ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತತ್ವವಿವೇಚನೆ ಅಂತರಂಗದ ಕದವು ತೆರೆಯಿತಿಂದು ಪ ಎಂತು ಪುಣ್ಯದ ಫಲವು ಪ್ರಾಪ್ತಿ ದೊರಕಿತೊ ಎನಗೆ ಅ.ಪ ಏಸುದಿನವಾಯಿತೊ ಬೀಗಮುದ್ರೆಯ ಮಾಡಿ | ವಾಸವಾಗಿದ್ದರೋ ದುರುಳರಿಲ್ಲಿ || ಮೋಸವಾಯಿತು ಇಂದಿನ ತನಕ ತಮಸಿನ | ರಾಶಿಯೊಳಗೆ ಹೂಳಿ ಕಾಣಿಸುತ್ತಿರಲಿಲ್ಲ 1 ಹರಿಕರುಣವೆಂಬಂಥ ಕೀಲಿ ಕೈ ದೊರಕಿತು | ಗುರುಕರುಣವೆಂಬಂಥ ಶಕ್ತಿಯಿಂದ || ಪರಮ ಭಾಗವತರ ಸಹವಾಸದಲಿ ಪೋಗಿ | ಹರಿ ಸ್ಮರಣೆಯಿಂದಲ್ಲಿ ಬೀಗಮುದ್ರೆಯ ತೆಗೆದೆ 2 ಸುತ್ತಲಿದ್ದವರೆಲ್ಲ ಪಲಾಯನವಾದರು | ಭಕ್ತಿಕಕ್ಕಡವೆಂಬ ಜ್ಞಾನದೀಪ || ಜತ್ತಾಗಿ ಹಿಡಿಕೊಂಡು ದ್ವಾರದೊಳಗೆ ಪೊಕ್ಕೆ | ಎತ್ತನೋಡಿದರತ್ತ ಶೃಂಗಾರಸದನ 3 ಹೊರಗೆ ದ್ವಾರವು ನಾಲ್ಕು ಒಳಗೈದು ದ್ವಾರಗಳು | ಪರ ದಾರಿಗೆ ಪ್ರಾಣ ಜಯವಿಜಯರು || ಮಿರುಗುವ ಮಧ್ಯಮಂಟಪ ಕೋಟಿರವಿಯಂತೆ | ಸರಸಿಜನಾಭನ ಅರಮನೆಯ ಸೊಬಗು 4 ಸ್ವಮೂರ್ತಿಗಣ ಮಧ್ಯ ಸಚ್ಚಿದಾನಂದೈಕ | ರಮೆಧರೆಯರಿಂದಲಾಲಿಂಗಿತ್ವದಿ || ಕಮಲಜಾದಿಗಳಿಂದ ತುತಿಸಿಕೊಳ್ಳುತ ಹೃದಯ- | ಕಮಲದೊಳಗಿರುವ ಶ್ರೀ ವಿಜಯವಿಠ್ಠಲನ ಕಂಡೆ 5
--------------
ವಿಜಯದಾಸ
ಉಗಾಭೋಗ ಏಕೋನಾರಾಯಣಾಸೀತೆಂಬ ಶ್ರುತಿ ಪ್ರತಿಪಾದ್ಯನಾಗಿ ಮಾಕಮಲಾಸನ ಮೊದಲಾದವರಲ್ಲಿನಿಂತು ಸಾಕಿಸಲಹಿ ಸಂಹಾರ ಮಾಡುತ್ತ ಜೀವರಾಶಿಯೊಳಗೆನ್ನ ಸ್ವೀಕಾರ ಮಾಡದೆ ನೂಕಿ ಬಿಸಾಟು ಈಕುಂಭಿಣಿ ಮಧ್ಯದಲ್ಲಿ ಕಾಕುಮನುಜಾರಿಗಿಂತ ಕನಿಷ್ಠನ್ನಮಾಡಿ ಸಾಕಲಾರದೆ ಕೈಬಿಡುವಾರೇನೊ ನಾಕಜಜನಕ ಮುದ್ದುಮೋಹನವಿಠಲ ಲೌಕೀಕ ಮಾರ್ಗ ಬಿಡಿಸಿ ಹೃತ್ಕರ್ಣಿಕೆಯಲ್ಲಿ ಪೊಳೆಯೋ
--------------
ಮುದ್ದುಮೋಹನವಿಠಲದಾಸರು