ಒಟ್ಟು 206 ಕಡೆಗಳಲ್ಲಿ , 46 ದಾಸರು , 158 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸಯ್ಯ ಕಸ್ತೂರಿರಂಗ ಕರುಣಿಸಯ್ಯ ಪ ದುಷ್ಟಸಂಸಾರ ಬಹುಕಷ್ಟವಯ್ಯ ಇದ ರಟ್ಟೊಳಿಗಳ ತಾಳಲಾರೆನಯ್ಯ ಆರೆನಿದರ ಕೋಟಿಲೆಗಳಾರೆನಯ್ಯ ಪಾದ ಸೇರಿಸೈಯ್ಯ 1 ಕಾಮಕ್ರೋಧ ಲೋಭಮೋಹ ಬಿಡಿಸಯ್ಯ ಮದಮಾತ್ಸರ್ಯವೆಂಬ ಕಾಟ ನೀನೊತ್ತಿಸಯ್ಯ ಪಾದ ಹೊಂದಿಸಯ್ಯ ಸರ್ವಬಂಧು [ನೀ] ಎನ್ನ ಜಿಹ್ವೆಯಲಿ ನೆಲೆಸಯ್ಯ 2 ಆಶ ಪಾಶಕ್ಲೇಶವೆಲ್ಲ ನಾಶ ಮಾಡಿಸಯ್ಯ ಶ್ರೀಶ ನಿನ್ನ ದಾಸರಲ್ಲಿ ಸೇರಿಸಯ್ಯ ವಾಸುಕಿಶಯನ ಭವದಿ ನೊಂದೆನಯ್ಯ ಸ ರ್ವೇಶಬಂಧು ಎನ್ನನುದ್ಧರಿಸಯ್ಯ 3 ಪುತ್ರಮಿತ್ರಬಂಧುವರ್ಗದಿ ಬಿದ್ದಿಹೆನಯ್ಯ ಅ ನಿತ್ಯಮೋಹದಲ್ಲಿ ಮುಳುಗಿ ಪೋದೆನಯ್ಯ ವ್ಯರ್ಥನಾಗಿ ಕಾಲವನ್ನು ಕಳೆದೆನಯ್ಯ ಎನ್ನ ಮರಣ ಕಾಲದಿ ನಿಮ್ಮ ಸ್ಮರಣೆ ಕರುಣಿಸಯ್ಯ 4 ಜನನ ಮರಣವೆಂಬೊ ಜಾಡ್ಯ ಕ್ರೂರವಯ್ಯ ಇದರ ವಿಧವನರಿತು ವೈದ್ಯ ಮಾಳ್ವರ ಕಾಣೆನಯ್ಯ ಬ್ರಹ್ಮಾದಿ ದೇವತೆಗಳೂ ಅರಿಯರಯ್ಯ ಧನ್ವಂತ್ರಿರೂಪ ಶ್ರೀನಿವಾಸ ರಕ್ಷಿಸಯ್ಯ 5 ದೇಹವೆಲ್ಲ ಗಳಿತವಾಗಿ ಪೋಯಿತಯ್ಯ ಇಂದ್ರೀಯ ಸ್ವಾಧೀನದಲ್ಲಿ ನಿಲ್ಲದಯ್ಯ ವಿಷಯದಲ್ಲಿ ಮನಸು ಬಹಳ ಹರಿವುದಯ್ಯ ಲಕ್ಷ್ಮೀಪತಿಯೆ ನಿಮ್ಮ ಭಕ್ತಿಯಿತ್ತು ಸಲಹಯ್ಯ 6 ದೀನನಾಗಿ ನಿನ್ನ ಚರಣ ಸೇರಿದೆನಯ್ಯ ಜ್ಞಾನವೈರಾಗ್ಯವಿತ್ತು ಪಾಲಿಸೆನ್ನಯ್ಯ ಮರಳಿ ಜನ್ಮ ಬಾರದಂತೆ ಮಾಡಬೇಕಯ್ಯಾ ಗರುಡಗ ಮನ ವೆಂಕಟರಮಣ ಭವಸಂಕಟ ಬಿಡಿಸಯ್ಯ 7
--------------
ಯದುಗಿರಿಯಮ್ಮ
ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
(ಅಂ) ಪಾರ್ವತೀದೇವಿ ಉಮಾ ಕಾತ್ಯಾಯನೀ ಗೌರಿ ದಾಕ್ಷಾಯಣಿ | ಹಿಮವಂತ ಗಿರಿಯ ಕುಮಾರಿ ಪ ನಿತ್ಯ | ಅಮರವಂದಿತೆ ಗಜಗಮನೆ ಭವಾನಿ ಅ. ಪ. ಪನ್ನಗಧರನ ರಾಣಿ ಪರಮಪಾವನಿ | ಪುಣ್ಯಫಲ ಪ್ರದಾಯಿನಿ || ಪನ್ನಗವೇಣಿ ಶರ್ವಾಣಿ ಕೋಕಿಲವಾಣಿ | ಉನ್ನತ ಗುಣಗಣ ಶ್ರೇಣಿ | ಎನ್ನ ಮನದ ಅಭಿಮಾನ ದೇವತೆಯೆ | ಸ್ವರ್ಣಗಿರಿ ಸಂಪನ್ನೆ ಭಾಗ್ಯ ನಿಧಿ || ನಿನ್ನ ಮಹಿಮೆಯನು ಬಿನ್ನಾಣದಲಿ ನಾ | ಬಣ್ಣಿಸಲಳವೆ ಪ್ರಸನ್ನ ವದನಳೆ 1 ಮುತ್ತಿನ ಪದಕ ಹಾರ ಮೋಹನ ಸರ | ಉತ್ತಮಾಂಗದಲಂಕಾರ || ಜೊತ್ಯಾಗಿ ಇಟ್ಟ ಪಂಜರದೋಲೆ ವಯ್ಯಾರ | ರತ್ನಕಂಕಣದುಂಗುರ || ತೆತ್ತೀಸ ಕೋಟಿ ದೇವತೆಗಳ್ ಪೊಗಳುತ | ಸತ್ತಿಗೆ ಚಾಮರವೆತ್ತಿ ಪಿಡಿಯುತಿರೆ || ಸುತ್ತಲು ಆಡುವ ನರ್ತನ ಸಂದಣಿ | ಎತ್ತ ನೋಡಿದರತ್ತ ಕಥ್ಥೈ ವಾದ್ಯ2 ಕಂಚುಕ ತಿಲಕ | ನಾಸಿಕ || ಕಳಿತ ಮಲ್ಲಿಗೆ ಗಂಧಿಕ ಮುಡಿದ ಸೂಸುಕ | ಸಲೆ ಭುಜ ಕೀರ್ತಿಪಾಠಿಕ || ಇಳೆಯೊಳು ಮಧುರಾ ಪೊಳಲೊಳು ವಾಸಳೆ | ಅಳಿಗಿರಿ ವಿಜಯವಿಠ್ಠಲ ಕೊಂಡಾಡುವ || ಸುಲಭ ಜನರಿಗೆಲ್ಲ ಒಲಿದು ಮತಿಯನೀವ | ಗಳಿಕರ ಶೋಭಿತೆ ಪರಮಮಂಗಳ ಹೇ 3
--------------
ವಿಜಯದಾಸ
(ಅ) ಶ್ರೀಹರಿ ಸ್ತುತಿಗಳು ಆನಂದ ಆನಂದ ಆನಂದ ಪ ಆನಂದ ನಿನ್ನ ನೋಡಿದವರಿಗೆ ಅ.ಪ ಆ ಮುಖ ಆ ಕಂಠವಾನಂದ ಆ ಮಹಾಭುಜಕೀರ್ತಿ ಆನಂದ ಸಾಮಜ ಶಂಖಚಕ್ರಗಳಾನಂದ ಹೊಮ್ಮುವ ಗದೆ ಹಸ್ತ ಜಗದಾನಂದ 1 ಸುರಾಸುರರು ದೇವಾನುದೇವರು ತಂ- ಬುರ ನಾರದ ಮೊದಲಾದವರು ವರುಣಿಸಲಾರರು ನಿನ್ನಳವನ್ನು ಅರಿಯಲು ಪೊಗಳಲು ಆನಂದವನ್ನು 2 ಸಂಖ್ಯೆಗೆ ಎಟುಕದ ಆನಂದವಯ್ಯ ಅಂಕೆಗೆ ನಿಲುಕದ ಆನಂದವಯ್ಯ ಅಂಕುಡೊಂಕಿಲ್ಲದ ಆನಂದವಯ್ಯ ಬಿಂಕವ ಬಿಟ್ಟು ಪಾಡಿರೋ ಅಯ್ಯ 3 ಕಮಲವದನದ ಚೆಲುವಾನಂದ ಕಮಲಲೋಚನದ ಸುಂದರ ಅಂದ ಕಮಲೋದ್ಭವನಿಹ ವಕ್ಷವಾನಂದ ಕಮಲಯುಗಳ ಶ್ರೀಪಾದವಾನಂದ 4 ಎಣೆಯಿಲ್ಲಾನಂದಕೆ ಎಣೆಯಿಲ್ಲವಯ್ಯ ಕಣಕಣವು ನೋಡಲು ತಣಿಯದವಯ್ಯ ಅಣಿಗೊಂಡ ಜಾಜಿಪುರೀಶನವ್ವಯ್ಯ ವರ್ಣಿಸಲಾನು ಪಾಮರನಯ್ಯ 5
--------------
ನಾರಾಯಣಶರ್ಮರು
(ಋ) ತಾತ್ತ್ವಿಕ ಕೃತಿಗಳು ಜಗವ ಪೆತ್ತಿಹ ಪ್ರಭು ನೀನಯ್ಯ ಶ್ರೀರಂಗದ ವಿಜಯ ಪ ಸಾಸಿರ ಶೀರ್ಷನೆ ಸಾಸಿರನೇತ್ರನೆ ಭಾಸಿಸುವಾನಂತ ಪಾದನೆ ಹಸ್ತನೆ 1 ಆದಿಮಧ್ಯಾಂತರಹಿತ ಅಸಂಖ್ಯನಾಮನೆ ಆಧಾರಮೂರುತಿ ಸಾಧುಸಂರಕ್ಷಕ 2 ಆಖಿಲಾಂಡಕೋಟಿ ಬ್ರಹ್ಮಾಂಡ ನಾಯಕನೆ ಸಕಲಚರಾಚರ ಕರ್ತೃವು ನೀನೆ 3 ಚರಂಗಳೆಲ್ಲ ಯೀ ಭೂಮಿತಳವೋ ಪರಮನಾಭಿಯೆ ಆಕಾಶವಯ್ಯ 4 ಶಿರವೇ ವೈಕುಂಠ ಕವಿಗಳೆ ದಶದಿಕ್ಕು ಉರುತರ ಮನಸೇ ಮನ್ಮಥನಹುದು 5 ಹರಿಯ ಪಾಶ್ರ್ವಂಗಳೆ ಹಗಲು ರಾತ್ರಿಗಳು ಪರಮವೇದಂಗಳು ಸಕಲಶರೀರವು 6 ಮುಖ ಭುಜ ತೊಡೆ ಪಾದಗಳಲಿ ವರ್ಣಂಗಳ ಸುಕರದಿ ಪಡೆದ ಭೂಸೂತ್ರಧಾರಿಯು ನೀಂ7 ಇಂದ್ರ ಮೊದಲಾದ ದೇವರೆಲ್ಲ ನಿನ್ನಯ ಮುಖ ಚಂದ್ರಸೂರ್ಯರ ಕಣ್ಣಿನಿಂದ ಪಡೆದಾತನೆ 8 ಮಗುವಾದೆನ್ನ ಪಿಡಿ ಮೂಜಗದೊಡೆಯ ಹಗರಣ ಹರಿಯೊ ಜಾಜಿಕೇಶವ 9
--------------
ಶಾಮಶರ್ಮರು
7. ನಾರಾಯಣಶರ್ಮರ ಹೆಚ್ಚಿನ ಕೃತಿಗಳು (1) ರಾಮನುಜ ಸ್ತುತಿ ಗುರುಸ್ತುತಿಯ ಮಾಡಬೇಕಯ್ಯ ಗುರುವೆ ಗಮ್ಯ ತೋರುವನಯ್ಯ ಪ ಗುರುವಿಂದ ಹರಿಪಾದ ಸುಲಭವಯ್ಯ ಗುರುವಿಲ್ಲದೆ ಮೋಕ್ಷವಿಲ್ಲ ನೋಡಯ್ಯ ಅ.ಪ ಗುರುನಮ್ಮಯತಿರಾಜ ರಾಮಾನುಜ ಗುರುನಮ್ಮ ಕ್ಷಿತಿಪೂಜ್ಯ ಗೋದಾನುಜ ಗುರುವೆ ಸರ್ವಸ್ವ ಹರಿಸ್ವರೂಪ ಗುರುಪಾದ ದರ್ಶನವೇ ಸಾಯುಜ್ಯವೆನಿಪ 1 ದಾಸದಾಸರದಾಸರಾಳ್ವಾರರ ಪೋಷ ದೋಷರಹಿತ ದಾಸೋತ್ತಮ ಧನು ರ್ದಾಸನ ಶ್ರೀಪಾದತೀರ್ಥವ ಸೇವಿಸಿ ದಾಸಸೇವೆಯೆ ಈಶ ಸೇವೆಯೆನಿಸಿದ 2 ಚೆನ್ನ ತಮಿಳಿನ ಶ್ರೀರಂಗದಿಂ ಬಂದು ಚೆನ್ನಚೆಲುವಿನ ಮೇಲುಕೋಟೆಯಲಿ ನಿಂದು ಹನ್ನೆರಡು ವರುಷದ ಮೇಲ್ಪಟ್ಟು ಸಂದು ಇನ್ನಿಂದು ಜಾಜಿಪುರೀಶನಾದ ನಮ್ಮ3
--------------
ನಾರಾಯಣಶರ್ಮರು
ಅಂದವ ಜರೆವರಾರು ರಂಗ ನಿನ್ನ ಅಂಗವ ಹಳಿವರಾರು ಪ ಅಂದವ ಜರೆವರಾರೋ ಇಂದೀವರಾಕ್ಷ ಗೋವಿಂದ ನಿ ನ್ನಂದಕೇಣಿ ಬಂದವರಿಲ್ಲವಯ್ಯ ಅ.ಪ ನೀರಮೀನು ಎಂಬರೇನೋ ರಂಗಯ್ಯ ಭಾರಿ ಕೂರ್ಮನೆಂಬರೇ ಭಾರಿ ರೋಮ್ಯನು ಎನೆ ಭೂರಿಸಂತಸವಿತ್ತೇ 1 ಕೋರೇ ಹಲ್ಲವನೆಂಬರೇ ರಂಗಯ್ಯ ಕೇಸರಿ ಎಂಬರೇ ಕೋರೆ ಹಲ್ಲಿಗೆ ಶೃಂಗಾರ ಧರಣಿದೇವಿ ಘೋರ ಕೇಸರಿಗೆ ಹತ್ತಾರು ಕೈಗಳು ಚಂದ 2 ಕೊಡಲಿ ಹಿಡಿದನೆಂಬರೇ ಕೊಡೆಯ ಹಿಡಿದಡೇನು ಬಲಿಯ ಬಾಗಿಲ ಕಾಯ್ದೆ ಕೊಡಲಿ ಹಿಡಿದು ಕಾರ್ತವೀರ್ಯಾರ್ಜುನನ ಕೊಂದೆ 3 ಎಂಜಲ ತಿಂದರೇ ರಂಗಯ್ಯ ಗುಂಜುಗದಾತನೆಂಬರೇ ಎಂಜಲ ತಿಂದಾ ಬಲದಿ ಮಾರೀಚನ ಕೊಂದೇ ಗುಂಜುಗ ವೇಗದಿಂದ ಸತಿಯ [ಬಿಡಿಸಿ ಕಂದೆ] ಕಂಜನೇತ್ರೆಯಳ ಕೈ [ಹಿಡಿದು ಬಂದೆ] 4 ದುರುಳ ಚೋರನು ಎಂಬರೇ ರಂಗಯ್ಯ ತುರಗವನೇರಿದನೆಂಬರೇ ದುರುಳ ಕೌರವರೆದೆ ಬಿರಿವಂತೆ ಮಾಡಿದೆ ದುರಿತಾರಿ ನೀ ಮಾಂಗಿರಿಯ ರಂಗಯ್ಯ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಅಪ್ರಾಕೃತ ಕಾಯಾ ಪ ಶ್ರೀಕರಾರ್ಚಿತಪಾದ ಲೋಕೇಶ ವಂದಿತ ಅ- ವ್ಯಾಕೃತಾಕಾಶದೊಡೆಯನೆ ವಾಸುಕೀಶಯನ ಸರ್ವೇಶ ನೀನೆ ಪ್ರಾಕೃತ ಸಜ್ಜಮಜ್ಜನ ಕಾರ್ಯಕೆ ಕಾರಣನಯ್ಯ ಏಕೋ ನಾರಾಯಣ ಅ.ಪ ಪ್ರಳಯಕಾಲದಿ ಜೀವರ ನಿಲಯಾ ಕಲ್ಪಿಸಿ ತತ್ತ ನಾಲ್ಕುವಿಧಗಳ ರೂಪಗಳನು ಧರಿಸಿ ಪ್ರಳಯದೊಳಿಂಬಿಟ್ಟು ಎಳೆಸಿದ ಕಟಾಕ್ಷವೀಕ್ಷಣದಿಂದಲಿ 1 ಅಳವು ಇಲ್ಲದ ಸೃಷ್ಟಿಯನೆಸಗಿದೇ ಸಾಧುಜೀವರು ತಮ್ಮ ಸಾಧನ ಪೊರೈಸಿ ಸ್ವದೇಹದೊಳು ಬಂದ ಮೋದದಿಂದಲಿ ನೋಡಿ ಬಾಧಿಪ ಲಿಂಗಭಂಗವೈದಿಹ ಪ್ರಾರಬ್ಧನಾಶನವಿಹ ವಿ- ವಿಧ ಸುಜೀವರ ಮೋದಪಡಿಸಿ ನಿ- ಉದರದೊಳಿಟ್ಟ್ಯಯ್ಯ ಸದಮಲಮೂರುತಿ ಅದುಭುತಮಹಿಮ ಶ್ರೀ ವಾಸುದೇವನೆ2 ಸಂಚಿತ ನೀಗಿ ಪ್ರಾರಬ್ಧ ಶೇಷ ಭೋಗ ಉಳ್ಳವರೆಲ್ಲ ಆಗದೆ ಪೂರ್ಣ ಸಾಧನೆ ನೀಗದೆ ಲಿಂಗಭಂಗ ಆಗ ಬಿಂಬನ್ನ ನೋಳ್ಪರ ನಾಗಶಯನ ನಿನ್ನಂಗದೊಳಿಂಬಿಟ್ಟೆ ಜಾಗುಮಾಡದೆ ನೀನಾಗಲೆ ಜೀವರ ಭೋಗವ ತರಲು ಭಾಗವಗೈಸಿ ಭೂಭಾಗದ ಸಾಧನ ಮಾಳ್ಪ ಜೀವಗಣ ಭಾಗವ ಕಾಯ್ದೆ ಸಂಕರುಷಣ ಮೂರುತೆ 3 ನಿತ್ಯಸಂಸಾರಿಗಳಿಗೆ ಇತ್ತೆ ನಿನ್ನುದರದೊಳು ಮುಕ್ತರೊಡೆಯ ದೇವ ಶಕ್ತನಹುದೋ ನೀ ಮೊತ್ತ ಮೊದಲು ನೀನಿತ್ತು ಪೊರೆದೆ ಬರಲಿತ್ತ ಕಾರಣ ಪ್ರ- ಸುತ್ತಿ ಸುತ್ತಿರುವೆ ಬಿತ್ತರಿಸಲೇನನಿರುದ್ಧಮೂರುತೇ 4 ಅಣುವಿಗೆ ಅಣುವಾಗಿ ಘನತೆ ಘನತಮನಾಗಿ ತೃಣಜೀವರಾದಿ ಬ್ರಹ್ಮಗಣರೆಲ್ಲರೊಳು ಗಣನೆ ಇಲ್ಲದ ಕಾರ್ಯ ಕ್ಷಣಬಿಡದಲೆ ನಡೆಸಿ ಎಣೆಯಿಲ್ಲದಿಹ ಸುಗುಣ ಸಾಂದ್ರನೆ ಪ್ರಣವದೊಳು ಪ್ರತಿಪಾದ್ಯನಾಗಿಹೆ ತ್ರಿಗುಣರಹಿತ ಮುಖ್ಯ ಪ್ರಾಣಾಂತರ್ಗತ ಪ್ರಣತಕಾಮದ ಪೂರ್ಣ ಸಂಪೂರ್ಣ5 ಮುಕ್ತಾಮುಕ್ರಾಶ್ರಯ ಭಕ್ತಪರಾಧೀನ ಶಕ್ತಾನೆ ಸರ್ವವೇದೋಕ್ತ ಮಹಿಮಾತೀತ ಉಕ್ತನಾಗಿಹೆ ಪುರುಷಸೂಕ್ತಾದೊಳಪ್ರಮೇಯ ಶಕ್ತಿಯನರಿಯರು ಅಜಭವಾದ್ಯರು ಶಕ್ತನೆ ಜೀವನ್ಮುಕ್ತರೌಘ ಸಕ್ತರಾಗಿ ನಿನ್ನ ಸ್ತೋತ್ರವ ಮಾಳ್ಪರು 6 ಶ್ರೀಶಾ ಸರ್ವೋತ್ತಮ ವಾಸ ವೈಕುಂಠಾಧೀಶ ವಾಸವಾದಿ ವಂದಿತ ಭಾಸುರಾಂಗನೆ ವಿಶ್ವಾಸ ನಿನ್ನೊಳಿಟ್ಟ ದಾಸ ಜನರ ಕಾಯ್ವ ಈಶಾವ್ಯಾಸಮಿದಂಸರ್ವಂ ಎಂದೆಂದು ಎಂದು ಉಸುರುವ ವೇದಗಳ್ ಏಸುಕಾಲಕು ಸಾಕಲ್ಯದಿ ವರ್ಣಿಸ ಲೀಶ ಕೋಟಿ ಪ್ರವಿಷ್ಟೆಗೆ ಅಸದಳ 7 ಅಂಗಜಪಿತ ರಂಗ ಮಂಗಳಾಂಗನೆ ಮಾ- ತಂಗವರದ ದೇವ ಗಂಗಾಜನಕ ಕಾಳಿಂಗನಾ ಮದ ಮೆಟ್ಟಿ ಭಂಗಾಗೈಸಿದ ಭುಜಂಗಶಯನ ಎನ್ನಂತಾ- ರಂಗದಿ ನಿಲ್ಲೋ ಇಂಗಿತ ಬಲ್ಲೆ ಶ್ರೀರಂಗಶಾಯಿ ಸಾ- ರಂಗಪಾಣಿ ಕೃಪಾಂಗ ಎನ್ನಯ ಭವಭಂಗಗೈಸಿ ಸ- ತ್ಸಂಗವೀಯೋ ಯದುಪುಂಗವ ಮಂಗಳಮೂರುತಿ ಶೌರೇ8 ಕಾಲ ಜಾಲವ ತಂದೆ ಪಾಲಿಪ ಸಲಹಿಪ ಕರ್ತ ನೀನಲ್ಲದಿ- ನ್ನಿಲ್ಲವಯ್ಯ ಶ್ರೀ ವೇಂಕಟೇಶ ಪ್ರಭೋ 9
--------------
ಉರಗಾದ್ರಿವಾಸವಿಠಲದಾಸರು
ಅಲ್ಲೆ ನೋಡಿದರೀಹ್ಯ ಇಲ್ಲೆ ನೋಡಿದರೀಹ್ಯ ಎಲ್ಲಾ ಕಡೆಯಲ್ಲೇಕೋಮಯವೋ 1 ಸುಲ್ಲಭವಾಗಿ ನಮ್ಮ ಫುಲ್ಲಲೋಚನ ಕೃಷ್ಣ ಬಲ್ಲ ಮಹಿಮರಿಗೆ ಭಾಸುವನು 2 ಭೇದಿಸಿ ನೋಡಿರಯ್ಯ ಸಾಧು ಜನರೆಲ್ಲ ಮೇದಿನಿಯೊಳು ಘನತುಂಬಿಹುದು 3 ಕಣ್ಣಾರೆ ಕಂಡೆವಯ್ಯ ಪುಣ್ಯಚರಣಮಹಿಮೆ ಸಣ್ಣ ದೊಡ್ಡದರೊಳು ಸಾಕ್ಷಾತವೊ 4 ನಂಬಿನಡಿಯಲಿಕೆ ಅಂಜುಜಾಕ್ಷನ ಪಾದ ಗುಂಭಗುರುತವಾಗಿದೋರುವದು 5 ಗುರುಕೃಪೆಯಿಂದ ನೋಡಿ ಹರುಷವಾಯಿತು ಜೀವ ಬೆರತುಕೂಡಿತು ಸಮರಸವೊ 6 ಬೆರೆದು ಕೊಡುವದು ಹರಿಯ ಕಟಾಕ್ಷವಿದು ಮರುಳ ಮಂಕಗಳಿದು ಅರಿಯಾವೊ 7 ವದಗಿ ಬಂದತಿದರಿಟ್ಟು ಸದಮಲಬ್ರಹ್ಮಸುಖಾ ಮೊದಲಿನ ಪುಣ್ಯ ಪೂರ್ವಾರ್ಜಿತವೊ 8 ಧನ್ಯವಾಯಿತು ಮೂಢ ಮಹಿಪತಿ ಪ್ರಾಣಜೀವ ಮನವು ಆಯಿತು ಉನ್ಮನವೊ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆನಂದ ಲಹರಿ (ಪಾರಮಾರ್ಥ ಮುಯ್ಯದ ಹಾಡು ) ಗಿರಿಜೇಶ ಮನೋಜಾತಾ ಸುರಮುನಿಜನಪ್ರೀತಾ ಕರುಣಾ ಸಾಗರ ಗಣನಾಥಾ ಜಗವದನಾ ಚರಣಕೆ ಶರಣೆಂದು ಬಲಗೊಂಬೆ ಕೋಲೆ 1 ಸಕಲಾ ಮುಖದೊಳು ಯುಕುತಿಯ ನುಡಿಗಳಾ ಪ್ರಕಟದಿ ನುಡಿಸುವೆ ಜನನಿ ಸರಸ್ವತಿ ಭಕುತಿಲಿ ಶರಣೆಂಬೆ ಕಲ್ಯಾಣಿ 2 ಆಚ್ಯುತಾನಂತನೆ ಸಚ್ಚಿದಾನಂದನೆ ನೆಚ್ಚಿದ ಶರಣರ ಸುರಧೇನುವೆ ಅವಧೂತಾ ಎಚ್ಚರ ಕೊಟ್ಟು ಸಲಹಯ್ಯ 3 ಕರಿಯಾ ಮೊರೆಯ ಕೇಳಿ ಭರದಿಂದೊದಗಿ ಬಂದು ಕರದಿಂದಲೆತ್ತಿ ಸಲಹಿದೆ ಶ್ರೀಶಾ ಚರಣವದೋರಿ ಕಾಯಯ್ಯ 4 ಶರೀರ ಒಂದರಲಿದ್ದು ನರನಾರೀರೂಪದಲಿ ಚರಿತವ ದೋರದೆ ಅನುಪಮ ಶಂಕರ ಕರುಣಿಸು ಫಣಿಗಣ ಭೂಷಣಾ 5 ಅಂಜನೀಸುತನಾಗಿ ಕಂಜನಾಭವ ಸೇವೆ ರಂಜಿಸುವಂತೆ ಮಾಡಿದ ದೈತ್ಯರ ಭಂಜನ ಹನುಮಂತ ಕರುಣಿಸು6 ಚಾರು ಚರಿತಗಳ ತೋರಿದೆ ಜಗದೊಳು ಮುನಿರಾಯಾ ಸುಖತೀರ್ಥ ತಾರಕ ಶರಣರ ನಿಜಗುರು7 ಮೇದನಿಯೊಳಗುಳ್ಳ ಸಾಧು ಸಂತರ ನಿಜ ಅನುದಿನ ಜಗದೊಳು ಸಾದರದಿಂದ ನೆನೆಯುತ 8 ಶರಣವ ಹೊಕ್ಕರ ಕರುಣದಿಂದಲಿ ನೋಡಿ ತರುಣೋಪಾಯವ ತೋರುವಾ ಮಹಿಪತಿ ಗುರುರಾಯ ನಿನ್ನ ಬಲಗೊಂಬೆ9 ಕರುಣವಾಗಲು ಅವರ ಪರಮ ಮೂಕನಜ್ಜಿಹ್ವಾ ಸುರಸ ಮಾತುಗಳ ಆಡೋದು ಹುಸಿಯಲ್ಲ ಧರೆಯೊಳು ಅನುಭವವಿದು10 ಅವರಾಮಹಿಮೆಗಳ ವಿವರಿಸಿ ಹೇಳಲು ಹವಣವೆಲ್ಲಿಹುದು ಮನುಜಗ ಭಕುತರು ಅವನಿಲಿಬಲ್ಲರು ನಿಜಸುಖ 11 ಏನೆದು ಅರಿಯದಾ ಹೀನ ಅಜ್ಞಾನಿಯು ನ್ಯೂನಾರಿಸದೇ ಸಲಹಯ್ಯಾ ಮಹಿಪತಿ ದೀನೋದ್ಧಾರಕಾ ಕರುಣಿಸು 12 ಪದುಮನಾಭನ ಭಕ್ತಿ ಚದುರಾ ಮುತ್ತೈದೇರು ಒದಗಿನ್ನು ಬನ್ನಿ ಹರುಷದಿ ಮುಪ್ಪದಾ ಉದಿತಾ ನುಡಿಗಳ ಕೇಳಲು 13 ವಿವೇಕಬೋಧಿಯಂತ ನಾವಕ್ಕತಂಗೇರು ದೇವಗುರುರಾಯನ ಮಕ್ಕಳು ನಿಜಶಕ್ತಿ ಭುವನದಿ ನಮ್ಮಾ ಹಡೆದಳು 14 ಸುಜ್ಞಾನ ವೈರಾಗ್ಯ ಸಂಜ್ಞದಿ ಮೆರೆವರು ಪ್ರಾಜ್ಞರು ನಮ್ಮಣ್ಣಾ ತಮ್ಮರು ಹರಿಭಕ್ತಿ ಮಜ್ಞರು ಅವರಿಗೆ ಸರಿ ಇಲ್ಲಾ 15 ಭಕ್ತಿಯ ತೌರಮನಿ ಶಕ್ತಿಯ ಬಲದಿಂದ ಯುಕ್ತೀಲಿ ನಾವು ಬರುತೇವು ಹರಿಭಕ್ತಿ ಭೋಕ್ತರು ನೀವು ಬರಬೇಕು 16 ದಿವ್ಯಾಂಬರವನುಟ್ಟು ಸುವಿದ್ಯಾ ಇಡಗಿಯು ತೀವಿದರ ಅರಹು ಅಂಜನಾ ವನೆ ಇಟ್ಟು ಸುವಾಸನೆಯ ಪುಷ್ಪ ಮುಡಿದಿನ್ನು 17 ಈರೆರಡು ಭೇರಿಯ ಸಾರಿಸಿ ಎಡಬಲಕ ಆರು ವಂದಣಾ ನಡಸೂತ ಕಹಳೆಗಳು ಮೂರಾರು ಊದಿಸುತೆ ಬರುತೇವು 18 ಸಾಧನ ನಾಲ್ಕರ ಕುದುರೆಯ ಕುಣಿಸುತ ಒದಗಿದ ಪ್ರೇಮದ ಮದ್ದಾನಿ ಯೊಡಗೂಡಿ ಚದುರೇರು ಮುಯ್ಯ ತರುತೇವು 19 ಭಾವದ ಬಯಲಾಟ ಆವಾಗ ಆಡುತ ಸಾವಧ ಮುಯ್ಯಾ ತರುತೇವು ನುಡಿಗಳ ನೀವಾತ ಕೇಳಿ ಜನವೆಲ್ಲಾ 20 ಮೆರೆವಾಭಿಮಾನಿಯು ಇರುವ ಸೋದರ ಮಾವ ಅರಸಿ ವಿಷಯಯೆಂಬತ್ತೆರಯರ ಮನಿಗೀಗ ಭರದಿಂದ ಮುಯ್ಯ ತರುತೇವು 21 ರಾಯ ಅಭಿಮಾನಿ ಸಿರಿಯದ ಸಡಗರ ನಾ ಏನ ಹೇಳಲಿ ಜಗದೊಳು ಪಸರಿಸಿ ತಾ ಎಡ ಬಲವನು ನೋಡನು 22 ಏಳು ಸುತ್ತಿನ ಗೋಡಿ ಮೇಲಾದ ಮನಿಗಿನ್ನು ಸಾಲಾದ ಒಂಭತ್ತು ಬಾಗಿಲು ಚಲುವಾದ ಮ್ಯಾಲಿಹ ಒಂದೊಂದು ಗಿಳಿಗಳು 23 ಅಂಗಳ ಹೋಗಲಿಕ್ಕೆ ಕಂಗಳ ಲೇಸಕಂಡೆ ಮಂಗಳವಾದ ಉಪ್ಪರಿಗೆ ಥರಥರ ರಂಗ ಮಂಟಪ ನಡುವಂದು24 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಚಾವಡಿರಾಯನ ಸೌಖ್ಯಕ ಪೊಡವಿಲಿ ಸರಿಯಾ ಕಾಣೆನು 25 ಎಂಟು ದಿಕ್ಕಿಗೆ ನೋಡೀ ಘಂಡೆಯ ಕಟ್ಟಿದ ಎಂಟು ಆನೆಯಾ ಘಡಘಾಡಿ ತಲಿಯಲಿ ಉಂಟಾದ ಗುರುತರದ ಅಂಕೂಶಾ 26 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಆನೆಯಾ ಘಡಘೂಢೀ ಥಳೀಐಳೀ ಊಂಠಾಧ ಘೂಋಊಥೃಧ ಆಂಖೂಶಾ 26 ಐದೈದು ಸಾಲಕ ಐದೈದು ಕುದುರೆಯು ಐದೈದು ಭಂಟರು ಅದಕಿನ್ನು ಅನುದಿನ ಮೈದಡುವುತಾ ಏರುವರು27 ಹತ್ತು ಮಂದಿಯಾ ಆಪ್ತರು ಮನರಾಯಾ ಒತ್ತಿ ಆಳುವ ಪ್ರಧಾನಿ 28 ಅನುವಾದ ಗುಣತ್ರಯಾ ಅನುಜರು ಈತಗೆ ಅನುಭವಿ ಒಬ್ಬ ಇದರೊಳು ಹರಿನಾಮಾ ನೆನೆವನು ಅನ್ಯ ಹಂಬಲವಿಲ್ಲಾ 29 ನಾಕಾವಸ್ಥೆಗಳೆಂಬಾ ನಾಕು ಒಳ ಮನೆಗಳು ಇಕ್ಕಿಹದೊಂದು ಅದರೊಳು ಭಂಡಾರ ಬೇಕಾದವರೆ ತೆರೆವರು 30 ಈರಾಯ ನೈಶ್ವರ್ಯ ಆರು ಬಣ್ಣಿಸುವರು ಆರೊಂದು ಮಂದಿ ಮಕ್ಕಳು ಹೆಸರಾದ ಪರಿಯಾಯ ಕೇಳಿ ಹೇಳುವೆ 31 ಮೊದಲು ಕಾಮ ಕ್ರೋಧವೊದಗಿ ಲೋಭಮೋಹ ಮದಮತ್ಸರೆಂಬ ಬಾಂಧವರು ನಿಜ ತಂಗಿ ವಿದಿತ ಅಜ್ಞಾನಿ ಶಕ್ತಿಯು 32 ಬಂದು ಹೊರಗನಿಂತು ಒಂದು ಜಾವಾಯಿತು ಮುಂದಕ ನಮ್ಮ ಕರಿಯಾರು ನಾವರಸಿ ಕಂದಿದ ಮಾರೀ ತೋರಳು 33 ಪಶ್ಚಾತಾಪವೆಂಬ ಬಿಚ್ಚಿ ಹಾಸಿಗೆ ಹಾಸಿ ತುಚ್ಚರ ದೂರ ಝಾಡಿಸೀ ಬರುತೇವು ಎಚ್ಚರ ಲೋಡಾ ತಂದಿರಿಸಿ 34 ಈ ಕಲ್ಲ ಮ್ಯಾಲದ್ದು ಈ ಕಲ್ಲಿಗ್ಹಾರುವಾ ತಾ ಕೋಡಗನಾ ಗುಣದಂತೆ ಭಾವಯ್ಯ ಆ ಕಾಮಣ್ಣನ ಕರಿಯಾರೆ35 ಎಷ್ಟು ಉಂಡರ ದಣಿಯಾ ಎಷ್ಟು ಇಟ್ಟರ ದಣಿಯಾ ಎಷ್ಟು ಉಟ್ಟರ ದಣಿಯಾನು ಕಾಮಣ್ಣ ಎಷ್ಟು ಕೊಟ್ಟರ ದಣಿಯಾ 36 ಒಳ್ಳೆವರರಿಯನು ಹೊಲ್ಲವರರಿಯನು ಕೊಳ್ಳಿಕಾರನಾ ಮತಿಯಂತೆ ಭಾವಯ್ಯ ನಿಲ್ಲರು ಈತನ ಇದರೀಗೆ 37 ಈತನ ತಮ್ಮನು ಮಾತು ಮಾತಿಗೆ ಬಹಳಾ ಖ್ಯಾತಿಯ ತಾನು ಪಡೆದಾನು ಕೋಪಣ್ಣ ಆತನ ಮುಂದಕ ಕರಿಯಾರೆ 38 ನೆಂಟರ ಅರಿಯನು ಇಷ್ಟರ ಅರಿಯನು ಬಂಟರಾ ಮೊದಲೇ ಅರಿಯನು ತಪಸಿಗೆ ಕಂಟರನಾದಾ ಈತನೇ 39 ಥರ ಥರ ಕುಣಿವುತ ಘರ ಘರ ಹಲ್ಲು ತಿಂದು ನೆರೆಮೋರೆ ಕೆಂಪು ಮಾಡುವಾ ಕೋಪಣ್ಣಾ ಸ್ಮರಣೆಯಾ ತನ್ನ ಮರೆವನು 40 ಕಂಡವರಿಗೆ ತಾನು ಕೆಂಡದ ನುಡಿಯಾಡಿ ಖಂಡಿಸಿ ಬಿಡುವಾ ಗೆಳತನಾ ಕೋಪಣ್ಣ ಹಿಂಡುವ ಹಿಡಿದು ಪ್ರಾಣವ41 ತಾನಾರೆ ಉಣ್ಣನು ಜನರಿಗೆ ಇಕ್ಕನು ಜೇನಿನನೊಣದಾ ಗುಣದಂತೆ ಲೋಭೇಶಾ ದೀನನ ಮುಂದಕ ಕರಿಯಾರೆ42 ಬಿಚ್ಚಾರುವಿಯನು ವೆಚ್ಚಮಾಡೆಂದಿಗೆ ಬಚ್ಚಿಟ್ಟು ಹೂಳಿನೆಲದೊಳು ಲೋಭೇಶಾ ಹುಚ್ಚಾಗಿ ಕಾಯ್ದಾ ಫಣಿಯಂತೆ43 ಕಾಸು ಹೋದಾವೆಂದು ಅಸುವ ಹೋಗುವವರಿ ಕಾಸಾವೀಸಿಯಾ ಬಡವನು ಲೋಭೇಶಾ ಹೇಸನು ಎಂದು ಮತಿಗೇಡಿ 44 ಇಳೆಯೊಳೀ ಪರಿಯಲೀ ಗಳಿಸಿದ ಧನವನು ಕಳೆದುಕೊಂಬರು ಅರಸರು ಕಡಿಯಲಿ ಶೆಳೆದು ಕೊಂಡನು ಪುಗಸಾಟೆ 45 ಇವರಿಂದ ಕಿರಿಯನಾ ಹವಣವ ನೋಡೀರೆ ಅವಗುಣದ ರಾಶಿ ಜಗದೊಳು ಮೋಹಾಂಗಾ ಅವನಾ ಮುಂದಕ ಕರಿಯಾರೇ 46 ತಾಯಿ ತಂದೆಗಳ ನ್ಯಾಯನೀತಿಗಳಿಂದ ಸಾಯಾಸದಿಂದ ಭಕ್ತಿಯ ಮಾಡದೆ ಮಾಯದಾ ಬಲಿಗೊಳಗಾದಾ 47 ಏನು ಬೇಡಿದುದೆಲ್ಲಾ ಪ್ರಾಣವವೆಚ್ಚಿಸಿ ಮಾನಿನೀಯರಿಗೆ ಕುಡುವನು ಮೋಹಾಂಗಾ ಮನವಿಡ ಒಳ್ಳೆವರ ಸೇವೆಗೆ 48 ಲೆಕ್ಕ ವ್ಯವಹಾರವಾ ಲೆಕ್ಕದಿ ಮಾಡದೇ ಮಕ್ಕಳಾಟಕಿಯ ಮಾಡುವಾ ಕ್ರೀಡೆಯಾ ನಕ್ಕಾರೆಂಬ ಸ್ಮರಣಿಲ್ಲಾ 49 ಕಮಲದ ವಾಸನೆಗೆ ಭ್ರಮರವು ಸಿಕ್ಕಿದ ಕ್ರಮದಿಂದ ನೋಡಿ ಸೆರೆಯಾದಾ ಶ್ರೀವಧು ರಮಣನ ನಾಮಾ ನೆನಿಯನು 50 ತರುವಾಯದವನೀತಾ ದುರುಳನ ನೋಡಿರೆ ಮರಳು ಬುದ್ಧಿಯಾ ಮದರಾಯಾ ಆತನಾ ಸರಕು ಮಾಡುವಾ ಕರಿಯಾರೆ 51 ಹೊರಸು ತೊಯ್ಯದಂತೆ ಭರ್ರನೆ ಬಿಗಿವನು ಶರಣರ ಕಂಡು ಬಾಗನು ತಲೆಯನು ಅರಿತವರಿಗೇನಾ ಹೇಳಲಿ 52 ಬಗೆಯಾದೆ ಹಿತವನು ಪಗಡಿಪಂಚಿಗಳಾಡಿ ಹಗಲಿನಾ ಹೊತ್ತುಗಳೆವನು ರಾತ್ರೀಲಿ ಮುಗುಧೇಯರೊಡನೆ ಒಡನಾಟಾ 53 ಕಣ್ಣಿಲ್ಲದಾನೆಯು ಚನ್ನಾಗಿ ತಿರುಗುತ ಮುನ್ನ ಬತ್ತಿದಾ ಬಾವಿಯ ಬೀಳ್ವಂತೆ ಕಣ್ಣೆದ್ದು ಕುರುಡನಾದನು&
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರಿಗಾರು ಇಲ್ಲವಯ್ಯ ಆರಿಗಾರು ಇಲ್ಲವಯ್ಯ ಪ ಮಡದಿಯೆಂಬಳು ಯಾಕೆಬಿಡದೆ ಪಂಕ್ತಿಯ ಊಟ ಎಂಬ ಭಾವ ಮೈದುನನೇಕೆಪಡದ ತಂದೆ ತಾಯಿ ಏಕೆ ಪಡಿತತ್ವ ಯಾಕೆಬಡಿಯುತ ಯಮನೀಗ ಒಯ್ಯೆ ಬಿಡಿಸಿಕೊಂಬರಿಲ್ಲ 1 ಅಣ್ಣತಮ್ಮನು ಯಾಕೆ ಅಳಿಯನು ಯಾಕೆಬಣ್ಣದ ಬಾಳು ತಾನೇಕೆ ಬಂಧುಗಳದೇಕೆಚಿನ್ನಕೊಪ್ಪರಿಗೆ ಯಾಕೆ ಚಿತ್ರಮನೆಯಾಕೆಕಣ್ಣ ಕಟ್ಟಿ ಕಾಲನೆಳೆಯ ಕಾವರಾರು ಇಲ್ಲವಯ್ಯ2 ಆರ ನಂಬಿದರು ನಿನ್ನಕಡೆ ಹಾಯಿಪರಿಲ್ಲನೂರು ಬಾರಿ ತಿಳಿದು ನೋಡು ನಿನ್ನೊಳಗೆಲ್ಲಧೀಧೀ ಚಿದಾನಂದ ಹೊಂದೆಯುಕ್ತಿಯಹುದೆಲ್ಲಬಾರೆ ಜನನ ಮರಣಕೆ ಸಂದೇಹವಿಲ್ಲ 3
--------------
ಚಿದಾನಂದ ಅವಧೂತರು
ಆವ ತ್ರಾಣವು ಎನ್ನೊಳಿನಿತಿಲ್ಲವಯ್ಯ ಭಾವಜಪಿತ ನೀನೆ ದಯಮಾಡಬೇಕೊ ಪ ಗುಡಿಯ ಕಟ್ಟಿಸಲೆ ನಾ ಒಡುಕುಕವಡೆನಗಿಲ್ಲ ಬಡವರಿಗೆ ಅನ್ನಿಟ್ಟಿಲೆ ಹಿಡಿಧಾನ್ಯವಿಲ್ಲ ಕೊಡುವೆನೆನೆ ಧರ್ಮವ ಪಡೆದು ನಾ ಬಂದಿಲ್ಲ ಬಿಡುವೆನೇ ದು:ಸ್ಸಂಗ ಅಡರಿಹ್ಯರು ರಿಣವು 1 ದೃಢಧ್ಯಾತ್ಮಗೈವೆನೆನೆ ನಡೆವ ಶಕ್ತ್ಯೆನಗಿಲ್ಲ ಮಡಿಮಾಡ್ವೆನೆನೆ ಮನವು ತಡೆವಶಕ್ತಿಲ್ಲ ಸುಡಲೆ ಕಾಮಾದಿಗಳು ತೊಡರಿಹ್ಯದು ಸಂಸಾರ ನುಡಿಯಲೆ ಸತ್ಯ ಸದಾ ಬಡವನಾಗಿಹೆನು 2 ಒಡೆಯ ಶ್ರೀರಾಮ ನಿನ್ನಡಿಯ ಗುರುತರಿಯೆ ಕಡುಮೂರ್ಖ ಜನ್ಮವನು ಪಡೆದಿಹೆನು ಜಗದಿ ಒಡೆಯ ಸರ್ವಕೆ ನೀನೆ ಜಡಮತಿಯು ಗಡ ಕಡಿದು ದೃಢಭಕ್ತಿ ಸುಖವಿತ್ತು ಪಿಡಿದು ಸಲಹಯ್ಯ 3
--------------
ರಾಮದಾಸರು
ಆವಾವಯ್ಯ ಇಹದ ಕುಲಗಳುಆವಾವಯ್ಯ ಇಹದ ಕುಲಗಳುಅಷ್ಟಮದಗಳನ್ನೇ ಗೆದ್ದುಭಾವಶುದ್ಧಿಯಿಂದ ಮುಕ್ತಿಭಾಮಿನಿಯನ್ನು ಸೇರಿದವಗೆ ಪ ಮೂರನಳಿದು ಏಳ ಕಳೆದು ಮೂರ ಖಂಡಿಸಿಏಳ ಮುರಿದು ಆರ ಮೂರ ಮೀರಿದವಗೆ 1 ನಾಕ ಕಳೆದು ಎರಡ ಮರೆತು ನಾಲ್ಕು ಮರೆತು ಎರಡ ತಿಳಿದುನಾಲ್ಕು ಎಂಟು ಎಂಬ ಜರೆದು ನಾಲ್ಕರಲ್ಲಿ ನಿಂತವನೆ2 ಹತ್ತನಟ್ಟಿ ನವವ ಮೆಟ್ಟಿ ಹರಿಯ ಕೋಟಿ ಕಿರಣವೆಂಬತತ್ವ ಚಿದಾನಂದ ತಾನೆ ತಾನೆ ಆದವಗೆ 3
--------------
ಚಿದಾನಂದ ಅವಧೂತರು
ಆಶ್ರಮ ಧರ್ಮ ನಾಲ್ಕು ಉಪದ್ರಆಶ್ರಮ ಧರ್ಮ ಬಿಡೆ ಅವ ಪಟ್ಟ ಬದ್ಧ ಪ ಬ್ರಹ್ಮಚಾರಿಯು ಆಗೆ ಕರ್ಮದ ಉಪದ್ರಬ್ರಹ್ಮಚರ್ಯವು ಹೋಗೆ ಸ್ತ್ರೀಯ ಉಪದ್ರಸುಮ್ಮಗೆ ವಾನಪ್ರಸ್ಥನಾಗೆ ಬೆಂಕಿ ಉಪದ್ರಹಮ್ಮಳಿದು ಸಂನ್ಯಾಸಿಯಾಗೆ ಸ್ನಾನದುಪದ್ರ 1 ಗೃಹಸ್ಥನಾಗೆ ವ್ರತಗಳ ಉಪದ್ರಸತತ ಸಂಧ್ಯಾ ಜಪತಪದ ಉಪದ್ರಮಿತಿ ಇಲ್ಲದ ನಾನಾ ಕರ್ಮಗಳ ಉಪದ್ರಸತತ ಶುಚಿ ಅಶುಚಿ ಎಂಬುದರ ಉಪದ್ರ 2 ಆವ ಆಶ್ರಮದಲಿರೆ ಆವುದೊಂದು ಉಪದ್ರಆವ ಆಶ್ರಮದಿ ಉಪದ್ರವೇ ಅದು ಹೋಗದುಆವಾಶ್ರಮಗಳಿಗೆ ಬೇರೆ ಇರೆ ಸುಖಿಯಿಹದೇವ ಚಿದಾನಂದ ಮಹ ಸರ್ವಮಹೋಪದ್ರವ ಪರಿಹಾರವಯ್ಯ 3
--------------
ಚಿದಾನಂದ ಅವಧೂತರು