ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘನ ಲಂಪಟಗೆಲ್ಲಿಹುದು ಗುರುಕೃಪೆ ಜ್ಞಾನ ತನು ಲಂಪಟಗೆಲ್ಲಿಹುದು ತನ್ನೊಳು ಖೂನ ಧ್ರುವ ವಿಷಯ ಲಂಪಟಗೆಲ್ಲಿಹುದು ತಾ ವಿರಕ್ತಿಯು ದೆಸೆಗೆಟ್ಟವಗೆಲ್ಲಿಹುದು ಯುಕ್ತಿಯು ಮುಸುಕಿದ ಮಾಯದವಗೆಲ್ಲಿಹುದು ಮುಕ್ತಿಯು ಹುಸಿಯಾಡುವಂಗೆಲ್ಲಿಹುದು ಋಷಿ ಭಕ್ತಿಯು 1 ಮರುಳಗುಂಟೆ ಅರುಹ ರಾಜಸನ್ಮಾನದ ತರಳಗುಂಟೆ ಭಯವು ಘಟಸರ್ಪದ ಮೃಗ ಜಲವೆಂಬುವದ ಸೂರಿಗೆ ಉಂಟೆ ಮಾತು ಚಾತುರ್ಯದ 2 ಕನಸ ಕಾಂಬುವಗೆಲ್ಲಿಹುದು ತಾನಿರುವ ಸ್ಥಾನ ಮನದಿಚ್ಛೆಲಿದ್ದವಗೆಲ್ಲಿಯ ಧ್ಯಾನ ದೀನ ಮಹಿಪತಿ ಸ್ವಾಮಿ ಕಾಣದವಗೆಲ್ಲಿ ಘನ ಅನುಭವಿಸಿಕೊಳ್ಳದೆ ಜನ್ಮಕ ಬಂದದ್ದೇನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾದದಿ ಬೆರೆತಿರು ಮುಕ್ತಾ ನಿತ್ಯವಿರಕ್ತಾವಾದದಿ ಬೆರೆತಿರುಮುಕ್ತಾ ನಾದದಿ ತಾನಾಗಿ ನಿನ್ನ ವಿಚಾರಿಸುನಾದಂ ಧಿಂಧಿಂಧಿಮಿಕೆ ಎಂಬ ಪ ಸರ್ವರೂಪಕವಿದೆ ನಾದ ಸಕಲ ವಿನೋದಪರ್ವಿಕೊಂಡಿರುತಿಹ ನಾದ ಬಹುಲೋಕ ಮೋದದುರ್ವಿಕಾರದ ಮನವ ಎಲ್ಲೆಡೆ ಹರಿಯಿಸುವ ವೀಣಾನಾದ 1 ಆನಂದಕಾಶ್ರಯನಾದ ಆಗಿದೆ ಭೇದಸ್ವಾನಂದ ತಾನೆಯದೆ ನಾದ ಹೇಳಲಿಕೆ ಭೇದಜ್ಞಾನ ಶುದ್ಧನು ಸುಭಕ್ತಿ ವಿರಕ್ತಿಯುತಾನಹುದಹುದೆಂದು ಭೇರಿಯ ನುಡಿಸುವ2 ಹರಣ ಯೋಗಿಗಳ ಭರಣಪಾಪ ಪುರುಷನ ಸಂಹರಣ ತಾನಿಹುದು ಸದ್ಗುಣಭಾಪು ಚಿದಾನಂದ ಗುರುವನು ಕೂಡಲುಈ ಪಥವಲ್ಲದೆ ಇನ್ನೊಂದು ತಾನಿಲ್ಲ3
--------------
ಚಿದಾನಂದ ಅವಧೂತರು