ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಶ್ವೇಶ ವೆಂಕಟೇಶ_ ವಿಶ್ವಾದಿ ಪರರೂಪಿ ಶ್ರೀ ವಿಷ್ಣು ಪರಬ್ರಹ್ಮ_ನಮೋ ನಮೋ ಪ ವಿಶ್ವಾತ್ಮ ಶ್ರೀಗುರು _ ವಿಶ್ವಾನ್ನ ಅನ್ನದ ವಿಶ್ವಸ್ಥ ಶ್ರೀ ಕೃಷ್ಣ _ ನಮೋ ನಮೋ ಅ.ಪ ಕೇಶವಾ ಮಾಧವಾ _ ಗೋವಿಂದ ಅಚ್ಯುತ ವಾಸುದೇವಾನಂತ _ ನಾರಾಯಣಾ1 ಗೋಧರಾ ಶ್ರೀಕರಾ _ ಶ್ರೀಮತ್ಸ್ಯ ಕಚ್ಛಪ ಶುದ್ಧಾನಂದಾತ್ಮಕ _ ನಾರಸಿಂಹ 2 ಶ್ರೀಧರಾ ವಾಮನಾ _ ಪ್ರದುಮ್ನ ಹೃಷಿಕೇಶ ಆದ್ಯಂತ ವರ್ಜಿತ _ ತ್ರಿವಿಕ್ರಮಾ 3 ಭಾರ್ಗವಾ ರಾಘವಾ _ ಶ್ರೀ ಕೃಷ್ಣ ಉಪೇಂದ್ರ ಯೋಗೇಶ ಬುದ್ಧಕಲ್ಕಿ ಜನಾರ್ದನ 4 ಪದ್ಮನಾಭ ಪದ್ಮೇಶ ಅನಿರುಧ್ಧ _ ಸಂಕರ್ಷಣ 5 ದಾಮೋದರಾ ದತ್ತ _ ಕಪಿಲ ಶಿಂಶುಮಾರ ಅಧೋಕ್ಷಜ _ ಸೀಮಾಶೂನ್ಯ 6 ಶ್ರೀ ವಿಷ್ಣುಹರಿಯಜ್ಞ _ ಧನ್ವಂತ್ರಿ ಮಹಿದಾಸ ಶ್ರೀ ವಂದ್ಯ “ಕೃಷ್ಣವಿಠಲ” ಪಾರಾಶರ7
--------------
ಕೃಷ್ಣವಿಠಲದಾಸರು
ಶ್ರೀರಂಗನಾಥ ಕಾಯೋ ಕಾವೇರಿರಂಗ | ಕಾರುಣ್ಯಪಾಂಗಾ ಪ ಕಾಯೊ ಕಾಯೊ ಕಾವೇರಿ ನಿಲಯನೆ ಕಾಯೊ ವಾಙ್ಮನ ಪೂರ್ವಕದಿ ತವ ತೋಯಜಾಂಘ್ರಿಯ ನಂಬಿದೆನುಭವ ಮಾಯಗೆಲುವ ಉಪಾಯ ತೋರಿ ಅ.ಪ ದೇವಾಧಿದೇವ ನೀನು | ಪ್ರಣತ ಜನರಿಗೆ ದೇವತರು ಮಣಿಧೇನು | ಎಂದರಿತು ನಿಷ್ಟಿಲಿ ಧಾವಿಸಿ ಬಂದೆ ನಾನು | ರಘುವಂಶ ಭಾನು ಕಾವನಯ್ಯ ನೀನೊಲಿದು ಕರುಣದಿ ಪಾವಮಾನಿಯ ಶಾಸ್ತ್ರವರಿತು ಭಾವ ಭಕ್ತಿಲಿ ನಿನ್ನ ಪಾಡುವ ಕೋವಿದರ ಸೇವಕನ ಮಾಡಿ 1 ಪನ್ನಂಗಪತಿಶಯನ | ಶಿರಬಾಗಿ ಪ್ರಾರ್ಥಿಪೆ ಪನ್ನಂಗರಿಪುವಾಹನ | ಎನ್ನಪರಾಧವ ಮನ್ನಿಸೊ ಹಯವದನ | ವೈಕುಂಠ ಸದನ ನಿನ್ನನುಗ್ರಹ ಪೂರ್ಣಪಡೆದು ಜಗನ್ನಾಥದಾಸರ ಸನ್ನಿಧಾನದಿಂ ಬಂದೆ ತಂದೆ 2 ನೇಸರ ಕುಲಜಾತ | ವೇದೋಕ್ತಕ್ರಮದಿಂ ಭೂಸುರ ಕರಪೂಜಿತ | ಕೌಶಿಕನ ಯಜ್ಷವ ಪೋಷಕ ಪವನಪಿತ | ಪಾವನ್ನ ಚರಿತ ವಾಸುದೇವಾನಂತ ಮಹಿಮೆ | ವಿಭೀಷಣಪ್ರಿಯ ದೋಷಕಳೆಯುವ | ಭೇಷಪುಷ್ಕರಣೀಶ ಕೇಶವ ದಾಶರಧಿ ಶ್ರೀ ಶಾಮಸುಂದರ 3
--------------
ಶಾಮಸುಂದರ ವಿಠಲ