ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಋ) ವಿಶೇಷಸಂದರ್ಭದ ಹಾಡುಗಳು ಬರಗಾಲವನ್ನು ಕುರಿತ ಹಾಡುಗಳು ವನಜಭವಾದಿಗಳನು ಪಾಲಿಪ ದೇವ ಪ ಸದಯ ನೀನಾದರೆ ಬದುಕಿಸಿ ಪಶುಗಳ ಮುದವನು ತೋರಿಸು ಮಧುಸೂಧನ ಈಗ 1 ಇದಿರಿಗೆ ನೋಡಲಾರದೆ ನಿನ್ನ ದೂರಿದೆ ಇದು ಒಂದು ತಪ್ಪು ಎನ್ನದು ಎಂದು ಮನ್ನಿಸು 2 ವಿಷದ ನೀರನು ಕುಡಿದಸುವನ್ನು ಕಳಕೊಂಡು ಪಶುಪಾಲರಿಗೆ ನೀನಸುವಿತ್ತು ಪೊರೆದೆ 3 ಹೊಟ್ಟಯೊಳಗೆ ಸತ್ತು ಹುಟ್ಟಿದ ಶಿಶುವನು ಮುಟ್ಟಿ ಜೀವವನಿತ್ತೆ ಕೃಷ್ಣಾಕೃಪಾಕರ 4 ಗುರುಸುತನನು ಯಮಪುರದಿಂದ ಕರೆತಂದ ಪರಮ ಶ್ರೀ ಪುಲಿಗಿರಿ ವರದ ವಿಠಲರಾಯ 5
--------------
ವೆಂಕಟವರದಾರ್ಯರು
ನಿನಗಿದು ಘನವೆ-ನಿತ್ಯಾತ್ಮಕವನಜಭವಾದಿಗಳನು ಪಾಲಿಪದೇವಪ ಸದಯನೀನಾದರೆ-ಬದುಕಿಸಿ ಪಶುಗಳ ಮುದವನು ತೋರಿಸು ಮಧುಸೂಧನ ಈಗ 1 ಇದಿರಿಗೆ ನೋಡಲಾರದೆ ನಿನ್ನ ದೂರಿದೆ ಇದುವೊಂದು ತಪ್ಪುಯನ್ನದು ಎಂದು ಮುನ್ನಿಸು 2 ವಿಷದ ನೀರನು ಕುಡಿ-ದಸುವನ್ನು ಕಳಕೊಂಡ ಪಶು ಪಾಲಕರಿಗೆ ನೀನಸುವಿತ್ತು ಪೊರೆದೆ 3 ಹೊಟ್ಟೆಯೊಳಗೆ ಸತ್ತು ಹುಟ್ಟಿದ ಶಿಶುವನ್ನು ಮುಟ್ಟಿ ಜೀವನವಿತ್ತೆ ಕೃಷ್ಣಾಕೃಪಾಕರ 4 ಗುರುಸುತನನು ಯಮ ಪುರದಿಂದ ಕರೆತಂದ ಪರಮ ಶ್ರೀ ಪುಲಿಗಿರಿ ವರದ ವಿಠಲರಾಯ 5
--------------
ಸರಗೂರು ವೆಂಕಟವರದಾರ್ಯರು