ಒಟ್ಟು 16 ಕಡೆಗಳಲ್ಲಿ , 11 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ನಾಟಿ ಅಗ್ರಹಾರದ ಶ್ರೀರಾಮ) ಕಂಡಿರೆ ನಾಟಿ ಕೋದಂಡ ರಾಮನ ಪದ್ಮ- ಜಾಂಡದಿ ನಾಯಕನಾ ಕಟಕ ಕಿರೀಟಧಾರಿ ಮಾ- ರ್ತಾಂಡ ಕೋಟಿಪ್ರಭನಾ ಪ. ಭೂತಳದೊಳಗೆ ವಿಖ್ಯಾತರಾಗಿಹ ರಘು- ನಾಥ ಒಡೆಯರ ಮೇಲೆ ಪ್ರೀತಿಯಿಂದಲಿ ಬಂದ ಪವಮಾನವಂದಿತ- ನೀತನು ನಿಜ ಜನರ ಬೀತಿಯ ಬಿಡಿಸುವೆನೆಂದು ಬಿಲ್ಲಂಬುಗ- ಳಾಂತು ಕರಾಬ್ಜದಲಿ ಪಾತಕಗಳ ಪರಿಹಾರಗೈದರಿಗಳ ಘಾತಿಸುವನು ಜವದಿ 1 ಕಡು ಪರಾಕ್ರಮಿ ವಾಯಿನು ಧಿಕ್ಕರಿಸಿ ಕೈ ಪಿಡಿದಂತೆ ರವಿಜನಸು ಬಡವರ ಭಕ್ತಿಯ ದೃಢಕೆ ಮೆಚ್ಚುತ ಜಗ- ದೊಡೆಯನು ಸಂತಸದಿ ಒಡೆಯ ನೀ ಸಲಹೆಂದು ವಂದಿಸಿ ತುಲಸಿಯ ಕೊಡುವನು ಕರುಣ ಕಟಾಕ್ಷದಿ ಪುರುಷಾರ್ಥ ತಡೆಯದೆ ತವಕದಲಿ 2 ಎರಡು ಭಾಗದಿ ಭಕ್ತ ಗರುಡ ಮಾರುತಿಯರ- ನಿರಿಸಿ ಕೊಂಡವನುದಿನದಿ ನಿರವಧಿ ಸೇವೆಯ ಕೈಕೊಂಡು ಜಾನಕಿ- ವರನಿಹನೀಪುರದಿ ಸಿರಿವರ ವೆಂಕಟಗಿರಿ ರಾಜನಿವನೆಂದು ನೆರೆ ನಂಬಿ ಸೇವಿಪರಾ ಪರಿಕಿಸಿ ತನ್ನಯ ಚರಣ ಸೇವೆಯನಿತ್ತು ಪೊರೆವನು ಕರುಣಾಕರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಈ ಸುಖವ ಬಿಟ್ಟನ್ನು ಬೇರೆ ಸುಖವುಂಟೆ ವಾಸುದೇವನ ಭಜಿಸಿ ಸುಖಿಯಾಗು ಮನವೆ ಈ ಸುಖವ ಬಿಟ್ಟಿನ್ನು ಬೇರೆ ಸುಖವುಂಟೆ ಪ ಕಾಮಕ್ರೋಧಾದಿಗಳ ಕಡೆಗೊತ್ತಿ ನಿರತ ನಿ ಷ್ಕಾಮನಾಗಿಯೆ ತುಲಸಿ ಕುಸುಮಗಳ ತಂದು ಪ್ರೇಮಪೂರಿತನಾಗಿ ಸರ್ವಪರಿಪೂರ್ಣ ಶ್ರೀ ರಾಮಪೂಜೆಯಗೈದು ಸುಖಿಯಾಗು ಮನವೆ 1 ಸೂನು ಮನೆ ಮೊದಲಾದ ಮಮಕಾರವನು ಬಿಟ್ಟು ಧ್ಯಾನವನು ಶ್ರೀಹರಿಯ ಮೂರ್ತಿಯೊಳಗಿಟ್ಟು ಸಾನುರಾಗದಿ ಹರಿಯ ನಾಮಸುಧೆಯನು ನೀನು ಪಾನವನುದಿನ ಗೈದು ಸುಖಿಯಾಗು ಮನವೆ 2 ಧರೆಯೊಳತ್ಯಧಿಕವೆಂದೆನಿಪ ಚಿಕ್ಕನಾಗಾಖ್ಯ ಪುರದೊಳಗೆ ಮಹಿಮೆಯಿಂ ಭಕ್ತರನು ಪೊರೆವ ಗುರು ವಾಸುದೇವಾರ್ಯರೂಪ ವೆಂಕಟಪತಿಯ ಚರಣದಾಸ್ಯವ ಪಡೆದು ಸುಖಿಯಾಗು ಮನವೆ3
--------------
ನಾರಾಯಣದಾಸರು
ಚರಣಕಮಲಯುಗಕೆ ನಮಿಪೆ ನಿರುತವನುದಿನ | ಶ್ರೀ ರಾಘವೇಂದ್ರ ಪ ಕರುಣಾಸಾಂದ್ರ ಯತಿಕುಲೇಂದ್ರ ಅ.ಪ ವೇನಮತವಿದಾರ ಸುಂದರ ಜ್ಞಾನದಾತ ಗುರುವರ | ಶ್ರೀನಾಥನ ಪದಪಂಕಜಧ್ಯಾನನಿರತ ಸುಗುಣಭರಿತ 1 ಮಧ್ವಶಾಸ್ತ್ರಪಠಿಸಿ ಬಹುಪ್ರಸಿದ್ಧಟೀಕೆ ರಚಿಸುತ | ಸದ್ವೈಷ್ಣವ ಸಿದ್ಧಾಂತವೇ ಶುದ್ಧವೆನಿಸಿ ಮೆರೆದ ಧೀರಾ 2 ನರಹರಿ ಸಿರಿರಾಮಕೃಷ್ಣ ವರವೇದವ್ಯಾಸರು | ಇರುತಿರುವರು ನಿನ್ನೊಳು ತವ ಪರಿಜನ ಸೇವೆಗಳ ಕೊಳುತ3 ವಾರಾಹಿ ಸುಕ್ಷೇತ್ರನಿಲಯ ಚಾರುಚರಿತ ಗುಣಮಯ | ಆರಾಧಿಪ ದೀನಾಳಿಗೆ ಸಾರಸೌಖ್ಯವೀವ ಕಾವ 4 ಶ್ರೀಶಕೇಶವಾಂಘ್ರಿದೂತ ದಾಸಜನನುತ | ಲೇಸಾಗಿಹ ಭೂಸುರ ಸಹವಾಸವಿತ್ತು ಕರುಣಿಸಯ್ಯ 5
--------------
ಶ್ರೀಶ ಕೇಶವದಾಸರು
ತ್ರಾಣಿ ಶ್ರೀ ಕೃಷ್ಣವೇಣಿ ಪ್ರಾಣಪತಿ ಪದಕಮಲ ಕಾಣಿಸು ಹೃದಯದಿ ತ್ರಾಣಿ ಶ್ರೀ ಕೃಷ್ಣ ವೇಣಿ ಪ ಯಮಧರ್ಮತನಯೆ ಶ್ರೀ ಕೃಷ್ಣ ಸಂಗದಿ ಜನಿಸಿ ಕಮಲ ಸಂಭವನ ಲೋಕದಲಿ ಮೆರೆದೆ ಸುಮನಸರ ನುಡಿಗೇಳಿ ಲೋಕಗಳ ದುರಿತೋಪ ಶಮನ ಗೊಳಿಸಲು ಬಂದೆ ತುಮಲ ಹರುಷದಲಿ 1 ಭೂತನಾಥನ ಜಟಾಜೂಟದಿಂದುದ್ಭವಿಸಿ ಶ್ವೇತಪಿಂಗಳ ಶೈಲಶಿಖರಕಿಳಿದೇ ಭೂತಳಕೆ ಭೂಷಣಳೆನಿಸಿ ಪೂರ್ವವನಧಿ ನಿ ಕೇತನವನೈದಿ ಸುಖಿಸಿದಿ ನಿನ್ನ ಪತಿಯೊಡನೇ 2 ಪ್ರಾಣಿಗಳು ನಿನ್ನ ಜಲಪಾನವನು ಗೈಯೆ ನಿ ತ್ರಾಣ ಸಂಹಾರ ವ್ಯಾಧಿಗೆ ಭೇಷಜಾ ಪ್ರಾಣ ಪ್ರಯಾಣ ಪಾಥೇಯವೆಂದರಿಯೆ ನಿ ರ್ವಾಣಪದವಿತ್ತು ಕಲ್ಯಾಣವಂತರ ಮಾಳ್ಪೆ 3 ಜನಪದಗಳಾಗಿ ಕಾನನವಾಗಿ ಮನ್ವಾದಿ ದಿನಗಳಲ್ಲಾಗಿ ಮತ್ತೇನಾಗಲೀ ಮನುಜ ಮಜನಗೈಯೆ ವಾಜಪೇಯಾದಿ ಮಖ ವನುಸರಿಸಿದಕೆ ಫಲವೇನು ತತ್ಪಲವೀವೆ 4 ಅರವತ್ತು ಸಹಸ್ರ ವರುಷಂಗಳಲ್ಲಿ ನಿ ರ್ಜರ ತರಂಗಿಣಿಯ ಮಜ್ಜನದ ಫಲವು ಗುರುವು ಕನ್ಯಸ್ಥನಾಗಿರಲು ಒಂದಿನ ಮಿಂದ ನರರಿಗಾ ಪುಣ್ಯಸಮನೆನಿಸಿ ತತ್ಫಲವೀವೇ 5 ಮನನಶೀಲ ಸುಯೋಗಿಗಳಿಗಾವ ಗತಿಯು ಇಹ ವನುದಿನದಿ ನಿನ್ನ ತೀರದಲಿ ಇಪ್ಪಾ ಮನುಜೋತ್ತಮರಿಗೆ ಆ ಗತಿಯಿತ್ತು ಪಾಲಿಸುವೆ ಅನುಪಮ ಸುಕಾರುಣ್ಯಕೆಣೆಗಾಣಿ ಜಗದೊಳಗೆ 6 ತಾಯೆ ಎನ್ನನುದಿನದಿ ಹೇಯ ಸಂಸಾರದೊಳ ಗಾಯಾಸ ಗೊಳಿಸದಲೆ ಕಾಯಬೇಕೊ ವಾಯುಪಿತ ಶ್ರೀ ಜಗನ್ನಾಥ ವಿಠ್ಠಲ ಹೃ ತ್ತೋಯಜದೊಳಗೆ ಕಾಂಬುಪಾಯ ಮಾರ್ಗವ ತೋರೆ 7
--------------
ಜಗನ್ನಾಥದಾಸರು
ಧನವು ಇದ್ದರೆ ಸಾಕು ಜನರಿಗೆ ಧನವು ಇದ್ದರೆ ಸಾಕು ಪ ಧನದೋರದಾತಗೆ ಗುಣವಿಲ್ಲವನುದಿನ ಧನವಿಲ್ಲದಾತನು ವನದ ಪಾಮರನು ಅ.ಪ ತಂದೆ ತಾಯಿಗಳಿಲ್ಲ ಬಂಧುಬಾಂಧವರಿಲ್ಲ ಹಿಂದುಮುಂದುದಿಸಿದ ತಮ್ಮಂದಿರನೊಲ್ಲ 1 ಒಡವೆಯುಳ್ಳಾತಗೆ ನಡೆಯಬಾರದು ಕಾಲು ನಡೆವಾಗ ಬಡವರ ಎಡವುತ್ತ ಕಾಣನು 2 ಅರ್ಥವ ಪುಂಜಕನರ್ಥ ಯಥಾರ್ಥವು ಧೂರ್ತನಾದರು ತಾನು ಕೀರ್ತಿಸಿಕೊಂಬನು 3 ಸೆಡವೆಂಬ ಪುತ್ರನು ಒಡಲೊಳು ಜನಿಸುವ ಮಡದಿ ಗರ್ವಿತೆಯಾಗಿ ಪಿಡಿದಳು ಕರವನು 4 ಉತ್ತಮೋತ್ತಮನಾಗಿ ಅಧಮನುತ್ತಮನಪ್ಪ ಮೃತ್ಯುಮಾನಿನಿ ವ್ಯರ್ಥ ಮಗನ ಪಡೆಯುವಳು 5 ಉಡಿಗೆ ಆಭರಣಕ್ಕೆ ನುಡಿಯಬಾರದು ಬಾಯಿ ಕಿಡಿಯಿಡೆ ಕಂಗಳು ಜಡದ ಕರ್ಣಗಳು 6 ಕಟ್ಟಲು ಅರ್ಥವ ಹೊಟ್ಟೆಯೊಳು ಹಸುವಿಲ್ಲ ಭ್ರಷ್ಟ ಅನಾಥರ ಶ್ರೇಷ್ಠ ಸೃಷ್ಟಿಯೊಳಾತ 7 ಬಡಮನಸಾಗಿಯೆ ನುಡಿಯ ಬಂದವನೊಳು ಸಡಗರದಿಂದಲೆ ಸೆಡಕ ತೋರುವನು 8 ಅರಸು ಆತನ ಕಂಡು ಕರೆಸಿ ಉಚಿತವಿತ್ತು ಸರಸವನಾಡಿ ವಿಹರಿಸುತ್ತಲಿಹನು 9 ಫಣಿಗಿರಿಯೊಳು ನಿಂತ ವರಾಹತಿಮ್ಮಪ್ಪನು ಹಣವನಿತ್ತವರಿಗೆ ಉಣಿಸುವಭೀಷ್ಟವ 10
--------------
ವರಹತಿಮ್ಮಪ್ಪ
ನಂಬಿರೋ ಮನವನುದಿನಾ ಪ ನಂಬಿರೋ ಮನವನುದಿನಾ | ನಂಬಿದರಿಂಬಾಗುವನಾ 1 ಸುರಮುನಿರಂಜನು ಸುರರಿಪು ಭಂಜನಾ | ನಿರುಪಮ ಕಂಜನಯನ ವದನಾ 2 ಈರೆರಡಾಸ್ಯನ ಪಿತ ಪದ್ಮಾಸ್ಯನೆ | ಈ ರೈದಾಸ್ಯನ ಕೊಂದವನಾ 3 ಅಸುರನ ಕಂದನ ನುಳಹಿದಾ ನಂದನ | ವಸುದೇವ ಬಂಧನ ಹರಿಸಿದನಾ 4 ಇಹಪರ ವಂದ್ಯನ ದೇವಕಿ ಕಂದನ | ಮಹಿಪತಿ ನಂದನ ಜೀವನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನ ಧ್ಯಾನವ ಕೊಡು ಎನ್ನ ಧನ್ಯನ ಮಾಡು ಚೆನ್ನ ಶ್ರೀ ಶೇಷಾದ್ರಿ ಸನ್ನಿವಾಸಾ ಪ ಭೀಷಣವಾಗಿಹ ಭವಸಾಗರದೊಳು ನಾಶಗೊಳಿಪುವರು ನೆಗಳಿಗಳು ಬೀಸುವವನುದಿನ ಮೂರು ಘಾಳಿಗಳು ಈ ಸಂಖ್ಹ್ಯಾಂಗ ಕೈಪಿಡಿಯೋ ಕೃಪಾಳು1 ಭವವೆಂಬ ಕಿಚ್ಚನ್ನ ಸಹಿಸುವ ಪರಿಯೇನೋ ಯುವತೀ ವಿಷಯ ಸುಖಲುಬ್ಧನಾಗಿಹೆನೋ ಹವ್ಯವಾಹನನೆನ್ನನಾಡು ಮಾಡಿದೆಯೇನೋ ಪವನನೈಯಾತ್ವತ್ಪದಾಪದ್ಮ ಭೃಂಗನೋ2 ಪರಿಪರಿ ದುರಿತಂಗಳಿಂದ ಮನದೆಡೆಯೊಳು ಹರಿಸೇವಾರ್ಚನೆಗಳಿಗೆ ಅನುವಿಲ್ಲವು ಪರಮ ಭಾಗವತರ ಜರೆವ ಖಳ ಜನರಾ ನೆರೆಯಿರದಂತೆ ಮಾಡೊ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ನಿಲಿಸಯ್ಯಾ ನಿಲಿಸೆನ್ನ ಮನವ ಶ್ರೀ ಹರಿಯೇ ನಿನ್ನಾ | ಹೊಳೆವ ಚರಣದಲ್ಲಿ ನೆಲೆಗೊಂಬುವಂದದಿ ಪ ಯರಳಿಯು ಘಂಟಾನಾದಕೆ ಬಲೆ ಹೋಗುವಂತೆ | ಮರುಳಾಗಿ ತರಣಿಯರಾಳಾಪದಿ | ಭರದಿಂ ದೀವಿಗೆ ಕಂಡು ಪತಂಗ ಮಡಿವಂತೆ | ಹರಿದು ರೂಪ ವಿಷಯದಲಿ ಮುಗ್ಗುತಿಹುದೋ1 ಕರಿ ಅಂಗ ಸಂಗದೀ ಕುಣಿಯಾ ಬೀಳುವಂತೆ | ಸ್ಪರುಶ ವಿಕ್ಷಯದಲಿ ಮೈಮರೆದು | ಯರಗಿ ಮಾಂಸಕ ಗೋಣ ನೀವ ಮಚ್ಛದಂತೆ | ನಿರುತ ಜಿವ್ಹಾಸ್ವಾದಕ ತೊಳಲುತಲಿಹುದೈಯ್ಯಾ2 ಪರಿಮಳಕಾಗಿ ಬ್ರಮರ ಸೆರೆ ಬಿದ್ದಂತೆ | ಹರುಷ ಪಡುತ ಭೋಗ ದ್ರವ್ಯದಲಿ | ತರುವರಿ ತನಲಿಂತು ಮಾಡಿ ವಿಷಯದಿ ಬಂದು | ದುರಿತ ಮೊನೆಗೆಯನ್ನ ಗುರಿ ಮಾಡಿತಿಹುದೈಯ್ಯಾ3 ಐದು ಮೋರೆಯಲಂತು ಹರಿಗುಡದೆವೆ ಮತ್ತ | ಐದು ಪರಿಯ ಕಾವಲಿಯ ನಿರಿಸೋ | ಮಾಧವ ನಿಮ್ಮ ಸತ್ಕಥೆಗಳ ಶ್ರವಣಕ | ಪಾದ ಧ್ಯಾನದಿ ಹಿಂಗದಂದದಿ ನಯನದಿ 4 ನಿನ್ನ ದಾಸರ ಸಂಗ ವನುದಿನ ದೇಹಕ | ನಿನ್ನ ನಾಮಾಮೃತ ಜಿವ್ಹೆಯಲಿ | ನಿನ್ನ ನಿರ್ಮಾಲ್ಯ ತುಳಸಿಯಾ ಫ್ರಾಣಿಸುವ ತಾ | ಯನ್ನನುದ್ದರಿಸು ಮಹಿಪತಿ ಸುತ ಪ್ರಭುವೆ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೆನೆಮನವನುದಿನ ಹನುಮದೀಶನ ಕನಸಿನಲಿ ತನುಸುಖವನು ಬಯಸದೆ ನಿ ಪ. ಮನಸಿಜ ಪಿತನನೆ ನೆನೆನೆನೆದ್ಹಿಗ್ಗುತ ನಿನ ಹೃದಯದಲ್ಹರಿಯನು ನಿಲಿಸುತಲೆ ತನುಮನವರ್ಪಿಸೆ ಜನುಮ ಜನುಮದಘ ವನು ಕಳೆವನು ರಾಮನುಮಾನವೇಕೆ 1 ಆರು ಅರಿಯದ ತೋರಿ ಭಕ್ತಿಯೇ ಬಾರಿ ಪಾಶದಿ ಕಟ್ಟಿಹ ಹನುಮ ವಾರಿಜನಾಭನು ಹಿಗ್ಗಿ ನಿಲುತಲೆ ಚಾರುಸೇವೆಗೆ ಬಹೆ ಎನೆ ರಾಮನ ನೆನೆ2 ಕಲ್ಲಾಗಿದ್ದ ಅಹಲ್ಯೆಯ ರಾಮನು ನಲ್ಲೆಯ ಮಾಡಿದನರಿಯೆಯ ಮನವೆ ಚೆಲ್ಲುತ ಕರುಣವ ಶಬರಿಯ ಎಂಜಲನುಂಡ ರಮಾ ವಲ್ಲಭ ಶ್ರೀ ಶ್ರೀನಿವಾಸ ಕರುಣಿಯೊ ನೆನೆ 3
--------------
ಸರಸ್ವತಿ ಬಾಯಿ
ಪತಿ ತನುಜ ಕರುಣಿಸೋ ಹರಿ ನಿನ್ನವ ನೆನಿಸೋ | ಸಿರಿಪತಿ ತವ ನಾಮಾಮೃತ ಫಲನುಣಿಸೋ ಪ ನಿನ್ನ ದಾಸರ ಸಂಗವನುದಿನ ಬಲಿಸೋ | ಘನ ವಿಚಾರಕ ಮನವೆನ್ನ ನಿಲಿಸೋ 1 ಮಂಗಳಂಘ್ರಿಯ ಕುಂಬ ಕಂಗಳದೆರಿಸೋ | ರಂಗಭಕುತಿ ಅಂತರಂಗ ದೆಚ್ಚರಿಸೋ 2 ಜನುಮಕ ಬಹಭವ ಪರಿಹರಿಸೋ | .........................................3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಂಗಧ್ಯಾನ ಶ್ರೀರಂಗನ ಧ್ಯಾನ ಮುಕ್ತಿಗೆ ಸಾಧನ ಮಂಗಲಮೆನಿಪ ಅಂಗಕೆ ಶೋಭೆ ಪ ಮನುಮುನಿ ಸುರಗಣ ಮನಮಂದಿರನ ನೆನವನುದಿನದಲಿ ಮನಕಚಲಾನಂದನ 1 ಉರಗಶಯನ ಗಿರಿಧರ ಮುರಾರಿ ಚರಣಸ್ಮರಣ ಸ್ಥಿರ ಪರಲೋಕಕರವಶ 2 ಆ ಮಹಾಮಹಿಮ ಸ್ವಾಮಿ ಶ್ರೀರಾಮ ನಾಮಭಜನ ಸದಾ ಕ್ಷೇಮಸಂಪದ ಸುಖ 3
--------------
ರಾಮದಾಸರು
ವಾಣೀ ನೀ ತೋರೆ ವಾರಿಜನಾಭನ, ಮಹಾಲಾಭನ್ನ ನಿತ್ಯ ಸುಲಭನ ಭಾನು ಸನ್ನಿಭನ ಪ ಕ್ಷೋಣೀಯೊಳಗಣ ಪ್ರಾಣಶ್ರೇಷ್ಠ - ಜಗ ತ್ರಾಣನ ತೋರಿಸೆ ಭಾನು ಸನ್ನಿಭಳೆ ಅ. ಪ. ಚೈತನ್ಯರಾಣಿ ಪುಸ್ತಕಪಾಣಿ-ಸುನೀಲವೇಣಿ ಅತ್ಯಂತ ಮಹಿಮೆ ಗುಣಗುಣಶ್ರೇಣಿ ತ್ರಿಲೋಕ ಜನನಿ ಸತ್ಯವ ತೋರುತ ನಿತ್ಯೋಪಾದಿಲಿ ಸತ್ಯ ಸಂಕಲ್ಪಳೆ ನಿತ್ಯದಿ ಪೂಜಿಪೆ ತ್ವತ್ಪಾದಾಂಬುಜವಿತ್ತು ನೀ ಸಲಹೆ1 ನಾಲಿಗೆಯಲ್ಲಿ ಬಂದು ನಿಂದು ದಯದಿಂದ ಇಂದು ಶ್ರೀಲೋಲ ಹರಿಯೆ ದೈವವೆಂದು ಕೊಂಡಾಡೆ ಮುಂದು ಕಾಲ ಹಿಂಗಿಸಿ ವಿ- ಶಾಲ ಮತಿಯ ಕೊಟ್ಟು ಆಳುಗಳೊಡನೆ ಸು- ಶೀಲ ಜ್ಞಾನವಿತ್ತು ಆಲಸ್ಯಮಾಡದೆ ಶೀಲ ಮುಕ್ತಿಗನುಕೂಲವಾಗುವುದಕ್ಕೆ2 ಜನ್ಮ ಬಂದಿದೆ ಕಡೆಗೆ ಮಾಡು ದಯದಿಂದ ನೋಡು ಘನ ಕೀರ್ತಿವಂತೆ ಅಭಯವ ನೀಡು, ನಿನಗಲ್ಲ ಈಡು ಕನಸಿಲಿ ಮನಸಿಲಿ ಮನಸಿಜನೈಯನ ನೆನೆಸುವ ಸೌಭಾಗ್ಯವನುದಿನ ಕೊಟ್ಟು ಘನಪ್ರೇರಣೆಯಿಂದ ವಿಜಯವಿಠ್ಠಲನಂಘ್ರಿ ವನಜವ ತೋರಿ ಸನ್ಮೋದವನೀಯೆ3
--------------
ವಿಜಯದಾಸ
ಶಾರದಾಂಬೆ | ಜಯ ಜಯ | ಶಾರದಾಂಬೆಪ. ಶಾರದಾಂಬೆ ಅ.ಪ ನಿರತವು ನೀ ಮನ| ವೊಲಿಯುತಲೆನ್ನಯ | ಕರುಣಿಯೆ ನೀ ದಯ | ದೋರುತ ಪೊರೆವುದು | ಶಾರದಾಂಬೆ 1 ಹರಿನಾಮಾಮೃತ | ವನುದಿನವೆನ್ನಯ | ರಸನೆಯು ಸೇವಿಸು | ವಂದದಿ ನೀ || ವರಗಳ ನೀ ವಾ| ಗ್ದೇವಿಯೆ ಕರುಣಿಸು | ಶಾರದಾಂಬೆ2 ಮರಣದ ಕಾಲದಿ | ಹರಿಯನು ಬಾಯೊಳು | ಸ್ಮರಿಸುವ ಜ್ಞಾನವ | ನೀಯುತಲಿ || ಶರಣನ ಪೊರೆವುದು | ಪರಮ ಕೃಪಾಕರಿ | ಶಾರದಾಂಬೆ 3 ಮಾಡು ನೀ ಕೃಪೆಯ | ನ್ನನವರತ || ಜೋಡಿಸಿ ಕೈಗಳ | ವಿನಯದಿ ಬೇಡುವೆ | ಶಾರದಾಂಬೆ 4 ವೀಣಾಪಾಣಿ | ಕೋಕಿಲ ವಾಣಿ | ಪನ್ನಗವೇಣಿ | ಬೊಮ್ಮನ ರಾಣಿ || ದೀನನ ನುಡಿಗಭಿ | ಮಾನವನೀವುದು | ಶಾರದಾಂಬೆ 5
--------------
ವೆಂಕಟ್‍ರಾವ್
ಸಿರಿ | ವಕ್ಷ ಕಮಲದಳಾಕ್ಷ ಕೇಶವ | ಪಕ್ಷಿವರಗಮನಾ ರಕ್ಷಿಸೋ ಎನ್ನಾ ಪ ಭಂಗ ಬಿಡಿಸಿದ ವಂಗ ವಿಷಯಕ | ರಂಗ ತಿರುವೆಂಗಳೇಶನೆ | ಇಂಗಿತವನರಿದು | ಭವ ಭಯ | ಹಿಂಗಿಸುವ ಸಾಧು ಸಂಗವನುದಿನ | ಸಂಗಡಿಸು ಎನ್ನಗೆ 1 ಧ್ಯಾನ ಮೌನಗಳೇನು ಅರಿಯದ | ಹೀನ ನಾನೆಂದು ಅನತಾದ ಮಾನ | ನಿನ್ನದಲೈ | ಖೂನಿಡುವ ಶೃತಿಗೇನು ಗತಿಯಮ್ಮ | ನೀನುದ್ಧರಸದೇ 2 ನಂದ ಕಂದ ಗೋವಿಂದ ಸಚ್ಚಿದಾ | ನಂದ ಅನಿಮಿತ್ತ ಬಂಧು ಯೆಂಬುವಾ | ನೇಂದ್ರಿಯದ ನೆಲಿಗೇ || ಕುಂದ ಕೊರತೆಯಾ | ಇಂದು ಪಾಲಿಸು | ತಂದೆ ಮಹಿಪತಿ ನಂದನೊಡಿಯ ಮು | ಕುಂದ ಮುನಿವಂದ್ಯನೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೆ ಯಶೋದೆಯ ಪುಣ್ಯಪಡೆದಿಹ್ಯಳೆಂಥ ಮಾನ್ಯ ಪಪೊಡವಿ ಈರೇಳನ್ನು ಒಡಲೊಳಿಟ್ಟವನನ್ನುತೊಡೆಮೇಲಾಡಿಸುವಳು ಅ.ಪವಿಲಸಿತಮಹಿಮನ ಕಳೆಯ ತಿಳಿಯಲು ವೇದಬಲುವಿಧ ಪೊಗಳುತ ನೆಲೆಯುಗಾಣದಘನಕಳವಳಗೊಳುತಿಹ್ಯವಭವನ ದೆಸೆಯಿಂಸುಲಭದೆತ್ತಿ ತನ್ನ ಮೊಲೆಯನುಣಿಸುವಳೀಕೆ 1ಭುಜಗಭೂಷನು ತನ್ನ ನಿಜಪದವನುದಿನಭಜಿಸಿ ಬೇಡಲು ಕಾಣರಜಸುರಮುನಿಗಣಸುಜನಗುಣಾಂತರಂಗ ತ್ರಿಜಗವ್ಯಾಪಕನನಿಜವನು ಮನದಣಿ ಕಂಡು ಹಿಗ್ಗಿದಳೀಕೆ 2ಸೀಮರಹಿತಮಹಿಮ ನಾಮರೂಪಿಲ್ಲದ ನಿಸ್ಸೀಮ ಸುಗುಣಸುಖಧಾಮ ಭೂಮಿಜೆಪತಿಸ್ವಾಮಿ ಶ್ರೀರಾಮನ ವಿಮಲದಾಟದಲಿಭೂಮಿಯೊಳ್ಮಿಗಿಲಾದಾನಂದೊಳಿಹÀಳೀಕೆ 3
--------------
ರಾಮದಾಸರು