದಿ ಗೈಯ್ಯೋ |ಎನ ತನುವು ಇಂದ್ರಿಯವೆ | ಕಾರಣವು ಎಂಬಂಥಹೀನ ಕಾರಕ ಸ್ವಾಮ್ಯ | ಮಾನವೆಂಬಂಥಾ 3 ಹಲವು ತತ್ವರು ದೇಹ | ದಲಿ ನಿಂತು ಕರ್ಮಗಳಹಲವು ಗೈಯುತ ಹರಿಗೆ | ಒಲಿದು ಅರ್ಪಿಸುತಿರೇ |ಫಲವು ಹಂಚಿಪ ಹರಿಯ | ಫಲಸ್ವಾಮ್ಯ ತಿಳಿಯದಿಹತಿಳಿಗೇಡಿ ಯೆನ್ನ ಭ್ರಮ | ಒಲಿದು ನೀ ಕಳೆಯೋ 4 ಅಹಿಕ ಪಾರತ್ರಿಕವು | ವಿಹಿತ ಸುಖವೆರಡರಲಿಅಹಿಕ ದುಃಖದ ವಿರಲು | ಬಹುದು ಮೋಕ್ಷೆರಿ ಬಾ |ಅಹಿತ ಮತಿ ಕಳೆಯುತ | ಶ್ರೀಹರಿಯೆ ನಿನ್ವೊಲಿಮೆಮಹಿತ ಮೋಕ್ಷದವೆಂಬ | ವಿಹಿತ ಮತಿ ಈ ಯೋ 5 ವಿಷಯದಲಿ ಮೈ ಮೆರೆತು | ವಿಷಯೋಪ ಭೋಗಗಳೆಅಸಮ ಪುರುಷಾರ್ಥಗಳ | ಲೇಸು ಪ್ರದವೆಂಬಾ |ವಿಷಯಾಭಿಮಾನಗಳು | ನಶಿಪಂತೆ ನೀ ಮಾಡಿವಿಷಯಾದಿಗಳಿಗೆಲ್ಲ | ಈಶ ನೀವೆನೆ ತಿಳಿಸೋ 6 ಕಕ್ಕಸದ ಅಭಿಮಾನ | ಷಟ್ಕಗಳ ನೀ ಕಳೆದುಅಕ್ಕರದಿ ತಾಯ್ತನ್ನ | ಮಕ್ಕಳನು ಪೊರೆವಂತೇ |ಲೆಕ್ಕಿಸದಲೆನ್ನಯ | ಲಕ್ಷ ಅಪರಾಧಗಳ ಕ್ಷಮಿಸಿಚೊಕ್ಕ ಗುರು ಗೋವಿಂದ | ವಿಠ್ಠಲನೆ ಸಲಹೋ 7
--------------
ಗುರುಗೋವಿಂದವಿಠಲರು
ಆದಿಮೂಲ ಪಾಲಯಾ ಮಾಂ ಪ ವೇದವೇದ್ಯ ಕರುಣೋದಧಿ ಎನ್ನಪ- ರಾಧಗಳೆಣಿಸದೆ ಮೋದದಿ ಸಲಹೊ ಅ.ಪ. ಜಗದುತ್ಪತ್ತಿ ಸ್ಥಿತಿಲಯ ಕಾರಣ ಅಘಹರ ಅನಿಮಿಷ ಪೂಜಿತ ಚರಣ1 ಪರಮ ಪುರುಷ ಪರಮಾತ್ಮ ಪರಾತ್ಪರ ದುರಿತ ವಿದೂರ 2 ಸಕಲ ವ್ಯಾಪಕ ಸುಖನಿರವಧಿಕ ಮುಕುತಿದಾಯಕ ಮೂರ್ಜಗನಾಯಕ 3 ಆರ್ತಬಂಧು ಲೋಕೋತ್ತರ ಮಹಿಮ ಕೃ- ತಾರ್ಥನ ಮಾಡು ಪವಿತ್ರ ಚರಿತ್ರ 4 ಪರಿಪರಿ ಜನ್ಮದ ಪರಿಭ್ರಮಣೆಯ ನೀ ಪರಿಹರಿಸೈ ಶ್ರೀ ಕರಿಗಿರೀಶನೇ 5
--------------
ವರಾವಾಣಿರಾಮರಾಯದಾಸರು
ಇಷ್ಟುದಯ ಮಾಡಿದ್ದೆ ಅತಿ ಸೋಜಿಗ ಶೀಷ್ಟೇಷ್ಟದಾತ ಭ್ರಷ್ಟಮಾನವನಲ್ಲಿ ಪ. ಉದಯಕಾಲದಲೆದ್ದು ಪದುಮಸಂಭವ ಪಿತನ ವದನದಲಿ ನೆನೆಯದಲೆ ಮಾನುನಿಯರ ಚದುರತೆಗೆ ಮೆಚ್ಚುತಲೆ ಉದರ ಪೊರೆದನ ಮೇಲೆ ಚದುರ ಶ್ರೀಕೃಷ್ಣ ಬದಿಗನಾಗಿದ್ದು 1 ಕರುಣಾಸಮುದ್ರನ ಸ್ಮರಣೆ ಸಾಲದೆ ಎಂಬ ಪರಮ ಗುರುಗಳ ವಚನ ಮರೆತು ನಿನ್ನ ಸ್ಮರಿಸದೆಲೆ ನಿರುತದಿ ಪರರ ಬಾಗಿಲಿಗ್ಹೋಗಿ ಚರಣ ಧಣಿವುತ ಮನದಿ ಮರುಗಿದೆನೋ ಕೃಷ್ಣಾ 2 ಇನ್ನಾದರೆನಮನದಿ ಪನ್ನಗಾದ್ರಿನಿವಾಸ ನಿನ್ನ ಸ್ಮರಣೆಯ ಕೊಟ್ಟು ಮನ್ನಿಸೆನ್ನ ಘನ್ನ ಅಪರಾಧಗಳ ವರ್ಣಿಸಲಳವಲ್ಲ ಚೆನ್ನಿಗ ಶ್ರೀ ಶ್ರೀನಿವಾಸ ಘನ್ನ ಸಂಪನ್ನ ಸರಿಯಾರೋ 3
--------------
ಸರಸ್ವತಿ ಬಾಯಿ
ಈ ಭಾಗ್ಯವೆ ನಿನ್ನದೊ ವರ ಭೋಗಿಶಯನಾ ಪ ಸೌಭಾಗ್ಯವೇ ನಿನ್ನ ಮಹಿಮೆ ತಿಳಿಯುವ ಯೋಗಅ.ಪ ನೀನಿಲ್ಲದಾಸ್ಥಾನ ಈ ನಳಿನಜಾಂಡದೊಳಿಲ್ಲ ನೀನೆಲ್ಲವನು ಬಲ್ಲೆ ನಿನ್ನತಿಳಿಯಗೊಡದೆ ಹೀನಮಾನವ ನಾನು ನಿನ್ನನವರತ ಮರೆತರು ನೀ ಎನ್ನ ಮರೆಯದಲೆ ಎನ್ನೊಳಗೆ ಇಹೆ ಎಂಬ 1 ನಿಲ್ಲಿಸಲು ನಿಲ್ಲುವೆನು ಮಲಗಿಸಲು ಮಲಗುವೆನು ತಿಳಿಸಿದರೆ ನಾ ತಿಳಿವೆ ತಿಳುವಳಿಕೆ ನೀನೆ ತಿಳಿಯಗೊಡಿಸೋಎನ್ನಕ್ರಿಯೆಗಳನು ದೇಹದ ನೆಳಲಂತೆ ನಿನಗೆ ನಾನಿಹೆನಯ್ಯ ದೇವಾ 2 ಈ ಜಗತ್ತಿನೊಳಗೆಲ್ಲ ಪೂಜ್ಯಪೂಜಕ ಪೂಜ್ಯ ಪೂಜೋಪಕರಣದೊಳು ನೀನೆ ನಿಂತು ಮೂರ್ಜಗತ್ಪತಿಯೆ ನಿನ್ನನರ್ಚಿಸುವ ಭಜಕರಿಗೆ ನೈಜಸುಖ ವ್ಯಕ್ತಿಯನು ಮಾಡುತಲಿ ಪೊರೆವೇ 3 ನೀರು ತೃಣವನು ಕೊಡಲು ಹರುಷದಿಂದಲಿ ಗೋವು ಕ್ಷೀರವನು ಕರೆದು ಜನರ ಪೊರೆವಂತೆ ಸೂರಿಗಳು ಮಾಳ್ವ ಅಪರಾಧಗಳೆಣಿಸದಲೆ ಕರುಣದಿಂದಲಿ ಅವರ ಪೊರೆವ ಶ್ರೀಹರಿಯೆ4 ಪನ್ನಗಾಚಲನಿಲಯ ನೀನೆ ಎನ್ನೊಳಗಿರಲು ಬನ್ನಪಡಲ್ಯಾತಕೆ ಚಿನ್ಮಯರೂಪ ಎನ್ನಂಥಜೀವರಿನ್ನೆಷ್ಟೋ ಬ್ರಹ್ಮಾಂಡದೊಳು ಘನ್ನಭಕುತಿಯನೀಡೋ ಶ್ರೀಉರಗಾದ್ರಿವಾಸವಿಠಲ 5
--------------
ಉರಗಾದ್ರಿವಾಸವಿಠಲದಾಸರು
ಉಪಕೃತಿ ಎನ್ನದಲ್ಲ ನರಹರಿ ಕೃಪೆ ಕಾರಣವಿದಕೆಲ್ಲ ಪ ಅಪರಾಧಗಳನು ಮನ್ನಿಸಿ ಪೊರೆಯುವ ವಿಪುಲ ಕೃಪಾನಿಧಿ ಹರಿಯಲ್ಲದೆಲೆ ಅÀ.ಪ. ಜೀವ ಪರಾಧೀನ ಸ್ವತಂತ್ರ ರಾ ಜೀವದಳನಯನ ಸರ್ವೋತ್ತಮ ಪ್ರಭು ಕರಿಗಿರೀಶನೆ ಜಗ ಜೀವನ ಪಾವನ ಪ್ರೇರಕನಲ್ಲದೆ 1
--------------
ವರಾವಾಣಿರಾಮರಾಯದಾಸರು
ಎಂತು ನೋಡುವಿಯನ್ನ ಅಂತ ಹರಿಯೇ| ಕಂತುಪಿತ ಕೈವಿಡಿದು ಕಡೆಗಾಣಿಸಯ್ಯಾ ಪ ಆಶೆಯೆಂಬಾ ಮಹಾ ಹೆಸರುಳ್ಳ ಆ ನದಿಯು| ಲೇಶ ಅಂತಿ-ಲ್ಲದಾ ಚಿಂತೆ ಥಡಿಯು| ಸೂಸುತಿವೆ ಇದರೊಳಗ ಮನೋರಥವೆಂಬ ಜಲ| ಘಾಸಿ ಮಾಡುವ ಬಯಕೆ ಲಹರಿ ಬರುತಿದೆ 1 ದೋರುತಿದೆ ಸಂಸಾರ ತಾಪದಾವಾನಳವು | ಹರಿದು ಬರುತಿದೆ ಕಾಳಸರ್ಪ ತಾನು | ಅರಿಷಡ್ವರ್ಗಗಳನು ಉತ್ತುಂಗ ಜಲ ಚರವು | ತೆರಗಾಣೆ ಮೋಹಸುಳಿಯಲಿ ಬಿದ್ದ ಬಳಿಕಾ 2 ನಿನ್ನ ನಾಮವೆಂಬ ಸಂಗಡಿಯನು ಕಟ್ಟಿ| ಮುನ್ನಿನ ಪರಾಧಗಳ ಕ್ಷಮೆಯ ಮಾಡಿ| ಸನ್ನುತನೆ ಮಹಿಪತಿ ಸುತ ಪ್ರಾಣದೊಡಿಯನೆ| ನಿನ್ನ ದಾಸರ ದಾಸನೆಂದು ದಯಮಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನಗ್ಯಾರು ಗತಿಯಿಲ್ಲ ನಿನಗ್ಯಾರು ಸರಿಯಿಲ್ಲ | ಎನಗೆ ನಿನಗೆ ನ್ಯಾಯ ಪೇಳುವರಿಲ್ಲ ಪ ಒಂದುಗೂಡಿಲಿ ಬಂದು ಒಂದು ಕ್ಷಣ ವಗಲದೆ | ಪಾದ ಪೊಂದಿರಲೂ || ಬಂದ ವಿಷಯಂಗಳಿಗೆ ಯೆನ್ನನೊಪ್ಪಿಸಿ ಕೊಟ್ಟು | ನೀನಂಧಕನಂತೆ ನೋಡುವದುಚಿತವೆ ರಂಗಾ 1 ಪರಸತಿಯರ ಕೂಡಿದರೆ ಪರಮ ಪಾತಕವೆಂದು | ಪರಿ ಪರಿಯ ನರಕಗಳ ನಿರ್ಮಿಸಿರುವಿ || ಪರಸತಿಯರೊಲುಮೆ ನಿನಗೊಪ್ಪಿತೆಲೋ ದೇವಾ | ನಿನ್ನ | ದೊರೆತನಕಂಜಿ ನಾ ಶರಣೆಂಬೆನಲ್ಲದೇ 2 ನಿನ್ನಾಜ್ಞ್ಞಧಾರನಾಗಿ ನಿನ್ನ ಪ್ರೇರಣೆಯಿಂದ | ಅನೇಕ ವಿಧಕರ್ಮಗಳ ಮಾಡುತಿರುವೇ || ಯೆನ್ನಪರಾಧಗಳ ವರ್ಣಿಸಲಾಗದೊ | ದೇವ | ಪನ್ನಂಗಶಯನ ಶ್ರೀ ವಿಜಯವಿಠಲನೇ 3
--------------
ವಿಜಯದಾಸ
ಎನ್ನನುದ್ದರಿಸು ಗುರು ರನ್ನ ಮಹಿಪತಿದೇವ | ಚಿನ್ನನೆನುತಲಿ ಬಿಡದೆ ಘನ್ನ ದಯ ಮಳೆಗರೆದು | ಮುನ್ನಿನಪರಾಧಗಳನಿನ್ನು ಕ್ಷಮೆಯನು ಮಾಡಿ | ನಿನ್ನ ಸ್ಮರಣೆಯೊಳಿಪ್ಪ ಸನ್ಮತಿಯನಿತ್ತು 1 ನಿಚ್ಚಳದ ಪದಗಳಿಗೆ ಮುಚ್ಚಗೊಳ್ಳದೆ ನಿನ್ನ | ಎಚ್ಚರಿಕೆಯನು ತೊರೆದು ಬೆಚ್ಚಿ ಬೆದರುತೆ ವಿಷಯ | ಕಚ್ಚಿ ಬಳಲುವ ಈ ಹುಚ್ಚು ಮನಸ್ಸಿಗೆ ನೀ | ನಿಚ್ಚಟದರಹು ಕೊಟ್ಟು ನಿಶ್ಚಲದಲಿ ಸಲುಹು2 ಕುಂಭಿನಿಲಿ ಧೇನು ಬಸಿರಿಂ ಬಂದ ಕರುವಿಂಗೆ | ಹಂಬಲಿಸಿ ತಿರು ತಿರುಗಿ ಬೆಂಬಿಡದೆ ಬಪ್ಪಂತೆ | ಇಂಬಾಗಿ ಎನಗ ಕರುಣಾಂಬಕದಿ ನೋಡಿ ನೀ | ಸಂಬಾಳಿಸೈ ಕೃಷ್ಣನೆಂಬವನ ಸ್ವಾಮೀ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕರುಣಿಸಬಾರದೆ ಕಂಜನಾಭನೆ ಕೈಯ ಮುಗಿವೆನಯ್ಯಾಪ. ವರ ಫಣಿಗಿರಿ ಸುಸ್ಥಿರಮಂದಿರ ಶ್ರೀ ಗುರು ಜನಾರ್ದನಾಮರಗಣ ಪಾಲಕಅ.ಪ. ಅಪರಾಧಗಳಾಲೋಚಿಸುವರೆ ಸರೀ- ಸೃಪರಾಜನಿಗಳವೆ ಕೃಪೆಯಿಂದಲಿ ಸಂರಕ್ಷಿಸದಿದ್ದರೀ- ಯಪಕೀರ್ತಿಯು ಶ್ರೀಹರಿ ನಿನಗಲ್ಲವೆ 1 ಪುರಂದರ ಮುಖ್ಯ ದಾಸರಂತೆ ಗುಣವೆನಗಿನಿತಿಲ್ಲ ಜನರ ವಿಡಂಬನಕೆ ದಾಸನಾದರೂ ಘನ ಕೃಪಾರ್ಣವನೆ ಕನಕಾಂಬರಧರ2 ಲಕ್ಷ ಮಾತ್ಯಾತಕೆ ಲಕ್ಷ್ಮೀನಾರಾಯಣ ರಕ್ಷಾಮಣಿ ನೀನೆ ಪಕ್ಷೀಂದ್ರವಾಹನ ಪಾಪವಿಮೋಚನ ತ್ರ್ಯಕ್ಷಮಿತ್ರನೆನ್ನಕ್ಷಿಗೋಚರನಾಗಿ 3
--------------
ತುಪಾಕಿ ವೆಂಕಟರಮಣಾಚಾರ್ಯ