ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವ ನೆನೆದರೆ ಸಾಲದೆ ಚಿದಾನಂದಗುರುವ ನೆನೆದರೆ ಸಾಲದೆಹಿರಿದು ಸಂಸಾರಗಳು ಮಾಡುತ್ತೊಂದುದಿನಕ್ಕೊಮ್ಮೆ ಗುರುವ ನೆನೆದರೆ ಸಾಲದೆ ಪ ಜುಟ್ಟು ಜನಿವಾರ ಬಿಸುಟು ತಾವೀಗಉಟ್ಟೊಂದು ಕೌಪೀನವಕಟ್ಟಿ ಕಾಷಾಯ ಕಮಂಡಲು ದಂಡ ಹಿಡಿದುದಿಟ್ಟ ಸಂನ್ಯಾಸ ಪಡೆಯುವುದೇಕೆ1 ಅಡವಿ ಅರಣ್ಯವ ಸೇರಿ ಅಲ್ಲಿದ್ದಅಡವಿ ತೊಪ್ಪಲನೆ ತಿಂದುಗಿಡ ಮರಗಳಲಿ ಮಲಗಿ ಮಳೆ ಛಳಿಗೆ ಕಂಗೆಡೆದೆ ಕಡು ತಪವ ಮಾಡುವುದೇಕೆ2 ಚರಿಯ ಬೇಡುವುದೇಕೆ 3 ಕಾವಿ ವಸ್ತ್ರಗಳನುಟ್ಟು ಮೈಗೆಲ್ಲತಾ ವಿಭೂತಿಯ ಧರಿಸಿ ಕಂಠದಲಿತೀವಿ ರುದ್ರಾಕ್ಷಿ ತಾಳಿ ಶಿವಶಿವಾಯೆಂದುತಾವು ಗೊಣಗುವುದೇಕೆ 4 ಜ್ಞಾನಿಗೀಯವಸ್ಥೆಯಾ ವೇಷಗಳು ತಾವು ಇವಗೇನು ಇಲ್ಲಿಲ್ಲ ತಾನೆ ಚಿದಾನಂದ ಗುರು ತಾನೆ ತಾನೇ ಎಂದು ಭಾವಿಸುತಲಿತೀವಿ ತನ್ನನೇ ಮರೆತಿರಲದೇಕೆ5
--------------
ಚಿದಾನಂದ ಅವಧೂತರು
ದರುಶನವನು ಕೊಡೆಲೊ ದೇವ ಪ ಸರಸಿಜ ಮಿತ್ರನು ಮೂಡೆ ಪ್ರಾರ್ಥಿಸುವೆನು ಅ.ಪ ತುಂಗಾ ಕೃಷ್ಣ ಕಾವೇರಿ ಗಂಗೆ ಯಮುನೆ ಗೋದಾವರಿ ನರ್ಮದಾ ಮಂಗಳ ನದಿಗಳು ಕಾದುಕೊಂಡಿರುವುವು ರಂಗ ನಿನ್ನ ಚರಣಂಗಳ ಸೇವೆಗೆ 1 ಜಗವನುದ್ಧರಿಸಿದ ಸುಂದರ ನಿನ್ನಯ ಮೊಗವನು ನೋಡುತ ಸಂಭ್ರಮದಿ ಬಗೆ ಬಗೆ ಹೈಮವಸ್ತ್ರಗಳನು ಧರಿಸುತ ನಗವೃಂದವು ಕಾದಿರುವುದು ದೇವ 2 ತರುಲತೆಗಳು ಕಾದಿರುವುದು ಪೂಮಳೆ ಗರೆಯಲು ನಿನ್ನಯ ಶಿರದಲ್ಲಿ ಪರಮಹಂಸರುಗಳು ಕರದಲಿ ಜಪಮಣಿ ಧರಿಸಿ ಜಪಿಸುವರೊ ಕರುಣಾ ಪ್ರಸನ್ನನೆ 3
--------------
ವಿದ್ಯಾಪ್ರಸನ್ನತೀರ್ಥರು
ಯೋಗಿಯಾಗ ಬೇಕು ಅಲ್ಲವೆ ಭೋಗಿಯಾಗ ಬÉೀಕು ನೀ ಪೋಗಬೇಕು ಪ ತನ್ನ ತಾನು ತಿಳಿದು ಆತ್ಮಜ್ಞಾನಿಯಾಗಬೇಕು ಅನ್ನ ವಸ್ತ್ರಗಳನು ಚಾತುರ್ವರ್ಣಕೀಯಬೇಕು ತನ್ನದೆಂಬ ಮಮತೆಯನ್ನು ಬಿಟ್ಟು ಚರಿಸಬೇಕು ಭಿನ್ನ ಭಾವವಳಿದು ಏಕೋ ದೇವನಾಗಬೇಕು 1 ಸತ್ಪಾತ್ರ ಗೀಯಬೇಕು ನಾನಾ ಜೀವ ಜಂತುಗಳಲಿ ಪ್ರೇಮವಿರಲು ಬೇಕು ತಾನು ತಾನೆಯಾಗಿ ಹರಿಯ ಧ್ಯಾನಿಸುತಿರಲು ಬೇಕು ಭಾನು ಸುತನ ಕೈಗೆ ಸಿಕ್ಕಿದಂತೆ ಇರಲು ಬೇಕು 2 ನಿತ್ಯ ಕರ್ಮವ ಮಾಡಬೇಕು ಕರುಣದಿಂದ ದೀನ ಜನರ ನಿರುತ ಪೊರೆಯ ಬೇಕು ಗುರುಗಳಲ್ಲಿ ಹಿರಿದು ವಿಶ್ವಾಸವಿರಲು ಬೇಕು ಮರುತ ಸುತನ ಕೋಣೆ ಲಕ್ಷ್ಮೀರಮಣನ ಕೂಡಬೇಕು 3
--------------
ಕವಿ ಪರಮದೇವದಾಸರು
ಲಾಲಿ ಗೋವಿಂದ ಲಾಲಿ ಕೌಸಲ್ಯಬಾಲ ಶ್ರೀರಾಮ ಲಾಲಿ ಪ ಲಾಲಿ ಮುನಿವಂದ್ಯ ಲಾಲಿ ಜಾನಕಿ-ರಮಣ ಶ್ರೀರಾಮ ಲಾಲಿ ಅ.ಪ. ಕನಕರತ್ನಗÀಳಲ್ಲಿ ಕಾಲ್ಗಳನೆ ಹೂಡಿನಾಲ್ಕು ವೇದಗಳನ್ನು ಸರಪಣಿಯ ಮಾಡಿಅನೇಕ ಭೂಮಂಡಲವ ಹಗೆಯನು ಮಾಡಿಶ್ರೀಕಾಂತನುಯ್ಯಾಲೆಯನು ವಿರಚಿಸಿದರು1 ಆಶ್ಚರ್ಯಜನಕವಾಗಿ ನಿರ್ಮಿಸಿದಪಚ್ಚೆಯ ತೊಟ್ಟಿಲಲ್ಲಿಅಚ್ಚುತಾನಂತನಿರಲು ತೂಗಿದರುಮತ್ಸ್ಯಾವತಾರ ಹರಿಯ 2 ಧರ್ಮಸ್ಥಾಪಕನು ಎಂದು ನಿರವಧಿಕನಿರ್ಮಲ ಚರಿತ್ರನೆಂದುಮರ್ಮ ಕರ್ಮಗಳ ಪಾಡಿ ತೂಗಿದರುಕೂರ್ಮಾವತಾರ ಹರಿಯ 3 ಸರಸಿಜಾಕ್ಷಿಯರೆಲ್ಲರು ಜನವಶೀಕರ ದಿವ್ಯರೂಪನೆಂದುಪರಮ ಹರುಷದಲಿ ಪಾಡಿ ತೂಗಿದರುವರಹಾವತಾರ ಹರಿಯ4 ಕರಿಕುಂಭಗಳ ಪೋಲುವ ಕುಚದಲ್ಲಿಹಾರ ಪದಕವು ಹೊಳೆಯಲುವರ ವರ್ಣಿನಿಯರು ಪಾಡಿ ತೂಗಿದರುನರಸಿಂಹಾವತಾರ ಹರಿಯ 5 ಭಾನುಮಣಿಯರೆಲ್ಲರು ಯದುವಂಶಸೋಮನಿವನೆಂದು ಪೊಗಳಿನೇಮದಿಂದಲಿ ಪಾಡಿ ತೂಗಿದರುವಾಮನಾವತಾರ ಹರಿಯ6 ಸಾಮಜವರದನೆಂದು ಅತುಳ ಭೃಗು ರಾಮಾವತಾರವೆಂದುಶ್ರೀಮದಾನಂದ ಹರಿಯ ತೂಗಿದರುಪ್ರೇಮಾತಿರೇಕದಿಂದ7 ಕಾಮನಿಗೆ ಕಾಮನೆಂದು ಸುರಸಾರ್ವಭೌಮ ಗುಣಧಾಮನೆಂದುವಾಮನೇತ್ರೆಯರು ಪಾಡಿ ತೂಗಿದರುರಾಮಾವತಾರ ಹರಿಯ8 ಸೃಷ್ಟಿಯ ಕರ್ತ ನೆಂದು ಜಗದೊಳಗೆಶಿಷ್ಟ ಸಂತುಷ್ಟನೆಂದುದೃಷ್ಟಾಂತರಹಿತನೆಂದು ತೂಗಿದರುಕೃಷ್ಣಾವತಾರ ಹರಿಯ 9 ವೃದ್ಧನಾರಿಯರೆಲ್ಲರು ಜಗದೊಳಗೆ ಪ್ರಸಿದ್ಧನಿವನೆಂದು ಪೊಗಳಿಬದ್ಧಾನುರಾಗದಿಂದ ತೂಗಿದರು ಬೌದ್ಧಾವತಾರ ಹರಿಯ 10 ಥಳಥಳಾತ್ಕಾರದಿಂದ ರಂಜಿಸುವಮಲಯಜಲೇಪದಿಂದಜಲಗಂಧಿಯರು ಪಾಡಿ ತೂಗಿದರುಕಲ್ಕ್ಯಾವತಾರ ಹರಿಯ 11 ಕನಕಮಯ ಖಚಿತವಾದ ತಲ್ಪದಲಿವನಜಭವ ಜನಕನಿರಲುವನಜನಾಭನ್ನ ಪಾಡಿ ತೂಗಿದರುವನಿತಾಮಣಿಯರೆಲ್ಲರು 12 ಪದ್ಮರಾಗವ ಪೋಲುವ ಹರಿಪಾದಪದ್ಮವನು ತಮ್ಮ ಹೃದಯಪದ್ಮದಲಿ ನಿಲಿಸಿ ಪಾಡಿ ತೂಗಿದರುಪದ್ಮಿನೀ ಭಾಮಿನಿಯರು 13 ಹಸ್ತಭೂಷಣ ಮೆರೆಯಲು ದಿವ್ಯತರಹಸ್ತಲಾಘವಗಳಿಂದಹಸ್ತಗಳ ಪಿಡಿದುಕೊಂಡು ತೂಗಿದರುಹಸ್ತಿನೀ ಭಾಮಿನಿಯರು14 ಮತ್ತಗಜಗಾಮಿನಿಯರು ದಿವ್ಯತರಚಿತ್ರವಸ್ತ್ರಗಳನುಟ್ಟುಚಿತ್ತಸಂತೋಷದಿಂದ ತೂಗಿದರುಚಿತ್ತಿನೀ ಭಾಮಿನಿಯರು 15 ಕಂಕಣಧ್ವನಿಗಳಿಂದ ರಂಜಿಸುವಕಿಂಕಿಣೀಸ್ವರಗಳಿಂದಪಂಕಜಾಕ್ಷಿಯರು ಪಾಡಿ ತೂಗಿದರುಶಂಕಿನೀ ಭಾಮಿನಿಯರು 16 ಚೊಕ್ಕ ಕಸ್ತೂರಿ ಪಂಕದಿಂ ರಂಜಿಸುವಮಕರಿಕಾಪತ್ರ ಬರೆದುಲಿಕುಚಸ್ತನಿಯರು ಪಾಡಿ ತೂಗಿದರುಅಕಳಂಕಚರಿತ ಹರಿಯ17 ಆನಂದಸÀದನದೊಳಗೆ ಗೋಪಿಯರುಆ ನಂದಸುತನ ಕಂಡುಆನಂದ ಭರಿತರಾಗಿ ತೂಗಿದರುಆನಂದ ಭೈರವಿಯಿಂದ 19 ದೇವಾಧಿದೇವನೆಂದು ಈ ಶಿಶುವುಭಾವನಾತೀತನೆಂದುದೇವಗಂಧರ್ವರ್ಪಾಡಿ ತೂಗಿದರುದೇವ ಗಾಂಧಾರದಿಂದ 20 ನೀಲ ಕರುಣಾಲವಾಲ ಶ್ರೀಕೃಷ್ಣ ಜೋ ಜೋಲೀಲಾವತಾರ ಜೋ ಜೋ ಪರಮಾತ್ಮಬಾಲಗೋಪಾಲ ಜೋ ಜೋ 21 ಇಂದುಧರಮಿತ್ರ ಜೋ ಜೋ ಶ್ರೀಕೃಷ್ಣಇಂದು ರವಿ ನೇತ್ರ ಜೋ ಜೋಇಂದುಕುಲ ಪುತ್ರ ಜೋ ಜೋ ಪರಮಾತ್ಮಇಂದಿರಾರಮಣ ಜೋ ಜೋ 22 ತುಂಗ ಭವಭಂಗ ಜೋ ಜೋ ಪರಮಾತ್ಮರಂಗ ಕೃಪಾಂಗ ಜೋ ಜೋಮಂಗಳಾಪಾಂಗ ಜೋ ಜೋ ಮೋಹನಾಂಗರಂಗವಿಠಲನೆ ಜೋ ಜೋ 23
--------------
ಶ್ರೀಪಾದರಾಜರು
ಕೇಳೆಗೋಪಿಗೋಪಾಲ ಮಾಡಿದ ಬಲು |ದಾಳಿಯ ಗೋಕುಲದಿ ಪತಾಳೆಲಾರೆವೆ ತವಕದಲಿ ಕಂದಗೆ ಬುದ್ಧಿ |ಹೇಳೆ ಕೃಷ್ಣವ ಕರೆದು ಅ.ಪಸರಿರಾತ್ರಿಯೊಳು ಸರಸರನೆ ಮನೆಗೆ ಬಂದು |ಸುರಿದು ಪಾಲ್ಪೆಣ್ಣೆಗಳ ||ಉರೋಜಗಳಿಗೆಕರಸರಿಸಿ ಕಣ್ಗಳನು |ತೆರೆದು ನೋಡುವನೆ ನಮ್ಮ 1ಗಂಡನು ಮನೆಯೊಳಗಿರಲು ಬಂದು ಕೃಷ್ಣ |ಭಂಡ ಮಾತುಗಳ ಬಹು ||ತುಂಟತನದಲಾಡಿಉದ್ದಂಡಕಠಿಣಕಾಯ |ದುಂಡುಕುಚವ ಪಿಡಿದ 2_______ವದ ಮೇಲಿರಲು ತಾ |ಸೀರೆಯ ಸೆಳೆವ ನೋಡೆ ||ಆರಿವರೆಂದು ವಿಚಾರಿಸಿ ನೋಡಲು |ಮೋರೆಯ ಬಾಗಿದನೆ 3ಕೇರಿಯೊಳಗೆದಧಿಮಾರುತಿರಲು ಕೃಷ್ಣ |ಸಾರಿ ಬಂದು ಮೊಸರ ||ಸೂರೆಗೊಂಡು ಪರನಾರಿಯರ ನೆರೆದು ತಾ |ಘೋರರೂಪದಿ ಮೆರೆದ 4ಆಡಲೇತಕೆ ನಮ್ಮ ಬಾಗಿಲಂಗಳದೊಳು |ಬೇಡುವ ಜಲ ದೈನ್ಯದಿ ||ನೀಡುವೆ ಜಲ ಜಲಜಾಕ್ಷ ಬಾಬಾ ಎನೆ |ಮಾಡುವರತಿಎಂಬನೆ5ಹುಡುಗನೆಂದು ಕೈಯ ಪಿಡಿಯ ಪೋಗಲು ನಮ್ಮ |ಉಡೆಮುಡಿ ಪಿಡಿದ ನೋಡೆ ||ಪಡೆದವಳಿಗೆ ಪೇಳುವೆ ನಡೆ ಎನೆ ಮಚ್ಚ |ಕೊಡಲಿ ತೋರುವನೆಗೋಪಿ6ಮಡದಿಯರೆಲ್ಲರು ಮಿಯುತಲಿರೆ ಮೈ |ಉಡುಗೆಯ ತೆಗೆದುಕೊಂಡು ||ಸಡಗರದಲಿ ಬೇಡಿಕೊಳ್ಳೆ ವಸ್ತ್ರಗಳನು |ಕೊಡದೆ ಅಡವಿಗೆ ನಡೆದ 7ಬೆಣ್ಣೆಯ ತಿಂದು ತಮ್ಮಣ್ಣಗೆ ತಾ ಕೊಟ್ಟು |ಚಿಣ್ಣರ ಬಡಿವ ನೋಡೆ ||ಬಣ್ಣಿಸಿ ನಮ್ಮ ಬಾಯಿಗೆ ಬೆಣ್ಣೆ ತೊಡೆಯುತ |ಬೆಣ್ಣೆಯ ತಿಂದಿರೆಂಬ 8ಏಣಲೋಚನೆ ಸರ್ಪವೇಣಿ ನಮ್ಮ ಮನೆ |ಓಣಿಯೊಳಗೆ ಪೋಗುತ ||ಕಾಣದಂತೆ ಚಕ್ರಪಾಣಿ ನಮ್ಮೊಳು ತನ್ನ |ತ್ರಾಣವ ತೋರಿದನೆ 9ಪದುಮನಾಭನು ಪುರದ ಚದುರಿಯರಿಗೆ ತಾನು |ಮದನಶಾಸ್ತ್ರವ ಪೇಳುತ ||ಮುದದೊಳಗಿರಲವರೊಡೆಯ ಬರಲು ಕೃಷ್ಣ |ಕುದುರೆಯ ನೇರಿದನೆ 10ಎಷ್ಟುಪದ್ರವ ಕೊಟ್ಟರು ಗೋಕುಲದೊಳು |ಬಿಟ್ಟವನಿರಲಾರೆವೆ ||ಸೃಷ್ಠಿಯೊಳಗೆ ಸರ್ವಾಭಿಷ್ಟದ ಪುರಂದರ-|ವಿಠಲ ಸಲಹುವನೆ 11
--------------
ಪುರಂದರದಾಸರು