ಒಟ್ಟು 1233 ಕಡೆಗಳಲ್ಲಿ , 96 ದಾಸರು , 1036 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನನ್ನದೇನಿದೆಯೊ ದೇವ ನಿನ್ನದೆ ಎಲ್ಲವೂ ಪ ಪನ್ನಗಾಸನ ಧೊರೆಯೆ ಸನ್ನುತಾಂಘ್ರಿಯ ಹರಿಯೆ ಅ.ಪ. ಅವನಿಯೊಳು ಪುಟ್ಟಿಸುವ ಭವದೊಳಗೆ ನೂಕುವವಕಿವಿ ಮೂಗು ಕಣ್ಣಿವದನವ ತ್ವಚೇಂದ್ರಿಯದಿ ಅವಿತು ವ್ಯಾಪ್ತತನಾಗಿ ವ್ಯವಹರಿಸುವವ ನೀನೇಅವಸರದಿ ಕಾಯುವ ದೇವ ನೀನೆಯೊ 1 ತಿಳಿಯುವವ ನೀನೆಯೊ ತಿಳಿಸುವವ ನೀನೆಯೊಗಳಿಸುವವ ನೀನೆಯೊ ಬಳಸುವವ ನೀನೆಯೊಬೆಳಿಸುವವ ನೀನೆಯೊ ಕಳೆಯುವವ ನೀನೆಯೊಕೊಳುವವನು ನೀನೆಯೊ ಕಸಿಯುವವ ನೀನೆಯೊ 2 ಅಂತರಂಗದಿ ಅಡಗಿನಿಂತು ಪ್ರೇರಿಸುವನಂತದ್ವಂದ್ವದ ನಟನೆ ಸ್ವಂತತನವೆನಗೆಲ್ಲಿಸಂತರನು ಉದ್ಧರಿಸಲಿಂತು ಭೂಮಿಗೆ ಬಂದುನಿಂತ ಗದುಗಿನ ವೀರನಾರಾಯಣನು ನೀನೆ 3
--------------
ವೀರನಾರಾಯಣ
ಇಂದು ನಾನು ಕರುಣಿಸೊ ಎನ್ನೊಡೆಯನೆ ಪ. ಕೌಸ್ತುಭ ಭೂಷಣಮೆಟ್ಟಿದ ನವರತ್ನದ್ಹಾವಿಗೆಇಟ್ಟ ಕಸ್ತೂರಿ ತಿಲಕವ 1 ಮಂದಹಾಸವು ದಂತಪಂಙÉ್ತಯುಉಂದದ ಕಡೆಗಣ್ಣ ನೋಟವುಅಂದವಾದ ಕುರುಳುಗೂದಲುಮುದ್ದು ಸುರಿವೋ ಮುಖವ ನಾ 2 ಮೊಲ್ಲೆ ಮಲ್ಲಿಗೆ ದಂಡೆ ಕೊರಳಲಿಚೆಲ್ವ ಕಂಕಣ ಕೈಯಲಿಗೊಲ್ಲಸತಿಯರ ಕುಚಗಳಲ್ಲಿ[ಅಲ್ಲಳಿ] ಮಾಡಿ ನಗುವನ3 ವೃಷ್ಟಿ ಕರೆಯಲು ಅ-ಸುರರೆಲ್ಲರು ಓಡಲುಕ್ರೂರ ಕಾಳಿಯ ಫಣಗಳಲ್ಲಿಧೀರ ಕುಣಿಕುಣಿದಾಡಿದ 4 ಎನ್ನ ಬಂಧನ ತರಿಸಿದನೆಎನ್ನ ಪಾಪವು ಓಡಿತುಅನ್ಯದೈವವ ಭಜಿಸಲ್ಯಾತಕೆಮನ್ನಿಸೊ ಹಯವದನನೆ5
--------------
ವಾದಿರಾಜ
ಈ ಮುದ್ದು ಕೃಷ್ಣನೀಕ್ಷಣದ ಸುಖವೆ ಸಾಕು ಪ. ಶ್ರೀಮಧ್ವಮುನಿಯ ಮನೆದೈವ ಉಡುಪಿನ ಕೃಷ್ಣ[ನ]ಅ.ಪ. ನಾಸಿಕ ಕರ್ಣಸುಳಿಗುರುಳು ಮಸ್ತಕದ ನಳಿನನಾಭನ ಸೊಬಗು1 ಕುಂಡಲ ಪ್ರಭೆಯಸಿರಿನಾಮ ಮಕುಟ ನಾಸಿಕದ ವರಮಣಿಯ 2 ಸಕಲ ದೇವೋತ್ತಮನೆ ಸರ್ವಗುಣ ಪೂರ್ಣನೆಅಕಳಂಕ ಅಖಿಳಾಗಮಸ್ತುತನೆ ಅಪ್ರಾಕೃತನೆಅಖಿಳ ಜೀವೋತ್ತಮರ ಭಿನ್ನ ಹಯವದನನೆಮುಕುರ ಕಡೆಗೋಲು ನೇಣುಗಳ ಪಿಡಿದಿಪ್ಪನೆ 3
--------------
ವಾದಿರಾಜ
ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ನಂದಕುಮಾರ ಸಕಲಾಧಾರಾ ಪ ಇಂದೀವರಯುಗಚರಣ ಮನೋಹರ ಕುಂದವದನ ನಿಗಮಾಂತ ಸಂಚಾರಾ ಅ.ಪ ಉಡಿಗೆ ತೊಡಿಗೆಗಳ ಉಡಿಸುವೆ ತೊಡಿಸುವೆ ಮುಡಿಗೆ ಮಲ್ಲಿಗೆ ಮಲ್ಲೆಯಳವಡಿಪೆ | ರಂಗ ಉಡುಪತಿ ಫಾಲಕೆ ತಿಲಕವನಿಡುವೆ ಅಡಿಗಂದುಗೆ ಗೆಜ್ಜೆ ಪಾಡಗವಿಡುವೆ | ರಂಗ 1 ಕಿವಿಗಳಿಗೆ ಮುತ್ತು ಹವಳದಾಭರಣವ ಹವಣಿಸಿ ಸಿಂಗಾರಗೈವೆನೋ | ರಂಗ ನವಮಣಿಮಾಲೆಯ ಕೊರಳಿಗೆ ಧರಿಸುವೆ ದಿವಿಯ ಪೀತಾಂಬರವಳವಡಿಪೇ | ರಂಗಾ 2 ಬೆರಳಿಗುಂಗುರಗಳ ಹರುಷದೊಳಿಡುವೆ ಕರದೊಳಿಡುವೆ ನಿನ್ನ ಮುರಳಿಯನು | ರಂಗ ಚರಣಯುಗಕೆ ನಿನ್ನ ಸಕಲವನರ್ಪಿಪೆ ಕರುಣದಿ ಬಾರೊ ಮಾಂಗಿರಿಯೊಡೆಯಾ | ರಂಗ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಾಯಣ ನಾರಾಯಣ ನಾರಾಯಣ ನಾರಾಯಣ ಪ. ದೇವರದೇವನೆ ಬಾರೊ ದೇವಕಿನಂದನ ಬಾರೊ ದೇವೇಂದ್ರನ ಸಲಹಿದ ದೇವ ಬಾರೊ ಹರಿಯೆ ಅ.ಪ. ಮಚ್ಚನಾಗಿ ಶ್ರುತಿಯ ತಂದಿತ್ತ ಭಕ್ತವತ್ಸಲನೆ ಭೃತ್ಯ ಸತ್ಯವ್ರತನಿಗೊಲಿದ ಮಚ್ಚಬಾರೊ ಹರಿಯೆ 1 ಸಾರಿದ ಸುರರಿಗಾಗಿ ನೀರೊಳಗೆ ಮುಳುಗಿ ಕೂರ್ಮ ಬಾರೊ ಹರಿಯೆ 2 ಧsÀರೆಯನುದ್ಧರಿಸಲು ವರಾಹನಾದವನೆ ಹಿರಣ್ಯಾಕ್ಷನ ಸೀಳ್ದ ಧೀರ ಬಾರೋ ಹರಿಯೆ 3 ನಂಬಿದ ಭಕ್ತರ ಕಾವ ನಂಬೆ ಕರುಣದಿ ಕಲ್ಲ- ಡಿಂಬ ಬಾರೊ ಹರಿಯೆ 4 ಮಾಣವಕವೇಷನಾಗಿ ಕ್ಷೋಣಿ ಅಳೆದವನೆ ದಾನವನ ಸೋಲಿಸಿದ ಜಾಣ ಬಾರೊ ಹರಿಯೆ5 ಕಡಿ[ದು] ದುಷ್ಟನೃಪರ ಬಿಡದೆ ಚಪ್ಪೆಕೊಡಲಿಯ ಪಿಡಿದುಗ್ರ ಒಡೆಯ ಬಾರೊ ಹರಿಯೆ 6 ವೃಂದಾರಕವಂದ್ಯ ಸೇತುಬಂಧದಿ ದಶಕಂಧರನ ಕೊಂದ ರಾಮಚಂದ್ರ ಬಾರೊ ಹರಿಯೆ 7 ಮಲ್ಲರ[ನೆಲ್ಲ] ಸೀಳಿ ಬಲ್ಲಿದ ಮಾವನ ಕೊಂದೆ ಎಲ್ಲರ ವಲ್ಲಭ ಎಂಬೊ ಮಲ್ಲ ಬಾರೊ ಹರಿಯೆ 8 ಬೌದ್ಧನಾಗಿ ದೈತ್ಯರಿಗೆ ಶುದ್ಧಬುದ್ಧಿಯ ತೋರಿ ರುದ್ರನ್ನ ಸೋಲಿಸಿದ ಸುಭದ್ರ ಬಾರೊ ಹರಿಯೆ 9 ಕರ್ಕಶದ ಖಳರನ್ನು ಕಲ್ಕಿರೂಪನಾಗಿ [ಮೂಲೆ ಲಿಕ್ಕಿಸುವ ಸುಜನರ ಚೊಕ್ಕ ಬಾರೊ ಹರಿಯೆ 10 ವಿಜಯ ಹಯವದನ ಭಜಕರ ಭಾಗ್ಯನಿಧಿ ಸುಜನಾಬ್ಧಿ ವಾದಿರಾಜನ ತೇಜ ಬಾರೊ ಹರಿಯೆ 11
--------------
ವಾದಿರಾಜ
ಬಂದಿಯಾತಕೋ ಈ ಭವದೊಳು | ನೊಂದಿಯಾತಕೋ ನೀನೊಂದನರಿಯೆ || ಬಂದಿಯಾತನು ನೀ ಮತಿಮಂದನಾಗದೆ | ಗತಿ ಮುಂದೇನೆಂದು ತಿಳಿಯದಲೆ ಪ ನಾ ನಾ ಎನುತಲಿ ನಾನಾ ಯೋನಿಯೊಳು | ಜನಿಸಿ ಬಂದು ನೀ ಹೀನನೆನಿಸಿಕೊಂಡು || ಅಜ್ಞಾನದೊಳಗೆ ಬೆರೆತು ನೀ - | ನಾರೆಂಬದನರಿಯಲಿಲ್ಲವು ಗುರುತು | ಜ್ಞಾನಿ ಪುರುಷರ ಕೇಳುವದನೆ ಮರೆತು | ಇನ್ನು ಸದ್ಗತಿಗೆ ಆದಿಯೊ ಹೊರತು | ನೀ ಇದನರಿತು 1 ಆರರೊಳಗೆ ಬಿದ್ದು ಆರನು ನೋಡದೆ | ಆರು ಚಕ್ರದ ಮೇಲೆ ಏರಿ ಮ್ಯಾಲಕಿನ್ನು | ತೋರುತಿಹುದು ನೋಡು ರೂಪವಲ್ಲೀ | ಧಾರುಣಿಯೊಳಗೆಲ್ಲ ಅದರ ವ್ಯಾಪವು | ತೋರಿದಾಕ್ಷಣ ಅಳಿದ್ಹೋಯ್ತು ಪಾಪ | ಇದನು ಬಿಟ್ಟು ಮೂರ ನೆನಿಸಿ ಕೆಟ್ಟೀ | ಬಯಸಿ ನೊಂದೀ 2 ನರ ತನು ದೊರೆಕೋದು ಬರಿದೇನೊ | ಎರಡಿನ್ನು ಸರಿಯಾಗೊ ತನಕ | ಬರುವದೇನೊ ಸುಮ್ಮನೆ ಮರುಳಾಗ ಬ್ಯಾಡ || ಸರಿಸು ಅಸ್ಥಿರವೆಂದು ನೀ ಬೇಗದಲಿ | ಸಂಚಿತವೆಲ್ಲ ಕೂಡಿ ಬಂದಿತಿನ್ನೇನು | ಗುರು ಭವತಾರಕನ ಭಜಿಸು ನಿನ್ನ | ಮನಸಿನಿಂದಲಿ 3
--------------
ಭಾವತರಕರು
ಭಯವ್ಯಾಕೆ ಭಕ್ತ ಜನಕೆಪ. ನಯದಿಂದ ಗೆಲಿಸುವನು ನಾಲ್ದಿಕ್ಕಿನೊಳಗಿದ್ದ ಮಾಯವಾದಿಗಳನ್ನು ಅ.ಪ. ಆದಿಯಲ್ಲಿ ಬ್ರಹ್ಮನಿಗೆ ಭೀತಿಯನು ಬಿಡಿಸಿದ ನಾದಮಯನಾದ ದೇವ ಭೇದವಿಲ್ಲದೆ ಎಲ್ಲಾ ಭೇದವೆಂಬುವರನ್ನು ಕಾದ ಬಾಣಲೆಗೆ ತಟ್ಟಿ ಮೋದಿಸಿ ಕೊಲುವ 1 ಉದಯದಲ್ಲಿ ಎದ್ದು ನರ ಸದಮಲಾತ್ಮಕನಾಗಿ ಹೃದಯದೊಳಗೆ ಹರಿಯ ತಂದು ಮುಂದು ಸದಯನು ನೀನೆನುತ ಸದ್ವøತ್ತಿಲುದಯನು ನೀನೆನುತ ದಧಿಚೋರ ಕೃಷ್ಣನ್ನ ಮುದದಿ ಭಜಿಪರಿಗೆ 2 ದುಷ್ಟಮಲ್ಲರ ಎದೆ ಮೆಟ್ಟಿ ಮೆರೆವ ಜಗ- ಜಟ್ಟಿ ಮಧ್ವರಾಯರ ಮುಟ್ಟಿ ಭಜಿಸುತ ನಿತ್ಯ ಇಷ್ಟವನು ಬೇಡಿದರೆ ಕಷ್ಟಗಳನು ಕಳೆವ ಉ- ತÀ್ಕøಷ್ಟ ಹಯವದನ ದೊರೆ 3
--------------
ವಾದಿರಾಜ
ರಾಘವೇಂದ್ರ ಯತಿಸಾರ್ವಭೌಮ ದುರಿ ತೌಗಘದೂರ ತೇ ನಮೋ ನಮೋ ಪ ಮಾಗಧರಿಪು ಮತಸಾಗರ ಮೀನ ಮ ಮಾಘ ವಿನಾಶಕ ನಮೋ ನಮೋ ಅ.ಪ. ಶ್ಲಾಘಿತ ಗುಣಗಣ ಸೂರಿಪ್ರಸಂಗ ಸ ದಾಗಮಜ್ಞ ತೇ ನಮೋ ನಮೋ ಮೇಘ ಶ್ಯಾಮಲ ರಾಮಾರಾಧಕ ಮೋಘ ಬೋಧತೇ ನಮೋ ನಮೋ 1 ತುಂಗಭದ್ರ ಸುತರಂಗಿಣಿ ತೀರಗ ಮಂಗಳಚರಿತ ಶುಭಾಂಗ ನಮೋ ಇಂಗಿತಜ್ಞ ಕಾಳಿಂಗ ಮರ್ದ ಯದು ಪುಂಗವ ಹೃದಯ ಸುಸಂಗ ನಮೋ ಸಂಗಿರ ಚಿಹ್ನಿತ ಶೃಂಗಾರಾನನ ತಿಂಗಳ ಕರುಣಾಪಾಂಗ ನಮೋ ಗಾಂಗೇಯ ಸಮಾಭಾಂಗ ಕುಮತ ಮಾ ತಂಗ ಸಿಂಗ ಶಿತ ಪಿಂಗ ನಮೋ 2 ಶ್ರೀ ಸುಧೀಂದ್ರ ಕರಜಾತ ನಮೋ ನಮೋ ಭೂಸುರ ನುತ ವಿಖ್ಯಾತ ನಮೋ ದೇಶಿಕ ವರ ಸಂಸೇವ್ಯ ನಮೋ ನಮೋ ದೋಷವಿವರ್ಜಿತ ಕಾವ್ಯ ನಮೋ ಕ್ಲೇಶಿತಜನ ಪರಿಪಾಲ ನಮೋ ನಮೋ ಭಾಸಿತ ಕರುಣಾಶೀಲ ನಮೋ ವ್ಯಾಸ ರಾಮ ಪದ ಭಕ್ತ ನಮೋ ನಮೋ ಶಾಶ್ವತ ಕರುಣಾಸಕ್ತ ನಮೋ 3 ಮಣಿ ಸಂ ಭಾವಿತ ಮಹಿಮ ಪಾಲಯ ಮಾಂ ಸೇವಾಪರ ಸರ್ವಾರ್ಥಪ್ರದ ವೃಂ ದಾವನ ಮಂದಿರ ಪಾಲಯ ಮಾಂ ಮಾರ್ಗಣ ಭುಜಗ ವಿನಾಯಕ ಭಾವಜ್ಞ ಪ್ರಿಯ ಪಾಲಯ ಮಾಂ ಕೇವಲ ನತಜನ ಪಾವನರೂಪ ಸ ದಾ ವಿನೋದಿ ಹೇ ಪಾಲಯ ಮಾಂ 4 ಸನ್ನುತ ಮಹಿಮ ಜಗನ್ನಾಥ ವಿಠಲ ಸನ್ಹಿತ ಮಾನಸ ಜಯ ಜಯ ಭೋ ಚಿಹ್ನಿತ ದಂಡಕಮಂಡಲ ಪುಂಡ್ರ ಪ್ರ ಪನ್ನೆ ಭಯಾಪಹ ಜಯ ಜಯ ಭೋ ಮಾನ್ಯ ಮಹಾತ್ಮ ಪ್ರಸನ್ನ ವದನ ಕಾ ರುಣ್ಯ ಪ್ರಯೋದಧೆ ಜಯ ಜಯ ಭೋ ಧನ್ಯ ಕ್ಷಮಾಸಂಪನ್ನ ಬುಧಜನ ಶ ರಣ್ಯ ಸದಾರ್ಚಿತ ಜಯ ಜಯ ಭೋ 5
--------------
ಜಗನ್ನಾಥದಾಸರು
ಹಯವದನಾ ಪಾಲಿಸೋ | ಹಯ ದೈತ್ಯ ನಿಧನಾ ಪ ಭಯಕೃತು ಭಯಹರ | ದಯದೃಶ ತೋರಯ್ಯ ಅ.ಪ. ಅಜ ಜನಕನೆ ಹರಿ | ದ್ವಿಜವರ ವಂದ್ಯನೆನಿಜಪದ ಹೃದಯಾಂ | ಬುಜದಲಿ ತೋರುತ1 ಕರ ಆದರದಲಿ ಪಿಡಿ | ದಾದರಿಸಿದನೇ 2 ಅರಿದರ ವರ ಗ್ರಂಥ ಜಪಸರ ಧರವರ ಉರಗಾತಪ | ಧರಿಸಿಹೆ ಶಿರಿಯನು 3 ಕೌಸ್ತುಭ ಕರ ಪಾದ | ಶತ ಪತ್ರ ನೇತ್ರಾ 4 ಭಾವಕೆ ಒಲಿವನೆ | ಭಾವದೊಳಗೆ ನಿಲ್ಲುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
(2) ಉಡುಪಿ ಕೃಷ್ಣ ಕಂಡೇ ಕಡೆಗೋಲ ಪಿಡಿದನ ಉಡುರಾಜ ವದನನ ಮಂಡೆಯೊಳ್ ಮಯೂರ ಪಿಂಛವನಿಟ್ಟನ ಪ ಪಡುಗಡಲೆಡೆ ಉಡುಪಿಯೊಳಗಿಹ ಕಡಲಣುಗಿಯ ಒಡೆಯಕೃಷ್ಣನ ಕಂಡೇ ಅ.ಪ ಶ್ರಾವಣ ಕೃಷ್ಣ ಪ್ರಪಂಚಗುರುವ ಸುಮಶರಪಿತ ಸುಮನೋಹರ ಶ್ಯಾಮಸುಂದರನ ಸ್ವಪ್ನದಿ 1 ಸತ್ಯವಂತರ್ಗಾಂ ಸತ್ಯಂ ಮುಕ್ತಿನಾಥಂ ಉತ್ತಮತರಚಿತ್ತರಾದ ಭಕ್ತರ ಕಾಯವೆನೆಂದನ 2 ಸುಳ್ಳು ಸುಳ್ಳೆಂದು ಪೇಳುವ ಪೊಳ್ಳನ ಪಾಪಿಯ ತಳ್ಳುವೆ ಸುಖವಿಲ್ಲದಿರುವ ಖುಲ್ಲರ ಜತೆಯೊಳಗೆಂದನ3 ಹರಿಶ್ಚಂದ್ರ ನಳರೊಲು ಕೀರ್ತಿಯನು ಪರ್ಬಿಸಿ ಶರಣರ ಸುಖಸರಣಿಯಲ್ಲಿ ಕರುಣದಿಂದ ಕಾವೆನೆಂದನಾ4 ಕನಸುಮನಸಿನಲ್ಲಿಯೂ ಅನವರತ ತನ್ನಯ ಘನಪದಯುಗವನಜ ತೋರಿ ಅನುವನೀವ ಜಾಜೀಶನ 5
--------------
ಶಾಮಶರ್ಮರು
1. ಗಜೇಂದ್ರಮೋಕ್ಷ ನಾರಾಯಣ ಎನ್ನಿರೊ ನಾರಾಯಣ ಎನ್ನಿ ನಾರದಾದ್ಯಖಿಳ ಮುನಿವಿನುತಾಯ ಪಾಹಿಮಾಂ ಘೋರ ಭವದುಃಖ ಸಂಹಾರಾಯ ಪ ಪಾಂಡುದೇಶದೊಳು ಇಂದ್ರದ್ಯುಮ್ನನೆಂಬ ಭೂ ಮಂಡಲಾಧಿಪನು ವೈರಾಗ್ಯದಲಿ ಹರಿಪಾದ ಪುಂಡರೀಕಧ್ಯಾನಪರನಾಗಿತಪಸಿಲಿರೆಚಂಡತಾಪಸನಗಸ್ತ್ಯಾ ಹಿಂಡು ಶಿಷ್ಯರ ಬೆರೆಸಿ ಬರಲು ಸತ್ಕರಿಸದಿರೆ ಕಂಡು ಗಜಯೋನಿಯೊಳು ಜನಿಸು ಪೋಗೆಂದು ಉ- ತಾ ಶುಂಡಾಲನಾದನರಸ 1 ಕ್ಷೀರಸಾಗರ ತಡದೊಳೈವತ್ತು ಯೋಜನ ವಿ- ಸ್ತಾರದಿಂದಿರುವ ತ್ರಿಕೂಟಾದ್ರಿ ಶೃಂಗತ್ರಯದಿ ರಾರಾಜಿತ ತಾಮ್ರರಚಿತ ಕಾಂಚನದಿಂದ ಮೇರುಸಮ ಗಂಭೀರದಿ ಪಾರಿಜಾತಾಂಭೋಜ ತುಳಸಿ ಮಲ್ಲಿಗೆ ಜಾಜಿ ಸೌರಭಗಳಶ್ವತ್ಥ ಚೂತ ಪುನ್ನಾಗ ಜಂ ವಾರಣೀಂದ್ರನು ಮೆರೆದನು 2 ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲಾ ಕಾನನವು ತೊಳಲುತ್ತ ಬೇಸಿಗೆಯ ಬಿಸಲಿನಲಿ ಕಂಡಿತು ಪಾನಾಭಿಲಾಷೆಯಿಂದ ನಾನಾ ಪ್ರಕಾರದಿಂ ಜಲಕ್ರೀಡೆಯಾಡುತಿರೆ ಏನಿದೆತ್ತಣ ರಭಸವೆಂದುಗ್ರಕೋಪದಿಂ ನೆಗಳು ಏನೆಂಬೆನಾಕ್ಷಣದೊಳು 3 ಒತ್ತಿ ಹಿಡಿದೆಳೆವುತಿರೆ ಇದೆತ್ತಣಯದೆನುತ ಮತ್ತೆ ಇಭರಾಜನೌಡೆತ್ತಿ ಫೀಳಿಡುತ ಎಳೆ ಸೆಳೆದುದು ಬಿಡದೆ ನೆಗಳವು ಇತ್ತಂಡವಿತ್ತು ಕಾದಿತ್ತು ಸಾವಿರ ವರುಷ ಪೊತ್ತರಿಸಿತ್ತೇನೆಂಬೆ ಮತ್ತಾ ಗಜೇಂದ್ರಂಗೆ ಚಿಂತಿಸುತ ಮತ್ತ್ಯಾರು ತನಗೆನುತಲಿ 4 ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ ದಿಂ ದಿವ್ಯಜ್ಞಾನದಿಂ ಕಣ್ತೆರೆದು ಕೈಮುಗಿದು ಮುಕುಂದ ಮುನಿವೃಂದವಂದ್ಯಾ ಇಂದಿರಾರಮಣ ಗೋವಿಂದ ಕೃಷ್ಣ ಭಕ್ತರ ಬಂಧು ಕರುಣಾಸಿಂಧು ತಂದೆ ಸಲಹೆನ್ನ ನಾ ಮಾಯಾಪ್ರಬಂಧದಿ ನೆಗಳಿನಿಂ 5 ಪರಮಾತ್ಮ ಪರಮೇಶ ಪರಿಪೂರ್ಣ ಪರಾತ್ಪರ ಉರುತರ ಪರಂಜ್ಯೋತಿ ಪರಮಪಾವನ ಮೂರ್ತಿ ಪರಮೇಷ್ಠಿ ಪರಮಪುರುಷಾ ನಿರುಪಮ ನಿಜಾನಂದ ನಿರ್ಭಯ ನಿರಾವರಣ ನಿರಂಜನ ನಿರಾಧಾರ ನಿರವೇದ್ಯ ನಿಶ್ಯಂಕ ನಿತ್ಯನೈಮಿತ್ಯಕಾ ನೀ ಸಲಹೆನ್ನನೆಂದಾನೆ 6 ಗುಪಿತ ಕಂಠಧ್ವನಿಯೊ ಳಂತರಾತ್ಮಕನ ನೆನೆವುತ್ತಳುತ್ತಿರಲಿತ್ತ ಕರುಣದಿಂದಾಕ್ಷಣದೊಳನಂತಶಯನದೊಳೆದ್ದನು ಸಂತವಿಸಿ ಸಿರಿಮುಡಿಯ ಗರುಡವಾಹನನಾಗಿ ಚಿಂತೆಬೇಡವೆನುತ ಅಭಯ ಹಸ್ತ ಕೊಡುತ ಶ್ರೀ ದಂತಿವದನನ ನೆಗಹಿದಾ 7 ನೆಗಳ ಬಾಯನು ಚಕ್ರದಲಿ ಸೀಳಿ ಕರಿವರನ ಉಗುವ ಕರುಣದಿಂ ಮೈದಡಹಲ್ಕೆ ಗಜಜನ್ಮ ಕುಂಡಲದಿಂದ ಮಿಗೆ ಶೋಭಿಸುತಲೆಸೆದನು ವಿಗಡ ದೇವಲ ಋಷಿಯ ಶಾಪದಲಿ ಬಿದ್ದಿಳೆಗೆ ಮಿಗೆನಕ್ರನಾಗಿ ಹೂಹೂ ಎಂಬ ಗಂಧರ್ವ ಅಮರರೊಲುಮೆಗೆ ನೆರೆದನೋಲೈಸುತ 8 ಮಣಿಮಯ ಕಿರೀಟಕುಂಡಲ ಹಾರ ಪದಕ ಕಂ ಕಣ ಕೌಸ್ತುಭೋಜ್ವಲ ಸುಗಂಧ ಭೂಷಣ ಹಸ್ತ ಪಾಣಿಯಾ ಶಂಖಚಕ್ರಾಬ್ಜಧ್ವಜ ಕಸ್ತೂರಿ ತಿಲಕ ಪ್ರಣವ ತಾಕಿದನು [ಝಣ ಝಣಿತನೂ]ಪುರ[ದ] ದಂತ ಪಂಕ್ತಿಯ ಕೃಪೆ ಸಿರಿ ಮೊಗದ ಪೀತಾಂಬರದಾಲಂಕೃತದ ಸುರಸಿದ್ಧ ಸಾಧ್ಯ ಸಂದಣಿಯೊಳಗೆ ಮೆರೆದನು 9 ಹರಿಯನುತಿಗೈದಂಘ್ರಿಗೆರಗಲಾಕ್ಷಣದಲಿ ಭರದಿಂದಲೆತ್ತಿ ಕೇಳ್ಮಗನೆನ್ನನೀ ಶರಧಿ ಗಿರಿಶೃಂಗತ್ರಯ ಸಪ್ತದ್ವೀಪದಲಿ [ಧರಣಿದೇವಿ] ವರಲಕ್ಷ್ಮಿಯೊಳು ಗರುಡ ಶೇಷ ನಾರದ ಪ್ರಹ್ಲಾದ ಧ್ರುವ ರೊಲು ಸಿರಿವತ್ಸ ಶಂಖ ಚಕ್ರಾವತಾರದಲಿ ಸ್ಮರಿಸುವವರ ಕಾಯ್ವೆನೆಂದಾ 10 ಆವನಿದನುದಯ ಕಾಲದೊಳೆದ್ದು ಭಕ್ತಿಯಿಂ ಭಾವಶುದ್ಧಿಯಲಿ ಭಜನೆಯ ಮಾಳ್ಪ ಜನರಿಗ ಫಾವಳಿಯ ಪರಿಹರಿಸಿ ನರಜನ್ಮವನು ಕಳೆದು ಪರಿಶುದ್ಧರಾದಹರೆಂ- ದಾ ವಾಸುದೇವನಾಜ್ಞಾಪಿಸಿದ ಗಜೇಂದ್ರ ಸಹಿ ತಾ ವಿಹಂಗಾಧಿಪನನೇರಿ ಬಿಜಯಂಗೈದ ಆ ವೈಕುಂಠಪತಿಯ ನಂಬಿದ ಸೇವಕರಿಗೇನಿದು ಚೋದ್ಯವೇ11
--------------
ಬೇಲೂರು ವೈಕುಂಠದಾಸರು
4. ಗೊರೂರು ಹೇಮಾವತೀ ತೀರ ನಿಲಯಾ ನಮೋ ಶ್ರೀಮನೃಸಿಂಹ ಶರಣೆನ್ನು ಬಿಡದೆ ಮನವೇ ಪ ಅರಸು ಮುನಿವಾಗ ಆತ್ಮರು ಮೊಗವ ತೆಗೆವಾಗ ದುರುಳ ಮಾನವರಿಟ್ಟೆಡೆಯಲಿರುವೆಂಬಾಗ ಸುರರು ಮ ತ್ಸರಿಪಾಗ ನರಸಿಂಹ ಶರಣೆನ್ನು ಮನವೇ 1 ಮುಗಿಲಗಲದಾಪತ್ತು ಕವಿವಾಗ ಕ್ರೂರಗೃಹ ಪಗೆಗಳಿಟ್ಟುಣಿಪಾಗ ಅನಲ ಜಲಭಯದಿ ಮಿಗೆ ಮುಳುಗುವಾಗ ರೋಗಗಳು ಪೀಡಿಸುವಾಗ ಮೃಗರಾಜವದನ ಶರಣೆನ್ನು ಬಿಡದೆ ಮನವೇ 2 ಸುಖವ ಪಡುವಾಗ ದು:ಖಕ್ಕೆ ಮನವ ತೆಗೆವಾಗ ಅಖಿಲ ಪಾತಕದ ನೆರೆಕಾಲಲೊದೆವಾಗ ಮಖಮಥನ ಕಮಲಭವಮುಖ ದಿವಿಜವಂದ್ಯಪದ ನಖನೆ ಶ್ರೀ ವೈಕುಂಠಪತಿ ಚನ್ನರಾಯ[ನೆನುಮನವೆ] 3
--------------
ಬೇಲೂರು ವೈಕುಂಠದಾಸರು
ಅಧ್ಯಾಯ ಐದು ಲೋಕ ಮೋಹಕ: ಪಾತು ಮಾಧವ: ಧ್ವನಿ ರಾಗ:ಯರಕಲ ಕಾಂಬೋದಿ ಅಟತಾಳ ತಿರುಗಿ ವೇಂಕಟಗಿರಿ ಏರಲು ಪ ಪದ್ಮನಾಭನ ಸ್ಮರಿಸಿ ಬಿದ್ದಳು ಮೂರ್ಛಿತಳಾಗಿ ಸದ್ದು ಮಾಡಿದರಲ್ಲಿ ಇದ್ದ ಗೆಳತಿಯರೆಲ್ಲ ಮುದ್ದು ಮುಖದವಳೆ ನೀ ಎದ್ದು ಮಾತಾಡೆಂದರು ಪದ್ಮಿನಿಯು ತಾ ಕೇಳಿ ಎದ್ದು ನುಡಿಯದೆ ಇರಲು ಸಿದ್ಧಮಾಡಿ ಬೇಗೊಬ್ಬ ಬುದ್ಧಿವಂತೆಯ ಕಳುಹಿ ಗದ್ದಲಮಾಡದೆ ಅಂದಣವನು ತರಿಸಿ ಪದ್ಮ ಗಂಧಿಯ ಕೊಂಡು ಎದ್ದು ನಡೆದರು ಪುರಕೆ ಸುದ್ದಿ ಹರಡಿತು ಅಲ್ಲಿ ಗದ್ದಲಾಯಿತು ಬಹಳ 1 ಬಂದಳಲ್ಲಿಗೆ ತಾಯಿ ಅಂದಳೀಪರಿ ನೋಡಿ ಇಂದು ಎಲ್ಲಿಗೆ ಚಿಕ್ಕ ಕಂದಮ್ಮ ನೀ ಪೋಗಿದ್ದೆ ಇಂದು ಬಾಡಿಹುದೇಕೆ ಇಂದು ಮೈಯೊಳು ಜ್ವರ ಬಂದಿಹುದೇಕಮ್ಮಯ್ಯ ಮುಂದೆ ಮಾತಾಡದಿರಲು ತಂದೆ ಕೇಳಿದನಾಗ ಸುಂದರಿಯಳೆ ದಾರೇನಂದರಮ್ಮಯ್ಯ ನಿನಗೆ ಅಂದು ಅವರನು ಬಿಡದೆ ಕೊಂದು ಹಾಕುವೆ ಪೇಳು ಅಂದ ಮಾತಿಗೆ ತಾನು ಒಂದು ಮಾತಾಡಲೊಲ್ಲಳು 2 ತಿಳಿಯಲೊಲ್ಲದು ಎಂದು ಬಳಲಿ ಆಕಾಶರಾಜ ಕಳವಳಿಸುತ ಕರೆಕಳಿಸಿ ಬಲ್ಲವರನು ತಿಳಿಯಬಲ್ಲವರೆಲ್ಲ ತಿಳಿದು ಹೇಳಿರಿ ಎಂದ ಕೆಲವರೆಂದರು ಪಿತ್ತ ತಲೆಗೆ ಏರಿಹುದೆಂದು ಕೆಲವರೆಂದರು ಭೂತ ಬಲಿಯ ಚಲ್ಲಿರಿ ಎಂದು ಕೆಲವರೆಂದರು ಗ್ರಹಗಳ ಬಾಧೆ ಇರುವದು ಉಳಿದ ಮಂದಿಗೆ ಮತ್ತೆ ತಿಳಿಯಲಾಗದಾಯಿತು ಚಲುವನಂತಾದ್ರೀಶನ ಚಲುವಿಕೆಯನೆ ಕಂಡು 3 ವಚನ ಬಹುಶೋಕವನು ಮಾಡುತಲಿ ತಾ ಕರಿಸಿ ಕೇಳಿದನು ನಾಕೇಶಗುರು ಹೀಗೆ ತಾ ಕೇಳುತಲಿ ನುಡಿದ ಆಕಾಶನೃಪ ಚಿಂತೆಯಾಕೆ ಬ್ರಾಹ್ಮಣರ ಏಕಾದಶಾವರ್ತಿ ಏಕಚಿತ್ತದಲಿ 1 ಲೇಸಾಗಿ ತಿಳಿಯೆಂದು ಉರ್ವೀಶ ಭಕುತಿಯಂ ಆಸನಾದಿಗಳಿಂದ ಭೂಸುರರಿಗೆ ಅರ್ಪಿಸಿ ಸಂತೋಷವನು ಮಾಡಿರಿ ಎಂದು ಆಶು ಕಳುಹಿದನಗಸ್ತೇಶ್ವರನಾಲಯಕೆ 2 ಧ್ವನಿ ಕೇವಲ ಚಿಂತೆಯಿಂದಲೇ ದೇವಿಬಕುಲಾವತಿ ತಾನು1 ಪರಿವಾಣದಲ್ಲಿಟ್ಟುಕೊಂಡು ಇದ್ದಲ್ಲೆ ಗೋವಿನಂತೆ 2 ಆಲಯದಿ ಜಗತ್ಪಾಲಯ ಮಲಗಿದ್ದು ಕಂಡು ಬಾಲೆ ತಾಮಾತಾಡಿದಳು ಇಂದು 3 ಹೆಚ್ಚಿನ ವರಹ ಅಚ್ಯುತ ವಾಮನ ಏಳೊ 4 ಉದ್ಧರಿಸಿದಾತನೆ ಏಳೊ ಮುದ್ದು ಹಯವದನ ಏಳೋ 5 ಕೊಡದೆ ಸೃಷ್ಟಿಕರ್ತನು ಹರಿವಾಣ ಕೆಳಗಲ್ಲೆ ದಿಟ್ಟನಡೆದಳು ಬದಿಯಲಿ6 ಎನುತ ಮುಸುಕ ಕಂಡು ಅಂತ:ಕರಣದಿ ನುಡಿದಳು7 ಧ್ವನಿ ರಾಗ:ಕಾಪಿ ಅಟತಾಳ ಯಾಕೆ ಮಲಗಿದೆ ನೀ ಏಳೋ ಅಣ್ಣಯ್ಯಾ ವೇಂಕಟ ಯಾಕೆ ಮಲಗಿದೆ ಏಳೋ ಏನು ಚಿಂತೆಯು ಪೇಳೊ ಲೋಕ ಸಾಕುವ ದಯಾಳೋ ಅಣ್ಣಯ್ಯ ವೇಂಕಟಪ ಬಾಳ ಬಳಲಿದಿಯೊ ಹಸಿದು ಮಾತಾಡದಂಥ ಮೂಲ ಕಾರಣವೇನಿದು ಹಾಲುಸಕ್ಕರೆ ತುಪ್ಪಾಯಾಲಕ್ಕಿ ಪರಮಾನ್ನ ಬಾಲಯ್ಯ ನೀನು ಉಣಲೇಳೋ 1 ವಟದೊಳು ಹೆಬ್ಬುಲಿಯ ಕಂಡಂಜಿದಿಯೇನೊ ನೆಲೆಯು ತಿಳಿಯದು ನಿನ್ನ ಪ್ರಳಯ ಕಾಲಕ್ಕೆ ಆಲದೆಳೆಯೊಳು ಮಲಗಿದವನೋ2 ಹಗಲ್ಹೊತ್ತು ಮಲಗಿದ ದವನಲ್ಲೊ ಹೆತ್ತತಾಯಿ ಆಣೆ ಸತ್ಯವಾಣಿ ನೀಪೇಳೋ ಚಿತ್ತ ವ್ಯಾಕುಲವು ಯಾಕೆ3 ಕೊಂಬುವರೋಮುನ್ನ ಇಂದು ಮೋಹಿತನಾಗಿರುವಿ4 ಬಾಹುವದುಕಂಡು ಮರಳು ಮಾಡಿದಳೋ ನಿನ್ನ 5 ತಕ್ಕ ಉಪಾಯಾ ಅಕ್ಕರವಾಗುವದೆನಗೆ 6 ಎನ್ನ ಮುಂದೆ ನೀ ಸಂಶಯ ಬಿಡು ಚನ್ನಿಗನಂತಾದ್ರೀಶನೆ 7 ವಚನ ಕಣ್ಣೀರುವರಸುತಲೆದ್ದು ಕೀರವಾಣಿಯೇಕೇಳು ಘೋರು ದು:ಖವ ತನಗೆ ಆರಿಗುಸರಲಿ ನಾನು ಆರಿ ಹೇಳುವೆ ನಿನಗೆ ಸಾರಾಂಶ ಮಾತು 1 ನೀನೆ ಎನಗ್ಹಿರಿಯಣ್ಣ ನೀನೆಗಜರಾಜೇಂದ್ರ ವರಧ್ರುವರಾಯ ನೀನು ಸರ್ವವು ಅಭಿಮಾನ ರಕ್ಷಕಳು 2 ಎಂಬೋರನ್ಯಾರನು ನಾ ಎನ್ನ ಮನಸ್ಸಿನ ಅರಣ್ಯದೊಳು ರೂಪ ಲಾವಣ್ಯ ಮುಖವು ಹುಣ್ಣಿಮೆಯ ಚಂದ್ರ 3 ಕಣ್ಣಮೂಗಿಲೆ ಸಂಖ್ಯೆ ಜನ್ಮದಲಿ ಮಾಡಿದ್ದು ಅನ್ಯಾಯದಲಿ ಎನ್ನ ಪ್ರಾಣವನು ಬಿಟ್ಟಿತು ಉಳಿದೆ ಮುನ್ನವಳ ಹೊರತು ಮನ ಉಣ್ಣಲೊಲ್ಲದು ನಿದ್ರೆ ಕಣ್ಣಿಗಿನ್ನೆಲ್ಲಿ 4 ನೀನು ಎಂದದು ಮೋಹಿಸುವಂಥ ಜಾಣೆಯನು ಕಳೆದಂಥ ಮಾನಿನಿಯ ಇರಲುನಾನು ಬದುಕುವನಲ್ಲ ಖೂನ ಪೇಳುವೆನು 5 ಯಾನ ಬರುವದು ಹೆಚ್ಚು ಉಂಟು ಕ್ಷೋಣಿಯಲಿ ಕಟ್ಟಿ, ದಾನದೊಳು ಸಾಹಸ್ರದಾನ ಪಾತ್ರರಿಗೆ ತಿಳಿ ಒಂದು ಕಲ್ಯಾಣ ಕಟ್ಟಿದರೆ 6 ಧ್ವನಿ ರಾಗ:ಸಾರಂಗ ಭಿಲಂದಿತಾಳ ಬಕುಲಾದೇವಿ ತಾ ನುಡಿದಳು ಆ ಕಾಲಕ್ಕೆ ಹೀಗೆ ದೇವಾಧೀಶನೆ ನಿನ್ನ ಕೇವಲ ಮರುಳು ಈವತ್ತಿಗೆ ಮಾಡಿದಳು ಯಾವಕೆ ಅವಳು 1 ಪೂರ್ವಜನ್ಮದಲಾಕೆ ಯಾವಕೆ ಬಂದಿಹಳು ಆ ವಾರ್ತೆ ಪೇಳೊ 2 ಇಂಥ ಮಾತನು ಲಕ್ಷ್ಮಿಕಾಂತಾ ಚಿಂತಿಸಿ ನುಡಿದಾ 'ಶ್ರೀಮದನಂತಾದ್ರೀಶ’ 3 ವಚನ ತಾ ವನದರಲಿರುತಿರಲು ದೇವಿಯನು ಅಪಹರಿಸಿ ತಾ ಒಯ್ಯ ಬೇಕೆಂಬೋ ಭಾವದಲಿ ಬಂದಾ ಆ ವೇಳೆಯಲಿ ಅಗ್ನಿದೇವ ಪತ್ನಿಯಲ್ಲಿದ್ದ ಶ್ರೀ ವೇದವತಿಯನ್ನು ದೇವೇಂದ್ರನ ಸಹಿತ ಆವಾಹನ ಮಾಡಿ ತಾ ವಾಸಮಾಡಿದಳು ಕೈಲಾಸದಲ್ಲಿ1 ಮುಂದೆ ರಾಮನು
--------------
ಅನಂತಾದ್ರೀಶ - ಕಥನಕಾವ್ಯಗಳು
ಎಚ್ಚರಿಕೆಚ್ಚರಿಕೆ ಪ. ನಿಶ್ಚಿಂತೆಯಲಿ ಹರಿಯ ಧ್ಯಾನವ ಮಾಡುವುದಕ್ಕೆ- ಅ.ಪ ಅಜನು ತೊಳೆದು ಅರ್ಚಿಸುವ ಶ್ರೀಪಾದಕ್ಕೆ ಎಚ್ಚರಿಕೆಧ್ವಜವಜ್ರರೇಖೆಯಿಂದೊಪ್ಪುವ ಪಾದಕ್ಕೆ ಎಚ್ಚರಿಕೆÀವ್ರಜದÀ ಗೋಪಿಯರು ಭಜಿಸುವ ಪಾದಕ್ಕೆ ಎಚ್ಚರಿಕೆಸುಜನರೆಲ್ಲರು ಬಂದು ಎರಗುವ ಪಾದಕ್ಕೆ ಎಚ್ಚರಿಕೆ 1 ಸುರರೆಲ್ಲರು ಬಂದು ಎರಗುವ ಪಾದಕ್ಕೆ ಎಚ್ಚರಿಕೆ ಸರಸಿಜಾಕ್ಷಿ ಸವಿದೊತ್ತುವ ಪಾದಕ್ಕೆ ಎಚ್ಚರಿಕೆಗರುಡನೇರಿ ಮೆರೆವ ಗಂಭೀರ ಪಾದಕ್ಕೆ ಎಚ್ಚರಿಕೆಉರಗನ ಮೇಲೆ ಓಡ್ಯಾಡಿದ ಪಾದಕ್ಕೆ ಎಚ್ಚರಿಕೆ2 ಲಲನೆಯರ ಸ್ತನದಲ್ಲಿ ಕುಣಿದಂಥ ಪಾದಕ್ಕೆ ಎಚ್ಚರಿಕೆಜಲಜಾಸನ ಬಂದು ವಂದಿಪ ಪಾದಕ್ಕೆ ಎಚ್ಚರಿಕೆಶಿಲೆಯ ಸ್ತ್ರೀಯಳ ಮಾಡಿದ ಶೃಂಗಾರ ಪಾದಕ್ಕೆ ಎಚ್ಚರಿಕೆಚೆಲುವ ಹಯವದನನ ಚರಣಾರವಿಂದÀಕ್ಕೆ ಎಚ್ಚರಿಕೆ3
--------------
ವಾದಿರಾಜ