ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವೀ ಸಲಹೆನ್ನನೂ | ತವ ಬಾಲಕನನೂ | ದೇವೀ ಸಲಹೆನ್ನನೂ ಪ ಕಾವ ನಿಜ ಸುಖವೀವ ಶಕ್ತಿಯೆ | ದೇವ ವಿಶ್ವೇಶ್ವರನ ಸುಪ್ರೀಯೆ ಅ.ಪ ಚಂಡನಾಡುತ ರಕ್ತಬೀಜರ | ಹಿಂಡಿ ರಕ್ತನುಂಡ ಶಂಕರೀ 1 ದುರಿತ ಹರೆ ಆರ್ಯಾ ಕಾತ್ರ್ಯಾಯನಿಯೇ | ಗೌರಿ ಹೈಮಾವತಿ | ಸುರಮುನೀ ಸುತೆ ಸರ್ವಮಂಗಲೆ | ಶರಣು ಶರ್ವಾಣಿಯೆ ರುದ್ರಾಣಿಯೆ 2 ಭವ ಸರ್ವ ಕಾರಣ ಭೂತೆ ಮುನಿ ಸುತೆ | ಸರ್ವ ಸೌಖ್ಯ ಸುಖ ಪ್ರದಾಯಕಿ 3 ಜಗದ್ಭರಿತೆ ಸದ್ಗುಣ | ಶುಭ ತತ್ವಾತೀತೆ ನಿರುಪಮ ಶಕ್ತಿ ದೇವತೆ | ಸೋತೆ ನೀ | ದಾರಿದ್ರ ದುಃಖ ವ್ರಾತವನು ಪರಿಹರಿಸಿ ರಕ್ಷಿಸೆ4 ತಂದೆ ತಾಯೆನ್ನ ಬಂಧು ಬಳಗಗಳೂ | ನಾರಾಯಣಿಯನೀ- | ಹೊಂದಿರುವ ತಾಪತ್ರಯವನಾ | ನಂದದಿಂದಲಿ ಪಾರಗಾಣಿಸಿ | ತಿಂದೆನ್ನನು ಸದಾನಂದನೆನಿಸುತ 5
--------------
ಸದಾನಂದರು
ಸುರತಟನೀಧರನರಸೀ |ಪೊರೆಪಾರ್ವತಿ ದೇವಿಯೇ |ಕರುಣಾಕರೇ ದುರಿತಹರೇ | ಶರಣರ ಸಂಜೀವಿಯೆ 1ಕಂಕಣಕರೆ ಕುಂಕುಮಧರೆ | ಪಂಕಜದಳ ನೇತ್ರೆಯೆ |ಶಂಕರಿ ಭವಬಿಂಕಹರೇ | ಕಿಂಕರನುತಿ ಪಾತ್ರೆಯೇ 2ಚಂಡಿಯೆ ಚಾಮುಂಡಿಯೇ | ಪ್ರಚಂಡಿಯೆ ಓಂಕಾರಿಯೆ |ಚಂಡನ ಖಳಮುಂಡನ ಶಿರÀ | ಖಂಡನೆ ಹ್ರೀಂಕಾರಿಯೇ 3ಜ್ವಾಲಿನಿ ಮಹಮಾಲಿನಿ ದಯೇ | ಶೀಲೆ ನೀ ಶರ್ವಾಣಿಯೆ |ಕಾಳಿನಿ ಮಹಾ ಕಾಳಿನಿರಣ| ಶೂಲಿನೀ ರುದ್ರಾಣಿಯೆ 4ಸುಂದರಿ ಗುಣಮಂಜರಿ ಪೂರ್ಣೇಂದು ಸಂಕಾಶಿಯೇ |ಚಂದದಿ ಗೋವಿಂದನ ದಾಸ| ವಂದಿತೆ ಅಘನಾಶಿಯೆ 5
--------------
ಗೋವಿಂದದಾಸ