ಒಟ್ಟು 172 ಕಡೆಗಳಲ್ಲಿ , 49 ದಾಸರು , 160 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾ ವಂದಿಸುವೆ ನಲಿದಾಡುವೇ ಪ ಪವಿತ್ರಳಾದೇ ನಿತ್ಯ ಪರಮಾತ್ಮನ ಕಂಡು ಕೃತಾರ್ಥಳಾದೇ 1 ವಜ್ರ ಮಂಟಪ ವೈಭವನೋಡಿದೆ ನೋಡಿ ಉಧೃತಳಾದೇ 2 ಸತ್ಯಧ್ಯಾನರು ಎತ್ತಿ ಮಾಡುವಂಥ | ಮಂಗಳಾರ್ತಿಯನೆ ಕಂಡೆನೇ ವಿಸ್ತರ ನೋಡಿದೆ3 ಕೊಂಡಾಡುವುದ ನಾ ಕೇಳಿದೆ ಹಿಂಡು ಪಡೆವುದ ನೋಡಿದೆ 4 ಮುಟ್ಟಿಪೂಜಿಸಿದ ಮೂರ್ತಿಯು ಮತ್ತೆ ಕುಬೇರನ ಅಳಕಾ ಪಟ್ಟಣವೇ ಪ್ರತ್ಯಕ್ಷ ಬಂದಿರುವುದಿಲ್ಲಿ 5 ಬೆಳ್ಳಿ ಭಂಗಾರದ ಮಿಳ್ಕೆ, ತಂಬಿಗಿ ಢಾಲಿಯನು ಕೈಯಲಿ ಜನರು ಕೊಂಡೊಯ್ವರು ಭಾಳಿರುವುದು 6 ಪ್ರತ್ಯಕ್ಷವೈಕುಂಠವೆನಿಪುದೂ ದಾಯಪಿಡಿವರೂ 10 ನೋಡಿ ಸಂತುಷ್ಟಳಾದೇ ಈ ಮಠದಲಿ 11 ಮತ್ಯಾರಿಗೀಡಿಲ್ಲನೋಡು ಸೃಷ್ಟಿವೊಳಗಿನವರಿಗೀಡಿಲ್ಲನೋಡು 12 ವಾದಿಮತದ್ವಾದಿನೀ ಸೋಲಿಸುವರು | ಮಾಯಮತಿಗಳ ಮಾಯಮಾಡುವರೂ ಪಾಠದಿಬೋಧಿಸುವರೂ 13 ಸುರಲೋಕ ಪೂಜ್ಯರಿವರೂ ಶಿರೋಮಣಿಯೆಂದು ಕರೆಸಿಕೊಳ್ಳುವರೂ 14
--------------
ಓರಬಾಯಿ ಲಕ್ಷ್ಮೀದೇವಮ್ಮ
(ಕುಂಜಾರು ದುರ್ಗಾ) ರಮೇ ರಜನೀಕರಾಭಮುಖಿ ಕ್ಷಮಿಸೆನ್ನವಗುಣವಾ ತಮೋ ನಿವಾರಿಣಿ ಪ. ಚರಣಯುಗೇ ಕರತಂದಿರಿಸಿದ 1 ಶಿರೋಹರೆ ಮನವಿರಿಸು ಕಟಾಕ್ಷದಿ 2 ಸರೋಜಭವಪುರ ಹರ ಶಕ್ರಾದಿಕ ಸುರೇಡ್ಯ ವೆಂಕಟಗಿರಿ ವರನಾ ಪುಷ್ಕಳ ವರಪ್ರದಾಯಿನಿ ಚರಂತನಾನುಗಪರಾತ್ಮದರ್ಶಿನಿ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ರಾಘವೇಂದ್ರ ಪ್ರಾರ್ಥನೆ) ರಾಘವೇಂದ್ರ ತೀರ್ಥ ಬೋಧಿಸು ಭಾಗವತಗತಾರ್ಥ ರಾಘವ ಪಾದಾಂಬುಜ ಲಬ್ದಾರ್ಥ ಸರಾಗದಿ ಪಾಲಿಸು ನಿಜಪುರುಷಾರ್ಥ ಪ. ತುಂಗಾ ತಟವಾಸಾ ರಾಘವಶಿಂಗನ ನಿಜದಾಸ ಪಂಗುಬಧಿರ ಮುಖ್ಯಾಂಗ ಹೀನರ- ನಪಾಂಗನೋಟದಿ ಶುಭಾಂಗರ ಮಾಡಿಪ 1 ಪಾದೋದಕ ಸೇವಾರತರಿಗಗಾಧ ಫಳಗಳೀವ ಬೂದಿ ಮುಖದ ದುರ್ವಾದಿಗಳೋಡಿಸಿ ಸಾಧುಜನರಿಗಾಲ್ಹಾದ ಬಡಿಸುತಿಹ 2 ಸುಜನ ಶಿರೋಮಣಿಯೆ ವಿಜಯದನೆನಿಸುವ ದ್ವಿಜಕುಲನಂದನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಮ್ಮಮ್ಮ ಗೋಪಿಯೆನೆ ಏನೆಂಬೆ ಪರ ಬೊಮ್ಮ ಮಗನೆಂಬೊ ಧೈರ್ಯಕೆ ಪ. ಬೊಮ್ಮನಯ್ಯನ ಸಿರಿರಮ್ಮೆ ಪತಿಯ ಘನ ಪೆರ್ಮೆ ಗುಣಗಣನಿಲಯನ ಅ.ಪ. ಹೊಳೆವ ಶ್ರೀರೂಪು ವಟಪತ್ರದಲ್ಲಿ ಪ್ರಳಯಜಲಧಿಯ ಶಯನನ ಸೆಳೆಮಂಚದ ಮ್ಯಾಲೆ ಮಗ್ಗುಲೊಳಿಟ್ಟು ತನ್ನ ಗೋಪಿ 1 ಚರಾಚರಂಗಳ ಸೃಷ್ಟಿ ಸ್ವಯಿಚ್ಛೆಯಿಂದ ಪುರುಷರೂಪವ ಧರಿಸಿದ ಪರಮಮಂಗಳ ಮೂರುತಿಯ ತನ್ನ ಗೋಪಿ 2 ಕತ್ತಲೆಯನು ನುಂಗಿ ತತ್ವಂಗಳನು ಕೊಂಡು ಮತ್ತೆ ಬೊಮ್ಮಾಂಡದೊಳಗೆ ಪೊಕ್ಕು ತತ್ವಸಾರದಿಂದೊಪ್ಪುವ ಕೊಮರನ ಗೋಪಿ 3 ಅದಭ್ರಸೃಷ್ಟಿಗಳಿಗಗೋಚರನಾದ ಆದಿಮೂರುತಿ ¸ಚ್ಚಿದಾನಂದನ ಸದಾ ತನಯನೆಂದೆತ್ತಿ ಮುದ್ದಿಸಿ ಸುಖ ಗೋಪಿ 4 ಚತುರುಭುಜ ಶಂಖ ಚಕ್ರ ಗದೆ ಪದುಮ ಸುತಪ ಪ್ರಶ್ನೆಗೆ ವರವಿತ್ತ ಶ್ರುತಿಶಿರೋಮಣಿಯೆಂದರಿಯದೆ ತಾ ಗೋಪಿ 5 ಬೊಮ್ಮಕಲುಷಾನಂತ ಸಹಸ್ರಗಳ ನಿಮಿಷಮಾತ್ರದಿ ಪಡೆದನ ಬೊಮ್ಮಾಂಡವೆ ತನ್ನ ರೋಮಕೂಪದಲ್ಲಿಪ್ಪ್ಪ ರನ್ನವೆ ಮಗನೆಂದಳೆ ಗೋಪಿ6 ಅನ್ನಂತ ರವಿತೇಜಕಿರೀಟದ ಅನ್ನಘ್ರ್ಯ ಸರ್ವಾಭರಣ ಪೊನ್ನ ವಸ್ತ್ರವನ್ನುಟ್ಟ ಅದ್ಭ್ಬುತ ಬಾಲಕನ ಗೋಪಿ 7 ಅನ್ನಂತಾನಂತ ಜೀವಗಣಗಳು ಅನ್ನಂತಾನಂತ ಕರ್ಮಗಳು ಅನ್ನಂತಾನಂತ ಗಾಯತ್ರಿಗೆ ಕÀರ್ತೃ ವಿಷ್ಣು ಗೋಪಿ 8 ಅನ್ನಂತಾಸನ ಶ್ವೇತದ್ವೀಪ ವೈಕುಂಠ ದನ್ನವರತ ವಾಸವಾಗಿಪ್ಪನ ಅನ್ನಿಮಿಷರ ಯೋಚನೆಗೆ ಒಲಿದನ ಗೋಪಿ 9 ಧರ್ಮದÀ ವೃದ್ಧಿಗೆ ಧರ್ಮದ ಹಾನಿಗೆ ತನ್ನಿಚ್ಛೆಯಲವತರಿಸಿದ ಮಮ ಪ್ರಾಣಾಹಿ ಪಾಂಡವನೆನಿಸಿದ ಗೋಪಿ 10 ಉದ್ದಾಮ ಕಾಂಚೀದಾಮ ಕಂಕಣ ಶ್ರೀ- ಮುದ್ರೆಯ ಶ್ರೀವತ್ಸಕೌಸ್ತುಭಧರನ ಮಧ್ವಮುನಿಗೆ ತಾನೊಲಿದು ಬಂದನ ಗೋಪಿ 11 ಸರಸಿಜಬೊಮ್ಮಾಂಡ ಒಡೆದಾಗ ವಿರಿಂಚಿ ತೊಳೆದ ಪಾದೋದಕವ ಹರ ಸೇವಿಸಲಾಗ ಶಿವನ ಮಾಡಿದ ಹರಿಯ ಮಗನೆಂದಳೆ [ಗೋಪಿ] 12 ದೇವಕಿ ಉದರದಲ್ಲಿದ್ದಾಗ ಬ್ರಹ್ಮಾದಿ ದೇವರಿಂದಲ್ಲಿ ಕೀರ್ತಿಸಿಕೊಂಡು ಭಾವಕಿ ದೇವಕಿ ವಸುದೇವನಲ್ಲಿ ಪಿತೃ ಗೋಪಿ 13 ಶಿಶುರೂಪವ ತೋರಿದ ಬೊಮ್ಮನ ಕಂಡು ವಸುದೇವಗೆ ನದಿ ಎಡೆ ಬಿಡೆ ಸಾಸಿರನಾಮ ಚಿತ್ರವಾಗಿದ್ದ ಜಗ- ಗೋಪಿ 14 ಪಾಲಗಡಲಲ್ಲಿ ಪವಡಿಸಿಪ್ಪನ ಕಾಲಮೇಲೆ ಮಲಗಿಸಿಕೊಂಡು ನೀಲಮೇಘಶ್ಯಾಮಯೆಂದು ಬಣ್ಣಿಸುತಲಿ ಗೋಪಿ 15 ಆದಿದೇವನು ಬ್ರಹ್ಮಸೂತ್ರವ ಕಲ್ಪಿಸಿ ವೇದ ವಿಭಾಗವ ಮಾಡಿದನ ಆದರದಿಂತುಂತೆಂದು ಕಲಿಸಿ ಸಂ ಗೋಪಿ 16 ಭಾನುಶತಕೋಟಿತೇಜಪ್ರಕಾಶನ್ನ ಆನಂದವನೆ ನೋಡಿ ಮನ ಉಬ್ಬಿ ಆನಂದನಿಧಿಯ ತೊಡೆಯ ಮ್ಯಾಲೆಯಿಟ್ಟು ಗೋಪಿ 17 ಶೃಂಗಾರನಿಧಿಯನ್ನು ಬಾಯೆಂದು ಕರೆದು ರ- ಥಾಂಗಪಾಣಿಯನೆ ಎತ್ತಿಕೊಂಡು ತಿಂಗಳನೋಡಯ್ಯ ಕಂದ ಎಂದಾತನ ಗೋಪಿ 18 ಸನ್ನಕಾದಿಗಳಯ್ಯನ ಪಿತನ ಕರೆ ದೆನ್ನ ಮಾಣಿಕವೆಯೆಂದಪ್ಪಿಕೊಂಡು ಹೊನ್ನ ತಾ ಗುಬ್ಬಿಯೆಂದಾಡು ಎನ್ನಯ್ಯನೆ ಗೋಪಿ 19 ಗಂಭೀರವಾರಿಧಿಗೆ ಅಂಬಾ ಹೂಡಿದ ತೋಳು ಇಂದಿರೆಯನೆ ಅಪ್ಪಿದ ತೋಳು ಶಂಭರಾರಿಯ ಪಿತ ತೋಳನ್ನಾಡೈ ಎಂದು ಗೋಪಿ 20 ಪಾದ ಉ- ದ್ದಂಡ ಬಲಿಯಮೆಟ್ಟಿದ ಪಾದ ಪುಂಡರೀಕಾಯತವಾದ ಪಾದದಿ ಪ್ರ- ಗೋಪಿ 21 ನಿತ್ಯತೃಪ್ತನು ಹಸ್ತ (ಸಿದ?) ನೆಂದೆನುತಲೆ ಇತ್ತ ಬಾ ಹೊರೀಯೆಂದಾದರಿಸಿ ಹೊತ್ತಾರಿಂದಮ್ಮೆ ಉಣ್ಣದಿರಲು ಹೊಟ್ಟೆ ಗೋಪಿ 22 ಅಮ್ಮೆ ಉಂಬುವ ಪುಟ್ಟ ಬಾಯ ಮುದ್ದಿನ ಮಾ ರಮ್ಮೆಯನರಸುವನಚ್ಚರಿಯ ಅಮ್ಮೆ ನೋಡಿ ನಗುವ ಮುದ್ದು ಬಾಲಕನ ಪರ ಗೋಪಿ 23 ತಾಯ ಮೊಗವ ನೋಡುತ್ತಾಕಳಿಸುತ ಬಾಯಲ್ಲೀರೇಳುಲೋಕವ ತೋರೆ ಆಯತೆ ನೋಡಿ ಮರಳಿ ಕಂಗೆಟ್ಟು ವಿಶ್ವ- ಗೋಪಿ 24 ಜ್ಞಾನಘನನ ವಿಶ್ವತೋನಯನನ ಆನಂದಚರಿತ್ರನ ಅವ್ಯಕ್ತನ ಜ್ಞಾನಿಗಳ ಹೃತ್ಕಮಲದೊಳಿಹನ ಕಣ್ಣಮುಚ್ಚಿ ಗೋಪಿ 25 ಹಾಲ ಹರವಿಯ ಒಡೆದು ಬಂದು ಗೋ- ಪಾಲ ನೀನೆಲ್ಲಿಗೆ ಪೋದೆಯೆಂದು ಕಾಲಕರ್ಮಂಗಳಿಗೆ ಕಾರಣವಾದೋನ ಗೋಪಿ 26 ಜಗದುದರ ಜಂಘಿಸುತ ಅಡಿಯಿಡೆ ಮೃಗಲೋಚನೆ ಮೈಮರೆದಿರೆ ಅಗಣಿತಮಹಿಮನು ಚರಿಸುತ ಬರ ಗೋಪಿ 27 ಆಮ್ಮಹಾ ಮತ್ತಿಯ ಮರನ ಮುರಿದು ಸುರರು ಜಯವೆನ್ನೆ ಶ್ರೀಮಣಿ ಶಿವರಿಂದ ಕೀರ್ತಿಸಿಕೊಂಬ ಗೋಪಿ 28 ಕತ್ತಲೆಯೊಳಗಿದ್ದು ಅಂಜಿದ ಮಗನೆಂದು ಶ್ರುತಿಮಂತ್ರಗಳಿಂದುಚ್ಚರಿಸಿ ಮೃತ್ಯುಂಜಯನ ಪಿರಿಯನೆತ್ತಿಕೊಂಡು ಗೋಪಿ 29 ಶೇಷಶಾಯಿಯ ಹಾಸಿ ಮಲಗಿಸಿ ಚಾರು- ವೇಷನ್ನ ನಿದ್ರಿಗೈಸುವೆನೆಂದು ಸಾಸಿರಮುಖಭೂಷಣನ ಪಾಡುತ್ತ ಸಂ- ತೋಷದಿ ಮೈಮರೆದಳೆ ಗೋಪಿ30 ತ್ರಿಗುಣಾತೀತನ್ನ ಪೊಂದೊಟ್ಟಿಲೊಳ್ಮಲಗಿಸಿ ಜೋಗುಳ ಪಾಡುವ ಯಶೋದೆÉಯ ಎಸೆವ ನೀಲವಸ್ತ್ರನು ಪಾಡೆನ್ನೆ ಕೃಷ್ಣ ಅನು- ಗೋಪಿ 31 ಹರಿಯ ಹೊರಿಸುವಳಲ್ಯಲ್ಲಿ ನಿಮ್ಮಣ್ಣ ವರ ಸಿಂಹಾಸನವಾಗಿಪ್ಪನೆಂದು ಸಿರಿಯಕೂಡೇಕಾಂತದಲಿಪ್ಪನ್ನ ಗೋಪಿ 32 ಪಾದ ನಿಮ್ಮಣ್ಣನ ಶಿರದಲೊಪ್ಪಿದೆÀಯೆಲೆ ಕಂದ ಸುರವರರ ಭಾಗ್ಯನಿಧಿಯೆ ಬಲರಾಮ ಗೋಪಿ 33 ಕಣ್ಣಮುಚ್ಚಿದ ಕೃಷ್ಣನೆಂದು ತೊಟ್ಟಿಲ ಬಿಟ್ಟು ಪುಣ್ಯಾಂಗನೆ ಮೈಮರೆದಿರೆ ಅಣ್ಣ ಆಶನು ಬೆಣ್ಣೆಯ ಕಳಹೋದ ಚಿಣ್ಣನ ಕಾಣೆನೆಂದಳೆ ಗೋಪಿ34 ನೀಲಾಂಬರನ ಬೆನ್ನ ಮೆಟ್ಟಿ ನೆಲವಿನ ಮ್ಯಾಲಿನ ಬೆಣ್ಣೆಯ ಮೆಲ್ಲೆ ಕೃಷ್ಣ ಬಾಲಕಿಯರು ಕೂಡಿ ಕಳ್ಳ ಸಿಕ್ಕಿದನೆಂದು ಗೋಪಿ 35 ಹುಟ್ಟ್ಟದ ಬೆಳೆಯದ ಹಸುಳೆ ಅಣ್ಣನ ಬೆನ್ನ ಮೆಟ್ಟಿ ನೆಲವು ಜಗ್ಗಿದನೆಂದು ರಟ್ಟು ಮಾಡಿದಿರೆಲ್ಲ ನೋಡಿರವ್ವಾ ಎನ್ನ ಗೋಪಿ 36 ಕಂದನ ಎತ್ತಿಕೊಂಡು ರಾಜ್ಯದಂಗನೆಯರ ಮಂದಿರವನೆ ಪೊಕ್ಕು ಬರುತಿರೆ ಒಂದೊಂದು ಕೌತುಕವನೆ ಕಂಡಾನಂದ ಗೋಪಿ 37 ಶಶಿಮುಖಿಯಂಗಳದ ಹಾಲಹಳ್ಳ ಮೊಸರ ಮಡುವು ಬಾಗಿಲ ಮುಂದೆ ಪ್ರಸಾದವೆಲ್ಲ ಬೆಣ್ಣೆ ಫಲಿತವಾಗಿರೆ ಗೋಪಿ 38 ವಾರಿಧಿಯೊಳಗಿದ್ದ ಪನ್ನಗಶಾಯಿಯ ತೇರ ಮೇಲೆ ಇದ್ದ ಬಾಲಕನ ಮೂರುತಿ ಒಂದೆಂಬೋ ಅ- ಗೋಪಿ 39 ದ್ರೌಪದಿಗಕ್ಷಯವಿತ್ತನ ಗುರು ಸಾಂ- ದೀಪಗೆ ಸುತನ ತಂದಿತ್ತನ ಪ್ರೀತಿಯಿಂದಲಿ ಯಜ್ಞಪತ್ಯರಿಗೊಲಿದ ಸುಪ್ರ- ಗೋಪಿ 40 ಘಾತಪುತ್ರರ ಆರು ಮಂದಿಯ ತರಹೇಳಿ ಮಾತೆಯೆಚ್ಚರಿಸೆ ಅಂಗೀಕರಿಸಿ ಅತಿ ಬೇಗದಿಂದಣ್ಣನ ತಂದು ತೋರಿದ ಅ- ಗೋಪಿ 41 ಭಕುತ ಶ್ರುತದೇವ ಬಹುಳಾಶ್ವರಾಯಗೊಲಿ ದೇಕ ಕಾಲದಿ ರೂಪೆರಡಾಗಿ ಆ ಕರುಣಾಬ್ಧಿಯ ಮಾಯಾರೂಪಿÀನ ಪರಿ- ಗೋಪಿ 42 ಪೂತನಿ ಶಕಟವತ್ಸಾಸುರ ವೃಷಭÀನ ಪಾತಕಿ ಚಾಣೂರ ಕುಂಜರನ ಘಾತಿಸಿ ಕಂಸನ್ನ ರಂಟೆಯಾಡಿದ ಬಲು ಭೂತನ್ನ ಮಗನೆಂದಳೆ ಗೋಪಿ43 ಬಾಲತನದಲ್ಲಿ ಸಖನಾಗಿ ಬಂದು ಕು- ಚೇಲ ತಂದವಲಕ್ಕಿಯ ಧರಿಸಿ ಮೇಲುತನದಿಂದ ಸೌಭಾಗ್ಯವಿತ್ತ ಶ್ರೀ ಲೋಲನ್ನ ಮಗನೆಂದಳೆ ಗೋಪಿ&ಟಿbsಠಿ
--------------
ವಾದಿರಾಜ
ಅವನಿಯೊಳವತರಿಸಿದ ವ್ಯಾಸರಾಯ ಭೂಸುರಜನವರ್ಯ ಸುವಿನೋದವ ಪಡೆದರು ಸುರನರಜನರು ಪ ಪವನಸುತರ ಮತ ಭುವಿಯಲಿ ಸುಲಭದಿ ವಿವರಿಸಿ ಜನರಿಗೆ ಪ್ರವಚನವೆಸಗಲು ಅ.ಪ ಗುರು ಬ್ರಹ್ಮಣ್ಯರ ವರಪದ ಕಮಲಗಳ ಪರತÀರ ಭಕುತಿಯಲಿ ಪರಿಪರಿ ಸೇವಿಸಿ ಗುರುಕರುಣದಲಿ ಹರುಷವ ಪೊಂದುತಲಿ ವರವ ಪಡೆದ ಭೂಸುರ ರಾಮಾರ್ಯರ ವರಸತಿಯುದರದಿ ವಹ್ನಿಪುರದೊಳವ ತರಿಸುವ ಧರೆಯೊಳು ಸುಜನಗಣವನು ದ್ಧರಿಸಲು ಮುದದಲಿ ಸಿರಿಪತಿಭಕುತನು 1 ಅತಿಬಾಲ್ಯದಿ ಗುರ್ವಾಜ್ಞೆಯನನುಸರಿಸಿ ಯತಿಯಾಶ್ರಮವಹಿಸಿ ಕ್ಷಿತಿಯೊಳಪರೋಕ್ಷಜ್ಞಾನಿಗಳೆಂದು ಪ್ರಥೆಯನು ಪೊಂದಿದ ಲಕ್ಷ್ಮೀನಾರಾಯಣ ಯತಿಯಲಿ ಶಾಸ್ತ್ರಾಮೃತ ಪಾನ ಮಾಡುತ ಅತಿ ಸುಲಭದ ಶ್ರುತಿಗಳ ಸಾರವ ಕ್ಷಿತಿ ಸುರರೊಳಗತಿ ಹಿತದಲಿ ಅರುಹಲು 2 ಗಜಗಹ್ವರ ದೇಶದ ನರಪತಿಗಳಿಗೆ ನಿಜವರ ಕರುಣದಲಿ ವಿಜಯಾಭ್ಯುದಯಗಳನು ಸತತ ಪೊಂದಿಸುತ ರಜತಕನಕ ನವಮಣಿಗಣಯುತ ವಾ ರಿಜವನು ಪೋಲುವ ಸಿಂಹಾಸನದಲಿ ಸುಜನ ಸಮೂಹಕೆ ನಿಜಪದಯುಗಳಾಂಬುಜ ಸೇವೆ ನೀಡಲು 3 ನಂದತೀರ್ಥರ ವರಶಾಸ್ತ್ರಗಳನ್ನು ಚಂದದಿ ವಿವರಿಸಲು ಚಂದ್ರಿಕಾ ನ್ಯಾಯಾಮೃತ ಮೊದಲಾದ ಗ್ರಂಥಗಳನು ರಚಿಸಿ ಮಂದಜನಕೆ ಮುಚುಕುಂದನ ಶುಭಗುಣ ವೃಂದಗಳನು ಸುಖದಿಂದ ಬೋಧಿಸಲು ಅಂದಪದಗಳನು ರಚಿಸುತ ಶುಭಗುಣ ಸಾಂದ್ರನ ಭಜನಾನಂದ ಪೊಂದಿಸಲು 4 ವಿಜಯೀಂದ್ರ ವಾದಿರಾಜ ಮೊದಲಾದ ನಿಜವರ ಶಿಷ್ಯರುಗಳ ವ್ರಜಕೆ ಶಾಸ್ತ್ರಾರ್ಥಗಳನು ಬೋಧಿಸುತ ಪುರಂದರ ಸುಜನ ಶಿರೋಮಣಿ ಕನಕ ಪ್ರಮುಖ ಪೂಜಿತ ಪದಯುಗಳಾಂಬುಜ ಯತಿಶೇಖರ ವಿಜಯಸಾರಥಿಯು ಪ್ರಸನ್ನನಾಗಲೆಂದು 5
--------------
ವಿದ್ಯಾಪ್ರಸನ್ನತೀರ್ಥರು
ಆತ್ಮನಿವೇದನೆ ಆವಗತಿ ಎನಗೆ ವೈಕುಂಠಪತಿಯೆ | ಕಾವ ಕರುಣಿಯೆ ಸರ್ವದೇವರ ದೇವ ಪ ಉದಯದಲಿ ಎದ್ದು ನಿನ್ನ ನಾಮವೆನ್ನದೆ | ಉದರಕಿನ್ನೇನು ಮಾಡಲಿ ಎನ್ನುತಾ | ಕÀದಗಳಾ ಸರಸುತ್ತ ಕಂಡಲ್ಲಿ ತಿರುಗಿದೆ | ಮದ ಗರ್ವದಲಿ ಬಾಳ್ವ ಮನುಜ ಶಿರೋಮಣಿಗೆ 1 ಧನವ ಘಳಿಸವ ವಾತ್ಸಲ್ಯವಲ್ಲದೆ ಸಾ | ಧನಕೆ ಒಮ್ಮೆ ಮನಸ್ಸು ಎರಗಲಿಲ್ಲಾ | ಮನುಜರೊಳಗೆ ಖ್ಯಾತಿಯಾಗುವೆನೆಂಬೊ | ವೇ | ದನೆ ಮಿಗಿಲಲ್ಲದೆ ಭಕುತಿ ಮತ್ತಿಲ್ಲ 2 ಒಬ್ಬರಕಿಂತಲಧಿಕನಾಗುವೆನೆಂದು | ಉಬ್ಬಿ ಪರರಾ ಸೇವೆಯನು ಮಾಡುವೆ | ಹಬ್ಬಿದ ಪಾಪದ ಸರವಿಗೆ ಉರುಲು ಬಿದ್ದು | ಸುಬ್ಬ್ಬಿದ ಸುಕೃತವ ಕಳಕೊಂಡೆನಯ್ಯಾ 3 ಪೂರ್ವದಲಿ ಉಂಡ ದು:ಖಗಳೆಲ್ಲ ಮರೆದು | ಸರ್ವದಾ ಗರ್ವದಲಿ ಸಜ್ಜನರ ಕೆಡನುಡಿದು | ಉರ್ವಿಯೊಳು ಬಲು ಬಲವಂತನೆನಸೀ | ಸರ್ವದಾ ಸರ್ವ ನರಕಂಗಳಲಿ ಬಿದ್ದು ಹೊರಳಿದೆನು4 ಇನ್ನಾದರೂ ದುರ್ಬುದ್ಧಿಯನ್ನು ಬಿಡಿಸಿ | ಕರವ ಬಿಡದೆ | ಪತಿ ವಿಜಯವಿಠ್ಠಲರೇಯಾ | ಎನ್ನ ಭಾವವು ನಿನ್ನದಲ್ಲವೇನಯ್ಯಾ5
--------------
ವಿಜಯದಾಸ
ಇ. ದೇವತಾ ಸ್ತುತಿ ವಾಯುದೇವರು ಇನ್ನಾದರೂ ಸುಮುಖನಾಗೊ ಧ್ವರಿಯೇ ಪ ಪರಿ ವಿಧದಿಂದ ನೊಂದು ಕರಮುಗಿದುಬಾಯ್‍ತ್ಯರದು ಕೂಗಿ ಕರಿವೆ ಸದ್ಗುರುರಾಜನೆಂದು ಅ.ಪ. ಪಾದ ನಂಬಿದ ಭಕ್ತರಿಗಾನಂದಗರಿವೆನೆಂಬ ಬಿರುದಾಂಕಿತನಾಗಿ ಸದ್ವøಂದದೊಳಗಿಪ್ಪೆ ರಾಜಾಚಾರು ಗುರು ಬೃಂದಾವನಾರ್ಯರ ಪೊರೆದ ಮಂದಾಕಿನಿಧರ ಧವಳಾಖ್ಯವಾಸಾ ಭೋಜಾ 1 ಭುವನದೊಳು ಸರಿಗಾಣೆ ನಿನಗಿನ್ನು ಪರಮಾಪ್ತ ಶಿರೋಮಣಿಗಳೊಳು ಸರ್ಜಿಸಿದ ಕಾರಣ ವಜ್ರಲೇಪನ ಮಾಡಿ ಊರ್ಜಿಸುವತ್ಯರ ಮಾಡು ಎನ್ನಾ 2 ಪರಮ ಪಾಮರನು ನಾನಯ್ಯ ಪವಮಾನರಾಯಾಪಾರುಗಾಣದೆ ಶರಧಿಯೊಳು ಮುಳುಗುವ್ಯನೋಕರವಿಡಿದು ತಡಿಗೆತ್ತಿ ಕಾಪಾಡು ತಂದೆವರದಗೋಪಾಲವಿಠಲನ ಮರಿಯೇ 3
--------------
ತಂದೆವರದಗೋಪಾಲವಿಠಲರು
ಇಂದು ನೋಡಿದೆ ಗೋವಿಂದನಾ ಸರ್ವ ಸುಂದರಸಾರ ವೆಂಕಟ ರಮಣನಾ ಪ ಭಾಗೀರಥಿಯ ಪೆತ್ತವನಾ ಭವ ರೋಗವ ಕಳೆವ ರಾಜೀವನೇತ್ರನಾ ಸಾಗರದೊಳಗೆ ಒಪ್ಪುವನಾ ಭಕ್ತ ಕೂಗಲು ನಿಲ್ಲದೆ ಒದಗಿ ಬರುವನಾ1 ನಿಲ್ಲದೆಳಿಪಿಗೆ ಪೊಳೆದನಾ ಗೋ ಪಾಲಕರಿಗೆ ವೈಕುಂಠ ತೋರಿದನಾ ನೀಲಾದೇವಿಗೆ ಬಲಿದವನಾ ಭೂ ಪಾಲಗೆ ಮೆಚ್ಚಿ ಸತ್ವರವನಿತ್ತವನಾ2 ವಿಶ್ವ ಮಂಗಳದಾಯಕನಾ ಅಹಿ ವಿಷ್ಟಕಸೇನರಿಂದ ಪೂಜೆಗೊಂಬುವನಾ ವಿಶ್ವರೂಪ ವಿಲಕ್ಷಣನಾ ಸರ್ವ ವಿಶ್ವ ಪರಿಪಾಲ ಪ್ರಣತಾರ್ತಿ ಹÀರನ3 ಸುರ ಶಿರೋಮಣಿ ಸದ್ಗುಣನಾ ಸು ದರಶನ ಶಂಖ ಭಜಕರಿಗೆ ಕೊಟ್ಟವನಾ ನಿರುತ ಆನಂದ ಭರಿತನಾ ದಿವ್ಯ ಮಿರುಗುವಾಭರಣದಿಂದಲಿ ನಿಂದಿಹನಾ 4 ಶಾಮವರ್ಣ ಚತುರ್ಭುಜನಾ ನಿಜ ಕಾಮಿನಿ ಸಂಗಡ ನಲಿದಾಡುವನಾ ಹೇಮ ಗಿರಿಯಲಿದ್ದವನಾ ದೇವ ಸ್ವಾಮಿ ತೀರ್ಥವಾಸ ವಿಜಯವಿಠ್ಠಲನಾ5
--------------
ವಿಜಯದಾಸ
ಇನ್ನೇನ ಮಾಡುವೆ ಇನ್ನಾರ ಬೇಡುವೆ ಪ್ರ-ಸನ್ನ ಚೆನ್ನಕೇಶವ ಎನ್ನ ಬಿನ್ನಪವಮನ್ನಿಸಿ ದಿನದಿನದಲ್ಲಿನಿನ್ನನರ್ಚಿಪಂತೆ ಮಾಡು ಪ. ಮೊಲೆಯುಂಬ ಹಸುಗೂಸು ಮಾತನಾಡಿ ತನ್ನಮನದಭೀಷ್ಟವ ಪೇಳ್ವುದೆಚೀರಿ ಅಳುವದೈಸೆ ಅದನರಿತು ಅದರ ತಾಯಿಅಪ್ಪ್ಪಿಮುದ್ದಾಡಿಸುತ್ತಬಳಲಿಕೆÀ ಪೋಪಂತೆ ನಸುಬಿಸಿಪಾಲನುಬಾಯೆಂದು ಕುಡಿಸುವಳುಸಿರಿಲಲನೆಯರಸ ನಮ್ಮ ಈ ಪರಿಯಲಿನೀನು ಲಾಲಿಸಿ ಸಲಹಬೇಕು 1 ಕರಿ ಕರೆಯಲುಪೊರೆದಂತೆ ಪೊರೆಯೆನ್ನನುಮಕರಿಯ ಕೊಂದು ಪೊರೆದಂತೆ2 ಹುಲಿಯ ಕಂಡೋಡುವ ಹುಲ್ಲೆಯ ಮರಿಯಂತೆಭವದ ಬೇಗೆಯಲಿ ಬೆಂದೆ ವಿಘಳಿಗೆ ಘಳಿಗೆಯೊಳು ಅಲಸದೆ ಪಾಪವಗÀಳಿಸುವ ಗÀಸಣೆಗಂಜೆತುಳಸಿಯ ದಳದಿಂದ ಸಂತುಷ್ಟನಹ ನಿನ್ನಒಲಿಸುವ ಭಾಗ್ಯದಲ್ಲೆ ಈ ಇಳೆಗೆ ಭಾರವಾದೆಇಹಪರ ದುಃಖದ ಹಂಬಲಿಕೆ ಎಳ್ಳಷ್ಟು ಇಲ್ಲಸನ್ಮಾರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ ಅಪವರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ3 ಹೆಂಡಿರ ಸಾಕಲಾರದೆ ಹೆಣ್ಣು ಮಕ್ಕಳುಗಳಕಂಡ ಕಂಡವಗೆರ್À ಮಾರಿ ಜಗಭಂಡನೆನಿಸಿಕೊಂಡೆ ಬಡತನ ಹಿಂಗದೆಕೊಂಡೆಯಗಳ ಪೇಳುವೆಉಂಡುಡುವರ ಕಂಡು ಮತ್ಸರ ಮಾಡುವೆತಂಡ ತಂಡÀದವರಿಂದ ಕಡಗೊಂಡರ್ಧನ ಕೊಡದೆ ಕಲ್ಲಪೊರುವೆನು ಕೋ-ದಂಡವೇರಿಸಿ ಕೊಂಡೆನು 4 ದಂಡವಿಡಿದು ವೇಷಧಾರಿಯೆಂಬುದ ಕೈಕೊಂಡು ರಾವಣನಂತೆ ಚರಿಸಿ ಎನ್ನಮಂಡೆ ಬೋಳು ಮಾಡಿ-ಕೊಂಡು ಇಳೆಯೊಳು ಪರಸತಿಯರ ಮೋಹಿಪೆಪುಂಡರೀಕಾಕ್ಷ ಈ ಪರಿಯ ಕ್ಲೇಶಗಳನುಉಂಡರೆÀ ವೈರಾಗ್ಯ ಬಾರದು ಎಲೆಪಾಂಡವಪ್ರಿಯ ಇನ್ನಾರಿ ಗುಸುರುವೆನು ಉ-ದ್ದಂಡಭಕ್ತರ ಸೇರಿಸೊ ಕೈ-ಕೊಂಡು ನಿನ್ನುದ್ದಂಡಭಕ್ತರ ಸೇರಿಸೊ5 ತಪ್ಪಿದರೆ ತಾಯಿ ತನ್ನ ಮಕ್ಕಳುಗಳತಕ್ಕೈಸಿಕೊಂಬವೊಲು ಕಾಮ-ನಪ್ಪ ಎನ್ನಪ್ಪ ಒಂದು ಕೊರತೆಯ ಕಾಣದೆಕರುಣದಿ ಕಾಯಬೇಕುಅಪಾರಮಹಿಮ ನೀನಾಶ್ರಿತ ಜನರನುಅತ್ತ ಹೋಗೆನ್ನೆ ಗಡ ನೀನ-ಪ್ರತಿಮಹಿಮನೆನಿಸಿಕೊಂಡೆ ಅದರಿಂದಅಮರರ ಶಿರೋರನ್ನವೆ ಅರ್ಜುನಸಖಅಮರರ ಶಿರೋರನ್ನವೆ 6 ಸರಿಮಿಗಿಲಿಲ್ಲದ ಸರ್ವೇಶ ಹರಿಯೆಂದುಸಿರಿಹಯವದನರಾಯ ನಿನ್ನಪರಮ ಮುನಿಗಳೆಲ್ಲಪರೀಕ್ಷೆಮಾಡಿ ನೋಡಿಮುನ್ನ ನಿರ್ಣೈಸಿದರುಹಿರಿಯರ ಮಾತನು ಪಾಟಿಮಾಡದನಗೋತ್ರ ಸೂತ್ರಗಳು ಪೋಕುಪ್ರವರ ಗೋತ್ರ ಋಷಿಮೂಲಯೆಂದು ಪ್ರಸಿದ್ಧ ಇನ್ನಾರು ನಿನ್ನಂಥವರು 7
--------------
ವಾದಿರಾಜ
ಎಂತು ಪೊಗಳಲೊ ನಿನ್ನ-ಯತಿಕುಲ ಶಿರೋರನ್ನ ಪ ಶಾಂತ ಮಧ್ವಾಚಾರ್ಯ ಸಂತ ಕುಲವರ್ಯ ಅ.ಪ. ಪ್ರಥಮಾವತಾರದಲಿ ವ್ರತತಿ ರಾಮನ ಭಜಿಸಿಅತಿ ಪಂಥದಿಂದ ಶರಧಿಯನು ದಾಟಿಕ್ಷಿತಿಜೆಗಂಕಿತವಿತ್ತು ಪೂದೋಟವನು ಕಿತ್ತೆಪ್ರತಿಗಾಣೆ ನಿನಗೆ ಅಪ್ರತಿ ಪರಾಕ್ರಮಿಯೆ 1 ದ್ವಿತಿಯಾವತಾರದಲಿ ದೇವಕೀಜನ ಕಂಡುಸತಿಗೆ ಕಾಮಿಸಿದವನ ಸಾಹಸದಿ ಸದೆದೆಪ್ರತಿಯಾದ ಮಾಗಧನಪೃತನದಲಿ ನೀ ಕೊಂದೆಪ್ರತಿಯ ಕಾಣೆನೊ ನಿನಗೆ ಮೂಜ್ಜಗದೊಳಗೆ 2 ತೃತಿಯಾವತಾರದಲಿ ತ್ರಿಜಗನುತಿಸಲು ಬಂದುಯತಿಯಾಗಿ ಮಹಾಮಹಿಮನನು ಭಜಿಸಿದೆಕ್ಷಿತಿಗಧಿಕ ಉಡುಪಿಯಲಿ ಕೃಷ್ಣನ್ನ ನಿಲಿಸಿ ಪ್ರತಿಮತಮತವ ಮುರಿದೆ ಪೂರ್ಣಪ್ರಜ್ಞ ಮುನಿವರನೆ 3
--------------
ವ್ಯಾಸರಾಯರು
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳುತಲೆದ್ದು ಮನವೆ ನೀ ವಲೀ ನಿಜಖೂನ ಕುಲಕೋಟಿ ಉದ್ಧರಿಸುವ ನೆಲೆನಿಭ ಸ್ಥಾನ ಬೆಳಗಾಗಲಿಕ್ಕೇರಿತು ನೀ ಒಳಿತಾಗಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 1 ಒಳಮುಖನಾಗರಿಯೋ ನೀ ಸುಲಲಿತ ಜ್ಞಾನ ಅಲೇಶ ಮಾಡದೆ ನೀ ಬ್ಯಾಗ ಬಲಿ ನಿಜಧ್ಯಾನ ಥಳಥಳಗುಡುತಲ್ಯದ ಒಳಿತಾಗಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 2 ತೊಳಿಬೇಕೆಲೊ ಮನದ ಹೀನ ಮಲಿನಗುಣ ಕರ್ಮ ತಮಂಧತನ ಕಳೆಕಾಂತಿಯುಳ್ಳ ಕರುಣಾರ್ಣವ ಸ್ವಾಮಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 3 ಸಲೆ ಮೊರೆಹೊಕ್ಕು ನೀ ಸದಾಬಲಿ ಭಕ್ತಿ ಪೂರ್ಣ ಅನುದಿನ ಸದ್ವಸ್ತು ಶರಣ ಸಕಳ ಸುರವುತಲ್ಯದೆ ಬಲ್ಲ ಸ್ವಾಮಿ ಕರುಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 4 ಇಳೆಯೊಳಿದೆ ಸಕಲಪುಣ್ಯಶಿರೋನಿಧಾನ ಘಳಿಸುವದೊಂದೆ ಸುಫಳಿತ ಸುದಿವ್ಯ ಘನ ತಿಳಿಯೊ ಸುಮನವೆ ಮಹಿಪತಿಸ್ವಾಮಿ ಪೂರ್ಣ ಒಲುವಾಂಗೆ ಮಾಡು ಗುರುಮೂರ್ತಿಗೆ ಸುನಮನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಡಿಯನಹುದೊ ಎನ್ನ ನೀ ಎನ್ನ ಪಿಡಿದಿಹ ಕೈಯಲ್ಲಿ ನಿನ್ನ ಧ್ರುವ ನೋಡದವಗುಣನ್ನ ಅವಗುಣನ್ನ ಮಾಡುವೆ ನೀ ಪಾವನ ನೀಡುವೆ ಪಡೆದೆನ್ನ ಪಡೆದೆನ್ನ ಕೂಡು ದಯದಲಿ ಸಂಪನ್ನ 1 ಭಿನ್ನವಿಲ್ಲದೆ ನೀಯೆನ್ನ ನೀಯೆನ್ನ ಚನ್ನಾಗ್ಯಾದೆ ಪ್ರಸನ್ನ ಉನ್ನತಗುಣ ನಿನ್ನ ನಿನ್ನ ಚಿನ್ಮಯದ ಚಂದ್ರನ್ನ 2 ಬಿರುದಿನ ಪ್ರಖ್ಯಾತ ಪ್ರಖ್ಯಾತ ಬಿರುದು ಪ್ರಾಣನಾಥ ತರಳ ಮಹಿಪತಿದಾತ ಸುದಾತ ಗುರುಶಿರೋಮಣಿ ಸಾಕ್ಷಾತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಜಾಕ್ಷ ಹರಿಯ ಕಂಡಲ್ಲದೆ ಈಪಂಜರದಿ ಈ ಗಿಣಿ ನಿಲ್ಲದೆ ಪ. ಬಾಲತÀನದಲ್ಲಿ ಮನೆಮನೆಯ ಪೊಕ್ಕುಪಾಲಕುಡಿದನು ಮನದಣಿಯಲಾಲಿಸಿದವನು ಇನ್ನು ಮುನಿಯಲೋಲಾಕ್ಷಿ ಬಿಡನ್ಯಾಕೀ ಗÀಸಣೆಯ 1 ಏಳುವರುಷದ ಶಿಶು ಪೋಗಿಆಲಸ್ಯ ಹಸುತೃಷೆÉಯ ನೀಗಿಶೈಲವಾಗಿ ನಿಂತಿದ್ದ ನಮಗಾಗಿಕಾಲಮ್ಯಾಲೆ ಬಿದ್ದನಿಂದ್ರ ಬಾಗಿ 2 ಕಾಳಿಂದಿಯ ಮಡುವಿನೊಳಾಡಿಕಾಳಿಯಾ ನಾಗಗೆÉ ಮದ ಹುಡಿಮೇಲೆ ಅವರೊಳು ಕೃಪೆಮಾಡಿಪಾಲಿಸಿದ ಕರುಣದಿ ನೋಡಿ3 ಪಾರಿಜಾತದ ಪೂಗಳ ತಂದುನಾರದ ಮುನೇಂದ್ರ ತಾನೆ ಬಂದುಸಾರಿದನಲ್ಲೆ ಗತಿ ನೀನೆಂದುನರ ಸುರರುಗಳಿಗೆ ಬಂಧು 4 ವೃಂದಾವನದೊಳಿವನ ಲೀಲೆ ಆ-ನಂದವನುಣಿಸಿತೆಲೆ ಬಾಲೆಎಂದವನ ಕತೆ ಕರ್ಣದೋಲೆ ಹಾ-ಗೆಂದು ಭಾವಿಸೆ ಪುಣ್ಯಶೀಲೆ 5 ಸಕಲ ಸುರರ ಶಿರೋರನ್ನಮುಕುತಿದಾಯಕ ಸುಪ್ರಸನ್ನಶ್ರೀಕೃಷ್ಣ ಅಟ್ಟಿದ ಉದ್ಧÀ್ದವನ್ನ ಬಂದುವಾಕು ಕೇಳಿ ಮನ್ನಿಸಿಯವನ6 ಚೆಲ್ವ ಹಯವದನನ್ನ ನೀರೆ ನಮ್ಮನಲ್ಲನವನಿಲ್ಲಿ ಬಾರದಿರೆಸುಲಭನ್ನ ಬೇಗ ಕರೆತಾರೆ ನಾ-ವೆಲ್ಲರವನಲ್ಲಿ ಹೋಹ ಬಾರೆ 7
--------------
ವಾದಿರಾಜ