ಒಟ್ಟು 105 ಕಡೆಗಳಲ್ಲಿ , 43 ದಾಸರು , 99 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಶೇಣಿ ಗೋಪಾಲಕೃಷ್ಣ) ಗೋಪಾಲಕೃಷ್ಣ ನಿನ್ನಡಿಗಳ ಸೇರಿದೆ ಪ. ಕಾಳಕೂಟಧರ ಕಾಳಿಯ ಸರ್ಪನ ಧಾಳಿಗೊಂಡಿಹ ಗೋಪಾಲರನ್ನು ಪಾಲಿಪೆನೆಂದು ಕೃಪಾಲಯ ತಾಂಡವ ಲೀಲೆಯಿಂದ್ಯಮುನಾಜಲಾಲಯ ಬಿಡಿಸಿದ 1 ವಿಷವೃಕ್ಷ ದಾವಾಗ್ನಿ ವೃಷಭಕೇಶಿ ಬಕ ಅಸಮಸಾಹಸಧೇನುಕಾದಿಗಳಾ ನುಸಿಯಂತೆ ಬಡಿದು ತನ್ನೊಶಗರ ಸಲಹಿದ ಪಶುಪತಿ ವಂದ್ಯ ನೀ ದೆಸೆಯೆಂದು ನಂಬಿದೆ 2 ಸರ್ವದೋಷಹರ ಸಕಲಲೋಕ ವಂದ್ಯ ಗೀರ್ವಾಣಗಣಪೂಜ್ಯ ಪಾದಪದ್ಮ ನಿರ್ವಹಿಸುತ ನೀನೆ ನಿರುತ ನಾಗರಾಜ ಪರ್ವತನಾಥ ಸುಪರ್ಣಾಂಗ ಗಮನಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಕೆನ್ನ ದೂರುವರೆ ಪೇಳಮ್ಮಯ್ಯ ಪೋಕಬುದ್ಧಿಯ ಗೊಲ್ಲತಿ ಪೋಕ ಲೋಕಲೋಕದಿ ನೋಡೆ ನಾಕಾಣೆನೆಲ್ಲೆಲ್ಲೂ ಪ ಅಮ್ಮಯ್ಯ ನೀನಿಡುವೊ ಪಾಲ್ಬೆಣ್ಣೆಯ ಕಣ್ಣಿಂದ ನೋಡುವೆನೆ ಅಣ್ಣ ರಾಮರ ಕೇಳೆ ಎನ್ನಾಣೆ ಹುಸಿಯಲ್ಲ ಎನ್ನ ಪಣೆಯ ಲಿಖಿತ ಮುನ್ನ ಮಾಡಲಿ ಏನೆ 1 ದುಷ್ಟಹೆಂಗಳೇರಾಡುವೊ ಮಾತೊಂದು ನೀ ಗೊತ್ತು ಹಿಡಿಯ ಬ್ಯಾಡಮ್ಮ ಚಟ್ಟಿಗೆ ಬೆಣ್ಣೆಯ ಮೆಲುವೋದುಂಟಾದರೆ ಪುಟ್ಟಕೂಸಿನ ಹೊಟ್ಟೆಗೆ ದೃಷ್ಟಿತಾಗದು ಏನೆ 2 ಚೆಂಡನಾಡುವಾಗ ಇವರು ಎನ್ನ ಮುಂಗೈಯ ಪಿಡಿದುಕೊಂಡು ಗಂಡರಂಜಿಕೆಯಿಲ್ಲ ಗಾಡಿಕಾರ್ತಿಯರೆಲ್ಲ ಬಂಡು ಮಾತುಗಳಾಡಿ ಬಂದು ದೂರಿದರೇನೆ 3 ಸಣ್ಣ ಮಕ್ಕಳೊಡನೆ ಅಂಗಳದಿ ನಾ- ಚಿಣ್ಣಿಯನಾಡುವಾಗ ಬೆಣ್ಣೆಕೊಡುತೇವೆಂದು ಬಣ್ಣ ಬಣ್ಣದಿ ಎನ್ನ ಕಣ್ಣು ಸನ್ನೆಯ ಮಾಡಿ ಕರೆದರ್ಯಾತಕೆ ಕೇಳೆ 4 ಗೋಲಿ ಗುಂಡುಗಳಾಡುತ ನಿಂತಿರಲೆನ್ನ ಲೀಲೆಯಿಂದಲಿ ನೋಡುತ ಭೀಮೇಶಕೃಷ್ಣ ಬಾರೆಂದೆನ್ನ ಬಿಗಿದಪ್ಪಿ ಬಾಯ ತಂಬುಲಗಳ ಬೇಡಿ ಮಾತಾಡೋರು 5
--------------
ಹರಪನಹಳ್ಳಿಭೀಮವ್ವ
ಆತ್ಮ ನಿವೇದನೆ ಇಂದು ಪಾವನವಾಗಿರೊ | ಇಂದಿರಾ ರಮಣನ್ನ ದಿನ ವ್ರತವ ಮಾಡಿ ಪ ಅನುಜ ನಿಜಾಂಗನೆ | ತನಯರು ನೆರೆಹೊರೆ ಮನ ಜನಕೆ | ಸಿರಿ | ದಿನ ತ್ರಯವನು ಅನುಸರಿಸಿರೆಂದು 1 ಏಕಾದಶಿದನ ವಿಕೇತನದಲಿ ಪಾಕ ಮಾಡಿದರದು | ಕಾಕಮಾಂಸ ಲೋಕದೊಳಗೆ ಸರಿ | ಲೋಕದೊಳಗೆ ಎಂದು | ತಾ ಕೂಗಿ ಸುಖದಲ್ಲೀ | ವಾದ ಪೇಳುತಲಿದ್ದು ಏಕ ಭಕುತಿಯಲ್ಲೀ2 ಹರಿದಿನದಲ್ಲಿ ನೀರು ಬೆರಳಲಿ ಸುರಿದಾ | ಭೂಸುರನು ಚಾಂಡಾಲನು ನಿರುತದಲೀ | ವರಗೋಮಾಂಸ ನರಕಾ | ನರಿ ನಾಯಿರಾಸ | ಸೂಕರ ಭಕ್ಷಣಿಗಿಂತ | ಪರಮ ಉತ್ತಮನೆಂದು 3 ಪ್ರಾಣತ್ಯಾಗವಾಗಿ ಹಾನಿ ಪ್ರಾಪುತದಿಂದ | ಏನೇನು ಸಂಕಟ ತಾನೊದಗೆ | ಆನಂದ ಮತಿ ಈವಾ ಶ್ರೀನಾಥನ ದಿವಸ | ಧಾನ್ಯದಲಿಟ್ಟು ನಿದಾನಕೆ ಗತಿ ಎಂದು 4 ಇತರ ದಿವಸದಲ್ಲಿ ಅತಿಶಯದಿಂದಲೀ | ಕೃತ ಕರ್ಮಗಳು ವಿಹಿತವಹುದೂ | ರತಿಪತಿಪಿತನ ಅಪ್ರತಿವಾಸರದಲ್ಲೀ | ಅತಿ ಅವಶ್ಯಕವಾ ವರ್ಜಿತ ಮಾಡಿ ಸಜ್ಜನರು 5 ಎಲೆ ಹಾಕದೆ ಜಾಗರವ ಬೇಸರದಲೆ | ಲವಲವಿಕೆಯಿಂದ ಕವಿಗಳೊಡನೆ | ತವಕದಿಂದಲಿ ಪಾಡುತ ಗಾಯನ ಶುದ್ಧಾ | ಶ್ರವಣ ಮಾಡುತ್ತ ಸದಾ | ಪವನ ಮತದೊಳಿದ್ದು6 ದಶಮಿ ವಂದು ಏಕಾದಶಿ ಎಂಟು ತಿಳಿದು | ದ್ವಾದಶಿ ಐದು ಹ | ದಿನಾಲ್ಕು ಎಸವ ಝವಾ | ಪುಶಿಯಲ್ಲ ಇದು ಸಿದ್ಧಾ ಅಸುಯವ ಬಡದಲೇ | ಕುಶಲದಿಂದಲಿ ವ್ರತ ಚರಿಸುತ್ತಲಿ ಚನ್ನಾಗಿ 7 ಏಳೊಂದು ವತ್ಸರದ ಮೇಲೆ | ವತ್ಸರ ಬಿಟ್ಟು ವಾಲಾಯ ಉಳಿದವರು | ನೀಲವರ್ಣನ ವ್ರತವಾ ಲೀಲೆಯಿಂದಲಿ ಚರಿಸಿ 8 ಆವಾದಾದರ ಬಿಡದಿರೀ | ಕೇವಲ ಸಾಧನವೂ | ಈ ವಾರವು ದೇವೇಶ ವಿಜಯವಿಠ್ಠಲಗೆ ಸಮರ್ಪಿಸೆ | ಸೇವಿಯ ಪಾಲಿಸಿ ಕೈವಲ್ಲ್ಯದಲಿ ಇಡುವಾ 9
--------------
ವಿಜಯದಾಸ
(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(ಆ) ಲಕ್ಷ್ಮೀಸ್ತುತಿಗಳು ಶಂಬರಾರಿ ಜನನಿ ಪ ಬೆಂಬಿಡದೆನ್ನ ಹೃದಂಬುಜದೊಳಗವ ಲಂಬಿಸಿ ಸಲಹು ಮದಂಬೆ ಸನಾತನಿ ಅ.ಪ ಅಂಬುಜಮುಖಿ ಚಿಕುರೆ ಶರ ಕುಂಭಪಯೋಧರೆ ಬಿಂಬಫಲಾಧರೆ 1 ಕರ್ಣದೊಳೆಸೆವ ಸುವರ್ಣವಿಡಿದ ಪೊಸ ರನ್ನದೊಡವೆಗಳ ಮನ್ನಿಸುವಂತಿದೆ ರನ್ನೆ ಗುಣಾರ್ಣವೆ 2 ನೀಲಭುಜಗವೇಣಿ ಲೀಲೆಯಿಂದ ಶಾರ್ದೂಲ ಮಹೀಂದ್ರದೊ ಳಾಲಯಗೈದಲಮೇಲಮಂಗಾಮಣಿ 3
--------------
ವೆಂಕಟವರದಾರ್ಯರು
ಅಧ್ಯಾಯ ಮೂರು ಪದ ಸಾವಿರ ಬುಧರÀರನೆಲ್ಲ ಮೀರಿ ಪರಮೇಶ್ವರಗೆ ಹಾರ ಹಾಕುವೆನೆಂದು ಪಾರಿಜಾತದ ಕುಸುಮ ಪಾರ್ವತಿಯು ತಾತರಿಸಿ ಪೂರ್ವದಲಿ ಮಾಡಿದಳ ಪೂರ್ವ ಮಾಲೆಯ ಭಕ್ತಿಪೂರ್ವಕವಾಗಿ ಚಾರುತರವಾಗಿಹ ಅಲಂಕಾರಗಳ ನಿಟ್ಟು ಶೃಂಗಾರ ಭರಿತಳು ಆಗಿ ಪಾರಿಜಾತದ ಹೂವಿನ ಹಾರಕೈಯಲಿ ಪಿಡಿದು ಚಾರು ಸಖಿಯಲ್ಲಿ 1 ಚಂದ್ರವದನೆಯ ಬಹಳ ಛಂದಾದ ಮುಖನೋಡಿ ಚಂದ್ರಮನು ಇದುಕಾಂತಿ ನಂದು ಒಯ್ದಳು ಈಕೆ ಮುಂದಿವಳನೊಯ್ಯಬೇಕೆಂದು ಕುಚಗಳ ಕಂಡು ಇಂದ್ರ ತಾ ಯನ ನಾ ಗೇಂದ್ರನ ಶಿರವೆಂದ ಮುಂದದರ ಸೊಂಡೆ ಇದು ಯೆಂದು ಕರಗಳಿಗೆಂದಾ ಮಂದಗತಿ ಮತ್ತಾದರರಿಂದ ನಡಗಿಯ ಕಂಡು ಸುಂದರಿಯ ಆಹುಬ್ಬು ಕರಿದರ್ಪ ತಾ ಕಂಡು 2 ಎರಳೆ ನೋಟವ ಕಂಡು ಎರಳೆವಾಹನ ನುಡಿದ ಯರವಿಂದವಯವಕ್ಹಿಗ್ಗಿ ಹೊರಳು ವಳು ಯಂತೆಂದು ಕೊರಳವನು ಕಂಡು ಹರಿ ಕರದಲೊಪ್ಪುವಯೆನ್ನ ವರಪಾಂಚಜನ್ಯವಿದು ಸರಿಯೆಂದು ನುಡಿದಾ ಗುರುಳು ಗೂದಲದವಳ ಹೆರಳವನು ನೋಡಿಹರಿ ಇರುಳ ಮಲಗುವಯನ್ನ ಸರಳ ಹಾಸಿಗೆಯೆಂದು ಸುರರು ಎಲ್ಲರು ಪರಿ ಪರಿಯಿಂದ ನುಡಿದರನುಸರಿಸಿಯಿದರಂತೆ 3 ಪದ ಮುಂದೆ ಆ ಪಾರ್ವತಿ ಬಂದು ಕುಳಿತಳಲ್ಲೆ ಬಂದ ಶಿವನು ತಾ ಬಾಲಕನಾಗಿ 1 ಲೀಲೆಯಿಂದಲಿ ತೊಡೆಯ ಮೇಲೆ ಮಲಗಿದನಾಗ ಬಾಲೆ ಹೀಗೆಂದಳು ಎಲ್ಲರಿಗೆ 2 ಮುನ್ನೆತ್ತಿದವರಿಗ್ಹಾಕುವೆ ಮಾಲೆ 3 ಅಂದಮಾತನು ಕೇಳಿ ಇಂದ್ರ ಬಂದನು ಆಗ ಮುಂದೆ ಆ ಬಾಲನೆತ್ತುವೆನೆಂದು4 ಚನ್ನಿಗನಂತಾದ್ರೀಶನ ಹಿಂದಕೆ ಮಾಡಿ ಸಣ್ಣ ಬಾಲನ ತಾ ಮುಂದಕೆ ಕರೆದಾ 5 ಪದ ಸಣ್ಣಬಾಲನೇ ಬಾರೋ ಹಣ್ಣು ಕೊಡುವೆ ನಿನಗಿನ್ನು ಕೈತಾರೋ ಪ ಚಂಡು ಬೊಗರಿ ಗೋಲಿಗುಂಡು ನಾ ಕೊಡುವೆ ಬೆಂಡು ಬತ್ತಾಸವ ಕೊಂಡು ನಾ ಕೊಡುವೆ 1 ಚಿಣಿಕೋಲು ಮತ್ತೆ ಈಕ್ಷಣ ತಂದು ಕೊಡುವೆ ಮನಸಿಗೊಪ್ಪುವ ಚಿಂತಾಮಣಿ ತಂದು ಕೊಡುವೆ 2 ನಡಿಯೋ ನಿನಗೆ ದೊಡ್ಡ ಗುಡಿಯ ತೋರಿಸುವೆ ಒಡೆಯ ನಂತಾದ್ರೀಶನಡಿಯ ತೋರಿಸುವೆ 3 ಪದ್ಯ ಮತ್ತೇ ಮತ್ತೀಪರಿಯ ಒತ್ತಿ ಒದರಿದರೇನು ವ್ಯರ್ಥ ಬಾಲನು ಕಣ್ಣೆತ್ತಿ ನೋಡಲುವಲ್ಲ ಒತ್ತಿ ತೋಳುಗಳ್ಹಿಡಿದು ಎತ್ತಿನೋಡಿದನಾಗ ಯತ್ನದಿಂದಲ್ಲಿಯೆ ತಿತ್ತಿದಮ್ಮನೆ ದಣಿದು ಮತ್ತ ದೇವೇಂದ್ರ ಬಲು ಮೆತ್ತಗಾದ ವ್ಯರ್ಥ ಈ ಬಾಲಕನ ಎತ್ತಿ ನಗೆಗೀಡು ಈವತ್ತು ಆಯಿತು ಎಂದು ವೃತ್ರಾರಿ ತಾ ಮುಂದೆ ಅತ್ಯಂತ ಕೋಪದಲಿ ಎತ್ತಿದನು ವಜ್ರವನು ಎತ್ತಿದಾ ಕೈಬರದೆ ಮತ್ತಲ್ಲಿ ನಿಂತಿಹುದು ಚಿತ್ರದಲ್ಲಿಯ ಗೊಂಬೆ ಹಸ್ತದಂತೆ 1 ಪದ ಆಯಿತು ಈ ಪರಿಯು ದೇಹಕೆ ಆಯಾಸವೇ ಸರಿಯ ಪ ಮತ್ತೆ ಅಗ್ನಿಯು ಅಲ್ಲೆ ಬಾಲನ ಎತ್ತದೆ ದಣಿವುತಲೆ ಶಕ್ತಿ ಎತ್ತಿದ ಮೇಲೆ ಮತ್ತಾ ಶಕ್ತಿ ನಿಂತಿತು ಅಲ್ಲೆ1 ದಂಡಧರನು ಆಗ ಯೆತ್ತದೆ ಭಂಡಾದನು ಬೇಗ ದಂಡ ನೆತ್ತಿದನಾಗ ಎತ್ತಿದ ದಂಡ ನಿಂತಿತುಹಾಗೆ 2 ಮತ್ತೆ ನೈರತಿ ಅಲ್ಲೆ ಬಾಲನ ಎತ್ತದೆ ದಣಿವುತಲೆ ಕತ್ತಿಯೆತ್ತಿದ ಮೇಲೆ ಮುಂದಾ ಕತ್ತಿನಿಂತಿತು ಅಲ್ಲೆ 3 ಪಾಶಧರನು ಆಗ ಬಹು ಕಾಸೋಸಿ ಬಿಟ್ಟು ಬೇಗ ಪಾಶವೆತ್ತಿದನಾಗ ಮುಂದಾ ಪಾಶನಿಂತಿತು ಹಾಗೆ 4 ವಾಯು ಬಂದನಲ್ಲೆ ಬಳಲಿದ ಕಾಯಕ್ಲೇಶದಲ್ಲೆ ಕಯ್ಯನೆತ್ತಿದ ಮೇಲೆ ಮತ್ತಾಕೈಯು ನಿಂತಿತು ಅಲ್ಲೆ 5 ಸತ್ವರ ಬರವುತಲೆ ಕುಬೇರ ನಿಸ್ಸತ್ವನಾದನಲ್ಲೆ ಶಸ್ತ್ರಯೆತ್ತಿದ ಮೇಲೆ ಮುಂದಾ ಶಸ್ತ್ರ ನಿಂತಿತು ಅಲ್ಲೆ 6 ಶೂಲಧರನು ಅಲ್ಲೆ ಮತ್ತಾ ಬಾಲನಯೆತ್ತದಲೆ ಶೂಲನೆತ್ತಿದ ಮೇಲೆ ಮುಂದಾಶೂಲ ನಿಂತಿತು ಅಲ್ಲೆ7 ಬುಧಜನಕನು ಅಲ್ಲೆಬರವುತ ಗದಗದ ನಡುಗುತಲೆ ಗದೆಯನೆತ್ತಿದ ಮೇಲೆ ಮುಂದಾಗದೆಯು ನಿಂತಿತು ಅಲ್ಲೆ8 ಗೋಣನಲ್ಲಾಡುವ ತಲೆಯತ್ತಿದ ಹರಿ ತಾನು ಚಕ್ರವು ಮೇಲೆಖೂನದಿ ಅದು ಅಲ್ಲೆ ಆಯಿತು ಗೋಣವು ತಿರುವುತಲೆ 9 ಅಲ್ಲೆ ಪೂಷಣ ಬೇಗ ಕರಕರ ಹಲ್ಲು ತಿಂದನಾಗ ಹಲ್ಲು ಬಿದ್ದವಾಗ ತೋರಿದ ಎಲ್ಲ ದೇವತೆಗಳಿಗೆ 10 ಕೂಸನೆತ್ತದಾಗಿ ಎಲ್ಲರು ಮೋಸವಾದರು ಹೋಗಿ ಆ ಸ್ವಯಂವರಕಾಗಿ ಅನಂತಾದ್ರೀಶನ ಸಹಿತಾಗಿ 11 ಪದ್ಯ ಅಂಬುಜೋದ್ಭವ ತಾನು ಸ್ತಂಭಿತಾಗಿಸುರ ಕ ದಂಬವನು ಕಾಣುತಲೆ ಸಾಂಬನ ಮಹಿಮೆಯಿದು ಅಂಬಿಕೆಯ ತೊಡೆಯ ತಲೆಗಿಂಬು ಮಾಡಿಹ ಬಾಲ ಸಾಂಬನಿವನಹದೆಂದು ಸಂಭವಿಸಿದಾಗ ನಂಬಿ ಸ್ತುತಿ ಮಾಡಿದನು ಸ್ತಂಭೀತರು ಎಂದೆನಿಸಿ ಕೊಂಬುವರು ಎಲ್ಲಾರು ನಂಬಿ ಸ್ತುತಿಸಿದರು ಆ ಸಾಂಬಗೀಪರಿಯು ಪದ ಸಾಂಬಸದಾಸಿವನೆ ರಕ್ಷಿಸು ಬಾಲಕನೇ ಸಾಂಬಸದಾಶಿವನೆಂಬುವ ಬಾಲಕ ನೆಂಬುವದರಿಯದೆ ಸ್ತಂಭಿತರಾದೆವು ನಂಬಿಗೆ ತಿಳಿಯದೆ ನಂಬಿದೆವೋ ಜಗ ದಂಬೆಯ ತೊಡೆ ತಲೆ ಗಿಂಬು ಇಟ್ಟವನೆ ಪ ಪಟುತರನಾದಂಥವನೆ ತಿಳಿಯದೋ ನಿನ್ನ ಘಟಿತ ಘಟನೆ ಹರನೆ ಸ್ಫಟಿಕ ಸನ್ನಿಭ ಧೂರ್ಜಟಿಯೆ ನಿನಗೆ ಸಂ ಘಟಿತಳಾದ ಈ ಕುಟಿಲ ಕುಂತಳೆಯು ಹಟದಲಿ ಗೆಲವುದುವ ಹಟವೊಂದಿದು ಈ ಸ್ಪುಟವಾಯಿತು ಸಂಕಟ ಪರಿಹರಿಸು 1 ಸರ್ವರನೆಲ್ಲಾ ತರಿಸಿ ಸರಸ ಮಾಡಿದೆಯೊ ಗರ್ವವ ಪರಿಹರಿಸಿ ಉರ್ವಿಯೊಳಗೆ ನಿನಗಿರ್ವರಾರು ಸರಿ ಸರ್ವರನ್ನು ಮೀರಿರುವ ದೇವನೆ ಸರ್ವಪ್ರಕಾರದಿ ಸರ್ವರ ಅವಯವ ಪೂರ್ವದಂತಾಗಲಿ ಪಾರ್ವತಿಪ್ರಿಯನೇ 2 ಭೋ ಶಿಶುವರ ರೂಪ ಬೇಗನೆ ಬಿಡು ಈ ಸಮಯಕ್ಕೆ ಕೋಪ ಈ ಶಶಿವದನೆಯ ಆಶೆಗೆ ವ್ಯರ್ಥದಿ ಮೋಸಹೋಗಿ ಕಾಸೋಸಿ ಬಟ್ಟೆವು ಘಾತಿ ಮಾಡಬೇಡಾಸೆಯ ಪೂರಿಸು ಶ್ರೀ ಅನಂತಾದ್ರೀಶ ಪ್ರಿಯನೆ 3 ಪದ್ಯ ವಿರಳಾಟ ಈ ಸ್ತುತಿಗೆ ಮರುಳಾಗಿ ತಾನು ಗರಳ ಗೊರಲಿಸಾ ಮೂರುತಿಯ ಸರಳ ಮಾಡೆಲ್ಲವರು ಗುರುಳು ಗೂದಲದವ ಸರಳಾದವ ತೊಡೆಯಲ್ಲಿ ಹೊರಳೆದ್ದು ತೋರಿಸಿದ ಸರಳ ನಿಜರೂಪ ವಿರಳೆ ನೋಟದಲಿರುವ ತರಳೆ ಆ ಪಾರ್ವತಿಯು ಹೊರಳಿ ನೋಡುತಲೆದ್ದು ಹರಳಿನುಂಗರ ಕೈಯ್ಯ ಹೆರಳಿನೊಳಗಿರುವಂಥ ಅರಳಿದ್ಹೂವಿನ ದಿವ್ಯ ಸರಳ ಮಾಲೆಯ ಅವನ ಕೊರಳಿಗ್ಹಾಕಿದಳು 1 ಗಂಭೀರ ವಾದ್ಯಗಳೇಳು ಸಾರಿ ನುಡಿದವು ಆಗ ಸಾವಿರಬುಧರ ಎಲ್ಲ ವೃಷ್ಟಿಸೂರಿಮಾಡಿದರು ಚಾರ್ವನಂತಾದ್ರಿಯಲ್ಲಿರುವ ದೇವನ ಬಿಟ್ಟು ಸಾರ ಪರಮೇಶ್ವರಗೆ ಹಾರ ಹಾಕುವೆನೆಂಬ ಪಾರ್ವತಿಯ ಅಭಿಲಾಷೆ ಪೂರ್ಣವಾದಲ್ಲೆ ಸಂಪೂರ್ಣ ಸಾಂಬ ಮೂರುತಿಯ ದಯೆಯಿಂದ ಮೂರು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಮ್ಮನ ತೊಡೆಯ ಮೇಲೆ ನಮ್ಮ ಕೃಷ್ಣ ಸುಮ್ಮನೆ ಮಲಗಿಹನು ಪ ಸುಮ್ಮೊನದಿ ಸುಖದಿಂ ನಲಿದಾಡುತ ಅ.ಪ ಮಣ್ಣ ಮೆದ್ದುದ ಕಂಡು ಗೋಪಿದೇವಿ ಚಿಣ್ಣನ ಬಾಯಿನೋಡೆ ಕಣ್ಣಿಗೆ ಬ್ರಹ್ಮಾಂಡ ತೋರಿಸಿದಂಥ ಪರಬ್ರಹ್ಮ 1 ತರಳ ತರಲೆ ಮಾಡೆ ತಾಯಿಯು ಹೊರಳೆಗೆ ಕಟ್ಟಲಾಗಿ ಸುರತರುಗಳ ಮುರಿದು ನಿಜತರವ ಗೈದ ನಿತ್ಯಾತ್ಮ 2 ಕಾಲಲೊದೆದು ಕೊಂದು ಧಾತಾ ದೇವೇಂದ್ರರ ಶಿರಬಾಗಿಸಿದ ಪೂತಗುಣ 3 ಹಾಲುಕೊಡೆನೆ ಬಾಲ ಸಂಜೆಗೆ ಹಸುವ ಕರೆವೆನೆನಲು ಲೀಲೆಯಿಂ ಕಣ್ಣ ಮುಚ್ಚಿ ಕತ್ತಲೆ ಕವಿಸಿದ ದೈವ 4 ಗೋಪೀಜನಗಳೊಡನೆ ಗೋಪಾಲನು ಸ್ತ್ರೀಲೋಲನಾಗಿ ಕುಣಿದು ರಥಾಂಗಪಾಣಿ 5 ನವನೀತ ಚೌರ್ಯಮಾಡಿದ ನಾರೀಜನರ ವಸ್ತ್ರಾಪಹರ ಗೈದ ಅವನೀಭಾರವ ಕಳೆದ ಮಾಯಾಮೂರ್ತಿ ದೇವಶಿಖಾಮಣಿ6 ಭೂಮಿಪಾಲನೆ ಮಾಡಿದ ಹಿಂಸಕರ ವಂಶವಳಿಪ ಹಂಸಲೋಲ ಜಾಜಿಶ್ರೀಶ 7
--------------
ಶಾಮಶರ್ಮರು
ಆಡುವ ಬನ್ನಿರಿ ಬಾಲಕರೆ ಪ ರೂಢಿಗಚ್ಚರಿಯಾಗಿ ಬಲುಲೀಲೆಗಳಿಂ ಅ.ಪ ಜನನ ಮರಣವÉಂಬ ಚೆಂಡು ಬುಗುರಿಯಿಂ ಮನದ ವೃತ್ತಿಗಳೆಂಬ ಗೋಲಿಗಜ್ಜುಗದಿಂ ಜನಸಂಘವೆಂಬುವ ಚಿಳ್ಳೆಕೋಲುಗಳಿಂ ಅನುದಿನ ಭ್ರಾಂತಿಯೆಂಬ ಕವಣೆ ಕಲ್ಲುಗಳಿಂ 1 ಏಳುತಲೀ ಮುಖ ತೊಳೆದು ನೀವೆಲ್ಲ ಕರ್ಮ ಭಕ್ಷಗಳೆಲ್ಲ ಲೀಲೆಯಿಂ ಮೆಲ್ಲುತಲಿದರೊಳು ಬಲ್ಲ ಶೀಲ ಸದ್ಗುಣವುಳ್ಳ ಬಾಲಕರೆಲ್ಲ 2 ಶ್ರವಣ ಮನನವೆಂಬ ಸಾಧನೆಯಿಂದ ಭವಹರ ಗುರುರಾಮ ವಿಠಲ ಮುಕುಂದ 3
--------------
ಗುರುರಾಮವಿಠಲ
ಆಲವವೆ ನಮಗೆ ಸಫಲವು ಕಾಣಿರೊ ಶ್ರೀಲಕುಮಿಯ ಪತಿಯ ನೆನೆವೆಯಾಗಿ ಪ ಕೀಳು ಜನರಿಂದ ಆಡುವಾ ನುಡಿಗಳು ಹಾಳು ಹರಟೆಗಳು ಬಹು ಜಾಳು ಮಾತುಗಳು ಕಾಲ ಪರಿವುದು ಕೇಳಿ ಜನರುಗಳೆ ನಾಳೆ ನೋಡಿದಂಥ ದಾಸರು ದೊರೆಯರು1 ವ್ಯಾಳೆ ಬಂದಾಗ ಸಾಧಿಸದವನಾ ಬಾಳಿವೆ ಬೋಳೆ ಅದು ಗೋಳಲ್ಲವೆ ಗಾಳಿ ಬಂದಾ ಕೈಲೆ ತೂರಿಕೊಳ್ಳಿರೊ ಮ್ಯಾಲೆ ತನ್ನೊಶವೇನೊ ದೇಶಕಾಲಗಳು 2 ಸೋಲಿಸಿ ದುರ್ಮತರ ಕೀಳು ಮಳಿಗೆಗಳ ಪರಿ ಸೀಲಿಸೊ ಪ್ರತಿ ದಿವಸದಲಿ ಅಲವ ಬೋಧರ ಮತವ ಲೀಲೆಯಿಂ ತಿಳಿಕೊಂಬ್ಯ ಪಾಲಿಸುವ ದಯದಿಂದ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಇಂದಿರಾರಾಧ್ಯನೆ ಬಂದು ನಿಲ್ಲೊ ಪ ಇಂದೆನ್ನ ಸಲಹೊ ಮಂದನಾನೊಂದನರಿಯೆ ಏ- ನೆಂದು ಕರೆಯಲೋ ಗೊವಿಂದ ಅ.ಪ ಜಲದೊಳಾಡುವ-ಕಲ್ಲಹೊರುವ ಎಲ್ಲಕಾಡಿನೊಳಾಡುವ ಭಳಿರೆ ಎರಡಂಗವ ತಳೆವ ವನಳಿವಗೋವನೆ ಕಾಯ್ದ ಮರೆವ ನಿನ್ನಯ ರೂಪವಾ ಸಲಿಲ ಹೊಕ್ಕು ಅಸುರನ ಸಂಹರಿಸಿ ಕಲಕಿಶರಧಿಯ ಸುಧೆಯನು ತರಿಸಿ ನೆಲಗಳ್ಳನ ಮದವನೆ ಮರ್ದಿಸಿ ಚೆಲುವಚೆಳ್ಳುಗುರಿನಿಂದುದರವ ಛೇದಿಸಿ ಸುಲಭದಿಂದ ಶುಕ್ರನ ಕಣ್ಮರಿಸಿ ಬಲುಕೊಬ್ಬಿದ ಕ್ಷತ್ರಿಯರನೊರೆಸಿ ಶಿಲೆಯ ಮೆಟ್ಟಿ ಮುನಿಸತಿಯರನುದ್ಧರಿಸಿ ಲೀಲೆಯಿಂದ ವ್ರಜನಾರಿಯರೊಲಿಸಿ ಸಲೆದಿಗಂಬರರೂಪವ ಧರಿಸಿ ಮಾಧವ 1 ಜಲದೊಳು ನಿಂದು ಕಣ್ಣಬಿಡುವ ಶೈಲವ ತಳೆವಾ ಕಲಕೀ ಮಣ್ಣ ಮೆಲುವ ಕಲ್ಲಕಂಭವ ಒಡೆವಾ ಬಲಿಯನೆ ಬೇಡುವ ಪರಶುವ ತೊಳೆದು ವನವನಗಳ ಚರಿಸುವ ಬಾಲೆಯರನಾಳ್ವ ಎಲ್ಲನಾಚಿಕೆಯ ಬಿಡುವ ಸಲ್ಲುವಹಯವೇರಿ ಮೆರೆವಾ ನಿನ್ನಯ ರೂಪವಾ ಎಲ್ಲವೇದವನುದ್ಧರಿಸಿ ವಾರಿಧಿಯಲಿ ತಳೆದು ಅಮೃತಮಥನಕೆ ಶಿಲೆಯ ಝಲಿಸಿ ನಿಲಸಿದೆ ನಿಜಕೆ ಧರಣಿಯ ಬಲ್ಲಿದ ಬಲಿಯ ಬಂಧಿಸಿ ಭಕ್ತಿಯ ಸಲ್ಲಿಸಿದೆ ಪಿತ ಪೇಳ್ದ ಆಜ್ಞೆಯ ಬಿಲ್ಲನೆತ್ತಿ ವರಿಸಿದೆ ಸೀತೆಯ ಮಲ್ಲರ ಮಡುಹಿ ತೋರಿದೆ ಚರಿಯ ಜಳ್ಳುಮಾಡಿತೋರ್ದೆ ಧರ್ಮಕೆ ಮಾಯ ಹುಲ್ಲುಣಿಸುವ ಹಯವೇರಿ ಮೆರೆದ ಶ್ರೀ ವಲ್ಲಭ ನಿನ್ನಯ ರೂಪವ ಸೊಲ್ಲಿಪರಾರೋ ಶ್ರೀಧರ 2 ನಿಗಮತಂದಿತ್ತೆ ನಗವಾನೆ ನೆಗವಾ ಮೊಗದೊಳು ಭೂಮಿಯ ಬಗೆವಾ ಉಗುರಿಂದುದರವ ಸೀಳ್ವ ತ್ಯಾಗಿಯನ್ಯಾಚಿಸುವ ಭೃಗುವಿಗೆ ಮುದವ ತೋರ್ವ ಸಾಗರಕೆ ಸೇತುಕಟ್ಟುವ ನೆನೆದಮೃತವ ಮೆಲುವ ಎಂದೆನಿಸಿ ಮೆರೆವ ನಿನ್ನಯ ರೂಪವಾ ಪೊಗಲಳವೇ ಭೂಧವ ನಿಗಮಕಾಗಿ ನೀ ತಮನ ಮರ್ದಿಸಿ ನಗವ ಬೆನ್ನಲಿ ಪೊತ್ತು ಸುಧೆಯನು ಸಾಧಿಸಿ ಹಗೆಯ ಹಿರಣ್ಯನ ಅಸುವನೆ ಹರಿಸಿ ಮಗುವಿನ ಭಕ್ತಿಗೆ ವ್ಯಾಪ್ತಿಯ ತೋರಿಸಿ ಬಾಗಿಲ ಕಾಯ್ದು ನೀ ಬಲಿಯ ರಕ್ಷಿಸಿ ಆ ಗರ್ವಿಸಿದರಸರ ಪರಶುವಿಂದ ವರೆಸಿ ಯಾಗರಕ್ಷಣೆಗೆ ನೀ ರಕ್ಷಕನೆನಿಸಿ ನೀಗಲು ಕುರುಕುಲ ಕಲಹವೆಬ್ಬಿಸಿ ಆಗಮ ಶಾಸ್ತ್ರಕೆ ಮಾಯವ ಕಲ್ಪಿಸಿ ಬೇಗ ಬಂದು ಹಯವೇರಿ ಮೆರೆವ- ಬೇಗದಿ ತೋರೋ ಶ್ರೀಪಾದವಾ 3
--------------
ಉರಗಾದ್ರಿವಾಸವಿಠಲದಾಸರು
ಇವನೆ ಪ್ರಹ್ಲಾದನಿಂದಲಿ ಉಪಾಸ್ಯ ಪವಮಾನ ಪಿತ ಭಕ್ತವರದ ಲಕ್ಷ್ಮೀಶ ಪ. ವಲಯಕಾರದಿ ಶೇಷ ಛತ್ತರಿಯಾಗಿ ಹಲ ಮುಸಲ ಧರಿಸಿ ಎಡದಲಿ ವಾರುಣೀ ಬಲದಲ್ಲಿ ಶಂಬುಕ ವರ್ಣನೆಂಬ ಪುತ್ರನ ಸಹಿತ ನಲಿದು ಸೇರಿಸೆ ಇಂಥ ಆಸನದಿ ಕುಳಿತಾ 1 ಯೋಗಾಸನವನ್ಹಾಕಿ ಎಡತೊಡೆಯ ಮೇಲ್ ಸಿರಿಯು ಆಗಮನುತ ಬಲದ ತೊಡೆಯಲ್ಲಿ ವಾಯು ಭೋಗ ರೂಪನು ಸರ್ವ ಆಭರಣ ಶೃಂಗಾರ ಸಾಗರಾತ್ಮಜೆ ಪತಿಯು ಧರಿಸಿ ಮೆರೆವಂಥಾ2 ಶಿರದಿ ನವರತ್ನ ಮಕುಟವು ಫಣೆಯು ತಿಲಕವೂ ಕರ್ಣ ಕುಂಡಲವೂ ನಾಸಿಕ ಗಲ್ಲ ತೆರದ ಬಾಯ್‍ದಾಡೆಗಳು ದುರುಳರಿಗೆ ಘೋರ ವರಭಕ್ತರಿಗೆ ಅಭಯ 3 ಕಂಠ ಕೌಸ್ತುಭಮಣಿಯು ಶ್ರೀವತ್ಸ ತುಳಸಿ ಸರ ವೈಜಯಂತಿ ಹಾರಾ ಕರ ಶಂಖ ಚಕ್ರವು ಪದ್ಮ ಗದೆ ಅಭಯ ವಂಟಿ ಕರಶಿರಿ ಭುಜದಿ ದ್ವಯ ಯೋಗ ಚಿಹ್ನೆ 4 ಉರ ಉದರ ಶೃಂಗಾರ ಅರವಿಂದ ಪೊಕ್ಕಳಲಿ ಬ್ರಹ್ಮ ಮೆರೆಯೇ ಮಿರುಗುವೋ ಮಕುಟ ಉಟ್ಟಿರುವ ನಡು ಕಿರುಗೆಜ್ಜೆ ಕರಿಸೊಂಡಲಿನ ತೊಡೆಯು ಸುರವರದ ಚರಣಾ5 ಚರಣದಾಭರಣ ಸಾಲ್ಯೆರಳನಖ ಕಾಂತಿಗಳು ಪಾದ ಪದುಮಾ ಮೃಗ ಮುಖವು ನರಮೃಗಾಕೃತಿರೂಪ ತರಳ ಪ್ರಹ್ಲಾದನಲಿ ಕರುಣಾರ್ದ ದೃಷ್ಟಿ 6 ಎಡತೊಡೆಯಲಿ ಸಿರಿಯು ಬಲಕರದಿ ಪದುಮವ ಪಿಡಿದು ಎಡತೊಡೆಯ ಮೇಲೆ ಮದನನ ಕುಳ್ಳಿರಿಸುತಾ ಮದನ ಇರಿಸಿ ಹೂ ಬಾಣವನು ಪಿಡಿದು ರತಿ ಪದುಮ ಕರದಿಂದ ಶೋಭಿಸಲೂ 7 ಹರಿಗೆ ಬಲತೊಡೆಯಲಿದ್ದಂಥ ವಾಯುವು ತನ್ನ ಅರಸಿ ಭಾರತಿಯ ಎಡತೊಡೆಯಲಿಟ್ಟೂ ತರಳ ವಿಷ್ವಕ್ಸೇನನನು ಬಲದ ತೊಡೆಯಲ್ಲಿ ಇರಿಸಿಕೊಂಡತುಲ ಸಂತಸದಿಂದ ಮೆರೆಯೇ 8 ಚತುರ ಹಸ್ತನು ವಾಯು ಎಡಗೈಲಿ ಪಿಡಿದು ಗದೆ ಹಿತದಿ ಬಲಗೈಯ್ಯ ಭಕ್ತರಿಗಭಯ ತೋರ್ವ ಅತಿಭಕ್ತಿಯಿಂದುಭಯಕರ ಅಂಜಲಿಯ ಮಾಡಿ ಪತಿ ಭಿಕ್ಷೆ ಬೇಡುವಾ9 ನಾಭಿಯಲಿ ಬ್ರಹ್ಮ ಉದ್ಭವಿಸಿ ಹಸ್ತದಿ ವೇದ ಶೋಭಿಸಲು ಎಡತೊಡೆಯ ಮೇಲೆ ವಾಣೀ ಆಭರಣ ಶೃಂಗರದಿ ವೀಣೆ ಪುಸ್ತಕ ಧರಿಸಿ ವೈಭವದಿ ದೇವ ಮುನಿ ಎಡೆ ತೊಡೆಯೊಳಿರಲೂ10 ಬ್ರಹ್ಮ ಬಲತೊಡೆಯಲ್ಲಿ ಪಂಚಮುಖ ರುದ್ರನ್ನ ಸುಮ್ಮಾನದಿಂದ ಕುಳ್ಳಿರಿಸಿಕೊಂಡಿರಲೂ ಬ್ರಹ್ಮಸುತ ಕರದಿ ಆಯುಧ ಗೌರಿ ಎಡದಲ್ಲಿ ಷಣ್ಮುಖನ ಬಲ ತೊಡೆಯಲ್ಲಿಟ್ಟು ಮೆರೆಯೇ 11 ಗೌರಿಗಣಪನ ತನ್ನ ತೊಡೆಯೊಳಿಟ್ಟಿರಲು ಈ ರೀತಿಯಿಂದ ಪರಿವಾರ ಸಹಿತಾ ಶೌರಿ ಮೆರೆಯುವ ದಿವ್ಯ ಅದ್ಭುತಾಕೃತಿ ನೃಹರಿ ಪತಿ ಮನದಿ ತೊರೆ ಭಕ್ತರಿಗೆ 12 ಕಾಲನಾಮಕ ಗರುಡ ಬಾಲೆ ಸೌಪರ್ಣಿ ಲೀಲೆಯಿಂದಲಿ ಕೂಡಿ ಸಮ್ಮುಖದಿ ನಿಂದೂ ಓಲಗವ ಕೊಡುತ ಹರಿಗನುಕೂಲನಾಗಿರುವ ಲೀಲ ಮಾನುಷ ಇಂಥ ವೈಭವದಿ ಮೆರೆವಾ13 ಇಂತೆಸೆವ ಹರಿ ಎದುರು ನಿಂತು ಪ್ರಹ್ಲಾದ ಗುಣ ವಂತೆ ಸಾಧ್ವೀ ಸಾಧುಮತಿ ಸತಿಯ ಸಹಿತಾ ಅಂತರಂಗದಿ ಚಿಂತಿಸುತ ಅಂಜಲಿಯ ಕರದಿ ಶಾಂತಮನದಲಿ ಸುಖಿಸಿ ಆನಂದಿಸುವನೂ14 ವರಭಕ್ತ ಪ್ರಹ್ಲಾದ ವರದನ್ನ ಈ ರೂಪ ನರರು ಚಿಂತಿಸಲಳವೆ ಚರಿಪ ಭಕ್ತಿಯಲೀ ಪರಮ ಉತ್ಸಾರಕರನೊಂದೊಂದು ಅಂಶದಲಿ ವರ ಭಕ್ತರಲಿ ನೆಲಸೆ ಚಿಂತನೆಗೆ ನಿಲುವಾ 15 ಪರಿವಾರ ಆಭರಣ ಆಯುಧಗಳಿಂ ಮೆರೆವ ನರಹರಿಯ ಈ ರೂಪ ನಿರುತ ಸ್ಮರಿಸೇ ಗುರುವರದ ಕರಿಗಿರೀ ಯೋಗ ಭೋಗಾ ನೃಹರಿ ಕರುಣಿಸುವ ಮುಕ್ತಿ ಗೋಪಾಲಕೃಷ್ಣವಿಠಲಾ16
--------------
ಅಂಬಾಬಾಯಿ
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಎಂತುಟೆಂದಾಡುವೆನು ಕಾಂತನಾ ಚರ್ಯೆಯನು ಸಂತತವು ಚಿಂತಿಪೆನು ಕಾಂತೆ ನಾನು ಪಾಲನೂಡಿದಳನ್ನೂ ಪಾಳುಮಾಡಿದನಕಟ ಬಾಲ ಗೋಕುಲಬಾಲ ಜಾಲಲೋಲ ಖಲತನದಿ ಗೋಪಿಯರ ನಿಲಯವನು ತಾಪುಗುತೆ ನಲಿದು ಪಾಲ್ವೆಣ್ಣೆಯನು ಕದ್ದು ತಿಂದು ಪಿಡಿದು ಬಂದಿಪೆವೆಂದು ನಡೆತಪ್ರ್ಪವರ ಮುಂದು ಗೊಡದಂದು ಮೈಗರೆದು ಜಡಿವಹಿಂದು ಕಾಳಿಯಾ ಮಡುವನ್ನು ಕಲಕಿ ಬಂದು ಕಾಲಮೇಘವಪೋಲ್ವ ರೂಪತಳೆದು ಲೀಲೆಯಿಂ ಶೇಷಗಿರಿಯಲ್ಲಿ ನಿಂದು ಜಾಲವನು ಬೀರುತಿಹ ದೀನಬಂಧು 4
--------------
ನಂಜನಗೂಡು ತಿರುಮಲಾಂಬಾ
ಎಂಥ ಮಹಿಮ ಏನು ಚಲುವನೆ ಶ್ರೀ ಉಡುಪಿ ನಿಲಯ ಪ. ಶಾಂತಯತಿಗಳಿಂದ ಪೂಜಿತ ನಿಂತ ಮಧ್ವಮುನಿಕರಾರ್ಚಿತ ಅ.ಪ. ಮಂಡೆ ಬಾಗಿದ ಹಿಂಡು ಭಕ್ತರಘ ಕಳೆವ ಪುಂಡರೀಕ ನೇತ್ರ ಕನಕ- ಕಿಂಡಿಯಲ್ಲಿ ಕಾಂಬ ರೂಪ1 ಬಾಲರೆಂಟು ಯತಿಗಳಿಂದ ಲೀಲೆಯಿಂದ ಪೂಜೆಗೊಂಬ ಲೀಲಮಾನುಷರೂಪ ರುಕ್ಮಿಣಿ ಲೋಲ ಲೋಕಪಾಲ ಜಾಲ 2 ಕಾಲಕಾಲದ ಪೂಜೆಗೊಂಬ ಬಾಲತೊಡಿಗೆ ಧರಿಸಿಕೊಂಬ ವ್ಯಾಳಶಯನ ಮುದ್ದುಮುಖ ಗೋ ಪಾಲಕೃಷ್ಣವಿಠ್ಠಲನೀತ 3
--------------
ಅಂಬಾಬಾಯಿ
ಎಂಥ ಶೂರನೊ ರಾಮ ಎಂಥ ಧೀರನೊ ಪ ಕಂತುಹರನ ಧನುವನೆತ್ತ ಪಂಥದಿಂದ ಮುರಿದು ಬಿಸುಟ ಅ.ಪ. ಹಲವು ಶೂರರಾಜರದನು ಚಲಿಸಲಾಗದ ಧನುವ ಸುಲಭದಿಂದಲೆತ್ತಿ ಮುರಿದು ಲಲನೆ ಸೀತೆಯೊಲಿಸಿದವನು 1 ಸಕಲ ಕ್ಷತ್ರಿಯರನು ಗೆಲಿದು ಪ್ರಕಟನಾದ ಪರಶುರಾಮ ಶಕುತಿಯನ್ನು ತಾನು ಪರಮ ಯುಕುತಿಯಿಂದ ಗೆಲಿದು ಬಂದ 2 ಸಾಲು ಶಿರನ ಕೀಟವೆಂದು ಬಾಲದಲ್ಲಿ ತಂದ ವೀರ ವಾಲಿಯನೇಕ ಬಾಣದಲಿ ಲೀಲೆಯಿಂದಲಿರಿದ ಜಾಣ 3 ಹತ್ತನಾಲ್ಕು ಲೋಕಗಳನು ಸುತ್ತಿಗೆಲಿದು ಖ್ಯಾತನಾದ ಹತ್ತು ತಲೆಯ ದುಷ್ಟನನ್ನು ಕತ್ತು ಕಡಿದು ಕೆಡಹಿದವನು 4 ರಾಸಿ ದೈತ್ಯರನ್ನು ಕೊಂಡು ದೇಶವನ್ನು ಉದ್ಧರಿಸಿದ ವಾಸವಾದಿ ಸುರನುತ ರಂ- ಗೇಶವಿಠಲರೇಯನವನು 5
--------------
ರಂಗೇಶವಿಠಲದಾಸರು