ಒಟ್ಟು 72 ಕಡೆಗಳಲ್ಲಿ , 31 ದಾಸರು , 64 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾರಿಜನಾಭನ ವನಜಾಂಘ್ರಿಗಳಿಗೆ ಕರವ ಕೊಂಡಾಡುವೆ ಪದವ 1 ದೇವದೈತ್ಯರು ಕೂಡಿ ಪಾಲಾಂಬುಧಿಯಲ್ಲಿ ಮೇರು ಮಂದರವ ಕಡೆಗೋಲು ಮಾಡಿದರು2 ವಾಸುಕಿ ಶರಧಿ ಮಧ್ಯದಲಿ ಹರಿ ಕೂರುಮನಾಗಿ ಮಂದರವನೆತ್ತಿದನು3 ಕಾಲಕೂಟ ವಿಷವಾಯು ಪಾನಮಾಡುತಲಿ ಮಹದೇವ ಕೋಪದಿ ನುಂಗಿ ನೀಲಕಂಠೆನಿಸೆ 4 ಕೌಸ್ತುಭ ಕಾಮಧೇನು ಸುರತರುವು ಹಸ್ತಿ ತೇಜಿಯು ಕಲ್ಪವೃಕ್ಷ ಸುಧೆ ಉದಿಸೆ 5 ಸಿಂಧು ಮಥನವ ಮಾಡಲು ಶ್ರೀದೇವಿ ಜನಿಸೆ ಮಂದಾರಮಾಲೆ ಕೈಯಿಂದಲಿ ಪಿಡಿದು 6 ಅರ್ಕಚಂದ್ರರ ಕಾಂತಿಗಧಿಕಾದ ಮುಖವು ದಿಕ್ಕು ದಿಕ್ಕಿಗೆ ಮಿಂಚಿನಂತೆ ಹೊಳೆಯುತಲಿ 7 ವಜ್ರಾಭರಣವು ಕಾಲಗೆಜ್ಜೆ ಸರಪಳಿಯು ಮಲ್ಲಿಗೆ ಕುಸುಮಗಳೊಂದೊಂದ್ಹೆಜ್ಜೆಗುದುರುತಲಿ 8 ಕುಡಿಹುಬ್ಬು ಕಡೆಗಣ್ಣ ನೋಡುತಲಿ ನಡೆದು ಬಂದಳು ತಾ ಬಡನಡುವಿನ ಒಯ್ಯಾರಿ 9 ಅತಿಹಾಸ್ಯಗಳಿಂದ ದೇವತೆಗಳ ಮಧ್ಯೆ ಈ ಪತಿ ಎಲ್ಲಿಹನೋ ತಾ 10 ಅರ್ಕನ್ವಲ್ಲೆನೆ ಅಗ್ನಿಯಂತೆ ಸುಡುತಿರುವನ ಶಕ್ರನ ಒಲ್ಲೆ ಮೈಯೆಲ್ಲ ಕಣ್ಣವಗೆ 11 ಸೋಮನ ಒಲ್ಲೆ ಕಳೆಗುಂದಿ ತಿರುಗುವನ ಪಾವನ ನಮ್ಮ ಗಾಳಿರೂಪದವನ12 ರುದ್ರನ್ವಲ್ಲೆನೆ ರುಂಡಮಾಲೆ ಹಾಕುವನ ಮುದಿಹದ್ದಿನಂದದಲಿ ಗರುಡ ಹಾರ್ಯಾಡುವನಲ್ಲೆ 13 ಶೇಷನ ಒಲ್ಲೆ ವಿಷದ ದೇಹದವನ ಗ- ಣೇಶನ್ವಲ್ಲೆನೆ ಡೊಳ್ಳು ಹೊಟ್ಟೆ ಗಜಮುಖನ 14 ಬ್ರಹ್ಮ ನಾಲಕು ಮೋರೆಗುಮ್ಮನಂತಿರುವ ಯಮ- ಧರ್ಮನ ಒಲ್ಲೆ ನಿಷ್ಕರುಣ ಘಾತಕನ 15 ಸುರಜನರ ನೋಡಿ ಗಾಬರ್ಯಾಗುವೆನು 16 ಮಂದ ಹಾಸ್ಯಗಳಿಂದ ಮಾತನಾಡುತಲಿ ಇಂದಿರೆಪತಿ ಪಾದಾರವಿಂದ ನೋಡುತಲಿ 17 ಗುಣದಲಿ ಗಂಭೀರ ಮಣಿಕೋಟಿತೇಜ ಎಣಿಕಿಲ್ಲದ ಚೆಲುವ ನೋಡೆನ್ನ ಪ್ರಾಣನಾಥ 18 ಹದಿನಾಲ್ಕು ಲೋಕ ತನ್ನುದರದಲ್ಲಿರುವ ಪದುಮಾಕ್ಷಗ್ವನಮಾಲೆ ಮುದದಿಂದ್ಹಾಕುವೆನು 19 ಕರ ವೈಜಯಂತಿ ಸರ ಮಣಿ ನಾ ಇರುತಿರೆ ವಕ್ಷಸ್ಥಳವು 20 ಶ್ಯಾಮವರ್ಣನ ಮುದ್ದು ಕಾಮನಜನಕ ಪ್ರೇಮದಿಂದ್ವೊಲಿವೆ ನಾ ಕಾಮಿಸಿ ಹರಿಯ 21 ಕಮಲಮುಖಿ ಬ್ಯಾಗ ಕಮಲಾಕ್ಷನ್ನ ನೋಡಿ ಕಮಲಮಾಲೆಯ ತಾ ಕಂದರದಲ್ಹಾಕಿದಳು 22 ಅಂಗನೆ ರಚಿಸಿ ತಾ ನಿಂತಳು ನಗುತ 23 ರತ್ನ ಮಂಟಪ ಚಿನ್ನ ಚಿತ್ರ ಪೀಠದಲಿ ಲಕ್ಷ್ಮೀನಾರಾಯಣರು ಒಪ್ಪಿ ಕುಳಿತಿರಲು 24 ಸಾಗರರಾಜ ತನ್ನ ಭಾಗೀರಥಿ ಕೂಡಿ ಸಿರಿ ಧಾರೆಯನೆರೆದ 25 ಅಚ್ಚುತ ಲಕುಮಿಗೆ ಕಟ್ಟಿದ ನಗುತ 26 ಮೇಲು ಕರಿಮಣಿ ಮಂಗಳ ಸೂತ್ರವ ಪಿಡಿದು ಶ್ರೀ ಲೋಲ ಲಕುಮಿಗೆ ತಾ ಕಟ್ಟಿದ ನಗುತ 27 ವಂಕಿ ಕಂಕಣ ಮುತ್ತಿನ ಪಂಚಾಳಿಪದಕ ಪಂಕಜಮುಖಿಗೆ ಅಲಂಕರಿಸಿದರು 28 ಸರಿಗೆ ಸರಗಳು ನಾಗಮುರಿಗೆ ಕಟ್ಟಾಣಿ ವರಮಾಲಕ್ಷುಮಿಯ ಸಿರಿಮುಡಿಗೆ ಮಲ್ಲಿಗೆಯ 29 ನಡುವಿನ್ವೊಡ್ಯಾಣ ಹೊಸ ಬಿಡಿಮುತ್ತಿನ ದಂಡೆ ಸಿರಿ ಪರಮಾತ್ಮನ ತೊಡೆಯಲ್ಲೊಪ್ಪಿರಲು 30 ಇಂದಿರೆ ಮುಖವ ಆ- ನಂದ ಬಾಷ್ಪಗಳು ಕಣ್ಣಿಂದಲುದುರಿದವು 31 ರಂಗನ ಕಂಗಳ ಬಿಂದು ಮಾತ್ರದಲಿ ಅಂಗನೆ ತುಳಸಿ ತಾನವತರಿಸಿದಳು32 ಪಚ್ಚದಂತ್ಹೊಳೆವೊ ಶ್ರೀ ತುಳಸಿ ದೇವಿಯರ ಅಚ್ಚುತ ತನ್ನಂಕದಲ್ಲಿ ಧರಿಸಿದನು 33 ಮಂಗಳಾಷ್ಟಕ ಹೇಳುತ ಇಂದ್ರಾದಿ ಸುರರು ರಂಗ ಲಕ್ಷುಮಿಗೆ ಲಗ್ನವ ಮಾಡಿಸಿದರು 34 ಅಂತರಿಕ್ಷದಿ ಭೇರಿನಾದ ಸುರತರುವು ನಿಂತು ಕರೆದಿತು ದಿವ್ಯ ಸಂಪಿಗೆ ಮಳೆಯ 35 ಲಾಜಾಹೋಮವ ಮಾಡಿ ಭೂಮವನುಂಡು ನಾಗಶಯನಗೆ ನಾಗೋಲಿ ಮಾಡಿದರು 36 ಸಿಂಧುರಾಜನ ರಾಣಿಗೆ ಸಿಂಧೂಪವನಿತ್ತು ಗಜ ಚೆಂದದಿ ಬರೆದು 37 ಚೆಲುವೆ ನೀ ಬೇಕಾದರೆ ಹಿಡಿಯೆಂದನು ರಂಗ 38 ಅಚ್ಚುತ ಎನ್ನಾನೆ ಲೆಕ್ಕಿಲ್ಲದ್ಹಣವ ಕೊಟ್ಟರೆ ಕೊಡುವೆನೆಂದಳು ಲಕ್ಷುಮಿ ನಗುತ 39 ತುಂಬಿ ಮರದ ಬಾಗಿನವ ಸಿರಿ ತಾ ಋಷಿಪತ್ನೇರನೆ ಕರೆದು40 ತುಂಬಿ ಮರದ ಬಾಗಿನವ ಹರದಿ ಕೊಟ್ಟಳು ತಾ ಋಷಿಪತ್ನೇರನೆ ಕರೆದು 41 ಕುಂದಣದ್ಹೊನ್ನಕೂಸಿನ ತೊಟ್ಟಿಲೊಳಿಟ್ಟು ಕಂದನಾಡಿಸಿ ಜೋಜೋ ಎಂದು ಪಾಡಿದರು42 ಕರಿ ಎಂದನು ರಂಗ 43 ಸುರದೇವತೆಗಳಿಗೆ ಸುಧೆ ಎರೆಯಬೇಕಿನ್ನು ಕರಿ ಎಂದಳು ಲಕ್ಷ್ಮಿ 44 ಹೆಣ್ಣನೊಪ್ಪಿಸಿಕೊಟ್ಟು ಚಿನ್ನದಾರತಿಯ ಕರ್ನೆ(ನ್ಯ?) ಸರಸ್ವತಿ ಭಾರತಿ ಬೆಳಗಿದರಾಗ 45 ಈರೇಳು ಲೋಕದೊಡೆಯನು ನೀನಾಗೆಂದು ಬಹುಜನರ್ಹರಸ್ಯೆರೆದರು ಮಂತ್ರಾಕ್ಷತೆಯ 46 ಪೀತಾಂಬರಧಾರಿ ತನ್ನ ಪ್ರೀತ್ಯುಳ್ಳಜನಕೆ ಮಾತುಳಾಂತಕ ಮಾಮನೆ ಪ್ರಸ್ತ ಮಾಡಿದನು 47 ಸಾಲು ಕುಡಿಎಲೆ ಹಾಕಿ ಮೇಲು ಮಂಡಿಗೆಯ ಹಾಲು ಸಕ್ಕರೆ ಶಾಖ ಪಾಕ ಬಡಿಸಿದರು 48 ಎಣ್ಣೋರಿಗೆ ಫೇಣಿ ಪರಮಾನ್ನ ಶಾಲ್ಯಾನ್ನ ಸಣ್ಣಶ್ಯಾವಿಗೆ ತುಪ್ಪವನ್ನು ಬಡಿಸಿದರು 49 ಏಕಾಪೋಶನ ಹಾಕಿದ ಶೀಕಾಂತಾಮೃತವ ಆ ಕಾಲದಿ ಸುರರುಂಡು ತೃಪ್ತರಾಗಿಹರು 50 ಅಮೃತ ಮಥನವ ಕೇಳಿದ ಜನಕೆ
--------------
ಹರಪನಹಳ್ಳಿಭೀಮವ್ವ
(ಅನುಭವ ಬಾರಾಮಾಸ ) ಏನೆಂದು ಹೇಳಲಿ ಶಾಂತಳೇ ಬುದ್ಧಿವಂತಳೇ | ವರ್ತ ಣೂಕದೆನ್ನ ಮಾತಾ | ಶ್ರೀನಾಥ ನಂಘ್ರಿಯ ನೋಡದೇ ಒಮ್ಮೆ ಮಾನವ ಜನು ಮದಿ ಬಂದೆನು ಹೊಂದಿ ನಿಂದೆನು | ಮೆರೆದೆನು ಸ್ವಹಿತಾ | ನಾನಾ ಹಂಬಲ ದೊಳು ಶಿಲುಕಿದ ಬಲು ಬಳಲಿದ | ದೊರಯದು ಪರಮಾರ್ಥ | ಶ್ಲೋಕ 1 ಭರತ ಖಂಡದಿ ಬಂದ ನೃದೇಹವಾ | ಮರೆದು ಮಾಡಲಿಬಾರದು ಹೇಯವಾ | ತ್ವರಿತ ನಂಬುದು ಶ್ರೀ ಹರಿ ಪಾದವಾ | ಗುರು ಮಹಿಪತಿ ಸಾರಿದ ಬೋಧವಾ | ಪದ ಮುಕುತಿ ಸಾಧನ ಮಾರ್ಗಶೀರ್ಷ ಮಾಸಾ ವಿಶೇಷಾ | ಧರಿಯೊಳು ಇದರಿಂದಾ | ಯುಕುತೊಲು ಹೋಗಿ ನಿರಂತರಾ ಸಾಧು ಸಂತರಾ | ಅವರ ಚರಣಾರವಿಂದಾ | ಭಕುತಿಲಿ ಮುಟ್ಟಿವಂದಿಸಲಿಲ್ಲಾ ಹೊಂದಿಸಲಿಲ್ಲಾ | ಅಖಿಳ ದೊಳಾರಿಗೆ ಬಾಗದೇ ದಿನನೀಗದೇ | ಮೋಟ ಮರ ನಿಲುಲುಂದಾ | ಶ್ಲೋಕ 2 ಮೆರೆವ ಅವಯವದೊಳು ಉತ್ತು ಮಂಗದಿ ನಿಂದು | ಹೊರಿಯ ಲುದರ ಕಾಗೀ ಬಾಗುವೀ ನೀಚಗಿಂದು | ಹರಿ ಶರಣರ ಕಂಡು ವಾಕ್ಯ ನಮನವೇನು | ಗುರು ಮಹಿಪತಿ ಸ್ವಾಮಿ ವಲಿಯನೆಂದಿಗೆ ತಾನು | ಪದ ಮಾಸ ಶೂನ್ಯವೇ ನೋಡು ಶ್ರವಣವೇ | ಮಾಡಿ ಸ್ಥಿರ ಮನುಚಿತಾ | ಸವಿ ಸವಿಯಲಿ ನಿತ್ಯ ನೂತನಾ ತೋರದನುಮಾನಾ | ಶ್ರೀ ಗೋವಿಂದ ಚರಿತಾ | ಹವಣದಿ ಸಂತರ ಮುಖದಿಂದಾ ಅನುಸರಣಿಂದಾ | ಕೇಳಲಿಲ್ಲನರತಾ | ಅವನಿಲಿ ದುಷ್ಟಪ ಕೀರ್ತಿಯಾ ಅನ್ಯ ವಾರ್ತರಿಯಾ | ಆಲಿಸಿದೇ ಸುಖ ಬಡುತಾ | ಶ್ಲೋಕ 3 ಕುಂಡಲ ವಿಟ್ಟಿಹಾ | ಹರಿ ಕಥಾಮೃತ ಕೇಳುದು ಬಿಟ್ಟಿಹಾ | ಗಿರಿಯ ಗುಹ್ಯವೋ ಕರ್ಣವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ನೋಟ ಉನ್ಮನಿ ನದಿ ಮಾಘವೇ ಮಹಾಯೋಗವೇ | ಲಯ ಲಕ್ಷಿಯ ಲಿಂದು | ನೀಟದಿ ಹರಿಯಾವತಾರದಾ ಮೂರ್ತಿ ಧ್ಯಾನಕ ತಂದು | ಧಾಟಿಲಿ ಸಮ ದೃಷ್ಟಿ ಬಲಿಯದೇ ಅಲ್ಲ ಚಲಿಸದೇ | ನಾನಾ ಬಯಕೆಯ ವಿಡಿದು ತ್ರೋಟಕ ದೈವ ನೋಡಿದ ಮತ ಕೂಡಿದ | ನೀಚ ವೃತ್ತಿಗೆ ಬಿದ್ದು | ಶ್ಲೋಕ 4 ಅಂಗನೆಯರ ಶೃಂಗಾರ ನೋಡುವಾ | ರಂಗನಾಕೃತಿ ನೋಡಲಿ ಬಾಡುವಾ | ಕಂಗಳೋಸಿ ಖಿಗಿಲಿಗಳೋ ಮಂದನಾ | ಇಂಗಿತ್ಹೇಳಿದ ಮಹಿಪತಿ ನಂದನಾ | ಪದ ಪುಣ್ಯ ಫಲಗುಣ ಮಾಸವೇ ವಬಿಗಿಯೇರ ಸನವೇ | ಸನ್ನುತ ಶ್ರೀಹರಿ ನಾಮವಾ ವಿಡಿದು ಪ್ರೇಮನಾ | ಪದ ಪದ್ಯಲೀಗ | ಚೆನ್ನಾಗಿ ಕೀರ್ತನೆ ಮಾಡದೇ ಗತಿಬೇಡದೇ | ಪಾತಕಕೆ ಗುರಿಯಾಗೆ | ಅನ್ಯರ ನಿಹಪರ ಸ್ತುತಿಗಳಾ ಹುಸಿನುಡಿಗಳಾ | ಆಡಿಬರಡಾದೆ ನೆಲಿಗೆ | ಶ್ಲೋಕ 5 ಸಿರಿಕಾಂತಾ ನತಶಮಿತ ದುರಿತಧ್ವಾಂತ ಯನುತಾ | ಹರಿನಾಮಾ ಪ್ರೇಮ ವಿಡಿದು ಸ್ಮರಿಸಾದಿಪ್ಪವನುತಾ | ನರಾಧಮಾನೇ ಮಾವನ ಮುಖವೋ ನೃಪಮಾಯ ಮುಖವೋ | ಅರುಹಿದಾ ಬೋಧಾ ಗುರು ಮಹಿಪತಿ ಸ್ವಾಮಿ ಸುಖವೋ ಪದ ದೋಷನಾಶಕ ಪ್ರಣವಧ ಕ್ಷೇತ್ರಾ ಮಾಸವೀ ಚಿತ್ರಾ | ಪವನನಾ ನೆಲೆಗೊಳಿಸಿ | ಮೀಸಲ ರೇಚಕ ಪೂರ್ವಕಾ ಧೃಡ ಕುಂಭಕಾ | ದಿಂದ ಮಂತ್ರವ ಜಪಿಸಿ | ವಸುದೇವನ ಪಾದ ನಿರ್ಮಾಲ್ಯ ಆಘ್ರಾಣಿ ಸಲಿಲ್ಲಾ | ಭೋಗ ದ್ರವ್ಯವ ಬಯಸಿ | ಲೇಸಾದ ಪರಿಮಳವನೇ ತಂದು ವಾಸಿಸುತ ನಿಂದು | ಮೈಯ್ಯ ಮರ್ತೆನು ಚಲಿಸಿ ಶ್ಲೋಕ 6 ಪರಿಮಳಂಗಳ ವಾಸನೆಗ್ಹಿಗ್ಗುಯವಾಸಿರಿ | ತುಳಸಿಯ ತೋರಲು ಸಗ್ಗುವಾ | ಇರುವ ನಾಶಿಕೋತಿತ್ತಿಯೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ತನುವೆಂಬೋ ವೃಕ್ಷ ಕಿವೇ ಶಾಖಾ ಹಸ್ತಾ ಮೌಲಿಕಾ | ದೇವ ಪೂಜದರಿಂದ | ಘನವಾದಾ ತುಳಸಿ ಪುಷ್ಪಗಳನು ತಂದು ಹಲವನು | ಸಹಸ್ರ ನಾಮಗಳಿಂದಾ | ಅನುವಾಗಿ ಹರಿಗೆ ಏರಿಸಲಿಲ್ಲಾ ಅರ್ಪಿಸಲಿಲ್ಲಾ ಮರಹು ಆಲಸ್ಯದಿಂದಾ | ವನಿಯೊಳು ಪಗಡಿ ಪಂಚಿಗಳನು ಆಡಿ ದಿನವನು | ನೂಕಿದನು ಇದರಿಂದಾ | (ತನಗಿಂದ ದೀನದುರ್ಬಲರನು ಕಂಡು ಹೊಡೆವನು | ಹೋಗಾಡಿದ ನಿಜಾನಂದ ) ಶ್ಲೋಕ 7 ಹರಿಯ ಸೇವೆಯ ಮಾಡಲು ಬೀಳುವಾ | ಮೆರೆವ ಕಂಕಣ ಮುದ್ರಿಕೆ ತಾಳುವಾ | ಕರವೋ ಮದನಾ ಕೈಯ್ಯವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ಸರ್ವ ವಿಷಯವತಿ ಜೇಷ್ಠವೇ ಬಲಿ ದಿಷ್ಟವೇ | ಮೃದು ಕಠಿಣ ವೆನ್ನದೇ | ಹರಿಯಂಗಣದಿ ಲೋಟಾಂಗಣವನು ಹಾಕುತಲಿ ತಾನು | ದೇವ ರೂಳಿಗದಿಂದೇ | ನೆರೆ ಹಡಪಿಗ ಪಾದುಕೆಯ ವಾ ಯಂಬನಾಮವಾ | ತಾಳಿ ಕರಸಿ ಕೊಳ್ಳದೇ | ತರಳೆ ತ್ಯಾಡಿಸುತಲಿ ತನ್ನಾ ಕಳೆ ದನುದಿನಾ | ಇದು ಯಾತರ ಛಂದಾ | ಶ್ಲೋಕ 8 ಪರೋಪಕಾರ ವಂಚನೆ ಮಾಡುವಾ | ಸುರಭಿ ಚಂದನ ಮಿಂಚಿಲೆ ತೀಡುವಾ | ಶರೀರೋ ಬೆಚ್ಚಿನ ಮಾಟವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ ಪದ ಆಷಾಡ ಗೇಯಲಿ ಹಸಿವೆಯ ಬಲು ತೃಷಿವಿಯು | ಸಕಲನು ಕೂಲದಿಂದಾ | ಲೇಸಾಗಿ ನೈವೇದ್ಯ ವದಗಿಸಿ ಹರಿಗರ್ಪಿಸಿ | ನಿಜ ತೀರ್ಥ ಪ್ರಸಾದಾ | ಭೂಷಣದಲಿ ನಾನು ಕೊಳಲಿಲ್ಲಾÀ ಸುಖ ಬಡಲಿಲ್ಲಾ | ದೋಷದನ್ನವ ಉಂಡು ವಡಲನು ನಾನು ಹೊರೆದನು ಬಯಸುತ ಜಿವ್ಹ ಸ್ವಾದಾ ಶ್ಲೋಕ 9 ವಿದತವಾದ ರಸ್ನಾವ ಉಂಬನು | ಮುದದಿ ತತ್ವದ ವಿದ್ಯವ ತುಂಬನು | ಉದರೋಶಾಲ್ಮಲಿ ಫಲವೋ ಮಂದನಾ | ಇದನು ಸಾರಿದ ಮಹಿಪತಿ ನಂದನಾ | ಪದ ಮನ ವಿಶ್ರಾವಣ ಸುಖ ಬೆರತಿದೇ ನೋಡು ನಿಂದಿದೇ | ಗುರು ಬೋಧಿಸಿದನು | ಮನನ ಮಾಡುತ ನಿಜಧ್ಯಾಸಾ | ಹಚ್ಚಿ ವಿಶೇಷಾ | ಪಡೆದು ಸಾಕ್ಷಾತ್ಕಾರವನು | ಚಿನುಮಯಾನಂದ ನೋಲಾಡದೇ ತಾಂ ಪೀಡಾಡದೇ | ಅಲ್ಲಿ ತೊಳಲಿದ | ಹರಿ ವಲುಮೆ ಇಲ್ಲದೇನು | ಶ್ಲೋಕ 10 ವಿಷಯ ಚಿಂತನೆ ಮಾಡಲು ಸಂಭ್ರಮಾ | ಕುಸುಮ ನಾಭನ ನೆನಿಯೆ ವಿಭ್ರಮಾ | ಕುಶಲ ಮಾನಸೋ ಪಶುವೋ ಮಂದನಾ | ಸ್ವಸುಖ ಸಾರಿದ ಮಹಿಪತಿ ನಂದನಾ ಪದ ಸುಕೃತ ಇದೇವೇ ಭಾದ್ರಪದವೇ | ನಡೆದ್ಹೋಗಿದ ರಿಂದಾ ಒಲಿದ ಪುಣ್ಯ ಕ್ಷೇತ್ರವಾಗಿಹಾ ಸಂತರಾಲಯಾ | ಪುಗುವುದೇ ಯಾತ್ರೆ ಛಂದಾ | ಜಲಜಾಂಬಕನ ಮಹಿಮೆ ಗಳುಂಟು ಅಲ್ಲಿ ಸುಖವುಂಟು | ತೊರೆದನು ಪುರವಿಂದಾ | ಸತಿ ಉದರದ ದಾವತಿಗಾಗಿ ತಿರುತಿರುಗೀ | ಜನುಮ ಶ್ಲೋಕ 11 ಧನದ ಆಶೆಗೆ ನಡೆಡತಾಕುವಾ | ಘನ ಪ್ರದಕ್ಷಿಣೆ ಮಾಡಲು ಬಳುಕುವಾ | ಮನುಜಪಾದವೋ ಪಾದವೋಮಂದನಾ | ಅನುವ ಸಾರಿದ ಪದ ಪ್ರತಿ ಪದಾಶಿವಿಜಯಂಬುದೇ ಗುರು ಭಕ್ತಿಂದೇ | ಶೃತಿ ಯಥಾದೇವೇ ತಥಾಗುರೌ ಎಂದು ನುಡಿವುದು ಅರ್ಥ ತಿಳಿದು | ನಂಬಿ ಭಜಿಸದೆವೆ | ಕ್ಷಿತಿಯೊಳು ನರರೆಂದು ಬಗೆದೆವು ಹಿತ ಮರದೆವು | ಬಾಹ್ಯ ದೃಷ್ಟಿ ಶ್ಲೋಕ 12 ಸಕಲ ವೃತ ತಪ ತಿರ್ಥಾ ಶಾಸ್ತ್ರ ಪೌರಾಣ ಬಲ್ಲಾ | ಅಖಳದಿ ಫಲವೇನು ಶ್ರೀ ಗುರು ಭಕ್ತನಲ್ಲಾ | ನಿಖಿಳಾ ಭರಣಗಳಿದ್ದು ವ್ಯರ್ಥ ಮಾಂಗಲ್ಯವಿಲ್ಲಾ | ಪಿಂತಿನ ತಪ್ಪವ ನೋಡದೇ ತಡ ಮಾಡದೇ | ಸಿರದಲ್ಲಾ ಭಯ ನೀಡಿ | ಅಂತರಂಗದ ಸುಖದೆಚ್ಚರಾ ಕೊಟ್ಟ ಸಾರಥಿ | ನಾಮ ಬಿಡದೆ ಕೊಂಡಾಡಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
(ಭೀಮಸೇನ ಪ್ರಾರ್ಥನೆ) ಭೀಮಸೇನ ಸಕಲಸತ್ವಧಾಮ ರಕ್ಷಿಸೆನ್ನ ಬೇಗ ಸಾಮಗಾನ ಲೋಲ ಕೃಷ್ಣ ಪ್ರೇಮರಸಕೆ ಪಾತ್ರನಾದ ಪ. ಮಂಗಲಾಚರಿತ್ರ ನಿನ್ನ ಅಂಗಸಂಗದಿಂದ ಬಹು ತುಂಗ ಗಿರಿಯು ಒಡೆದು ಶತಶೃಂಗವೆನಿಸಿತು ಅಂಗುಲಿ ಪ್ರಹಾರದಿಂದ ಶಿಂಗತತಿಗಳನ್ನು ಬಹಳ ಭಂಗಬಡಿಸಿ ಬಾಲಲೀಲ ರಂಗದಲ್ಲಿ ಬಲುಹ ತೋರ್ಪ 1 ಹಸಿದ ವೇಳೆಯಲ್ಲಿ ಮೆದ್ದ ವಿಷದ ಭಕ್ಷ್ಯ ಜೀರ್ಣಗೊಳಿಸಿ ಉಶನ ಮಂತ್ರದಿಂದ ಹಲ್ಲ ಮಸೆಯುತಾ ಬಂದ ಅಸುರ ವೇಶದಷ್ಟಾಕ್ಷಿಗಳ ಮಶಕದಂತೆ ಬಡಿದು ಕೆಡಹಿ ಕುಶಲದಿಂದ ನಿದ್ರೆಗೈದ ಅಸಮಶಕ್ತಿ ಪೂರ್ಣಮೂರ್ತಿ 2 ನಗಗಳ ಮೇಲೇರುತ್ತ ಹಣ್ಣುಗಳನೊಂದೊಂದಾಗಿ ಕರದಿ ತೆಗೆದು ತಿಂಬ ಕೌರವರನು ನಗುತ ನೋಡುತಾ ನೆಗೆದು ಬೀಳ್ವ ತೆರದಿ ತರುಮೂಲಗಳಾ ತುಳಿದು ಕೆಡಹಿ ದೇವಾ- ಕೊಂಡ 3 ಗೂಗೆಯಂತೆ ನಿನ್ನ ಬಳಿಗೆ ಸಾಗಿ ಬಂದು ಶಕುನಿಮುಖರು ಯೋಗನಿದ್ರೆ ತಿಳಿಯದೆ ಚೆನ್ನಾಗಿ ಬಂಧಿಸಿ ಭಾಗೀರಥಿಯ ಜಲದಿ ದೂಡೆ ವೇಗದಿ ಪಾತಾಳವೈದಿ ನಾಗಕನ್ಯೆರಿತ್ತ ರಸವ ಬೇಗ ಸವಿದು ತಿರುಗಿ ಬಂದ 4 ದುರುಳರಿಂದ ರಚಿತವಾದ ಅರಗಿನ ಮನೆಗೆ ಹೋಗಿ ಕಾಲ ನಿರುತಕಿನಿಸಿಲಿ ಇರುಳಿನಲ್ಲಿ ತಾನೆ ಅಗ್ನಿ ಇರಿಸಿ ಬೇಗಲೆದ್ದು ಸಹೋ ದರರನೆತ್ತಿ ಬಹು ಯೋಜನಕೆ ಸರಿದು ಪೋದ ಶಕ್ತರರಸ 5 ಡೊಂಬಿಮಾಳ್ಪನೆಂದು ಬಹಳ ಡಂಬರದಿಂದಿದಿರಾ ಹಿ- ಕದಂಬ ವೈರಿಯ ಅಂಬರದೊಳಗೈದಿ ವಜ್ರಕಂಬದಂತೆ ಹೊಳವ ಬಹು ಸ್ತಂಭದಿಂದ ಕೆಡಹುತ ಹೈಡಿಂಬನೆಂಬ ಮಗುವ ಪಡೆದ 6 ನಗರ ದೊಳ್ವೈದಿಕರಂತೆ ವಾಸವಾಗಿ ಪೋಕ ಬಕನ ಬಾಧೆಯಿಂದ ಶೋಕಗೊಳುವರ ಸಾಕುವೆನೆಂದೆದ್ದು ನಾನಾ ಶಾಖ ಭಕ್ಷಾನ್ನಗಳ ತಾನೆ ಸ್ವೀಕರಗೊಂಡಸುರನನ್ನು ಸೋಕಿ ಸೀಳಿ ಬಿಸುಟ ದೊರೆಯೆ 7 ವಿಪ್ರ ವೇಷದಿಂದ ದ್ರುಪದಸುತೆಯನೊಲಿಸಿ ಕೃದ್ಧ ನೃಪರ ಗೆದ್ದು ರುಕ್ಮಿಣೀಶ ಕೃಪೆಯಾ ಬಲಕೊಂಡು ಅಪರಿಗಣ್ಯ ಪೌರುಷಕಿಂನುಪಮೆಯಿಲ್ಲವೆಂದು ಸರ್ವ ಖಪತಿವರರು ಪೊಗಳುತಿರಲು ತ್ರಿಪುರವೈರಿಯಂತೆ ಮೆರೆದ 8 ಅಂಧ ನೃಪನ ಮಾತ ಕೇಳಿ ಇಂದ್ರಪ್ರಸ್ಥ ಪುರಕೆ ರಾಜ ನೆಂದು ನಿಂದು ಮಗಧಾದಿಗಳ ನೊಂದೆ ನಿಮಿಷದಿ ಕೊಂದು ರಾಜಸೂಯಮೇಧದಿಂದ ಸಕಲಯಜ್ಞೇಶಗೋ- ಕೊಂಡ 9 ದ್ಯೂತ ನೆವದಿ ಸಕಲ ರಾಜ್ಯ ಸೋತು ವನಕೆ ಪೋಗಿ ಲಕ್ಷ್ಮೀ- ನಾಥ ಕರುಣ ಬಲದಿಂದ ಸುರವ್ರಾತವಡಗಿಸಿ ಭೂತನಾಥನೋರದಿ ಬಹಳ ಖ್ಯಾತ ಕೀಚಕಾದಿಗಳನು ಘಾತಿಸಿ ಗಂಧರ್ವನೆಂದಜ್ಞಾತವಾಸ ಕಳದ ಧೀರ 10 ದುರುಳ ಕೌರವರನು ಗದೆಯ ತಿರುಹಿ ಕೆಡಹಿ ಧರಣಿಭರವ ಸುರಪಸೂನು ಸಹಿತಲ್ಲಿಳುಹಿ ಪರಮ ಹರುಷದಿ ಹರಿಯ ನೇಮದಿಂದ ನಾಗಪುರವನಾಳಿ ವಿಷ್ಣುಭಕ್ತಿ ಸುಜನ ತತಿಯ ಪೊರೆದು ಪದ್ಮಜಾತನಾಹ11 ದುಷ್ಟವೈರಿ ಜನರ ಗೆದ್ದು ಅಷ್ಟ ಭಾಗ್ಯ ಸಹಿತ ದೇಹ ಪುಷ್ಟಿ ಜ್ಞಾನ ದೃಷ್ಟಿಗಳನು ಕೊಟ್ಟು ಕರುಣಿಪಾ ಸೃಷ್ಟಿಗೊಡೆಯ ಸರ್ಪರಾಜ ಬೆಟ್ಟದಲ್ಲಿ ನಿಂದು ಭಕ್ತ- ಭೀಷ್ಟವರದನೊಲಿಪ ತೆರದಿ ಸುಷ್ಠುಪ್ರೇಮವಿಟ್ಟು ಕಾಯೊ 12
--------------
ತುಪಾಕಿ ವೆಂಕಟರಮಣಾಚಾರ್ಯ
*ಸುದಿನ ದುರ್ದಿನಮೆಂಬುದವರವರ ಸಂಪ್ರಾಪ್ತಿ ಸುದಿನಮದು ಜನಿಸಿದೊಡೆ ದುರ್ದಿನಮದಳಿಯಲ್ಕೆ ವಿಧಿಲೀಲೆ ಜನನಮರಣಂಗಳೈ ರಕ್ತಾಕ್ಷಿ ಮಧುಮಾಸ ಸಿತಪಕ್ಷದ ಸದಮಲಾನ್ವಿತಮಪ್ಪ ತಾರಗೆಪುನರ್ವಸೂ ವಿಧುವಾರ ಪೂರ್ವಾಹ್ನಮಾಸೂರಿ ನಾಮಮೆದಿ ಮಾಂಗಿರಿಯ ರಂಗಪದಮಂ 1 ಬಂಧುಜನÀಮಿತ್ರರ್ಗೆ ದುರ್ದಾಂತ ದುರ್ದಿನಂ ಸಂದಮಾಂಗಿರಿರಂಗಪದನಳಿನಮಂ ಸೇರ್ದ ಸಿಂಧುಪುತ್ರಂ ಬಳಗದಾಸೂರಿಯಾತ್ಮಮದು ಚಿರಶಾಂತಿಯಂಪಡೆಯಲೈ ಚೆಂದವಹ ಕಮಲಮದು ಕಮನೀಯ ಕಾಂತಿಯಿಂ ದಂದವಡೆದಿರ್ಪುದೇ ನಿಡುಗಾಲಮದು ಬಳಿಕ ಕುಂದದಿರದೇಂ ನಿಜದೆಯಾದರ್ಶಜೀವನಂ ಶ್ರೀರಕ್ಷೆಯಲ್ತೆ ನಮಗೆ 2 ವರಮಹಾಲೆಕ್ಕಿಗರ ಶಾಖೆಯೊಳ್ ಪರಿಣತಿಯ ಕರಣಿಕಂ ತಾನಾಗಿ ವಿಶ್ರಾಮ ಜೀವನದೆ ಸರಸಕಾವ್ಯಾದಿ ಪದರಚನೆಯಿಂ ಗಮಕಿಗಳ ತಣಿಸಿಯಾನಂದಮುಣಿಸಿ ಸಿರಿಲೋಲ ಸುವಿಲಾಸ ಗೋಕರ್ಣಮಹಿಮೆಯಂ ಭರತಮಾರುತಿಭಕ್ತಿಯಾಳ್ವಾರುವೈಭವಂ ಸರಿಸದಲಿ ಕಾವ್ಯಪಂಚಕ ರಚಿಸಿ ಪಂಚತ್ವವೈದಿದರ್ ಧನ್ಯರಲ್ತೆ 3 ಕಿವಿಚುರುಕು ನಿಡುಮೂಗು ದೃಷ್ಟಿಪಾಟವಹೊಳಪು ಸವಿನೆನಪಿನಂಗಳಂ ಬೇವುಬೆಲ್ಲದಪದರು ರವಿಯೆಡೆಗೆ ನಿಟ್ಟಯಿಸಿ ಧೀರ್ಘಾಯುವೆಂದೆನಿಸಿ, ಶರದಶಕಗಳ ಕಳೆದನು ಇವಗೆ ಮಣಿವುದೆ ಬೆಲ್ಲ ಹರಿಚಿಂತನೆಯಬಲ್ಲ ದಿವರಾತ್ರಿ ಸಂತೃಪ್ತಿ ಮಾಳ್ಪಕಾರ್ಯಂಗಳಲಿ ತವಕದಿಂ ಸುತ್ತುವರೆದಿರ್ಪರೈ ಹಿರಿತನದ ನಮ್ರತೆಗೆ ಬೆರಗಾಗುತ 4 ಸುತರತ್ನರೀರ್ವರಂ ಸುತೆಯರಂ ಸೊಸೆಯರಂ ಹಿತಮಪ್ಪಮೊಮ್ಮಂದಿರಂ ನೆಂಟರಿಷ್ಟರಂ ಮಿತವಚನದಿಂ ನಲಿಸಿ ಮನದಳಲಿಗೆಡೆಮಾಡಿ ವೈಕುಂಠಮಂ ಸೇರಿದೈ ಶತಪತ್ರಲೋಚನದ ಪರಿಚರ್ಯೆಯಂ ಗೈದು ಶತವರುಷಮಂ ತುಂಬುಜೀವನವ ತಾಳ್ದೆ ಸ ತ್ಪಥವಿಡಿದು ನಿನಗಾತ್ಮಶಾಂತಿಯುಂಟಾಗಲೈ ತವಕುಲಂ ವರ್ಧಿಸಿರಲೈ5
--------------
ಪರಿಶಿಷ್ಟಂ
ಅಂಕಿತ ರಹಿತ ಹಾಡುಗಳು ತುಳಸಿಯ ವೃಕ್ಷಗಳ ದಳದಳಗಳ ಮೇಲೆನೆಲಸಿಹನು ಹರಿಯು ಮುದದಿಂದಮುದದಿ ತುಲಸಿಯ ಪೂಜೆಗಳಮಾಡಬೇಕು ಸುಜನರು 1 ತುಲಸಿಯ ಮೂಲದೆ ನದಿಗಳುತುಲಸಿಯ ದಳದೊಳೆ ಶ್ರೀಹರಿಯುತುಲಸಿಯ ಶಾಖೆಯೊಳೆ ಸುರರೆಲ್ಲಾನೆಲೆಸಿಹರು ಶ್ರೀತುಲಸಿಯಮಹಿಮೆಗೆಣೆಯುಂಟೆ 2 ವೃಂದಾವನ ತುಲಸಿಗೆಒಂದು ಪ್ರದಕ್ಷಿಣವಚಂದದಿ ರಚಿಸಿದವರಿಗೆಭೂಮಿಯ ಸುತ್ತಿ ಬಂದಂಥಾಪುಣ್ಯ ದೊರೆವುದು 3 ಜಲದೊಳು ಶೋಧಿಸಿದತುಲಸಿ ದಳವನೆ ಹಾಕಿಆ ಜಲವನು ಶಿರದಿ ತಳಿದರೆತಳಿದರೆ ಗಂಗಾದಿಸಲಿಲದಿ ಮಿಂದ ಸುಫಲವು4 ಭೌಮ ಭಾರ್ಗವ ವಾರದಿಶ್ರೀ ಮಹಾಲಕ್ಷುಮಿಯುನೇಮದಿ ತುಲಸಿ ವನದೊಳುವನದೊಳಗಿರುವಳು ಧೀಮಂತರುಕೊಯ್ಯರದರಿಂದ 5 ಇಳೆಯೊಳಗುಳ್ಳಂಥಾಹಲವು ತೀರ್ಥಗಳಿಹವುತುಲಸಿಯ ಮೂಲದೆಡೆಯಲಿಎಡೆಯಲಿ ತನ್ಮøತ್ತಿಕೆಯತಳೆವುದು ಬಲ್ಲ ಸುಜನರು 6 ಅರುಣೋದಯದಲೆದ್ದುಸಿರಿ ತುಲಸಿಯ ದರುಶನವವಿರಚಿಪುದು ಬಲ್ಲ ಸುಜನರುಸುಜನರು ಪಾತಕಹರಿವುದು ಹರಿಯ ಕೃಪೆಯಿಂದಾ 7 ಸಾರಿಸಿ ರಂಗವಲಿಯನೇರಗೈದಿಕ್ಕಿದನಾರಿಯರಿಗೈದೆತನವನುತನವನು ವೃಂದಾವನಶ್ರೀರಮಣಿಯಿತ್ತು ಪೊರೆವಳು 8 ಮುತ್ತೈದೆತನವನುಪುತ್ರಸಂತಾನವನಿತ್ಯ ಸೇವೆಯನು ರಚಿಸಲುರಚಿಸಲು ತುಲಸೀದೇವಿಇತ್ತು ರಕ್ಷಿಪಳು ಕೃಪೆಯಿಂದಾ9
--------------
ಕೆಳದಿ ವೆಂಕಣ್ಣ ಕವಿ
ಅಥ ಹನುಮದ್ವ್ರತ ಕಥಾ ಸುಳಾದಿ ಧ್ರುವ ತಾಳ ವೃತವೆ ಉತ್ತಮ ವೃತವೆಂದು ಪೇಳಿಹರು ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು | ಸತತ ಅಧ್ಯಾತುಮ ಅನಂತ ವೃತವೆಂದು | ಕ್ಷಿತಿಯೊಳು ಈ ವೃತಕೆÀ ಸರಿಗಾಣೆನೊ | ಪತಿತ ಮಾನವರ ಉದ್ಧಾರಗೋಸುಗವಾಗಿ ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ | ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ | ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ | ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು | ಮತಿವಂತರು ಮನಕೆ ತಂದು ತಿಳಿದು | ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ | ಪತಿಭಕುತಿಯುಕುತಳಾದ ದ್ರೌಪದಿಯು | ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ | ಮಿತ ಜ್ಯಾನದಿಂದ ಚರಿತ ವ್ರತವೊ | ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ | ಚ್ಯುತನಾದ ರಾಮನುಮತಿವಾನ್ ಹನು | ಮಂತನ ಭಕುತಿಗೊಲಿದು ಮಾಡ್ಡ ವೃತವೊ | ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ | ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ | ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ | ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ 1 ಮಟ್ಟತಾಳ ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು | ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ | ಮೇಣು ಭಕುತಿಯಿಂದ ಙÁ್ಞನವಂತರೆ ನಿಮ್ಮಿಂ | ನಿತ್ಯ | ಧೇನಿಸುವೆವು ಹರಿಯಾ ಪುನೀತರ ಮಾಡುವಾ | ಕಾಣೋವನ್ಯ ವೃತವು ಆವುದುಪೇಳೆನಲು | ನಿತ್ಯ ಶೂದ್ರಾದಿ ನಾಲ್ಕು | ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ | ಏನು ಬೇಡಿದರೆ ತಡಿಯದೆ ಕೊಡುವುದೊ | ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು | ಪುತ್ರಾದಿಗಳೀವುದು ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ | ಮಾನನಿಧಿ ಸುತ ಸುಂದರ ವಿಠಲನ | ಧ್ಯಾನ ಧಾರಣವೀವ ಉತ್ತುಮಾಮಹವೃತವೊ 1 ರೂಪಕ ತಾಳ ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ | ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು | ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ | ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ | ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ | ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು | ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ | ಮುಂದೆ ಅಧ್ಯಯನ ಶ್ರುತಸಂಪನ್ನರಾದವರು | ಒಂದೊಂದು ವೇದ ಋಗು ಯಜು:ಸಾಮಾಥರ್ವಣ ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು | ಮಿಂದು ಹರಿಪದಜಲದಿ ಚತುರ ವೇದ ಘೋಷದಿ | ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ | ಎಂದೆಂಬುವ ಹರಿಕಥಾಮೃತ ಪಾನ ಮಾಡುವ | ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ | ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು | ಸುಂದರ ವಿಠಲಾತ್ಮಕ ವ್ಯಾಸದೇವನು | ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು 3 ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ | ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ | ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ | ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ | ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು | ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ | ಜೇಷ್ಟಾದಿಕೃಷ್ಣೇಯೊಡನೆ ಉತ್ಕøಷ್ಠ ಪೂಜೆಯ ಮಾಡೆ ಪರ ಮೇಷ್ಠಿ ಜನಕನು ತಾನು ತುಷ್ಟ ನಾಹೆ | ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ | ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ | ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ? ಧಿಟ್ಟತನದಲೆ ತಪವನೆಸಗಿ ಕಿರಿಟಯು | ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು | ತ್ಕøಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ | ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ | ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ | ಇಷ್ಟವೀವುದಕಾಗಿ ಬಂದಿಹನು ರಾಜಾಯು | ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ | ನಿಷ್ಠಿಯಿಂದಲಿ ಧರ್ಮತನಯ ನುಡಿದನು 4 ತ್ರಿವಿಡಿ ತಾಳ ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ | ನಮೊ ನಮೊ ನಮೊ ಎಂದು ಬಿನ್ನೈಸುವೆ | ಶ್ರಮ ಪರಿಹರವೃತವಾವುದದÀರ ಮಹಿಮೆ | ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ | ಕುಮತಿ ಪರಿಹರಿಸುವ ದೇವತೆ ಆರು ಉ | ತ್ತಮ ನಿಯಮ ಆವುದು ಪೂಜಾ ಕ್ರಮವು | ಶಮೆ ದಮೆವೀವ ನಿಯಮ ತಿಥಿ ಆವುದು | ರಮೆ ರಮಣನೆÉ ಆವ ಮಾಸದಲಿ ಮಾಡೋದು | ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ | ಗಮನವು ಎಮ್ಮಯ ಕಷ್ಟ ದೊರೋಡಿಸಲು | ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ | ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು | ಭ್ರಮಣ ಮತಿಯ ಕಳೆವ ಹನುಮಾನ್ ಹ ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು | ಆಮಮ ಪೇಳಲೇನೊ ಹನುಮದ್ವ್ರತವೋ | ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ | ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ | ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ | ತಾಮಸ ರೋಗ ನಿವರಣವಾಗುವದು | ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ? ಸೀಮೆಗಾಣದ ಅಭೀಷ್ಟಪ್ರದಾಯಕವೊ ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ ನುಮದ್ವ್ರತವನ್ನು ಉಪದೇಶಿಸಿ | ನೇಮದಿಂದಲೀ ವ್ರತವು ಮಾಡಿರೆನಲು ಕಾಮಿತಫಲವೀವಾ ವ್ರತದ ಮಹಿಮೆ ಆ | ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ | ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ ಹೇ ಮಹಿಷಿಯೆ ಇದೆನೆನ್ನಲಾಗಿ | ತಾಮರಸನಯನೆ ಶ್ರೀ ಹನುಮದ್ದೋರವನ್ನೆ | ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ | ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ | ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು ಕಾಮಿ ಜನರ ತೆರದಿಂದಲಿ ಅರ್ಜುನನು ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ ಆ ಮುದದ ದೋರವನು ಹರಿದು ಬಿಸಾಟಲು ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ | ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು | ಪರಿಯಂತ | ರಾಮ ಮನೊರಮನು ಇನಿತು ನುಡಿಯೆ | ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು | ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು 5 ಧ್ರುವ ತಾಳ ಕೇಳಯ್ಯಾ ಧರ್ಮರಾಜ ಆಲಸ ಮಾಡದೆ | ಪೇಳುವೆ ನಿನಗೊಂದು ಪುರಾತನ ಕಥೆಯು | ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು | ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ ನಿತ್ಯ ಲಕ್ಷ್ಮಣನೊಡಗೂಡಿ | ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ ಹಾಳ ಮತಿಯುಳ್ಳ ವಾಯುಜ ಮಾಡಿಸೆ | ಮಾಸ ಮಳೆಗಾಲವು ವಾಸ ಮಾಡ್ಡ | ಕಾಲದಲಿ ಹನುಮನು ರಾಮದೇವಗೆ ನಮಿಸಿ | ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ | ಬಾಲನ ಬಿನ್ನಪ ಮನಕೆ ತರಲು | ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ | ಕಾಲ ಜನನದಲಿ ಇಂದ್ರನಿಂದಲಿ ಎನ್ನ ಮೇಲಾದ ವಜ್ರಾಯುಧದಿಂದ ಹನುಘಾತಿಸಲು ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ | ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ | ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು | ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ | ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ | ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ | ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ | ಲೋಲನ ಸಖನಾದ ವಾಯುದೇವನು ಎನ್ನ | ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ | ಕಾಲನಾಮಕ ಭಗವಾನಿಚ್ಛೆಯಂತ ತೃಟಿ | ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ | ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ | ಕಾಲಲವದಲ್ಲಿ ಕೆಡಹೆನೆನಲು ಆ | ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ | ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ | ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ | ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ | ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು | ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ | ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ | ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು | ತಾಳ ಮ್ಯಾಳರೊಡನೆ ವರವ ನೀಡಿ ಪೋದರು | ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ | ಪೇಳೆ ಸುಂದರ ವಿಠಲ ರಘುರಾಮನು ನಸುನಗೆ | ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು 6 ಮಟ್ಟತಾಳ ಭಕುತ ವತ್ಸಲ ನೀನು ಭಕುತರಿಚ್ಛವ ನೀನು | ಭಕುತ ಭಾಂಧವ ನೀನು ಭಕುತರೊಡಿಯ ನೀನು | ಭಕುತ ಪಾಲಕನೆಂಬ ಬಿರುದುಳ್ಳವ ನೀನು | ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು | ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ | ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು | ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು | ಭಕುತರ ಮನದಿಂಗಿತ ತಿಳಿಯದವನೆ ನೀನು | ಅಖಿಳ ಬ್ರಹ್ಮಾಂಡÀರಸನೆ ನಮೊ ನಮೊ ನಮೊ ನಮೊ | ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು | ಭಕುತರು ನಿನ್ನಿಂದಲೆ ಕೀರ್ತಿವಂತರÀಹರು | ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ | ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ | ಮಾಳ್ಪದು ನಿಜವಾಗೆ | ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ | ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ | ಭಕುತ ಹನುಮಂತ ಇನಿತು ವಿಙÁ್ಞಪಿಸಿ ನಿಲಲು | ಪ್ರಕಟಿತ ಅಶರೀರ ವಾಕ್ಯವು ಬಿಡದಲೆ | ಸಕಲ ನುಡಿ ಹನುಮಾ ಸತ್ಯನಾಡಿದನೆನಲು | ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ 7 ಝಂಪಿತಾಳ ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ | ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ | ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ | ದಶ ಗ್ರಂಥಿüಯುತ ಹರಿದ್ರಾದೋರಗಳಲಿ | ಭಾಸುರಾಮತಿವೀವ ಹನುಮನಾವ್ಹಾನಿಸಿ | ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ | ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ | ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ | ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” | ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ | ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು | ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ | ಮೀಸಲಾ ಮನದಿ ಈ ಸತ್ಕಥೆಯನು ಕೇಳಿ | ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ | ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ | ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ | ತೋಷದಲಿ ವಿಭೀಷಣ ಶ್ರೀರಾಮನಾಙÉ್ಞಯಿಂ ಮಾಡ್ಡು | ದೇಶಲಂಕೆಯ ರಾಜ್ಯವನು ಪಡೆದನು | ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ | ಲೇಸುವಿಶ್ರುತವಾದಿತೈ ಹನುಮದ್ವ್ರತವೂ | ಪರಿಯಂತ ಮಾಡ್ಡುದ ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ | “ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆÀಯಲಿ ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ | ಸ್ತ್ರೀಸಹಿತ ಅನುಜರೊಡನೇ ಈ ವ್ರತವನು | ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ | ಕೋಶ ಭಾಂಡಾರಪ್ರಾಪ್ತಿಯಾಗುವದು | ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ | ಆ ಸುಂದರ ವಿಠಲನ ಭಕುತರು ಮುದಭರಿತರಾಗೆ 8 ರೂಪತಾಳ ರವಿಯು ವೃಶ್ಚಿಕ ರಾಶಿಗೆ ಬರಲಾಗಿ | ಸವೆಯಾದ ಪದವೀವ ವ್ರತವಮಾಡುವದಕ್ಕೆ | ಕವಳಾ ಅಜ್ಞಾನಾಖ್ಯ ರಾತ್ರಿಕಳೆದು | ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು | ಕವಿವ್ಯಾಸರ ಮುಂದೆ ಮಾಡಿ ಧರ್ಮಜನು | ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ | ಹವಿಷಾದಿ ದ್ರÀ್ರವ್ಯಗಳಲಿ ಹರಿಯಚಿಂತಿಸಿ ಮಾ | ಧವÀನಾಜ್ಞೆಯಂತೆ ಉದ್ಯಾಪನವಂಗೈದು | ಕವ್ಯವಾಹನನಲ್ಲಿ ಮೂಲಮಂತ್ರದಿಂದ | ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ | ನವಭಕುತಿಯಲಿ ಹನುಮಂತನ ವ್ರತಾಚರಿಸಲು | ಹವಣಿಸಿ ಸಂವತ್ಸರವು ಪೋಗಲು ಪಾಂಡವರು | ಬವರದಲ್ಲಿ ಕೌರವರಗೆ
--------------
ಸುಂದರವಿಠಲ
ಅದ್ಭುತ ಅದ್ಭುತ ಪರಮಾದ್ಭುತನೆ ಪ ಮಧ್ವರ ಚರಣದಿ ಬಿದ್ದ ಜನರಪರಿ ಶುದ್ಧಗೈದು ಸುಖ ಸಿದ್ಧಿಗೊಳಿಪ ಹರಿ ಅ.ಪ ಅನವದ್ಯ ಪರಾತ್ಪರ ಶುದ್ಧ ಸುಖಾತ್ಮಕ ಕದ್ದನೆ ಬೆಣ್ಣೆಯನು ಮಧ್ವರ ದೇವನು ಪದ್ಮಾಲಯ ಪತಿ ಸಿದ್ಧಿ ಸುವಂದಿತ ಕದ್ದನೆ ಕನ್ಯೆಯನು 1 ಮೇದಿನಿ ತಂದವ ಮೇದಿನಿ ಅಳಿಯನೆ ವೇದವ ತಂದವ ವೇದಸು ಬÉೂೀಧಕ ಬುದ್ಧನು ಆಗುತ ವೇದವ ನುಳುಹಿದನೆ 2 ಸತ್ಯವತೀ ಸುತ ಸತ್ಯನ ಸತ್ಯನು ಬತ್ತಲೆ ನಿಲ್ಲುತ ಸತಿಯರ ಕೆಡಸಿದನೆ ಕತ್ತಲೆ ಕಾಣದ ಉತ್ತುಮ ದೇವನು ಮಿಥ್ಯಾಜ್ಞಾನವ ಬಿತ್ತಿದನೆ 3 ಅನ್ನಾದನ್ನನು ಅನ್ನದ ಬೃಹತೀ ಅನ್ನನು ಸತಿಯರ ಅನ್ನವ ಬೇಡಿದನೆ ಉಣ್ಣದೆ ರಾಜನ ಅನ್ನವ ವಿದುರನ ಅನ್ನವ ನುಂಡನು ಸಣ್ಣವನೆನ್ನದಲೆ 4 ನಿಂದೆಯ ಸುರಿಸಿರೆ ನಂದವ ನೀಡಿದ ವಂದಿಸಿ ರಾಜ್ಯವ ಮುಂದಿಡೆ ಜರಿದವನೆ 5 ಅಣ್ಣನ ಕೊಂದು ತಮ್ಮನ ಸಲಹಿದ ಸಣ್ಣನು ತಮ್ಮನ ಅಣ್ಣನ ಮಾಡಿದ ಅಣ್ಣ ತಮ್ಮಂದಿರ ನುಣ್ಣಗೆ ಸವರಿದ ಅಗಣ್ಯ ಮಹಿಮ ಮೈಗಣ್ಣಗೆ ವಲಿದಿಹನೆ 6 ಭಾರೀ ಗಿರಿಧರ ನಾರಿಯು ಆದನು ಮಾರನ ಪಡೆದವ ನಾರೇರಿ ಗೊಲಿದನೆ ನಾರಿಯು ಮೊರೆಯಿಡೆ ಸೀರೆಯ ಕರೆದವ ಜಾರನು ಎನಿಸುತ ಶೀರೆಯ ಚೋರನೆ 7 ಇಲ್ಲಿಹೆ ಅಲ್ಲಿಹೆ ಎಲ್ಲಾಕಡೆಯಿಹ ಎಲ್ಲರ ಒಳಗಿಹ ಎಲ್ಲರ ಹೊರಗಿಹ ಎಲ್ಲವ ಬಲ್ಲನು ಬಲ್ಲ ವರಿಲ್ಲವೆ 8 ಅಣುಕಿವÀ ಅಣುತಮ ಘನಕಿವ ಘನತಮ ಅಣು ಘನ ಮಾಡುವ ಘನ ಅಣುಮಾಡುವ ಅಣುವಲಿ ಅಡಗಿಪ ಘನವನು ಬಲ ಬಲ ತೃಣ ಸಹ ಚಲಿಸದು ಚಿನುಮಯ ನಿಲ್ಲದೆ 9 ಜಾಗರ ಸ್ವಪ್ನ ಸುಷುಪ್ತಿಗಳೆಲ್ಲವ ಆಗಿಸಿ ಕಾಯುವ ಯೋಗಸು ಭೋಕ್ತನು ಬೀಗರ ಮನೆಯಲಿ ಸಾಗಿಸಿ ಯಂಜಲ ತೇಗಿದ ತಿನ್ನುತ ಶಾಖವ ನಿಜಕರುಣಿ 10 ಲೋಕವ ಸೃಜಿಸುವ ಲೋಕವ ನಳಿಸುವ ಲೋಕನು ಪಾಲಕ ಲೋಕ ವಿಲಕ್ಷಣನೆ ನಾಕರ ನಾಯಕ ನಾಕಗತಿ ಪ್ರದ ಶೋಕವಿದೂರಗೆ ತಾಕಿತು ಕೊಡಲಿ ಬತ 11 ಎಲ್ಲಾ ನಾಮವು ಇವನದೆ ಸರಿಸರಿ ಎಲ್ಲಾ ರೂಪವು ಕೂಡ್ರವ ದಿವನಿಗೆ ಎಲ್ಲಾ ಚೇತನ ಜಡದಿಂ ಭಿನ್ನನು ಎಲ್ಲಾ ಕಾಲದಿ ಒಂದೇ ಸಮನಿಹ 12 ಎಲ್ಲಾ ರೂಪಗಳೊಂದೇ ಸಮ ಬತ ಎಲ್ಲಾ ರೂಪದನಂತ ಗುಣಂಗಳು ಎಲ್ಲಾ ರೂಪವು ನಿತ್ಯಸು ಪೂರ್ಣವು ಎಲ್ಲಾ ಮಹಿಮೆಯ ಯಾರು ಕಾಣರು 13 ಜೀವರ ಬಿಂಬನು ಜೀವನ ಸಹವಿಹ ಜೀವರಿ ಗುಣಿಸುವ ಸುಖ ದುಃಖಂಗಳ ಸಾರ ಸುಭೋಕ್ತನು ಜೀವರಿ ಗಲ್ಲವೆ ಕರ್ಮದ ಲೇಪವು 14 ಅಗಣಿತ ಮಹಿಮನು ನಗೆಮೊಗ ಶ್ರೀ ಕೃಷ್ಣವಿಠಲ ಪರಾತ್ಪರ ಸಿಗುವನು ಭಕ್ತಿಗೆ ಸರಿಮಿಗಿಲಿಲ್ಲವೆ ಬಗೆಯನೆ ದೋಷವ ಶರಣೆಂದವರ15
--------------
ಕೃಷ್ಣವಿಠಲದಾಸರು
ಅರಿತುಕೊಳ್ಳಿರೋ ನಿಮ್ಮ ಆತ್ಮವಸ್ತುವನುಪರಮ ಗುರು ಕರುಣದಿ ನೀವು ನಿಮ್ಮನು ಪ ಬಿದಿಗೆ ಚಂದ್ರನು ಆವುದೆಂದು ಕೇಳಲಿಕೆಅದಕೋ ಶಾಖಾಗ್ರ ಎಂದೆನಲು ಅರಿದಂತೆವಿಧಿಸಿ ಗುರುಮುಖದಿ ವಿವರಿಸಿ ಕಂಡು ಅರಿದುಸದಯಲಾನಂದ ತಾವೆಂದು ಭಾವಿಪುದು 1 ಊರು ಆವುದು ಎಂದು ಕೇಳುತಿರಲಿಕೆಊರದಕೋ ಗುಡ್ಡದ ಮೇಲೆನಲು ಅರಿದಂತೆಧೀರ ಗುರು ಮುಖದಿ ದಿಟ್ಟಿಸಿ ಕಂಡು ಅರಿತುಸಾರ ಸಂಪತ್ತು ತಾವೆಂದು ಧ್ಯಾನಿಪುದು 2 ಅರಸು ಅವನು ಎಂದು ಕೇಳುತಿರಲಿಕೆಅರಸ ಅಲ್ಲಿಹನೆಂದು ನಡೆವವನೆ ಅರಿತಂತೆಪರಮ ಗುರು ದಯದಿ ಪಾಟಿಸಿ ಕಂಡು ಅರಿದುಪರಮ ಗುರು ಚಿದಾನಂದ ತಾವೆಂದು ಭಾವಿಪುದು 3
--------------
ಚಿದಾನಂದ ಅವಧೂತರು
ಅರೋಗಣೆಯ ಮಾಡೋ ವಾರಿಜರಮಣಾ| ಸಾರಿದವರಿಗೆ ಅಭಯವನೀವಕರುಣಾ ಪ ಪೊಂಬ್ಹರಿವಾಣದಿ ರನ್ನಬಟ್ಟಲುಗಳು| ಅಂಬುಜಾನನರಿಸಿ ಲಕುಮಿಯವೆರಸಿ 1 ಪರಿಪರಿ ಮಾವಿನ ತನಿವಣ್ಗಳ ನೋಡಿ| ಮೆರೆವ ಸುದ್ರಾಕ್ಷ ದಾಳಿಂಬರ ಸವಿಯಾ 2 ಶಾಲ್ಯೋದನ್ನದಿ ಸುಘೃತ ಪರಿಪರಿಯ ವಿ| ಶಾಲ ಶಾಖಂಗಳ ಸವಿಯನೆ ಕೊಳುತಾ 3 ಪಂಚ ಭಕ್ಷ್ಯವು ಕೆನೆವಾಲು ಸೀಕರಣಿಯು| ಮುಂಚೆ ಶರ್ಕರದ ಪಾಯಸ ಪರಿಪರಿಯ 4 ದಧ್ಯೋದನ್ನದಲುಹಗಾಯಿ ಸ್ವಾದಿಸುತಾ| ಸದ್ವಿದ್ಯದ ಮನ ಕಲ್ಪತರುವೆಲ್ಲಾ 5 ಪತ್ರಸುಮನ ಫಲತೋಯಭಕ್ತರುಕೊಟ್ಟ| ರರ್ಥಿಲಿ ಕೊಂಬೊ ದಯಾಳುತನದಲ್ಲಿ6 ತಂದೆ ಮಹೀಪತಿ ನಂದನ ಸಾರಥಿ| ಎಂದೆಂದು ಸ್ಮರಣೆಗೊದಗಿ ಮುದ್ದು ಮುಖದಿ7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರೋಗಣೆ ಮಾಡಮ್ಮ ಮಂಗಳಗೌರಿ ಬೇಡಿಕೊಂಬೆನೆ ನಿನಗೆ ಬೇಡಿದಡಿಗೆ ಎಡೆ ಮಾಡಿ ತಂದಿಟ್ಟಿಹೆ ಜೋಡಿಸಿ ನಿನಗೆ ಕೈ ಮುಗಿವೆನೆ ಮಹಾತಾಯೆ ಪ ನಂದಿವಾಹನನರ್ಧಾಂಗಿಯ ಪೂಜಿಸಿ ಗಂಧಕುಂಕುಮದಿಂದ ತಂದು ಕಸ್ತೂರಿ ಕಮಲದ ಪುಷ್ಪಗಳುಡಿ ತುಂಬಿ ನೈವೇದ್ಯವ ತಂದಿರಿಸುವೆ ತಾಯೆ 1 ಅಚ್ಚ ಮುತ್ತಿನ ಹರಿವಾಣದಿ ಮಾಲತಿ ಬಟ್ಟ್ಟಿವಿ ಗೌಲಿಗಳು ಅಷ್ಟಗುಳ್ಳವು ಶಾವಿಗೆ ಪರಡಿ ಪಾಯಸ ಭಕ್ಷ ಎಣ್ಣೋರಿಗೆ ಭಾರಿಬಟ್ಟಲು ತುಪ್ಪ 2 ಮಂಡಿಗೆ ಚೂರ್ಮವು ಬುಂದ್ಯ ಬೀಸೋರಿಗೆ ದುಂಡುಗುಳ್ಳೋರಿಗೆಯು ಚೆಂದವಾಗಿದ್ದ ಚಕ್ಕುಲಿ ಕರ್ಜಿಕಾಯ್ಗಳು ಅಂದವಾದ ಕಾಯಿರಸ ಶಾಖ ಪಾಕವು 3 ಸಣ್ಣ ಅಕ್ಕಿಯ ಶಾಲ್ಯಾನ್ನಕೊಪ್ಪುವ ತವ್ವೆ ಇನ್ನು ದಧ್ಯನ್ನಗಳು ಸನ್ಮತವಾಗಿದ್ದ ಶಾವಿಗೆಫೇಣಿ ಸಕ್ಕರೆ ರುಬ್ಬಿದ ಆಂಬೊಡೆ ರುಚಿಯಾದ ಕಲಸನ್ನ 4 ಘೃತ ಸೀಕರ್ಣೆ ಕಾಯ್ಹಾಲು ಹೊಯ್ಗಡುವನಿಟ್ಟು ಸಾರು ಸಾಂಬಾರ ಚಟ್ಟಣಿ ಕೋಸಂಬರಿ ನೀರೆ ನಿನಗೆ ಪನ್ನೀರು ತಂದಿರಿಸುವೆ 5 ದೇವಿ ನಿನ್ನ ಮನೋಭಾವ ತಿಳಿದು ನಾ ಭೀಮೇಶಕೃಷ್ಣನಿಗೆ ಬ್ಯಾಗ ಸಮರ್ಪಣೆ ಮಾಡಲು ಮಹಾದೇವ ಸ್ವಾದ ಸವಿದಾಸುಖದಿಂದಡ್ವಿಳ್ಯವ ಕೊಳ್ಳೆ 6
--------------
ಹರಪನಹಳ್ಳಿಭೀಮವ್ವ
ಆರೋಗಣೆಯ ಮಾಡೋ ಮುಕುಂದಾ ಪ ಆರೋಗಣೆಯ ಮಾಡೋ ವಾರಿಜರಮಣಾ ಸಾರಿದವರಿಗೆ ಭಯನಿವಾಕರದಿ 1 ಪೊಂಬ್ಹರಿವಾಣದಿರನ್ನ ಬಟ್ಟಲುಗಳು ಅಂಬುಜಾನನಸಿರಿ ಲಕುಮಿಯವೇರಿಸಿ 2 ಶಾಲ್ಯೋದನಸೂಪಘೃತ ಪರಿಪರಿಯಾ ಶಾಲ್ಯಾಶಾಖಂಗಳಸವಿಯನೆ ಕೊಳುತಾ3 ಪಂಚಭಕ್ಷವು ಕೆನೆಹಾಲು ಸೀಖರಿಣಿಯಾ ಮುಂಚೆ ಪಾಯಸಪರಿಪರಿಶರ್ಕರದಲಿ4 ದದ್ಯೋದನದಲುಪಗಾಯಿಸ್ವಾದಿಸುತ ದಮನ ಕಲ್ಪಿತರುವೆಲ್ಲಾ5 ಪತ್ರಸುಮನತೋಯ ಭಕ್ತರು ಕೊಟ್ಟು ದರ್ಥಲಿ ಕೊಂಬ ದಯಾಳುತನದಲಿ6 ತಂದೆ ಮಹಿಪತಿ ನಂದನ ಸಾರಥಿ ಎಂದೆಂದು ಸ್ಮರಣೆ ಗೊದಗಿ ಮುದ್ದು ಮುಖದಿ7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವ ಜನ್ಮದ ಪುಣ್ಯ ಫಲಿಸಿತೆನಗೆ | ಈ ಉಡುಪಿ ಕೃಷ್ಣನ ಪ್ರಸಾದ ಭುಂಜಿಸಿದೆ ಪ ಭವರಾಸಿಗಳು ಹಾರಿ ಬಯಲಾದವು| ನವವಿಧ ಭಕುತಿಯಾ ಮಾರ್ಗವನೆ ತಿಳಿದು ಮಾ | ಪರಿ ಶುದ್ಧನಾದೆ ಗುರು ಕರುಣದಲೀ1 ಶಾಖಫಲ ಕೈಕೊಳಲು ಅರಿಷಡ್ವರ್ಗಗಳಿಂದ | ಕಾಕೆಟ್ಟು ಪೋಗುವವು ಏನೆಂಬೆ ಸೋಜಿಗವು | ಲೋಕದೊಳಗೆ ನಮ್ಮ ಕುಲಗೋತ್ರಜರೆ ಧನ್ಯ 2 ಸೂಪವನು ಉಂಡರೆ ಮುಂದಟ್ಟಿ ಬರುತ್ತಿಪ್ಪ | ಸೋಜಿಗವು ಬಲು ತೀವ್ರದಲಿ 3 ಭಕ್ಷ್ಯಗಳು ಮೆಲಲಾಗಿ ಭಕ್ತಿ ಪುಟ್ಟುವದಯ್ಯಾ | ಅಕ್ಷಯವಾಗುವದು ಇದ್ದ ಪುಣ್ಯ | ಮಾಳ್ಪ ಮನಸು ಪುಟ್ಟಿತು ನೋಡಾ4 ಓದನವು ಉದರದಲಿ ತುಂಬಲಾಕ್ಷಣದಲ್ಲಿ | ಜ್ಞಾನ ಬಂದೊದಗುವದು ಗುರು ಪೂರ್ಣ | ಬೋಧರಾ ಮತದಲ್ಲಿ ಲೋಲಾಡುವಾನಂದಾ 5 ದಧಿ ತಕ್ರ ಮೊದಲಾದ ವ್ಯಂಜನ ಉಣಲು | ಸತತ ದುರ್ವಿಷಯಕ್ಕೆ ಪೋಗದಲೆ ಆವಾಗ | ರತಿಪತಿಪಿತನ ಪದಸೇವೆಯೊಳಗಿಪ್ಪವೊ 6 ಕೃಷ್ಣ ಸಂದರುಶನ ಮೃಷ್ಟಾನ ಭೋಜನ | ಇಷ್ಟ ಸುಖ ಸೌಖ್ಯಕರ ಮತ್ತಾವÀಲ್ಲಿ ಕಾಣೆ | ಸೃಷ್ಟಿಗೊಡೆಯ ವಿಜಯವಿಠ್ಠಲನು ದಯವಾಗೆ 7
--------------
ವಿಜಯದಾಸ
ಇಂದರೆ ರಮಣಾ ಇಟ್ಟಾಂಗಿರಬೇಕು ಪ ಒಮ್ಮಿಗೆ ಕದಶನ ಶಾಖಾ ಆಹಾರವ ನೀಡುವನು ಒಮ್ಮಿಗೆ ಷೆಡ್ರಸದ್ದನ್ನವ ಸಾರುಣಿಸುವನು 1 ಒಮ್ಮಿಗೆ ಜೀರ್ಣ ಕಂಥಾಧಾರಿಯೆನಿಸುವನು| ಒಮ್ಮಿಗೆ ದಿವ್ಯಾಂಬರಗಳ ನುಡಿಸಿ ನೋಡುವನು 2 ಒಮ್ಮಿಗೆ ಧರಿಯಲಿ ತೋಳತಲೆದಿಂಬದಲಿಡುವಾ| ಒಮ್ಮಿಗೆ ಪರ್ಯಾಂಕಾಸನ ಸಂಪದ ಕೊಡುವಾ 3 ಒಮ್ಮಿಗೆ ಕವಡಿ ಲಾಭಕ ಕೃತ-ಕೃತ್ಯೆಯೆನಿಸುವನು ತಂದೆ ಮಹಿಪತಿ-ಕಂದಗ ಸಾರಿದ ನಿಜ ಖೂನಾ 4 ತಂದೆ ಮಹೀಪತಿ-ಕಂದಗ ಸಾರಿದ ನಿಜ ಖೂನಾ| ದ್ವಂದ್ವ ಗೆಲಿದು ಸ್ವಾನಂದದಲಿರುವವನೇ ಜಾಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಕಾದಶಿ ನಿರ್ಣಯ ಅನಲು [ಸಮನೆ] ಮನೆಗೆ ಪೇಳಬಂದ ಅನಾಥಬಂಧು ಹಯವದನ ಗೋವಿಂದ ಪ. ತನ್ನ ನಂಬಿದವರ ತಾಪತ್ರಯವಳಿದು ಉನ್ನಂತ ಪದವೀವ ದಿನತ್ರಯವನ್ನು 1 ವೃದ್ಧಿಮಾತ್ರ ಅರುಣೋದಯದ ಕೆಳಗೆ [ಶುದ್ಧಿದಂ] ಘಳಿಗೆ ಸಾಕುಯೆಂದು 2 ಅತಿವೃದ್ಧಿ ಒಂದುಘಳಿಗೆಯ ಕೆಳಗೆ ವಿಂ ಶತಿ [ಫಣಫಲ] ದೊಳಗೆ [ಶುದ್ಧಿ] ಬೇಕೆಂದು 3 ತಿಥಿ ವೃದ್ಧಿಆದಾಗೆ ಹತ್ತು [ಫಣಪಲ] ತಿಥಿಕ್ಷಯದಲ್ಲಿ ಅದರೊಳು [ಶುದ್ಧಿ] ಬೇಕೆಂದು 4 ಇಂದು ದಶಮಿ ಶಾಖವ್ರತವ ಮಾಡಿ ನೀವು ಒಂದು ಬಾರಿ ಭೋಜನ ಮಾಡಿರೊಯೆಂದು 5 ತಾಂಬೂಲಚರ್ವಣ ಸಲ್ಲ ಸ್ತ್ರೀಸಂಗ ಹಂಬಲವನ್ನು ನೀವು ಬಿಡಿರಿಯೆಂದು 6 ನಾಳೆ ಏಕಾದಶೀ ಉಪವಾಸ ಜಾಗರ ಆಲಸ್ಯ ಮಾಡದೆ ಆಯತಾಕ್ಷಗೆಯೆಂದು 7 ಫಲಹಾರವು ಸಲ್ಲ ಭೋಜನವು ಸಲ್ಲದು ಜಲಪಾನ ಸಲ್ಲ ಮೆಲಸಲ್ಲದೆಂದು 8 ನಾಲ್ಕುಹೊತ್ತಿನ ಆಹಾರವ ಬಿಡುವುದು ಹದಿ ಜಾಗರ ಮಾಡಿರೊಯೆಂದು 9 ಪೇಳ ಅರ್ಧದ್ವಾದಶಿಬಂದಾಗ ನೀವೆಲ್ಲ ಒಲುಮೆಯಿಂದ ಪಾರಣೆಯ ಮಾಡಿರೊಯೆಂದು10 ಇಂತು ತಿಥಿತ್ರಯ ಮಾಡುವ ಜನರನ್ನು ಸಂತತ ಪೊರೆವ ಶ್ರೀಕಾಂತ ಹಯವದನ 11
--------------
ವಾದಿರಾಜ
ಏನು ಮಾಡಿದರೇನು ನಾನಾ ಸಾಧನೆಗಳನು | ಜ್ಞಾನಿಗಳ ಕೂಡದನಕಾ ಮರುಳೇ ಪ ಸಕಲ ಸಾಮಗ್ರಿಯನು ತಂದಿರಲೇನು ಪಾ | ಕಕೆ ವಹ್ನಿ ಇಲ್ಲದನಕಾ ಮರುಳಾ 1 ಪ್ರಕಟವಾಗಿರಲು ನಯನಾದಿಂದ್ರಿಯಗಳಿಗೆ ಐಂ | ದ್ರಿಕ ಬೆಳಗವಿಲ್ಲದನಕಾ ಮರುಳೇ 2 ಹಸನ ಭೂಮಿಯ ಮಾಡಿ ಬೀಜ ಉಡಿಗಟ್ಟಿರಲು | ವಸೆದು ಮಳೆಯಾಗದನಕಾ ಮರುಳೇ 3 ಪ್ರಕಟಿಸಿದ ಅನ್ನ ಭಕ್ಷದಿ ಶಾಖಗಳಿರಲು | ಯಶವಾಜ್ಯ ಬಡಿಸದನಕಾ ಮರುಳೇ 4 ತುಂಬಿ ಕುಳಿತೇನು ದೊಡ್ಡವರೆಲ್ಲಾ ನಾವಿಯೊಳು | ಅಂಬಿಗನು ಬಾರದನಕಾ ಮರುಳೇ 5 ನಂಬಿ ಗುರು ಮಹಿಪತಿಸುತಸ್ವಾಮಿ ಶ್ರೀಚರಣ | ದಿಂಬವನು ಪಡೆಯದನಕಾ ಮರುಳೇ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು