ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಬ್ರಹ್ಮಣ್ಯತೀರ್ಥರು) ಬ್ರಹ್ಮಣ್ಯತೀರ್ಥರ ಚರಣಾಬ್ಜಯುಗ್ಮವ ಸಂಭ್ರಮದಲಿ ಸೇವಿಪೆ ಪ ಅಂಬುಜಬಂಧು ಸನ್ನಿಭಸಾಧುವೆನುತ ಶ್ರೀ ಕುಂಭಿಣಿ ಮುನಿವರ್ಯರಾ ಆರ್ಯರಾ ಅ.ಪ. ತಿದ್ದಿದ ಶ್ರೀಪುಂಡ್ರ ಮುದ್ರೆಗಳಿಂದಲಿ ಸಂ- ಶುದ್ಧಿ ಮಂಗಳಗಾತ್ರರ ರುದ್ರಗಳೊಲಿದು ಸದ್ವಿದ್ಯೆಗಳನಿತ್ತು ಉದ್ಧಾರ ಮಾಡಲೆಂದೂ ನಾ ಬಂದೂ 1 ಶಿಷ್ಯರುಗಳು ತಂದ ಭಿಕ್ಷಾನ್ನಂಗಳನಂದು ಆಕ್ಷಣ ಮಂತ್ರದಿಂದ ತÀಕ್ಷಣ ಕಲ್ಪಸಿದಂತೆ ಗೈದಾ ಧೀರ ರÀಕ್ಷಿಸೆಂದೆರಗುವೆ ನಾ ಬೇಡುವೆ 2 ಕಾಂತೆಯೋರ್ವಳು ತನ್ನ ಕಾಂತ ಸ್ವರ್ಗವನೈದೆ ಚಿಂತಿಸುತತಿ ಶೋಕದಿ ಕಾಂತೆ ವಂದಿಸಲು ಸೌಮಾಂಗಲ್ಯವರವನಿತ್ತು ಕಾಂತನ ರಕ್ಷಿಸಿದ ಕೋವಿದರಾದ 3 ಕುಂದದೆ ಸನ್ಮುನಿವೃಂದದೊಡನೆ ಬಹು ವೃಂದಾವನದಿ ಶೋಭಿಪ ಇಂದಿರೆಯರಸ ನರಸಿಂಹವಿಠ್ಠಲನ ಸನ್ನಿಧಿವರ ಪಾತ್ರರಾ ಪೂತಾತ್ಮರಾ 4
--------------
ನರಸಿಂಹವಿಠಲರು
ಪ್ರಾಯಶ್ಚಿತ್ತವೇನುಂಟದಂ ಮಾಡು ಯೆನಗೇ ಶೇಷ ಶಾಯಿಯೆ ನಾ ಕಾಣದೇ ಮಾಡಿದ ದುಷ್ಕರ್ಮಂಗಳಿಗೆ ಪ ತಿರುಮಲೆಯಂತೆ ನಾ ಮಂಚದುರುಗನಿಂಬುಗೊಂಡು ಕ ರ್ಪುರದ ವೀಳಯದ ಮಡುಪುಗಳನೇ ಕೊಟ್ಟು ಪರಿಯಂತ ಕಾಲನೊತ್ತುತ ಲಿರುತಿರ್ದು ಪರಿದು ಎನ್ನ ನೆರೆಪಾತಕನಾಗಿ ಮಾಡಿದುದಕೇ 1 ಕಡಲಶಯನ[ನ]ನೇಕ ಕೋಟಿ ಕಮಲಭವಾಂಡ ಕೊಡೆಯನೆ ಕಾಮಪಿತನೇ ಸರ್ವೋತ್ತಮನೇ ನಾ ಕುಡಿದು ಮಿಕ್ಕ ಹಾಲ ನೀ ಕುಡಿದು ಯೆನ್ನಾ ಪಾಪದೊಳು ಕೆಡಹಿ ಬಹಳ ಯಾತನೆ ಬಡಿಸೀ ಕೆಡಿಸಿದುದಕೇ 2 ಗುರುಶಿಷ್ಯರುಗಳು ಸ್ವಾಮಿ ಭೃತ್ಯರುಗಳು ದಂಪತಿಗಳೆಂಬೀ ಪರಿಯ ತಾರತಮ್ಯಂಗಳೊಂದಿಲ್ಲವೇ ಹರೀ ಶರಣವತ್ಸಲನೇ ವೇಲಾಪುರದ ವೈಕುಂಠಕೇಶವ ನರನ ಪಾಮರನ ದುರಿತಶರಧಿಯ ದಾಂಟಿಸುವುದಕೇ 3
--------------
ಬೇಲೂರು ವೈಕುಂಠದಾಸರು