ಒಟ್ಟು 13 ಕಡೆಗಳಲ್ಲಿ , 9 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ನವಗ್ರಹ ಸ್ತೋತ್ರ) ಸತ್ಕಟಾಕ್ಷವಿರಿಸು ದಕ್ಷನಖವಜ್ರಿರಿಪುಪಕ್ಷದಹಿಸು ವಿರೂಪಾಕ್ಷ ಶರಣು ಪಕ್ಷವೃತ್ವಯನ ಸಂವತ್ಸರಾಖ್ಯ ದಯಮಾಡು ಶರಣೆಂದು ನಮಿಪೆ ನಿನ್ನ 1 ತೇಜೊರಾಶಿಯಾಗಿ ಮೆರೆವ ಕಮಲ ಘೂಕ ತಸ್ಕರರ ಗಣವ ನಾದಿಪತಿ ಗ್ರಹರಾಜ ನಿನ್ನ ಪದವ ವ್ಯಾಧಿಗಳ ಪರಿಹರಿಸು ಪಾವನಾತ್ಮ ಸಲಹೆನ್ನ ನಿರ್ಮಲಾತ್ಮ2 ನೀರುಮರಬಳ್ಳಿಸಕಲೌಷಧಿಗಳ ತಾರೆಗೊಲಿದಾಕೆಯಲಿ ಬುಧನಪಡದೇ ರಾಶಿ ಸಂಚಾರ ಮಾಳ್ಪೆ ಮೋಹದ ಬಲೆಯ ನೀರಜಾಕ್ಷ ಸಮನೋಜ ಮಾದೇವಿಸಹಜ 3 ಗುರುಮಿತ್ರ ಸಜ್ಜನತ್ರ ವ್ಯಾಮೋಹಗೊಳಿಸದಿರು ದಂಡಪಾಣಿ ರಾಜಕರುಣಾ ಪಾತ್ರನೆ ಕಾಮಚಾರಜ ಬಹುವಿಧಾಮಯವ ಪರಿಹರಿಸಿ ನೀ ಮನೋಹರ್ಷ ಪಾಲಿಸು ಧೀರನೆ ಕಮನೀಯ ಕಾಂತಿ ಕುಹಕಜನವಾರಿ4 ಪದುಮಗಳಿಗೆರಗುವೆನು ಪಾಲಿಸೆಂದು ಮಧು ವಿರೋಧಿಯ ಮನೋಭವನಣುಗ ಮಾತಿನಲಿ ಚದುರತೆಯನಿತ್ತು ಚಾತುರ್ಯಗೊಳಿಸು ಸದಯಾವಲೋಕ ನೀನೆಂದು ತಿಳಿದೆ ಮಾತ್ಸರ್ಯವೆಲ್ಲಬಿಡಿಸು ಪಾದ ಸ್ವರ್ಣವರ್ಣ ಸುಲಲಿತಾಂಗ 5 ಮಂತ್ರಜ್ಞ ಚೂಡಾಮಣಿ ಸದುಪಾಯಗಳ ತಿಳಿಸಿ ಸುರರ ಕಾವ ಉದಿತನಾಗಿರೆ ಸಕಲ ಬುಧರಿಗನುಕೂಲ ನಿತ್ಯದಲಿ ನಿಖಿಳ ಗ್ರಹೋನ್ನತ ಶಕ್ತಿಯೇ ಸಕಲಾರ್ಥ ಪಡದೀವನೆ ನಿನ್ನ ನಮಿಸುವೆನು ನೀನೊಲಿದು ಸಲಹೊ6 ಭಾರ್ಗವನೆ ಭಜಿಪೆ ನಿನ್ನ ತಪ್ಪು ಮರತು ಮುಖ್ಯವೆಂಬರ್ಥವರಿತು ಸೇವೆಗನುಕೂಲನಾಗಿರುವೆ ಕುರಿತು ಕಾಪಾಡು ಕರುಣ ವಹಿಸು7 ಮುನಿಸದಿರು ನಮ್ಮಮೇಲೆಂದೆಂದಿಗು ನಿನ್ನ ಘನವ ತ್ಯಜಿಸು ಭಂಗ ಶಕ್ತರಹರೆ ಪೇಳು ಮನ್ನಿಸುವ ಮಮತೆ ತಾಳು ಕನಸಿಲಾದರು ಕ್ರೋಧವಿಡದೆ ಕಾಪುವುದೆಂದು ನಿರುತದಿಂ ಕೈ ಮುಗಿದು ಬೇಡಿಕೊಳುವೆ 8 ವೀರ್ಯ ವಹಿಸಿದ ರಾಹು ಕೇತುಗಳನು ಶೌರ್ಯಾದಿಗಳ ದಯ ಮಾಡಿರಿ ಧಾರವೆಂದಿತ್ತಹರ್ಯಜ್ಞೆಯಿಂದ ನಾರ್ಯತನವೇನಿವರೊಳಿದ್ದರರಿತು ಮಂಗಳವಿತ್ತು ಸೌಖ್ಯ ಪಾಲಿಸಲಿ9
--------------
ತುಪಾಕಿ ವೆಂಕಟರಮಣಾಚಾರ್ಯ
ಇಂದಿರಾ ಕಾಂತನೆ ಪೊರೆ ಶ್ರೀ ಹರೇ ಪ ನಂದ ನಂದನ ದಿವ್ಯ ಸುಂದರ ಮಂದಾರ ಅ.ಪ. ವಲ್ಲವೀ ಕುಚತಟ ಪಲ್ಲವ ಕುಂಕುಮ ಚೆಲ್ವಕಪೋಲನೆ ಸಲ್ಲಲಿತಾಂಗನೆ 1 ಮನ್ನಿಸು ಭಾಸುರ ರೂಪನೆ 2 ಬಾಲಕ ಧ್ರುವನುತ ಲೀಲಾವಾಮನ ರೂಪ ಬಾಲ ಗೋಪಾಲ ಭೂಲೀಲಾ ವಿಹಾರಿಯೆ 3 ಚಾಪಾ ಪಾಪಾಳಿ ಖಂಡನ ಭೂಪ ನಿರ್ಲೇಪನೆ 4 ಕಂಸವಂಶಾಂತಕ ವಂಶವಿನೋದಿಯೆ ಅಂಶುಕ ಭಾಸುರ ಧೇನುಪುರಾಧೀಪಾ 5
--------------
ಬೇಟೆರಾಯ ದೀಕ್ಷಿತರು
ಏನೆ ಮನವಿತ್ತೆ ಲಲಿತಾಂಗಿ ಅಸ-ಮಾನ ಗೋವಳ ಕುಲವಿಲ್ಲದವನೊಳು ಪ ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ 1 ಮಗಳ ಮಗಗೆ ಮೈದುನನಾಗಿ ಮಾವನಜಗವರಿಯಲು ಕೊಂದ ಕುಲಗೇಡಿ ಗೋವಳ 2 ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದಚಿತ್ತ ಒಲಿದು ಚೆನ್ನ ಆದಿಕೇಶವನೊಳು 3
--------------
ಕನಕದಾಸ
ಕಂಡೆ ಕಂಡೆ ಕೃಷ್ಣನ ಕಂಡೆ ಕಂಡೆ ಪ ಕಮಲ ಪುಂಡರೀಕ ಭವಾದಿ ಪೂಜ್ಯನ ದಂಡ ಪಾಶಾನ್ವಿತನ ಕೋಟಿ ಮಾರ್ತಾಂಡಸಮ ಸಂಕಾಶದೇವನ ಅ ಅರುಣ ಪಂಕಜದಿರವ ಸೋಲಿಪ ಚರಣತಳಿನಖ ಬೆರಳ ಪಂಕ್ತಿಯು ಪರಡು ಬಣ್ಣದ ಪಿರಡಿಜಂಘೆಯು ಉರದಿ ಜಾನುಗಳೆರಡು ದರ್ಪಣ ತೆರದಿ ಶೋಭಿಸೆ ಕರಿಕರೋರುಗಳು ತರು ನಿತಂಬದಿ ಮೆರೆವ ಪೀತಾಂ ಬರದ ನಿರಿ ಸಡಗರದಿ ದೈತ್ಯರ ಮರುಳುಗೊಳಿಸಿದ ಪರಮ ಪುರುಷನ 1 ನಳಿನನಿಭ ಪೊಕ್ಕಳು ತನೂದರ ವಳಿಗಳತ್ರಯ ಚೆಲುವ ವಕ್ಷ ಸ್ಥ್ಥಳದಿ ಪದ್ಮಾಲಲನ ಕಾಂಚನ ಗಳದ ರೋಮದ ಕಲಿತ ಭುಜಯುಗ ಕುಲಿಶ ಪಲ್ದುಟಿಗಳು ಪ್ರವಾಳ ವರ್ತುಳ ಕ ಪೋಲ ಪರಿಮಳ ಚಂಪಕದಳದ ನಾಸಿಕ ಜಲಜಲೋಚನ ವಿಲಸಿತ ಭ್ರೂ ತಿಲಕ ಫಣಿಯನು 2 ಮಕರ ಕುಂ ಡಲವು ಮೂಗುತಿ ಎಳೆನಗೆಯ ಮೊಗ ಹುಲಿಯುಗುರು ಥಳಥಳಿಪ ಕೌಸ್ತುಭ ಬಲವು ಪದಕಾವಳಿ ಸರಿಗೆ ಶ್ರೀ ತುಲಸಿ ವನಮಾಲ ಸಗ್ವಲಯ ರುಳಿ ಬಿಂ ದಲಿ ರಸಾದ್ಯೆಳದಳ ಯುಗಳ ಕರ ತಳನಾಗೋ ಮಕ್ಕಳೊಡನೆ ಗೋ ಕುಲದಿ ಚರಿಸಿದೆ ಲಲಿತಾಂಗನೆ 3 ನೇಣು ಕಡಗೋಲು ಪಾಣಿಪೃಥಗಳ ಶ್ರೇಣಿಯಲಿ ಒಡ್ಯಾಣ ನೂಪುರ ಪ್ರಾಣಮುಖ್ಯರು ಕಾಣದತಿ ಕ ಲ್ಯಾಣಗುಣಗಣ ಶ್ರೇಣಿವಂತನ ಮಾಣದನುದಿನ ಸಾನುರಾಗದಿ ಧೇನಿಸುವರ ಮನೋನುಕೂಲನ ಬಾಣಗುರುವಿನ ಕಾಣೆನೆನಿಸಿದ ಜಾಣ ಪರಮ ಪುರಾಣ ಪುರುಷನ 4 ಭೂತಕೃತ್ಯದ್ಭೂತಿದಾಯಕ ವೀತ ಶೋಕ ವಿಧಾತಮರ ಪುರು ಹೂತ ಮುಖವಧ್ಯಾತ ಖರಮುರ ಸೂತಗತಸಂಕೇತ ತ್ರಿಗುಣಾ ತೀತ ನಂದನೀಕೇತನದಿ ನವ ನೀತ ಸವಿದ ಪುರಾತನ ಜಗ ನ್ನಾಥ ವಿಠಲನ 5
--------------
ಜಗನ್ನಾಥದಾಸರು
ನಡಿ ನೀರೇ ಪೋಪಾ ದೇವಿ ಇದ್ದೆಡೆಗೆ| ಕಡು ಕೋಪವ್ಯಾಕ ಶ್ರೀರಮೆ ಕೂಡ ಎನಗೆ ಪ ಫುಲ್ಲ ಲೋಚನೆ ಕುಂದರದನೆ ಸುಫಣಿ ವೇಣಿ| ಮಲ್ಲಿಕಾ ಮಂದಸ್ಮಿತೆ ಚಲ್ಪಕದಪು| ಬಿಲ್ಲು ಕಾಮನ ಸೋಲಿಪ ಭ್ರೂಲತೆಯುಳ್ಳ| ಸಲ್ಲಲಿತಾಂಗಿಯಾವಾಗ ಕಂಡೆಪೆನೆ 1 ಹುಣ್ಣಿಮೆ ಚಂದ್ರನ ಮಂಡಲ ಪೊಳೆವಾ|ಪೊಂ| ಬಣ್ಣವದನೆ ಮಹಾಸಿಂಹನ ಜರೆವಾ| ಸಣ್ಣ ನಡುವಿನಿಂದೊಪ್ಪುವ ಸಿರಿಯನು| ಕಣ್ಣಾರೆನೋಡಿ ಮತಾಡುವೆ-ನೇಳೆ 2 ಬರಬಾರದು ದೇವಿಯಗಲಿ ಬಂದರ| ಸ್ಥಿರವಾಗದು ಅರಫಳಿಗೆನ್ನ ಮನಸು| ಗುರುಮಹಿಪತಿ ಸುತ ವರದ ದೇವತೆಯಾಗಿ| ಧರೆಯೊಳು ಮೆರವಾ ಶ್ರೀ ಲಕ್ಷೀಯ ತೋರೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಲಿನಲಿದರು ದ್ವಾರಕಾಪುರದಿ ನಳಿನನಾಭ ಶ್ರೀ ರುಕ್ಮಿಣಿ ಕಲ್ಯಾಣದಿ ಪ. ಜಲರುಹಲೋಚನೆ ಚೆಲುವೆ ಶ್ರೀ ರುಕ್ಮಿಣಿ ಸಲಲಿತಾಂಗನ ನೋಡಿ ವಲುವಿನಲಿ ಕುಳಿತಿರೆ ಅ.ಪ. ಅಂಬರದಲಿ ಭೇರಿ ವಾದ್ಯಗಳೆಸಗೆ ತುಂಬುರು ನಾರದರು ಗಾನವ ಪಾಡೆ ಸಂಭ್ರಮದೊಳು ಮಾಂಗಲ್ಯ ಬಂಧನ ಮಾಡೆ ಅಂಬುಜೋದ್ಭವ ರುಕ್ಮಿಣಿ ಕಂಠದೊಳು 1 ವಿಪ್ರರು ವೇದ ಮಂತ್ರವ ಪಠಿಸೆ ಸ್ವ ಪ್ರಕಾಶ ರುಕ್ಮಿಣಿ ಕರಪಿಡಿಯೆ ಕೃಷ್ಣಾ ಅಪ್ರಮೇಯನೆಂದು ಸ್ತುತಿ ಪಾಠಕರು ಪೊಗಳೆ ಕ್ಷಿಪ್ರದಿ ವಿಪ್ರರಿಗೆ ದಕ್ಷಿಣೆ ತಾಂಬೂಲವೀಯೆ 2 ದೇವಕಿ ವಸುದೇವನಿಗ್ಹರುಷವನಿತ್ತು ದೇವ ಶ್ರೀ ಶ್ರೀನಿವಾಸ ಭಕ್ತ ಜನಾಶ್ರಿತ ಕಾವ ಸಕಲ ಜೀವರ ಹೃದಯನಿವಾಸ ದೇವ ಯಶೋದೆ ನಂದ ಕಂದನ ನೋಡಿ 3
--------------
ಸರಸ್ವತಿ ಬಾಯಿ
ನಿತ್ಯ ತೃಪ್ತಾ ಅನ್ಯರಿಂದಲಿ ಎನಗೆ ಏನು ಪ್ರಯೋಜನವೊ ಪ ದರುಶನಕೆ ಬಂದವ ನಾನಲ್ಲವೆಂದು ನಾನಂದು ಹರಿ ನಿನಗೆ ನುಡಿದದ್ದು ಮನಸ್ಸಿನೊಳಗೆ ಇರುತಿಪ್ಪದೇನಯ್ಯಾ ಬಿನ್ನಪವೆ ಲಾಲಿಸು ಶರಣ ಜನರ ಅಭಿಪ್ರಾಯವೊಂದು ಬಗೆ ಇಪ್ಪದೊ1 ನಿರುತ ವ್ಯಾಪ್ತತ್ವ ಕರುಣತ್ವ ಅಣುಮಹತ್ತು ಸರುವ ಚೇತನ ಜಡ ಮತ್ತೆ ಮತ್ತೆ ಪರಿ ಪರಿಯಿಂದಲಿ ನಿನ್ನಲಿ ಉಂಟು ನಿನ್ನ ವರ ಮೂರ್ತಿಗಳ ಪೇಳದೆ ಇದಷ್ಟು ವಿನಯದಲಿ 2 ಧ್ಯಾನಕ್ಕೆ ನೀನು ಪ್ರಧಾನನೆಂದು ನುಡಿದೆ ಅಪ್ರಮೇಯ ಕ್ಷೋಣಿಜನಕಿಂತ ದ್ವಾರದವರು ವೆಗ್ಗಳವಾಗೆ ಏನೆಂಬೆ ತಿರುವೇಂಗಳೇಶ ನಿನ್ನಾಟಕ್ಕೆ 3 ಮಿಕ್ಕ ಮಂದಜನಕೆ ನಿನ್ನ ಭಕುತರ ಮೇಲೆ ಭಕುತಿ ಪುಟ್ಟುವುದಕ್ಕೆ ನಾ ಪೇಳಿದದ್ದು ಅಕಟಕಟ ನಿನ್ನ ದೊರೆತನಕೆ ಏನೆಂಬೆ ತಕ್ಕ ಮಾತುಗಳೇನೊ ಆಲೋಚಿಸಿ ನೋಡೆ 4 ಹೊನ್ನು ಹಣ ತೂಗಬೇಕಾದರೆ ಮೊದಲಿಗೆ ಚಿನ್ನ ಹಾಕುವರೇನೊ ಚಿನ್ಮಯರೂಪ ಮುನ್ನೆ ನಿನ್ನವರ ದರುಶನವಾದ ಮೇಲೆ ಪಾ ವನ್ನ ಶಾರೀರನೆ ನಿನ್ನ ಕಾಂಬುವದುಚಿತ 5 ಜರೆಮರಣರಹಿತ ಸುಜನರ ಪರಿಪಾಲಾ ನಿ ನಿತ್ಯ ವಜ್ರಪಂಜರಾ ಜರಗೆ ವರವಿತ್ತ ದನುಜರ ವಂಶನಾಶಾ ನಿ ರ್ಜರ ನದಿ ಜನಕಾಂಬುಜ ರವಿ ನಯನ ದೇವಾ 6 ಸ್ಥೂಲಮತಿಯಿಂದ ಪೇಳಿದೆನೆಂದು ಚನ್ನಾಗಿ ಲಾಲಿಸು ಲಲಿತಾಂಗಿ ಲಕುಮಿ ರಮಣಾ ನೀಲಗಿರಿ ನಿವಾಸ ವಿಜಯವಿಠ್ಠಲ ವೆಂಕಟವಾಲಗವ ಕೈಗೊಳ್ಳು ಎನ್ನ ಯೋಗ್ಗಿತವರಿತು7
--------------
ವಿಜಯದಾಸ
ಪಂಕಜನಯನ ಪಾವನ್ನ ಸುಖ ಸಂಕೂಲ ಮೂರುತಿ ಲಾಲಿಸು ಚಿನ್ನಾ ವೆಂಕಟ ನಿಲಯಾ ಹಸೆಗೇಳು ಪ ಕಮಲ ಸಂಭವಗಿತ್ತ ಕಮನೀಯ ಕಾಯ ಸುಮನಸ ಜನತೆ ಸುಧೆಯನುಣಿಸಿ ಭೂಮಿ ಚೋರನ ಕೊಂದ ಮುನಿಗಳೊಡೆಯ ವಿಮಲ ಮೂರುತಿ ಹಸೆಗೇಳೋ 1 ನರಹರಿ ರೂಪದಿ ಬಂದು ದೈತ್ಯ ನುರವ ಬಗೆದು ವಟು ರೂಪದಿ ನಿಂದ್ಯೋ ದುರುಳ ರಾಯರನೆಲ್ಲ ಕೊಂದು ಲಂಕಾ ಪುರದಾಧಿಪತಿಯ ಸದೆದ ದಯಸಿಂಧೋ ಕರುಣಾಸಾಗರನೆ ಹಸೆಗೇಳೋ 2 ಯದುಜನೆನಿಸಿ ಎಲ್ಲಾ ಖಳರ ಜಯಿಸಿ ಸುದತೇರ ವ್ರತವ ಕೆಡಿಸಿದತಿ ಧೀರ ಕುದುರೆನೇರಿದ ಮಾಧಾರಾ ನಿನ್ನ ಅದುಭೂತ ಬಲ್ಲಿದಕ್ಕೆಣೆಗಾಣೆನುದಾರಾ ಉದಧಿ ಶಯನನೆ ಹಸೆಗೇಳು 3 ಅಪ್ರತಿಮಲ್ಲ ಅನಂತಾ ಸುಹಜ ನ ಪ್ರೀಯಾ ಸುರಪತಿ ಸಿರಿದೇವಿ ಕಾಂತಾ ಸ್ವ ಪ್ರಕಾಶಿತನೆ ಧೀಮಂತಾ ಅತಿ ಕ್ಷಿಪ್ರದಿ ಭಕ್ತರ ಪೊರೆವತಿ ಶಾಂತಾ ಸುಪ್ರದಾಯಕನೆ ಹಸೆಗೇಳೋ 4 ಪರಮ ಪುರುಷ ಪುಣ್ಯನಾಮಾ ಪರ ಪುರಷೋತ್ತಮ ಪರಿಪೂರ್ಣ ಕಾಮಾ ಶರಣರ ಭವವನ ಧೂಮಾ ಕೇತು ಕರಿಯ ಬಲ್ಲೆನೆ ಕಾಮಿತರ ಕಲ್ಪದ್ರುಮಾ ಕರಿರಾಜವರದಾ ಹಸೆಗೇಳೋ 5 ನಿತ್ಯ ಅತ್ಯಂತ ಮಹಿಮನೆ ಆಪ್ತ ಜನರ ಕ್ಲೇಶ ಕಳೆವ ಸುಕೀರ್ತೀ ಚಿತ್ತಜ ಜನಕ ಹಸೆಗೇಳೋ 6 ಕ್ಷೀರಾಬ್ಧಿವಾಸಾ ಚಿನ್ಮಯನೆ ನಿನ್ನ ಪಾರ ಮಹಿಮೆ ತಿಳಿವವನಿಹನೆ ಮೂರು ಗುಣ ರಹಿತನೆ ದೋಷ ದೂರ ವಿದೂರ ಶಿರಿದೇವಿಯೊಡನೆ ಬಾರಯ್ಯ ಹಸೆಯ ಜಗುಲಿಗೆ7 ವ್ಯಾಳಮರ್ದನನೆ ವಿಗಮನಾ ತ್ರಿ ಶೂಲ ಪಾಣಿಯ ಓಡಿಸಿದ ಖಳನಾ ಸೋಲಿಸಿದಪ್ರತಿಸುಗುಣ ಹೇಮ ಲಲಿತಾಂಗ ಹಸೆಗೇಳೋ 8 ಅಗಣಿತ ಜೌದಾರ್ಯ ಸಾರಾ ನಿನ್ನ ಪೊಗಳ ಬಲ್ಲೆನೆ ಪಾತಕದೂರಾ ನಗರಾಜನುತ ನಿರಾಧಾರ ಭವಾದಿಗಳಿಂದ ವಂದ್ಯನೆ ನವನೀತ ಚೋರ ಜಗನ್ನಾಥ ವಿಠಲ ಹಾಸೆಗೇಳೋ9
--------------
ಜಗನ್ನಾಥದಾಸರು
ಭಜಿಸು ಮನವೆ ಶ್ರೀ ರಂಗಯ್ಯನಾ ಪ ಇಂದಿರಾ ನನರವಿಂದ ಭ್ರಮರನಾ| ಮಂದರ ನಗಧರ ನಂದ ನಂದನನಾ1 ಫುಲ್ಲನಯನ ಸಿರಿವಲ್ಲಭ ದೇವನಾ| ಮಲ್ಲ ಚಾಣೂರರಿಪು ಸಲ್ಲಲಿತಾಂಗನಾ 2 ಪನ್ನಗ ಶಯನಾ| ಸನ್ನುತ ಮಹಿಪತಿ ಚಿನ್ನನೊಡೆಯನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಂಗ ಬಾರೋ ರಂಗ ಬಾರೋ ರಂಗ ಬಾರೋ ಶ್ರೀರಂಗ ಬಾರೋ ಪ ತುಂಗ ಕೃಪಾಂಬಿಕ ಮಂಗಳದಾಯಕ ಅ.ಪ ಮೆಲ್ಲಮೆಲ್ಲನೆ ಬಾ ಮೆಲ್ಲಡಿಯಿಡು ಬಾ ಮೆಲ್ಲುಲಿಯುಲಿ ಬಾ ಮೆಲ್ಲು ಬೆಣ್ಣೆಯ ಬಾ ಸಲ್ಲಲಿತಾಂಗ ಬಾ ಪಲ್ಲವಾಧರ ಬಾ ಫುಲ್ಲಲೋಚನ ಬಾ ಚೆಲ್ವಮೂರ್ತಿಯೆ ಬಾ1 ಗಂಗೆಯ ಜನಕ ಬಾ ಅಂಗಜಪಿತನೆ ಬಾ ಮೂರ್ತಿ ಬಾ ಹೊಂಗೊಳಲೂದು ಬಾ ಸಂಗೀತಲೋಲ ಬಾ ಮಾಂಗಿರಿಯರಸ ಬಾ ಬಾಬಾರೊಬಾರೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಗಣಪತಿಗೆರಗಿ ಶಾರದೆಯನುರಾಗದಿಂದಲಿ ಸ್ಮರಿಸಿ ಶ್ರೀಗಿರಿಜಾತೆಯಲೋಕೈಕ ಮಾತೆಯ ಬೇಗದಿ ಹಸೆಗೆ ಕರೆದ ಸುಪದಂಗಳಾ ರಾಗದಿ ಪಾಡಿ ಪೊಗಳುವೆ 1 ಮಿಸುನಿಯ ಮಂಟಪದಿ ರಾರಾಜಿಪಪೊಸಪಸೆವಣೆಯನಿಟ್ಟು ಪೊಸದೇವಾಂಗವ ಮೇಲೆಪಸರಿಸಿ ಹಾಕುತ ಶಶಿಮುಖಿಯರು ನೆರೆದೊಂದಾಗಿ ಪಾಡುತ ಕುಶಲದಿ ಹಸೆಗೆ ಕರೆದರು 2 ಕಡೆಯಾಣಿಯ ಚಿನ್ನದ ಜಗಜ್ಯೋತಿಯಎಡಬಲದೊಳಗಿಟ್ಟು ಉಡುರಾಜಮುಖಿಯರುಮೃಗರಾಜಕಟಿಯರು ಕಡುಬೆಡಗಿಂದಪಾಡುತ ನಲಿದಾಡುತ ಮೃಡನರಸಿಯ ಹಸೆಗೆ ಕರೆದರು 3 ಚಿನ್ನದಪಿಲ್ಲಿಮಿಂಚು ಉಂಗುರಗಳುರನ್ನದಲ್ಲಣಿವೆಟ್ಟು ಉನ್ನತವಾದ ಕಾಲ್ಗಡಗಸರ್ಪಣಿಗೆಜ್ಜೆಯನ್ನು ತಳೆದ ಪಾದಪದುಮದಿಂದೊಮೈವ ಪೂರ್ಣೇಂದು ಮುಖಿಯರು || ಹ 4 ವರರತ್ನಖಚಿತವಾದ ಗೆಜ್ಜೆಮೊಗ್ಗೆಯಸರವೊಡ್ಯಾಣವು ಡಾಬು ಮಿರುಪಮಂಡೆಳೆಯುಡುದಾರ ಕಿಂಕಿಣಿಗಳ ಸರಫಲಿರೆನೆ ಚೆಂಗಾವಿಸೀರೆಯನುಟ್ಟು ಗಿರಿರಾಜತನುಜೆ || ಹ 5 ಚಳಿಕೆ ಹಿಂಬಳೆದೊರೆಯ ಚೂಡಾಕಟ್ಟುಬಳೆಕಂಕಣ ಕಡಗ ಪೊಳೆವ ಮುಂಗೈಯಮುರಾರಿ ಮುತ್ತಿನದಂಡೆ ಥಳಥಳಿಸುವಬೆರಳುಂಗುರಗಳನಿಟ್ಟು ಲಲಿತಾಂಗಿ ಬೇಗ | ಹಸೆಗೇಳು 6 ವರನಕ್ಷತ್ರದ ಸರವು ಏಕಾವಳಿ ಸರಗುಂಡಿನಸರವು ಮಿರುಪಬಿಲ್ಸರ ಚಳ್ಯಸರ ಚಕ್ರಸರಗೋಧಿಸರ ಮೋಹನಮುತ್ತಿನ ಸರಗಳನಿಟ್ಟವರಕಂಬುಕಂಠಿ ಬೇಗ | ಹಸೆಗೇಳು 7 ಅಣಿ ಮುತ್ತಿನ ಮೂಗುತಿ ಐದೆಳೆಯ ಕ-ಟ್ಟಾಣಿ ಕಾಶಿಯ ತಾಳಿ ಮಾಣಿಕಮಯಬತಿಮಲಕು ಅಡ್ಡಿಕೆ ಮಲಕಾಣಿ ಮುತ್ತಿನಬಟ್ಟುಮಲಕು ಸರಿಗೆಯಿಟ್ಟ ಏಣಾಕ್ಷಿ ಬೇಗ | ಹ 8 ತೊಳಪ ಮುತ್ತಿನಮಾಲೆ ಸರ್ಪಣಿಯಂಥಳಥಳಿಪ ವಜ್ರದವಾಲೆ ಚಳತುಂಬು ಮೀನ ಬಾ-ವಲಿ ಹಂಸೆಗಿಳಿಯ ಬಾವಲಿಯು ಹೊನ್ನೂಲುಕುಪ್ಪಿನವೆಂಟ್ಟೆಯವಿಟ್ಟ ಕಲಹಂಸಗಮನೆ | ಹ9
--------------
ಕೆಳದಿ ವೆಂಕಣ್ಣ ಕವಿ
ಶ್ರೀನಾಥ ಶ್ರೀನಾಥ ಶ್ರೀನಾಥ ಮೋಹಿನೀ ರೂಪ ತಾ ತಾಳಿದಾನೆ ಸುಕಲಾಪ ತಾನೋಡಿಸುವುದು ಹೃತ್ತಾಪ ವನಂಬೆನೆ ಹರಿಯ ಪ್ರತಾಪ ಪ ಬಂಗಾರದ ಲತೆಯಂತೆ ಬಳುಕುವಳು ಬಾಜು ಬಂದಿಗೆ ಗೊಂಡೆಗಳ ಕಟ್ಟಿಹಳು ಮುಂಗಾಲಿಲೆ ನಿರಿಗಿಗಳ ಚಿಮ್ಮುವಳು ಮೋಹನ ಮಾಲೆಗಳ ಕಟ್ಟಿಹಳು ಕುಂಭ ಕುಚದ ಭಾರಕ್ಕೆ ತಡಿಯಳೂ ತುದಿಬೆರಳಲಿ ಗಲ್ಲವನೊತ್ತಿಹಳು ಕೇಸರಿ ಗಂಧ ಹಚ್ಚಿಹಳು ಹೊಂಗ್ಯಾದಿಗೆ ಪೋಲುವ ಮೈಬಣ್ಣ ಹೊಮ್ಮಸದಲಿ ಹೋಲುವ ಈ ಹೆಣ್ಣು ಹಿಂಗಡೆಯಲಿ ವರ ಹೆರಳು ಭಂಗಾರ ಹಿಮ್ಮಡಿ ಬಡಿಯೋದು ಸರ್ಪಾಕಾರ ಭಂಗಿಸುವಳು ಬಹು ದೈತ್ಯರ ಹೃದಯ ಬಹು ವಿಲಾಸದಿ ತೋರ್ಪಳು ಸಖಿಯ ಅಂಗಜದರು ಗಂಧಕೆ ಅಳಿವೃಂದ ಆಡುತಲಿಗೆ ಝೇಂಕಾರಗಳಿಂದಾ ಸಂಗಡನೆರದ ಸುರಾಸುರರಿಂದ ಸತಿ ಚಲುವಿಂದಾ ಮಂಗಳಮುಖಿ ನಮ್ಮಂಗಳ ಮೋಹಿಸಿ ಭಂಗನ ಪಡಿಸುವಳೈ ತ್ರಿಜಗವ ಜಗಂಗಳ ಪಾಲಿಸುವಳು | ಮನ ಸಂಗಡ ಅಪಹರಿಸುವಳು | ಜಡ ಜಂಗಮಲಿಗೆ ಬಹು ಪ್ರೀತ್ಯಾಸ್ಪದಳು ಸಾರಂಗಿ | ಸಾರಂಗಿ | ಸಾರಂಗೀ ಸಾಂಬಮದ ಭಂಗಿ | ಬಹಳ ಸುಖಸಂಗಿ ಸುಂದರಿ ಲಲಿತಾಂಗಿ | ಮೋಹನಾಪಾಂಗೀ ಬಡು ಹೆಂಗಲ್ಲ ಈಕೆ ಬಹುಭಂಗ ಬಡುವಿರಿ ಜ್ವಾಕೆ || ಶ್ರೀನಾಥ || 1 ಕನ್ನಡಿಯಂದದಿ ಪೋಲುವ ಕಪೋಲ ಕರ್ಪೂರ ರಂಜಿತ ವರ ತಾಂಬೂಲ ಕಣ್ಣಿಗ್ಹಚ್ಚಿಹಳು ಕನಕದ ಕೋಲಾ ಕಾಮಿನಿಯಂದಡಿ ತೋರ್ಪಳು ಜಾಲಾ ಬಿನ್ನುಡಿ ಹಾಕಿದ ಚಂದ್ರದ ಕುಪ್ಪುಸ ಚಪಲಾಕ್ಷಿಯ ನೋಟದ ಬಲು ರಭಸಾ ಕರ್ಣಾಯತ ನೇತ್ರಗಳ ವುಲ್ಲಸಾ ವುನ್ನಂಕಾ ನಾಶಿಕದ ಬುಲಾಕು ವಜ್ರಮಯದ ವರಮಖರೆದ ಬೆಳಕು ಕರ್ಣದಿ ರತ್ನಖಚಿತ ತಟಾಂಕಾ ಕುಸುರು ಹಚ್ಚಿದ ಬಾಹುಲಿಗಳ ಬಿಂಕ ಸಣ್ಣ ನಡುವಿನೊಯ್ಯಾರದ ನಲ್ಲೆ ಸರಸಿಜನಾಭನ ಸೃಷ್ಟಿ ಇದಲ್ಲೆ ಬಣ್ಣಿಸಲಳವಲ್ಲವು ಸೌಂದರ್ಯ ಬಿಡಿಸುವುದು ಕೇಳ ಮುನಿಗಳ ಧೈರ್ಯ ಬೆಣ್ಣೆಯಂತೆ ಮೃದುವಾದ ಶರೀರ ಭಾಗ್ಯಹೀನರಿಗೆ ಇದು ಬಲುದೂರಾ ಕನ್ನೆ ಶಿರೋಮಣಿ | ಕಾಮನ ಅರಗಿಣಿ ಕೌಸ್ತುಭಮಣಿಗಳ ಹಾರೇ ಸುವರ್ಣವರ್ಣ ಸುಕುಮಾರೇ ಮೋಹನ್ನರಸನೆ ಗಂಭೀರೇ ಮೋಹನ್ನೆ ಮಧುರ ಮಧುರಾಧರ ಮಂಜುಳ ವಕುಜಲರೆ ಬಹೋಚ್ಚಧರೆ ಛÅಪ್ಪನ್ನ ಛಪ್ಪನ್ನ ದೇಶಗಳು ಚಲುವರಿದ್ದರೂ ಚಪಲಾಕ್ಷಿಗೆ ಸಮರಾರೇ ಗತ ಪುಣ್ಯದಿಂದ ಕೈಸೇರುವಳಲ್ಲದೇ ಕಾಮಾಂಧsÀರಿಗತಿ ದೂರೇ ಈ ಹೆಣ್ಣು | ಈ ಹೆಣ್ಣು | ಈ ಹೆಣ್ಣು ಸುರಾಸುರರನ್ನೆ ಮೋಹಿಸಳು ಚನ್ನ ಮನಕೆ ತರಳಿನ್ನ ಬಿಡು ವಿಷದ್ಹಣ್ಣು ಅಪೇಕ್ಷಿಸೆ ಮಣ್ಣು ಕೂಡಿಸುವಳು ತನ್ನ ಜನರಿಗಮೃತಾನ್ನ ಕೊಡುವಳು ಮಾನ್ಯಳು ಪರಮಸೋನ್ಯಳು | ಸುಗುಣ ಅರಣ್ಯ ವಿನಾಶೇ ಬ್ರಹ್ಮಾಂಡಜಾದ್ಯಂಗೀತೇ || ಶ್ರೀನಾಥ || 2 ಹುಡುಗಿ ನೋಡು ಹೊಸ ಪರಿಯಾಗಿಹಳು ಹದ ಮೀರಿದ ಯವ್ವನದಿ ಮೆರೆವಳು ಅರಳು ತುಂಬಿಹಳು ಮಂದಸ್ಮಿತದಲಿ ಮೋಹಿಸುತಿಹಳು ಬೆಡಗಿನಿಂ ನುಡಿಯ ಸವಿಯ ತೋರುವಳೂ || ಬಹು ವಿಧದಾಭರಣಗಳನ್ನಿಟ್ಟಹಳು ನಡಿಗಿಗಳಿಂದ ನಾಚುತ ಹಂಸ ನವಮಣಿ ಚಂದ್ರರ ಕೆಡಿಸಿತು | ನಂಬೆ ಜಡಿತ ಮುತ್ತಿನ ತಾಯಿತ ಕಠಾಣೀ ಜಗವನು ಮೋಹಿಸುವಳು ಸುಶ್ರೋಣೀ ಬಿಂಕದ ನುಡಿ ಸೊಬಗಿನ ಚಂದಾ ಅಡಗಿದವೆ ಪಿತಭೃಂಗಗಳಿಂದಾ ಹಿಡಗಿ ಮರಗಿ ಮಧ್ಯಶಮನ ಮರಗೀ ಕೇಸರಿ ಬಹು ಸೊರಗೀ ಉಡುಪತಿ ಕೋಟಿ ಪ್ರಭ ಧಿಕ್ಕಾರಾ ಉಲ್ಲಾಸದಿ ಮನ ಮುಖ ಚಂದಿರಾ ನಡಿಗಗಳಿಂದೆನೆ ರಾಜಿಸುತಿ ಹೋದೆ ನವರತ್ನದಯದೆ ಮಯದ ಫಣಿಕಟ್ಟು ಮೇಲ್ಪೊಡವಿವೊಳಗೆ ಪಡಿಗುಣಕ ಕಡಿಯಿಲ್ಲಾ ಸುಳ್ಳುನುಡಿಯಿಲ್ಲಾ ಯೆನ್ನೊಡೆಯಾ ಶ್ರೀ ವಿಜಯ ವಿಠ್ಠಲನಲ್ಲದೆ ಎಲ್ಲಿಂದ ಬಂದಳೋ ಕೆಳದೀ || ಶ್ರೀನಾಥ || 3
--------------
ವಿಜಯದಾಸ
ಸಖಿ ಕೇಳೇ ಇನ್ನು ಹರುಷದ ಮಾತಾ| ಸಕಲ ಜನರಿಗೆ ಆನಂದ ವೀವಾ| ಪ ಇಂತೆಂದು ಹರಿಯು ನಾನಾಪರಿ ವಿರಹದ| ಸಂತಾಪ ಮಾತವ ನುಡಿಯಲು ಕೇಳಿ| ಅಂತರಂಗದ ಕೋಪವಬಿಟ್ಟು ಎದ್ದು|ಅ| ನಂತನ ಬಿಗಿದಪ್ಪಿದಳು ಅಂಬುಜಾಕ್ಷಿ 1 ಲಲಿತಾಂಗಿ ಆಲಿಂಗನವ ನೀಯೇ ಹರಿಗಾಗಾ| ಒಲಿದು ಉಕ್ಕೇರಿತು ಆನಂದ ಉದಧಿ| ಸತಿ ಮಾತಾಡುವ ದೇವ ಶ್ರೀ| ಲಲನೇಯಾ ಸದ್ಬುವನೆಯಾ ಪೂರಿಸಿದನು 2 ಈ ಪರಿಯಾಡಿದ ಶ್ರೀ ಹರಿ ಚರಿತೆಯಾ| ನಾ ಪೇಳಿದುದು ಭಾವ ಭಕುತಿಯಲಿಂದಾ| ಆ ಪದಿಂದಲಿ ಕೊಂಡಾಡುವ ಮನುಜನ| ತಾ ಪಾಲಿಸುವಾ ಮಹಿಪತಿ ಸುತ ಪ್ರೀಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು