ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ | ಭೃಂಗನು ಎನಿಸುವಡಿಂಗರಿಗನೆ ಧನ್ಯನೊ ಪ ಧೃತ :ಅಂಗಜನಪಿತ ಕಾ | ಳಿಂಗ ಮರ್ದನತುಂಗ ಮಹಿಮನಪಾಂಗ ಕರುಣನಡಿಂಗರಿಗೆ ಅಭಯಾಂಕ ಹಸ್ತನರಂಗನಂಘ್ರಿ ಸರೋಜ ಭೃಂಗನ ಅ.ಪ. ಮೇದಿನಿ | ಮೌನಿವರ ವರದೇಂದ್ರ ಯತಿಯಲಿ |ಸಾನು ರಾಗದಿ ಜ್ಞಾನವಾರ್ಜಸಿ | ಜ್ಞಾನ ನಿಧಿ ಎಂದೆನಿಸಿ ಮೆರೆದ 1 ವಿಜಯರ ನಿಂದೆಯಿಂದ | ಸಂದಿತು ರೋಗವುನಿಜತನು ತ್ಯಜಿಸುವಂತೇ ||ಅಜನ ನಿಜಪದ ಯೋಗ್ಯ ಪ್ರಾಣನು | ಬಿಜಯಗೆಯ್ಯುತನಿಜ ಸುಸ್ವಪ್ನದಿ |ವಿಜಯದಾಸರ ಪೂಜಿಸೆನ್ನಲು | ಭಜಿಸುತಲಿ ವರವನ್ನೆ ಪಡೆದ 2 ತ್ಯಾಗೀ ಭೋಗೀ ಶೀಲ | ವಿಜಯರ ಸೇವಕಭಾಗಣ್ಣಾರ್ಯರ ಸೇವಿಸೀ ||ಆಗಮಜ್ಞನ ನಾಲ್ದಶಾಯು | ಭಾಗ್ಯವನೆ ತಾಪಡೆದು ಚಂದ್ರಭಾಗದಲಿ ಮೀಯುತಿರೆ ಶಿರಿ | ಜಗದೀಶ ವಿಠಲಾಂಕ ಪಡೆದ 3 ಸ್ವಾದಿ ಸ್ಥಳಕೆ ಪೋಗಿ | ರಾಜರ ಆಜ್ಞೆಯ ಆದರದಲಿ ಕೊಳ್ಳುತಾ ||ಮೋದ ತೀರ್ಥರ ಮತವ ಸಾರುತ | ವೇದ ಶಾಸ್ತ್ರ ಸುಧಾದಿ ಗ್ರಂಥದಸ್ವಾದುರಸ ಪ್ರಾಕೃತದಿ ಬೋಧಿಸಿ | ಶ್ರೀ ಹರಿಕಥೆ ಸುಧೆಯ ಗರೆದ 4 ಲಕ್ಷ್ಯವಿಡುತ ಶುಕ್ಲ | ವರ್ಷವು ಸಿತವೆನ್ನಪಕ್ಷ ಭಾದ್ರ ಪದದೀ ||ದಕ್ಷಿಣಾಯನ ಶುದ್ಧನವಮಿಲಿ | ದೀಕ್ಷೆ ಪಿಡಿಯುತ ಆದಿವಾರದಿಪಕ್ಷಿವಹ ಗುರು ಗೋವಿಂದ ವಿಠಲನ | ಈಕ್ಷಿಸುತ ಭುವಿಯನ್ನೆ ತೊರೆದ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಧವ ರಕ್ಷಿಸು ಮಧುಸೂದನ ವೃಥಾ ಕ್ರೋಧವ್ಯಾಕೊ ಸುರ ಸೌಖ್ಯ ಸಾಧನ ಪ. ದೇಹದಲ್ಲಿ ಬಲ ಕುಂದುತಲಳುವೆ ಮುಂದ- ಕ್ಕಾಹ ರೀತಿ ತಿಳಿಯದೆ ಬಳಲುವೆ ಮೋಹ ಪಾಶದಲಿ ಸಿಕ್ಕಿ ನರಳುವೆ ಚಿತ್ಸಂ- ದೋಹ ಎಂದು ತವಪಾದ ನೆಳಲೀವೆ 1 ಯಾತಕಿಂತು ಸಾವಕಾಶ ಮಾಡುವಿ ದೀನ ನಾಥ ಬಹು ಪರಿಕಿಸಿ ನೋಡುವಿ ಪಾತಕಾಂಶವಿರಲು ನೀಡಾಡುವಿ ಎನ್ನ ಮಾತನ್ಯಾಕೆ ಮರೆತು ಮುಂದೋಡುವಿ 2 ನಿತ್ಯವಾದ ನಿನ್ನ ಸೇವೆ ನಡೆಸಲು ತಕ್ಕ ಶಕ್ತಿಯಿಲ್ಲ ಸ್ವರವನ್ನೆತ್ತರಿಸಲು ಒತ್ತಿ ಬಹ ವಿಧ ವಿಧ ಕೊರೆತವು ಗಂಡ ಕ್ಲೇಶ ಭರಿತವು 3 ಸಿರಿನಲ್ಲ ಹೀಗೆ ಭೃತ್ಯನನ್ನು ಬಿಡುವುದು ಥರವಲ್ಲ ದತ್ತ ಸ್ವಾತಂತ್ರ್ಯವರಿಯದ ಕ್ರಮವೆಲ್ಲ ತೀರಿ ಕತ್ತಲೆ ಮುಸುಕಿದಂತಿರುವುದಲ್ಲ 4 ಮಾಯಕ ಮೋಹದಿ ಸಿಕ್ಕಿ ನೊಂದೆನು ತಿಮ್ಮ ರಾಯ ಶೇಷ ಗಿರೀಶ ಕೇಳ್ಮುಂದೇನು ಬಾಯ ಬಿಟ್ಟು ಬಿರಿನುಡಿಯಂದೆನು ಲಕ್ಷ್ಮೀ ಪ್ರೀಯನೆಣಿಸದಿರದ ನೊಂದೆನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿಹರಾ | ಪಾಲಿಸೊ ಎನ್ನ | ಭವಹರಾ ಪ ಸುರರು ಭೂಸುರರೆಲ್ಲಕರವ ಮುಗಿದು ನಿನ್ನ ವರಗಳ ಬೇಡೋರು ಅ.ಪ. ಸಿರಿ | ಪತಿಯು ಮತ್ತೆ ಪಶುಪತಿಯಿಂದಲೂ ತಾನೂ | ಹತನಾಗದವನಂತೆ 1 ಪರ | ಮೇಷ್ಠಿ ಪಿತನೆ ನಮ್ಮಕಷ್ಟವ ಕಳೆದು ಸಂ | ತುಷ್ಟಿಯ ಪಡಿಸಯ್ಯ 2 ಸುರರ ಭೂಸುರರ ಜಂಗಳಿಯ | ನೋಡಿಪೊರೆವೆನೆಂದವರಿಗೆ ಅಭಯ | ವಿತ್ತುಹರಿಯು ತಾನೇ ರೂಪದ್ವಯ | ದಿಂದಹರಿಹರಾಭಿಧತಾನೆ ಖರೆಯ | ಆಹಸುರರು ರೂಪವ ನೋಡಿ | ಉರುತರದಾಶ್ಚರ್ಯಭರವಾ ಮೈಮರೆಯುತ | ಕರವನೆ ಮುಗಿದರು 3 ಕಾಲ ನಿರೀಕ್ಷಿಸುತ್ತಿದ್ದು | ಬಲ್ಕರಾಳ ರೂಪನ ತಾನು ಗೆದ್ದು | ತಲೆಕಾಲಿನೊಳಗೆ ಮೆಟ್ಟುತಿದ್ದೂ | ಪಾ-ತಾಳಕ್ಕವನ ತಾನು ಒದ್ದು | ಆಹಕಾಲಮೀರುವ ಮುನ್ನ | ಕೇಳಲೊ ವರವನ್ನೆಫಾಲಾಕ್ಷ ಹರಿಯನ್ನು | ಕೇಳಿದನೀಪರಿ 4 ಮಲ್ಲಮರ್ದನ ಗುರು | ಗೋವಿಂದ ವಿಠಲನು ಸಲ್ಲೀಸೂವ ಭಕ್ತ | ರೆಲ್ಲರಭೀಷ್ಟವ 5
--------------
ಗುರುಗೋವಿಂದವಿಠಲರು