ಒಟ್ಟು 9 ಕಡೆಗಳಲ್ಲಿ , 4 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರೋಗಣೆಯ ಮಾಡೊ ಅಂಜನಾದ್ರಿಯ ವಾಸ ಆಲಸ್ಯವೇತಕೋ ಆಯಿತು ವೆಂಕಟೇಶ ಪ ತಳಿಗೆಯ ತೊಳೆದಿಟ್ಟು ಸುಳಿಬಾಳೆ ಎಲೆಯಿಕ್ಕಿ ನಳಿನಲೋಚನೆಯರುಗಳಿಂದ ಅಭಿಘರಿಸಿ ಎಳೆಯ ಮಾವಿನ ಮಿಡಿಯು ಉಪ್ಪು ಬೇವಿನ ಸೊಪ್ಪು ಹುಳಿಗೂಡಿ ಅರೆದಿಟ್ಟ ಶುಂಠಿ ಕಡಲೆ ಹಂಬೆ 1 ಕಣಿಲೆ ಕಂಚಿನಕಾಯಿ ಅಣಿಲೆ ಅಂಬಟನೆಲ್ಲಿ ಒಣಗಿದ ಮೆಣಸಿನ ಉರಿಯು ಉಪ್ಪಿನ ಹೆರೆಯು ಕಣುಮನಕ್ಕೊದಗಿಯೇ ಅಣಿಯಾಯಿತೆಡೆಯೊಳು 2 ಹೆರೆದ ತೆಂಗಿನಕಾಯ ಅರೆದ ಸಾಸಿವೆಯಿಕ್ಕಿ ಅರೆದು ಬೇಯ್ಸಿದ ಓಗರದೊಳು ಕಲಸಿಟ್ಟು ತರಿದ ಗುಳ್ಳದಕಾಯಿ ಹಾಗಲು ಕುಂಬಳಕಾಯಿ ಕೊರೆದ ಬಾಳೆಯಕಾಯಿ ಹುರಿದದೇ ತುಪ್ಪದಿ 3 ಸಣ್ಣಕ್ಕಿಯೋಗರವು ಬೆಣ್ಣೆಕಾಸಿದ ತುಪ್ಪ ಗಿಣ್ಣಲನೊರೆಹಾಲು ಸಣ್ಣ ಮೆಣಸು ಸಾರು ಅನ್ನ ಚಿತ್ರಾನ್ನವು ಮೊಸರನ್ನ ಹೆಸರ್ಹುಗ್ಗಿ ಉಣ್ಣಬಾರೆಲೋ ನೀನು ಇನ್ನು ತಡ ಬೇಡ 4 ಕೇಸಕ್ಕಿಯೋಗರವು ದೋಸೆ ಪಾಯಸವನ್ನು ಬೀಸು ಹಾರಿಗೆಯತಿರಸವು ಮಂಡಿಗೆಯು ಏಸು ಹೋಳಿಗೆ ಬೇಕೈಸನೀ ಉಣಲೇಳು 5 ಚಕ್ಕುಲಿ ಕರಜಿಯಕಾಯಿ ಮನೋಹರವು ಚೊಕ್ಕ ಬಿಳಿಯ ಬೇಳೆಸುಕ್ಕಿನುಂಡೆಯು ಕದಳಿ ರಸಾಯನವು ಇಕ್ಕಿಸಿಕೊಳ್ಳೊ ನೀ ಮಕ್ಕಳಾಟಿಕೆ ಬೇಡ 6 ಏಲಕ್ಕಿ ನಾಗರನಿಂಬೆ ಬೇವಿನಸೊಪ್ಪು ಮೇಲೆ ಒಗ್ಗರಿಸಿದ ನೀರು ಮಜ್ಜಿಗೆಯು ಹಾಲು ಮೊಸರು ಹಸಿಮಜ್ಜಿಗೆ ಸಹವಾಗಿ ಜಲವು ಮುಟ್ಟದ ಹಾಗೆ ಬೇರೆ ಬೇರಿರಿಸಿದೆ 7 ಗಾಯಿತ್ರಿ ಮಂತ್ರದಿಂ ತೋಯವ ಪ್ರೋಕ್ಷಿಸಿ ಬಾಯೊಳು ಪ್ರಣವವನು ಜಪಿಸಲಾಕ್ಷಣದಿ ರಾಯವೆಂಕಟಪತಿಯು ಆಪ್ಯಾಯನವ ಮಾಡಿ ದಾಯವಾಗಿತ್ತನು ಭಕ್ತಜನರಿಗೆಲ್ಲ 8 ಈ ರೀತಿಯಿಂದಲೆ ಆರೋಗಿಸುವುದೆಂದು ವಾರಿಜನಾಭನ ಸಾರಿ ವರ್ಣಿಸಲು ಮೋರೆಯ ಪ್ರಸಾದ ಕರೆದು ಇವನು ನಮ್ಮ ವರಾಹತಿಮ್ಮಪ್ಪನೊಂದುಗೂಡಿರುವನು 9
--------------
ವರಹತಿಮ್ಮಪ್ಪ
ಇದಕೊ ಕಾಶಿಯನು ಮನವೇ ಬೆದಕುಗೊಳ್ಳಲು ಬೇಡ ತೋರುವೆನು ಪ ಬಲ್ಲವನಾದರೆ ಇಲ್ಲಿಯೆ ಕಾಶಿ ಕಲ್ಲೆದೆಯಾದವನಲ್ಲವೆ ದೋಷಿ ಎಲ್ಲವ ತಿಳುಹುವೆ ಚಲ್ವ ಸಂತೋಷಿ ಸೊಲ್ಲ ಲಾಲಿಸಿ ಕೇಳು ಪೇಳ್ವೆ ನಿರ್ದೋಷಿ 1 ಕಾಶಿಯ ದರುಶನವಿಲ್ಲದ ಜನರು ವಿ- ಶೇಷವಾಗಿಯೆ ಇಲ್ಲಿ ನಡೆಕೊಂಬುತಿಹರು ದೂಷಣ ಮಾಡದೆ ಪೋಷಿಸುವವರು ಕಾಶಿಗಿಮ್ಮಡಿಯಾಗಿ ಲೇಸ ಪಡೆಯುವರು 2 ವೇದವನೋದಿದ ವಿಪ್ರನೆ ಕಾಶಿ ವಾದಗಳಿಲ್ಲದ ಸೋದರನೆ ಕಾಶಿ ಆ ಧನ ಕೈಯೊಳು ಇದ್ದರೆ ಕಾಶಿ ಮಾಧವ ಧ್ಯಾನವು ಮನದೊಳು ಕಾಶಿ 3 ಅವ್ವೆ ತಂದೆಯ ಸೇವೆ ಮಾಳ್ಪುದೆ ಕಾಶಿ ದೇವರ ಪೂಜೆಯ ನೋಳ್ಪುದೆ ಕಾಶಿ ಜೀವರಕ್ಷಣ್ಯವ ಮಾಳ್ಪುದೆ ಕಾಶಿ ಭಾವಶುದ್ಧತ್ವದಿ ಇಪ್ಪುದೆ ಕಾಶಿ 4 ಗುರುಗಳಿಗೆರಗುವ ಪರಿಯೊಂದು ಕಾಶಿ ಹಿರಿಯರ ಆಜ್ಞೆಯೊಳಿರುವುದು ಕಾಶಿ ಪರವುಪಕಾರವು ಸ್ಥಿರವಾದ ಕಾಶಿ ಕರೆದು ಮೃಷ್ಟಾನ್ನವನೆರೆವುದು ಕಾಶಿ 5 ಅರಳಿಯ ವೃಕ್ಷವ ನೆಟ್ಟರೆ ಕಾಶಿ ಕೆರೆ ಬಾವಿ ಕಟ್ಟಲು ಇಷ್ಟದ ಕಾಶಿ ಅರವಟ್ಟಿ ನೀರಿರಿಸಲು ದೃಷ್ಟ ಕಾಶಿ ಸಿರಿಲಕ್ಷ್ಮಿಯರಸನ ಕರೆವುದು ಕಾಶಿ 6 ದುಷ್ಟರ ಸಂಗವ ಬಿಡುವುದೆ ಕಾಶಿ ಕಷ್ಟದ ಮಾರ್ಗವ ತೊರೆವುದು ಕಾಶಿ ಶಿಷ್ಟರ ಸೇರುವುದು ಇಷ್ಟದ ಕಾಶಿ ಬೆಟ್ಟದ ಒಡೆಯನ ನೆನೆವುದೆ ಕಾಶಿ 7 ಏಕಾದಶಿ ಉಪವಾಸವೆ ಕಾಶಿ ಆಕಳ ದಾನವ ಮಾಳ್ಪುದೆ ಕಾಶಿ ಬೇಕಾದುದಿದ್ದರೆ ಮನೆಯೆಲ್ಲ ಕಾಶಿ ಕಾಕು ಸೇವೆಯಿಲ್ಲದ ಮನುಜನೆ ಕಾಶಿ 8 ಉದಯದಿ ಸ್ನಾನವ ಮಾಳ್ಪುದೆ ಕಾಶಿ ಪದುಮನಾಭನ ಧ್ಯಾನ ಮೃದುವಾದ ಕಾಶಿ ಕದನವಿಲ್ಲದ ಊರ ನೋಡಲು ಕಾಶಿ ಉದರವು ತುಂಬಲು ಬಡವಗೆ ಕಾಶಿ 9 ರುದ್ರ ದೇವನ ಪೂಜೆ ಇದ್ದಲ್ಲಿ ಕಾಶಿ ವಿಧ್ಯುಕ್ತ ಮಾರ್ಗದಿ ನಡೆವುದು ಕಾಶಿ ಬದ್ಧವಾಗೈವರ ಕಟ್ಟಲು ಕಾಶಿ ಶುದ್ಧವಾದ ಹೆಂಡತಿ ಮುದ್ದಿನ ಕಾಶಿ 10 ಸನ್ಯಾಸ ಮಾರ್ಗವು ಚೆನ್ನಾದ ಕಾಶಿ ಅನ್ಯಾಯವಿಲ್ಲದ ಅರಸನೆ ಕಾಶಿ ಕನ್ಯಾದಾನವು ಮುನ್ನಿನ ಕಾಶಿ ಮನ್ನಿಸಿಕೊಂಡರೆ ತನ್ನಲ್ಲೆ ಕಾಶಿ 11 ಅಧ್ಯಾತ್ಮ ವಿದ್ಯೆಯ ಹೊದ್ದಲು ಕಾಶಿ ಬದ್ಧ ನಡೆನುಡಿ ಇದ್ದರೆ ಕಾಶಿ ಮಧ್ವರಾಯನು ಕುಳಿತಿದ್ದಲ್ಲಿ ಕಾಶಿ ಪದುಮನಾಭನ ನೆನವಿದ್ದರೆ ಕಾಶಿ 12 ದಾನದೊಳಗೆ ಸಮಾಧಾನವೆ ಕಾಶಿ ಮಾನದೊಳಗೆ ಅಭಿಮಾನವೆ ಕಾಶಿ ಸ್ನಾನದೊಳಗೆ ಭಕ್ತಿ ಸ್ನಾನವೆ ಕಾಶಿ ಜ್ಞಾನದೊಳಗೆ ಶುದ್ಧಜ್ಞಾನವೆ ಕಾಶಿ 13 ದೇವರೊಳಗೆ ಸಾಲಿಗ್ರಾಮವೆ ಕಾಶಿ ಜೀವರೊಳಗೆ ಗೋವುಚಯವೆಲ್ಲ ಕಾಶಿ ಹೂವಿನೊಳಗೆ ಬಿಲ್ವಪತ್ರಿಯೆ ಕಾಶಿ 14 ಹಲವು ಮಾತುಗಳೇನೀಪರಿ ಕಾಶಿ ಛಲ ಭಕ್ತಿಯಿದ್ದರೆ ಜಲವೆಲ್ಲ ಕಾಶಿ ಒಲವುಳ್ಳ ವರಾಹತಿಮ್ಮಪ್ಪನೆ ಕಾಶಿ ಕುಲವೃಕ್ಷವೆಂಬುದು ಫಲವಾದ ಕಾಶಿ 15
--------------
ವರಹತಿಮ್ಮಪ್ಪ
ಗಣಾಧೀಶ ಗೌರೀಶ್ ವಾಗೀಶ ಶ್ರೀಶಾನ'ುಸಿ ಬೇಡುವ ಪ್ರಸಾದವನು ಜಗದೀಶಾನೆಲಸಿ ಹೃದಯದಿ ಬಂದು ನುಡಿಸು ದಯದಿಂದಾನೀ ನುಡಿಸಿದಂತೆ ನುಡಿಯುವೆ ಸ್ಪೂರ್ತಿುಂದಾ 1ದೇಹ ದೇವಾಲಯವು ದೇವರೊಳಗಿಹನುಮನದ ಗರ್ಭಾಲಯದಿ ಮಲಗಿಕೊಂಡಿಹನುನಾಲಿಗೆಯ ನಾಮಗರ್ಜನೆಯ ಬಲದಿಂದಾಮನದ ಕದ ತೆಗೆಯೆ ಕಾಣುನನು ಗೋ'ಂದಾ 2ಮನವೆ ಕಾರಣವು ಬಂಧಮೋಕ್ಷಗಳಿಗೆಮನವೆ ಕಾರಣ'ಲ್ಲಿ ಸುಖದುಃಖಗಳಿಗೆಮನಸು ಬಿಗಿ'ಡಿದ್ಹಿಡಿದು 'ಷಯಗಳ ತ್ಯಜಿಸುಮನತು ನಾಮಸ್ಮರಣೆಯೊಳು ಸದಾ ಇರಿಸು 3ಯಾವಾಗಲೂ ರಾಮ ನಿನ್ನೊಳಗೆ ಇರುವಾಭಾವದಿಂದಲಿ ಕರೆಯೆ 'ಒ' ಎಂದು ಬರುವಾದೇವರನು ನಂಬಿದರೆ ಸರ್ವದಾ ಕಾವಾಯಾವ ಅಂಜಿಕೆಯು ನಿನಗಿಲ್ಲ ತಿಳಿ ಜೀವಾ 4ನಿನ್ನೊಳಗೆ ನೀ ನಿನ್ನ ರಾಮನನು ನೋಡುನಿನ್ನ ಬೇಡಿಕೆಗಳನು ರಾಮನಲಿ ಬೇಡುಅನ್ಯರನು ಅಲಕ್ಷಿಸದೆ ಭಜನೆಯನು ಮಾಡುಪುಣ್ಯವಂತರ ಸಂಗದೊಳು ಸದಾ ಕೂಡು 5ಶ್ರವಣ ಭಕ್ತಿಯು ಬೇಕು ಮೊದಲು ಚೆನ್ನಾಗಿಶ್ರವಣವಾಗುವವರೆಗೆ ನಾದತಾನಾಗಿಭವ ಸಮುದ್ರವನು ದಾಟುವಡೆ ಸುಖವಾಗಿಶ್ರವಣವೇ ಮುಖ್ಯ ಸಾಧನವು ನಿಜವಾಗಿ 6ನಾದ ಹುಟ್ಟಿದ ಮೇಲೆ ನಾಮ ಕೀರ್ತನವುನಾಮ ಕೀರ್ತನದಿ ಅಸ್ಪಷ್ಟ ದರುಶನವುನೇಮ ಹೆಚ್ಚಾದಂತೆ ಸ್ಮರಣೆ ಶಾಶ್ವತವುಸ್ಮರಣೆಯೊಳು ಸಂಪೂರ್ಣ ವಸ್ತುದರುಶನವು 7ಅನನ್ಯ ಭಕ್ತಿಯ ಬಲವ ಬಣ್ಣಿಸುವದೇನುಕಣ್ಮುಂದೆ ಸರ್ವದಾ ಹರಿಯು ಕುಣಿಯುವನುಕಣ್ಣು ಮುಚ್ಚಣಿಕೆಯಾಟವನು ಆಡುವನುಅಣುರೇಣು ಪರಿಪೂರ್ಣನಾಗಿ ತೋರುವನು 8ಕುಣಿಯುವನು ಕುಣಿಸುವನು ನಗುತ ನಲಿಸುವನುದಣಿಯುವನು ದಣಿಸುವನು ಉಣುತ ಉಣಿಸುವನುಜನರಿಗದ್ಭುತ ಚಮತ್ಕಾರ ತೋರುವನುಕ್ಷಣ ಬಿಡದೆ ಕೆಳಗಿಳಿಯದಂತೆ ಕಾಯುವನು 9ದೇವರನು ನಂಬಿ ಕೆಡಕಾದವರು ಇಲ್ಲಜದೇವರನು ಬಿಟ್ಟು ಸುಖಹೊಂದಿದವರಿಲ್ಲಾದೇವರನು ಒಲಿಸುವೆಡೆ ಭಾವ'ರಬೇಕುಭಾವ'ಲ್ಲದ ಢೋಂಗಿನರ್ಚನೆಯು ಸಾಕು 10ಚಿನ್ನ ಬೆಳ್ಳಿಗಳ ಮಂಚಪವು ಬೇಕಿಲ್ಲಾಸಣ್ಣಕ್ಕಿ ಅನ್ನ ಪಕ್ವಾನ್ನ ಬೇಕಿಲ್ಲಮಣ್ಣು ಕುಳ್ಳಿಯೊಳು ಒಣ ಅಂಬಲಿಯು ಸಾಕುಘನ್ನ ಮ'ಮನಿಗೆ ನಿರ್ಮಲ ಭಕುತಿ ಬೇಕು 11ಶ್ರವಣ ಭಕ್ತಿಯ ದಾಟದವನು 'ಸಾಧಕ' ನುಪಾದಸೇವನದಿಂದ 'ಸಾಧು' ಆಗುವನುದಾಸ್ಯ ಭಕ್ತಿಯ ಮುಂದೆ 'ಸಿದ್ಧ' ನಾಗುವನುಸಖ್ಯಭಕ್ತಿಯ ಮುಂದೆ 'ಗುರು'ವು ಆಗುವನು 12ಭಕ್ತಿ ಮಾರ್ಗವು ಬಹಳ ಸುಲಭ ಸಾಧನವುಭಕ್ತಿ ಸರ್ವರಿಗೆ 'ಷಯದೊಳು ಪರಿಚಿತವು'ಷಯದೊಳಗಿನ ಪ್ರೀತಿ ಎಳೆದೆಳೆದು ತೆಗೆದುಪರಮಾತ್ಮನೊಳು ಇಡಲು ಭಕ್ತಿಯಾಗುವದು 13ಉಂಡದ್ದು ಶ್ರೀ ಹರಿಗೆ ನೈವೇದ್ಯವೆನ್ನುಕಂಡದ್ದು ಶ್ರೀ ಹರಿಯ ಪ್ರತಿರೂಪವೆನ್ನುಮಲಗಿದ್ದು ಶ್ರೀ ಹರಿಗೆ ಸಾಷ್ಟಾಂಗವೆನ್ನುಸುಲಭ ಪೂಜೆಯ ಮರ್ಮವೆನು ತಿಳಿದು ನೀನು 14ಸಾಲವನು ಮಾಡಿ ಹೋಳಿಗೆ ಹೊಡಿಯಬೇಡಾಜೇಲಿಗಂಜುತ ದೇಶಕಾರ್ಯ ಬಿಡಬೇಡಾಆಲಸ್ಯದಲಿ ಕಾಲವನು ಕಳಿಯಬೇಡಾಕೆಲಸದಲಿ ಕೀಳು ಮೇಲೆಂದು ಅನಬೇಡಾ 15ಸ್ವಚ್ಛ'ರಬೇಕು ಮನಬುದ್ಧಿ ದೇಹದೊಳುಅಚ್ಚುಕಟ್ಟಿರಬೇಕು ಸರ್ವಕಾರ್ಯದೊಳುಎಚ್ಚರಿರಬೇಕು ಜನಪಾತ್ರೆ ರಾತ್ರಿಯೊಳುಬಿಚ್ಚು ಮನ'ರಬೇಕು ಸ್ವಜನ 'ುತ್ರರೊಳು 16ಬಡತನವು ಬಂದಾಗ ಧೈರ್ಯ ಬಿಡಬೇಡ'ಡಿದು ನೆಂಟರ ಮನೆಯ ನೀ ಕೂಡಬೇಡದುಡಿದು ತಿನ್ನಲು ಸ್ವಲ್ಪ ಸಹ ನಾಚಬೇಡಮಡದಿ ಹುಟ್ಟಿದ ಮನೆಯ ನೀ ಸೇರಬೇಡಾ 17ಗಾಜಕಾರಣದೊಳು ' ಮುಚ್ಚುಮನ' ಬೇಕುಧರ್ಮಕಾರಣದೊಳಗೆ 'ಸ್ವಚ್ಛಮನ' ಬೇಕುಅರ್ಥಕಾರಣದೊಳಗೆ ' ಮೆಚ್ಚುಮನ'' ಬೇಕುಕಚ್ಚೆಕೈಗಳು ಸದಾ ಸ್ವಚ್ಛ'ರಬೇಕು 18ಸಂಸಾರ ಮಾಡುವಡೆ ಧನವ ಸಂಗ್ರ'ಸುಸನ್ಯಾಸಿಯಾಗುವೆಡೆ ವೈರಾಗ್ಯ ಬೆಳೆಸುಸರ್ವಕರ್ಮಗಳಲ್ಲಿ ಶ್ರೀಹರಿಯ ಸ್ಮರಿಸುಸರ್ವದಾ ಸಂತ ಸಂಗದೊಳು ಸಂಚರಿಸು19ಸಂತ ಸಂಗದೊಳು ಸಂಚರಿಸುವುದು ಸ್ನಾನಾಸಂತ ವಚನಾಮ್ರತದ ಪಾನವೇ ಸ್ನಾನಾಸಂತರನು ಸಂತೋಷಪಡಿಸುವುದು ಸ್ನಾನಾಶಾಂತಮನದಿಂ ಹರಿಯ ಚಿಂತಿಪುದ ಸ್ನಾನಾ 20ಬಾಲ್ಯದಲಿ ಬ್ರಹ್ಮಚರ್ಯದಿ ಬಲವ ಬೆಳೆಸುತಾರುಣ್ಯದಲಿ ದುಡಿದು ಧನವ ನೀ ಗಳಿಸುವೃದ್ಧಾಪ್ಯದೊಳು ಸದಾ ಶ್ರೀಹರಿಯ ಸ್ಮರಿಸುಶ್ರೀಹರಿಯ ಸ್ಮರಣೆಯೊಳು ಆಯುಷ್ಯ ಸವೆಸು 21ಮೊದಲು ನಿನ್ನ ಪ್ರಯತ್ನ ತಪ್ಪದೆಲೆ ಮಾಡುಅದು ನೀಗದಿರೆ ಮುಂದೆ ದೈವವನು ನೋಡುಮದುವೆಯಾಗುವ ಮೊದಲು ತಿಳಿತಿಳಿದು ನೋಡುದುಡಿದು ಧನ ಗಳಿಸಿ ಸುಖದಿಂದ ಬಾಳುವೆ ಮಡು 22ಧನ'ಲ್ಲದವನ ಸಂಸಾರ ಸುಖವಲ್ಲಾಮನೆಯೊಳಗೆ ನಿತ್ಯ ಕಿರಿಕಿರಿಯು ತರವಲ್ಲಾದನದಂತೆ ಹೆಣ್ಣು ನುಡಿಯುವುದು ಸರಿಯಲ್ಲಾಎಣಿಕೆುಲ್ಲದೆ ಮಕ್ಕಳಾಗುವುದು ಸಲ್ಲಾ23ನೆಂಟರೊಳು ಬಹುದಿನ ಕೆಳಗಿರಬೇಡಾ'ಫ್ರಂಟಸೀಟಿ'ನ ಮೇಲೆ ನೀ ಕೂಡಬೇಡಾಒಂಟಿಯಲಿ ಹೆಂಡತಿಯ ಬಿಟ್ಟು ಇರಬೇಡಾಗಂಟು ಒಬ್ಬರ ಕೈಗೆ ಕೊಟ್ಟು ಆಳಬೇಡಾ 24ನಿನ್ನಂತೆ ತಿಳಿ ಪರರ ಸುಖ ದುಃಖಗಳನುಅನ್ಯಥಾ ನೋಡದಿರು ಅಣ್ಣ ತಮ್ಮರನುಸರ್ವಥಾ ಸ'ಸದಿರು ಅನ್ಯಾಯಗಳನುತಿಳಿಯದೇ ಹಳಿಯದಿರು ಭಿನ್ನ ಮತಗಳನು 25ಅತಿ ಮತುಗಳು ಬೇಡ ಅತಿ ಮೌನ ಬೇಡಾಅತಿ ತಿನಸು ಬೇಡ ಅತಿ ಉಪವಾಸ ಬೇಡಾಅತಿ 'ಹಾರವು ಬೇಡ ಅತಿ 'ನಯ ಬೇಡಾಅತಿ ಉದಾರತೆ ಬೇಡ ಜೀನತನ ಬೇಡಾ 26ಭೂ'ುಂಗೆ ಭಾರವಾಗುತ ತಿರುಗಬೇಡಾಕೂಳಿಂಗೆ ಕಾಳಾಗಿ ನೀ ಕೂಡಬೇಡಸಾಲ ಸಿಗುವಾಗ ಸಂತೋಷ ಪಡಬೇಡಾಸಾಲವೇ ಶೂಲವೆಂಬುದು ಮರೆಯಬೇಡಾ 27ಹನಿಗೆ ಹನಿ ಕೂಡಿದರೆ ಹಳ್ಳದಾಗುವುದುತೆನಿಗೆ ತೆನಿ ಕೂಡಿದರೆ ರಾಶಿಯಾಗುವುದುಕ್ಷಣಬಿಡದೆ ಕಂಡಲ್ಲಿ 'ದ್ಯೆಯನು ಗಳಿಸುಕಣಬಿಡದೆ ಧನ ಧಾನ್ಯಗಳನು ಸಂಗ್ರ'ಸು 28ಮಾತು ಕೃತಿಗಳಿಗೆ ಬಲು ಮೇಳ'ರಬೇಕುನೀತಿಯೊಳು ತನ್ನ ಮನಸಾಕ್ಷಿ ಇರಬೇಕುಮಾತು ಬಲು ಸ'ುದ್ದು ಸತ್ಯ'ರಬೇಕುಸತ್ಯ'ಲ್ಲದ ಸುಳ್ಳು ಸ' ಮಾತು ಸಾಕು 29ಐಕ್ಯ'ದ್ದರೆ ಸೌಖ್ಯ ಭೇದದೊಳು ಬೇದಾಐಕ್ಯ'ದ್ದರೆ ಬಲವು ಕ್ಷಯಬೇನೆ ಭೇದಾಐಕ್ಯ'ದ್ದರೆ 'ಗ್ಗು ಭೇದದೊಳು ಕುಗ್ಗುಐಕ್ಯದಿಂದ ಸ್ವಾತಂತ್ರ್ಯ ರಥವನ್ನು ಜಗ್ಗು 30ತನ್ನ ಅಭಿಮಾನ ತನ್ನವರ ಅಭಿಮಾನತನ್ನ ಕುಲಗೋತ್ರ ಜಾತಿಯ ಸ್ವಾಭಿಮಾನತನ್ನ ಭಾಷಾರಾಷ್ಟ್ರ ಧರ್ಮಾಭಿಮಾನಮಾನವನಿಗಿರಬೇಕು ಇಲ್ಲದವ 'ಶ್ವಾನಾ' 31ತನ್ನತನ ಬಿಡಬೇಕು ತನ್ನವರಿಗಾಗಿತನ್ನವರ ಕುಲಗೋತ್ರ ಜಾತಿಗಳಿಗಾಗಿ ಕುಲಗೋತ್ರ ಜಾತಿಗಳ ತಾಯ್ನಾಡಿಗಾಗಿತಾಯ್ನಾಡು ನುಡಿಧರ್ಮ ಪರಮಾತ್ಮಗಾಗಿ 32ತನ್ನ ಉದ್ಯೋಗ ಮನಮುಟ್ಟಿ ಮಾಡುವರುಉಣಲು ಅಧಿಕಾರ ಆಮೇಲೆ ದೊರಕುವದುಉಣುವಾಗ ಶ್ರೀಹರಿಯ ಸ್ಮರಣೆ ಮಾಡುವದುಮನೆಯೊಳಗೆ ಶಿಸ್ತು ಶಾಂತಿಗಳ ಕಾಯುವದು33ಹರಿಕಥಾ ಕೀರ್ತನ ಪುರಾಣ ಪಠಿಸುವದುಸರಸ ವಾಙ್ಮಯದ ಅಭ್ಯಾಸ ಮಡುವದುತರು ಬರುವ ತನ್ನ ವ್ಯವಹಾರ ನೋಡುವದುಪರ ಪರಿಸ್ಥಿತಿಗಳನು ತೂಗಿ ನೋಡುವದು 34'ಶ್ರಾಂತಿ ಅಭ್ಯಾಸಿ ಸರಸ ಸಲ್ಲಾಪನಿಶ್ಚಿಂತೆುಂದ ನಿದ್ರೆಯು ಸೌಖ್ಯರೂಪನಿತ್ಯ ಮಾನವನ ದಿನಚರಿಯ ಈ ರೂಫನಿಶ್ರೇಯಸಕೆ ಸುಲಭ ಸಾಧನವು ಭೂಪಾ 35ಸ್ವಚ್ಛ ಹವೆ ನೀರು ವ್ಯಾಯಾಮ 'ಶ್ರಾಂತಿಸಾತ್ವಿಕ ಸಸತ್ವಾನ್ನ ಪಾನಗಳ ಪ್ರೀತಿಉಚ್ಚತಮ ಧ್ಯೇಯ ಆಚರಣೆಗಳ ರೀತಿಮೋಕ್ಷಕ್ಕೆ ಸಾಧನವು ಇಹದಿ ಸಂತೃಪ್ತಿ 36ದೇಹ ಬಿದ್ದರೆ 'ಂದೆ ಕೀರ್ತಿುರಬೇಕುಕೀರ್ತಿ ಬರುವಂಥ ಕಾರ್ಯವ ಮಾಡಬೇಕುಕಾರ್ಯದೊಳು ಕುಶಲತನ ದಕ್ಷತೆಯು ಇರಬೇಕುಫಲವು ಪರಮಾತ್ಮನಾಧೀನವೆನಬೇಕು 37ಸರ್ವದಾ ಸುಖವೆ ಇದ್ದವರು ಯಾರುಂಟುಅವರವರ ಕರ್ಮ ಫಲವೇ ಅವರ ಗಂಟುಬೆಳತು ಕತ್ತಲೆಯಂತೆ ಚಕ್ರ ಆರುಗುವದುಸುಖ ದುಃಖ ಬರುವಾಗ ಬಂದು ಹೋಗುವುದು 38ಅನುಭವದಿ ಹೆಚ್ಚು ಸಾಧನ ಬೆಳೆಯಬೇಕುಅನುಭವದ ಮಾತುಗಳು ಬಚ್ಚಿಡಲು ಬೇಕುಅನುಭವವು ಬಂತೆಂದು ಗರ್ವ ಪಡಬೇಡಾಗರ್ವದಿಂದಲಿ ಮತ್ತೆ ಕೆಳಗಿಳಿಯ ಬೇಡಾ 39ಅಡಗಿ ಅಂಬಲಿ ಅರ' ಅಂಚಡಿಯ ಕಡೆಗೆಹುಡುಗರ ಬಲಾರೋಗ್ಯ ನಡೆನುಡಿಯ ಕಡೆಗೆಕಡು ಚಾಣ್ಮೆುಂದ ನೋಡುವದು ಸತಿ ಪತಿ ಕೆಲಸಾ 40ಪತಿುಂದಲೇ ಸತಿಯು ಸತಿುಂದ ಪತಿಯುಸತಿಪತಿಯ ಪ್ರೇಮದಿಂದಾತ್ಮದುನ್ನತಿಯುಪತಿಯ ಕೋಪದಿ ಕಲ್ಲು ಆಗುವಳು ಸತಿಯುಸತಿಯ ಶಾಪದಿ ಕತ್ತೆಯಾಗುವನು ಪತಿಯು 41ಸಾ'ಗಂಜಲು ಬೇಡ ಸಾ'ಗಳಬೇಡಾಸಾವು ಅಂದರೆ ಭಯಂಕರ ತಿಳಿಯಬೇಡಾದೇಹಕ್ಕೆ ಬಾಲ್ಯ ಯೌವನ ಮುಪ್ಪಿನಂತೆದೇಹಾಂತರ ಪ್ರಾಪ್ತಿಯೇ ಮರಣಗೀತೆ 42'ದ್ಯಾರ್ಥಿ ಬಡವನಿದ್ದರೆ ಭಿಕ್ಷೆನೀಡುಅಶನಾರ್ಥಿ ಟೊಣಪನಿದ್ದರೆ ದೂರ ಮಾಡುಹಸಿವೆ ಚೆನ್ನಾಗಿ ಇದ್ದರೆ ಊಟ ಮಾಡುಹಸಿಯು ಸಾಕಷ್ಟು ಇದ್ದರೆ ಬಿತ್ತಿನೋಡು43ಶುದ್ಧ ಆಚರೆಣೆುದ್ದರೆ ಮಾತನಾಡುಬುದ್ಧಿ ಬಲು ಚುರುಕು ಇದ್ದರೆ ವಾದ ಮಡುದುಡ್ಡು ರಗಡಿದ್ದರೆ ಘಡಾಮೋಡ ಮಾಡುಜಡ್ಡು ಇದ್ದರೆ ಪಥ್ಯದುಪವಾಸ ಮಾಡು 44ಹಾಳುಹರಟೆಯ ಬಿಟ್ಟು ಶ್ರೀ ಹರಿಯ ಸ್ಮರಿಸುಕಾಲುವನು ನೋಡಿ ಸತ್ಕರ್ಮ ಆಚರಿಸುನಾಳೆ ಮಾಡುವೆನೆಂಬ ಮಾತು ದೂರಿರಿಸುನಾಳೆ ಮಾಡುವ ಧರ್ಮ ಇಂದು ನೀ ಮುಗಿಸು 45ಮನ ಮುಟ್ಟಿ ಸ್ಮರಣೆ ಸಂತತ ಮಾಡಬೇಕುಮನಸು ಓಡಲು ಮತ್ತೆ ಜಗ್ಗಿ ತರಬೇಕುಅನುಭವವು ಬಂದಂತೆ ಮನಸು ಕರಗುವದುಮನಸು ಕರಗಿದರೆ ವಾಸನೆಯು ಅಳಿಯುವದು 46ಎಲ್ಲ ಕಡೆಯಲಿ ಇರುವನೊಬ್ಬನೇ ದೇವಎಲ್ಲ ನಾಮಗಳಿಂದಲೂ ಕರೆಸಿಕೊಳುವಾಯಾವ ಬೇಕಾದ ಹೆಸರಿನ ದೇವರನ್ನುಭಕ್ತಿುಂ ಭಜಿಸಿದರೆ ಬಂದು ಪೊರೆಯುವನು47ಧನಕನಕದಾಶೆಯನು ತೊರೆದವನು ಸಂತವನಿತೆಯರ ಬಲೆಯೊಳಗೆ ಸಿಗದವನು ಸಂತಮನದಿ ಮಹಾದೇವನನು ಕಂಡವನು ಸಂತಜನರೊಳು ಜನಾರ್ಧನನ ನೋಡುವನು ಸಂತ 48ಘೋರ ಯುದ್ಧದಿ ನರನ ರಥವ ನಡೆಸಿಹನುಸೀರೆಯಾಗುತ ಸತಿಯ ಮಾನ ಉಳಿಸಿದನುನೀರಿನವನಾಗಿ ಎಂಜಲವ ಬಳಿದಿಹನುಪರಮ ಪುರುಷನ ಕರುಣೆಗೆಣಿಯು ಉಂಟೇನು 49ಹೃದಯ ದೊಳಗಿದ್ದ ಶ್ರೀಹರಿಯ ಮರೇತುಕಡುದ್ಯೆನ್ಯ ಬಿಡಬೇಡ 'ಷಯದೊಳು ಬೆರೆತುಕಾಮಧೇನು'ನ ಕೆಚ್ಚಲೊಳಿದ್ದ ನೀನುಅಮೃತವನು ಬಿಟ್ಟು ರತ್ನವನು ಕುಡಿವೆಯೇನು 50ಸರ್ವ ದುಃಖಗಳು ನಿರ್ಮೂಲವಾಗುವದುಸಂಸಾರ ಪರಮಾರ್ಥ ಕೂಡಿ ನಡೆಯುವವುಪ್ರಭು ರಾಮಚಂದ್ರನ ಪ್ರಸಾದ ಮ'ಮೆಯನುಪಠಿಸಿ ಆಚರಿಸಿದರೆ ಸುಖದಿ ಬಾಳುವನು 51ಜಯಜಯತು ಆರ್ಯ ಭೂಮತೆ 'ಖ್ಯಾತೆಜಯತು ಭಾರತಮಾತೆ ಸರ್ವಜನ ತ್ರಾತೆಜಯಜಯತು ಜಯ'ಂದ ಜನನಿ ಕಡು ಕರುಣಿಜಯ ಜಯತು ಸರ್ವ ಸಂಸ್ಕøತಿಯ ಮುಕುಟಮಣಿ 52ಅತಿಥಿ ಬಂದರೆ ಮನ ದೊಡ್ಡದಿರಲಿಒಣಹೆಮ್ಮೆ ಬೇಡ ಆದರದ ಮಾತಿರಲಿಮಾತು ಕೃತಿ ನಿಜ ಪ್ರೇಮ ತುಂಬಿರಲಿಊಟ ಉಪಚಾರದಿಂದ ಸಂತೋಷಗೊಳಲಿ 53ಗುಡಿಯೇಕೆ ಬೇಕು ಮನದೊಳಗೆ ಹರಿಯುಂಟುಅದರ ಕದ ತೆಗೆಯ ಪ್ರತಿಬಂಧವೇನುಂಟುಗುಡಿಯೊಳಗೆ ಹೊಗಿಸಬೇಕೆಂಬುವುದು ಛಲವುಛಲ 'ದ್ದರೇನದಕೆ ಆಧ್ಯಾತ್ಮ ಬೆಲೆಯು54ಮನ ಪ'ತ್ರ'ದ್ದರೆ ದೇವ ಒಲಿವಾಮನಸು ಅಪ'ತ್ರ'ದ್ದರೆ ದೇವ ಕುದಿವಾಮನ ಸುಪ್ರಸನ್ನ'ದ್ದರೆ ದೇವ ಒಲಿವಾಮನಸು ಧುಸುಮುಸು ಇದ್ದರೆ ದೇವ ಕುದಿವಾ 55ಮನಸು ನಿರ್ಭಯ'ದ್ದರಾ ದೇವ ಒಲಿವಾಮನಸು ನಿರ್ಮಲ'ದ್ದರಾ ದೇವ ಒಲಿವಾಮನಸು ನಿರಹಂಕಾರವಾದಾಗ ಬರುವಾಮನಸು ನಿಷ್ಕಪಟವಾದರೆ ಬಂದು ಪೊರೆವಾ 56ಅನ್ಯರಿಗೆ ನಿನ್ನ ಭಾರವ ಹಾಕಬೇಢನಿನ್ನ ಯೋಗ್ಯತೆ'ುೀರಿ ಭಾರ ಹೊರಬೇಡನಿನ್ನ ಮನೆತನದ ಜಗಳ ಬೈಲಿಗಿಡಬೇಡಹೆಣ್ಣು ಮಕ್ಕಳ ಮೇಲೆ ಕ್ಕೆ-ಎತ್ತಬೇಡ 57ನಿನ್ನ 'ರಿಮೆಯನು ನೀ ಹೇಳಬೇಡಅನ್ಯರನು ಕೀಳೆಣಿಸಿ ಮಾತಾಡಬೇಡಕಣ್ಮುಚ್ಚಿ ಇನ್ನೊಬ್ಬರನುಕರಣೆ ಬೇಡನಿನ್ನ ಸಂಸ್ಕøತಿಯ ವೈಶಿಷ್ಟ್ಯ ಬಿಡಬೇಡ 58ಸು'ಚಾರದಿಂದ ಧ್ಯೇಯವ ಗೊತ್ತುಪಡಿಸುಗೊತ್ತುಪಡಿಸಿದ ಧ್ಯೇಯವನ್ನು ನಿತ್ಯಸ್ಮರಿಸುಮುಟ್ಟಲಾ ಧ್ಯೇಯವನು ಶಕ್ತಿ ಸಂಗ್ರ'ಸುಶಕ್ತಿಯನು ಚಾತುರ್ಯದಿಂದ ನೀ ಬಳಿಸು 59ಸಮಯ ಪ್ರತಿಕೂಲ'ರೆ ವೈರಿಗಳ ನ'ುಸುನ'ುಸಿ ಒಳಹೊಕ್ಕವರ ಬಲವ ಹದಗೆಡಿಸುಶ್ರಮಪಟ್ಟು ಅ'ುತಬಲ ಗುಪಿತದಿಂ ಬೆಳಿಸುಸಮಯ ಸಾಧಿಸಿ ದುಷ್ಟಜನರನು ಸಂಹರಿಸು60ದೇಹದೊಳು ನೀನುಂಟು ದೇಹ ನೀನಲ್ಲನಾ ಎಂಬ ಜ್ಞಾನ ನಿನಗುಂಟು ಆದಕಿಲ್ಲನೀನು ಈ ದೇಹದಿಂದ ಹೊರಬೀಳಲಾಗಹೆಣವೆಂದು ಕರೆಯುವರು ದೇಹವನು ಬೇಗ 61ಹುಟ್ಟುವವ ನೀನಲ್ಲ ಹುಟ್ಟುವದು ದೇಹಬೆಳೆಯುವವ ನೀನಲ್ಲ ಬೆಳೆಯುವದು ದೇಹಸಾಯುವವ ನೀನಲ್ಲ ಸಾಯುವದು ದೇಹರೂಢಿಯೊಳು ನಿನಗಿದನು ಹಚ್ಚುವದು ಮೋಹ62ಖೋಡಿ ಮನವನು 'ಡಿದು ಸಾಧು ಮಡುವದುಸಾಧು ಮಾಡುತ ನಾಮ - ಘೋಷ ಹಚ್ಚುವದುಓಡಿ ಹೋಗಲು ಮತ್ತೆ ಎಳೆದೆಳೆದು ತಂದುಬೋಧಿಸುತ ನಾಮ ಜಪದೊಳು ಸೇರಿಸೆಂದು 63ಒಮ್ಮೆ ಹರಿನಾಮದೊಳು ಮನಸು ಸೇರಿದರೆಅದಕೆ ಆಗುವ ಸುಖವು ಆ ರುಚಿಯು ಬೇರೆಆ ರುಚಿಯ ಆ ಸುಖವು ಹತ್ತಿದರೆ ಮನಕೆತಿರುಗಿ ಎಂದಿಗೂ ಅದು ಹೋಗದದು 'ಷಯಸುಖಕೆ64ಚಿತ್ತ ಸ್ಥಿರ'ಲ್ಲದಿರೆ ಬುದ್ಧಿ ಸ್ಥಿರ'ಲ್ಲಬುದ್ಧಿ ಸ್ಥಿರ'ಲ್ಲದಿರೆ ಭಾವನೆಯು ಇಲ್ಲಭಾವನೆಯು ಇಲ್ಲದಿದ್ದರೆ ಶಾಂತಿುಲ್ಲ ಶಾಂತಿಯೇ ಇಲ್ಲದವ ಸುಖವೇನು ಬಲ್ಲ 65ಅನುಕೂಲ ಮತ ಮಾತ್ರ ನೀ ಎಣಿಸಬೇಡಪ್ರತಿಕೂಲ ಮತ ಉಪೇಕ್ಷೆಯ ಮಾಡಬೇಡಅನುಕೂಲ ಪ್ರತಿಕೂಲಗಳನು ತಿಳಿ ತಿಳಿದುಏನಾದರೊಂದು ಸಾಹಸ ಕಾರ್ಯ ಮಾಡು 66ಉದ್ಯೋಗದೊಳು ಸದಾ ಆನಂದ ಉಂಟುಉದ್ಯೋಗದೊಳಗೆ ಲಕ್ಷ್ಮಿಯ ವಾಸವುಂಟುಉದ್ಯೋಗವನು ಮಾಡಿ ದೇವರನು ಬೇಡುಉದ್ಯೋಗ ಬಿಟ್ಟು ಕುಳಿತರೆ ನಿನಗೆ ಕೇಡು 67ದೀರ್ಘ ಯೋಚನೆಯ ಮಾಡುತ ನೀ ಕೂಡಬೇಡಯೋಗ್ಯ ಮುಂಬೆಳಕು ಇಲ್ಲದೆ ಧುಮುಕಬೇಡ'ಗ್ಗಿ ಮೈಮರೆಯದಿರು ದೈವ ತೆರೆದಾಗಕುಗ್ಗಿ ಎದೆ ಒಡೆಯದಿರು 'ಧಿ ಕಾಡುವಾಗ 68ದೈವವನಕೂಲ'ದ್ದಾಗ ಎಚ್ಚರಿಕೆಗರ್ವ ಸೇರುವದು ತಿಳಿಯದಲೆ ಎಚ್ಚರಿಕೆಗರ್ವದಿ ಸ್ಮøತಿಗೆ ಸಮ್ಮೋಹವೆಚ್ಚರಿಕೆಸಮ್ಮೋಹದಿಂದ ಸರ್ವನಾಶ ಎಚ್ಚರಿಕೆ 69ದೈವ ಯತ್ನಗಳ ಗತಿ ಗಹನವಾಗಿಹುದುಒಬ್ಬೊಬ್ಬರನುಭವವು ಒಂದೊಂದು ಇಹುದುವಾದದಿಂ ಬಗೆಹರಿಯದಂಥ 'ಷಯ'ದುಇದರ ಹದ ತಿಳಿದು ಯತ್ನವಂ ಮಾಡುವದು 70ಜೋಲು ಮೋರೆಯ ಹಾಕಿ ನೀ ಕೂಡಬೇಡಕಾಲು ಅಪ್ಪಳಿಸಿ ಕೆಲಸಕೆ ಹತ್ತಬೇಡಸ್ಟೈಲು ಉಡುಗೆಯ ಉಟ್ಟುಕೊಂಡೋಡಬೇಡಮೈಲಿಗೆಯ ಮನದಿಂದ ಜಪ-ಮಾಡಬೇಡ 71ಕಾರ್ಯ ಮಾಡುವ ಜನಕೆ ಮರ್ಯಾದೆ ಮಡುಬಾಯಬಡುಕ ಜನರ ಕೃತಿಯನು ತಿಳಿದು ನೋಡುಧೈರ್ಯದಿಂ ದುರ್ಜನರ ಕೂಡ ಹೋರಾಡುಆರ್ಯ ಸಂಸ್ಕøತಿಯ ಸಂರಕ್ಷಣೆಯ ಮಾತು 72ಗುಣ ಕರ್ಮಗಳ ನೋಡಿ ಮಾನವನು ಮಾಡುಒಣ ಜನ್ಮ ಜಾತಿ ತುಸು ದುರ್ಲಕ್ಷ ಮಾಡುಗುಣ ಕರ್ಮದಿಂದ ಅತಿ ನೀಚನಾದವನುಜನುಮ ಮಾತ್ರದಿ ಹೇಗೆ ಶ್ರೇಷ್ಠನಾಗುವನು73ತಪ್ಪು ಇಲ್ಲದೆ ಕ್ಷಮೆಯ ಬೇಡುವವ ಮೂರ್ಖತಪ್ಪಿದರು ಒಪ್ಪಿದವನು ಕಡುಮೂರ್ಖತಪ್ಪು ಆಗುವದು ಮಾನವನ ಸಹಜಗುಣತಪ್ಪು ಒಪ್ಪುತ ತಿದ್ದಿಕೊಳ್ಳುವದು ಸುಗುಣ 74ನಿನ್ನ ಬಂಧುಗಳೆ ನಿನಗಾಗುವರು ಕೊನರೆಗೆಅನ್ಯರಿಗೆ ಆ ಕರುಳು ಬರುವದು ಹೇಗೆನಿನ್ನ ಬಂಧುಗಳೆಲ್ಲ ಮೂರ್ಖರೆನಬೇಡಅನ್ಯರಿಂದ ನೀ ಮೂರ್ಖನೆನಿಸಿಕೊಳಬೇಡ 75ಜನರ ಮನೆಗಳು ಬಹಳ ದಿವಸ ಇರಬೇಡಇರುವದೇ ಆದರವರಿಗೆ ಭಾರ ಬೇಡಅರಿತವರ ಕೆಲಸಗಳ ಮನೆಯಂತೆಮಡುಗೃಹದ ರೀತಿರಿವಾಜು ಕೆಡದಂತೆ ನೋಡು 76ದುಡ್ಡು ಇದ್ದಾಗ ಎಲ್ಲರ ಪ್ರೀತಿಯುಂಟುದುಡ್ಡು ಕಳಕೊಂಡು ಹೋದರೆ ಮೋರೆಗಂಟುದುಡ್ಡಿನಿಂದಲೆ ಜನರ ಬೆಲೆ ಕಟ್ಟಬೇಡದೊಡ್ಡ ಗುಣಗಳನರಿತು ನ'ುಸದಿರಬೇಡ 77ಧನದ 'ಷಯದಿ ಖಂಡ ತುಂಡ ಇರಬೇಕುಮನಬಿಚ್ಚಿ ಮೊದಲಿಗೆ ಮಾತಾಡಬೇಕುಒಣ ಮಬ್ಬುತನ ಮನದಮಂಡಿಗೆಯು ಬೇಡಕೊನೆಗೆ ಗುಣಗುಟ್ಟುತಲಿ ಹಳಹಳಿಸಬೇಡ 78ಯಂತ್ರಮಯ ಜೀವನದ ಯುಗವು ನಡೆದಿಹುದುಸ್ವಾತಂತ್ರ್ಯವೆಲ್ಲಿ ಬಡವರಿಗೆ ಉಳಿದಿಹುದುದ್ರವ್ಯಮಯವಾದ ವ್ಯವಹರ ಸಾಗಿಹುದುದೇವ ಧರ್ಮಕೆ ಅರ್ಧಚಂದ್ರ ಬಂದಿಹುದು 79ತಾಯ್ತನದ ಸುಖಕೆ ಸರಿಯಾದ ಸುಖ'ಲ್ಲತಾಯ್ತನದ ಕರುಳಿಂಗೆ ಬೆಲೆಯಂಬುದಿಲ್ಲತಾುಗಿಂದಧಿಕ ದೈವತವು ಬೇರಿಲ್ಲತಾಯ್ - ಸೇವೆಗಿಂದಧಿಕ ಪುಣ್ಯಾವೆ ಇಲ್ಲ 80ಚನ್ನಾಗಿ ಸಂಸಾರ ಮಾಡಬಲ್ಲವನುಸುಲಭದಿಂ ಪರಮಾರ್ಥವನು ಸಾಧಿಸುವನುಸಂಸಾರದೊಳಗಿದ್ದು ಸನ್ಯಾಸಿಯೆನಿಸುಸನ್ಯಾಸಿಯಾಗಿ ಸಂಸಾರದೊಳು ಈಸು81ಮನೆಯಲ್ಲಿಯೇ ಸ್ವರ್ಗ ಮನೆಯಲ್ಲಿಯೇ ನರಕಜಾಣರಿಗೆ ತಿಳಿಯುವದು ನೋಡಿದರೆ ಗಮಕಜಾಣ ಪ್ರೇಮಳ ಪತಿಯಮನೆ ಸತಿಗೆ ಸ್ವರ್ಗಕೋಣ ಕರ್ದಮ ಕಟುಕ ಪತಿುರಲು ನರಕ 82ಪತಿಯ ಮನ ಒಲಿಸಿ ಕೋತಿಯ ತೆರದಿ ಕುಣಿಸಿಅತ್ತೆ ಮಾವರು ಬಂಧುಬಳಗವನು ಹೊರನುಗಿಸಿಸ್ವೇಚ್ಛೆುಂ ಎದೆಮೆಟ್ಟಿ ಬೇರಿರುವ ಸೊಸೆಸೊಸೆಯಲ್ಲ ರಕ್ಕಸಿಯು ಕಿ'ಹೊಕ್ಕ ತೊಣಸಿ83ಸರ್ವದಾ ಸತ್ವಗುಣಿ ಶಾಂತ ನಿರುತಿಹನುರಾಜಸನ ಶಾಂತಿುಂ ಧಡಪಡಿಸುತಿಹನುಕಿರಿಕಿರಿಯು ತಾಮಸಿಗೆ ಬಿಟ್ಟುರುವದಿಲ್ಲಾತ್ರಿಗುಣಗಳ ದಾಟದಿದ್ದರೆ ಮೋಕ್ಷ'ಲ್ಲಾ 84ಅನ್ನದೊಳು ಮುಖ್ಯ ಸಾತ್ವಿಕ ಗುಣವು ಬೇಕುಸಂಪಾದನೆಯ ಮಾರ್ಗ ಸರಳ'ರಬೇಕುಸಂಸರ್ಗ ಸಂಸ್ಕಾರ ಸುಷ್ಟ'ರಬೇಕುಸಾತ್ವಿಕಾನಂದ ಮನದಿಂದ ಉಣಬೇಕು 85ಮೂಲ ಮನ'ಹುದು ಮೂರರೊಳೊಂದು ಪಾಲುಸನ್ನಿವೇಶಗಳಿಂದ ಮತ್ತೊಂದು ಪಾಲುತಿನ್ನುವಾ ಅನ್ನದಿಂದ ಉಳಿದೊಂದು ಪಾಲುಮೂರು ಕೂಡಿದ ಮನವೆ ನಿನಗೆ ಹರಿಗೋಲು86ಪ್ರಾರಬ್ಧವನುಭ'ಸಿ ತೀರಿಸಲು ಬೇಕುಅಪರೋಕ್ಷದಿಂದ ಸಂಚಿತ ಕಳಿಯಬೇಕುಸರ್ವದಾ ನಿರಪೇಕ್ಷ ಸತ್ಕರ್ಮ ಬೇಕುನಿರಭಿಮಾನದಿ ಕರ್ಮದ ಬೀಜ ಸುಡಬೇಕು87ದಯೆಯು ಧರ್ಮದಮೂಲ ದಯವಂತನಾಗುಭಯವು ದುಃಖದಮೂಲ ನಿರ್ಭಯನು ಆಗುಲೋಭ ಪಾಪದ ಮೂಲ ನಿರ್ಲೋಭಿಯಾಗುತ್ಯಾಗ ಪುಣ್ಯದ ಮೂಲ ತ್ಯಾಗಿ ನೀನಾಗು 88ನಿನ್ನ ಉದ್ಧಾರವನು ನೀ ಮೊದಲ ಮಾಡುಮನೆತನದ ಉನ್ನತಿಯಕಡೆಗೆ ನೀ ನೋಡುನಿನ್ನ ನೆರೆಹೊರೆ ಜನರ ಕಲ್ಯಾಣಮಾಡುಆಮೇಲೆ 'ಶ್ವದದ್ಧಾರ ಮಾತಾಡು 89ಹಳೆಯದಿದ್ದರೆ ಎಲ್ಲ ಒಳಿತು ಎನಬೇಡಹೊಸದೆಂಬ ಮಾತ್ರದಿಂದಲೆ ಹಳಿಯಬೇಡಒಳಿತು ಕೆಡಕುಗಳು ಎಲ್ಲದರಲ್ಲಿ ಇಹವುತಿಳಿದು ಉಪಯೋಗಿಸಿದರದು ಜಾಣತನವು 90ಕಾಲಮ'ಮೆಯ ಕಷ್ಟ ಬಂದಿತೆನಬೇಡಕಾಲಕ್ಕೆ ಹೆಚ್ಚಿನ ಮಹತ್ವ ಕೊಡಬೇಡಕಾಲ ನಿರ್ಮಾಣ 'ರಿಯರ ಕೈಯ್ಯೊಳಿಹುದುಎಂಥ 'ರಿಯರು ಅಂಥ ಕಾಲ ಬರುತಿಹುದು 91'ರಿಯರಾಚರಣಿಯಂ ಮನೆತನದ ಬೆಳಕು'ರಿಯರಾಚರಣೆುಂ ಮನೆತನಕೆ ಹುಳುಕು'ರಿಯರೇ ಕಾರಣರು ಮನೆಯ ಸುಸ್ಥಿತಿಗೆ'ರಿಯರೇ ಕಾರಣರು ಮನೆಯ ದುಸ್ಥಿತಿಗೆ 92ದೇಹವೇ ರಥವು ಸಾರಥಿಯು ಪರಮಾತ್ಮಜೀವ ಅರ್ಜುನ ಧರ್ಮ ಸಮ್ಮೂಡ ಆತ್ಮಸರ್ವ ಭಾವದಿ ಶರಣುಹೊಗು ಸಾರಥಿಗೆಸಾರಧಿಯು ಮುಟ್ಟಿಸುವ ನಿನ್ನ ಸದ್ಗತಿಗೆ 93ಜ್ಞಾನಪೂರ್ವಕ ''ತ ಕರ್ಮಗಳ ಮಾಡುಚಿತ್ತಶುದ್ಧಿಗೆ ಕರ್ಮಸಾಧನವು ನೋಡುಉದ್ದೇಶ ಪರಿಣಾಮಗಳ ತೂಕ ಮಾಡುಮೂಢತನ ರೂಢಿಗಳನರಿತು ಬಿಟ್ಟುಬಿಡು 94ಬಾಲಭಾವದಿ ದೇವರೊಳು ಹಟವಮಾಡುಬಾಲಭಾವದಿ ದೇವರೊಳು ಮಮತೆಮಾಡುಬಾಲಭಾವದಿ ದೇವರಿಗೆ ಬೇಡಿಕಾಡುಬಾಲಭಾವದಿ ನಿನ್ನ ಸರ್ವಸ್ವ ನೀಡು 95ಮಾತೃಭಾವದಿ ಅವನ ತೊಡೆಯ ಮೇಲಾಡುಮಾತೃಭಾವದಿ ನೀನು ವಾತ್ಸಲ್ಯ ಮಾಡುಮತೃಭಾವದಿ ತೂಗಿ ತೊಟ್ಟಿ ಮುದ್ದಾಡುಮಾತೃಭಾವದಿ ಬಿದ್ದು ಕಿರಿಕಿರಿಯಮಾಡು 96ಸಖ್ಯಭಾವದಿ ಹಾಲು ಮೊಸರೆರೆಯ ಬೇಕುಸಖ್ಯಭಾವದಿ ಬೆಣ್ಣೆ ಬಾಯ್ತುಂಬ ಬೇಕುಸಖ್ಯಭಾವದಿ ಕೊಳಲಿನೊಳು ಕುಣಿಯಬೇಕುಸಖನೆಂದು ಗೋಪಿಯಂದದಿ ಕುಣಿಸಬೇಕು 97ನಿನ್ನೊಳಗೆ ಆತನನು ನೀ ನೋಡಬೇಕುಅವನೊಳಗೆ ಸರ್ವವನು ನೀ ಕಾಣಬೇಕುತನ್ನತನ ಮರೆತು ಅವನೊಳು ಬೆರೆಯಬೇಕುಅವನ ಸೂತ್ರದ ಬೊಂಬೆ ನೀನಾಗಬೇಕು 98'ುೀನನಾದರೆ ಅವನ ಕಣ್ಣು ನೀನಾಗು ಕೂರ್ಮನಾದಾಗವನ ಬೆನ್ನು ನೀನಾಗುವರಾಹರೂಪದ ಹರಿಯ ಕೋರೆ ನೀನಾಗುನರಹರಿಗೆ ನೀ ಹದನವಾದ ನಖವಾಗು 100ವಟುವಾಮನಗೆ ಪಾದರಕ್ಷೆ ನೀನಾಗುದುಷ್ಟ ಸಂಹಾರಕನ ಪರಶು ನೀನಾಗುಅಟ'ವಾಸಗೆ ಬಿಲ್ಲುಬಾಣ ನೀನಾಗುದಿಟ್ಟ ಗೊಲ್ಲನ ಕರೆದ ಕೊಳಲು ನೀ ನಾಗು 101ಬುದ್ಧನಾದರೆ ಬುದ್ಧಿವಂತ ನೀನಾಗುಕಲ್ಕಿಯಾದರೆ ಚಲುವ ಕುದುರೆ ನೀನಾಗುಎಲ್ಲಿದ್ದರೂ ಅವನ ನೆರಳು ನೀನಾಗುಪ್ರಹ್ಲಾದ ದ್ರುವ ಅಂಬರೀಷ ನೀನಾಗು 102ಧನದೊಳಗೆ ಧನ ತವೋಧನನು ನೀನಾಗುಭಾಗ್ಯದೊಳು ವೈರಾಗ್ಯ ಭಾಗ್ಯವಂತನಾಗುಇಂದ್ರಿಯಂಗಳ ಜಯದಿ ನೀ ಶೂರನಾಗುಪಂಡಿತನು ತತ್ವದಾಚರಣೆಯೊಳು ಆಗು103ಸ್ವಾತಂತ್ರವೇ ಸ್ವರ್ಗ ಪರತಂತ್ರ ನರಕಮಾತೃಭೂ'ುಯ ಸೇವೆ ಮಡದವ ಶುನಕಪತಿತರುದ್ಧಾರ ಮಾಡುವದು ಸದ್ಧರ್ಮಪತಿತರನು ತುಳಿಯುವದು ಸೈತಾನಕರ್ಮ 104ಸಂಸಾರ ಸಾಗರವ ದಾಟಿಸಲು
--------------
ಭೂಪತಿ ವಿಠಲರು
ಚಿಂತಯಾಮಿ | ರಘುರಾಮಂ | ಸುತ ಕೌಸಲ್ಯೋದರಜಂ |ಸಂತತ ಶರಣರ ಕೃಪಾ | ಪಾಂಗವೀಕ್ಷಾ ಹಸಿತಂ ಪ ಸರಿ ಗ ಸರೀ | ಮಪ ಧಪ ಧಾ | ರಿಸ ನಿಧ ನಿಧ | ಪಮ ಗರಿ ಸದದ್ರುತ - ಸರಿಮಾ ಗರಿ | ಮಪ ದಾಪಮ | ಪಧಸಾ ನಿಧ | ನಿಧ ಪದಪಧ ||ಗರಿ ಸಧ | ``ರಿ ಸ ಧಾ ಸ | ಧಾ ಗ ರಿ ನಿಧಮ | ಗರಿಸಧ | ರವಿ ಕುಲಾನ್ವಯತಿಲಕಂ | ಋಷಿ ವಿಶ್ವಾಮಿತ್ರ ಕೃತಹವನ ಹೋಮ, ಬಾಧಾಗ್ರಸ್ತ | ವಿಮೋಚನ, ಶೀಲಂಅವನಿಜೆ ವೈವಾ, ಹಕ್ಕಾನೀತಂ | ಲಕ್ಷ್ಮಣ ಸಹ, ವಿಧಿಲಾಗ5ನಂ |ಶಿವಧನುವಂ, ಮುರಿದು ರಾಜ | ರುಗಳ ಗರ್ವಹರ | ಶ್ರೀರಾಮಂ 1 ಮಗ ಸಾ ನಿóದ | ನಿóಸಾ ರಿಗಮ | ನಿಧ ಮಾಗರಿ | ಗಮ ಪಗರಿಸದ್ರುತ - ನಿಧನಿಸ ರಿಗಮ ಧನಿಪಧ | ನಿಸ ನಿಧ ನಿಸರಿಗ ಮಗಸನಿ ||ಗರಿಸಧ, ರಿಸ ಧಾ, ಸ ಧಾಆ, ಗರಿ || ನಿದಮ | ಗರಿಸಧ || ರಾಗ - ಧನ್ಯಾಸಿ : ಅನುಜ ಸತಿಸಹ | ವನವಾಸಂ |ನಿಶಿಚರ ಹನನ | ಶೂರ್ಪನಖಿ | ನಾಸಛೇದಂ | ಚರಿತಂ 2 ರಾಗ :ಧಾನಿಸಿ :ನಿಸ ಗಾಮ ಪ | ಗಮ ಪಾನಿಸ | ರಿಸ ರಿನಿ ಸಪ | ಧಪಗಾರಿಸನೀ ಸ ಗ ಮಪ ಗಾ ಮಪನಿಸ | ಪಾ ನಿಸ ಗರಿ ಸನಿಧಪ ನಿಸಗರಿಸಧಾ, ಆರಿಸ ಧಾಸ, ಧಾ, ಗರಿ ನಿಧಮ ಗರಿಸದ || ರಾಗ - ಪರ | ಮಾನುಗ್ರಹ ಶೀಲಂ ರಾಮಂ 3 ಗಾ ಪ ಗರಿ, ಗರಿ ಸಧಸರಿ | ಗಾಪ ದಸದಪ ಗರಿ ಸರಿಗಪಗಗ, ರಿಸ | ರಿಗ, ರಿರಿಸ ಧ | ಸರಿಗರಿ ನಪಗಪ ಧಪಧಸ |ಗರಿಸಧಾ, ಆರಿಸ ಧಾ, ಸದಾ, ಗರಿನಿಧಮ, ಗರಿಸದ || ರಾಗ ಪೂರ್ವಕಲ್ಯಾಣಿ : ಲೇಸು ಕಪಿಗಳ ನಿಚಯ | ಸೀತಾಕೃತಿ ಹುಡುಕುತ |ಆ ಸಮೀರನು | ವಾರಿಧಿಯನು | ಹಾರಿ ಲಂಕೆಯ ಪುರದಲ್ಲಿಅಣುರೂಪದಿ ಹುಡುಕುತ | ಸೀತಾಕೃತಿಯ | ಕಂಡನುದೇಶ ಪುಚ್ಛಾಗ್ನಿಯಲಿ | ದಹಿಸಿ ಸೀತೆ | ವಾರ್ತೆ ಪೇಳಿದನು 4 ಗಾಮಗರಿಸ | ಧ ಸರಿ ಗಮ | ಪಾ ಧಪಸ | ನಿಧಪ ಮಗರಿ |ಗಮಪ ಮಾಪಗಾ | ಮರೀಗ | ಸಾರಿಗಆಮ ಪಧ ಪಸಾ ನಿ |ಗರಿಸಧಾ, ಆಸಧಾ ಸಧಾ ಗರಿ ನಿಧ ಮ ಗರಿಸಧ || ರಾಗ :ಮುಖಾರಿ : ಸತಿ ಪರಿವಾರ ಪುಷ್ಪಕವಿ | ಸ್ವಪುರ ಖೊರಟ 5 ಪಾ ಮಗರಿ | ಸಾ ನಿಧ ಸರಿ | ಮಾಗರಿಸ | ರಿಮ ಪದ ನಿಧ ಸಾ ಸನಿ ಧಪ ಪಾ | ಮಗರಿಸ | ನಿಧಸರಿ ಮಪನಿಧ ಮಪಧಸ ||ಗರಿಸಧಾ ಆರಿಸ ಧಾಅಸ | ಧಾಅ ಗರಿ ನಿಧಮ ಗರಿಸಧ || ರಾಗ ಮಧ್ಯಮಾವತಿ : ಸುರರು ಭಾರ ಕಳೆದ5ುರು ಗೋವಿಂದ ವಿಠಲ 6 ರೀ ಮರಿ ಮಪ | ನೀ ಪಮ ಪನಿ ಸಾ ರಿಸನಿ | ಪಪ ಮಮರಿ ಸ || ರೀಪಮ ರಿಸನಿಪ ರಿಮಪಾ || ರಾಗ :ಪೂರ್ವಕಲ್ಯಾಣಿ || ಧಪ ಸಾ ನಿಧಪಮ | ಮಪಗರಿರಾಗ :ಮೋಹನ || ಸರಿಮಾ ಗರಿ ಸರಿಗಾ | ಪಗರಿ ಸರಿ ಪದಸ ರಾಗ :ಮುಖಾರಿ | ರೀ ಸದಾ ಪದಪ ಗಾರಿ ಸರಾಗ :ನಾಟಿಕುರಂಜಿ || ನಿಸ ಮಗ ಧನಿ ಪಧನಿಸ ರಾಗ : ಸಾವೇರಿ || ಗರಿ ಸದಾ ರಿಸ ಧಾ ಸ | ಧಾ ಗ ರಿ ನಿದಮ ಗರಿಸದ
--------------
ಗುರುಗೋವಿಂದವಿಠಲರು
ದೈವಕೃಪೆ ಇದಲ್ಲಾ ಇವರಿಗೆ ಭಾವ ಶುದ್ಧಿಯಿಲ್ಲಾ ಪ ದೇವತೆಗಳು ಸಂತೋಷಿಸರೆಂದಿಗು ನಾವೆಂಬಹಕಾರದಿ ಮಾಳ್ಪದರಲಿ ಅ.ಪ ಮದುವೆಯ ಪೆಸರಿರಿಸಿ | ದೂರದಿಂ ವಿವಿಧ ಬಂಧುಗಳ ಕರಸಿ ವಧುವರರಿಗವರು ವುಡುಗೊರೆ ವೋದಿಸ- ಲದನೇಯವರಿಗೆ ಹಿಂದಕ್ಕೆ ಕೊಡುವುದು 1 ಕೊಡದಿದ್ದರೆ ಕೋಪಾ | ಕೊಟ್ಟರೆ ಕಡು ಮೂಢರಿಗೆ ಪುಣ್ಯವೆಲ್ಲಿಹುದು ಸಡಗರ ಭ್ರಾಂತಿಯು ಡಂಬವು ಬರಿದೆ 2 ತಂತ್ರಗಳಾಚರಿಸೆ ಯಂತ್ರೋದ್ಧಾರಕ ಗುರುರಾಮವಿಠಲಾ ಸಂತಸಡುವನೆ ಧನವ್ಯಯ ಬರಿದೆ 3
--------------
ಗುರುರಾಮವಿಠಲ
ಬಣ್ಣಿಸುತ ಮಕ್ಕಳನು ಹರಸುವಳು ತಾುಎಣ್ಣೆ ಉಣಿಸುತ ತನ್ನ ಚಿನ್ನ ಚಿಕ್ಕರುಗಳಿಗೆ ಪಆಯುಷ್ಯವಂತನಾಗು ಆಸ್ತಿಕನು ನೀನಾಗುಭಕ್ತವತ್ಸಲ ಹರಿಯಭಕ್ತನಾಗುನಿತ್ಯನಿರ್ಮಲನಾಗು ನೀತಿವಂತನು ಆಗುಸತ್ಯನಿಷ್ಠನಾಗು ಸಿರವಂತನಾಗೆಂದು 1ಶೂರನೀನಾಗು ಬಲುಧೀರ ನೀನಾಗಯ್ಯಾಧೈರ್ಯದಿಂದ ಸತ್ಕಾರ್ಯ ನಿರತನಾಗುದುರುಳರನು ದೂರಿರಿಸು ಪರರ ಪೀಡಿಸದಿರುಕಾರುಣ್ಯ ನಿಧಿಯಾಗಿ ಸುಜನರನು ಪೊರೆಯೆಂದು2ದೇಶವನು ಪ್ರೀತಿಸು ದುರಾಶೆಗೊಳಗಾಗದಿರುಕರ್ಯಠನು ಆಗದಿರು ಧರ್ಮ ಬಿಡಬೇಡಾಉದ್ಯೋಗಪತಿಯಾಗು ಜಿಪುಣ ನೀನಾಗದಿರುಭೂಪತಿ'ಠ್ಠಲನ ಭಕ್ತ ನೀನಾಗೆಂದು 3
--------------
ಭೂಪತಿ ವಿಠಲರು
ಭೀಮಾತಟ ಹರಿ ವಿಠಲ | ಪೊರೆಯ ಬೇಕಿವಳಾ ಪ ಸಾಮಸನ್ನುತ ಹರಿಯೆ | ನಿಸ್ಸೀಮ ಮಹಿಮಾ ಅ.ಪ. ಗುರು ಕರುಣ ಇವಳಿಗಿದೆ | ಮರಳಿ ಹರಿ ಗುರುಭಕ್ತಿನೆರೆ ವೃದ್ಧಿ ಗೈಸುತಲಿ | ಪೊರೆಯೊ ಇವಳಾ |ಕರುಣನಿಧಿ ನೀನೆಂದು | ಆರು ಮೊರೆಯ ನಿಡುವೆನಾಪರಿ ಪರಿಯಲಿಂದಿವಳ | ಕೈ ಪಿಡಿಯೆ ಹರಿಯೇ 1 ಸಜ್ಜನರ ಸಂಗ ಕೊಡು | ದುರ್ಜನರ ದೂರಿರಿಸುಅರ್ಜುನನ ಸಾರಥಿಯೆ | ಮೂರ್ಜಗಕೆ ಒಡೆಯಾ |ಬೊಜ್ಜೆಯಲಿ ಬ್ರಹ್ಮಾಂಡ | ಸಜ್ಜು ಗೊಳಿಸಿಹ ಹರಿಯೆ |ಅರ್ಜುನಾಗ್ರಜ ವಂದ್ಯ | ಸಜ್ಜನರ ಪಾಲಾ 2 ತರತಮದ ಸುಜ್ಞಾನ | ಹರಿಯ ಸರ್ವೋತ್ತಮತೆಕರುಣಿಸೋ ಇವಳೀಗೆ | ಪರಮ ಪಾವನ್ನಾ |ಗರುಡ ಗಮನನೆ ಗುರೂ | ಗೋವಿಂದ ವಿಠ್ಠಲನೆಮೊರೆಯ ಲಾಲಿಸಿ ಇವಳ | ಪೊರೆಯೊ ಶ್ರೀ ಹರಿಯೇ 3
--------------
ಗುರುಗೋವಿಂದವಿಠಲರು
ಶ್ರೀ ಮದ್ಭಾಗವತ ಚಿಂತಯಾಮಿ | ಶಿರಿಕೃಷ್ಣ | ಸತತ ಸುಗುಣೋ | ಪೇತಂ ಪ ಸಂತತ ಭಕುತರ ಕೃಪಾ | ಪಾಂಗ ವೀಕ್ಷಾ ಹಸಿತಂಅ.ಪ. ಚಿಟ್ಟೆಸ್ವರ - ಸರಿ ಗಸರೀ | ಮಪ ದಪ ಧಾ | ರಿಸ ನಿಧ ನಿಧ | ಪಮ ಗರಿ ಸಧ |ದ್ರುತ :- ಸರಿಮಾ ಗರಿ | ಮಪ ದಾಸಮ || ಪದ ಸಾ ನಿಧ | ನಿಧ ಪಮಪಧ |ಗರಿ ಸಧ | ರಿಸ ಧಾ ಸ | ಧಾ ಗರಿ ನಿಧಮ ಗರಿಸಧ || ದುರುಳ ಬಂಧಂ | ವಸುಮತಿಯೆಂ, ಗಗನಖಾರಿ, ಕಂಸಗರ್ವಹರ, ದುರ್ಗಾಂಬಂ 1 ವಿಗತಾ ಅಸು, ಪಾಲುಣಿಸಿದ, ರಕ್ಕಸಿ, ಪೂಥಣಿಯುಮಿಗೆ ಊರ್ವಶಿ ಸುರೆ ಶಾಪಹರಂ | ಶಕಟಾಖ್ಯಾಸುರವಿಗಡ ಪ್ರಾಣಹರ | ಶೀಲಂ ತೃಣ ವತ್ಸಾಹರ | ಬಕ ಧುನಿ ಚಮುಮಿಗಿಲಾದವರ ಅಸುಹರಣಂ | ಮಣಿಗೊರಳರ ಶಾಪಹರಂ |ಮದ ವಿಭಂಜನ ಕಾಳೀಯನ | ವನ್ಹಿಯ ಪಾನಂ ಚರಿತಂ 2 ಚಿಟ್ಟೆಸ್ವರ - ನಿಸ ಗಾ ಮಪ | ಗಮ ಪಾ ನಿಸ | ರಿ ಸ ರಿ ನಿ ಸಸ | ಧಪ ಗಾರಿಸ |ನೀ ಸಗ ಮಪ ಗಾ ಮಪನಿಸ | ಪಾನಿಸ ಗರಿಸನಿ ಧ ಪನಿಸ |ಗರಿಸಧ, ಆರಿಸ ಧಾ, ಸ || ಧಾ, ಗರಿ ನಿಧಮ ಗರಿಸಧ || ರಾಗ ಮೋಹನ : ಹನನ ಅಸುರ | ವಿಷತರು ರೂಪಿ | ಘನ ಧೇನುಕ ಭಂಜನಹನನ ಪ್ರಲಂಬನು ಬಲ ನಿಂ | ಪುನರಪಿ ವನ್ಹಿಯ ಪಾನಂಮುನಿ ಪತ್ನ್ಯಾನೀತಾನ್ನ | ಸುಭೋಜನ ಶೀಲಂ |ತೃಣಸಮ ಗಿರಿಧರ ಶಂಖನ | ಮಣಿಹರ ಅರಿಷ್ಠಾ ಅಸುರ ಹರ 3 ಗಾ ಅಪ ಗರಿ, ಗರಿ ಸಧ ಸರಿ | ಗಾಪ ಧಸ, ಧಪ ಗರಿ ಸರಿ |ಗಪ ಗಗ ರಿಸ, ರಿಗ ರಿರಿಸ ಧ | ಸರಿಗರಿ ಗಪಗಪ ಧಪ ಧಸ |ಗರಿಸಧ, ಆರಿಸ, ಧಾ ಸ || ಧಾ, ಗರಿ ನಿಧಮ ಗರಿಸಧ || ಕೇಶಿ ಅಸುರನ ಅಂತೆ ವ್ಯೋಮಾಸುರ ಹನನದಕ್ಲೇಶ ವಾರ್ತೆಯ ಕೇಳಿ ಕಂಸನು ದಾನಪತಿಯನುಯಶೋದೆ ಕಂದನ ಕರೆಯೆ ಅಜ್ಞಾಪಿಸಿದ ಬಿಲ್ಲು ಹಬ್ಬಕೆಲೇಸೆನುತ ಬರವಾಯ್ತು ಸಖ ಅಕ್ರೂರ ಗೋಕುಲಕೆ 4 ಚಿಟ್ಟೆಸ್ವರ - ಅರಿ ಗಮ | ಪಾಧಪಸ | ನಿಧಪಮಗರಿಗಮಪ ಮಾಪ, ಗಾಮರೀಗ, ಸಾರಿಗಾ ಮ, ಪದ ಪ, ಸಾನಿ ||ಗರಿ ಸಧಾ, ರಿ ಸಧಾ ಸದಾ ಗರಿ ನಿಧಮ, ಗರಿ ಸಧ || ಪತಿ | ಸ್ನಾನದಲಿ ಹರಿ ವೀಕ್ಷಣಂಮನ ಕಲಕಿ ಹರಿ ಮಹಿಮೆ ಆಶ್ಚರ್ಯದಿ ಮಧುರೆ ಸೇರಿವನದಿ ಪರಿವಾರ ನಿಲೆ ಬಲ ಸಹಿತ ಪುರಖೊರಟ 5 ಪಾ ಮಗರಿ | ಸಾ ನಿಧ ಸರಿ | ಮಾ ಗರಿಸ | ರಿಮ ಪಮನಿಧ |ಸಾ ಸನಿ ಧಪ ಪಾ ಮಗರಿಸ | ನಿಧ ಸರಿ ಮಪನಿಧ ಮಪಧಸ |ಗರಿ ಸಧ ಆರಿ ಸ ಧಾ ಸ || ಧಾ ಗರಿ ನಿಧಮ, ಗರಿಸಧ || ಭಾರ ಕಳೆದ ಗುರು ಗೋವಿಂದ ವಿಠಲ 6 ಚಿಟ್ಟೆಸ್ವರ ರೀ, ಮರಿ ಮಪ | ನೀ ಪಮ ಪನಿ | ಸಾರಿಸನಿ | ಪಪ ಮಮ ರಿಸ |ರೀ ಪಮ ರಿಸ ನಿಸ ರಿಮಪಾ || ರಾಗ :ಪೂರ್ವಿಕಲ್ಯಾಣಿ :ಧಪಸಾ ನಿಧಪಮ | ಪಮಗರಿ ರಾಗ :ಮೋಹನ :ಸರಿಮಾ ಗರಿ ಸರಿಗಾ | ದಪಗರಿ ಸರಿ ಗಪದಸರಾಗ :ಮುಖಾರಿ :ರೀ ಸದಾ ಪ ದಪ ಗಾರಿಸ | ರಾಗ :ನಾಟಿ ಕುರಂಜಿ :ನಿಸ ಮಗ ಮನಿ ಧನಿ ಪದನಿಸ | ರಾಗ :ಸಾವೇರಿ :ಗರಿ ಸಧಾ ರಿಸ ಧಾ ಸ || ಧಾ ಗರಿ ನಿದಮ ಗರಿ ಸಧ
--------------
ಗುರುಗೋವಿಂದವಿಠಲರು
ಸರ್ಪಾದ್ರಿ ವಾಸ ವಿಠಲ | ಅರ್ಪಿಸುವೆನಿವಳಾ ಪ ಶೂರ್ಪಕರ್ಣನ ಪಿತಗೆ | ಸಖ ನೆನಿಪ ಹರಿಯೇ ಅ.ಪ. ನೊಂದು ಸಂಸಾರದಲಿ | ಬಂಧನವ ಕಳೆಯಲ್ಕೆನಂದ ನಂದನನನ್ನು | ವಂದಿಸುತ ಬಹಳಾಕಂದರ್ಪನುಪಟಳವೇ | ಛಂದದಿಂ ದೂರಿರಿಸಿನಂದಾದ್ರಿ ನಿಯಲ ತವ | ಪಾದಕಾಂಕ್ಷಿಪಳಾ 1 ಪಾದ | ಶತಪತ್ರಕೀವಾ 2 ಪತಿ ಪ್ರೀಯಾ 3 ಪತಿ ಕರ್ಮ | ತುಂಬಿಸೆಂದಿವಳಲ್ಲಿಪೊಂಬಸಿರ ವಂದ್ಯ ಮ | ದ್ಭಿಂಭ ಪ್ರಾರ್ಥಿಸುವೆ 4 ಭಾವದ್ರವ್ಯ ಕ್ರಿಯವು | ಈ ವಿಧಾದ್ವೈತತ್ರಯತೀವ್ರುಪಾಸನೆ ಪಲಿಸಿ | ಹೃದ್ಗುಹದಿ ನಿನ್ನಾಆವ ತವ ಭವ್ಯ ಸ | ದ್ರೂಪ ತೋರಿಸು ಎಂದುಓವಿ ಪ್ರಾರ್ಥಿಪೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು