ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆನಯ್ಯ ಚನ್ನಕೇಶವರಾಯನ ವೇಲಾಪುರದರಸನ ಸುಕೃತ ಫಲದಿಂದ ಪ ಹೇಯ ವಿಷಯದಿ ರಂಗನಾಕನ ಮರೆದ ಪಶುವಾನು ಹೇಯನಲ್ಲದೆ ನರಕದಲಿ ಬೀಳ್ವವನು1 ಕಂಡೆ ಶಂಖ ಚಕ್ರ ಪದುಮಧರನ ಕಿರೀಟ ಕುಂಡಲಧರನ ಪೀತಾಂಬರಧರನ 2 ಸುರಸಿಂಧು ಜನನ ಕಾರಣ ಚರಣಕಮಲ ವಿಕಾಸ ಧರನ ಕರುಣಾಪವರಧರನ ರಂಗನಾಯಕನ 3
--------------
ಬೇಲೂರು ವೈಕುಂಠದಾಸರು
ನೋಡಲುಬೇಕೇ ಎನ್ನೊಡೆಯನನೂ ನೋಡಿದಿರೇ ತಾಳಪಾಕಂ ಚಿಣ್ಣೈಯಾ ಪ ದಿಕ್ಕುಗಳನು ಬೆಳಗುವ ಸುಕೀರಿಟವ ನಿಕ್ಕಿಹ ಮಾಣಿಕದೋಲೆಯನೂ ಚೊಕ್ಕಟ ಮೂಗುತಿಯಿಂದೊಪ್ಪುವನ್ನ ಜ ಗಕ್ಕೆ ಪತಿಯೆನ್ನೆರೆಯ ಚೆನ್ನಿಗನಾ 1 ಕಂಬು ಚಕ್ರಗದೆ ಪದುಮವ ಪಿಡಿದು ಪೀ ತಾಂಬರದಂಗಿಯ ಧರಿಸಿಕೊಂಡೂ ತುಂಬಿದ ವಕ್ಷದಿ ರಮೆ ಕೌಸ್ತುಭದಿಂ ಗಂಭೀರಾರ್ಣವನಾದ ಚೆನ್ನಿಗನ 2 ಸುರರೆಲ್ಲರು ಪೂಜಿಸುವ ಚರಣದೊಳು ಕಿರುಗೆಜ್ಜೆ ಪೆಂಡೆಯವಿಟ್ಟವನಾ ವರವೈಕುಂಠ ವೇಲಾಪುರದರಸನ ಶರಣ ವತ್ಸಲನಾದ ಕರುಣಾಂಬುಧಿಯಾ 3
--------------
ಬೇಲೂರು ವೈಕುಂಠದಾಸರು