ಒಟ್ಟು 11 ಕಡೆಗಳಲ್ಲಿ , 9 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
ಏಳಯ್ಯಾ ಏಳು ಕಂದಾ | ಏಳು ಪರಮಾನಂದಾ | ಏಳು ಈರೇಳು ಜಗದೊಡೆಯ ಶ್ರೀಮುಕುಂದಾ ಪ ಮೊರೆವದೊಂದೇಗಾಲಿ | ಪರಿವಹರಿವೇಗಮಂ | ಜರಿದು ಯೇಳು ಕುದುರೆಂಗಳದರಾ | ಪೋರವರುಣನಿಂದ ಭೋರ್ಗರೆವ ಸ್ಯಂದನದೊಳಗ | ಮೆರೆವ ದಿನಕರ ಉದಯವಾದ ಪೂರ್ವಾದ್ರಿಯಲಿ 1 ಬಿರಿಯೆ ಕಮಲದ ಮೋಗ್ಗೆ ಕರಿಯೆ ಗೋವತ್ಸಗಳು | ಪರಿಯೆ ನಕ್ಷತ್ರಗಳು ಗಗನದೊಳಗ || ಸರಿಯೆ ಚೋರ್ವಿರಹಿಗಳು ವರಿಯದಂತಾಲಯಕೆ | ದೆರಿಯ ಕಣ್ಣೆವಿಯಗಳು ನಿದ್ರೆಗೈದಿದ ಜನರು 2 ಓಡುತಿದೆ ಕತ್ತಲೆಯು ಬಾಡುತಿದೆ ಕುಮುದ ಮುಖ | ಕೂಡುತಿವೆ ಚಕ್ರವಾಕಂಗಳೀಗ | ಆಡುತೆಳೆದುಂಬಿ ಚಲ್ಯಾಡುತಿದೆ ಮಧುರನವ | ಪಾಡುತಿದೆ ಮಹೀಪತಿ ಸುತನಾಮ ಕೀರ್ತಿಯನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಜಯವೆನ್ನಿ ಸ್ವಾಮಿ ಶ್ರೀಹರಿಗೆ ದಯೆಯುಳ್ಳ ಮಹಿಮ ಶ್ರೀಮುಕುಂದ ಮುರಾರಿಗೆ ಧ್ರುವ ಭಾವಿಸಿ ನಿಮ್ಮೊಳಗೆ ದೇವಾಧಿ ಶ್ರೀದೇವಿಗೆ 1 ಅನುಭವಿಸುವ್ಹಾಂಗೆಂದೆಂದು ಮನೋಮಂದಿರಕೆ ತಂದು 2 ಕಾಣುವನ ಕಂಡು ನೋಡಿ ಕಾಣಿಸಿಕೊಂಬ್ಹಾಂಗೆ ಮಾಡಿ 3 ಪಾವನಗೈಸುವ ದೇವಗೆ ಕಾವ ಕರುಣನಿಧಿಗೆ 4 ಸಿರಿ ಸುಖಲೋಲಗೆ 5 ಅಂತರಾತ್ಮಲಿಹಗೆ ಸಂತತ ಸದೋದಿತಗೆ 6 ಭಾನುಕೋಟಿ ತೇಜಗೆ ದೀನಮಹಿಪತಿ ಸ್ವಾಮಿಗೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಂದು ತೋರೆ ಮಂದಹಾಸನ | ಕಾಮಿನಿ | ತಂದು ತೋರೆ ಮಂದಹಾಸ | ನಂದ ಕಂದ ಶ್ರೀಮುಕುಂದ | ವಂದಿತಾಮರೇಂದ್ರ ವಂದ್ಯನ | ಕಾಮಿನಿ ಪ ಉರವನಿತ್ತಗುರುಮೊಮ್ಮನುದರಲಿ ಬಂದ ಮಾತೆ ಮಗನ | ಶರದ ಭರಕೆ ಫಣಿಲಿ ತಾಳ್ದಾನಾ | ಕಾಮಿನಿ 1 ಸರಳದಿಂದ ಪ್ರಾಣ ತೊರಿದನಾ | ಪ್ರೀತಿಯಾ | ಸರಳಕಾದು ಅಳಿದನಯ್ಯನ | ಸರಳಗದೆಯ ಕೈಯ್ಯಲಿಂದ | ಸರಳತ್ರಯನ ಕೊಲಿಸಿದಾತನ | ಕಾಮಿನಿ 2 ಶತಕಮೃಗನ ಭೋಜ್ಯವಾಹನ | ಸಖಉರಭಕಾಗಿ ನಿಲ್ಲದೇ | ಅಖಿಲದೋಳಗೆನುಸಲುತಿಹನಾ | ರಾಶಿಯ | ಪಕವನಳಿದನರಿಯಸುತನ | ರಕ್ಷಕಮಹೀಪತಿನಂದನ| ಮುಖದಿ ತನ್ನ ಚರಿತೆನುಡಿಪನ ಕಾಮಿನಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಾಸುದೇವ ತೇ ನಮೋ ನಮೋ ವಾಸವ ವಂದಿತ ನಮೋ ನಮೋ ಪ ಮಾಧವ ಕೃಷ್ಣ ದಾಮೋದರ ಶ್ರೀಶ ಪರೇಶ ವಿಷ್ಣು ಪೀತಾಂಬರ ಈಶ ಮುಕುಂದ ವೈಕುಂಠ ಪರಾತ್ಪರ ಕೌಶಿಕ ಗೌತಮ ಮೌನಿ ಶುಭಂಕರ 1 ಶೌರಿ ಚತುರ್ಭುಜ ಚಕ್ರಧರಾಚ್ಯುತ ವೈರಿ ಭಯಂಕರ ಸಕಲಾಗಮನುತ ಸಾರಸನಾಭ ನೀರೇಜ ಭವಾನತ ಮಾರಜನಕ ರಘುವೀರ ಶಿವಾರ್ಚಿತ 2 ಶ್ರೀಮಹಿತಾಂಗಾ ರಂಗಾ ನಮೋ ನಮೋ ಶ್ರೀಮಣಿಹಾರಾ ರಂಗಾ ನಮೋ ನಮೋ ಶ್ರೀಮುಕುಂದಾ ಶ್ರೀರಂಗಾ ನಮೋ ನಮೋ ಶ್ರೀಮಾಂಗಿರಿ ವರರಂಗಾ ನಮೋ ನಮೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀನಿವಾಸ ಪಾಹಿಮಾಂ ಸದಾ ಶ್ರಿತಜನಾಮೋದ ಮೌನಿಜನ ಚಾತಕಾಂಭೋದ ಪ ಸಾನುರಾಗ ಯುಗಮುನಿ ಮಾನಿತಾವರಾರವಿಂದ ಭಾನುಕೋಟಿ ತೇಜ ಸಾಮಗಾನಲೋಲ ಶ್ರೀಮುಕುಂದ ಅ.ಪ ವಾರಿಜಾಸನಾರ್ಚಿತ ಪ್ರಭೋ ವಂ ದಾರುಜನ ಪಾರಿಜಾತ ಧೃತಕೌಸ್ತುಭ ಶಾರದೇಂದೀವರನೇತ್ರ ಶ್ಯಾಮಳನೀರದ ಗಾತ್ರ ಸಾರ ಸನ್ಮಣಿ ಕೇಯೂರ ಹಾರ ಭೂಷಾ ಸುಪವಿತ್ರ 1 ಸರ್ವಲೋಕಪಾಲಕೇಶ್ವರಸೇವಿತಸುಪರ್ವಗಣಸದ್ಗುಣಾಕಾರ ಶರ್ವ ಸುರಪತಿ ಮುಖ್ಯ ಸರ್ವದೇವವರವರ್ಯ ಸೂರ್ಯ ಪರ್ವತಾಧಿರಾಜ ಧೈರ್ಯ 2 ಸೃಷ್ಟಿ ರಕ್ಷಣಾಂತಕಾರಕ ಸರ್ವಾತ್ಮಕ ಶಿಷ್ಟದೇವ ದ್ವಿಜರಕ್ಷಕ ಅಷ್ಟಸಿದ್ಧಿಪ್ರದಾ ಸರ್ವೋತ್ಕøಷ್ಟ ಕಷ್ಟನಿವಾರಣ ಅಷ್ಟಮೂರ್ತಿ ಪ್ರಿಯ ಸರ್ವಾಭೀಷ್ಟದ ಗೋಪಾಲಕೃಷ್ಣ 3 ಶ್ರೀಕರ ಶೃಂಗಾರಶೇಖರ ಶ್ರೀಕರಗೃಹ ಶ್ರೀಕರಧಾರಿತ ಮಂದರ ಪಾಕವೈರಿ ಮಣಿನೀಲ ಪಾವನ ಸುಗುಣಶೀಲ ಶೋಕ ಮೋಹ ಸುವಿವೇಕ ನಿತ್ಯೋದಾರ ಶೂರ 4 ಮಾರಜನಕ ಮಂಗಳಾಕಾರ ಮಾರಶತಕೋಟಿ ಸುಂದರ ಸಾರವಸ್ತುಚಯಪರಿಪೂರ ವ್ಯಾಘ್ರಾಧ್ರಿವಿಹಾರ ಧೀರ ವರದವಿಠಲ ಸುರಾಸುರಾರ್ಚಿತಾಂಘ್ರಿಕಮಲ 5
--------------
ವೆಂಕಟವರದಾರ್ಯರು
ಶ್ರೀನಿವಾಸ ಪಾಹಿಮಾಂ ಸದಾ-ಶ್ರಿತಜನಮೋದ ಮೌನಿಜನಜಾತಕಾಂಬೋದ ಪ ಭಾನುಕೋಟಿ ತೇಜ ಸಾಮಗಾನ ಲೋಲ ಶ್ರೀಮುಕುಂದ ಅ.ಪ ವಾರಿಜಾಸನಾರ್ಚಿತ ಪ್ರಭೋ-ವಂದಾರುಜನ ಪಾರಿಜಾತ ಧೃತಕೌಸ್ತುಭ ಶಾರದೇಂದೀವರನೇತ್ರ ಶ್ಯಾಮಳನೀರದ ಗಾತ್ರ ಸಾರ ಸನ್ಮಣಿ ಕೇಯೂರ ಹಾರ-ಭೂಷಿಸುಪವಿತ್ರ 1 ಸರ್ವಲೊಕಪಾಲಕೇಶ್ವರ-ಸೇವಿತಸುಪರ್ವಗಣಸದ್ಗುಣಾಕರ ಗರ್ವಿತದೈತ್ಯಾಂಧಃಸೂರ್ಯ-ಪರ್ವತಾಧಿರಾಜಧೈರ್ಯ 2 ಸೃಷ್ಟಿರಕ್ಷಣಾಂತಕಾರಕ-ಸರ್ವಾತ್ಮಕ-ಶಿಷ್ಟದೇವ ದ್ವಿಜರಕ್ಷಕ ಅಷ್ಟಸಿದ್ಧಿಪ್ರದಾ ಸರ್ವೋತ್ಕøಷ್ಟ ಕಷ್ಟನಿವಾರಣ ಅಷ್ಟಮೂರ್ತಿ ಪ್ರಿಯ ಸರ್ವಾಭೀಷ್ಟದ ಗೋಪಾಲಕೃಷ್ಣ 3 ಧಾರಿತ ಮಂದರ ಪಾಕವೈರಿಮಣಿನೀಲ ಪಾವನ ಸುಗುಣ ಶೀಲ ಶೋಕಮೋಹಸುವಿವೇಕ ನಿತ್ಯೋದಾರ ಶೂರ 4 ಮಾರಜನಕ ಮಂಗಳಾಕಾರ ಮಾರಶತಕೋಟಿ ಸುಂದರ ಸಾರವಸ್ತುಚಯಪರಿ ಪೂರವ್ಯಾಘ್ರಾದ್ರಿ ವಿಹಾರಧೀರ ವರದ ವಿಠಲ ಸುರಾಸುರಾರ್ಚಿತಾಂಘ್ರಿಕಮಲ 5
--------------
ಸರಗೂರು ವೆಂಕಟವರದಾರ್ಯರು
ಸುಂದರ ಮೂರುತಿ ಹರಿಯೆ ಬಾ- ರೆಂದು ಕಶ್ಯಪ ಋಷಿ ಅದಿತಿಯರು ಮಂದಹಾಸದಿ ನಮ್ಮ ಮಂದಿರಕೀಗ ಗೋ- ವಿಂದ ಬಾ ಶ್ರೀಮುಕುಂದ ಬಾ ಯಾದವ ವೃಂದ ಬಾ ಬಲುಮುದದಿಂದ ಬಾ ಬಾ- ರೆಂದು ಕರದಾರು ಶೋಭಾನೆ 1 ಅಚ್ಚುತಾನಂತ ಶ್ರೀಹರಿ ನೀನು ಸಚ್ಚಿದಾನಂತಾತ್ಮನೆ ನೀನು ಮಿತ್ರೆ ಲಕುಮಿ ಒಡಗೂಡುತ ಬಾರೆಂದು ಅತ್ರಿಯರು ಸ್ತುತಿಪರು ಮಿತ್ರೆಯರು ಪಾಡ್ವರು ಕೀರ್ತಿಪರು ಅನಸೂಯಾತ್ರಿಯರು ಬಾರೆಂದು ಕರೆದಾರು ಶೋಭಾನೆ 2 ಭಾಗವತರ ಪ್ರಿಯ ಬಾರೆಂದು ಭಾರದ್ವಾಜರು ಭಕ್ತಿಯಲಿ ಸತಿ ಸುಶೀಲೆ- ಯರು ಸುಂದರ ನಾರಿಯರು ಕರೆವರು ಕಂಸಾರಿ ಬಾರೆಂದು ಕರದಾರು ಶೋಭಾನೆ 3 ಹಸ್ತಿವರದ ಹರಿ ಬಾರೆಂದು ವಿಶ್ವಾಮಿತ್ರರು ಹರುಷದಲಿ ಸತಿ ಸಹಿತದಿ ಕರೆವರು ಭಕ್ತಿಯಲಿ ಪರಮಾಸಕ್ತಿಯಲಿ ಹರಿಯನು ಸ್ತೋತ್ರದಲಿ ಭೂ ರಮಾ ಪಾರ್ಥಸಾರಥಿಯ ಕರದಾರು ಶೋಭಾನೆ 4 ಕೌಶಿಕ ಯಜ್ಞಪಾಲನೆ ಬಾ ಕಂಸನ ಸಭೆಯಲಿ ಸೆಳೆದನೆ ಬಾ ಹಂಸವಾಹನಪಿತ ಬಾರೆಂದು ಕರೆವರು ಗೌತಮರು ಪತ್ನಿ ಅಹಲ್ಯೆಯರು ಪಾಡುತ ಪ್ರಾರ್ಥಿಪರು ಮುರಹರಿ ಗೋಪಾಲ ಬಾರೆಂದು ಕರದಾರು ಶೋಭಾನೆ 5 ಜಗದುದರನೆ ಶ್ರೀ ಹರಿಯೆ ಬಾ ನಿಗಮತಂದು ಸುತಗಿತ್ತನೆ ಬಾ ಝಗಿಝಗಿಸುವ ಆಭರಣಗಳ್ಹೊಳೆಯುತ ಬಾರೆಂದು ಜಯ ಜಯವೆನ್ನುವರು ಋಷಿ ಜಗದಗ್ನಿಯರು ರೇಣುಕ ಸಹಿತ ಶ್ರೀಶನ ಕರದಾರು ಶೋಭಾನೆ 6 ಮದನ ಗೋಪಾಲನಿಗೆ ಮಂಗಳ ಯದುಕುಲ ತಿಲಕನಿಗೆ ಮಂಗಳ ಕಮಲಾನಾಭ ವಿಠ್ಠಲನಿಗೆ ಸತಿ ಅ- ರುಂಧತಿಯರು ಜಯ ಜಯ ಮಂಗಳವೆಂದು ಕರದಾರು ಶೋಭಾನೆ7 ಶೋಭನವೆನ್ನಿರೆ ಶ್ರೀಹರಿಗೆ ಶೋಭನವೆನ್ನಿರೆ ಮಾಧವಗೆ ಶೋಭನವೆನ್ನಿರಿ ಸೊಬಗುಳ್ಳ ದೇವಗೆ ಶೋಭಾನೆ ಸಿರಿಯರಸಗೆ ದಿವ್ಯ ಶೋಭಾನೆ ಪರಮಪುರುಷನಿಗೆ ಶೋಭಾನೆ ಶೋಭನ ಗರುಡಗಮನಗÉಶೋಭನವೆನ್ನಿರೆ ಶೋಭಾನೆ 8
--------------
ನಿಡಗುರುಕಿ ಜೀವೂಬಾಯಿ
ಸೇವಕನೆಲೊ ನಾನು ನಿನ್ನಯ ಪಾದಸೇವೆ ನೀಡೆಲೊ ನೀನು ಪ. ಸೇವಕನೆಲೊ ನಾನು ಸೇವೆ ನೀಡೆಲೊ ನೀನುಕಾವದೇನೆಲೊ ಶ್ರೀವಧೂವರ ರಾವಣಾಂತಕ ರಕ್ಷಿಸೆನ್ನನುಗೋವರ್ಧನ ಗಿರಿಧರ ದೇವ ಗೋವುಗಳ ಕಾವಶ್ರೀಮಹಾನುಭಾವ ವರಗಳನೀವ ದೇವಶ್ರೀವಲ್ಲಭ ದಯಮಾಡೆನ್ನನುಈ ವ್ಯಾಳೆಗೆ ಇಂದಿರೆರಮಣ ಅ.ಪ. ರಾಮ ದಶರಥನಂದನ ರಘುಕುಲಾಬ್ಧಿಸೋಮ ಸುಂದರವದನವಾಮನ ಪರಿಪೂರ್ಣಕಾಮ ಕೌಸಲ್ಯರಾಮಸ್ವಾಮಿ ಶ್ರೀರಂಗಧಾಮ ದೈತ್ಯವಿರಾಮಶ್ರೀಮದನಂತ ನಾಮಭೀಮ ಮುನಿಜನಸ್ತೋಮರಮ್ಯಗುಣಧಾಮ ರಣರಂಗಭೀಮಕೋಮಲಶ್ಯಾಮ ಹೇಸಾಮಜವರದ ನೀನನುದಿನಕಾಮಿತಫಲವನು ಕರುಣಿಸಿ ಕಾಯೊ 1 ಶಂಕರ ಸುರಸೇವಿತ ಶೇಷಗರುಡಾ-ಲಂಕಾರ ಮಣಿಶೋಭಿತಪಂಕಜನಯನ ಮೀ-ನಾಂಕ ಜನಕ ಪಾದ-ಪಂಕಜಾಸನವಿನುತ ತಿರುಪತಿವೆಂಕಟ ಬಿರುದಾಂಕ ಜಯ ಜಯಶಂಖಚಕ್ರಗದೆ ಪಂಖ ಪಿಡಿದಕಳಂಕ ಚರಿತ ತಾ-ಟಂಕಗೊಲಿದ ನಿಶ್ಶಂಕಲಂಕಾಧಿಪರಿಪು ರಘುಪತಿಕಿಂಕರರಿಗೆ ಕಿಂಕರ ನಾನೆಲೊ 2 ಮಾಧವ ಮಧುಸೂಧನನಂದಮಂಗಳ ವಿಗ್ರಹಬಿಂದುಮಾಧವ ಶ್ರೀಮುಕುಂದ ಶ್ರೀಮದಾ-ನಂದ ವಂದಿತಾಮರವೃಂದ ಶ್ರುತಿಗಳ ತಂದ ತುರಗವನೇರಿ ಬಂದವೃಂದಾವನದೊಳಗಿಂದ ಯಶೋದೆಯಕಂದ ಹರಿಗೋ-ವಿಂದ ಶೇಷಗಿರಿಯಲಿ ನಿಂದಮಂದಾಕಿನಿ ಪಡೆದೆಲೊ ಧ್ರುವಗೊಲಿ-ದಂದದಿ ಎನಗೊಲಿಯೊ ಹಯವದನ 3
--------------
ವಾದಿರಾಜ
ಕಾಂತೆ ಸೈರಿಸಲಾರೆ ಕಂಜಾಕ್ಷನಗಲೀರೆಕಂತುಶರದ ಬಲ ಕಡುವೇಗವಾಯಿತಲೆಕಾಂತ ಮೂರುತಿಯ ಕರೆತಾರೆ ತಾಯೆ ಪ.ಸೀತಕರನ ಪ್ರಭೆಯು ಶುಕದುಂಬಿಗಳ ರವವುಸೋತಬಾಲೆಯ ಮುಂದೆ ಸರಸವೆ ಸೊಗಸೋದೆನೀತವೇನೆಲೆ ತಂಗಿ ನೀರಜನಾಭಗೆ 1ನೀರೊಳು ಕರೆದೆನ್ನನೀಲಜೀಮೂತವರ್ಣನೀರಜದ್ವಕ್ತ್ತ್ರವ ನಖದಿಘಾಸಿಮಾಡುವನಾರಾಯಣನೆನ್ನ ಸುಳಿದರಿನ್ನೇನೆ 2ಅಧರದೊಳಿಟ್ಟುಕೊಳಲು ಅತಿಮೋಹಿಸುವ ನಲ್ಲಯದುಕುಲದರಸ ಮೆಚ್ಚೆ ಎನ್ನೊಳು ಘನ್ನಮಧುಪಕುಂತಳ್ಯಾವಳೊ ಮನೆಗೊಯ್ದಳೊ 3ಆವಗವನಕೇಳಿಆಡುವವನ ಸಾಲಿದಾವಸುಕೃತದಿಂದ ದೊರೆತನೊ ಶ್ರೀಮುಕುಂದಆವ ದುಷ್ಕøತ ಬಂದು ಅಗಲಿಸಿತಿಂದು 4ಚಂಪಕದಲರ್ಮಾಲೆ ಚಂದನದ ಲೇಪ ಒಲ್ಲೆಕಂಪಿನೊಳಗೆನಿಂದುತಕ್ರ್ಕೈಸುವಾನಂದಸಂಪನ್ನ ತಾ ಬಂದು ಸಲಹುವನೆಂದೆ 5ಪರಿಯಂಕದಲಿ ಕುಳಿತು ಪರಿಪರಿಯ ಸುಖವಿತ್ತುಕರದಿ ಕಂಕಣವಿಟ್ಟು ಕಡÉಯ ಪೆಂಡ್ಯಾ ಕೊಟ್ಟುಕರುಣಿಜರಿದುತರವೆ ತನಗಿದು6ಇಂದಿರೆರಮಣ ಎನ್ನ ಇಚÉ್ಭಯಸುರಧೇನುಸುಂದರ ರನ್ನ ಪ್ರಸನ್ನ ವೆಂಕಟೇಶನಸಂದೇಹವಿಲ್ಲದೆ ಶರಣು ಹೊಂದಿದೆನೊ 7
--------------
ಪ್ರಸನ್ನವೆಂಕಟದಾಸರು
ಶ್ರೀಪುರುಷೋತ್ತಮಪಾಹಿಜಯಜಯಮು-ರಾರೆ ನರಹರೆ ಸುರದೊರೆ ಪಸಾರಸನಯನ ಶ್ರೀ ಮುಕುಂದ ಹರೆ ಶ್ರಿತಜನರಕ್ಷಕಭಾನುಕೋಟಿ ಕಾಂತಿಸುಂದರ ಪ್ರಭÉೂೀ ನಮಿತಚರಣಕಾಮಜನಕ ಕಮಲವದನಶ್ರೀಮುಕುಂದ ಗರುಡಗಮನಉರಗಶಯನ ನಮಿಪೆನಿನ್ನಸುರರೊಡೆಯನೆ ತ್ವರದಿ ಬಾ 1ಚಂದದಿ ನಮಿಪೆ ಸುಂದರಾನನ ಮುನಿಹೃದಯಸದನಇಂದಿರಾ ರಮಣ ಮುರಮರ್ಧನ ಚಂದ್ರವದನಮಂದರಗಿರಿ ಎತ್ತಿದ ಬಲುಚಂದದಿಂದ ಸುರರ ಪೊರೆದವಂದಿಪೆ ಗೋವಿಂದ ನಿನ್ನಚಂದ ಪಾದಕ್ಕೆರಗಿ ನಮಿಪೆ 2ಕಾಮಿನಿರೂಪವ ಪ್ರೇಮದಿಂದಲಿ ನೀ ತಾಳುತಲಿಕಾಮಜನಕನೆಂದರಿಯದೆ ಭ್ರಾಮಕರಾಗಿರಲುಕಾಳಿಫಣಿಯ ತುಳಿದು ಹರಿಯುಅಸುರರಟ್ಟಿ ಸದೆದು ನೂಕಿಕಂಸ ಮರ್ಧನ ಕಮಲನಾಭವಿಠ್ಠಲ ವಸುಧೆಯೊಳಗೆ ಮೆರೆದ 3
--------------
ನಿಡಗುರುಕಿ ಜೀವೂಬಾಯಿ