ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅವನಿಯೊಳವತರಿಸಿದ ವ್ಯಾಸರಾಯ ಭೂಸುರಜನವರ್ಯ ಸುವಿನೋದವ ಪಡೆದರು ಸುರನರಜನರು ಪ ಪವನಸುತರ ಮತ ಭುವಿಯಲಿ ಸುಲಭದಿ ವಿವರಿಸಿ ಜನರಿಗೆ ಪ್ರವಚನವೆಸಗಲು ಅ.ಪ ಗುರು ಬ್ರಹ್ಮಣ್ಯರ ವರಪದ ಕಮಲಗಳ ಪರತÀರ ಭಕುತಿಯಲಿ ಪರಿಪರಿ ಸೇವಿಸಿ ಗುರುಕರುಣದಲಿ ಹರುಷವ ಪೊಂದುತಲಿ ವರವ ಪಡೆದ ಭೂಸುರ ರಾಮಾರ್ಯರ ವರಸತಿಯುದರದಿ ವಹ್ನಿಪುರದೊಳವ ತರಿಸುವ ಧರೆಯೊಳು ಸುಜನಗಣವನು ದ್ಧರಿಸಲು ಮುದದಲಿ ಸಿರಿಪತಿಭಕುತನು 1 ಅತಿಬಾಲ್ಯದಿ ಗುರ್ವಾಜ್ಞೆಯನನುಸರಿಸಿ ಯತಿಯಾಶ್ರಮವಹಿಸಿ ಕ್ಷಿತಿಯೊಳಪರೋಕ್ಷಜ್ಞಾನಿಗಳೆಂದು ಪ್ರಥೆಯನು ಪೊಂದಿದ ಲಕ್ಷ್ಮೀನಾರಾಯಣ ಯತಿಯಲಿ ಶಾಸ್ತ್ರಾಮೃತ ಪಾನ ಮಾಡುತ ಅತಿ ಸುಲಭದ ಶ್ರುತಿಗಳ ಸಾರವ ಕ್ಷಿತಿ ಸುರರೊಳಗತಿ ಹಿತದಲಿ ಅರುಹಲು 2 ಗಜಗಹ್ವರ ದೇಶದ ನರಪತಿಗಳಿಗೆ ನಿಜವರ ಕರುಣದಲಿ ವಿಜಯಾಭ್ಯುದಯಗಳನು ಸತತ ಪೊಂದಿಸುತ ರಜತಕನಕ ನವಮಣಿಗಣಯುತ ವಾ ರಿಜವನು ಪೋಲುವ ಸಿಂಹಾಸನದಲಿ ಸುಜನ ಸಮೂಹಕೆ ನಿಜಪದಯುಗಳಾಂಬುಜ ಸೇವೆ ನೀಡಲು 3 ನಂದತೀರ್ಥರ ವರಶಾಸ್ತ್ರಗಳನ್ನು ಚಂದದಿ ವಿವರಿಸಲು ಚಂದ್ರಿಕಾ ನ್ಯಾಯಾಮೃತ ಮೊದಲಾದ ಗ್ರಂಥಗಳನು ರಚಿಸಿ ಮಂದಜನಕೆ ಮುಚುಕುಂದನ ಶುಭಗುಣ ವೃಂದಗಳನು ಸುಖದಿಂದ ಬೋಧಿಸಲು ಅಂದಪದಗಳನು ರಚಿಸುತ ಶುಭಗುಣ ಸಾಂದ್ರನ ಭಜನಾನಂದ ಪೊಂದಿಸಲು 4 ವಿಜಯೀಂದ್ರ ವಾದಿರಾಜ ಮೊದಲಾದ ನಿಜವರ ಶಿಷ್ಯರುಗಳ ವ್ರಜಕೆ ಶಾಸ್ತ್ರಾರ್ಥಗಳನು ಬೋಧಿಸುತ ಪುರಂದರ ಸುಜನ ಶಿರೋಮಣಿ ಕನಕ ಪ್ರಮುಖ ಪೂಜಿತ ಪದಯುಗಳಾಂಬುಜ ಯತಿಶೇಖರ ವಿಜಯಸಾರಥಿಯು ಪ್ರಸನ್ನನಾಗಲೆಂದು 5
--------------
ವಿದ್ಯಾಪ್ರಸನ್ನತೀರ್ಥರು
ಗಣೇಶಸ್ತುತಿ ಕರುಣಿಸೋ ಗೌರೀಕರಜ ಪ ಕರುಣಾಳು ಕ್ಷಿಪ್ರ ಮನದ ಕಾಯ ಬೇಗದಿ ಅ.ಪ ಕಾಯ ಜಾತ ಅರಿವರ್ಗಗಳಿಗೆ ವಿಘ್ನವ ತ್ವರದಲ್ಲಿ ಇತ್ತು ಶುಭಕೆ ಮಾರ್ಗವ 1 ನರಭಾವದಿಂದ ನಿನ್ನ ಮರೆತರೆ ನೀನು ಎನ್ನನು ಜರಿದರೆ ಪೊರೆವೊರ್ಯಾರೊ ನಿರುತದಿ 2 ಮರುದಂಶ ಮಧ್ವಮುನಿಯ ವರಶಾಸ್ತ್ರ ಪೇಳ್ವ ಬುದ್ಧಿಯ ವರವಿತ್ತು ಬಂದ ವಿಘ್ನವ ಕಳೆಯುತ 3 ವರಪಾಶಪಾಣಿ ಎನ್ನ ದುರಿತಾಶಪಾಶ ಛೇದಿಸಿ ಹರಿ ಭಕ್ತಿ ಪಾಶದಿಂದ ಬಿಗಿಯುತ 4 ಕರಿವಕ್ತ್ರಶಂಕೆ ಎಂಬ ಕರಿಯನ್ನು ಅಂಕುಶದಲಿ ಮುರಿಬಿಂಕ ಶಂಕಿಸದೆ ವಿದ್ಯವ 5 ಸಿರಿ ವಾಣಿ ಚಂಡಿಕಾದ್ಯರು ನಿರುತದಿ ಇದ್ದು ವರವ ಬೀರ್ವರು 6 ನರವಾಹ ವಾಯುಜರಿಗೆ ಸರಿ ಎಂಬೋ ಜ್ಞಾನದಿ ಪಾದ ತೋರಿ ಬೇಗನೆ 7
--------------
ಪ್ರದ್ಯುಮ್ನತೀರ್ಥರು
ವಾಸುದೇವ ನಿನ್ನ ದಾಸನಾಗಲು ಬಲು ಆಸೆಯ ಪೊಂದಿ ಸಂತೋಷದಲಿರುವೆನೊ ಪ ಈ ಸಂಸಾರದ ಮೋಸಕೆ ಸಿಲುಕೆ ನಾ ಶ್ರೀಶನ ಚರಣವ ಲೇಶ ಭಜಿಸಲಿಲ್ಲ ಪಾಶಕೆ ಸಿಲುಕದ ಸುಜನರುಗಳ ಸಹ ವಾಸವಿತ್ತು ಅವಕಾಶವ ನೀಡೊ ಅ.ಪ ಸಾರುತಲಿರುವ ಸಮೀರ ಸಮಯಗಳ ಸಾರವನರಿಯದೆ ದೂರಿದೆ ನಿನ್ನನು ಯಾರ ಕರುಣವೊ ತೋರಿತು ಮನದಲಿ ಘೋರತರದ ಅಪರಾಧಗಳೆಲ್ಲವು ಭೂರಿ ದಯದಿ ನಿನ್ನ ಚಾರು ಚರಣದಲಿ ಸೇರಿಸೊ ಮನವ 1 ಪರಿಪರಿ ವಿಧದ ಕುಶಾಸ್ತ್ರಗಳೋದಲು ಬರಿಗಾಳಿಯ ಗುದ್ದಿ ಮುರಿದವು ಕರಗಳು ಸಿರಿರಮಣನೆ ನಿನ್ನ ಪರಿಚಾರಕನೆಂಬೊ ಅರಿವಿನಿಂದಲೆ ಪರತರ ಸುಖವೆಂದು ಪರಿಪರಿಯರುಹುವ ಗುರು ಮಧ್ವರಾಯರ ವರಶಾಸ್ತ್ರಗಳಿಗೆ ಸರಿಯುಂಟೆ ಜಗದೆ 2 ಅನ್ಯಸೇವೆಗಳಲ್ಲಿ ಅನ್ಯಾಯದಿ ಕಾಲ ಮುನ್ನ ಕಳೆದುದನು ಮನ್ನಿಸೆಲೋ ಹರಿ ನಿನ್ನ ಸೇವೆಯ ಸುಖವನ್ನು ಅರಿತೆನೊ ಎನ್ನ ಮನಕೆ ಬಲವನ್ನು ಕರುಣಿಸುತ ಇನ್ನಾದರು ಚ್ಯುತಿಯನ್ನು ಪೊಂದಿಸದೆ ನಿನ್ನ ದಾಸನಲಿ ಪ್ರಸನ್ನನಾಗೆಲೊ 3
--------------
ವಿದ್ಯಾಪ್ರಸನ್ನತೀರ್ಥರು
ವಂದನೆ ಮಾಡಿರೈಗುರುವರದೇಂದ್ರರ ಪಾಡಿರೈ ಪಬಂದ ದುರಿತಗಳ ಹಿಂದೆ ಮಾಡಿ ಸುಖ |ತಂದುಕೊಡುವ ದಯಾಸಿಂಧುಯತೀಂದ್ರರ ಅ.ಪ.ಮರುತ ಮತಾಂಬುಧಿ ಸೋಮನೆನಿಪ ವಸುಧೇಂದ್ರ - ಸದ್ಗಣಸಾಂದ್ರ|ಗುರುಗಳಕರಕಮಲದಿ ಜನಿಸಿದ ಸುಕುಮಾರಾ - ಕುಜನ ಕುಠಾರಾ ||ನೆರೆನಂಬಿದ ಭಕುತರನನುದಿನದಲಿ ಪೊರೆವಾ - ದುರಿತವ ತರಿವಾ |ಧರೆಯೊಳು ತ್ಯಾಗದಿ ಕರ್ಣನ ಮರೆಸಿದ ನೋಡಿ - ವರಗಳ ಬೇಡಿ1ಕರಿಹಿಂಡೊಳುಹರಿಹೊಕ್ಕ ತೆರದಿ ವಾದಿಗಳ - ಕೀಳು ಮತಗಳ |ವರಶಾಸ್ತ್ರಗಳಲಿ ಗೆಲಿದು ಸುಬುದ್ಧಿಯ ವರದ - ಜಗದೊಳು ಮೆರೆದ ||ಶರಭಂಗವರದಚರಣಸರಸೀರುಹಭೃಂಗ- ವಿಷಯ ಅಸಂಗ |ಸ್ಮರಣೆಯ ಮಾಡೆ ಪಿಶಾಚ ರೋಗಗಳ ಭಯವೂ - ಮುಟ್ಟದಲಿಹವೂ 2ಸಾನುರಾಗದಲಿ ಶ್ರೀ ರಾಘವೇಂದ್ರರ ಸ್ತೋತ್ರ - ಮಾಳ್ಪ ಸುಪಾತ್ರ |ಜಾನಕಿಪತಿ ಆನಂದದೊಳಿವರಿಗೆ ಒಲಿವ - ಹೃದಯದಿ ಸುಳಿವ ||ದೀನ ದಯಾಳು ಅಪರಿಮಿತ ಮಹಿಮ ಗುಣಾಢ್ಯ - ವಾದದಿ ದಾಢ್ರ್ಯಾ |ಧ್ಯಾನಿಸೆ ಮನದೊಳು ಜ್ಞಾನ ಕೀರ್ತಿ ಸುಖ ಕೊಡುವ - ಅಘಗಳ ಕಡಿವ 3ವಿಷ್ಣುನ ಲೋಕ ಪ್ರವೇಶ ಮಾಡಿದ ಚರಿಯಾ - ಕೇಳಿರಿ ಪರಿಯಾ |ಶಿಷ್ಟ ಜನರು ವಿಶ್ವಾವಸು ನಾಮಕ ಅಬ್ದ - ಆಷಾಢ ಶುದ್ಧ ||ಷಷ್ಠಿಯು ಕುಜವಾಸರ ಉತ್ತರಾ ನಕ್ಷತ್ರಾ -ವರಪುಣ್ಯಕ್ಷೇತ್ರ |ನಟ್ಟ ನಡುವೆ ವೃಂದಾವನ ಮಧ್ಯದೊಳಿರುವಾ - ಸೌಖ್ಯವ ಸುರಿವಾ 4ಆನೆ ಹಂಡೆ ವಸನಗಳು ದ್ರವ್ಯವು ನಾನಾ - ಮಾಡಿದ ದಾನಾ |ಆ ನಗರದಿ ಬಹು ಮಂದಿಯು ಭಕುತಿಯಲಿಂದಾ - ಪೂಜಿಪ ಚಂದ ||ಸೂನುಪಡೆದು ಸುಖ ಪಡುವರು ಸರ್ವರುನಿತ್ಯ- ಈತನು ಸತ್ಯ |ನಾನೆಂತುಸಿರಲಿ ಪ್ರಾಣೇಶ ವಿಠಲನ ದಾಸಾ, ಮುನಿ ಉತ್ತಂಸಾ 5
--------------
ಪ್ರಾಣೇಶದಾಸರು