ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಜೇಂದ್ರ ಮೋಕ್ಷ ವರಶಂಖಗದೆ ಪದ್ಮಕರದಿ ಚಕ್ರವ ಪಿಡಿದ ಗರುಡಗಮನ ನಮ್ಮ ಕರಿವರದಹರಿಯನ್ನ ನಿರುತ ನೆನೆನೆನೆದು ಬದಿಕಿರಯ್ಯಾ ಪ ಹರಿಧ್ಯಾನ ಹರಿಸೇವೆ ಹರಿಭಕ್ತಿ ಹರಿಚರಿತೆ ದುರಿತದುರ್ಗಕೆಕುಲಿಶ ವರಮುಕ್ತಿಸೋಪಾನ ಕಾಣಿರಯ್ಯಾ ಅ.ಪ. ಕ್ಷೀರಸಾಗರ ಮಧ್ಯೆ ಗಿರಿತ್ರಿಕೂಟ ದೊಳಗೆ ಇರುವುದೂ ಋತುಮಂತ ವರುಣನ ವರವನವು ಅಲ್ಲಿ ಪರಿಪರಿಯ ಲತೆಬಳ್ಳಿ ಸರಸಸ್ಥಾನಗಳಲ್ಲಿ ಮೆರೆವೋರು ಸುರಸಂಘ ನಾರಿಯರ ಸಹಿತಾ 1 ಪದ್ಮಗಾಶ್ರಯವಾದ ಪದ್ಮಕೊಳಾದೊಳಗೆ ಮದಿಸಿದಾ ಗಜವೊಂದು ಐದಿತು ಪರಿವಾರ ಸಹಿತ ವಿಧಿಯ ಬಲ್ಲವರಾರು ಮುದದಿರ್ದ ಆ ಗಜಕೆ ವಿಧಿ ವಕ್ರಗತಿಯಿಂದ ಪಾದವನೆ ಪಿಡಿಯಿತು ನಕ್ರವೊಂದು 2 ಒಂದು ಸಾವಿರ ವರುಷ ಕುಂದದೆಲೆ ಕರಿಮಕರಿ ನಿಂದು ಹೊರಾಡೆ ಸುರವೃಂದ ಬೆರಗಾಯಿತು ಬಂಧು ಬಳಗವು ಮತ್ತೆ ಅಂದ ಹೆಂಡಿರು ಎಲ್ಲ ಕುಂದು ಅಳಿಸದೆ ಇರಲು ಛಂದದಲಿ ಯೋಚಿಸಿತು ಗಜವೂ 3 ಏನಿದ್ದರೇನಯ್ಯ ಶ್ರೀನಿವಾಸನಕೃಪೆಯು ಇನ್ನಿಲದಾಮೇಲೆ ಕುನ್ನಿಗೆ ಸರಿಎಂದು ಹೀನ ಎನ್ನಯ ಜನ್ಮ ದೀನ ಭಾವದಿ ಹರಿಯ ಮಾನವನು ಬದಿಗಿಟ್ಟು ಧ್ಯಾನಿಸಿ ಸ್ತುತಿಸಿದಾ 4 ಸತ್ಯಶಾಶ್ವತಭೋಕ್ತ ಸೃಷ್ಟ್ಯಾದಿಕರ್ಮವಿಗೆ ನಿತ್ಯ ತೃಪ್ತನು ಆದ ಶಾಡ್ಗುಣ್ಯಪರಿಪೂರ್ಣನೆ ವಂದಿಸುವೆನೋ ಓತಪ್ರೋತದಿ ಜಗದಿ ವ್ಯಾಪ್ತ ಆಪ್ತನು ಆದ ಆರ್ತದಲಿ ಕರೆವೆನೋ 5 ಎಲ್ಲಕಡೆಯಲಿ ಇರ್ಪ ಎಲ್ಲರೂಪವ ತಾಳ್ವ ಎಲ್ಲ ಪ್ರೇರಣೆಮಾಳ್ವ ಎಲ್ಲರಿಂ ಭಿನ್ನನಿಗೆ ವಂದಿಸುವೆನೋ ಎಲ್ಲರಿಂ ಉತ್ತಮಗೆ ಎಲ್ಲರಾ ಬಿಂಬನಿಗೆ ಎಲ್ಲರ ವಾಚ್ಯನಿಗೆ ನಲ್ಲನೆಂತೆಂದು ನಾಕರೆವೆನೋ 6 ಎಲ್ಲರನು ಗೆದ್ದವಗೆ ಎಲ್ಲರಾನಲ್ಲನಿಗೆ ಎಲ್ಲ ದೋಷವಿಹೀನ ಒಳ್ಳೆ ಗುಣ ಪೂರ್ಣನ ಕರೆವೆನೋ 7 ನಿನ್ನ ತಿಳಿದವರಿಲ್ಲ ನಿನ್ನ ಮೀರಿದುದಿಲ್ಲ ಜನನ ಮರಣಗಳಿಲ್ಲ ನಿನಗಿಲ್ಲ ಸಮ ಅಧಿಕ ವಂದಿಸುವೆನೋ ನಿನ್ನನಾಮಕೆ ಗುಣಕೆ ನಿನ್ನ ಅವಯವಕೆ ನಿನ್ನ ಕ್ರಿಯ ರೂಪಗಳಿಗೆ ಇನ್ನಿಲ್ಲವೊ ಭೇದಸಾರಿ ನಾಕರೆವೆನೋ 8 ವೇದಗಮ್ಯನುನೀನೆ ವೇದದಾಯಕ ನೀನೆ ವೇದಾತೀತನು ನೀನೆ ಸಾಧು ಪ್ರಾಪ್ಯನುನೀನೆ ವಂದಿಸುವೆನೋ ಖೇದವರ್ಜಿತನೀನೆ ಅಂದ ಸಾರವು ನೀನೆ ಬಂಧನೀಡುವ ನೀನೆ ಅದ್ಭುತ ಅಚಿಂತ್ಯಶಕ್ತಿವಂತನ ಕರೆವೆನೋ 9 ಜ್ಞಾನಿಗೋಚರನೀನೆ ಗುಣಾತೀತನು ನೀನೆ ಗುಣಪ್ರವರ್ತಕನೀನೆ ಅನಾಥ ಸರ್ವಸಮ ವಂದಿಸುವೆನೋ ಜ್ಞಾನದಾಯಕನೀನೆ ಆನಂದಮಯನೀನೆ ನೀನೇ ಸರ್ವಾಧಾರ ನೀನೆ ಏಕನು ಎಂದು ಕೂಗಿ ನಾಕರೆವೆನೋ 10 ಸಾಕಾರ ನಿರಾಕಾರ ಆಕಾರ ಅಹೇಯ ಓಂಕಾರ ವಾಚ್ಯನೆ ಸಾಕಲ್ಯಸಿಗದವನೆ ಸ್ವೀಕಾರ ಮಾಡೋ ವಿಕಾರ ವರ್ಜಿತನೆ ಲೋಕೈಕವೀರಾನೆ ನೀ ಕೆವಲನು ಮುಕ್ತೇಶ ಸಲಹೋ 11 ಏನು ಕೊಡಲೊ ದೇವ ದೀನನು ನಾನಯ್ಯ ನಿನ್ನದೇ ಈ ಭಾಗ್ಯ ಮನ್ನಿಸುತ ದಯಮಾಡಿ ಸಲಹೋ ಘನ್ನಕರುಣಾಳುವೆ ಅನ್ಯರನು ನಾ ನೊಲ್ಲೆ ನಿನ್ನವನು ನಿನ್ನವನೋ ನಿನ್ನ ಚರಣಕೆ ಶರಣು ಶರಣೂ 12 ಕರಿ ತಾನು ಮೊರೆಯಿಡುತ ಕೂಗಲು ಸುರವೃಂದ ಯೋಚಿಸುತ ಹರಿಯಲ್ಲದನ್ಯತ್ರ ಅರಿಯೆವೀಗುಣವೆಂದು ಅರಿತು ಸುಮ್ಮನಿರಲೂ ಹರುಷದಿಂದಲಿ ಹರಿಯು ಗುರುಡನೇರುತ ಬರಲು ತರಿದು ನಕ್ರನ ಭರದಿ ಕರಿಯಪೊರೆಯೆ ಆದ 13 ಏನೆಂದು ವರ್ಣಿಸಲಿ ಶ್ರೀನಿವಾಸನ ಕರುಣ ದೀನ ಭಕ್ತರ ಮೇಲೆ ಸಾನುರಾಗದಿ ಕರಿಯ ಹಿಡಿದೆತ್ತಿದಾ ಇನ್ಯಾಕೆ ಭಯವಯ್ಯ ಘನ್ನ ಇಂದ್ರದ್ಯುಮ್ನನೆ ಏಳು ಮುನ್ನಿನಾ ದೋಷವಿದು ಇನ್ನು ನೀ ಧನ್ಯನಹುದೋ 14 ದೇವಲನ ಶಾಪದಲಿ ಆ ವರ ನಕ್ರನಾಗಿದ್ದ ಶ್ರೀವರನ ಭಕ್ತ ಹೂಹೂ ಗಂಧರ್ವನೆರಗಿ ಬಿದ್ದನು ಹರಿಗೇ ದೇವೇಶ ಹುಸಿನಗುತ ಈವೆ ವರವನು ಕೇಳಿ ಯಾವಾತ ಈ ಕಥೆಯ ಭಾವಶುದ್ಧದಿ ಭಜಿಸೆ ಉದಯದಲಿ ನಾ ಒಲಿವೆ ತವಕದಲಿ ಎಂದನೂ 15 ಹರಿಗೆ ಸಮರಾರಿಲ್ಲ ಹರಿಭಕ್ತ ಗೆಣೆಯಿಲ್ಲ ಸುರರು ಮೊರೆಯಿಟ್ಟರಾಗ ಹರಿವಾಯುಗುರುಗಳು ಕರುಣದಿಂದಲಿ ಇದನು ಮನ್ನಿಪುದು ಬುಧರೂ 16 ಮುದ್ದುಜಯತೀರ್ಥರ ಹೃದಯದಲಿನಲಿಯುವ ಮಧ್ವಾಂತಃಕರಣದಿ ಮುದ್ದಾಗಿ ಕುಣಿಯುವಂಥ ಮಾಧವ ಶ್ರೀಕೃಷ್ಣವಿಠಲರಾಯನು ಬೇಗ ಮೋದ ಸುರಿಸುವ ಈ ಪದವ ಪಠಿಸಲೂ 17
--------------
ಕೃಷ್ಣವಿಠಲದಾಸರು
ತಿರುಪತಿ ಯಾತ್ರೆಯ ಮಾಡಿ ತಿರುಪತಿ ಪ ತಿರುಪತಿಯಾತ್ರೆಯ ಮಾಡಿ ಮನದ ದುರಿತಪಾಪಗಳನೀಡಾಡಿ ಆಹ ಸ್ಮರಕೋಟಿ ತೇಜನ ದರುಶನಲಾಭವು ದೊರಕಿದ ಸುಜನರ ಚರಿತೆಯ ಕೇಳುತ್ತ ಅ.ಪ ಸುಟ್ಟು ಹೋಗುವದಿದು ಚಂದ ಮೆಟ್ಟು ಮೆಟ್ಟಿಲನೇರುವ ವೃಂದ ಜನ ಸೃಷ್ಟಿಗೊಡೆಯ ಗೋವಿಂದ ಆಹಾ ದಿಟ್ಟಮನದಿ ಪರಮೇಷ್ಠಿಪಿತನ ಪಾಡಿ ಗಟ್ಯಾಗಿ ಗೋವಿಂದ ಗೋವಿಂದನೆನುವರು1 ಗಾಳಿಗೋಪುರವನ್ನೆ ದಾಟಿ ಭಕ್ತ- ರಾ ಮಂಟಪಕೆ ಉಂಟೆ ಸಾಟಿ ತಾಳ ಮೇಳದವರ ಗಲಾಟೀಯಿಂದ ಶೋಭಿಪ ಪವನನಕೋಟಿ ಕೇಳಿ ನೋಡುತ್ತ ಭಕುತಿಸೂರ್ಯಾಡುತ್ತ ಮಹಿಮೆ ಕೊಂ- ಡಾಡುತ್ತ ಪಾಡುತ್ತ ಕುಣಿವ ಸಜ್ಜನರೆಲ್ಲ 2 ಸ್ವಾಮಿ ಪುಷ್ಕರಣಿಯ ಸ್ನಾನ ಮಾಡಿ ಆ ಮಹವರಹದೇವರನ್ನ ಕಾಮ- ಧೇನೆಂಬ ಶ್ರೀ ಗುರುಗಳನ್ನ ನೋಡಿ ಆ ಮಹಾ ಅಶ್ವತ್ಥರಾಜನ್ನ ಸ್ತುತಿಸಿ ನೇಮದಿ ದಿಗ್ಗಾವಿ ಆಚಾರ್ಯರಿಗೆ ನಮಿಸಿ ಶ್ರೀಧರನಾಲಯ ದ್ವಾರಕ್ಕೆ ಪೋಗಲು 3 ಮೂರು ದ್ವಾರಗಳನ್ನೆ ದಾಟಿ ಮು- ರಾರಿಯ ಗುಡಿಸುತ್ತ ಕೋಟೆಯಲ್ಲಿ ಸಾರುವ ಭಕುತರ ಭೇಟಿಯಿಂದ ಅ- ಪಾರ ಜನುಮದ ಪಾಪಮೂಟೆ ಪೋಗಿ ಬೇಗದಿ ವಿಮಾನ ಶ್ರೀನಿವಾಸನ ನೋಡಿ ಸಾಗರಶಯನನ ದರುಶನ ಕೊಡುಕೊಡು ಎಂದು 4 ಕೊಪ್ಪರಿಗೆಯು ಮನೆಯಂತೆ ಹಣ ತಪ್ಪದೆ ಸುರಿಯುವರಂತೆ ನ- ಮ್ಮಪ್ಪ ವೆಂಕಟಸ್ವಾಮಿಯಂತೆ ತಪ್ಪನಾಡುವರ ಶಿಕ್ಷಿಪನಂತೆ ಆಹಾ ಕ್ಷಿಪ್ರದಿ ಶ್ರೀಧರನಪ್ಪಣೆಯಂದದಿ ಅಪ್ರಮೇಯನ ಸೇವೆಗೊಪ್ಪುವ ಸುಜನರು 5 ಹೇಮದ್ವಾರದಿ ನಿಂತ ಜನರು ನಮ್ಮ ಸ್ವಾಮಿ ಶೃಂಗಾರ ನೋಡುವರು ಶ್ರೀನಿ- ವಾಸನೆ ಸಲಹು ಎಂಬುವರು ಪಾಹಿ ಪಾಹಿ ಶ್ರೀಪತಿ ಎನ್ನುತಿಹರು ಶ್ರೀಶ ಗೋವಿಂದ ಗೋವಿಂದ ಗೋವಿಂದ ಮಾಧವ ಮಾತುಳಾಂತಕ ದೇವ ಮಾತು ಲಾಲಿಸು ಎಂದು6 ಚರಣದಂದಿಗೆ ಗೆಜ್ಜೆವಲಿಯೆ ಪೊನ್ನ ಸರಪಳಿ ಪಾಡಗ ನಲಿಯೆ ಒಳ್ಳೆ ಜರದ ಪೀತಾಂಬರ ಹೊಳೆಯೆ ಪಟ್ಟೆ ವರವಲ್ಲಿ ಹೊಳೆಯುತ್ತ ಮೆರೆಯೆ ಆಹ ಸರಗಳು ವಲಿಯುತ್ತ ಪದಕಂಗಳ್ಹೊಳೆಯುತ್ತ ಉರದಲ್ಲಿ ಶ್ರೀದೇವಿ ಇರುವ ವೈಭವ ನೋಡಿ7 ವರಶಂಖು ಚಕ್ರ ಹಸ್ತದಲಿ ದಿವ್ಯ ಸಿರದಿ ಕಿರೀಟ ಮೆರೆಯುತಲಿ ಪಟ್ಟೆ ತಿಲುಕ ಕಸ್ತೂರಿ ಹೊಳೆಯುತಲಿ ಥಳ ಥಳ ಹೊಳೆವ ಮುಖಕಾಂತಿಯಲಿ ಅಹ ಕಡೆಗಣ್ಣ ನೋಟದಿ ಜಗವಮೋಹನ ಮಾಳ್ಪ ಅಗಣಿತ ಮಹಿಮನ ಸುಗುಣವ ಪಾಡುತ್ತ 8 ಕರುಣಿಗಳರಸನೆ ದೇವ ತನ್ನ ಶರಣು ಹೊಕ್ಕವರನ್ನೆ ಕಾವ ತನ್ನ ಭಜಕರಿಗಭಯವ ನೀವ ಇನ್ನು ಸರಿಯುಂಟೆ ಶ್ರೀರಮಾದೇವ ಅಹ ಪರಿಸರನೊಡೆಯನ ನಿರುತದಿ ಧ್ಯಾನಿಸಿ ದುರಿತಗಳಳಿದು ಸದ್ಗತಿಯ ಪಡೆವರೆಲ್ಲ 9 ಕಾಲಹರಣ ಮಾಡದಂತೆ ತ್ರಿ- ಧಾಮನ ಸ್ಮರಿಸುವ ಚಿಂತೆಯಲ್ಲಿ ಆಲಸ್ಯ ತೊರೆದಿಹರಂತೆ ಶ್ರೀನಿ- ವಾಸನೆ ಇದಕ್ಹೊಣೆಯಂತೆ ಅಹ ಕಾಲಕಾಲಕೆ ತಕ್ಕ ಲೀಲೆಯ ತೋರುವ ಪಾದ ಧ್ಯಾನಿಪ ಸುಜನರು 10 ಹತ್ತವತಾರದ ಹರಿಯು ತನ್ನ ಭಕ್ತರು ಸ್ತುತಿಸುವ ಧ್ವನಿಯ ಕೇಳಿ ಚಿತ್ತದಿ ನಲಿಯುವ ಪರಿಯು ಸುರರು ವಿಸ್ತರಿಸುವ ದಿನಚರಿಯು ಅಹ ಭಕ್ತರ ಸ್ತುತಿಸಲು ಮತ್ತವರಿಗೊಲಿಯುವ 11
--------------
ನಿಡಗುರುಕಿ ಜೀವೂಬಾಯಿ
ಕಂಡೆನಾ..............ಸಾಸಿರನಾಮದಶೇಷಮಹಿಮ ವೆಂಕಟೇಶನ ಮೂರುತಿಯ ಪ.ಶೇಷಗಿರಿಗೆ ಕೈವಲ್ಯವೆನಿಪ ಸ್ವಾಮಿಪುಷ್ಕರಿಣಿಯವಾಸನಕಂಡೆನಾಅ.ಪ.ವಿಕಸಿತಸರಸಿಜ ಸಮಪದಯುಗಳನಅಖಿಳಜಗದೆರೆಯನನಖಶ್ರೇಣಿಗಳೊಳು ತರತರದಿ ಮೆರೆವಸುಖಮಣಿಗಳ ಕಂಡೆನಾ 1ಗುಲ್ಛಕೆ ನೂಪುರ ಭೂಷಿತ ವರಫಣಿತಲ್ಪನ ಮೂರುತಿಯಒಪ್ಪುವ ದ್ವಿಜದಂತಿಹ ಜಘನ ಕಂದರ್ಪನಯ್ಯನ ಕಂಡೆನಾ 2ಹೊಂಗನ್ನಡಿಗಳ ಹಳಿದೊಪ್ಪುವ ಜಾನುಂಗಳ ಚೆನ್ನಿಗನಬಂಗಾರ ಬಾಳೆಯ ಕಂಬದಂತೆಸೆವ ಬೆಡಂಗಿನ ತೊಡೆಯವನ ಕಂಡೆನಾ 3ಕಟ್ಟಿಹ ಕಟಹವನಿಟ್ಟ ಝಗ ಝಗಿಸುವ ಪೊಂಬಟ್ಟೆಯನುಟ್ಟವನಇಟ್ಟ ಕಿಂಕಿಣಿದಾಮ ಮಧ್ಯತ್ರಿವಳಿ ನಾಭಿಸೃಷ್ಟಿಯುದರದವನ ಕಂಡೆನಾ 4ಉರದಿ ಮೆರೆವ ಸಿರಿವತ್ಸಲಾಂಛನಕೇಯೂರ ಕೌಸ್ತುಭಧರನಸಿರಿತುಲಸಿ ಪದಕಹಾರ ಕಂಬುಕಂದರತಿರುವೆಂಗಳಯ್ಯನ ಕಂಡೆನಾ5ಅರಿಮಥÀನವ ಮಾಳ್ಪರಿ ಶ್ರುತಿಮಯವಾದವರಶಂಖೋಧೃತನವರಾಭಯ ನೀಡುವವರಗದೆಪದುಮದಪರಮಾಂಗನ ಕಂಡೆ ನಾ 6ಅಂಬುಜಮೊಗದೊಳು ಕಾಂತಿಯ ಬೀರುವಲಂಬಿತ ಕುಂಡಲನಪೊಂಬಣ್ಣದ ಸಂಪಿಗೆ ಸಂಪಿಗೆನಾಸಿಕಲುಳಿ ನಾಸಾಪುಟದವನ ಕಂಡೆನಾ 7ಮರಿಕೂರುಮನಂದದಿ ಕದಪುಗಳು ಅಮರುತ ಬಿಂಬಾಧರನಪೆರೆನೊಸಲಿನ ಭ್ರೂಲತೆ ಕಿರುನಗೆ ಕಸ್ತೂರಿ ತಿಲಕಾಂಕಿತನ ಕಂಡೆನಾ 8ಕೋಟಿಇನತೇಜದಮಕುಟವರಕರುಣನೋಟದ ಜಗಪಾಲನಹಾಟಕಗಿರಿಯ ಪ್ರಸನ್ನವೆಂಕಟ ಜಗನ್ನಾಟಕ ಸೂತ್ರಧಾರನ ಕಂಡೆನಾ 9
--------------
ಪ್ರಸನ್ನವೆಂಕಟದಾಸರು
ನಾರಾಯಣ ನಿನ್ನ ನಾಮವನು ನೆನೆದರೆ |ಹಾರಿಹೋಹುದು ಪಾಪ ಜನ್ಮಜನ್ಮಾಂತರದಿ |ಶ್ರೀ ರಮಣ ನಿನ್ನ ಕೃಪೆಯಿತ್ತೆಮಗೆ ಮುಕ್ತಿಯ -ದಾರಿ ತೋರಿಸೊ ಮುರಾರಿ ಪಸಕಲ ವೇದ ಪುರಾಣ _ ಶಾಸ್ತ್ರವನು ತಿಳಿದೋದಿ |ತಿಯಿಂಭಕುತ ತಾಯ್ತಂದೆಗಳ ಚಿತ್ತವಿಡಿದರ |ರಕುಷಣೆಯ ಮಾಡಿ ಜಗದೊಳಗೆ ವಿಖ್ಯಾತ ಸುಕು -ಮಾರ ತಾನೆಸಿಸಿಕೊಂಡ1ಪ್ರಕೃತಿಯಲಿ ಹೋಮಕೋಸ್ಕರ ಸಮಿಥೆ ತರಹೋಗಿ |ಶುಕರುಮಗಳಿಂದ ಚಾಂಡಾಲಿಲೆಯ ಕಂಡು ತಾ - |ಮೂಕನಾಗಿನಿಂದು ಮೈಮರೆದು ಪಾತಾಕಿಯ ಬಹ -ದುರಿತವನು ತಾನರಿಯದೆ 2ನಿಲ್ಲು ನಿಲ್ಲೆಲೆ ಕಾಂತೆ, ನಿನಗೊಲಿದೆ ನೀನಾರೆ |ಸೊಲ್ಲಿಸೆನ್ನೊಡನೆ ಸತಿಯರ ಕುಲಕೆಕಟ್ಟಾಣಿ |ಚೆಲ್ಲೆನ್ನ ಮೇಲೆ ಕರುಣವನಿಂತು ಕೋಮಲೆಯೆನಿಲ್ಲೆಂದು ಸೆರಗ ಪಿಡಿದ 3ಎಲೊವಿಪ್ರ ಕೇಳು ನಾ ಕುಲಹೀನೆ ನಮ್ಮ ಮನೆ |ಹೊಲನೆನದು ಗೋಮಾಂಸ ಚರ್ಮದಾ ಹಾಸಿಕೆಯು |ಎಲುವಿನಾ ರಾಶಿ ಒದರುವ ನಾಯ ಹಿಂಡುಗಳು -ಬಹು ಘೋರಘೋರ ವಿಹುದು 4ಬಲೆಗೆ ಸಿಲ್ಕಿದ ಪಕ್ಷಿ ಬೇಟೆಗಾರನದಲೇ ? |ಕುಲವನ್ನು ಕೂಡೆ ನಾ ಕಾಮಿನೀರನ್ನಳೆ |ಚಲದಿಂದ ಬದುಕುವೆನು ಸುಖದಿಂದಲಿರುವೆ ನೀಒಲವು ನನಗೊಂದೆ ಎಂದ 5ವ್ಯರ್ಥ ಎನ್ನೊಡನೆ ಮಾತೇತಕೆಲೊ ಹಾರುವಾ |ಚಿತ್ತ ನನ್ನಲ್ಲಿ ಇದ್ದರೆ ಹೋಗಿ ನೀ ನಿನ್ನ |ಹೆತ್ತ ತಾಯ್ತಂದೆಯರ ಕೇಳು ಸಮ್ಮತಿಸಿದರೆ -ಮತ್ತೆ ನಿನಗೊಲಿವೆನೆನಲು 6ಅತ್ತ ಕಾಮಿನಿಯ ಒಡಗೊಡಿ ತನ್ನಯ ಪಿತನ |ಹತ್ತಿರಕೆ ಹೋಗಿ ಕೇಳಿದರೆ ಆತನು ಎಂದ |ಉತ್ತಮದ ಕುಲವನೀಡಾಡಿ ಈ ಪಾತಾಕಿಯ -ಹಸ್ತಕೊಳಗಾಗದಲಿರೈ 7ಆಗದಾಗದು ನನ್ನ ಕುಲಬಂಧು - ಬಳಗವನು |ನೀಗಿ ನಿನ್ನೊಡನೆ ಕೂಡುವೆನೆಂಬ ಮತವೆನಗೆ |ನಾಗಭೂಷಣನ ಪಣೆಗಣ್ಣಿಲುರಿದನ ಬಾಣತಾಗಿತೆನ್ನೆದೆಗೆ ಎಂದ 8ಕೂಗಿ ಹೇಳುವೆ ನಿನ್ನ ಕುಲವಳಿಯದಿರು ಎಂದ |ಹೋಗಿ ಕೂಡದೆ ನಿನ್ನ ಹೆತ್ತ ತಾಯ್ತಂದೆಗಳಿ - |ಗಾಗದಿದ್ದರೆ ಆಚೆಯಾ ಮನೆಯೊಳಗೆ ಹೋಗಿಇಬ್ಬರೂ ಇರುವೆವೆಂದ 9ಹಾಲಂತ ಕುಲವ ನೀರೊಳಗದ್ದಿ ಪೂರ್ವದಾ |ಶೀಲವನ್ನಳಿದು ಸತಿಯಳ ಕೂಡಿ ತಾನು ಚಾಂ - |ಡಾಲಿತಿಗೆ ಹತ್ತು ಮಕ್ಕಳನು ಪಡೆಕೊಂಡವರಲೀಲೆ ನೋಡುತಲಿ ಹಿಗ್ಗಿ 10ಬಾಳಿನಲ್ಲೀ ರೀತಿ ಅಜಮಿಳನು ಇರುತಿರಲು |ಕಾಲ ಬಂದೊದಗಿತ್ತು ಕರೆಯಿರೆವೆ ಪಾತಕನ |ಜೋಲುದುಟಿಡೊಂಕು ಮೋರೆಯ ಅಬ್ಬರದಿ ಯಮನ -ಆಳುಗಳು ಬಂದರಾಗ 11ಎಡಗೈಯೊಳಗೆಪಾಶ ಹಿಡಿದು ಚಮ್ಮತಿಗೆಗಳ |ಒಡನೆ ಜಾವಳಿನಾಯಿ ವಜ್ರಮೋತಿಯ ಕಾಯಿ |ತುಡಿಕಿರೋ ಕೆಡಹಿ ಕಟ್ಟಿರೋ ಪಾತಕನನೆಂದುಘುಡುಘುಡಿಸಿ ಬಂದರಾಗ 12ಗಡಗಡನೆ ನುಡುಗಿ ಕಂಗೆಟ್ಟು ಅಜಮಿಳನು ತಾ |ಕಡೆಯ ಕಾಲಕೆ ಅಂಜಿ ಮಗನ ನಾರಗನೆಂದು |ಒಡನೊಡನೆ ಕರೆಯಲ್ಕೆ ಯಮನಾಳ್ಗಳೋಡಿದರುಮುಟ್ಟಿದುದು ಹರಿಗೆ ದೂರು 13ಕೊರಳ ತುಳಸಿಯ ಮಾಲೆಯರಳ ಪೀತಾಂಬರದ |ವರಶಂಖ ಚಕ್ರದ್ವಾದಶನಾಮಗಳನಿಟ್ಟ |ಹರಿಯ ದೂತರು ಅಂಜಬೇಡ ಬೇಡನ್ನುತಲಿಹರಿದೋಡಿಬಂದರಲ್ಲಿ 14ಪುಂಡರೀಕಾಕ್ಷನೀ ಭೃತ್ಯನನು ಬಾಧಿಸುವ |ಲಂಡಿರಿವರಾರು ನೂಕಿರಿ ನೂಕಿರೆಂತೆಂದು |ದಂಡವನು ತೆಗೆದು ಬೀಸಾಡಿ ಯಮನವರಿಗು - |ದ್ದಂಡರಿವರೆಂದರಾಗ 15ತಂದೆ ಕೇಳಿರಿ ಒಂದು ಭಿನ್ನಪವ ಲಾಲಿಸಿರಿ |ಒಂದು ದಿನ ಹರಿಯೆಂದು ಧ್ಯಾನವನ್ನರಿಯ ನಾವ್ - |ಬಂದಾಗ ಆತ್ಮಜನ ನಾರಗನೆ ಎಂದೆನಲುಕುಂದಿದುವೆ ಇವನ ಪಾಪ ? 16ಹಂದೆ - ಕುರಿಗಳಿಗೆ ನಿಮಗಿಷ್ಟು ಮಾತುಗಳೇಕೆ |ನಿಂದಿರದೆ ಹೋಗಿ ನಿಮ್ಮೊಡೆಯನಿಗೆ ಪೇಳೆನಲು |ಸಂದಲಾ ಯಮಭಟರು ಅಜಮಿಳನ ಹರಿಭಟರುತಂದರೈ ವೈಕುಂಠಕೆ 17ಮದ್ಯಪಾನವ ಮಾಡಿ ಪೆಂಗಳನು ಒಡಗೂಡಿ |ಅದ್ದಿದೆನು ನೂರೊಂದು ಕುಲವ ನರಕದೊಳೆಂದು |ಹದ್ದಿನಾ ಬಾಯೊಳಗಿನುರಗನಂತಜಮಿಳನುಇದ್ದನವ ನೆರೆಮರುಗುತ 18ವಿಪ್ರಕುಲದಲಿ ಹುಟ್ಟಿ ವೇದಶಾಸ್ತ್ರವನೋದಿ |ಮುಪ್ಪಾದ ತಾಯಿ - ತಂದೆಗಳೆಲ್ಲರನು ಬಿಟ್ಟು |ಒಪ್ಪಿ ಧಾರೆಯನೆರೆದ ಕುಲಸತಿಯ ಬಿಟ್ಟು ಕಂ -ದರ್ಪನಾ ಬಲೆಗೆ ಸಿಕ್ಕಿ 19ವಿಪ್ರ ನಾನಾದರೂ ಜಗದಿ ನಿಂದ್ಯನು ಆಗಿ |ಇಪ್ಪೆ ನೀ ಪರಿಯೊಳೆನ್ನಂಥ ಪಾತಕಿಯಿಲ್ಲ |ತಪ್ಪಲಿಲ್ಲವೊ ಹಣೆಯಬರೆಹವಿದು ಭುವನದೊಳುಬೊಪ್ಪರೇ ವಿಧಿಯೆಂದನು 20ಇಳೆಯೊಳಗೆ ಶ್ರೀಪುರಂದರ ವಿಠಲನಾಮವನು |ನೆಲೆಯರಿತು ನೆನೆವರಿಗೆ ಯಮನ ಬಾಧೆಗಳಿಲ್ಲ |ಸುಲಭದಿಂದಲ್ಲಿ ಸಾಯುಜ್ಯಪದವಿಯು ಸತ್ಯಬಲುನಂಬಿ ಭಜಿಸಿ ಜನರು21
--------------
ಪುರಂದರದಾಸರು