ಒಟ್ಟು 10 ಕಡೆಗಳಲ್ಲಿ , 6 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದÉೀ ಸೌಖ್ಯ ತಾಣ ತಿಳೀ ನೀನೆ ಜಾಣಾ ಪ ಶರೀರಾದಿ ಸಂಘಾತವೆಲ್ಲ ವಿಕಾರಿ ಬರೀ ತೋರಿಕೆ ಸ್ವಪ್ನವೇ ಕೇಳ್ ವಿಚಾರಿ ಅರೀ ನೀ ಸ್ವರೂಪಾ ಶರೀರಾದಿ ಭಿನ್ನ 1 ಸದಾ ನಿರ್ವಿಕಾರ ಪರಾನಂದಸಾರ ಜಾಗರ ಸ್ವಪ್ನ ನಿದ್ರಾದಿ ದೂರ ಅದೇ ನೀ ಇದೇ ಕೇಳ್ ಸ್ವರೂಪಾತ್ಮಜ್ಞಾನ 2 ತಿಳೀ ನಿನ್ನ ನೀ ಈ ವಿಚಾರಾಕ್ಷಿಯಿಂದೆ ಇದೇ ಮೋಕ್ಷವೆಂದ ಸ್ವರೂಪಾನಂದ ಇದೇ ಶಂಕರಾರ್ಯಾ ನಿಜಾನಂದವೆಂದ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಎಂಥಾದರು ಬಂದರು ಚಿಂತೇ ಇಲ್ಲಾ ಪಂಥವು ಸರಿಯಲ್ಲಾ ಪ ಚಿಂತೆ ಎಂದೆಂಬುದೆ ಮನಸಿನ ರೋಗಾ ಸಂತಸ ಸಂತ್ಯಾಗ ಎಂಥೆಂಥ ಮಿಂಚುವ ದೇಹವಿದೀಗ ಕೃಂತನ ವಿಧಿಭಾಗ ಎಂತಲ್ಲಿ ನೆಲೆಸಿ ಹವಣಿತ ರೋಗಾ ಸಂತತ ಜಡ ಬೀಗಾ ನೀ ನೆನ್ನೊ 1 ಹಿತಾಹಿತವೆಂದಿಗೂ ಕೈಶೇರಿಲ್ಲಾ ಕೃತಿಪತಿ ತಾ ಬಲ್ಲಾ ಮತಿಗೆಟ್ಟು ಸತಿಯೇ ಗತಿಯೆಂದೆಲ್ಲಾ ಸುತಮೋಹ ಬಿಡಲಿಲ್ಲಾ ಮಿತಿಮೀರಿ ಪಣ ಭಂಡಾರದೊಳೆಲ್ಲಾ ರತಸುಖರೆ ಡಿಲ್ಲಾ ಕೇಸರಿ ಸುಖಗುರಿ ಮುರಿಯಲು ಧೃತಿಗೆಟ್ಟು ಬಳಲುವ ಸಂಗತಲ್ಯಾರು ತಿಳಿಯೋ 2 ನೀರಿನ ಬುದ್ಬುದ ಪರಿಸಂಸಾರಾ ದುಃಖದ ಆಗಾರಾ ಶ್ರೀರಾಮ ಮಂತ್ರದ ಸಾರಾ ನಿಜ ಸೌಖ್ಯದ ದ್ವಾರಾ ಶೇರಿ ಹಣ ಹೊನ್ನು ಹೆಂಣ ವಿಚಾರಾ ಗಂಜಾಸಮ ತಾರಾ ನಿಜಸುಖವನು ಪಡೆಯೇ 3
--------------
ನರಸಿಂಹವಿಠಲರು
ಕಮಲ | ಭಜಿಸಿ ಬದುಕಿರೋನಿಜ ಸುಜ್ಞಾನ ಹರಿಭಕ್ತಿ | ನಿಜಕೆ ತರುವರೋ ಪ ಸಂತ ಶ್ರೀನಿವಾಸನಹಂ | ಮತಿಯ ವಿಚಾರಾಚಿಂತಿಸದೆ ಒಲಿದಂಥ | ಶಾಂತ ಚಿತ್ತರಾ ||ಕಂತುಹರ ಸುತನಂಶ | ಜಾತರಿಹರಾಅಂತೆ ತೋರಿ ದಾಸ ದೀಕ್ಷೆ | ಪಂಥ ವಿತ್ತರಾ 1 ಮಂಗಳದುತ್ಸವಕಾಗಿ | ಸಂಘ ಬರ್ಲಾಗಿಮಂಗಳ ಭಕ್ಷವು ಮಂಡಿಗಿ | ಮಾಳ್ಪರಿಲ್ಲಾಗಿಭಂಗ ಭೀತಿ ಅಧಿಪಗೊದಗಿ | ಚಿಂತಿಸಲಾಗಿಅಂಗ ವೇಷ ಬದಲಾಗಿ | ಬಂದ ತಾನಾಗಿ2 ಗ್ರಂಥ ಸುಧಾಭಿಧ ಬಲ್ಲ | ಸಂತ ಸುಬ್ಬಣ್ಣಸಂತ ವಿಜಯದಾಸಗಿಂಥ | ಗ್ರಂಥವೆಲ್ಲಣ್ಣಅಂತೆ ದಾಸಗಪರೋಕ್ಷ | ಕಂತೆ ಕಾಣಣ್ಣಚಿಂತಿಸುತ್ತ ಪ್ರವಚನ | ಭ್ರಾಂತ ನಿದ್ದನ 3 ಬಂದು ವಿಜಯದಾಸರಾಗ | ತೊಂದರೆ ಯೋಗ ಛಂದದಿಂದ ನೀಗಿ ಭಕ್ಷ | ಮಾಡಿದ ರಾಗ |ಬಂದು ಸುಧಾ ಕೇಳುತಿರಲು | ಆಚಾರ್ಯರಾಗ ಸಂದೇಹವ ಪಡುತಲಿ | ಮೌನವಿರಲಾಗ 4 ಪಾಚಕನ ತೆರ ಬಂದ | ಭೃಗುವಿನಂಶನುನೀಚ ನೀರಿನವನ ಶಿರದಿ | ಚಾಚಿ ಕೈಯ್ಯನ್ನುಬಾಚಿ ಬಿಡಿಸೆಂದ ಅವರ | ಸಂಶಯವನ್ನುವಾಚೀಸೀದ ಅನುವಾದ | ನೀರಿನವನೂ5 ಪೇಚಿಗೆ ಸುಬ್ಬಣ್ಣ ಸಿಕ್ಕಿ | ಮನದಿ ತಪಿಸೀ |ಯಾಚಿಸೀದ ಕ್ಷಮೆಯನ್ನು | ಬಹಳ ಪ್ರಾರ್ಥಿಸಿ ||ಸೂಚಿಸಲು ಶೈವನಿದ್ದ | ಬೇಲೂರು ವಾಸಿಪ್ರಾಚೀನದ ಸ್ಮøತಿ ಬಂತು | ನಂಜುಂಡ ನೆನಿಸಿ 6 ಪಾಣಿ ಇಟ್ಟು ಶಿರದಲ್ಲಿ | ಆಶೀರ್ವದಿಸಿವೇಣುಗೋಪ ದಾಸರಲ್ಲಿ ಅಂಕಿತ ಕೊಡಿಸಿ ||ಸಾಣೆ ಇಟ್ಟಂತಾಯಿತವನ | ಜ್ಞಾನದ ಅಸಿಮಾಣದಲೆ ವಿಜಯ ಕವಚ | ಮಾಡಿದ ಸೂಸಿ 7 ದಾಸಕೂಟ ಜನರೆಲ್ಲ | ಬಿಡದೆ ಪಾಡುವವ್ಯಾಸವಿಠಲ ರಚಿತೆನ್ನ | ವಿಜಯ ಕವಚವಲೇಸು ನೆರೆ ನಂಬಿದೆನ್ನ | ವಿಠಲ ಸ್ತೋತ್ರವಮೀಸಲಾಗಿ ಪಾಡುವರು | ಸ್ತೋತ್ರವೆಲ್ಲವ 8 ವರ್ಷ ಸೌಮ್ಯ ಕಾರ್ತೀಕದಿ | ಸೇವಿಸುತ್ತಿರೆದರ್ಶನಿತ್ತು ಸ್ವಪ್ನದಲ್ಲಿ | ಧೈರ್ಯಕೊಟ್ಟಾರೆಹರ್ಷವಿತ್ತು ದಾಸಕಾರ್ಯ | ಸಾಗಿಸುತ್ತಾರೆದರ್ಶದಿನ ಪುಷ್ಯ ನೃಹರಿ | ಯಾತ್ರೆಯಿತ್ತಾರೆ 9 ವಿತ್ತ ನಿತ್ಯ | ಇಲ್ಲದಿನ ವೊಲ್ಲೆ ||ಮೂರ್ತಿ ಬಿಂಬ ತೋರಿ ಎಂದು | ಕೇಳುವ ಸೊಲ್ಲೆಸಾರ್ಥಕವ ಮಾಡಿರೆಂದು | ಪ್ರಾರ್ಥಿಸೆ ಬಲ್ಲೆ 10 ಸುಜನ ಸಂಗ | ವಿತ್ತು ಸುಶೀಲಕಾವ ದಾಸ ಜನರನ್ನು | ಹೃದಯ ವಿಶಾಲಗೋವ ಪರಿಪಾಲ ಗುರು | ಗೋವಿಂದ ವಿಠಲನತೀವರದಿ ಭಜಿಸಿ ಕಳೆದ | ಮಾಯಾಪಟಲ11
--------------
ಗುರುಗೋವಿಂದವಿಠಲರು
ಜಿಜ್ಞಾಸುವಿನ ಲಕ್ಷಣಾ ಕೇಳು ನೀಕ್ಷಣಾ ಪರಮಸುಖಾಕಾಂಕ್ಷಕನಾ ಬಾಳಿನ ವಿಷಯದಿ ಬೇಸರಗೊಳು ತಾ ವಿರತಿಯಿಂದರುವಾ ಬೋಧ ಕೇಳ್ವನಿವಾ ಚಿತ್ತದಿ ಭಕ್ತಿಭಾವನಾ ತಾಳುತ ಸಾಧನಾ ಮಾಡುತಲಿಹನಿವ ಕಾಣಾ ಆತ್ಮಾನಾತ್ಮನಿವೇಕ ವಿಚಾರ ಕೇಳುತ ತನ್ನೊಳಗÉೀ ಮಿಥ್ಯಾರೊಪಿತ ಜೀವಭಾವನನಾ ಜರÉಯುತ ಮನದೊಳಗೇ ಮಾಡುವ ಸುವಿಚಾರಾ ಇವನೆ ಧೀರ ಪರಮಸುಖಕಾಂಕ್ಷಕನಾ ವಿಷಯದಿ ಹರಿಯುವ ಮನವÀನೆಳೆÀದು ಬೋಧದೊಳಗಿರುವಾ ಮೋದ ಹೊಂದುವ ತಾ ಶ್ರೀ ಗುರುಶಂಕರನಾ ಆನಂದರೂಪನಾಬೆರೆತು ನಾ ಸುಖಿಸುವನಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಡಂಭಕ ಹರಿದೂರ ಪ್ರಾಣೀ ಪ ಅಂಬುಜನಾಭನ ಇಂಬನ ಪಡಿಯದೇ| ಡೊಂಬನ ಪರಿಯಾಚಾರ ಪ್ರಾಣೀ ಅ.ಪ ಅಬ್ಧಿಶಯನ ಸಿರಿನಾಥನ ಒಲುಮೆಯ| ಲಬ್ಧ ದೊರೆಯದೆ ವಿಚಾರಾ|| ಲಬ್ಧನಾಗಿ ಧನ ಮಾನಕಬಿಟ್ಟಿನೀ| ಶಬ್ದದಂಗಡಿ ಪ್ರಸರಾ|ಪ್ರಾಣೀ 1 ಪೊಡವಿಯೊಳಗ ಉಗ್ರಸಾಧನದಿಂದಲಿ| ಬಿಡದೆವೆ ತವಶರೀರಾ||ಒಡನೆ ಮರೆದು ರಿಧ್ಧಿಸಿಧ್ಧಿಯ ಬಲದಲಿ| ಹಿಡದಿ ಮನದಿ ಅಹಂಕಾರ|ಪ್ರಾಣೀ 2 ಅದಿತತ್ವದಾಗಲೆ ಸಾಧಿಸೇನೆಂದರೆ| ಸಾಧನ ಕೇಳು ಸುಸಾರಾ|| ಭೇದಿಸು ಮಹಿಪತಿ ನಂದನ ಸಾರಿದ| ಸಾಧು ರಾಶ್ರಯ ಮನೋಹರ|ಪ್ರಾಣೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಾಳಲಾರೆನಮ್ಮಾ ಬಾಲಕನಟ್ಟುಳಿ ಗೋಪೀಘನವಮ್ಮ ಕೇಳಿದುಳವಿಲ್ಲಾ ಕೇಳಿದುಳವಿಲ್ಲಾ ಕಾಲಕಾಲದಲಿಟ್ಟ ಬೆಣ್ಣೆ ಮೂಲವಿರಲಿಕ್ಕಿಲ್ಲಾ ಪ ಅತ್ತನೋಡ ಲಿಹಾ ಇತ್ತ ನೋಡಲಿಹಾ ಸುತ್ತಸೂಸುತ ಬಾಲೆಯರಾ ಚಿತ್ತಮೋಹಿಸುತಿಹಾ1 ಹಿಡಿದೇನೆಂದರೆ ಸಿಕ್ಕಾ ತುಡುಗ ಬಲುದಕ್ಕಾ ಹಿಡಿದು ನಿಲ್ಲಿಸುವರಿಲ್ಲಾ ಪೊಡವಿಲಿವನ ತುಕ್ಕಾ2 ಆರಿಗೇ ವಿಚಾರಾ ಸಾರಬೇಕು ದೂರಾ ಸೂರೆಹೋಗುತಿದೆ ಸಂಸಾರಾ ಸುಖಸಾರ 3 ತಂದೆಮಹಿಪತಿ ನಂದನ ಸಾರಥಿ ಇಂದು ನಮ್ಮ ಕಾಡಿದರ ಮುಂದಾರುಗತಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರಿತು ಅರ್ಚಿಸಲು ಲಿಂಗೈಕ್ಯಕೆ ಯೋಗ್ಯ ಪ ವೈರಿ ಸಂಸಾರ ಮಾಯಾ ವನಿತೆ ಇಕ್ಕಿದ ಮದ್ದು ದುಃಖದಾಕಾರಾ ಮನವೆ ಶುದ್ಧಾತ್ಮವಿಚಾರಾ ನೀನು ನೆನೆದು ಮರೆಯದಿರು ಗುರು ಉಪಕಾರಾ 1 ನಗಿಸಿ ಅಳಿಸುವುದು ಕುಂದು ಭಕ್ತ ರಘವ ನಿವಾರಿಸಿ ಸಲಹಬೇಕೆಂದು ಮೃಗಧರ ರೂಪಿಲಿ ಬಂದು ಸ್ವಾಮಿ ಸೊಗಸಾಗಿ ಶ್ರೀ ಗುರುಚಿತ್ತಕೆ ತಂದು 2 ಜೋಡಿಲ್ಲದೈಶ್ವರ್ಯದಿಂದಾ ಹೋ ಗಾಡಿಸೋ ಘೋರಸಂಸಾರದ ಬಂಧಾ ನೋಡೋ ನಿತ್ಯಾತ್ಮನ ಚಂದಾ ನಲಿ ದಾಡೋ ಎನ್ನನು ಗುರು ವಿಮಲಾನಂದಾ 3
--------------
ಭಟಕಳ ಅಪ್ಪಯ್ಯ
ಬೋಧಾ ಜ್ಞಾನದಾ ಬೋಧ ಮೋದಾ ಶಾಂತಿಯಾ ಸ್ವಾದಾ ಪ ಸ್ವರೂಪದಾ ಸುಖಸ್ಪದಾ ಪ್ರಶಾಂತ ಗುರುಬೋಧಾ ಬೋಧ ಅ.ಪ. ಸುಲಭಸಾಧ್ಯ ಸುವಿಚಾರಾ ವೇದಾಂತಶಾಸ್ತ್ರದ ಸಾರಾ ತಾನೇ ಪರಮಾತ್ಮನು ಎನುವಾ ಸ್ವಾನುಭವಾಮೃತಜಲಧಾರಾ ಘೋರಾ ಸಂಸ್ಕøತಿಯ ಪಾರಾ 1 ಜೀವಭಾವವ ಮರೆಯಿಸುತಿರುವಾ ಸಾವ ನೀಗುವಾ ಮಂತ್ರವಾ ಸಾರಿ ಪೇಳ್ವ ಶಂಕರಾರ್ಯ ಮೋದಾ ಶಾಂತಿಯಾ ಸ್ವಾದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಮಾತಿನ ಸುಖವೇನೋ ಸುಖವೇನೋ | ರೀತಿಯನರಿಯದೆ ತಾನು ಪ ಸಂತರ ವೇಷವ ಹಿಡಿವೀ | ಮನದಲಿ | ಶಾಂತಿಯ ಮನಗುಣ ಬಿಡುವೀ 1 ಪಡಿಯದೆ ಆತ್ಮ ವಿಚಾರಾ | ದೋರುವಿ | ನುಡಿಯಂಗಡಿಯ ಪಸಾರಾ 2 ಇಂದು | ಹೇಳುವಿ | ಸರ್ವಂ ವಾಸುದೇವೆಂದು ಮ 3 ತರಂಗವಿಲ್ಲದ ಶರಧಿಯಂತೆ | ಇರುವುದು ಪರಮ ಸಮಾಧಿ 4 ತಂದೆ ಮಹಿಪತಿ ಬೋಧಾ | ಮನನಕೆ | ತಂದವನೇ ಸುಖಿಯಾದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಂಗಾ ನಿನ್ನ ಕೊಂಡಾಡುವ ಮಂಗಳಾತ್ಮರ ಸಂಗಸುಖವಿತ್ತು ಕಾಯೋ ಕರುಣಾ ಸಾಗರ ಪ ಅರಿಯರೋ ನೀನಲ್ಲದೆ ಮತ್ತನ್ಯದೈವರ ಮರೆಯರೋ ನೀ ಮಾಡಿದ ಅನಿಮಿತ್ತೋಪಕಾರ ತೊರೆಯರೋ ನಿನ್ನಂಘ್ರಿ ಸೇವಾ ಪ್ರತಿವಾಸರಾ ಒರೆಯರೋ ಪರತತ್ವವಲ್ಲದೆ ಇತರ ವಿಚಾರಾ 1 ಮೂಕ ಬಧಿರರಂತಿಪ್ಪರೋ ನೋಳ್ಪಜನಕೆ ಕಾಕುಯುಕುತಿಗಳನ್ನು ತಾರರೋ ಮನಕೆ ಸ್ವೀಕರಿಸರನರ್ಪಿತ ಒಂದು ಕಾಲಕ್ಕೆ ಆ ಕೈವಲ್ಯಭೋಗ ಸುಖ ಅವರಿಗೆ ಬೇಕೆ 2 ಕಂಡಕಂಡಲ್ಲಿ ವಿಶ್ವರೂಪ ಕಾಂಬೋರೋ ಉಂಡು ಉಣಿಸಿದ್ದೆಲ್ಲ ನಿನ್ನ ಯಜ್ಞವೆಂಬರೋ ಬಂಡುಣಿಯಂದದಿ ನಾಮಾಮೃತವ ಸವಿವರೋ ಹೆಂಡಿರು ಮಕ್ಕಳು ನಿನ್ನ ತೊಂಡರೆಂಬೋರೋ 3 ಬಿಡರು ತಮ್ಮ ಸ್ವಧರ್ಮಗಳೇನು ಬಂದರೂ ಬಡರು ದೈನ್ಯ ಒಬ್ಬರಿಗೂ ಲೋಕ ವಂದ್ಯರೊ ಪಿಡಿಯರೋ ನಿನ್ನ ದ್ವೇಷಿಗಳಿಂದೇನು ಬಂದರು ಕೊಡುವರೋ ಬೇಡಿದಿಷ್ಟಾರ್ಥ ನಿತ್ಯಾನಂದರೂ 4 ಜಯಾಜಯ ಲಾಭಾಲಾಭ ಮಾನಾಪಮಾನಾ ಭಯಾಭಯ ಸುಖದುಃಖ ಲೋಷ್ಟ ಕಾಂಚನಾ ಪ್ರಿಯಾಪ್ರಿಯ ನಿಂದಾಸ್ತುತಿಗಳನುದಿನಾ ಶ್ರೀಯರಸ ಚಿಂತಿಸುವರೋ ನಿನ್ನ ಅಧೀನ 5 ಈಶಿತವ್ಯರೆಂಬರೋ ಏಕಾಂತ ಭಕ್ತರೋ ದೇಶಕಾಲೋಚಿತ ಧರ್ಮ ಕರ್ಮಾಸಕ್ತರು ಆಶಾ ಕ್ರೋಧ ಲೋಭ ಮೋಹ ಪಾಶ ಮುಕ್ತರು ಈ ಸುಜನರೇವೆ ಶಾಪಾನುಗ್ರಹ ಶಕ್ತರು 6 ನಗುವರೋ ರೋದಿಸುವರೊ ನಾಟ್ಯವಾಡೋರೊ ಬಗೆಯರೋ ಬಡತನ ಭಾಗ್ಯ ಭಾಗವತರು ತೆಗೆಯರೋ ನಿನ್ನಲ್ಲಿ ಮನ ಒಮ್ಮೆಗಾದರೂ ಜಗನ್ನಾಥವಿಠಲ ನಿನ್ನವರೇನು ಧನ್ಯರೋ 7
--------------
ಜಗನ್ನಾಥದಾಸರು