ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಂದಣದಾರುತಿ ತಂದು ಬೆಳಗಿರೆ ಪ ಮಂದರ ಧರಗೆ ವಂದಿಸುವರ ಭವಬಂಧ ಬಿಡಿಸುವಗೆ 1 ವಿಜಯಸಾರಥಿಗೆ ದ್ವಿಜವರ ಗಮನಗೆ ಪಂಕಜ ಭವಪಿತಗೆ 2 ಸುರಪರಿ ಪಾಲಗೆ ಶರಧಿಜ ಲೋಲಗೆ ಶರಣರ ಪೊರಿವ “ಕಾರ್ಪರ ನರಸಿಂಹಗೆ” 3
--------------
ಕಾರ್ಪರ ನರಹರಿದಾಸರು
ಜಯಮಂಗಳಂ ವೈಕುಂಠನಿಲಯಗೆ ಪ. ಆಮನಸಿಜನಯ್ಯಗೆ ಭುಜಗಭೂಷಣ ಪ್ರಿಯಗೆ ತ್ರಿಜಗತ್ಪತಿ ಪುರುಷೋತ್ತಮಗೆ ಭಜಕರಕ್ಷಕ ಶ್ರೀ ವಿಜಯಸಾರಥಿಗೆ ದ್ವಿಜರಾಜಗಮನ ಅಜಾಮಿಳವರದಗೆ 1 ಆಪನ್ನಿವಾರಣ ಅಪ್ರಮೇಯನಿಗೆ ತಾಪತ್ರಯಹರ ಶ್ರೀಪತಿಗೆ ತಾಪಸವಂದಿತ ಕೋಪವಿರಹಿತ ಗೋಪಾಲಕನಂದನ ಯದುಪತಿಗೇ 2 ಸನಕಾದಿಮುನಿಗಳಿಂದನವರತವು ಪೂಜೆಯನು ಕೈಗೊಂಬ ವನಜಾಕ್ಷಗೆ ಘನಶೇಷಗಿರಿವಾಸ ಚಿನ್ಮಯರೂಪ ಶ್ರೀ ವನಜನಾಭವೇಂಕಟಗೆ ಮಂಗಳಂ ಶ್ರೀ ಲಕ್ಷ್ಮೀಕಾಂತಗೆ3
--------------
ನಂಜನಗೂಡು ತಿರುಮಲಾಂಬಾ