ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸೊ ಮಾನವನೆ ಗುರುಚರಣ ಅಂತ: ಕರಣ ಶುದ್ಧಿಯಲಿ ಮರೆಯದೆ ಪ್ರತಿದಿನ ಪ ದುರಿತ ಘನತತಿ ಮರುತ ಶ್ರೀ ರಘುದಾಂತ ತೀರ್ಥರ ಕರಜ ಶ್ರೀ ರಘುವೀರ ತೀರ್ಥರ ಚರಣಯುಗಲವ ಹರುಷದಿಂದಲಿ ಅ.ಪ ಧರೆಯೋಳ್ ಸುಂದರ ಸುರಪುರದಿ ಜನಿಸಿ ಗುರು ವಿಠ್ಠಲಾರ್ಯರ ಚರಣಾನುಗ್ರಹದಿ ವರ ಶಬ್ದ ಶಾಸ್ತ್ರವ ತ್ವರದಿ ಕಲಿತು ತುರಿಯಾ ಶ್ರಮವನೆ ಸ್ವೀಕರಿಸಿ ಗುರುಮುಖದಿ ಮರುತ ಶಾಸ್ತ್ರವನರಿತು ಧರ್ಮದೊಳಿರುತ ವಿಷಯದಿ ವಿರತಿಯಲಿ ಅನವರತ ಪ್ರವಚನ ನಿರತ ಸದ್ಗುಣ ಭರಿತ ಪಾವನ ಚರಿತರಂಘ್ರಿಯ 1 ಹೇಮಾಲಂಕೃತ ರತ್ನನಿಚಯಯುಕ್ತ ಹೇಮ ಮಂಟಪದಿ ಸುಂದರ ಶುಭಕಾಯಾ ಶ್ರೀ ಮನೋಹರ ಕವಿಗೇಯಾ ಬ್ರಹ್ಮ ವ್ಯೋಮ ಕೇಶಾದಿ ನಿರ್ಜರಗÀಣಶೇವ್ಯಾ ಭೂಮಿ ಸುರಜನ ಸ್ತೋಮಕನುದಿನ ಕಾಮಿತಾರ್ಥವ ಗರಿವ ಸೀತಾರಾಮರಂಘ್ರಿಯ ತಾಮರಸವನು ನೇಮದಿಂದರ್ಚಿಪರ ಶುಭಪದ2 ಪರಿಶೋಭಿಸುವ ಕಾಷಾಯ ವಸ್ತ್ರ ವರನಾಮ ಮುದ್ರಾಲಂಕೃತ ತನುಸಿರಿಯ ಗುರು ಅಕ್ಷೋಭ್ಯರ ಶುಭಚರಿಯ ಗ್ರಂಥ ವಿರಚಿಸಿದರು ನವರತುನ ಮಾಲಿಕೆಯ ಧರಣಿಯೊಳು ಸಂಚರಿಸುತಲಿ ಬಲು ಕರುಣದಿಂದಲಿ ಶರಣು ಜನರಘ ಭವ ಭಯಹರಣ ಗುರುವರ ಚರಣಯುಗಲವ3 ವಿನುತ ಸಮೀರ ಕೃತ ಸಾರಶಾಸ್ತ್ರವನೆ ಬೋಧಿಸುತ ಸಜ್ಜನರ ಘೋರ ಸಂಸೃತಿ ಭಯದೂರ ಮಾಡಿ ತೋರಿ ಸನ್ಮಾರ್ಗ ದೀಪಿಕೆಯ ಸುಸಾರ ಸೇರಿದವರಘ ದೂರ ಪರಮೋದಾರ ಗುಣ ಗಂ- ಸೂರಿಜನ ಪರಿವಾರನುತ ಜಿತ- ಮಾರ ಶ್ರೀ ರಘುವೀರ ತೀರ್ಥರ 4 ಶೇಷಾಚಲದಿ ಶಿಷ್ಯಗಣದಿ ಬಂದ ಶ್ರೀ ಸತ್ಯ ಪ್ರಮೋದ ತೀರ್ಥರ ಸ್ವರ್ಣೋತ್ಸವದಿ ತೋಷಬಡಿಸುತ ನಿರ್ಭಯದಿ ಉಪನ್ಯಾಸ ಮಾಡಿದರು ವೀಶಗಮನ ಸುರೇಶ ಭಕುತರ ಸಿರಿ ನರಕೇಸರಿಗೆ ಪ್ರಿಯದಾಸ ಕೊಡಲಿವಾಸ ಕರ್ಮಂದೀಶರಂಘ್ರಿಯ 5
--------------
ಕಾರ್ಪರ ನರಹರಿದಾಸರು
ಸಂಗವಿಡಿಸು ರಂಗಾ ವಿಬುಧರಹಿಂಗದೆ ನಿನ್ನಯ ನಾಮ ಪಾಡ್ವ ಭಕುತರ ಪ.ಸಂಗವಿಡಿಯೆಭವಹಿಂಗುವ ಲೆಕ್ಕದಅಂಗವಣೆಯನರಿತಂಗವಿವೇಕದಿಲಿಂಗವಪುವಿಭಂಗ ವಿಚಾರಕೆರಂಗಿ ವಿಷಯಭಯ ನುಂಗುವರ 1ಹರಿದಿನ ನಿಶಿಜಾಗರದ್ಯಶನಂಗಳಮರೆದಂಬುಜಾಕ್ಷನ ಬಿರುದೊಕ್ಕಣಿಸುತಮರುದಂಶರ ಮತವರಿದಿತರಾಗಮಜರಿದುವಿರತಿಯಲಿ ಪಿರಿದಪ್ಪರ2ಬೆನ್ನಬಿಡದೆ ಊರು ಬನ್ನವಬಡಿಸಲುತನ್ನ ವಿಮಲಮತಿಯನ್ನು ಬಿಸಾಡದೆಅನ್ಯವಧುವಿಗೆ ಬಿನ್ನವಿಸದೆ ಪಾವನ್ನವ ಮಾಳ್ಪ ಮಾನವರ 3ಸರಿಸ ಸಮನಿಹ ಹರುಷಪಡೆನುತಲಿಸುರಸಂಪದಕೆ ಮನವಿರಿಸಿ ಪರಂಪರಾಅರಸಪದವಿ ಓಕರಿಸಿ ಪರೇಶನಸ್ಮರಿಸಿ ಪದಾಬ್ಜವ ಸ್ಮರಿಸಿಪ್ಪರ 4ಅರಿಸಖರೊಳು ಸಮವೆರಸಿ ನೋಡುತಹರಿಯಿರಿಸಿದೊಲಂಗೀಕರಿಸಿ ನಿರಂತರಪರಸನ್ನ ವೆಂಕಟಗಿರೀಶ ನಾಮಾಸ್ತ್ರವಧರಿಸಿ ಸಂಸಾರವ ಉತ್ತರಿಸುವರ 5
--------------
ಪ್ರಸನ್ನವೆಂಕಟದಾಸರು