ಒಟ್ಟು 4 ಕಡೆಗಳಲ್ಲಿ , 2 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಗುರು ರಾಜರಿಗೆ ಆರುತಿ ಬೆಳಗಿರೆ ಪ ಸೂರಿ ಪರಾಕು ಪರಾಕು |ಗುರು ವಸುಧೇಂದ್ರರ ಕುವರ ಪರಾಕೆಂದು |ಹರದೇರಾರುತಿಯಾ ಬೆಳಗಿರೆ 1 ಪರಾಕು ಪರಾಕು ಪರಾಕು |ಗಂಡುಗಲಿ ಹರಿಯಾ ಪರಾಕೆಂದು |ಪುಂಡಲೀಕದಾರುತಿಯಾ ಬೆಳಗೀರೆ2 ಶ್ರೀಶ ಪ್ರಾಣೇಶ ವಿಠಲದೂತ ಪರಾಕೂ |ಶ್ರೀಶನ ಗುಣಗಳ ತುತಿಪ ಪರಾಕೂ |ಆಶೇಶು ಹೇಮಂತ ಮೆರೆವ ಪರಾಕೂ |ದೇಶಿಕ ಶ್ರೇಷ್ಠ ನಿರ್ದುಷ್ಟ ಪರಾಕೆಂದು |ಸಾಸಿರ ಆರುತಿಯ ಬೆಳಗಿರೆ3
--------------
ಶ್ರೀಶಪ್ರಾಣೇಶವಿಠಲರು
ಗುರುವೇ ಶ್ರೀ ವಸುಧೇಂದ್ರ ಕರಜಾತ ಸದ್ಗುಣಸಾಂದ್ರ |ವರದೇಂದ್ರರಾಯ ಜಿತೇಂದ್ರ | ಮರುತ ಮತಾಬ್ಧಿ ಚಂದ್ರ ||ಶರಣು ನಿನ್ನಯ ಪದಸರಸಿಜಯುಗಗಳಿಗೆ |ಎರವುಮಾಡದೆ ಕಾಯೊಪರಮದಯಾಳು ಪದಾತಾಧರಿತ್ರೀ ಸುತೀನಾಥ ಶ್ರೀರಘುಪತಿ |ದೂತ ಭುವನದೋಳ್ ಖ್ಯಾತಿಯೋ ತವ ಸತ್ಕೀರುತಿ ||ಭೂತ ಭಯ ರೋಗವಾ ತಂದಟ್ಟುವಾ |ನಾಥ ರಕ್ಷಕ ಜಲಜಾತಾಂಬಕನೇ 1ದೋಷರಹಿತ ಯನ್ನಕ್ಲೇಶಹಿಂಗಿಸೊ ಸಂ |ನ್ಯಾಸಶಿರೋಮಣಿಯೆ ಮುನ್ನಾ ಆಶೆ ಬಿಡಿಸಿ ನಿನ್ನ ||ದಾಸನೆನಿಸಿಕೋ ಉದಾಸಿಸದಲೆ ಬಹು |ಘಾಸಿಮಾಡದೆ ರವಿಭಾಸ ಗುಣಾಢ್ಯ 2ಏನಾದರೇನು ಕೀಳು ಮಾನವರಾಶ್ರಯ ಧರೆಯೊಳು |ನಾನಿಚ್ಛಿಸೆನೊ ಕೃಪಾಳುಮಾನನಿನ್ನದು ಕೇಳು ||ನೀನೆವೆ ಗತಿಯೆಂದು ಧ್ಯಾನ ಮಾಡುವರಿಗೆ |ಪ್ರಾಣೇಶ ವಿಠಲನ ಕಾಣಿಸಿಕೊಡುವಿ 3
--------------
ಪ್ರಾಣೇಶದಾಸರು
ತುತಿಸಲಳವೇ ಶ್ರೀ ವರದೇಂದ್ರನಾ ಅಮಿತ ಮಹಿಮ |ಕ್ಷಿತಿಸುರಗುರುಸುಗುಣ ಸಾಂದ್ರನ ಮುನಿಪನ ಪಭಾಗವತರ ಪ್ರಿಯನೆನಿಪನ ಪ್ರಣತ ಜನರ |ರೋಗ ಕಳೆದು ಸುಖ ಕೊಡುವನ ಕುಮತಗಳನು |ಬೇಗ ಗೆಲಿದು ಸುಮತಿ ಕೊಡುವನ ದಯಾ ಸಮುದ್ರ |ಯೋಗಿವರ್ಯರವಿಪ್ರಕಾಶನಾ ಅನಘನ 1ರಾಘವೇಂದ್ರರನುಗ್ರಹ ಪಾತ್ರನ ವೈಷಿಕದ ಕು |ಭೋಗತೊರೆದ ನಿಷ್ಪ್ರಪಂಚನ ದುರ್ಮತಿಗಳ |ಯೋಗಕೊಲಿಯದಿಪ್ಪ ಧೀರನಭವಭಯವನು |ನೀಗಿಹರಿಯ ಸದನವ ತೋರ್ಪನಾ ವರದನ 2ಕಲಿಮಲಾಪಹಾರ ಶಕ್ತನ, ಪ್ರಾಣೇಶ ವಿಠಲ |ನೊಲಿಸಿಕೊಂಡಮಿತ ಸಮರ್ಥನ ಮಾರುತ ಮತ ||ಜಲಧಿಪೆರ್ಚಿಸುತಿಹ ಚಂದ್ರನ ಬೃಹತ್ಸು ತಟ ನೀ |ನಿಲಯಶ್ರೀ ವಸುಧೇಂದ್ರ ಪುತ್ರನ ವಿರಕ್ತನ3
--------------
ಪ್ರಾಣೇಶದಾಸರು
ವಂದನೆ ಮಾಡಿರೈಗುರುವರದೇಂದ್ರರ ಪಾಡಿರೈ ಪಬಂದ ದುರಿತಗಳ ಹಿಂದೆ ಮಾಡಿ ಸುಖ |ತಂದುಕೊಡುವ ದಯಾಸಿಂಧುಯತೀಂದ್ರರ ಅ.ಪ.ಮರುತ ಮತಾಂಬುಧಿ ಸೋಮನೆನಿಪ ವಸುಧೇಂದ್ರ - ಸದ್ಗಣಸಾಂದ್ರ|ಗುರುಗಳಕರಕಮಲದಿ ಜನಿಸಿದ ಸುಕುಮಾರಾ - ಕುಜನ ಕುಠಾರಾ ||ನೆರೆನಂಬಿದ ಭಕುತರನನುದಿನದಲಿ ಪೊರೆವಾ - ದುರಿತವ ತರಿವಾ |ಧರೆಯೊಳು ತ್ಯಾಗದಿ ಕರ್ಣನ ಮರೆಸಿದ ನೋಡಿ - ವರಗಳ ಬೇಡಿ1ಕರಿಹಿಂಡೊಳುಹರಿಹೊಕ್ಕ ತೆರದಿ ವಾದಿಗಳ - ಕೀಳು ಮತಗಳ |ವರಶಾಸ್ತ್ರಗಳಲಿ ಗೆಲಿದು ಸುಬುದ್ಧಿಯ ವರದ - ಜಗದೊಳು ಮೆರೆದ ||ಶರಭಂಗವರದಚರಣಸರಸೀರುಹಭೃಂಗ- ವಿಷಯ ಅಸಂಗ |ಸ್ಮರಣೆಯ ಮಾಡೆ ಪಿಶಾಚ ರೋಗಗಳ ಭಯವೂ - ಮುಟ್ಟದಲಿಹವೂ 2ಸಾನುರಾಗದಲಿ ಶ್ರೀ ರಾಘವೇಂದ್ರರ ಸ್ತೋತ್ರ - ಮಾಳ್ಪ ಸುಪಾತ್ರ |ಜಾನಕಿಪತಿ ಆನಂದದೊಳಿವರಿಗೆ ಒಲಿವ - ಹೃದಯದಿ ಸುಳಿವ ||ದೀನ ದಯಾಳು ಅಪರಿಮಿತ ಮಹಿಮ ಗುಣಾಢ್ಯ - ವಾದದಿ ದಾಢ್ರ್ಯಾ |ಧ್ಯಾನಿಸೆ ಮನದೊಳು ಜ್ಞಾನ ಕೀರ್ತಿ ಸುಖ ಕೊಡುವ - ಅಘಗಳ ಕಡಿವ 3ವಿಷ್ಣುನ ಲೋಕ ಪ್ರವೇಶ ಮಾಡಿದ ಚರಿಯಾ - ಕೇಳಿರಿ ಪರಿಯಾ |ಶಿಷ್ಟ ಜನರು ವಿಶ್ವಾವಸು ನಾಮಕ ಅಬ್ದ - ಆಷಾಢ ಶುದ್ಧ ||ಷಷ್ಠಿಯು ಕುಜವಾಸರ ಉತ್ತರಾ ನಕ್ಷತ್ರಾ -ವರಪುಣ್ಯಕ್ಷೇತ್ರ |ನಟ್ಟ ನಡುವೆ ವೃಂದಾವನ ಮಧ್ಯದೊಳಿರುವಾ - ಸೌಖ್ಯವ ಸುರಿವಾ 4ಆನೆ ಹಂಡೆ ವಸನಗಳು ದ್ರವ್ಯವು ನಾನಾ - ಮಾಡಿದ ದಾನಾ |ಆ ನಗರದಿ ಬಹು ಮಂದಿಯು ಭಕುತಿಯಲಿಂದಾ - ಪೂಜಿಪ ಚಂದ ||ಸೂನುಪಡೆದು ಸುಖ ಪಡುವರು ಸರ್ವರುನಿತ್ಯ- ಈತನು ಸತ್ಯ |ನಾನೆಂತುಸಿರಲಿ ಪ್ರಾಣೇಶ ವಿಠಲನ ದಾಸಾ, ಮುನಿ ಉತ್ತಂಸಾ 5
--------------
ಪ್ರಾಣೇಶದಾಸರು