ಒಟ್ಟು 14 ಕಡೆಗಳಲ್ಲಿ , 12 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ನರಹರಿಯೆ ಸುಕ್ಷೇಮವ ಪ. ಪರಮಪ್ರಿಯರಿಗೆ ಇತ್ತು ವರ ಸೇವೆ ಕೈಕೊಂಡು ನಿರುತದಿ ಪಾಲಿಸೆನ್ನ ಘನ್ನ ಅ.ಪ. ದಾಸ ಗುರುಕುಲತಿಲಕರಿವರಿಗೆ ನೀನೀಗ ಘಾಸಿಗೊಳಿಸುವುದುಚಿತವೆ ದೋಷದೂರನೆ ಎಮ್ಮ ಮನವನರಿತವ ಜನರ ದೂಷಣೆಗೆ ಗುರಿ ಮಾಳ್ಪರೆ ಘಾಸಿಪಡುತಿಹರ ಆಯಾಸಪಡಿಸುವುದು ಬಹು ಲೇಸಲ್ಲ ನಿನಗೆ ಥರವೆ ಶೇಷಶಯನನೆ ಎಮ್ಮ ಮಾತು ಲಾಲಿಸಿ ಈಗ ಪೋಷಿಸಲಿ ಬೇಕೊ ಸ್ವಾಮಿ ಪ್ರೇಮಿ 1 ಕಲ್ಪತರುವಂತಿಹರು ಶಿಷ್ಯವೃಂದಕೆ ಇವರು ಇಪ್ಪರೋ ಚಂದ ಜಗದಿ ತಪ್ಪದಲೆ ಆಯುರಾರೊಗ್ಯ ಕೊಟ್ಟು ನೀ ಸರ್ಪಶಯನನೆ ರಕ್ಷಿಸೊ ಒಪ್ಪದಿಂದಲಿ ಎಮ್ಮ ಸೇವೆ ಸಫಲವಗೊಳಿಸಿ ಅಪ್ಪ ಸಂತಸವಪಡಿಸೊ ಬಪ್ಪ ಪೋಪ ಕೀರ್ತಿ ಅಪಕೀರ್ತಿ ನಿನ್ನಡಿಗೆ ಪುಷ್ಪದಂತರ್ಪಿಸುವೆನೊ ನೃಹರಿ 2 ಮನವಚನ ಕಾಯದಲಿ ಅನ್ಯ ಬಗೆಯದೆ ಎಮ್ಮ ಗುರುಗಳನು ಸೇವಿಸುವೆವೊ ಚಿನುಮಯನೆ ನೀ ಸಾಕ್ಷಿಯೋ ಮನುಜರಿದನೇನ ಬಲ್ಲರು ಕೇಳು ತಂತಮ್ಮ ಮನ ಬಂದ ತೆರ ನುಡಿವರೊ ಎನಗದರ ಗೊಡವೇನು ನೀನಿರಲು ಭಯವೇನು ಘನ ಮಹಿಮ ಪೊರೆಯೊ ಬೇಗ ಸ್ವಾಮಿ 3 ಪಂಚಪ್ರಾಣರು ಇವರು ವಂಚನಿಲ್ಲದೆ ಪೇಳ್ವೆ ಮುಂಚೆ ನೀ ಕಾಪಾಡೆಲೊ ಸಂಚಿತಾಗಾಮಿ ಪ್ರಾರಬ್ಧ ದುಷ್ಕರ್ಮಗಳು ಮಿಂಚಿನಂದದಿ ಮಾಡೆಲೊ ಸಂಚಿತಾಗಾಮಿಗಳ ಶಿಷ್ಯರಿಗೆ ಕಳೆವರಿಗೆ ಕೊಂಚ ಬಾಧೆಯ ಕೊಡದೆಲೊ ಸಂಚಿತಿತ ಪ್ರದನೆ ಎನ್ನ ಮೊರೆ ಲಾಲಿಸು ಅಚಂಚಲದ ಕ್ಷೇಮವೀಯೋ ದೇವ 4 ಪರಿ ಪ್ರಾರ್ಥಿಸುವೆ ಶ್ರೀ ಪತಿಯೆ ದಯವ ಮಾಡೊ ನಾ ಪೇಳ್ವುದಿನ್ನೇನು ನಿನ್ನ ಸೇವಾದಿಗಳು ಕೃಪೆಯಿಂದ ಗುರುಗಳಿಂದ ಪಾಪ ಪರಿಹರನೆ ನೀ ಕೈಕೊಂಡು ಕೀರ್ತಿಯನು ಈ ಪೃಥ್ವಿಯಲ್ಲಿ ನೆಲಸೊ ಗೋಪಾಲಕೃಷ್ಣವಿಠ್ಠಲನೆ ನೀ ಕಾಪಾಡು ಕಾಪಾಡು ಜಗದ್ರಕ್ಷಕ ಹರಿಯೆ 5
--------------
ಅಂಬಾಬಾಯಿ
ಆಶೆಯ ಬಿಡಿಸಿದ್ಯೋ ಎನ್ನಾ ಮುಂದೆ ವಾಸವಾಗದಂತೆ ಕಾಯೋ ಮೋಹನ್ನಾ ವಾಸುದೇವನೆ ನಿನ್ನ ಸ್ಮರಣೆಯೊಳಗೆ ಮನ ಸೂಸದಂತೆ ಸ್ಥಿರ ನಿಜದಲ್ಲಿ ನಿಲಿಸಯ್ಯಾ ಪ ಬೆಂಬಿಡದೆಲೆ ನಿಜದರಿವನ್ನು ಕೊಡುವಾ ಕುಂಭಿಣಿಯೊಳಗೆಲ್ಲಾ ನೀನಲ್ಲದೆ ಎನ್ನಾ ನಂಬಿಗೆ ಕೊಡುವವರ್ಯಾರೋ ನಾರಾಯಣಾ 1 ಬೆಂದೆನು ನಾ ಭವದೊಳಗೆ ಎನ್ನಾ ತಂದೆ ನೀ ಕಾಯೋ ನಿಜಪದದೊಳಗೆ ಹಿಂದಿನ ಪ್ರಾರಬ್ಧ ಬವಣೆಯ ತೀರಿಸಿ ಮುಂದೆ ನೀ ಸಲಹೊ ಪರಮಪುರುಷನೆ ಹರಿ 2 ವಾಸನೆ ಬಂಧವೇ ಜೀವಾ ನಿ ರ್ವಾಸನೆಯನು ಕೊಟ್ಟು ಸಲಹೊ ಮಾಧವಾ ಶೇಷಶಯನನೆ ನಿಜ ಧ್ಯಾನದೊಳಿರಿಸೆನ್ನಾ ಆಶೆಯನು ಸಲಿಸಯ್ಯಾ ಮುರಾರಿ 3 ಅನಂತ ಮಹಿಮಾ ಮೇಘಶ್ಯಾಮಾ ನಿಶ್ಚಿಂತ ನಿಜ ಶಾಂತಿ ಸ್ವಸುಖವೀವಾ ನಂತಪರಾಧವ ಕ್ಷಮಿಸೆನ್ನಾ ಗುರುವೇ 4
--------------
ಶಾಂತಿಬಾಯಿ
ಕಾಲಕಾಲದಲಿ ಕೇಶವನೆನ್ನಿರೊ ಬಾಲ ಮುಕುಂದ ಮಾಧವನೆನ್ನಿರೊ ಧ್ರುವ ಉದಯಕಾಲದಲಿ ಅನಂತಮಹಿಮನೆನ್ನಿ ಮಧ್ಯಾಹ್ನದಲಿ ಪದ್ಮನಾ¨sನೆನ್ನಿ ಸಂಧ್ಯಾಸಾಯಂಕಾಲದಲಿ ಶ್ರೀಧರನೆನ್ನಿ ಸದಾ ಕಾಲದಲಿ ಶ್ರೀ ಹರಿಯೆನ್ನಿರೊ 1 ಏಳುತ ಮಚ್ಛಾವತಾರ ಅಚ್ಯುತನೆನ್ನಿ ಮಲಗುತ ಶೇಷಶಯನನೆನ್ನಿರೊ ಹೇಳುತ ವಿಷ್ಣುವರಾಹವತಾರನೆನ್ನಿ ಕೇಳುತ ಕೃಷ್ಣಾವತಾರನೆನ್ನಿ 2 ನಡೆಯುತ ಸುಗುಣ ನಿರ್ಗುಣ ಸರ್ವೋತ್ತಮನೆನ್ನಿ ನುಡಿಯುತ ನಾರಯಣನೆನ್ನಿರೊ ಮಾಡುತ ಕೃಷ್ಣನಿರ್ಮಿತ ದಾಮೋದರನೆನ್ನಿ ಕೂಡುತ ಕೂರ್ಮಾವತಾರನೆನ್ನಿ3 ಆಡುತ ಗರುಡವಾಹನ ತ್ರಿವಿಕ್ರಮನೆನ್ನಿ ಬೇಡುತ ಸ್ವಾಮಿ ವಾಮನನೆನ್ನಿರೊ ನೋಡುತ ವಾರಿಜನೇತ್ರ ಪ್ರಸಿದ್ದನೆನ್ನಿ ಪಾಡುತ ಪರಮಾತ್ಮನೆನ್ನಿರೊ 4 ಉದ್ಯೋಗದಲಿ ಸಹಕಾರನಿರುದ್ದನೆನ್ನಿ ಉದರ ಕಾಯದಲಿ ಉಪೇಂದ್ರನೆನ್ನಿ ಮೇದಿನೊಯೊಳು ಹರಿಮಧುಸೂದನನೆನ್ನಿ ಆದಿ ಅಂತಿಮ ಅಧೋಕ್ಷಜನೆನ್ನಿರೊ 5 ಹೃದಯಕಮಲದೊಳು ಹೃಷೀಕೇಶನು ಎನ್ನಿ ಶಬ್ದಜಿಹ್ವೆಲಿ ಜನಾರ್ಧನನೆನ್ನಿರೊ ಬುದ್ಧಿಯಲಿ ಸಿದ್ಧಬೌದ್ದಾವತಾರನೆನ್ನಿ ಅದಿಅನಾದಿ ಗೋವಿಂದನೆನ್ನಿ 6 ಅನುದಿನ ಮನದೊಳು ಘನಮಹಿಮನು ಎನ್ನಿ ತನುವಿನೊಳು ಪುರುಷೋತ್ತಮ ನಾನೆನ್ನಿ ಅನ್ನವುದಕ ಸೇವಿಸುವ ಹರಿಭೋಕ್ತನೆನ್ನಿ ಘನಭೂಷಣದಿ ಸಂಕರುಷಣನೆನ್ನಿ 7 ಸತಿಪತಿ ಸಂಯೋಗದಲಿ ಪ್ರದ್ಯುಮ್ನನೆನ್ನಿ ಪತಿತಪಾವನ ಪರಬ್ರಹ್ಮನೆನ್ನಿ ಭಕ್ತವತ್ಸಲ ನರಸಿಂಹಾವತಾರನೆನ್ನಿ ಮುಕ್ತಿದಾಯಕ ದೇವೋತ್ತಮನೆನ್ನಿರೊ 8 ಪಾವನಮೂರುತಿ ಪರಶುರಾಮನೆನ್ನಿ ಜೀವಸಂಜೀವ ಶ್ರೀ ರಾಮನೆನ್ನಿ ಭವಭಯನಾಶ ಕಲ್ಕ್ಯಾವತಾರನೆನ್ನಿ ಮಹಿಪತಿಗುರು ವಾಸುದೇವನೆನ್ನಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಸನ ಮೇಲಿಷ್ಟು ಬೇಸರವ್ಯಾಕೋ ಶೇಷಶಯನನೆ ನಿನ್ನ ಧ್ಯಾಸದೊಳಿರುವ ಪ ನಶಿಸಿಹೋಗುವ ಕಾಯದ್ವ್ಯಸನವನು ಪರಿಹರಿಸಿ ಹಸನಾದ ಮತಿಯೆನಗೆ ಒಸೆದು ನೀಡೆಂದು ನಿಶಿದಿವದಿ ನಿನ್ನಡಿಕುಸುಮಗಳನಂಬಿ ಮಾ ನಸದಿ ಭಜಿಸಲು ಎನಗೊಶನಾಗದಿರುವಿ1 ಜಡತನದ ಸಂಸಾರ ತೊಡರೆಡರು ಕಡಿದು ಗಡ ಜಡಮತಿಯ ತೊಡೆದೆನಗೆ ದೃಢ ನಿಶ್ಚಯವನು ಕೊಡುಯೆಂದು ದೃಢದಿ ನಿನ್ನಡಿಗೆರಗಿ ಬೇಡಿದರೆ ಒಡಲೊಳಗೆ ನಿಂದೆನ್ನ ಜಡತನಳಿವಲ್ಲಿ 2 ಶ್ರೀಶ ಶ್ರೀರಾಮ ನಿನ್ನ ಧ್ಯಾನಮಾಡಲು ಒಮ್ಮೆ ಅಘ ನಾಶನಲ್ಲೇನು ದಾಸಜನಕರುಣಾಬ್ಧಿ ದಾಸನೊಳ್ದಯವಾಗಿ ಪೋಷಿಸೈ ತವಪಾದ ನಿಜಧ್ಯಾಸವಿತ್ತು 3
--------------
ರಾಮದಾಸರು
ನೀನೊಲಿದರೇನು ಏನಿಲ್ಲ ಹರಿಯೆ ಪ ನೀನೊಲಿಯದಿರೆ ಮಾತ್ರ ಏನೇನು ಇಲ್ಲ ಅ.ಪ. ಸಾಧನವು ಸಂಪತ್ತು ಸಾಧಿಸದೆ ದೊರೆಯುವುದುಪಾದಗಳ ಸೇವೆ ತಾ ತಾನಾಗಿ ಲಭಿಸುವುದುಖೇದ ವ್ಯಸನಗಳೆಲ್ಲ ಬಾಧಿಸದಲೋಡುವುದುಸಾಧು ಸಂಗವು ಭಕ್ತಿ ಬೋಧಿಸದೆ ಬರುವವು 1 ವಾಸುದೇವನೆ ವಿಪುಲ ಐಸಿರಿಯನೀಡುತಲೆಬೇಸರದೆ ನಿನ್ನವರ ಲೇಸಾಗಿ ಸಲಹುವೆಯೊದಾಸ ಭಕುತರು ಶೆರಗ ಹಾನಿ ಬೇಡಿದರೇನುಶೇಷಶಯನನೆ ನಿನ್ನ ಈಸು ಮಹಿಮೆಯ ತಿಳಿಯೆ 2 ಮನಸು ನಿನ್ನಡಿಗಳಲಿ ಕೊನೆತನಕ ಇರಿಸುವದುಘನಕೆಲಸ ನಿನದಯ್ಯ ಮನುಜರಿಗೆ ಸಾಧ್ಯವೇತನುಮನಗಳಿವು ನಿನ್ನವೆ ನನದೆಂಬುದೇನುಂಟುಧಣಿಯ ಗದುಗಿನ ವೀರನಾರಾಯಣನೆ ಒಲಿಯೋ 3
--------------
ವೀರನಾರಾಯಣ
ಪನ್ನಂಗ ಶಯನನ ಸುವರ್ಣ ಕವಚಸುಗುಣಿ ಧರಿಸಿಧನ್ಯ ಧನ್ಯಳೆ ದೂತೆಮ್ಮ ಪ. ಇಂದು ನಮಗೆ 1 ಶೇಷಶಯನನೆÉಂಬೊ ದಿವ್ಯಭೂಷಣ ಮಾಡಿಟ್ಟ ಬಾಲೆ ವಿಶೇಷ ಕರುಣ ಮಾಡಿಉತ್ತಮ ಭಾಷ್ಯ ಹೇಳಿ ಹರುಷ ಬಡಿಸಿದಿ2 ಅಚ್ಯುತ ರಾಮೇಶನೆಂಬೊಅಚ್ಚ ಬಾಳೆ ಹಣ್ಣು ಮೆಲಿಸಿದಿಉತ್ಸಾಹ ಉನ್ನತಿಯ ಮಾಡಿಸ್ವಚ್ಛ ಚಿತ್ತ ಚಲಿಸಧಾಂಗೆ3
--------------
ಗಲಗಲಿಅವ್ವನವರು
ಪಲಿಮಾರು ಮಠದ ಶ್ರೀರಘುವರ್ಯರ ಕೃತಿಗಳು ಯುಗ್ಮ ಉಡುಪಿನ ಕೃಷ್ಣನೇ 1 ದ್ವಾರಕಾಪುರದಲ್ಲಿ ದೇವಕಿ ಸರಸ ಬಾಲಕ ಲೀಲೆಯಾ ತೋರು ಎನುತಲಿ ದಧಿಯ ಮಥಿಸಲು ಕರುಣಿ ಬಾಲ್ಯವ ತೋರಿದೆ2 ತೊಡೆಯನೇರಿ ಸ್ತನ್ಯಪಾನವ ಮಾಡಿ ಮೋದವ ತಾಯಿಗೆ ಕೊಡುತ ಕಡೆಗೋಲ್ ನೇಣು ಸಹಿತಲಿ ಪ್ರೌಢ ನೀನಪಹರಿಸಿದೆ 3 ಮೊಸರು ಭಾಂಡವನೊಡೆದು ಬೆಣ್ಣೆಯನಸುನಗುತಲೀ ಭಕ್ಷಿಸೀ ಶೇಷಶಯನನೆ ನೀನು ಕುಣಿಯೆ ಸಂ- ತೋಷಪಟ್ಟಳು ದೇವಕಿ4 ಸತಿ ನುಡಿದಳು 5 ವಿತತ ವೈಭವ ಈ ಪರಿಯಲಿಪ್ರತಿಮೆಯನ್ನೇ ಮಾಡಿಸಿ ಸತತ ಪೂಜೆಯ ಮಾಳ್ಪರೀ ಅತಿ ಪ್ರೀತಿಯಿಂದಲಿ ಕೊಡು ಎನಗೆ 6 ಪರಿ ಪೇಳೆ ವಿಶ್ವ-ಕರ್ಮನಿಂದಾ ಮಾಡಿಸಿ ಕಮಲನಾಭನು ಇತ್ತು(ದ್ದು) ಅದರಲಿ ವಿಮಲ ಪೂಜೆಯ ಕೊಂಡನು 7 ಶರಧಿ ತೀರದಲಿತ್ತನು8 ನಾವೆಯಲ್ಲಿ ಗೋಪಿಚಂದನ ಸಂವೃತಾರ್ಚಯು ಬರುತಿರೆ ನಾವೆಯೊಡೆಯಲು ಮಧ್ವಮುನಿಪನು ಭಾವದಿಂದಲೆ ತಂದನು 9 ಅವರರೊಡೆಯ ಶ್ರೀ ಮರುತಪತಿತತ್ ಪ್ರತಿಷ್ಠೆಯ ವಿರಚಿಸಿ ಕುಮುದ ಬಂಧು ಕ್ಷೇತ್ರದಲಿ ನಿ-ನ್ನಮಿತ ಪೂಜೆಯ ಮಾಡಿದ 10 ನನ್ನ ಹಿರಿಯರ ಪುಣ್ಯ ಫಲಿಸಲು ನಿನ್ನ ಪೂಜೆಯ ಮಾಡುತಧನ್ಯನಾದೆನು ಮುಕ್ತಿ ಕರಗತ ಎನ್ನಗಾಯಿತು ಕೃಷ್ಣನೇ 11 ಮಧ್ವಪೂಜಿತ ರಕ್ಷಿಸೆನ್ನನು ಸಾಧ್ವಸೋಝ್ಝಿತ ಸದ್ಗುಣ ಸಾಧ್ವಲಂಕೃತ ವೇಷ ಮುಕ್ತಿ ಪ-ದಾಬ್ಜನೇ ರಘುತಿಲಕನೇ 12
--------------
ಅನ್ಯದಾಸರು
ಪುಟ್ಟಿಸಿದ್ದೇನು ಕಾರಣವೋ ಸೃಷ್ಟಿಗೋಡೆಯಾ ಪ. ಶ್ರೀಕೃಷ್ಣ ಮೂರುತಿವೊಂದಿಷ್ಟು ತಿಳಿಯದೋ ಮಾಯಾ ಜೀಯಾ ಅ.ಪ. ಆವಾವ ಸಾಧನವಾಗಲಿಲ್ಲಾ ಯನ್ನಿಂದ ಶ್ರೀದೇವಾ ಕರವ ಬಿಡುವುದುಚಿತವೇನು ಮಾಧವಾ ನಿನ್ನ ಮನದಣಿಯ ನೋಡಾದೆ ಹಾಗಾದೆ 1 ಹರಿಮೂರ್ತಿ ನೋಡಲೊಲ್ಲಾದು ಯನ್ನಮನವು ಪರಪುರುಷರ ನೋಡಿತು ಮನಸು ಹೊಲೆಗೆಡಿಸಿತು ಪುರುಷೋತ್ತಮನ ಮರಿತಿತು 2 ಹರಕಥಾ ಶ್ರವಣ ಕೇಳದು ಎನ್ನ ಕರ್ಣಂಗಳು ಪರವಾರ್ತೆಗೆ ಹೊತ್ತು ಸಾಲದು ಸರ್ವೋತ್ತಮನೆ ನಿನ್ನ ಮರೆತೆನು ಉನ್ಮತ್ತಳಾದೆ 3 ಹರಿನಿರ್ಮಾಲ್ಯವ ಕೊಳ್ಳದು ಯನ್ನ ಮೂಗು ಪರಪುರುಷರಾ ಮೈಗಂಧವಾ ಆಘ್ರಾಣಿಸುವುದು ನಿನ್ನ ನಾಮ ಸ್ಮರಣೆಯನು ಮರೆತೆನು 4 ಹರಿಯಾತ್ರೆಯಾ ಮಾಡಲಿಲ್ಲ ಯನ್ನ ಕಾಲು ಜಾರಸ್ತ್ರೀಯರ ಮನೆಮನೆ ತಿರುಗುವೆನು ಪರಿ ನೀಯನ್ನ ಮರೆಯುವುದುಚಿತವೆ 5 ಎನ್ನ ಇಂದ್ರಿಯಗಳು ಈ ಪರಿವ್ಯರ್ಥವಾಯಿತು ಸಾರ್ಥವಾಗಲಿಲ್ಲ ಪಾರ್ಥಸಾರಥಿ ನಿನ್ನ ನೋಡಿ ಪವಿತ್ರಳಾಗಲಿಲ್ಲ ಏಕಿನ್ನ ಈ ಪರಿಯ ಮರುಳು ಮಾಡುವಿದೇವಾ ಧರೆಯೊಳಗೆನ್ನ ತಂದುದಕೆ ಬಂದಕಾರ್ಯವಾಗಲಿಲ್ಲ 6 ಆವಬಾಧೆಯು ನಾನರಿಯೆ ಪರಜಾತಿಯ ಆ ಮನಸು ಪೋಗುವುದು ಕೋತಿಯಂದದಿ ಕುಣಿಸುವರು ಇದು ರೀತಿಯೆ 7 ಭವಸಾಗರದೊಳು ಇದ್ದು ಸೊರಗಲಾರೆನೊ ಘಾಸಿಗೊಳಿಸುವುದು ನಿನಗೆ ಧರ್ಮವೆ ವಾಸುದೇವನೆ ನಿಮ್ಮ ನಾಮವನು ನೆನೆಯದೇ 8 ಇರುಳು ಹಗಲು ಹೀಗೆ ದುರುಳತನದಲಿ ತಿರುಗಿದೆನು ಗುರು ಹಿರಿಯರಂಘ್ರಿಗೆ ಶಿರವ ಬಾಗದೆ 9 ಎಷ್ಟು ಮೊರೆ ಹೊಕ್ಕರೇನು ಒಂದಿಷ್ಟು ದಯಪುಟ್ಟದು ನಾನೀಗ ದ್ವೇಷಿಯೇನೋ ಶೇಷಶಯನನೆ ನಮ್ಮ ಕಾಳೀಮರ್ಧನಕೃಷ್ಣನೆ 10
--------------
ಕಳಸದ ಸುಂದರಮ್ಮ
ಮಾನವಾತ್ಮರೆ ನಿಮ್ಮ ಮಾನಸ ಪೂಜೆಯಿಂಮಾನವನಿಗೆ ಮೋಕ್ಷ ಸಾಧಿಸೀರಿ ಪ ರತ್ನ ನಿರ್ಮಿತ ಸುಚರಿತ್ರ ಮಂಟಪವನ್ನುಸತ್ಯಭಾಮೆಯ ಪತಿಗಿತ್ತು ಪೂಜಿಸುವೆ1 ಆಸನ ನೀಡುವೆ ಶೇಷಶಯನನೆ ಇಲ್ಲಿವಾಸ ಮಾಡಿ ಎನ್ನ ಸೇವೆ ಸ್ವೀಕರಿಸು2 ಧ್ಯಾನ ಮಾಡುವೆ ನಿನ್ನ ಗಾನ ಮಾಡುವೆ ನಿನ್ನಜ್ಞಾನ ಭೂಷಣ ಶೋಭಿತಾನನಾಂಬುಜ 3 ಧೃತ ವೇಣುಗೋಪಾಲ ಬಾರೋ ಮನಸಿಗೆ ತೋರೊಮೂರುತಿ ನಿನ್ನಯ ಸಮೀರ ಸಂಸ್ತುತನೆ 4 ಅಘ್ರ್ಯ ನೀಡುವೆ ನಾನು ಅನಘ್ರ್ಯ ವಸ್ತುಗಳಿಂದಸ್ವಘ್ರ್ಯಗ್ರಹಣ ಮಾಡೋ ಭರ್ಗ ಸೇವಿತನೆ 5 ಪಾದ್ಯ ನೀಡುವೆ ವೇದ ವೇದ್ಯ ಮಹಿಮನೇ ಮುನ್ನಾವದ್ಯ ಕಳೆದು ಭವದಿಂದ ಉದ್ಧರಿಸೆನ್ನ 6 ಆಚಮನವ ನೀಡುವೆ ಹೇ ಚತುರಾನನೇಶವಾಚಾಮಗೋಚರ ಮೋಚಕ ಹೇತು 7 ಸುದತಿ ಮೋಹನ ತವಮಧುಪರ್ಕವನೀವೆ ಮುದದಿ ಸ್ವೀಕರಿಸು 8 ಮತ್ತೆ ಆಚಮನವನಿತ್ತು ಪೂಜಿಪೆ ಕರವೆತ್ತಿ ಮುಗಿವೆ ಸರ್ವಭಕ್ತ ಪೋಷಕನೆ 9 ಗಂಗೆ ಯಮುನೆ ಗೋದಾ ತುಂಗೆ ಜಲವ ತಂದಿಹೆ ಅ-ನಂಗ ಜನಕ ಮಾಡೋ ಅಭ್ಯಂಗ ಸ್ನಾನ 10 ನಿರಿಗೆಗಳನೆ ಹಾಕಿ ಜರದ ಪೀತಾಂಬರ ಗ-ರುಡವಾಹನ ನೀನು ಧರಿಸು ಮಧ್ಯದಲಿ 11 ಹಾರ ಕಿರೀಟ ಕಾಂಚಿ ನೀರ ನೂಪುರ ಸು-ಕೇಯೂರ ನೂಪುರನೀವೆ ಧಾರುಣಿಪತಿಗೆ 12 ಸ್ವರ್ಣ ರಚಿಸಿದ ಸೂತ್ರವನು ಕೊಡುವೆ ಲಕ್ಷ್ಮೀರನ್ನ ಸೌರಭ ಗಂಧವನು ಸ್ವೀಕರಿಸು 13 ವಾಸುದೇವನೆ ದಿವ್ಯ ನಾಸಿಕೇಂದ್ರಿಯದಿಂದಈಸು ಧೂಪದ ಗಂಧ ವಾಸನೆ ಗ್ರಹಿಸೋ 14 ಮರುಗು ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸುಮಗಳ ಪರಿಮಳ ಧರಿಸೋ ಮಧ್ಯದಲಿ 15 ಹತ್ತು ಅಂಗಗಳಿಂದ ಉತ್ತಮ ಸುಧೂಪವಎತ್ತುವೆ ನಿನಗೆ ಸರ್ವೋತ್ತಮ ಹರಿಗೆ16 ಆಕಳ ಘೃತದ ಅನೇಕ ದೀಪಗಳ್ಹಚ್ಚಿಶ್ರೀಕರ ತವ ಮುಖಾವಲೋಕಿಸುತ್ತಿಹೆನು 17 ಏಕಾರತಿ ಗೋಪಿಪ್ರೀತನೆ ಬೆಳಗುವೆನಾಕ ನಾಯಕ ಸುರಲೋಕ ಸೇವಿತನೆ 18 ಆರು ವಿಧದ ಅನ್ನ ಸಾರು ಪಾಯಸ ಭಕ್ಷ್ಯಭೂರಿ ಶಾಕಗಳೀವೆ ನೀರಜಾಂಬಕನೆ 19 ಮಾರಜನಕನೆ ಮುತ್ತಿನಾರತಿ ಬೆಳಗುವೆಶ್ರೀರಾಮನೆ ನಿನ್ನ ಮೋರೆಯ ತೋರೊ20 ಛತ್ರ ಚಾಮರ ವ್ಯಜನ ದರ್ಪಣ ಪರ್ಯಂಕಕರ್ಪುರ ತಾಂಬೂಲವಿತ್ತು ಪೂಜಿಸುವೆ 21 ಹತ್ತಾರು ಉಪಚಾರ ಚಿತ್ರ ಚರಿತನೆ ನಿನಗೆಅರ್ಥಿಯಲಿ ಕೊಡುವೆನು ಮುಕ್ತಿ ನೀಡೆನಗೆ 22 ಇಂದಿರೇಶನೆ ನಿನ್ನ ಮುಂದೆ ತುತಿಪನೆ ನಿಂತುನಂದಬಾಲನೆ ಕೃಪೆಯಿಂದ ನೋಡೆನ್ನ 23
--------------
ಇಂದಿರೇಶರು
ಯಾಕೆ ದಯಬಾರದೊ ಕಾಂತೇಶ ಪ್ರಾಣೇಶ ಸಾಕಲಾರದೆ ಪೋದೆಯಾ ಎನ್ನನು ಪ. ಏಕಚಿತ್ತದಿ ನಿನ್ನ ಚರಣ ನಂಬಿ ಬರಲು ಭಾರತೀಶ ಅ.ಪ. ತೊಳಲಿ ಬಳಲಿ ಸುಖ ಸುಳಿವೆಂಬೋದರಿಯದೆ ನಳಿನಾಕ್ಷನ ದಾಸ ನಿನ್ನ ಕೀರ್ತಿ ಇಳೆಯೆಲ್ಲ ಪೊಗಳಲು ಸಲಹುವನೆಂತೆಂದು ಬಳಿಗೆ ಬರಲು ಮನಕರಗದೆ ತಂದೆ 1 ಅಂದು ಕನಸಿನಲ್ಲಿ ಶಿರದಲ್ಲಿ ಕರವಿಟ್ಟೆ ಇಂದೆಲ್ಲಿ ಪೋಯಿತೊ ಆ ಕರುಣ ತಂದೆ ಮುದ್ದುಮೋಹನ ಗುರುಗಳ ವಚನವ ಇಂದು ಒಲಿದೆನ್ನ ಕಾಯೊ2 ವಿೂಸಲ ದಾಸ್ಯಕೆ ಆಶೆ ಮಾಡಿದೆನೆಂದು ದೋಷವೆಣಿಸುವರೆ ಎನ್ನಲಿ ನೀ ಶೇಷಶಯನನೆ ಬಲ್ಲೆನೊ ಇದರ ಮರ್ಮ ಘಾಸಿಗೊಳಿಸದೆ ನೀ ಅಭಯವನೀಯೊ 3 ರಾಮದಾಸ್ಯವ ಬಯಸಿ ನೇಮದಿಂದಲಿ ಇದ್ದು ರಾಮನಾಗಮ ಕಂಡು ಎರಗಿ ನಿಂದು ಪತಿ ಪಾದ ದಾಸ ಸಿದ್ಧಿಯ ಪಡೆದು ಭೂಮಿಯೊಳು ಖ್ಯಾತನಾದೆಯೊ ಆಂಜನೇಯ 4 ಚಿತ್ತಿದಿ ಕೃಷ್ಣನ ದಾಸತ್ವ ಸಾಧಿಸಿ ಮತ್ತೆ ಮುನಿಯಾಗಿ ಗ್ರಂಥವ ರಚಿಸಿ ಚಿತ್ತದಿ ಗೋಪಾಲಕೃಷ್ಣವಿಠ್ಠಲನ ಪಾದ ನಿತ್ಯದಿ ಭಜಿಪೆ ನೀ ಮತ್ತೆನ್ನ ಕಾಯೊ 5
--------------
ಅಂಬಾಬಾಯಿ
ಹರಿಹರೀ ಎನ್ನ ದೋಷವಳಿಯೊ ಪ ಕರಿವರದ ಕೃಪೆಮಾಡು ನಿತ್ಯಮಿತ್ರನೆ ಕೃಷ್ಣ ಅ.ಪ. ಬೇಲಿ ಎದ್ದು ಹೊಲವ ಮೆದ್ದರೆ ಬ್ಯಾರಿನ್ನು ಪಾಲಿಪರು ಯಾರೆಯ್ಯ ಶೀಲರೊಡೆಯ ಫಾಲಾಕ್ಷಸಖ ನಿನ್ನ ಅಚುಂಬಿತ ಕಾರುಣ್ಯ ಶ್ರೀಲಕ್ಷ್ಮೀ ಶ್ರುತಿ ರಾಸಿ ವರ್ಣಿಪರೊ ಗುಣನಿಧಿಯೆ 1 ಯಾತನೆಲ್ಹಣ್ಣಾದೆ ಪೂತನಿಯ ಅಸುಹರನೆ ಪಾತಕಕೆ ಕೊನೆಗಾಣೆ ಪಾರ್ಥಸೂತ ಆತ್ಮಬಂಧುವೆ ಇನ್ನು ತಡಮಾಡೆ ತಡಿಲಾರೆ ಪೂತನ ಮಾಡೆನ್ನ ಪ್ರಾಣೇಶ ಪ್ರಿಯಬಂಧು 2 ದೋಷಪುಂಜನು ನಾನು ಶೇಷಶಯನನೆ ಬಲ್ಲ ಪೋಷಕನು ನೀನೆಂದು ವೇದರಾಸಿ ಘೋಷಿಪವು ಅನವರತ ಕಾಪಾಡು ಶ್ರುತಿವಾಕು ದೋಷಕರ ಜಯೇಶವಿಠಲನೆ ಮೈದೋರು 3
--------------
ಜಯೇಶವಿಠಲ
ಏನನಿತ್ತು ಮೆಚ್ಚಿಸುವೆನು ಏನೋ ವಿಠಲ ಪಮಾನಿನಿಯರಸ ನಿನ್ನನಾಮವೆನ್ನ ನೆನೆವೆನಯ್ಯ ಅ.ಪಓದಿ ನಿನ್ನ ಮೆಚ್ಚಿಸುವೆನೆ ವೇದವನ್ನು ಅಜನಿಗಿತ್ತೆವಾದಿಸಿ ನಿನ್ನ ಮೆಚ್ಚಿಸುವೆನೆ ಆದಿಶೇಷಶಯನನೆ 1ಆಡಿ ನಿನ್ನ ಮೆಚ್ಚಿಸುವೆನೆ ಮೃಡನಯ್ಯನಯ್ಯನೆಪಾಡಿ ನಿನ್ನ ಮೆಚ್ಚಿಸುವೆನೆ ಪವನಜನೊಡೆಯನೆ 2ಚಿನ್ನವಿತ್ತು ಮೆಚ್ಚಿಸುವೆನೆ ಸಿರಿದೇವಿಯ ರಮಣನೆಪೂರ್ಣಾನಂದ ಙ್ಞÕನಿ ನೀನೆಪುರಂದರವಿಠಲಯ್ಯ3
--------------
ಪುರಂದರದಾಸರು
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಶ್ರೀಗಿರಿಯೊಡಯ ಶ್ರೀವೆಂಕಟೇಶ ಪಕಾಸಿದ್ದ ಹಾಲನ್ನು ಕಾವಡಿಯೊಳ್ ಹೆಪ್ಪಿಟ್ಟುಲೇಸಾಗಿ ಕಡೆದು ಹೊಸ ಬೆಣ್ಣೆ ಕೊಡುವೆಶೇಷಶಯನನೆ ಏಳು ಸಮುದ್ರ ಮಥನವಮಾಡುದೇಶ ಕೆಂಪಾಯಿತು ಏಳಯ್ಯ ಹರಿಯೇ 1ಅರುಳು ಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳಸುರರುತಂದಿದ್ದಾರೆ ಬಲು ಭಕುತಿಯಿಂದಅರವಿಂದನಾಭ ಸಿರಿವಿಧಿಭವಾದಿಗಳೊಡೆಯಪಿರಿದಾಗಿ ಕೋಳಿ ಕೂಗಿತೇಳಯ್ಯ ಹರಿಯೇ 2ದಾಸರೆಲ್ಲರು ಬಂದು ಧೂಳಿದರ್ಶನಕೊಂಡುಲೇಸಾಗಿ ತಾಳ ದಂಡಿಗೆಯ ಪಿಡಿದುಶ್ರೀಶಪುರಂದರವಿಠಲರಾಯ ನಿಮ್ಮ ಪಾದವನುಲೇಸಾಗಿ ಪೊಗಳುವರು ಹರಿಯೇ
--------------
ಪುರಂದರದಾಸರು
ನಿನ್ನನು ನಂಬಿದೆನು ನಾ ಸುಂದರ ಗೋವಿಂದನೇ | ಪನ್ನಗಾಶಯನಗೋಪಿಕಂದನೇ | ಮುಕುಂದನೆದುಷ್ಟರ ಶಿಕ್ಷಿಪಘೋರಕಾಲನೆ | ರಣಶೂರನೆ |ಶಿಷ್ಟರ ರಕ್ಷಿಪ ಭಕ್ತಪಾಲನೆ ಗುಣಶೀಲನೇ ಪಹೊಳೆವ ಮತ್ಸ್ಯಾವತಾರನೆನ್ನಿಸಿಇಳೆಯ ಭಾರವ ಕಳೆದನೆ ||ಜಲದಿವಾಸವಮಾಡಿಕೊಂಡು |ಜಲದಿನಾಲ್ದೆಸೆ ನಲಿದನೆ 1ಧರೆಯ ಬೆನ್ನಲಿ ಪೊತ್ತು ನೆಲಸಿದಕೂರ್ಮನೆ |ಸ್ಮøತಿಧರ್ಮನೇ ||ಶರದ ಸೇತುವೆ ಧರಿಸಿ ನಿಂದಾ |ಮರ್ಮವರಿತೇ | ಸುಶರ್ಮನೆ 2ರಸತಳದಿ ಕೆಸರೊಳಗೆ ಹೊರಳುವಹಂದಿಯೇ | ಭೂಮಿ ತಂದಿಯೇ ||ಬಸುರ ಬಗಿದಾ ಹೇಮನೇತ್ರನಕೊಂದೆಯೇ ಮಮ ತಂದೆಯೇ 3ಕಂಬದಲಿ ಮೈದೋರಿ ತರಳನ |ಪೊರೆದನೇ ನರಸಿಂಹನೇಕುಂಭಿನಿಯ ಬಾಧಿಸಲು ದುರುಳನ |ಕರುಳನೇ ಹರಿದೆಳದನೇ 4ಭೂಮಿಯಲಿ ಮೂರಡಿಯದಾನವ ಕೊಟ್ಟಾನೇಬಲಿಕೆಟ್ಟಾನೇವಾಮನನು ಎರಡಡಿಯ ತೀರಿಸಿ |ಮೆಟ್ಟುತಲಿವರಕೊಟ್ಟನೇ 5ಕೊರಳ ಕುತ್ತಿಯೆ ಮಾಲೆಮಾಡುತ್ತಾಹೆತ್ತವಳ ಕತ್ತರಿಸಿದೆ ||ಧರಣಿಪರ ಶಿರವದೆಭಾರ್ಗವ|ಸತ್ಯ ಭೂಮಿಯ ಸುತ್ತಿದೆ6ವನದಿ ರಾಮನ ಸತಿಯರಾವಣ ಕದ್ದನೇ ವಿಷ ಮೆದ್ದನೇ ||ವನದಿ ಕಪಿಗಳ ಕೂಡಿ ದೈತ್ಯರಕೊಂದನೆ ಸೀತೆಯ ತಂದನೇ 7ಸರಸಿಯಲಿ ಮೊರೆಯಿಡುವ ಗಜವ |ಕಾಯ್ದನೇ ಯಾದವನೇ ||ಧುರದಿ ಕಾಳಿಯ ಶಿರದಿ ನಲಿದ |ದೇವನೇ ಮಾಧವನೇ 8ಬತ್ತಲೆಯ ಬೌದ್ಧಾವತಾರನೆ |ಮೃತ್ಯು ತೆಕ್ಕಲ ಹೊಕ್ಕನೇ ||ಸತ್ಯ ಧರ್ಮವನರಿಯದಧರ್ಮರ |ಸೊಕ್ಕ ಮುರಿವನೆ ಪಕ್ಕನೆ 9, 10ಕಲಿಯುಗದ ಕಡುಪಾಪಿ ನರರನು |ಕಡುಗದಿಂದಲಿ ಕಡಿದನೇ ||ಕಾಲಭೈರವನಂತೆ ಕಲ್ಕ್ಯನು |ಕಿಡಿಯನುಗುಳುತ ಸುಡುವನೇ 11ದಾಸಜನರನು ಪೊರೆವಶ್ರೀನಿವಾಸನೇ | ಜಗದೀಶನೇ |ಶೇಷಶಯನನೆಂದೆನಿಪ |ಗೋವಿಂದನೇ | ಗುಣವೃಂದನೇ 12
--------------
ಗೋವಿಂದದಾಸ