ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

3ಕಾಯೇ ಕಮಲಾಲಯೇ ಮಧು ಮಥನ ಸತಿಯೆ ಪ ಕಾಯಜಾತನ ತಾಯೆನಮಿಸುವೆ ಕಾಯೆ ತ್ರಿಜಗಕೆ ತೋಯ ಜಾಂಬಕಿ ಅ.ಪ ತೋಯಜಾಸನ ಮುಖ್ಯ ತ್ರಿದಶ ನಿ ಕಾಯ ಸಂಶೇವಿತಳೆ ಬೇಡುವೆ ಹೇಯ ವಿಷಯವ ಮರಸಿ ಹರಿಪದ ತೋಯಜಕೆ ಮನವೆರಗುವಂದದಿ 1 ಘೋರತರ ಸಂಸಾರ ಶ್ರಮ ಪರಿ ಹಾರ ಮಾಳ್ಪ ಸಮೀರ ಸಮಯದಿ ಸಾರವನು ಸುಜನರಿಗೆ ಬೋಧಿಪ ಸೂರಿಗಳ ಸಹವಾಸ ಪಾಲಿಸಿ 2 ಭಾರ್ಗವಿಯೆ ಕಾಮಾದಿ ಷಡ್ರಿಪು ವರ್ಗವನು ಗೆಲುವದಕೆ ಗುರುಗಳ- ನು ಗ್ರಹಿಸಿ ಸುಜ್ಞಾನ ಭಕುತಿ ವೈ ರಾಗ್ಯ ವೆಂಬುವ ಭಾಗ್ಯ ಒದಗಿಸಿ 3 ರಾಮನರಸಿಯೆ ನಿಮ್ಮ ಶುಭಪದ ತಾಮರಸವನು ಬಿಡದೆ ಪೂಜಿಪ ಕಾಮಿನೀ ಜನ ಸ್ತೋಮಕನುದಿನ ಕಾಮಿತಾರ್ಥಗಳಿತ್ತು ಕರುಣದಿ 4 ಮಂಗಳಪ್ರದ ಕೃಷ್ಣವೇಣಿ ತ- ರಂಗ ಶೋಭಿತ ಕಾರ್ಪರಾಲಯ ವಿಹಂಗ ರಾಜ ತು ರಂಗ ಶ್ರೀ ನರಸಿಂಗ ನರಸಿಯೆ5
--------------
ಕಾರ್ಪರ ನರಹರಿದಾಸರು
ಪಾರ್ವತೀದೇವಿಯ ಸ್ತುತಿ (ಮಂಗಳೂರು ಮಂಗಳಾದೇವಿ) ಮಹಾಮಾಯೆ ದಯದೋರೆಲೆ ತಾಯೆ ಪ. ಸದರದೊಳೆಬ್ಬಿಸುತಿದಿರಾದ ಮದನಾಂಬಾ ಮುದ ದಾಯಿ ಶುಭಪದದಾಯಿ 1 ದೇವತೆಗಳ ಸೇರಿರುವಾ ಮನೋಹರ ತನುವಾಗಿ ನಿಕರ ಮಹಿಷಾಸುರನಾ ಮೃಗಪತಿಗಮನಾ 2 ಖಂಡ್ಯಧಾರೆಯೊಳ್ದಿಂಡರಿದೂ ಖಂಡಿಸುತಾ ರಣ ಮಂಡಲದಿ ಬ್ರಹ್ಮಾಂಡ ನಿದಾನಿ 3 ತ್ರಿಗುಣಜಮಲವು ದಾನವಾರಿಗಳ ಮಾನಿಸಿ ದಿತಿಜರ ಹಾನಿಗೊಳಿಸುವದು ಹರಿಪರವು ಮಹಭರವು ಮನದಿರವೂ 4 ರಕ್ಷಿಸು ಪುರುಕರುಣಿ ಕ್ಷಮೆಯಿಂದಂ ಭರಣಿ ಖೂಳ ವೈರಿಗಳನೇಳದಂತೆ ಪಾತಾಳಕೆ ಕೆಡಹಿಸು ಮಮ ಜನನಿನೀಲ ಮೇಘ ನಿಭ ವೆಂಕಟರಾಜನ ಲೋಲಕಟಾಕ್ಷಸದಾಕರುಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸೊ ಮಾನವನೆ ಗುರುಚರಣ ಅಂತ: ಕರಣ ಶುದ್ಧಿಯಲಿ ಮರೆಯದೆ ಪ್ರತಿದಿನ ಪ ದುರಿತ ಘನತತಿ ಮರುತ ಶ್ರೀ ರಘುದಾಂತ ತೀರ್ಥರ ಕರಜ ಶ್ರೀ ರಘುವೀರ ತೀರ್ಥರ ಚರಣಯುಗಲವ ಹರುಷದಿಂದಲಿ ಅ.ಪ ಧರೆಯೋಳ್ ಸುಂದರ ಸುರಪುರದಿ ಜನಿಸಿ ಗುರು ವಿಠ್ಠಲಾರ್ಯರ ಚರಣಾನುಗ್ರಹದಿ ವರ ಶಬ್ದ ಶಾಸ್ತ್ರವ ತ್ವರದಿ ಕಲಿತು ತುರಿಯಾ ಶ್ರಮವನೆ ಸ್ವೀಕರಿಸಿ ಗುರುಮುಖದಿ ಮರುತ ಶಾಸ್ತ್ರವನರಿತು ಧರ್ಮದೊಳಿರುತ ವಿಷಯದಿ ವಿರತಿಯಲಿ ಅನವರತ ಪ್ರವಚನ ನಿರತ ಸದ್ಗುಣ ಭರಿತ ಪಾವನ ಚರಿತರಂಘ್ರಿಯ 1 ಹೇಮಾಲಂಕೃತ ರತ್ನನಿಚಯಯುಕ್ತ ಹೇಮ ಮಂಟಪದಿ ಸುಂದರ ಶುಭಕಾಯಾ ಶ್ರೀ ಮನೋಹರ ಕವಿಗೇಯಾ ಬ್ರಹ್ಮ ವ್ಯೋಮ ಕೇಶಾದಿ ನಿರ್ಜರಗÀಣಶೇವ್ಯಾ ಭೂಮಿ ಸುರಜನ ಸ್ತೋಮಕನುದಿನ ಕಾಮಿತಾರ್ಥವ ಗರಿವ ಸೀತಾರಾಮರಂಘ್ರಿಯ ತಾಮರಸವನು ನೇಮದಿಂದರ್ಚಿಪರ ಶುಭಪದ2 ಪರಿಶೋಭಿಸುವ ಕಾಷಾಯ ವಸ್ತ್ರ ವರನಾಮ ಮುದ್ರಾಲಂಕೃತ ತನುಸಿರಿಯ ಗುರು ಅಕ್ಷೋಭ್ಯರ ಶುಭಚರಿಯ ಗ್ರಂಥ ವಿರಚಿಸಿದರು ನವರತುನ ಮಾಲಿಕೆಯ ಧರಣಿಯೊಳು ಸಂಚರಿಸುತಲಿ ಬಲು ಕರುಣದಿಂದಲಿ ಶರಣು ಜನರಘ ಭವ ಭಯಹರಣ ಗುರುವರ ಚರಣಯುಗಲವ3 ವಿನುತ ಸಮೀರ ಕೃತ ಸಾರಶಾಸ್ತ್ರವನೆ ಬೋಧಿಸುತ ಸಜ್ಜನರ ಘೋರ ಸಂಸೃತಿ ಭಯದೂರ ಮಾಡಿ ತೋರಿ ಸನ್ಮಾರ್ಗ ದೀಪಿಕೆಯ ಸುಸಾರ ಸೇರಿದವರಘ ದೂರ ಪರಮೋದಾರ ಗುಣ ಗಂ- ಸೂರಿಜನ ಪರಿವಾರನುತ ಜಿತ- ಮಾರ ಶ್ರೀ ರಘುವೀರ ತೀರ್ಥರ 4 ಶೇಷಾಚಲದಿ ಶಿಷ್ಯಗಣದಿ ಬಂದ ಶ್ರೀ ಸತ್ಯ ಪ್ರಮೋದ ತೀರ್ಥರ ಸ್ವರ್ಣೋತ್ಸವದಿ ತೋಷಬಡಿಸುತ ನಿರ್ಭಯದಿ ಉಪನ್ಯಾಸ ಮಾಡಿದರು ವೀಶಗಮನ ಸುರೇಶ ಭಕುತರ ಸಿರಿ ನರಕೇಸರಿಗೆ ಪ್ರಿಯದಾಸ ಕೊಡಲಿವಾಸ ಕರ್ಮಂದೀಶರಂಘ್ರಿಯ 5
--------------
ಕಾರ್ಪರ ನರಹರಿದಾಸರು
ಸಂತರೆ ಭವದೂರರು ಹಿತಕಾರ್ಯರು ಪ.ಸಂತರ ಸೇವೆ ಶ್ರೀಹರಿ ಸೇವೆಸಂತರ ಮತವೆ ಹರಿಸಮ್ಮತವುಸಂತರ ಮತಿಯೆ ಮುಕುತಿಯ ಗತಿಯುಸಂತರಪಾದಚಿಂತನೆಗಾಹ್ಲಾದ1ಸಂತರಗಾತ್ರಭುವನಪವಿತ್ರಸಂತರ ನೋಟ ಪಾಪಗಳೋಟಸಂತರ ವಚನ ಧರ್ಮವಿರಚನಸಂತರ ಸಂಗ ತೋಷತರಂಗ 2ಸಂತರಿಂದೈಹಿಕಾಮುಷ್ಮಿಕ ಸೌಖ್ಯಸಂತರ ಅಭಯವಿರಲಾವಭವಸಂತರ ಕಂಡವ ನಿಜ ಸುಖ ಕಂಡಸಂತ ವಿಯೋಗ ತಮಸಿನಭೋಗ3ಸಂತರಖೇದವಂಶ ವಿಚ್ಛೇದಸಂತರ ಪ್ರೀತಿ ಶುಭಪದಪ್ರಾಪ್ತಿಸಂತರ ವಾರ್ತಾಖಿಳ ಪುರುಷಾರ್ಥಸಂತರ ಮಹಿಮಿ ಹೊಗಳ್ವಾತ ಪ್ರೇಮಿ 4ಸಂತರ ಊರೆ ಎನ್ನ ತವರೂರುಸಂತರ ಗತಿಗೋತ್ರರು ಎನಗಾಗಿಸಂತರ ಪದವನಪ್ಪಿದರೊಲಿವಸಂತರಿಗರಸ ಪ್ರಸನ್ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು