ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆಂದರು ಸರಿ ಬೀಳ್ವದು ನಮ್ಮ ಶ್ರೀನಿವಾಸನ ಮಹಿಮಾನುಸಂಧಾನದಿಂ ಪ. ಶಯ್ಯದಿಂದೇಳುತ ಶಾರೀರದಾಲಸ್ಯದಿಂ- ದಯ್ಯ ಅಪ್ಪ ಅಮ್ಮನೆಂಬುವರಾ- ಜೀಯನ ಗುಣನಾಮಕನುವಾಗಿ ತಿಳಿದರೆ ಕಯ್ಯ ಪಿಡಿದು ಕಾವ ಕರುಣಾಳು ರಾಜಗೆ 1 ಅಪತತ್ವದಲಿ ನಿಂತು ಅಪ್ಯಾಯನ ಮಾಳ್ಪ ತಪ್ಪನೆಂಬುದಕಿದು ಕಾರಣವು ಮುಪ್ಪುರಹರನಯ್ಯನು ಪೆತ್ತ ದೊರೆಯನು ಒಪ್ಪಲಾರದೆ ಅಮ್ಮ ಅಯ್ಯನೆಂಬುವ ನಾಮ 2 ಕುರಿಯೊ ಮರಿಯೊ ಎಂಬ ದಾತಗೆ ಭಿನ್ನ ಹ- ವರವುದು ಹರಿಗೆ ಮೂಜನವೆಲ್ಲವು ಕುರಿಯಂತೆ ವಶ್ಯವಾಗಿರುವುದು ಭವಬಂಧ ಹರಿದ ಜ್ಞಾನದ ಮುಳ್ಳಮುರಿಯೆಂಬ ಭಾವದಿಂ 3 ಮೂರಾರು ಪುರಾಣ ಮೂಲ ರಾಮಾಯಣ ಭಾರತ ಪಂಚರಾತ್ರಾದಿಗಳು ಸೇರಿ ಪೇಳುವುದೆಲ್ಲ ಸಿರಿಯರಸನ ನಾಮ ವಾರಿಧಿಯೊಳಗಿನ ತೆರೆಗಳಂದದಿ ತೋರ್ಪ 4 ನಾದ ಬಿಂದು ವರ್ಣದಾತನುದಾತ್ತ ಸ್ವ ರಾದಿ ಸಕಲ ಶಬ್ದ ವಾಚ್ಯ- ನಾದ ಶ್ರೀದೇವಿಯರಸ ವೆಂಕಟರಾಜನರಿವಂಥ ಹಾದಿಯ ತಿಳಿದರಗಾಧ ಮಹಿಮಾ ನಿನ್ನ 5
--------------
ತುಪಾಕಿ ವೆಂಕಟರಮಣಾಚಾರ್ಯ
ದಯಮಾಡೊ ರಂಗ ದಯ ಮಾಡೊಕೈವಲ್ಯಪತಿ ನಮಗೆ ಕರುಣೆ ಮಾಡೊ ಕೃಷ್ಣ ಪ. ಕುಂತಿ ದೇವಿಯರು ತಂದ ಅನಂತ ಪದಾರ್ಥವ ಶಾಂತ ಮೂರುತಿಯೆ ಕೈಕೊಳ್ಳೊ ಕೃಷ್ಣಶಾಂತ ಮೂರುತಿಯೆ ಕೈಕೊಳ್ಳೊ ಎನುತಲಿ ಕಾಂತೆ ಸುಭದ್ರಾ ನುಡಿದಳು1 ಶ್ರೀದೇವಿಯರಸನ ಪಾದವ ತೊಳೆದರು ಕ್ಯಾದಿಗೆ ಗಂಧ ತುಳಸಿಕ್ಯಾದಿಗೆ ಗಂಧ ತುಳಸಿ ಅಕ್ಷತೆಯಿಂದ ವೇದಗೋಚರನ ಉಪಚರಿಸಿ 2 ಕರವ ಜೋಡಿಸುತ ಐವರು3
--------------
ಗಲಗಲಿಅವ್ವನವರು
ಬಂಟರಾಗಿ ಬಾಗಿಲ ಕಾಯೋರು ಹರಿಯವೈಕುಂಠದಿ ರಂಗನಾಯಕನರಮನೆಯ ಪ. ಸುತ್ತ ವಿರಜಾನದಿ ಮತ್ತು ನಂದನ ವನಉತ್ತಮೋತ್ತಮ ವೈಕುಂಠಉತ್ತಮೋತ್ತಮ ವೈಕುಂಠದೊಳಗಿನ್ನುಮಿಂಚಿನಂತೆ ಹೊಳೆವೊ ಮುಕ್ತರು1 ಶ್ರೀದೇವಿ ತಾನು ಮುರಹರನ ಪುರದಾಗವಿರಜಾ ತಾನೆಂದು ಕರೆಸುತವಿರಜಾ ತಾನೆಂದು ಕರೆಸುತ ನಾನಾ ಪರಿಗಿಳಿ ಕೋಗಿಲಾಗಿ ಮೆರೆವೋಳು2 ಉತ್ತರ ದಿಕ್ಕಿನಲೆಥಳ ಥಳಿಸುವ ದ್ವಾರ ಮುತ್ತು ಮಾಣಿಕ್ಯ ಅಳವಟ್ಟಮುತ್ತು ಮಾಣಿಕ್ಯ ಅಳವಟ್ಟ ಹರಿಪುರರತ್ನದ ಝಲ್ಲೆ ಬಿಗಿದಾವೆÉ 3 ರಾಜಿ ಮಾಣಿಕ ಗೋಡೆ ಗಾಜಿನ ನೆಲಗಟ್ಟುಈ ಜೋಡು ದ್ರವ್ಯ ಎಲ್ಲಿಲ್ಲ ಈ ಜೋಡು ದ್ರವ್ಯ ಎಲ್ಲಿಲ್ಲ ಇದುನಮ್ಮ ಶ್ರೀದೇವಿಯರಸನ ಅರಮನೆ 4 ಕೇಶರ ಶ್ರೀಗಂಧ ಕಲವೆಲ್ಲ ಪರಿಮಳಬಿಸÀಜನೇತ್ರನರಮನೆಯಬಿಸಜನೇತ್ರೆಯರ ಮನೆಯಿಂದ ಕುಸುಮದ ವೃಷ್ಟಿಗರೆದಾವು5 ಉತ್ತರ ಪಾಲ್ಗಡಲೊಳು ಮುತ್ತು ಮಾಣಿಕರತ್ನಪಚ್ಚ ಕರ್ಪೂರ ಸುಳಿಗಾಳಿಪಚ್ಚ ಕರ್ಪೂರ ಸುಳಿಗಾಳಿ ಇದುನಮ್ಮ ಅಚ್ಯುತಾನಂತನರಮನೆಯ6 ಕೃಷ್ಣ ರಾಮೇಶನ ವಿಶಿಷ್ಠದ ವೈಕುಂಠಸೃಷ್ಟಿ ಮಾಡಿ ರಚಿಸಿದ ಸೃಷ್ಟಿ ಮಾಡಿ ರಚಿಸಿದ ನೋಡಲು ದೃಷ್ಟಿ ಸಾಲದು ಜನರಿಗೆ7
--------------
ಗಲಗಲಿಅವ್ವನವರು