ಒಟ್ಟು 9 ಕಡೆಗಳಲ್ಲಿ , 9 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೋರಮ್ಮಯ್ಯ ಯತಿಕುಲ ಸರ್ವಭೌಮನ್ನ ಪಮೂರವತಾರದ ಪುಣ್ಯರಾಶಿಯನು ತೂರಿಸುಜನರ ಪೊರೆವ ಉದಾರನ ಅ.ಪಅಸುರ ಬಾಲನಂತೆ ಹರಿಯಲಿ ಅಸಮ ಭಕ್ತಿಯಂತೆಅಸುರಾರಿಯ ನರಸಿಂಹರೂಪವನು ಅಸುರತಾತನಿಗೆ ತೋರ್ದನಂತೆ 1ಪರಮಹಂಸನಂತೆ ಪುರಂದರದಾಸರ ಗುರು ಅಂತೆಅರಸನ ರಕ್ಷಿಸಿ ಅರಸನಾಗಿ ಕ್ಷಣ ಉದ್ಗ್ರಂಥಗಳನು ರಚಿಸಿದನಂತೆ 2ಕಡುಬಡತನವಂತೆ ಸುದಾಮನ ಮರಸಿ ಬಿಟ್ಟಿತಂತೆಸಡಗರದಿಂದ ಸನ್ಯಾಸಿಯಾಗಿ ದರ್ಮಸಾಮ್ರಾಜ್ಯವನಾಳಿದನಂತೆ3ಕಾಮಧೇನುವಂತೆ ಕಲಿಯುಗ ಕಲ್ಪವೃಕ್ಷವಂತೆನೇಮದಿಂದ ಸೇವೆಯನು ಮಾಡಿದರೆ ಕಾ'ುತಾರ್ಥಗಳನೀಯ್ವನಂತೆ 4ಸಾಲವಪುರದಂತೆ ಭಕ್ತರಿಗೊಲಿದು ಬಂದನಂತೆಮೂಲಸ್ಥಾನ ಮಂತ್ರಾಲಯವಂತೆ ಭೂಪತಿ'ಠಲನ ತೋರುವನಂತೆ 5
--------------
ಭೂಪತಿ ವಿಠಲರು
ಧೀಮಂತರ ದಯಪಡೆದು ಮಾಧವನ ಪದ ವಿಡಿದು | ಪ್ರೇಮದಿ ಭಜಿಸೆನ್ನ ಮನವೇ | ಪ ಕಾರ್ಮುಗಿಲದುಗ್ಧರಾಶಿಯನು ಶೃತಿಗೆ ಬೀಳಲ್ಪ | ಯೋರ್ಮನದಿ ಸಂತೋಷಿಪಂತೇ ನಿರ್ಮಳಾಂಗಣ ಕಥೆಯ ಘೋಷವೇನು ಕೇಳಿ ಅತಿ | ಪೆರ್ಮೆಯಿಂದಲೆ ನಲಿದು ಬಾಳು 1 ನೋಡಲಾಕ್ಷಣ ತನ್ನ ಮಾತೆಯನು ಮುದದಲಿಂ | ಲೋಡಿ ಬಪ್ಪುವ ಶಿಶುವಂತೆ | ರೂಢಿಯೊಳು ಸಜ್ಜನರ ಕಂಡಾಕ್ಷಣಕ ತನುವ | ನೀಡಿ ಸಾಷ್ಟಾಂಗದಿಂದೆರಗು 2 ಮಿಗಿಲಾಸೆಯನು ತ್ಯಜಿಸಿ ದಾಗಸದ-ಲಿಂಬರ್ವ | ನಿಗಳುಂಬ ಚಾತಕನ ತೆರದಿ | ಮುಗಳೆ ದಯದಿಂದ ಸಜ್ಜನ ಮುಖದಿ ಬಪ್ಪಬೋ | ಧೆಗಳ್ಪೊತನು-ವಾನುಗ್ರಹಿಸು ಧರಿಸು 3 ಮಣಿ ದೀಪವಾದಂತೆ ಸ | ಪಾದ ಕಮಲಗಳಾ | ಅತ್ಯಧಿಕ ಹರುಷದಿಂ ಹೃದಯದೊಳ್ ಧರಿಸಲ್ಕೆ | ಮೊತ್ತದ ಜ್ಞಾನ ತೊಳಗುವದು 4 ಗರ ಹೊಡೆದು | ಧರಿಯೊಳಗ ಗರ್ವಿಸಲಿ ಬ್ಯಾಡಾ | ಸಿರಿಯು ತೊಲಗಲು ಕುನ್ನಿಯಂತನ್ನ ದಾಸಿಂಗೆ | ಪರರು ಮನವಡಿದು ಬಳಲದಿರು 5 ಕಮಲಜನ ಪದಕ ಕತ್ತದೀವರ ಅನುಮತದ | ವಿಮಲಮಾರ್ಗ ಹೊಲಬ ನರಿದು | ಅಮಲೂಧ್ರ್ಪ ಪೌಂಡ್ರ ಹರಿ ಲಾಂಛನವು ತುಳಸಿ ಸರ ಕ್ರಮದಿಂದ ಧರಿಸಿ ಸುಖಿಯಾಗು 6 ಹರಿಪರದೈವವೆಂದು ಅರಿತು ಭಾವದಿ ನಿಂದು | ಹರಿ ಕೋಟಿ ನಿಭಕ ಮಿಗಿಲೆನಿಸಿ | ಮೆರೆವ ಮಹಿಪತಿ ನಂದನೋಡಿಯ ನಾಮಂಗಳನು | ಸ್ಮರಿಸಿ ಇರಳ್ಹಗಳ ಕೊಂಡಾಡು 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾರಾಯಣ ಎಂಬ ನಾಮದ ಬೀಜವನು ನಾಲಗೆಯಕೂರಿಗೆಯ ಮಾಡಿ ಬಿತ್ತಿರಯ್ಯ ಪ ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿತನ್ವಿರಾ ಎಂಬ ಎರಡೆತ್ತ ಹೂಡಿಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ 1 ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯಮದಮತ್ಸರವೆಂಬ ಪೊದೆಯ ಇರಿಯಿರಯ್ಯಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯಚಂಚಲವೆಂಬ ಹಕ್ಕಿಯ ಓಡಿಸಿರಯ್ಯ 2 ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯುಶ್ಯದ ರಾಶಿಯನು ಅಳೆಯಿರಯ್ಯಇದು ಕಾರಣ ಕಾಗಿನೆಲೆಯಾದಿಕೇಶವನಮುದದಿಂದ ನೆನೆನೆನೆದು ಸುಖಿಯಾಗಿರಿಯ್ಯ3
--------------
ಕನಕದಾಸ
ನೀನೇ ಗತಿಯೆನಗಿನ್ನು ದೀನನಾದೆನು ಬಹಳ ನೀನಲ್ಲದಾರು ಬಳಿಕಾ ದೇವಾಏನು ಸಾಧನವುಂಟು ಶ್ರುತ್ಯರ್ಥಗೋಚರವೆ ಧ್ಯಾನಧಾರಣೆ ದೂರವು ದೇವಾ ಪಕಾಣದೇ ನಿನ್ನಂಘ್ರಿಕಮಲವನು ಭವವೆಂಬಕಾನನಕೆ ಗುರಿಯಾದೆನು ದೇವಾಪ್ರಾಣರಕ್ಷಕರಿಲ್ಲದತಿ ಕಷ್ಟಕೊಳಗಾದಏಣ ಕುಣಕನೊಲಾದೆನು ದೇವಾಏನೆಂಬೆ ಮೂಢತ್ವವೇ ಮೌಲ್ಯವೆನಗಾಯ್ತುಜ್ಞಾನ ದೊರಕೊಂಬುದೆಂತು ದೇವಾಜ್ಞಾನವಿಲ್ಲದೆ ಬಂಧ ಪರಿಹರಿಸದೆಂದೀಗಮಾನಸದಿ ಮರಗುತಿಹೆನು ದೇವಾ 1ದುರಿತಕೋಟಿಗಳ ಜನ್ಮಂಗಳಲಿ ಮಾಡಿದರೆದೊರಕಿತದರಿಂದ ಜಡವು ದೇವಾಪರಿಪರಿಯ ಕರ್ಮಗಳು ಜನ್ಮಗಳ ಕೊಡುವದಕೆತರತರದಿ ಕರವಿಡಿದಿವೆ ದೇವಾಗುರಿಯಾದೆನೀ ಪರಿಯ ಕರ್ಮಶರಧಿಯ ತೆರೆಗೆಪರಿಹರವ ಕಾಣೆನಿದಕೆ ದೇವಾಪರಮ ಪಾವನವಾದ ದುರಿತಹರ ನಾಮಕ್ಕೆಕರಗದೋ ನನ್ನ ಕರ್ಮ ದೇವಾ 2ಲೋಕದೊಳಗಿಹ ಪಾತಕರು ತಾವು ಜೊತೆಯಾಗಿಬೇಕೆಂದು ಪಾತಕವನು ದೇವಾಜೋಕೆಯಲಿ ಛಲವಿಡಿದು ಪಾಪರಾಶಿಯ ಮಾಡೆಸಾಕೆ ನಾಮದ ಸೋಂಕಿಗೆ ದೇವಾನೂಕುವುದು ನಿಷ್ಕøತಿಗೆ ಮಲತ ಪಾಪವ ನಾಮಬೇಕೆ ನೆರವೆಂಬುದದಕೆ ದೇವಾಯಾಕೆ ನಾನೊಬ್ಬ ಮಾಡಿದ ಪಾಪರಾಶಿಯನುನೂಕದಿಹ ಬಗೆುದೇನು ದೇವಾ 3ದುರಿತವೆನಗಿಲ್ಲೆಂದು ಸ್ಥಿರಬುದ್ಧಿುಂದೊಮ್ಮೆುರುತಿಹೆನು ಧೈರ್ಯವಿಡಿದು ದೇವಾಅರಿವು ಸಿಕ್ಕದೆ ಮರವೆ ಮುಂದಾಗಿ ನಿಂದಿರಲುಮರುಗಿ ಮತ್ತೊಮ್ಮೆ ಮನದಿ ದೇವಾಅರಿವೆಂತು ಸಿಕ್ಕುವದು ದುರಿತಭರಿತನಿಗೆಂದುಸ್ಥಿರಬುದ್ಧಿ ನಿಲ್ಲದಿಹುದು ದೇವಾಉರುಳುವುದು ಮನವೆಲ್ಲಿ ಪರಿವುತಿಹೆ ನಾನಲ್ಲಿಸ್ಥಿರವೆಂದಿಗೆನಗಪ್ಪುದು ದೇವಾ 4ಏನಾದಡೇನಘವು ಬಹಳವಾಗಿಹುದಿದಕೆಹೀನಬುದ್ಧಿಯೆ ಸಾಕ್ಷಿಯು ದೇವಾನಾನಿನಿತು ದೋಯಾದಡದೇನು ದೋಗಳನೀನೈಸೆ ರಕ್ಷಿಸುವನು ದೇವಾಭಾನುವಿನ ಮುಂಭಾಗದಲಿ ತಿಮಿರ ತಾ ನಿಂದುಏನಾಗಬಲ್ಲುದೈ ದೇವಾದೀನತನವಳಿವಂತೆ ಜ್ಞಾನವನು ಬಳಿಕಿತ್ತುಆನತನ ನೀ ರಕ್ಷಿಸು ದೇವಾ 5ಕಾಲ ಬಂದರೆ ಮೋಕ್ಷ ತಾನೆ ದೊರಕುವದೆಂದುಮೇಲಾಗಿ ಶ್ರುತಿ ನುಡಿಯಲು ದೇವಾಕಾಲವೆಂಬೀ ನದಿಗೆ ಕಡೆುಲ್ಲ ಮೋಕ್ಷಕ್ಕೆಕಾಲ ತಾ ಬಹು ದೂರವು ದೇವಾಕಾಲಕರ್ಮಗಳೆಂಬ ನೇಮವನೆ ದೃಢವಿಡಿಯೆಕಾಲವೇ ಕಲ್ಪಿತವದು ದೇವಾಲೀಲೆುಂ ನಿರ್ಮಿಸಿದ ಸಂಸಾರ ಭಂಜನೆಗೆಕಾಲವದು ನಿನ್ನ ಕೃಪೆಯು ದೇವಾ 6ನನ್ನ ನಂಬಿದವರ್ಗೆ ಸಂಸಾರಗೋಷ್ಪದವುಚೆನ್ನಾಗಿ ನಂಬಿಯೆಂದು ದೇವಾನಿನ್ನ ನುಡಿುಂದ ಗೀತೆಯಲಂದು ಬೋಧಿಸಿದೆಧನ್ಯನಾದನು ಪಾರ್ಥನು ದೇವಾಉನ್ನತದ ಯೋಗಾದಿ ಸಾಧನದಿ ಪರಿಹರವೆನಿನ್ನ ಕೃಪೆಯೇ ಮುಖ್ಯವು ದೇವಾನಿನ್ನ ನಂಬಿದೆನು ತಿರುಪತಿಯ ವೆಂಕಟರಮಣಧನ್ಯ ಧನ್ಯನು ಧನ್ಯನೂ ದೇವಾ 7ಕಂ|| ಬುಧವಾರದರ್ಚನೆಯನಿದಮುದದಿಂ ಸ್ವೀಕರಿಸಿ ನನ್ನ ಮೊರೆಯಂ ಕೇಳ್ದಾಬುಧ ಸಂಗವನಿತ್ತು ನಿನ್ನಪದಸೇವಕನೆನಿಪುದೆಂದು ವೆಂಕಟರಮಣಾಓಂ ಕಾಳೀಯ ಫಣಾಮಾಣಿಕ್ಯರಂಜಿತ ಶ್ರೀಪದಾಂಬುಜಾಯ ನಮಃ
--------------
ತಿಮ್ಮಪ್ಪದಾಸರು
ಶ್ರೀ ಚಂದ್ರಿಕಾಚಾರ್ಯ ಗುರುವೇ ಪ ಯಾಚಿಪೆ ನಿನ್ನ ಶ್ರೀ ಚರಣ ಸೇವೆ ಅ.ಪ ಜಲಧಿ ಚಂದ್ರ ಯತೀಂದ್ರ ಭೂಪೂರ್ವ ಪ್ರಹ್ಲಾದ ಸಜ್ಜನಾಹ್ಲಾದ ಗೋಪಾಲಕೃಷ್ಣ ಚರಣಾಂಬುರುಹ ಲೋಲ ಶ್ರೀಪಾದರಾಜಪ್ರಿಯ ಬಾಲಸುಶೀಲ 1 ಸಮೀರನ ರಾಶಿಯನು ರಚಿಸಿ ಸನ್ಮಾನ್ಯರೆನಿಸಿ ದಾಸಕೂಟಕೆ ನೆಲೆಯಿತÀ್ತು ಪುರಂದರ ದಾಸರನು ಕರುಣಿಸಿದೆ ಧೀರ ಉದಾರ 2 ಕುಹುಯೋಗ ಪರಿಹಾರಗೈದ ಮಹಾಯೋಗಿವರ ಕುಹಕ ವರ್ಜಿತ ಚಿತ್ತ ಶೋಭಿತ ಸುಖಾಂತ ಪಾದ ಧ್ಯಾನಿಪರ ಸಹವಾಸವೆನಗಿತ್ತು ಸಲಹುವುದು ಸತತ 3
--------------
ವರಾವಾಣಿರಾಮರಾಯದಾಸರು
ಶ್ರೀಮಧ್ವ ಚಿತ್ತಮಂದಿರನೆ ನಿನ್ನಯ ಚರಣತಾಮರಸ ನೆರೆ ನಂಬಿದೆ ಪ ಕಾಮ ಕ್ರೋಧಗಳನ್ನು ಕಡಿದು ನಿನ್ನಯ ದಿವ್ಯನಾಮಾಮೃತವನುಣಿಸೋ ಸ್ವಾಮಿ ಅ.ಪ. ಪರ ನಾರಿಯರಮೋರೆ ಬಣ್ಣವನೆ ನೋಡಿಆರು ಇಲ್ಲದ ವೇಳೆ ಕಣ್ಣು ಸನ್ನೆಯಲವಳಕೋರಿದ್ದು ಇತ್ತು ಕೂಡಿವಾರಿಜನಾಭ ನಿನ್ನಾರಾಧನೆಯ ಮರೆದುಧಾರುಣಿಗೆ ಭಾರಾಗಿ ಅಶನ ಶತ್ರುವಾದೆ 1 ಉಪರಾಗ ಮೊದಲಾದ ದಶಮಿ ದ್ವಾದಶಿ ದಿನದಿಉಪೇಕ್ಷೆಯನು ಮಾಡಿ ಜರಿದೆ |ಉಪಕಾರವೆಂದು ನಿಜವೃತ್ತಿ ಪೇಳಿದರೆನಗೆಅಪಕಾರವೆಂದು ತಿಳಿದು |ನಿಪುಣನೆನಿಸುವೆನೆಂದು ಅಜ್ಞಾನಿಗಳ ಮುಂದೆತಪವೃದ್ಧರನ್ನು ಜರಿದೆ |ಸ್ವಪನದೊಳಗಾದರೂ ವೈರಾಗ್ಯ ಬಯಸದಲೆಕಪಟ ಮನುಜರೊಳಗಾಡಿ ನಿನ್ನ ಮರೆದೆನೊ ಸ್ವಾಮಿ 2 ಭೂಸುರರು ಚಂಡಾಲ ಜಾತಿಯನ್ನದೆ ಬಲುಹೇಸಿಕಿಲ್ಲದಲೆ ತಿರಿದೆ | ಆಶಾಪಾಶಕೆ ಸಿಲುಕಿ ಕಂಡಕಂಡಲಿ ತಿಂದುದೋಷರಾಶಿಯನು ತರುವೆ |ಆ ಸತೀ ಸುತರ ಸಲಹುವೆನೆಂದು ಪರಿಪರಿವೇಷವನು ಧರಿಸಿ ಮೆರೆವೆ |ವಾಸುಕೀ ಶಯನ ವಸುದೇವ ತನಯನೆ ನಿನ್ನದಾಸನೆನಿಸದಲೆ ಅಪಹಾಸ ಮಾನವನಾದೆ 3 ಹರಿದಾಸರಲ್ಲಿ ಒಂದರಘಳಿಗೆ ಕುಳಿತರೆಶಿರವ್ಯಾಧಿಯೆಂದ್ಹೇಳುವೆ |ದುರುಳ ದುರ್ವಾರ್ತೆಗಳ ಪೇಳಲು ಹಸಿತೃಷೆಯಮರೆದು ಆಲಿಸಿ ಕೇಳುವೆ |ತರುಣಿ ತರಳರು ಎನ್ನ ಪರಿಪರಿ ಬೈದರೆಪರಮ ಹರುಷವ ತಾಳುವೆ |ಗುರು ಹಿರಿಯರೊಂದುತ್ತರವನಾಡಲು ಕೇಳಿಧರಿಸಲಾರದಲೆ ಮತ್ಸರಿಸುವೆನೊ ಅವರೊಳಗೆ 4 ನಾ ಮಾಡಿದಪರಾಧಗಳನೆಣಿಸಿ ಬರೆವುದಕೆಭೂ ಮಂಡಲವೆ ನೆರೆ ಸಾಲದೊ | ಸೀಮೆಯೊಳಗುಳ್ಳ ದುರ್ಮತಿಯೆಲ್ಲ ಕೂಡಲುಈ ಮತಿಗೆ ಆದು ಪೋಲದೋಹೋಮ ಜಪತಪವು ಇನ್ನೆಷ್ಟು ಮಾಡಲು ಪಾಪಸ್ತೋಮ ಎಂದಿಗು ವಾಲದೊ |ಸಾಮಜ ವರದ ಮೋಹನ್ನ ವಿಠ್ಠಲ ನಿನ್ನ |ನಾಮವೊಂದಲ್ಲದೆ ಪ್ರಾಯಶ್ಚಿತ್ತವ ಕಾಣೆ5
--------------
ಮೋಹನದಾಸರು
ಹಣವೆನಲು ಹಣವಲ್ಲ ಹಣವಿಲ್ಲದವರಿಲ್ಲ ಪ ಗಣಿಸಲು ಮಹಾತ್ಮರೆ ಹಣವಂತರಯ್ಯ ಅ.ಪ ಹಣವು ವಿದ್ಯೆಯು ತಪಸು ಊಂಛ ವೃತ್ತಿಗಳು ಬ್ರಾ- ಹ್ಮಣಗೆ ಕ್ಷತ್ರಿಯರಿಂಗೆ ಶೌರ್ಯಾದಿಗಳ್ ಘನಚಮತ್ಕøತಿ ಯುಕ್ತಿಗಳು ವೈಶ್ಯರಿಗೆ ಶೂದ್ರ ಜನಕೆ ಭೂಪರಿಚರ್ಯ ಕೃಷ್ಯಾದಿಗಳೆ ಹಣವು 1 ಸಟೆ ಕಪಟ ಬಾಯಬಡುಕತನ ತಸ್ಕರ ಅಧರ್ಮಗಳಿಂದಲಿ ಘಾಸಿಯಿಂ ಗಳಿಸಿರುವ ಲೇಶವಾದರು ಪುಣ್ಯ- ರಾಶಿಯನು ಕೆಡಿಸದೇ ಲೇಸು ಮಾಡುವದೇ 2 ಅತ್ಯಾಸೆ ಪಿಶುನತೆಯು ತಾಮಸರಿಗೆ ಸತ್ಯ ಸಂಕಲ್ಪ ಗುರುರಾಮ ವಿಠಲನ ಸ- ರ್ವತ್ರ ಚಿಂತಿಸುವವಗೆ ಕೈತುಂಬ ಹಣವೂ 3
--------------
ಗುರುರಾಮವಿಠಲ
ಜಯಮಂಗಳಂನಿತ್ಯಶುಭಮಂಗಳಂ ||ಪ.ಶ್ರೀ ವತ್ಸಲಾಂಛನಗೆ ಕ್ಷೀರಾಬ್ಧಿ ವಾಸಗೆ |ಗೋವರ್ಧನೋದ್ಧಾರ ಗೋವಿಂದಗೆ ||ಮಾವ ಕಂಸನ ಕೊಂದುಮಕರಕುಂಡಲ ಧರಿಸಿ |ಜೀವಾತ್ಮನಾದ ಚಿನ್ಮಯರೂಪಗೆ 1ಅಂಬುಧಿಯ ಶಯನಗೆ ಅಖಿಲ ಭೂತೇಶಗೆ |ತುಂಬುರ - ನಾರದ ಮುನಿವಂದ್ಯಗೆ ||ಎಂಭತ್ತನಾಲ್ಕು ಲಕ್ಷ ಯೋನಿಗಳ ರಾಶಿಯನು |ಗೊಂಬೆಯನು ಮಾಡಿ ಕುಣಿಸುವ ದೇವಗೆ 2ಕಂದರ್ಪನಯ್ಯನಿಗೆ ಕೋಟಿ ಲಾವಣ್ಯನಿಗೆಸುಂದರ ಮೂರುತಿಹರಿ ಸರ್ವೋತ್ತಮನಿಗೆ ||ಕಂದ ಪ್ರಹ್ಲಾದನ ಕಾಯ್ದ ದೇವನಿಗೆಅರ |............................................. 3ಪನ್ನಂಗಶಯನಗೆಪಾವನ್ನ ಚರಿತೆಗೆ |ಸನ್ನುತರಾದ ಸಜ್ಜನ ಪಾಲಿಗೆ ||ಎನ್ನೊಡೆಯ ಸಿರಿದೇವಿಯರಸು ಮುದ್ದುರಂಗಗೆ |ತನ್ನ ನಂಬಿದವರನು ಸಲಹುವವಗೆ 4ಕರಿರಾಜವರದಗೆ ಕರುಣಾಸಮುದ್ರಗೆ |ಗರುಡ ಗಮನನಿಗೆ ವೈಭವಹಾರಗೆ ||ವರಪುರಂದರವಿಠಲ ಕಂಬುಕಂದರನಿಗೆ |ಅರವಿಂದನಾಭನಿಗೆ ಅಜನ ಪಿತಗೆ 5
--------------
ಪುರಂದರದಾಸರು
ಸುವ್ವಿ ಎಂದು ಪಾಡಿರೆ ಸುಜ್ಞಾನ ದೇವರಭವಹರಿವುದು ಭಯವಿಲ್ಲ ಸುವ್ವಿಪಂಚ ಶಕ್ತಿಗಳೆಂಬಪರಮಮುತ್ತೈದೆಯರುವಂಚನೆಗೆ ದೂರಾಗಿ ವರ್ತಿಸುತ ಸುವ್ವಿವಂಚನೆಗೆ ದೂರಾಗಿ ವರ್ತಿಪಐದೆಯರುಮುಂಚೆ ಬೇಗದಲಿ ಮಡಿಯಾಗಿ ಸುವ್ವಿ1ಕ್ಷೇತ್ರದ ಒರಳಲ್ಲಿ ಕ್ಷರನೆಂಬ ಅಕ್ಕಿಯುಕ್ಷೇತ್ರಜÕನೆಂಬ ಒನಕೆಯ ಸುವ್ವಿಕ್ಷೇತ್ರಜÕನೆಂಬ ಒನಕೆಯ ಪಿಡಿದುಪಾತ್ರನಾಗೆಂದು ಹರಸುತ ಸುವ್ವಿ2ಆರು ಮೂರಾದವನ ಐದು ಎಂಟಾದವನಬೇರೇಳು ನಾಲ್ಕೆರಡು ಬಗೆಯಾದವನ ಸುವ್ವಿಬೇರೇಳು ನಾಲ್ಕೆರಡು ಬಗೆಯಾದನೆಲ್ಲನುವಾರಣದಿ ನೀವೆಲ್ಲ ತಳಿಸಿರೆ ಸುವ್ವಿ3ವಾಸನೆಯ ಮೆರುಗನು ಒಳಿತಾಗಿ ತಳಿಸುತ್ತಸೂಸದಂತೆಲ್ಲವ ಮಗುಚುತ್ತ ಸುವ್ವಿಸೂಸದಂತೆಲ್ಲವ ಮಗಚುತ್ತ ಅಕ್ಕಿಯರಾಶಿಯನು ಮಾಡಿ ಬಿಡಿರವ್ವ ಸುವ್ವಿ4ಪರವಸ್ತುವಾದವನ ಪರಬ್ರಹ್ಮವಾದವನಪರಮಾತ್ಮನೆಂಬ ಪುರುಷನ ಸುವ್ವಿಪರಮಾತ್ಮನೆಂಬ ಪುರುಷ ಚಿದಾನಂದನಪರಮನೈವೇದ್ಯದ ಪಾಕಕ್ಕೆ ಸುವ್ವಿ5
--------------
ಚಿದಾನಂದ ಅವಧೂತರು