ಒಟ್ಟು 6 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚೋದ್ಯ ಚೋದ್ಯ ಹರಿ ನಿನ್ನ ಆಟ ಸುಲಭವಲ್ಲಾರಿಗೆ ತಿಳಿಯದೀ ಮಾಟ ಪ ಉಣಿಸುವವರೊಳು ನೀನೆ ಉಣುತಿರುವವರಲಿ ನೀನೆ ಉಣಿಸುಣಿಸಿ ಅಣಕಿಸುವ ಬಿನುಗರಲಿ ನೀನೆ ಮಣಿಯುವವರೊಳು ನೀನೆ ಮಣಿಸಿಕೊಂಬರಲಿ ನೀನೆ ಕ್ಷಣಕ್ಷಣಕೆ ಬದಲ್ವಾಗ ಬಣ್ಣಕಗರಲಿ ನೀನೆ 1 ಹೊಡೆಯುವವರಲಿ ನೀನೆ ಹೊಡೆಸುವವರಲ್ಲಿ ನೀನೆ ಹೊಡೆಸಿಕೊಳ್ವರಲಿ ನೀನೆ ಬಿಡಿಸುವವರಲಿ ನೀನೆ ದುಡಿಯುವವರಲಿ ನೀನೆ ದುಡಿಸಿ ಕೊಂಬರಲಿ ನೀನೆ ಬಡವರಲಿ ನೀನೆ ಬಲ್ಲಿದರೊಳ್ನೀನೆ 2 ಕೊಟ್ಟೊಡೆಯರಲಿ ನೀನೆ ಬಿಟ್ಟೋಡ್ವರಲಿ ನೀನೆ ಕೊಟ್ವೊವಚನತಪ್ಪುವ ಭ್ರಷ್ಟರಲಿ ನೀನೆ ಶಿಷ್ಟನಿಷ್ಟರಲಿ ನೀನೆ ಬಿಟ್ಟಾಡ್ವರಲಿ ನೀನೆ ಇಟ್ಟಿಟ್ಟು ಹಂಗಿಸುವ ದುಷ್ಟರಲಿ ನೀನೆ 3 ಪಾಪಿಷ್ಟರಲಿ ನೀನೆ ಕೋಪಿಷ್ಟರಲಿ ನೀನೆ ಶಾಪಿಸುವರಲಿ ನೀನೆ ಶಾಪಕೊಂಬರಲಿ ನೀನೆ ತಾಪತ್ರದಲಿ ನೀನೆ ಭೂಪತಿಗಳೊಳು ನೀನೆ ಅಪಾರ ಸೃಷ್ಟಿ ಸರ್ವವ್ಯಾಪಕನು ನೀನೆ 4 ಇನ್ನರಿದು ನೋಡಲು ಅನ್ಯವೊಂದಿಲ್ಲವು ನಿನ್ನಪ್ರಭೆಯೆ ಸಕಲ ಜಗವನ್ನು ಬೆಳಗುವುದು ನಿನ್ನ ರೂಪವೆ ಜಗ ಎನ್ನಯ್ಯ ಶ್ರೀರಾಮ ಭಿನ್ನಬೇದ ಬಿಡಿಸೆನ್ನ ಧನ್ಯನೆನಿಸಯ್ಯ 5
--------------
ರಾಮದಾಸರು
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಮೂರ್ತಿ ನೆಲಸಲಂತರ್ಧಾನದಿ ಕ್ಷಣದೀ 1ನಾ ಪುಣ್ಯವಂತನೆಂಬೆನೆ ಮೂರ್ತಿಯಗಲುವದೆ ನಾಪಾಯೆಂಬೆನೆಕಾಬೆನೆರೂಪುಮರೆಯಾದರೇನೈ ಪೂರ್ಣವಸ್ತುವೆಂಬೀ ಪಂಥವನು ಪಿಡಿವೆನೆವ್ಯಾಪಾರದಲಿ ಸಿಲುಕಿದೀ ಮನಕೆ ಬಿಡದೆ ಸದ್ರೂಪ ನಂಬಿದ್ದೆನಿದನೆಸಾಪರಾಧಿಗೆ ಮುಖಗೊಡದ ತೆರದಿ ಮರೆಯಾದ ತಾಪ ಬೆಂಬಿಡದು ತಾನೆ ಎನ್ನನೆ 2ಬರಿದೆ ನಾನಪರಾಧಿಯೆಂದು ಪಂಬಲಿಸುವದು ತರವಲ್ಲ ಧನ್ಯ ನಾನೂಕರುಣದಿಂ ಮೂರುತಿಯ ತೋರಿ ಸುಖಗೊಳಿಸಿಯುರೆ ಮರೆಯಾದ ಭಾವ ತಾನೂಸ್ಮರಿಸಿ ಸ್ಮರಿಸಿಯೆ ಮನವು ಕರಗಿ ತನ್ನೊಳುನಿಜದಿ ಬೆರೆಯಲೆಂತೆಂಬುದಿದನೂಮರಳಿ ಜಾನಿಸಿ ಧೈರ್ಯ'ಡಿದರೂ ಮೊದಲುಂಡ ಪರಮಸುಖ ಬಿಡದೆನ್ನನೂ ತಾನೂ 3ಭಾಪುರೆ ಭಾಗ್ಯಶಾಲಿಯು ಧನ್ಯಧನ್ಯನೈ ನಾ ಪುಣ್ಯವಂತನಹುದೂತಾ ಪೂರ್ಣ ಕೃಪೆವಂತ ಶ್ರೀಕೃಷ್ಣಯೋಗೀಂದ್ರ ನೀ ಪೊಡ' ಮೊದಲೊಳಹುದೂತಾಪಬಡುವರು ಭಜಕರೆಂದು ಮಂಗಳಕರದ ರೂಪವನು ಮೊದಲೆ ತಳೆದೂವ್ಯಾಪಕನು ಶ್ರೀ ದಾಸಾರ್ಯನಾಗಿರುವನೀ ಪದ'ಗೆಣೆಯಾವದು ಇಹುದೂ 4ಗುರು ವಾಸುದೇವಾರ್ಯನೆನಿಸಿ ಚಿಕ್ಕನಾಗಪುರ ವರದವೆಂಕಟರಮಣನೆಕರದು ಸುಜ್ಞಾನಸುಧೆಯೆರೆದಜ್ಞರಜ್ಞತೆಯ ಪರಿದ ಕರುಣಾವಂತನೆವರ ಕೃಷ್ಣಯೋಗೀಂದ್ರ ಶ್ರೀರಾಮದಾಸಾರ್ಯ ಶರಣಾಗತೋದ್ಧರಣನೆಮರೆಯೊಕ್ಕೆ ನಾನು ತಿಮ್ಮದಾಸ ಜೀಯ್ಯಪರಾಕು ಕರ'ಡಿಯಬೇಕೆನ್ನನೆ ನೀನೆ5
--------------
ತಿಮ್ಮಪ್ಪದಾಸರು
ಶ್ರೀ ಪುರುಷೋತ್ತಮವಿಲಾಸ 62-2 ಆನಂದ ಜ್ಞಾನಮಯ ಅಖಿಲ ಗುಣ ಪರಿಪೂರ್ಣ || ಅನಘ ಲಕ್ಷ್ಮೀರಮಣ ಶರಣು ಜಗದೀಶ ಪ ವನಜಾಸನಾದಿ ಸುರರಿಂದ ಆರಾಧಿತನೇ | ವನಜಜಾಂಡದಿ ಜಗಜ್ಜನ್ಮಾದಿಪತೇ ಅಪ ಅಮಿತ ಅನಂತ ಗುಣಕ್ರಿಯಾರೂಪ ಅನಂತ ಶೀರ್ಷಾನಂತ ಉರುಸುಗುಣಪೂರ್ಣ|| ಅನಂತಾಕ್ಷ ಸರ್ವಜ್ಞ ಸಾಕ್ಷಿ ಸರ್ವಾಧ್ಯಕ್ಷ || ಅನಂತಪಾದನು ಅನಂತರೂಪಸರ್ವಸ್ಥ 1 ಸಹಸ್ರಪಾತ್ ಸತ್ಯಂ ಸತ್‍ಸೃಷ್ಟಿ ಜೀವನದ ಸಹಸ್ರಾಕ್ಷಜ್ಞಾನಂ ಎರಡು ವಿಧಜ್ಞಾನ || ಸಹಸ್ರಶೀರ್ಷಾನಂತಂ ಆನಂದ ಆನಂದ ಮಹಾಮಹಿಮ ಪೂರ್ಣಗುಣ ಪುರುಷನೀಬ್ರಹ್ಮ 2 ನಾಕಭೂಪಾತಾಳ ಜಗದಂತರ್ಬಹಿವ್ರ್ಯಾಪ್ತ || ಭಕುತರ ಸಮೀಪಸ್ಥ ಇತರರಿಗೆ ದೂರ || ಏಕಾತ್ಮ ಪರಮಾತ್ಮ ಪರಮ ಪುರುಷವಿಷ್ಣೋ ನೀಕಾಲಗುಣ ದೇಶಾಪರಿಶ್ಚಿನ್ನ ಭೂಮನ್ 3 ಪ್ರಕೃತಿಶಚವ್ಯಕ್ತ - ಮಹದಾದಿ ತತ್ವಂಗಳಿಗೇ | ಆಕಾಶ ಮೊದಲಾದ ಭೂತ ಪಂಚಕಕ್ಕೆ || ಸುಖಮಯನೇ ನೀಸರ್ವೆ ಚೇತನಾ ಚೇತನಕೆ | ಏಕ ಆಶ್ರಯ ಅನಂತ ಶೀರ್ಷಾಕ್ಷಪಾದ 4 ಪರಮೇಶ ಅವಿಕಾರ ಸಮರ್ಥ ಉರು ತೈಜಸಚ್ಛಕ್ತಿ ರೂಪವಷಟ್ಕಾರ ಪ್ರಕ್ರತಿ ಸರ್ವದಿ ನೀನು ಸ್ವೇಚ್ಛೆಯಿಂ ತುಂಬಿರುವಿ | ಪ್ರಕೃತಿ ಸರ್ವವು ನಿನ್ನಧೀನವೋ ಸ್ವಾಮಿ 5 ದ್ಯುಭ್ವಾದಿ ಜಗತ್ತಿಗೆ ಆಧಾರಾಧಿಷ್ಠಿತನು ದುಭ್ವಾದಿಗಳವ್ಯಾಪ್ಯ ವ್ಯಾಪಕನು ನೀನು ಸರ್ವಸ್ಥನಾಗಿ ನೀ ಸರ್ವವಶಿಯಾದುದರಿಂ ಸರ್ವನೀನೇಂದೆನಿಸಿಕೊಂಬಿಯೋ ಸ್ವಾಮಿ 6 ಆಧಾರ ಆಧೇಯೆ ಅನಂತಾಲ್ಪಶಕ್ತಿಯು ಅಧಿಷ್ಠಾನಾಷ್ಟಿತ ವ್ಯಾಪ್ಯ ವ್ಯಾಪಕವು ಭೇದ ಈರೀತಿಯಲಿ ಸುಸ್ಪಷ್ಟವಾಗಿದೆಯು ಇದಂಸರ್ವಂ ಉಕ್ತಿ ನಿನ್ ಸ್ವಾಮಿತ್ವ ಬೋಧಕವು 7 ಅಧೀನ ನಿನ್ನಲ್ಲಿ ಸ್ವಾಮಿ ಸರ್ವವಶಿಸರ್ವ | ಓದುನವು ಕರ್ಮಫಲಭುಂಜಿಪ ಸಂಸಾರಿಗಳು ಅದರಂತೆ ಮುಕ್ತರಸ್ವಾಮಿ ಆಶ್ರಯನು 8 ಇವು ಮಾತ್ರವೇ ನಿನ್ನ ಮಹಿಮೆಗಳು ಪರಮಾತ್ಮ || ಸರ್ವ ಈ ಚೇತನಾಚೇತನ ಪ್ರಪಂಚವು ಸರ್ವೇಶ ನಿನ್ನಂಶ ಸಹೃದಯ ಕಿಂಚಿತ್ತು 9 ಒಡೆಯನಿನ್ನಮಿತ ಶಕ್ತಿಯೊದಂಶದಲೆ ಜಡಜಗತ್ ಇರುವಿಕೆ ವಿಕಾರವುಸರ್ವ || ಜಡ ಭಿನ್ನರಲಿ ನಿನ್ನ ಸಾದೃಶ್ಯ ಅತಿ ಸ್ವಲ್ಪ ಪಾದ ವೊಂದಂ ಶೃತ ಸುಪಾದನು 10 ಅಧೀನತ್ವದಿಂಜಗತ್ ಇದಂಸರ್ವಂ ಎಂದಂತೆ - ಪಾದೋಸ್ಯ ವಿಶ್ವದಲಿ ಭಿನ್ನಾಂಶಜೇಯ || ಭಿನ್ನಜೀವರು ನಿನ್ನ ಪಾದರಾಗಿತಿಹರೋ ಚಿತ್ಚೇತ್ಯಯಂತ 11 ಪೂರ್ಣಗುಣನಿಧಿ ಅನಘ ಜನ್ಮಾದಿಕರ್ತಅಜ ಆವಣ್ನಯೋನಿತ ಪ್ರಾಪ್ಯ ಮಧ್ವಸ್ಥ ಶರಣು || ವನಜಭವಪಿತ ಶ್ರೀಶ ಪ್ರಸನ್ನ ಶ್ರೀನಿವಾಸ ನಮೋ ಪರಮ ಪುರಷ 12
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಹರಿ ಪ್ರಿಯ ವಿಠಲ | ಸಲಹ ಬೇಕಿವನಾ ಪ ಸ್ನೇಹ ಸದ್ಭಕ್ತರಲಿ | ಸಾಹಸದಿ ಕೊಡಿಸಿ ಅ.ಪ. ಪಾಪಾಟವಿಗೆ ಪವಿಯು | ಶ್ರೀಪತಿಯ ನಾಮವನುಲೇಪಿಸುವುದೋ ಸ್ವಾಮಿ | ಗೋಪಾಲ ಮೂರ್ತೇವ್ಯಾಪಕನು ನೀನಾಗಿ | ಪ್ರಾಪಕಾಭಿಷ್ಟಗಳಪಾವನಕೆ ಮನ ಮಾಡಿ | ಎರ್ಷಿಸೋ ಹರಿಯೇ 1 ಸೃಷ್ಟಾದಿಕರ್ತನೇ | ಕೃಷ್ಣ ಮೂರುತಿ ದೇವಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೆಇಷ್ಟಮೂರುತಿ ದೇವ | ಸುಷ್ಠು ಭಜನೆಯ ನೀಡಿಹೃಷ್ಟನ್ನ ಮಾಡಿವನ | ಜಿಷ್ಣು ಸಖ ಹರಿಯೆ 2 ಪಂಚಭೇದ ಜ್ಞಾನ | ಸಂಚಿಂತನೆಯ ಕೊಟ್ಟುವಾಂಚಿತಾರ್ಥದನಾಗೊ | ಪಂಚ ಪಾಂಚಾತ್ಮಕಾಂಚನವು ಲೋಪ್ಠವು | ಸಮವೆಂಬ ಮತಿಯಿತ್ತುಅಂಚೆ ವಹ ಸದ್ವಂದ್ಯ | ಮಿಂಚಿ ನಂದದಿ ಪೊಳೆದು 3 ಭವ ಬಂಧದಲಿ ಸಿಲ್ಕಿ | ಬಲು ನೊಂದಿಹನು ಅಯ್ಯಭವರೋಗ ವೈದ್ಯನೇ | ಕೈ ಪಿಡಿದು ಕಾಯೋ ಅವನಿಯೊಳು ಶ್ರೀ ಹರಿಯೆ ಪ್ರಿಯನಾಗಿ ಮೆರೆಯಲಿಂ-ದಿವನ ಸ್ವಪದಿ ಪೇಳ್ದೆ | ಗುರು ಮೂರ್ತಿಯಾಗೀ 4 ಸುಪ್ತೀಶ ಪೇಳ್ದಪರಿ | ಇತ್ತಿಹೆನೊ ಅಂಕಿತವಆಪ್ತ ನೀನಿದ್ದವಗೆ | ದಾಸ್ಯ ಸದ್ಧರ್ಮಪ್ರಾಪ್ತಿ ಗೈಸುತ ಭವವ | ಉತ್ತರಿಸ ಬೇಕೆಂದುಗೋಪ್ತ ಗುರು ಗೋವಿಂದ | ವಿಠಲ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು