ಒಟ್ಟು 6 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಿದರೇನು ಫಲವೊ ಪ ನೀನು ಮಾನಸ ವೃತ್ತಿ ತಿದ್ದುವತನಕ ಅ.ಪ ಪೂಜೆ ಮಾಡಿದರೇನು ತೇಜಸ್ವಿ ಇರಲೇನು ರಾಜಧಿರಾಜ ಸಂಪೂಜ್ಯನೆನಿಸಲೇನು ರಾಜತಾಸನದಲ್ಲಿ ಕುಳಿತರೂ ರಾಜಿಸದ ಮಾನಸದ ವೃತ್ತಿಯು ಜೂಜಿನಲಿ ಪಣ ಕಟ್ಟಿದಂತಿದೆ 1 ಭಾರಿ ಪಲ್ಲಕ್ಕಿಯ ಏರಿದ ಅನುಭವ ನೂರು ಜನರು ಸ್ತುತಿ ಕೇಳಿದ ಅನುಭವ ಕೀರುತಿಯ ಪರಮಾವಧಿಯನು ಸೇರಿದೆನು ನಾನಿನ್ನ ಕರುಣದಿ ತೂರುವಂದದಿ ತೂರುತಿಹುದೊ 2 ವರಗಳ ಕೊಟ್ಟಾಯ್ತು ಹಿರಿಯನೆಂದೆನಿಸ್ಯಾಯ್ತು ಅರಿತು ಶಾಸ್ತ್ರಾರ್ಥವ ಗುರುತನ ಪಡೆದಾಯ್ತು ಮನದಲಿ ತೋರುತಿಹುದೋ ಕರದಲಿರುವ ಪ್ರಸನ್ನನೇ ಹೃತ್ಸರಸಿಜದಿ ನೆಲಿಸೆಲೊ ನಿರಂತರ 3
--------------
ವಿದ್ಯಾಪ್ರಸನ್ನತೀರ್ಥರು
ಗೋವಿಂದ ಗೋವಿಂದ ಎನ್ನಲರಿಯದೆ - ವೃಥಾನೋವಿಂದ ಭಂಗವ ಪಡುವುದುಚಿತವೆ ? ಪ ಕ್ಷೀಣ ಶಾಸ್ತ್ರಾರ್ಥವನು ಪರಿಗ್ರಹಿಸಿ ನಿಖಿಲ ಕುರಿಕೋಣಗಳ ತಲೆಚೆಂಡ ಕುಟ್ಟಿಸುತಪ್ರಾಣ ಹತ್ಯವ ಮಾಳ್ಪುದಾವ ಸತ್ಕರ್ಮ - ನಾರಾ-ಯಣನ ನಾಮಸ್ಮರಣೆ ಮಾಡು ಮನವೆ 1 ಖಂಡವನು ಕೊಯ್ದು ಕೊಡಬೇಡ ದಳ್ಳುರಿಯಗ್ನಿಕುಂಡವನು ಹೊಕ್ಕು ಹೊರಡುವುದುಚಿತವೆಭಂಡರಂದದಿ ಬತ್ತಲೆಯೆ ಬರುವುದಾವಾಟಪುಂಡರೀಕಾಕ್ಷನ ನೆನೆ ಕಂಡ್ಯ ಮನವೆ 2 ಕುಟ್ಟಿಕೊಳ್ಳದಿರಿ ಜಟ್ಟಿ ಗುಂಡಿನಲಿ, ಶಸ್ತ್ರವನುಚಿಟ್ಟಿ ಕೊಳ್ಳದಿರಿ, ಬೆನ್ನಲಿ ಸಿಡಿಯನುಕಟ್ಟಿ ತೂಗಿಸಿಕೊಳ್ಳದಿರಿ ಕರಟಕದಂತೆಗುಟ್ಟಿನಲಿ ಗೋಪಾಲಕನ ಸ್ಮರಿಸು ಮರುಳೆ 3 ತೊಗಲ ಬಿಲ್ಲೆಗಳ ಕೊರಳಲ್ಲಿ ಕಟ್ಟಿಕೊಂಡುಹಗಲಿರುಳು ಅನ್ನಪಾನಕೆ ಹೋಗದೆಮೃಗವೈರಿಯಂತೇಕೆ ಕಿಸುಕೆಲೆವ ರಂಪಾಟಜಗದಾಧಿಪತಿಯ ನಾಮ ಸ್ಮರಿಸು ಮರುಳೆ 4 ಉತ್ತಮರು ಸುರೆಯನೀಂಟುವರೆ ತರಹರಿಸಿ ಮದೋ-ನ್ಮತ್ತರಾಗಿ ಅಸಭ್ಯ ಶಬ್ದವ ನುಡಿವರೆಸತ್ತ ಹೆಣದಂತೆ ಬಿದ್ದಿಹುದಾವ ನೀತಿ ಪುರು-ಷೋತ್ತಮನ ನಾಮ ಸ್ಮರಣೆಯ ಮಾಡು ಮನವೆ 5 ವೇದೋಕ್ತ ಪೂಜೆಯಲಿ ತೃಪ್ತಿಪಟ್ಟರೆ ನೀವುಅದರಿಂದ ಫಲವೇನು ಪೇಳಿರಯ್ಯನಾದವನು ಕೇಳ್ದ ಹರಿಣದಂದದಿ ಕೆಡದೆ ಮಧುಸೂದನನ ನಾಮ ಸ್ಮರಣೆಯ ಮಾಡು ಮರುಳೆ 6 ನಿಂದಾಪವಾದ ಘಟಿಸುವುದೈಸೆ ಇದರಿಂದಮುಂದೆ ಮುಕ್ತಿಯು ನಿಮಗೆ ಸಾಧ್ಯವಹುದೆತಂದೆ ಶ್ರೀ ಕಾಗಿನೆಲೆಯಾದಿಕೇಶವ ನಾಮಒಂದೇ ವೈಕುಂಠ ಪದವನೈದಿಪುದಯ್ಯ 7
--------------
ಕನಕದಾಸ
ಗೋವಿಂದ ವಿಠಲ ನಿನ್ನ ವಂದಿಸುವೆ ಸ್ವಾಮಿನೀ ಒಲಿದು ರಕ್ಷಿಸುವುದು ಜೀವಿ ಇವ ಬಹುಕಾಲಸಾವ ಸಾವ ನಿನ್ನ ಸೇವೆಯೊಳಗೆ ಇಟ್ಟು ಕಾವುದು ನಿರುತ ಪ. ಆವ ಈ ಯುಗದಲ್ಲಿ ನಿನ್ನ ವಿಷಯರಾಗಿಈವ ಸುಜನರು ಸ್ವಲ್ಪರು ತಾ ವ್ಯಾಪಿಸಿ ಇಹರುಅಸುರರೆ ಬಹುಳಾಗಿ ಆವದವಸ್ಥೆಗಳಲಿನೀ ವರವನು ಕಲಿಗೆ ಇತ್ತ ಕಾರಣ ಉಪಜೀವರ ವ್ಯಾಪಾರಈ ವಿಧದಲಿ ತಳೆದು ನಿನ್ನ ಹುಡುಕುತಲಿನ್ನುಜೀವಿ ಸಾತ್ವಿಕನು ಮೊರೆಯಿಡಲು ಬಿನ್ನಯಿಸಿದೆನೊ 1 ಏನು ಸಾಧನವನು ಖೂಳವನು ಕಂಡಿನ್ನುನೀನು ವಂದಿಸಿವೆಂದರೆ ಜ್ಞಾನಭಕುತಿ ಉಳ್ಳಜ್ಞಾನಿಗಳಲಿವಗೆ ನಾನು ಕಂಡೆನು ಭಕುತಿಯಕ್ಷೋಣಿಯಲಿ ಭಕುತಿ ನಿನ್ನಲಿ ಪುಟ್ಟಲಿಬಹುದುಜ್ಞಾನಿಗಳ ದುರ್ಲಭ ನೀನು ಒಲಿವುವ ಅವಗೆನಾನವರಲಿ ಭಕುತೀವೆ ನಾನಾಸಾಧನ ಫಲವಿದೆ ನೋಡಾ 2 ಪ್ರಾರ್ಥಿಸುವೆ ನಾ ನಿನ್ನ ಪ್ರೇರಣೆಯ ಅನುಸಾರಕೀರ್ತಿ ನಿನ್ನದು ಜಗದೊಳು ಪಾತ್ರ ಇವನೆಂದುನಿನ್ನ ಚಿತ್ತದಲಿ ಇತ್ತೆ ಸಾರ್ಥಕನ ಮಾಡು ಚೆಂ ಸ್ವಾ ?ಕೀರ್ತನೆಯ ಮಾಡಿಸು ನಿನ್ನ ಪರವಾಗಿ ನಿಜಸ್ಫೂರ್ತಿಸಖರಂಗ ಗೋಪಾಲವಿಠಲ ಶ್ರುತಿಶಾಸ್ತ್ರಾರ್ಥವನುಸಾರ ಪ್ರಾಪ್ತಿ ನೀನಾಗಿವಗೆ3
--------------
ಗೋಪಾಲದಾಸರು
ತತ್ವ ಚಿಂತನೆ ಮಧ್ಯಮತವೇ ದೊಡ್ಡದೆಂದು ತಿಳಿದು ಮನ ಶುದ್ಧಿಯಿಂದ ಮತವನನುಸರಿಸೋ ಪ ಶ್ರೀ ಮಧ್ವಮತದಲ್ಲಿ ಹರಿಯೇ ಸವೋತ್ತಮ ಭೇದಪಂಚ ಜಗತೆರಡು ಸತ್ಯ ಶ್ರೀ ಬ್ರಹ್ಮಾದಿಗಳೆಲ್ಲ ಹರಿಪರಿವಾರರು ತಾರತಮ್ಯವೇ ಸದಾ ಇವರಲ್ಲಿ 1 ಮುಕ್ತಿ ಎಂಬುದು ನಿಜಾನಂದದ ಅನುಭವ ಭಕ್ತಿಯೆಂಬುದೇ ದೊಡ್ಡ ಸಾಧನವು ಅಕ್ಷಾನುಮಾಗಮ ಮೂರು ಪ್ರಮಾಣ ಶ್ರೀ ಲಕ್ಷ್ಮೀಶನೇ ಸರ್ವಶ್ರುತಿವೇದ್ಯನು 2 ಸ್ವತಂತ್ರ ಪರತಂತ್ರ ಎರಡು ತತ್ವಗಳು ಸ್ವತಂತ್ರ ತತ್ವವು ಹರಿಯೊಬ್ಬನೇ ಪ ರತಂತ್ರ ಮಿಕ್ಕಿದ್ದಲ್ಲಾ ಇದಕೆ ಪ್ರಮಾಣವು `ಏಷ ಸರ್ವೇಶ್ವರ ' ವೆನ್ನುತ ಶ್ರುತಿಯು 3 ಹರಿಯೇ ಸರ್ವೋತ್ತಮ ತದನು ರಮಾದೇವಿ ವಿಧಿ ಪ್ರಾಣರಿವರಿಬ್ಬರು ತದನು ಸರಸ್ವತಿ ಭಾರತೇರಿಬ್ಬರು ಶಿವ ಶೇಷ ಗರುಡ ಶ್ರೀ ಹರಿನಾರೇರು 4 ಸೌಪರ್ಣಿ ಪಾರ್ವತಿಯರು ಸಮ ಶಕ್ರ ಕಾಮರು ಸಮ ಸ್ಮರರಮಣಿ ಗುರು ಶಚಿ ಮನು ದಕ್ಷ ಸಮರು ಆ ಮಾನವಿ ಪ್ರವಹ ಯಮೇಂದ್ವರ್ಕ ಸಮರೈವರು 5 ನಿಖಿಲ ದಿವಿಜರಲ್ಲಿ ಈ ವಿಧ ತಾರತಮ್ಯ ನಿಖಿಲ ಸುರೋತ್ತಮ ಹರಿಯೊಬ್ಬನೇ ಮಿಕ್ಕವರಲವೆಂದು ಇಂದ್ರಿಯೇಭ್ಯಃ ಪರಃ ದ್ವಾವಿಮಾ ಇತ್ಯಾದಿ ಶ್ರುತಿವಚನ 6 ಈಶ್ವರ ಜಡ ಭೇದ ಜೀವ ಜಡಕೆ ಭೇದ ಜೀವ ಜೀವಕೆ ಭೇದ ಜಡ ಜಡಕೆ ಜೀವೇಶರಿಗೆ ಭೇದ ಈಶ ಲಕ್ಷ್ಮೀ ಭೇದ ಪರತಂತ್ರ ಚಿತ್ಪರ ಜೀವ ಶಬ್ದ 7 ಬ್ರಹ್ಮವಿಚಾರ ತತ್ಜ್ಞಾನಕೆ ಸಾಧನ ಜ್ಞಾನಪ್ರಸಾದಕೆ ಇದು ಮುಕ್ತಿಗೆ ಆದ ಕಾರಣದಿಂದ ಶಮದಮಯುತನಿಗೆ ಬ್ರಹ್ಮ ಜಿಜ್ಞಾಸವು ಕರ್ತವ್ಯವು 8 ಜಿಜ್ಞಾಸ್ಯಬ್ರಹ್ಮನು ಜೀವನಲ್ಲವೊ ಜಗ ತ್ಕಾರಣತ್ವವು ಜೀವಗೆಲ್ಲಿಹುದೊ ರುದ್ರಾದಿಗಳು ಜಗತ್ಕಾರಣರಲ್ಲವೊ ಶಾಸ್ತ್ರವೇದ್ಯನೆ ಜಗತ್ಕಾರಣನು 9 ಉಪಕ್ರಮಾದಿಗಳ ವಿಚಾರ ಮಾಡಲು ಸರ್ವ ಶಾಸ್ತ್ರ ತಾತ್ಪರ್ಯಗೋಚರ ಹರಿಯೆ ಅಕ್ಷಾದ್ಯವೇದ್ಯನ ಜ್ಞೇಯನಾಗುವ ಹರ್ಯ ವಾಚ್ಯನೆಂಬುವುದದು ಸರಿಯಲ್ಲವೊ10 ಆನಂದಮಯ ಮೊದಲಾದ ವಾಚ್ಯನು ಮತ್ತೆ ಸರ್ವಗತತ್ವಾದಿ ಲಿಂಗಯುತ ದ್ಯುಭ್ವಾದಿಗಳಿಗಾಧಾರನು ಅವ್ಯಕ್ತ ಜ್ಯೋತಿರಾದಿ ಶಬ್ದ ಮುಖ್ಯಾರ್ಥನು 11 ದೋಷವರ್ಜಿತ ಹರಿ ವಿಷಯವಿರಕ್ತಿ ಭಕ್ತ್ಯು ಪಾಸನದಿಂದಲೆ ಅಪರೋಕ್ಷನೊ ಇಂತು ಪ್ರಸನ್ನನು ಮುಕ್ತಿಯನೀವನು ಎಂಬುವುದೆ ಸರ್ವ ಶಾಸ್ತ್ರಾರ್ಥವೊ 12 ವರನಾಮಗಿರಿ ನರಹರಿಯ ಪಾದಾಂಬುಜ ನಿರತ ಹೃದಯನಾಗಿ ಅನುದಿನದಿ ಧರಣಿ ಸುರನು ಇದ ಪೇಳಲು ನರಹರಿ ಚರಣಕಮಲ ಭಕ್ತಿ ಪೊಂದುವನು 13
--------------
ವಿದ್ಯಾರತ್ನಾಕರತೀರ್ಥರು
ಭಜಿಸುವರ ಭಾಗ್ಯವೆ ಭಾಗ್ಯ ಭುವನದಲಿತ್ರಿಜಗದೊಡೆಯನು ರಾಮಕೃಷ್ಣ ರೂಪಿನಲಿರಲು ಪಶ್ರುತಿ 'ಧಿತ ನಿಯಮಗಳ ಮಾಡಿ ತದನಂತರದಿಶತಸಹಸ್ರರಿಗೊರೆದು ಕಾವ್ಯ ಪಾಠವನುಶ್ರುತಿಗಗೋಚರ ಕೃಷ್ಣ ಪಾದಪೂಜೆಯ ನಿತ್ಯಜಿತಮನಸ್ಕದಿ ರಚಿಸಿ ನಲಿವ ಮೂರ್ತಿಯನು 1ವೇದಾಂತ ಶಾಸ್ತ್ರವನು ವೇದ'ತ್ತುಗಳಿಂಗೆವಾದಗುಟ್ಟದ ತೆರದಲುಪದೇಶಗೈದುವೇದಶಾಸ್ತ್ರಾರ್ಥವನು ಸಾದರದಿ ಸಕಲರಿಗೆಬೋಧಿಸುವ ಸಂಸಾರಸಾಗರೋತ್ತಾರರನು2ರಾಮಾವತಾರದಲಿ ರಾಮನೆಂದೇ ನಾಮವಾಮೇಲೆ ದ್ವಾಪರದಿ ರಾಮ ಕೃಷ್ಣರೆಂದುನಾಮವೆರಡವರಿಂಗೆ ತನುವೆರಡು ಬಳಿಕೀಗರಾಮಕೃಷ್ಣನಾಮದಲಿ ಕಲಿಯುÀಗದಿ ಜನಿಸಿರಲು 3ಅವತಾರವೆಂಬುದುಪಚಾರವಲ್ಲಿದು ಕೇಳಿಭವನ ಪ್ರತಿಬಿಂಬ ಶ್ರೀ ಶಂಕರಾಚಾರ್ಯಭವದೂರ ಗುರುಮೂರ್ತಿ ಕೃತ ಗ್ರಂಥ ವ್ಯಾಖ್ಯಾನಕಿವರೆಂದು ಆನಂದ ಘನ ಸ್ವಪ್ನವಾಗಿರಲು 4ಅಜನ ಭಜನೆಯಲಜನು ತ್ರಿಜಗರಕ್ಷಾರ್ಥದಲಿಅಜನ ಪೌತ್ರತ್ವದಲಿ ನಿಜಸತಿಯ ನೆವದಿತ್ರಿಜಗ ಕಂಟಕ ರಾವಣನ ಮುರಿದು ಭಜಕರಿಗೆಅಜ ಪದ' ಮೊದಲಾಗಿ ಕೊಟ್ಟ ರಾಮನನು 5ಭೂ'ು ಭಾರವನಿಳುಹಲೆಂದು ನೇಮವ ಧರಿಸಿರಾಮನನುಜನು ತಾನು ಕೃಷ್ಣನೆಂದೆನಿಸಿಭೀಮ ಘಲುಗುಣ ಧರ್ಮ ಮುಖದಿ ಕೌರವ ಪಡೆಯಭೂ'ುಯಲಿ ನೆಲೆಗೊಳಿಸಿದಮಲ ಮೂರ್ತಿಯನು 6ಧರೆಗಧಿಕವೆಂದೆಂಬ ದೃಷದಪುರದಲಿ ನಿಂದುಶರಣಾಗತರ ಸಲ' ಮ'ಮೆಗಳ ಮೆರೆದುತಿರುಪತಿಯ ವೆಂಕಟನ ಪ್ರತಿಬಿಂಬ ಗುರುವರ್ಯಪರವಾಸುದೇವ ಶ್ರೀ ರಾಮಕೃಷ್ಣಾರ್ಯರನು 7ಓಂ ಪುಣ್ಯಾಯ ನಮಃ
--------------
ತಿಮ್ಮಪ್ಪದಾಸರು
ಶೋಭಾನೆ ಶೋಭಾನೆ ಶೋಭಾನೆ ಪ ಶ್ರೀಗಣಾಧಿಪತಿಯ ಸಂಸೇವಿಸಿ ಶಂಕರನ ಭಜಿಸಿ ವಾಗಾಭಿಮಾನಿಯೆನಿಪ ಸರಸ್ವತಿ ದೇವಿಗೆ ವÀಂದಿಸಿ ಸಾಗರಸುತೆಯರಮಣ ನಿಂತು ಪೇಳಿಸಿದ ಪರಿಯೊ ಳೀಗ ಗಂಡುಮಕ್ಕಳಾಶೀರ್ವಾದ ಪದವ ಪೇಳ್ವೆ ಸುಜನರೆಲ್ಲಾಲಿಪುದು ಶೋಭಾನೆ 1 ಬಾಲನಾಗಿ ಪ್ರಹ್ಲಾದನವೋಲ್ ಬಹುಕ್ರೀಡೆಗಳಾಡುತಲಿ ಮೇಲೆ ಪಂಚಾಬ್ದದಿ ಸದ್ ವಿದ್ಯಾಭ್ಯಾಸಗಳನೆ ಮಾಡಿ ಶಾಸ್ತ್ರಾರ್ಥವೇತ್ತನಾಗುತಲಿ ಶೀಲಾದಿ ಸದ್ಗುಣಗಳುಳ್ಳ ಬಾಲೆಯಳ ಮದುವೆಯಾಗಿ ಕಾಲ ಕಾಲದಲ್ಲಿ ದೇವಋಷಿ ಪಿತೃಗಣಗಳ ಪೂಜೆ ಅಗ್ಗಳ ನೀನಾಗು 2 ಕೆರೆಗಳ ಕಟ್ಟಿಸು ಸರೋವರಗಳನ್ನೆ ಮಾಡಿಸು ನಿ- ನಿಖಿಳ ಯಜ್ಞಗಳಾಚರಿಸು ಸತ್ಪಾತ್ರಕ್ಕೆಯಿತ್ತುದಾತನೆಂದೆನಿಸು ನಿರತ ಬಂದವರಿಗನ್ನ ನೀಡುತ್ತ ಪ್ರಸನ್ನ ಮನದಿ ಮರಗಳ ಹಾಕಿಸು ಸಪ್ತಸಂತಾನಗಳನ್ನೆಗಳಿಸು ಮಾನ್ಯರೊಳು ವರ್ತಿಸಿಸುಖಿಸು 3 ಧರ್ಮಯುಕ್ತನಾಗುತ್ತ ಅಧರ್ಮಗಳ ಬಿಡುತ ಸ- ತ್ಕರ್ಮಗಳಾಚರಿಸು ಫಲವ ಕಂಜಾಕ್ಷಗರ್ಪಿತಮಾಡು ನಿತ್ಯ ಸಂತಸದಿ ಮರ್ಮಜ್ಞರೆನಿಪ ಗುರುಹಿರಿಯರ ಸೇವಿಸುತ ಸ ಮಾಡಿ ನಿತ್ಯಸುಖಿಯಾಗು 4 ಧೀರ್ಘಾಯುವಾಗಿರು ಬಂಧು ವರ್ಗವ ಪರಿಪೋಷಿಸು ಭರ್ಗಾದಿ ದೇವತೆಗಳ ಭಕ್ತಿಯಿಂದಾ ಪೂಜಿಸಿತ್ರಿ- ಅರ್ಥಿಯ ಪೊಂದು ಸ್ವರ್ಗಸ್ಥಿತಿ ಲಯಕರ್ತ ಗುರುರಾಮವಿಠಲ ನಘ್ರ್ಯ ಸಂಪದಗಳಿತ್ತು ಆದರಿಸಿ ತನ್ನ ಭಕ್ತಾ ನಿತ್ಯ ಸತ್ಯಾಧನವ ಮಾಡಿಸುವಾ ಶೋಭಾನೆ 5
--------------
ಗುರುರಾಮವಿಠಲ