ಒಟ್ಟು 6 ಕಡೆಗಳಲ್ಲಿ , 3 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೂಗಿರೆ ವೇಣು ಗೋಪಾಲನ್ನ ತೂಗಿರೆ ಕನಕಾದ್ರಿ ವೆಂಕಟನಾ ಪ ಬಾಲಾನುಮಲಗ್ಯಾನೆ ತೂಗಿರೇ 1 ಕಮಲಾಕ್ಷಿಯರೆಲ್ಲಾ ತೂಗೀರೇ ಕಟಹಾಲ್ದಮರನೇರಿದವನ್ನಾ 2 ವನಜಾಕ್ಷಿಯಾರೆಲ್ಲಾ ತೂಗೀರಮ್ಮಾ ಪವಮಾನನುತರಾಮಚಂದ್ರನ್ನಾ 3 ವೆಂಕಟವಿಠಲನ್ನ ತೂಗೀರೇ4
--------------
ರಾಧಾಬಾಯಿ
ಪರಮಪುರುಷಪರೇಶಪಾವನಪರಮಮುನಿಜನಪಾಲನ ಶರಧಿಶಯನ ವಿಹಂಗವಾಹನ ಶಾರದಾಂಬುಜಲೋಚನ 1 ವಾಸುದೇವ ವಿರಂಚಿವಂದಿತ ವಾಸವಾದಿ ಸುರಾರ್ಚಿತ ವಾಸುಕಿಪ್ರಿಯ ಭೂಷಭಾವಿತ ವಾಸರೇಶಕುಲೋದಿತ 2 ಶರಣಜನರಘಹರಣ ಸೌಖ್ಯವಿತರಣ ಶುಭಸಾಗರ ವರದ ಪುಲಿಗಿರಿವಾಸ ವೆಂಕಟವಿಠಲ ದಯಾಕರ 3
--------------
ವೆಂಕಟವರದಾರ್ಯರು
ಪಾಲಿಸೆಮ್ಮನು ವೆಂಕಟೇಶಾ ನಂಬಿದೆ ನಿನ್ನ ಪಾದಾ ಸಲಹೋ ಗಿರೀಶಾ ಪಾಲಿಸು ಪನ್ನಗಾ ಚಲವಾಸಾ ಪಾಲಿಸುವ ನ್ನ ಸರ್ವೇಶಾ ಪ ಅನುದಿನ ಕೊಂಡಾಡುವೆನಾ ಪತಿತ ಪಾವನ ನೀನೇಗತಿಯೆಂದು ನಂಬಿದೆ ಸನ್ಮತಿಯ ಪಾಲಿಸು ದೇವಾ ಅಹಿಗಿರಿ ನಿಲಯಾ 1 ಕರಣಶುದ್ಧನ ಮಾಡಿ ಕರೆದುಕೋ ಯನ್ನನು ಕರುಣಾಕರ ವೆಂಕರಾಯಾ ಜೀಯಾ2 ಅಗಣಿತ ಸರಿಯಾರು ನಿನಗೇ ಮೂಲೋಕದ ದೊರೆಯೇ 3 ಕರೆಕರೆ ಸಂಸಾರದೀ ಕೊರಗುತ್ತ ಮರುಗುತ್ತಲಿಹೆ ಭರದೀ ಕಣ್ದೆರೆದು ನೋಡೆಮ್ಮನು ಕನಕಾದ್ರಿಗೊಡೆಯಾ4 ಅರ್ಥಿಯಿಂದಲಿ ನಿನ್ನ ಬಲು ಪರಿಯಿಂದಲಿ ನುತಿಪೆನಾ ಸತ್ಯ ಮೂರುತಿ ನೀನೆ ಹತ್ತಿರ ಕರೆದು ಸಲಹೋ 5 ಹಿಂದೆ ಪ್ರಹ್ಲಾದನ ನುಡಿಯಾ ಕೇಳಿ ನೀ ಕಂಬದಿಂದೊಡೆದು ಬಂದೆ ಅಂಧಕಾರದಿ ಮುಳುಗಿ ಮುಂದೆ ಕಾಣದಲಿರುವೆ ಒಡೆಯ ಇಂದಿರೆ ರೆಮಣಾ 6 ವರವ ಕೊಡುವೇ ಇಷ್ಟಾರ್ಥಗಳ ಕೊಡುವೆ ವೆಂಕಟವಿಠಲಾ 7
--------------
ರಾಧಾಬಾಯಿ
ರಕ್ಷಿಸು ಶ್ರೀ ವೆಂಕಟೇಶಾ ನಿನ್ನ ನಂಬಿದೆನೈ ಶ್ರೇಷಗಿರಿವಾಸಾ ಪ ಶ್ರೀ ಹರಿ ಮಲಗಿರಲಂದೂ ತಾಡನೆ ಮಾಡಿದನೆಂದೂ 1 ಅದು ಕೇಳಿ ಸಿರಿದೇವಿ ಸೈರಿಸಲಾರದೆ ತಿಳಿದು ಹರಿಬೇಗಾ ಧರೆಗಿಳಿದನು ಆಗಾ 2 ಸುರಮುನಿವಂದ್ಯ ಶರಣು ಗೋವಿಂದಾ 3 ದೇಶದೇಶಗಳಿಂದಾ ಭಕ್ತಜನರು ಬಂದೂ ಮಹಾನುಭಾವಾ ಪಾಲಿಸುದೇವಾ 4 ಅಪ್ಪಲು ಅಕಿರಸಿ ಒಪ್ಪದಿಂದಲಿಮಾರಿ ಸರಿಯಾರಿಲ್ಲ ಕಂದ್ಯ5 ಮೋಸ ಹೋಗುವನಲ್ಲಾ ಭವಪಾಶ ಬಿಡಿಸಲು ಬಲ್ಲ ಇದಕೆ ಸಂಶಯವಿಲ್ಲ 6 ಬೇರೆ ದೈವಗಳನ್ನ ಬಯಸಲ್ಯಾತಕೆ ಹೇಳು ದೀನ ದಯಾಳೂ ಭಕ್ತಕೃಪಾಳೂ 7 ನಿನ್ನ ಹೊರತು ಪೊರೆವರನ್ಯರಕಾಣೆನು ಘನ್ನ ಮಹಿಮಾ ಮನಮಾಡೋ ಮೋಹನ್ನಾ 8 ಭಕ್ತ ವತ್ಸಲ ನೀನಭಯವಿತ್ತ ಮೇಲೆ ಭಯವ್ಯಾಕೊನಮಗಿನ್ನು ಭಕ್ತರಭಿಮಾನೀ ಸತ್ಯ ನಿನವಾಣೀ ನಿನ್ನ ಸಮರ್ಯಾರೊದಾನೀ 9 ಆದರದಿಂಧ ಪೊರೆವಾಪ್ರೇಮಸುಧೆಯ ಕರೆವಾ ಕನಕಾದ್ರಿಯೊಳಿರುವಾ ಕೀರ್ತಿಯೊಳ್ ಮೆರೆವಾ 10 ವೆಂಕಟವಿಠಲಾ ಕರುಣಾಲವಾಲಾ ಪದ್ಮಿನಿಲೋಲಾ 11
--------------
ರಾಧಾಬಾಯಿ
ಹನುಮಂತದೇವರ ಸ್ತೋತ್ರ ಬಿಡುವೇನೇನಯ್ಯಾ ಹನುಮ ನಿನ್ನಬಿಡುವೇನೇನಯ್ಯಾ ಪ ಬಿಡುವೆನೇನೋ ಹನುಮ ನಿನ್ನಅಡಿಗಳಿಗೆ ಶಿರವ ಕಟ್ಟಿ (ಎರಗುವೆ ನಾನು)ದೃಢ ಭಕ್ತಿ ಸುಜ್ಞಾನವನ್ನುತಡಮಾಡದಲೆ ಕೊಡುವೋ ತನಕ ಅ.ಪ ಹಸ್ತವ ಮ್ಯಾಲಕೆ ಎತ್ತಿದರೇನುಹಾರಗಾಲ ಹಾಕಿದರೇನುಭೃತ್ಯನು ನಿನ್ನವನು ನಾನುಹಸ್ತಿ ವರದನ ತೋರೋ ತನಕ 1 ಹಲ್ಲು ಮುಡಿಯ ಕಟ್ಟಿದರೇನು ಗುಲ್ಲು ಮಾಡಿದರಂಜುವನಲ್ಲಫುಲ್ಲನಾಭ ಲಕುಮೀಲೋಲನಇಲ್ಲಿಗೆ ತಂದು ತೋರುವ ತನಕ 2 ಡೊಂಕು ಮೋರೆ ಬಾಲವ ತಿದ್ದಿಹುಂಕರಿಸಿದರೆ ಅಂಜುವನಲ್ಲಕಿಂಕರನು ನಿನ್ನವನೋ ನಾನುವೆಂಕಟವಿಠಲನ ತೋರುವ ತನಕ 3
--------------
ವೆಂಕಟೇಶವಿಟ್ಠಲ
ಹರಿಯೇ ಧೊರೆಯೇ ಪ ಕಂದನ ನುಡಿಕೇಳಿ ಕಂಬದಿಂದ ಬಂದೆ ಅಂದು ಅಹಲ್ಯೆಯ | ಬಂಧನ ಬಿಡಿಸಿದೆ ಕರಿಮೊರೆಯಿಡಲಾಕ್ಷಣ ಬಂದು ನೀ ನಕ್ರನ್ನ ಸೀಳಿದ ಚಕ್ರಧರನೆ ನೀನು 1 ತರಳ ಧೃವನ್ನಾ ತೊಡೆಯಿಂದ ನೂಕಲು ಕಡುಭಯದಿಂದ ವನದಲ್ಲಿ ಚರಿಸುತ್ತ ಘನತಪಗೈಯಲು ಧೃಡ ಭಕುತಿಗೆ ಮೆಚ್ಚಿ ಒಡನೆ ಓಡಿ ಬಂದು ಘನತರ ಸಂಪದವತ್ತೆ 2 ಪರಮ ಪುರುಷೋತ್ತಮ ನೀನಲ್ಲವೆ ಮೊರೆಹೊಕ್ಕೆನು ನಿನ್ನ ಕರುಣಿಗಳರಸನ್ನ ತ್ವರಿತದಿಂದಲಿ ಕಾಯೊ ವೆಂಕಟವಿಠಲಾ 3
--------------
ರಾಧಾಬಾಯಿ