ಒಟ್ಟು 33 ಕಡೆಗಳಲ್ಲಿ , 18 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರಾಣವಿಷಯ ಶ್ರೀವೆಂಕಟೇಶ ಕಲ್ಯಾಣ ಇನ್ನೆಂದಿಗೋ ನಿನ್ನದರುಶನ ಶೇಷಾದ್ರಿವಾಸ ಪ ಪನ್ನಂಗಶಯನ ಪ್ರಸನ್ನರ ಪಾಲಿಪ ಘನ್ನಮಹಿಮ ನೀನೆನ್ನನುದ್ಧರಿಸೂಅ.ಪ ವರ ಸುರಮುನಿಗಳ ವೃಂದ ನೆರಹಿದ ಯಾಗಗಳಿಂದ ಪರಮಾದರದಿಂದಿರುವ ಸಮಯದಿ ನಾರದ ಮುನಿ ಬಂದೊದಗಿ ನಿಂದ ಇ- ಸುರಮುನಿವಚನದಿ ಭೃಗುಮುನಿವರ ಪೋಗಿ ಹರುಷದಿ ಶ್ರೀಹರಿ ಉರಗಶಯನನಾಗಿ ಹರುಷದಿ ಮುನಿಪಾದ ಕರದಲಿ ಒತ್ತುತ ಕರುಣದಿ ಸಲಹಿದೆ ದುರಿತವ ಹರಿಸಿ ಹರಿಭಕುತರ ಅಘಹರಿಸಿಕಾಯುವಂಥ ಕರುಣಿಗಳುಂಟೇ ಶ್ರೀಹರಿ ಸರ್ವೋತÀ್ತುಮಾ 1 ಸ್ವಾಮಿ ನೀನಿಜಧಾಮವನೇ ತೊರೆದೂ ಸ್ವಾಮಿಕಾಸಾರ ತೀರದಿ ನಿಂದೂ ಧಾಮವನರಸಿ ವಲ್ಮೀಕವನೆ ನೋಡಿ ಸನ್ಮುದವನ್ನೇ ತೋರುತ ಕಮಲ ಭವಶಿವ ತುರುಕರುರೂಪದಿ ಕಾಮಧೇನು ಪಾಲ್ಗರೆಯುತಾ ಈ ಮಹಿಮೆಯನ್ನೇ ಬೀರುತಾ ಭೂಮಿಗೊಡೆಯ ಚೋಳನೃಪಸೇವಕನು ಧೇನುವನ್ನು ತಾ ಹೊಡೆಯಲು ಕಾಮನಯ್ಯ ನೀನೇಳಲು ಭೀಮವಿಕ್ರಮವ ತೋರಲು ಕ್ಷಮಿಸಿದೆ ನೃಪನ ದಯಾಳು ಅಮಿತ ಸುಗುಣಪೂರ್ಣ ಅಜರಾಮರಣ ನೀ ಮಸ್ತಕಸ್ಪೋಟನ ವ್ಯಾಜವ ತೋರಿ ಪ್ರೇಮದಿ ಗುರುಪೇಳ್ದೌಷಧಕಾಗಿ ನೀ ಮೋಹವ ತೋರಿದೆ ವಿಡಂಬನಮೂರ್ತೇ 2 ಮಾಯಾರಮಣನೆ ಜೀಯಾ ಕಾಯುವೆ ಜೀವನಿಕಾಯಾ ತೋಯಜಾಂಬಕ ಹಯವನೇರಿ ಭರದಿ ತಿರುಗಿತಿರುಗೀ ವನವನೆÀಲ್ಲ ಮೃಗನೆವನದಿ ನಿಂದು ನೋಡಿದೇ ಪ್ರಿಯಸಖಿಯರ ಕೂಡಿ ಪದುಮಾವತಿಯು ತಾ ಹಯದಿ ಕುಳಿತ ನಿನ್ನ ನೋಡಲು ಪ್ರಿಯಳಿವಳೆನಗೆಂದು ಯೋಚಿಸಿ ಕಾಯಜಪಿತ ನಿನ್ನ ಹಯವನೆ ಕಳಕೊಂಡು ಮಾಯದಿಂದ ನೀ ಮಲಗಿದೆ ತೋಯಜಮುಖಿಯಳ ಬೇಡಿದೇ ಆ ಯುವತಿಯನ್ನೇ ಸ್ಮರಿಸುತಾ ಶ್ರೀಯರಸನೆ ನೀನು ಸ್ತ್ರೀರೂಪದಿ ಹೋಗಿ ಶ್ರೀಯಾಗಿಹಳಿನ್ನು ಶ್ರೀಹರಿಗೀಯಲು ಶ್ರೇಯವೆಂದು ಆಕಾಶನನೊಪ್ಪಿಸಿ ತಾಯಿಯಭೀಷ್ಟವನಿತ್ತೆ ಸ್ವರಮಣಾ 3 ಸಕಲಲೋಕೈಕನಾಥಾ ಭಕುತರಭೀಷ್ಟಪ್ರದಾತಾ ಭಕುತನಾದ ಆಕಾಶನೃಪತಿಯು ಬಕುಳೆ ಮಾ- ತ ಕೇಳಿ ಅಭಯವಿತ್ತು ಮನ್ನಿಸಿ ಪದುಮಾವತಿಯ ಪರಿಣಯ ಶುಕರ ಸನ್ಮುಖಹಲ್ಲಿ ಅಕಳಂಕ ಮಹಿಮ- ಗೆ ಕೊಟ್ಟನು ತಾ ಲಗ್ನಪತ್ರಿಕಾ ಸ್ವೀಕರಿಸುವದೀ ಕನ್ನಿಕಾ ಈ ಕಾರ್ಯಕೆ ನೀವೆ ಪ್ರೇ ಸಕಲಸಾಧನವಿಲ್ಲಿನ್ನು ಲೋಕೇಶಗರುಹಬೇಕಿನ್ನು ಲೋಕಪತಿಯೆ ಸುರಕೋಟಿಗಳಿಂದಲಿ ಈ ಕುವಲಯದಿ ನಿನ್ನಯ ಪರಿಣಯವೆಸಗಲು ಭಕುತಜನಪ್ರಿಯ ಶ್ರೀವತ್ಸಾಂಕಿತ 4 ಖಗವರವಾಹನ ದೇವಾ ಅಗಣಿತಮಹಿಮ ಗೋಮಯನೆನಿಸಿ ಸುರರ ಪೊರೆಯುತಾ ಅಗಣಿತ ಸುರಗಣ ಕಿನ್ನರರು ಸಾಧ್ಯರು ತರು ಫಲ ಖಗಮೃಗ ರೂಪವ ಬಗೆಬಗೆ ಇಹೆ ಪೊಗಳಲಳವೇ ಗಿರಿವರವು ಹಗಲು ಇರುಳು ಭಗವಂತನೆ ನಿನ್ನನ್ನು ಪೊಗಳುತಿಹರು ನಿನ್ನ ಭಕುತರು ಮೊಗದಲಿ ನಿನ್ನ ದಾಸರು ಗೋವಿಂದ ಮುಕುಂದ ಎನ್ನುತಾ ಯುಗ ಯುಗದೊಳು ನೀನಗದೊಳು ನೆಲಸಿಹೆ ಜಗದ ದೇವ ರಾಜಿಸುವವನಾಗಿಹೆ ಮಿಗಿಲೆನಿಸಿದ ಶ್ರೀ ವೆಂಕಟೇಶಾ ಸದ್ಗುಣ ಸಚ್ಚಿದಾನಂದ ಮುಕುಂದ ಗೋವಿಂದಾ 5
--------------
ಉರಗಾದ್ರಿವಾಸವಿಠಲದಾಸರು
ಊರ್ವಶಿ : ಬಂದ ಕಾಣೆ ಗೋವಿಂದ ಕ್ಷೀರ- ಸಿಂಧುಶಯನ ವನದಿಂದ ಇಂದಿರೇಶ ಮುದದಿಂದ ಮೌನಿಮುನಿ- ವೃಂದದಿಂದ ಸ್ತುತಿವಂದನೆಗೊಳ್ಳುತ1 ಏಸು ಲೋಭಿಯೊ ತಿಮ್ಮಶೆಟ್ಟಿ ಒಂದು ಕಾಸಿಗೆ ಮಾರುವ ರೊಟ್ಟಿ ದಾಸರ ಕೂಡಿ ಜಗಜಟ್ಟಿ ಬಹು ದೇಶವ ತಿರುಗುವ ಶೆಟ್ಟಿ ದೂಷಣಾರಿ ಪಾದಾಶ್ರಿತಜನರಭಿ- ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ2 ದೊಡ್ಡವನೈ ಮಹಾರಾಯ ಹಳೆ ದುಡ್ಡಿಗೆ ನೀಡುವ ಕೈಯ ಅಡ್ಡಿಗೈದರೆ ಬಿಡನಯ್ಯ ಇವ ಬಡ್ಡಿಕೇಳುವ ತಿಮ್ಮಯ್ಯ ದಡ್ಡುಕೇಸಕ್ಕಿಯ ಮಡ್ಡಿಪ್ರಸಾದವ ಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ3 ತಿರುಪತಿಗೆ ಪ್ರತಿಯಾಗಿ ಪಡು ತಿರುಪತಿಯೆಂದಿಹ ಯೋಗಿ ಮೆರಸುವನೈ ಸ್ಥಿರವಾಗಿ ಶ್ರೀ ವರ ವೆಂಕಟ ಲೇಸಾಗಿ ಶರಣರು ಏನೆಂದು ಸಂತೋಷಿಪ ಕರುಣಾಕರ ಚಪ್ಪರ ಶ್ರೀನಿವಾಸನು4 ಈ ಪರಿಯಲಿ ಒಲಿದಿಪ್ಪಾ ಬಹು ಕಾಪಟ್ಯರಿಗೆ ತಾನೊಪ್ಪನಮ್ಮ ಗೋಪಾಲಕ ಜಗದಪ್ಪ ಶ್ರೀಪರಮಾತ್ಮ ನಾನಾಪರಿ ವಿಭವದಿ ಗೋಪುರದಲಿ ತಾ ವ್ಯಾಪಿಸಿ ನಿಂದನು5 ರಂಭೆ : ನಾರೀವರ್ಯಾರಮ್ಮ ನೋಡಲು ಸಾರಹೃದಯರಮ್ಮ ತೋರಣಛತ್ರಚಾಮರ ಬಿರುದುಗಳಿಂದ ಭೂರಿ ವಿಭವದಿಂದ ಸಾರಿಬರುವರಮ್ಮ1 ಕರದಿ ಕಲಶವಿಹುದು ಶಾಲಿನ ನಿರಿ ಮುಂದಿರುತಿಹುದು ಬೆರಳಿನೊಳುಂಗುರು ವರ ದ್ವಾದಶನಾಮ ಧರಿಸಿ ಸಮಂತ್ರೋಚ್ಚರಿಸುತ ಬರುವರು2 ಮಂದಿಗಳೊಡ್ಡಿನಲಿ ಬರುವರು ಮಂದಸ್ಮಿತದಲಿ ಚಂದದಿ ಜನಗಳ ಸಂದಣಿ ಮಧ್ಯದಿ ಇಂದಿರೆಯರಸನ ಧ್ಯಾನದಿ ಬರುವರು3 ಹಿಂಗದೆ ಬರುತಿಲ್ಲಿ ಮನಸಿನ ಇಂಗಿತವರಿತಿಲ್ಲಿ ಬಂಗಾರದ ಭೂಷಣಸಮುದಾಯದಿ ಅಂಗಜಪಿತನಿಗೆ ಶೃಂಗಾರಗೈವರು4 ವಿಪ್ರೋತ್ತಮರ ಗುಣ- ಕೆಂತು ಸೈರಣೆಯಾಂತು ನಾನಿರಲಿ ಚಿಂತಿತಾರ್ಥವನೀವ ಲಕ್ಷ್ಮೀ- ಸಂತಸದಿ ಪೂಜಾದಿ ಸತತಿ- ಯಾಂತಕೊಂಡಿಹೇಕಾಂತಭಕ್ತರು1 ಕೀರ್ತಿಯನು ಧರಿಸಿ ಮ- ತಾವೆಂದು ಧರ್ಮವನು ಪಾಲಿಸಿ ಸಿಂಧುಶಯನನ ಚಾರುಚರಣ- ದ್ವಂದ್ವಕಾನತರಾಗಿ ಲೋಕದಿ ವಂದ್ಯರೆನಿಸಿಯಾನಂದ ಪರರಿವ- ರೆಂದು ಶ್ರೀಗೋವಿಂದ ನಡೆಸುವ2 ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿ ಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿ ವಾದಗೈವ ಕುವಾದಿಗಳ ಮನ- ಭೇದಿಸುತ ನಿಜವಾದ ಮಾರ್ಗವ ಸಾಧುಗಳಿಂದ ದೃಢವಾದ ಮಾತಿದು3 ಮೇಗರೆಡಂಭಮಾತಲ್ಲ ಧನಿಯ ಕು- ಗೊಂಬರೆ ಎಲ್ಲ ಸಂತಸ ಸಂಭ್ರಮದಿ ವೇದ್ಯಾಂಬುನಿಧಿಯಲಿ ತುಂಬಿರುವರೀ ಕುಂಭಿನಿಯೊಳು ಜ- ಸಂಬಡುವುದು ವಾಸಿಷ್ಠಗೋತ್ರಜ- ರೆಂಬ ವಿಪ್ರಕದಂಬಪೂಜ್ಯರು4 ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆ ಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1 ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆ ಮಹಾಲೀಲೆ2 ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇ ಲೀಲೆಯ ನಾನರಿಯೆ3 ಫಾಲೇಂದು ಕುಂದದ ವರ್ಣಕೋಲು ಚಾಮರಗಳ ನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು4 ಚಂಡವೈಶ್ವಾನರನ ತೇಜಾಖಂಡದಿಂದೋರಂತೆ ಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ5 ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿ ಆದಿನಾರಾಯಣ ಮದುಸೂದನನೆ ಮುದದಿ6 ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರು ನಾದಿನಿ ಕೇಳಿದರ ಪರಿಯನೀ ದಯದಿಂದುಸುರು7 ಊರ್ವಶಿ :ಭಾವೇ ನೀ ಕೇಳೆ ಇದನು ತ್ರೈಲೋಕ್ಯ- ದೇವನಾಗಮನವೆಲ್ಲನೂ ದೀವಟಿಗೆ ಸೇವೆಯೆಂದು ಪೇಳುವರು ಭಾವುಕರು ಮನದೊಳಂದು1 ಸಾಯನವನು ಸುರಿದು ಸಾವಿರ ಸಾಲದು ಶ್ರೀಯರಸನ ಮಹಿಮೆಯರಿವದಾರಿಗಳವಲ್ಲ3 ದೈತ್ಯವಿನಾಶನ ಜಯಜಯ ಜಾಹ್ನವಿತಾತ ಜಯಜಯ ಜಗದಾತ ಆಶ್ರಿತ ಸುರಭೂಜ ತೋರುತ ಒಲಿದು4 * * * ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ- ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ1 ಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2 ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ- ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ3 ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ- ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ4 ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥ ಮೌರಿ ಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5 ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ- ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ6 ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ- ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ7 ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ- ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ8 ನಿತ್ಯ ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ9 ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದ ಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ10 ನೋಡೆ ತಂಗಿ ನಮ್ಮ ದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ11 ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ- ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12
--------------
ತುಪಾಕಿ ವೆಂಕಟರಮಣಾಚಾರ್ಯ
ಓ ಎನ್ನಬಾರದೇ ಹರಿಯೆ | ಶ್ರೀಯರಸನೇ ನೀನೇ ಗತಿಯೆಂದು ಅನ್ಯ ಉ| ಪಾಯವನರಿಯದ ಬಾಲಕ ಕರೆದರೆ ಪ ಹಾಲವ ಬೇಡುವ ಮೊರೆಯಿಡಲುಪಮನ್ಯು ಆ | ಬಾಲಗ ಧ್ವನಿ ದೋರಿದಂತೆ | ಚಾಲವರಿದು ಸರೋವರದಲಿ ಕರೆದ ಶುಂ| ಡಾಲಗೆ ಧ್ವನಿ ದೋರದಂತೆ | ವ್ಯಾಳ್ಯೆಕ್ಕ ಒದಗೆಂದು ರಾತ್ರಿಲಿ ಕರೆದ ಪಾಂ| ಚಾಲಿಗೆ ಧ್ವನಿ ದೋರಿದಂತೆ | ಕಾಲಕಾಲಕ ಬಂದು ಮೊರೆಯಿಡೆ ಸುರಮುನಿ | ಜಾಲಕ ಮೈದೋರಿ ಧ್ವನಿ ದೋರಿದಂತೀಗ 1 ಆವಾಗ ಧ್ವನಿದೋರಿದಂತೆ | ಗೋವ ಮೇಯಿಸಿ ತೆರಳಲು ಗೊಲ್ಲರೊದರುವ ಭಾವಕ ಧ್ವನಿದೋರಿದಂತೆ | ದೇವ ನೀಮರಿಯಾಗೆ ಹುಂಕರಿಸ್ಸೊದರಲು | ಆವಿಗೆ ಧನಿ ದೋರಿದಂತೆ | ಕಾವನೈಯ್ಯನೆ ನಿನ್ನ ನೆನೆದ ಗೊಲ್ಲತೆರಾ | ಜೀವನ ಹಿತವಾಗಿ ಧನಿದೋರಿದಂತೀಗ 2 ಬಂದೂಳಗಕ ನಿನ್ನ ಪಾಂಡವರೊದಲು | ನಿಂದು ನೀ ಧನಿದೋರಿದಂತೆ | ಇಂದಾದಾ ಕಲಿಯುಗದ ದಾಸರ ಮಾತಿಗೆ | ಬಂದು ನೀ ಧನಿ ದೋರಿದಂತೆ | ಕಂದನಳುವ ಧ್ವನಿ ಕೇಳುತ ಜನನಿ ಅ | ನಂದದಿ ಧನಿದೋರುವಂತೆ | ತಂದೆ ಮಹಿಪತಿ - ನಂದನ ಪ್ರಭು ಗೋ | ವಿಂದ ಮುಕುಂದೆನ್ನ ಸಲಹೆಂಬ ಮೂಢನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯಬೇಕೆನ್ನ ಕರುಣದಲಿ ಧನ್ವಂತ್ರಿ ಶ್ರೀಯರಸ ನರಹರಿಯೆ ಪ್ರಾರ್ಥಿಸುವೆ ನಿನ್ನ ಪ. ಸುರರಿಗೆ ಮರಣ ಕಾಲವು ಪ್ರಾಪ್ತವಾಗಲು ಗಿರಿಯಿಂದ ಶರಧಿಯನು ಮಥಿಸೆ ಪೇಳಿ ಕರುಣದಿಂದಮೃತ ಕರದಿಂದ ಸುರರಿಗೆ ಎರೆದು ಜರೆ ಮೃತ್ಯು ಬಿಡಿಸಿದಗೆ ಇದು ಒಂದು ಘನವೆ 1 ಸಕಲ ನಾಡಿಗಳಲ್ಲಿ ಚೇಷ್ಟಪ್ರದ ನೀನಾಗಿ ಸಕಲ ವ್ಯಾಪಾರಗಳ ನಡೆಸುತಿರಲು ಯುಕುತಿಯಿಂದಲಿ ನಾಡಿ ನೋಡಿ ತಿಳಿಯುವನ್ಯಾರೊ ಮುಕುತಿದಾಯಕ ನಿನಗೆ ಇದು ಒಂದು ಘನವೆ 2 ಅನಾದಿಯಿಂದ ಅಪಥ್ಯದಲಿ ನರಳುವೆನೊ ಈಗ ಪಥ್ಯವ ಮಾಳ್ಪ ಬಗೆ ಯಾವುದೊ ಶ್ರೀನಿವಾಸನೆ ನಿನ್ನ ಧ್ಯಾನವೆ ಔಷಧವೊ ಶ್ರೀ ಗುರುಗಳಾಜ್ಞೆಯೆ ಪಥ್ಯವೆನಗಿನ್ನು 3 ಭಕ್ತಪ್ರಹ್ಲಾದನನು ಯುಕ್ತಿ ಶಕ್ತಿಗಳಿಂದ ಮುಕ್ತಿಮಾರ್ಗವ ತೋರಿ ಸಲಹಲಿಲ್ಲೇ ಭಕ್ತಿಹೀನರನೆ ಕಂಡು ಎನ್ನ ರಕ್ಷಿಸದಿರಲು ಯುಕ್ತವೇ ನಿನಗಿನ್ನು ಭಕ್ತಪಾಲಕನೆ 4 ನಿನ್ನ ದಾಸತ್ವದಲಿ ನೆಲಸಬೇಕಾದರೆ ಬಿನ್ನಣದ ರೋಗಗಳ ಪರಿಹರಿಸಿ ಸಲಹೊ ನಿನ್ನವರಾದ ಮೇಲಿನ್ನು ಕಾಯದೆ ಇಹರೆ ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಕೃಷ್ಣ ಮುರಾರಿ ಕೇಶವ ಮುರಾರಿಅಚ್ಚುತಾನಂತ ಗೋವಿಂದ ಮುರಾರಿಪ. ವೇಷಧಾರಿಯಾಗಿ ಬಂದು ಅಸುರರ ಸಂಹರಿಸಿಭೂಸುರರಿಗ್ವೊರವನಿತ್ತ್ಯೋ ಕೇಶವ ಮುರಾರಿ 1 ನಾ ತಾಳಲಾರೆನೊ ಲೋಕಾಧಿಪತಿಯೆ ಕಾಯೊಅನಾಥರಕ್ಷಕ ನಾರಾಯಣನೆ ಮುರಾರಿ 2 ಮಾಧವ ಮುರಾರಿ3 ಅನೇಕ ಗೋವ್ಗಳ ಕಾಯ್ದ ಗೋಪಾಲಮೂರುತಿಗೋಪಿಯರರಸ ಗೋವಿಂದ ಮುರಾರಿ 4 ಕಟ್ಟಿದ ಕಾಮನೆಯ ಬಿಟ್ಟು ಕಳಚಿ ಮನ-ದಿಷ್ಟಾರ್ಥವನೀವ ವಿಷ್ಣು ಮುರಾರಿ 5 ಮಧುರವಾಕ್ಯಗಳಿಂದ ಮಂದಿರಕಾಗಿ ಬಾರೊಮನಸಿಜನಯ್ಯ ಮಧುಸೂದನ ಮುರಾರಿ 6 ತಿದ್ದಿದ ಕಸ್ತುರಿತಿಲಕ ತಿಗುರಿದ ಪರಿಮಳಗಂಧಮುದ್ದು ನಸುನಗೆಯ ತ್ರಿವಿಕ್ರಮ ಮುರಾರಿ7 ಕಾಮಿನಿ ಅಗಲಿಬಂದು ಸೀಮೆನಾಳುವೆÀನೆಂದುನೇಮವಾಕ್ಯದಿ ನಿಂದ ವಾಮನ ಮುರಾರಿ 8 ಶ್ರೀಯರಸ ಮೇಳದಿ ರಮಿಸಿ ಬಹುಕಾಲದಿಸಿಂಧುಶಯನ ಶ್ರೀಧರನೆ ಮುರಾರಿ 9 ಋಷಿಗಳಿಗ್ವರವಿತ್ತು ಬೃಂದಾವನದಲ್ಲಿ ನಿಂದುಹರುಷವಾರಿಧಿ ಹೃಷಿಕೇಶ ಮುರಾರಿ 10 ಪಾವನ್ನ ಮೂರುತಿ ಪರಮದಯಾಳು ನೀನೆಪಾಲಿಸೊ ಶ್ರೀಪದ್ಮನಾಭ ಮುರಾರಿ11 ದಾನವರ ಮರ್ದಿಸಿ ಸುಮನಸರಿಗೊಲಿದದಾನದತ್ತನೆ ದಾಮೋದರನೆ ಮುರಾರಿ 12 ಶಂಕೆಯಿಲ್ಲದೆ ಗೆಲಿಸು ಶಂಖಚಕ್ರವ ಧÀರಿಸಿ ಅ-ಲಂಕಾರವಾದ ಸಂಕರ್ಷಣನೆ ಮುರಾರಿ 13 ವಾಸುದೇವ ಮುರಾರಿ 14 ಇದ್ದ ಗೋಪೇರಮನೆಯ ಕದ್ದು ಬೆಣ್ಣೆಯ ಮೆದ್ದಪದ್ಮದಳಾಕ್ಷ ಪ್ರದ್ಯುಮ್ನ ಮುರಾರಿ 15 ಅನಿರುದ್ಧ ಮುರಾರಿ16 ಪುನಗು ಕಸ್ತೂರಿಗಂಧ ಪರಿಮಳಪುಷ್ಪದಿಂದ ಪುಣ್ಯಮೂರುತಿ ಪುರುಷೋತ್ತಮನೆ ಮುರಾರಿ 17 ಅವನಿ ಅಧೋಕ್ಷಜ ಮುರಾರಿ 18 ನಾನೇನ ಪೇಳಲಿ ನಗೆನಗೆಯಲ್ಲಿ ಅಕ್ಷಿಕ್ರೂರವಾಯಿತು ನಾರಸಿಂಹ ಮುರಾರಿ 19 ಮೆಚ್ಚಿದೆ ನಾ ನಿನ್ನ ಪಕ್ಷಿವಾಹನ ಸ್ವಾಮಿಮುಚ್ಚುಮರೆಗಳ್ಯಾಕೊ ಅಚ್ಚುತ ಮುರಾರಿ 20 ಜಾಣತನದಿ ಪೋಗಿ ಜಾರಸ್ತ್ರೀಯರನ್ನುಒಡಗೂಡಿ ಆಡಿದ ಜನಾರ್ದನ ಮುರಾರಿ21 ಉಗುರಲ್ಲಿ ಹಿರಣ್ಯಕನ ಸೀಳಿ ಉರದಲ್ಲಿ ಮಾಲೆಯ ಧರಿಸಿಉಬ್ಬಲ್ಲಿ ಮೆರೆದ ಉಪೇಂದ್ರ ಮುರಾರಿ 22 ಹಿರಣ್ಯಾಕ್ಷತನಯನಂದು ಕರೆಯೆ ಕಂಬದಿ ಬಂದಗರುವದಿಂದಲೆ ನರಹರಿಯೆ ಮುರಾರಿ 23 ಅಟ್ಟಡವಿಯ ತಪಸು ಎಷ್ಟುದಿನವೊ ಸ್ವಾಮಿಪಟ್ಟಣಕಾಗಿ ಬಾರೊ ಕೃಷ್ಣಮುರಾರಿ 24 ಎಲ್ಲರ ಸಲಹಿದ ಫುಲ್ಲಲೋಚನ ಸ್ವಾಮಿಪಾಲಿಸೊ ಶ್ರೀಹಯವದನ ಮುರಾರಿ 25
--------------
ವಾದಿರಾಜ
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ದಿನಗಳನು ಕಳೆವ ಜನರೆ ಸುಜನರು ವನಜನಾಭನ ದಾಸರ ಸಮಾಗಮದಿಂದ ಪ. ಅರುಣೋದಯದಲೆದ್ದು ಆಚಮನ ಕೃತಿಯಿಂದ ಪರಿಶುದ್ಧರಾಗಿ ಇಹಪರಗಳಿಂದ ಎರಡುವಿಧ ಸುಖವೀವ ಗುರುಮಧ್ವಮುನಿವರನ ಪರಮಮತವಿಡಿದು ಹರಿಕಥಾಮೃತ ಸವಿದು 1 ಸ್ನಾನವನು ಮಾಡಿ ಸಂಕಲ್ಪಪೂರ್ವಕದಿ ಸಂ- ಧ್ಯಾನ ಗಾಯಿತ್ರಿ ಗುರು ಮಂತ್ರ ಜಪವು ಭಾನುನಾಮಕನಾದ ಪರಮಾತ್ಮನಂಘ್ರಿಯನು ಧ್ಯಾನವನು ಮಾಡಿ ಅಧ್ಯಯನ ಪಾಠಗಳಿಂದ 2 ವಾಸುದೇವ ಅಡಿಗಡಿಗೆ ನೆನೆದು ಪಾವಕಗೆ ಪ್ರಾತರಾಹುತಿಯನಿತ್ತು ಭಾವಜ್ಞರಲಿ ಸಕಲಪುರಾಣಗಳ ಕೇಳಿ ಹೂವು ಶ್ರೀತುಲಸಿವನಗಳ ಸೇವೆಯನು ಮಾಡಿ 3 ನದನದಿಗಳಲಿ ಸ್ನಾನವನು ಮಾಡಿ ಕಂಠÀದಲಿ ಪದುಮಾಕ್ಷಿ ಶ್ರೀತುಲಸಿ ಮಾಲೆಗಳನು ಮುದದಿಂದ ಧರಿಸಿ ಮಧ್ಯಾಹ್ನ ಕಾಲದಿ ಬ್ರಹ್ಮ ಯ- ಜ್ಞ ದೇವ ಋಷಿ ಪಿತೃಗಳ ತೃಪ್ತಿಯನು ಬಡಿಸಿ4 ಸಾವಧಾನದಿ ತಂತ್ರಸಾರೋಕ್ತ ವಿಧಿಯಿಂದ ದೇವಪೂಜೆಯ ಮಾಡಿ ದೇವೇಶಗೆ ನೈವೇದ್ಯಗಳನಿಟ್ಟು ನಿತ್ಯತೃಪ್ತಗೆ ವೈಶ್ವ- ದೇವ ಬಲಿಹರಣ ಅತಿಥಿ ಪೂಜೆಗಳಿಂದ 5 ಪರಮ ಹರುಷದಿಂದ ದೇವ ಪ್ರಸಾದವನು ವರ ಮಾತೃ ಪಿತೃ ಸೋದರರು ಸಹಿತ ಪರಮ ಸಖರ ಪಂಙÂ್ತ ಪಾವನರೊಡಗೂಡಿ ನರಹರೆ ಎನುತ ಭೋಜನ ಮಾಡಿ ಮೋದಿಸುತ 6 ಸಾಯಾಹ್ನದಲಿ ಸಂಧ್ಯಾನ ಗಾಯಿತ್ರಿ ಜಪ ಶ್ರೀಯರಸನಂಘ್ರಿ ಸೇವೆಯನು ಮಾಡಿ ವಾಯುಸಖನೊಳಗಾಹುತಿಯನಿತ್ತು ಲಕ್ಷ್ಮೀನಾ- ರಾಯಣನ ಗುಣಗಳನು ಪೊಗಳುತಲಿ 7 ತನುಮನವÀ ಶ್ರೀಹರಿಯಾಧೀನವ ಮಾಡಿ ಅನುಸರಿಸಿ ಭಾಗ್ಯಬಡತನ ಎಣಿಸದೆ ಮನವರಿತು ಹರಿಕೊಟ್ಟುದು ತನ್ನದಲ್ಲದೆ ಅಧಿಕ ಅಣುಮಾತ್ರ ಬಾರದೆಂದು ಅಲ್ಪ ಸಂತುಷ್ಟನಾಗಿ8 ಈ ವಿಧದಿ ಅನುದಿನವಾಚರಿಸಿ ರಾತ್ರಿಯಲ್ಲೊಂದು ಜಾವ ಜಾವಕೆ ಎದ್ದು ನೆರೆಹೊರೆಯು ಕೇಳ್ವಂತೆ ಪಾವನ ಚರಿತ್ರ ಹಯವದನನ ನೆನೆದು 9
--------------
ವಾದಿರಾಜ
ನೀ ಯಾಕ ಮನವೇ ಚಿಂತಿಸಿ ಬಳಲುವೆ ಬರಿದೇ | ಶ್ರೀಯರಸನ ಮೊರೆ ಹೋಗದೇ ಪ ಸಾಧುರಾ ಸಂಗ ಜರಿದು ಕುಜನರ ನೆರೆವಿಡಿದು | ಮೇದಿನಿಯೊಳು ನಿನ್ನ ನೀ ಮರೆದು 1 ಇರಲು ಮುಳ್ಳಿನಾಗ್ರದಲಿ ಹೀನ ಕೀಟಕಾವಳಿ | ಪೊರೆವಾನಿತ್ತು ಆಹಾರದಯಲೀ 2 ಮನುಜರಿಗೆ ತಲೆವಾಗಿ ಗೇಣು ವಡಕಲಾಗಿ | ಮನಸಾ ಹಿಡಿವರೇ ಪರರು ಹೋಗಿ 3 ಹುಟ್ಟಿಸಿದಾ ದೇವನು ಹುಲ್ಲು ಮೇಯಿಸುವನೇನು | ಅಷ್ಟಾಸಾಯಸ ಬಡದಿರು ನೀನು 4 ಅನುದಿನ ಗುರುಮಹಿಪತಿ ಚರಣಾ | ತಂದಿದಿರುಡುವ ನಿಧಾನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀತಿಯೆ ಎನ್ನ ಬಾಧಿಸುವುದಿನ್ನು ಪ. ಎಲ್ಲಿಯೂ ಎನಗೆ ನೀನಲ್ಲದೆ ಬೇರೆ ಗತಿ ಸಿರಿನಲ್ಲ ನೀ ಬಿಡುವುದು 1 ಶ್ರೀಯರಸ ನೀನೆ ತಂದೆತಾಯಿಗಳೆಂದು ಬಾಯಬಿಟ್ಟೊದರಲು ಕಾಯದೆ ಕಠಿಣ 2 ಭೂಧರಾಧೀಶಾಯುರ್ವೇದ ವಿದಾಯಕ ಮಾಧವ ನೀ ಎನ್ನ ವ್ಯಥೆಗೊಳಿಸುವುದು 3
--------------
ತುಪಾಕಿ ವೆಂಕಟರಮಣಾಚಾರ್ಯ
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪಾದ ವನಜ | ಸೂಸಿ ಭಜಿಸಿರೋ |ವ್ಯಾಸ ತೀರ್ಥ ಶಿಷ್ಯರೆಂದು | ಭಾಸಿಸಿದ್ದರೋ ಪ ಪುರಂದರ ಗಡದಿ | ವಾಸರಿದ್ದರಾಪರಮ ಲೋಭಿ ನವ ಕೋಟಿ | ದ್ರವ್ಯವಿದ್ದರಾ 1 ಬಂದ ಕಾರ್ಯ ಮರೆತನೆಂದು | ಹರಿಯು ಚಿಂತಿಸೀಇಂದಿರೇಶ ದ್ವಿಜನಾಗಿ | ಹುಡುಗನಾವೆರಸೀ ||ಬಂದು ಮಗನ ಮುಂಜಿಗಾಗಿ | ಧನವನು ಬಯಸೀ ||ನಂದ ಕಂದ ತಿರುಗುತ್ತಿದ್ದ | ಅಂಗಲಾಚಿಸೀ 2 ಭಿಕ್ಷುಕನ್ನ ಬಿಡದಂತೆ | ಅಂಗಡಿಯಲ್ಲಿಶಿಕ್ಷಿಸೀದ ಆಳುಗಳ | ಲೋಭಿ ತಾನಲ್ಲಿ ||ತ್ರ್ಯಕ್ಷಸೇವ್ಯ ತಿಂಗಳಾರು | ತಿರುಗಿದನಲ್ಲೀಲಕ್ಷಿಸಾದೆ ಮೆರೆಯುತಿದ್ದ | ಕಾಣದಂತಲ್ಲಿ3 ಕಟ್ಟಕಡೆಗೆ ಸವೆದ ನಾಣ್ಯ | ಚೀಲ ವೆಸೆಯುತ್ತಕಟ್ಟು ಮಾಡ್ದ ದುಡ್ಡೊಂದನ್ನು | ಕೊಳ್ಳೆಂದೆನುತ್ತ ||ಅಟ್ಟುಗಳಿಗೆ ಬೇಸರಿಸಿ | ಮುಂದೆ ಹೋಗುತ್ತ |ಥಟ್ಟನ್ಹೋದ ಹಿತ್ತಲಿನ | ಕದವ ಸಾರುತ್ತ 4 ಅಲ್ಲಿನಿಂತ ಲೋಭಿ ಸತಿಯ | ಬಳಿಗೆ ಪೋಗುತ್ತಬಲ್ಲ ಹರಿಯ ಧನವ ಬೇಡ್ದ | ಮುಂಜಿಗೆನ್ನುತ್ತ ||ನಲ್ಲ ಬೈವನೆಂದು ಬೆದರಿ | ಇಲ್ಲವೆನ್ನುತ್ತಚೆಲ್ವ ಸತಿಯು ಪೇಳೆ ಅವಳ | ಮೂಗ್ತಿ ನೋಡುತ್ತ 5 ತವರು ಮನೆಯ ದ್ರವ್ಯದಾನ | ಮಾಡು ನೀನೆಂದಅವಳು ತನ್ನ ಮೂಗುತಿಯ | ಕೊಟ್ಟುದೆ ಛಂದ ||ಇವನು ಅದನ ಸಾಹುಕಾರ್ನ | ಮುಂದಾಕಿ ಅಂದಜವದಿ ನಾನೂರ್ಪಾಕಿ ಹಣ | ತನಗೆ ಬೇಕೆಂದ 6 ನಾಯಕನು ಕೈಲಿ ತೆಗೆದು ನೋಡುತ್ತಲಿರೇಶ್ರೀಯರಸ ಪೋದತಾನು | ಕಣ್ಣಿಗೆ ಮರೇ ||ಕಾಯುತ್ತಿದ್ದ ಆಳು ಹಿಡುಕಿ | ಸಿಗದೆತಾಬರೇನಾಯಕನದ ಭದ್ರಮಾಡಿ | ಸತಿಬಳಿಗೆ ಬರೇ 7 ಬರಿಯ ನಾಸಿಕವ ನೋಡಿ | ಮೂಗ್ತಿ ಎಲ್ಲೆನಲುಸರಿಯ ಪಡಿಸಲಿಕ್ಕೆ ಕೊಟ್ಟು | ಇರುವೆ ನೆನ್ನಲುತ್ವರದಿ ತೋರದಿರೆ ನಿನ್ನ | ಅರೆವೆ ನೆನ್ನಲು |ಬರುವೆ ಬೇಗ ಎಂದು ಪೋಗಿ | ಗರದ ಬಟ್ಟಲು 8 ಕರದಿ ಪಿಡಿದು ತುಳಸಿ ಮುಂದೆ | ಮೊರೆಯ ನಿಡುತಿರೇಗರದ ಬಟ್ಟಲೊಳು ಬಿದ್ದ | ಶಬ್ದವು ಬರೇ ||ಹರುಷದಿ ದಿಗ್ಗನೆ ಎದ್ದು | ಪತಿಗೆ ತಾತೋರೇಗರ ಹೊಡೆದಂತವನಾಗಿ | ಮೋರೆಯ ತೋರೇ 9 ಹೆಂಡತಿಯ ಕೇಳಿ ತಿಳಿದ | ಆದ ಪರಿಯಾಮಂಡೆ ಬಾಗಿ ತಾನು ಆದ | ಹೊಸ ಪರಿಯಾ ||ಕೊಂಡಾಡಿದ ಪತ್ನಿ ಚರ್ಯ | ಹರಿಯ ಭಕ್ತಿಯಬಂಡುಣಿ ಹರಿಪಾದಾಬ್ಜದಿ | ತೊರೆದ ಮನೆಯ 10 ಪಾದ ನಮಿಸೀಬಾರಿ ಬಾರಿ ಹರಿಯ ತತ್ವ | ಕೇಳಿ ಸುಖಿಸೀ 11 ಪುರಂದರ ಸಾರ ಭಾಷೆ | ಪ್ರಾಕೃತ ವೆನಿಸೀ 12 ಮೂರ್ತಿ ಸುಂದರತೊಂಡನಾದ ಮೇಲೆ ತನ್ನ | ಹೃದಯ ಮಂದಿರ ||ಪಿಂಡ ಅಂಡದೊಳಗೆ ಕಂಡು | ಹಿಗ್ಗಿದ ವಿವರ |ಕಂಡವನೆ ಪೇಳ ಬಲ್ಲ | ಅದರ ವಿಸ್ತಾರ 13 ಪೊಂದಿ ಅಪರೋಕ್ಷವನ್ನು | ಸುಜನರುದ್ಧಾರಛಂದದಿಂದ ಮಾಡಿದಂಥ | ದಾಸವರ್ಯರ ||ಅಂದ ಚರಿತೆ ಕೇಳಿ ತೋಷ | ಪೊಂದಿದವರನಂದ ಕಂದ ಪಾಲಿಸುವ | ಬಿಡದೆ ಅವರಾ 14 ಗೋವ ಕಾವ ಗೊಲ್ಲರೊಡೆಯ | ಗೋಪಿಯ ಬಾಲತಾವಕ ಭಕ್ತರ ಪೊರೆವ | ಪಾಂಡವ ಪಾಲಆವ ದಾಸರ ಪೊರೆದಂತೆ ಮೈದುನ ಪಾಲದೇವ ದೇವ ಪೊರೆವ ಗುರು | ಗೋವಿಂದ ವಿಠಲ 15
--------------
ಗುರುಗೋವಿಂದವಿಠಲರು
ಬಲ್ಲೆ ಬಲ್ಲೆನು ಕೃಷ್ಣ ನಿನ್ನ ಮಹಿಮೇ ಪ ಗುಲ್ಲು ಮಾಡದೆ ಬೇಗ ನಿಲ್ಲೈಯ ಮನದಲಿ ಅ.ಪ ತಿರುಪೆ ಬೇಡಿದೆ ಯಾಕೆ ಪರಮ ಪುರುಷನು ಎನಿಸಿ ತುರುವ ಕಾಯ್ದೇಕೆ ಪರಿವಾರ ಸುರರಿರಲು ಕರಡಿಕಪಿಗಳ ಸೈನ್ಯ ನೆರವು ಯಾತಕೆ ನಿನಗೆ ಚರಿತೆ ಸೋಜಿಗವಯ್ಯಾ 1 ಅಷ್ಟಕರ್ತನಿಗೇಕೆ ಸಂತತವು ಜಪತಪವು ಪಟ್ಟ ಮಹಿಷಿಯರಿರಲು ಕುಬ್ಜೆಕೂಡಿದೆ ಯಾಕೆ ಉಟ್ಟು ಸೀರೆಯ ಖಳರ ವಂಚಿಸಿದ ಬಹು ಶೂರ ನಿಷ್ಟೆಯಿಂದಲಿ ಬಲಿಯ ಬಾಗಿಲನು ಕಾಯುವನೆ 2 ಬೆಣ್ಣೆ ಕಳ್ಳರ ಗುರುವೆ ಹೆಣ್ಣು ಕದ್ದವ ನೀನು ಮಣ್ಣು ಮಾಡಿದೆ ಕುಲವ ಯೆಂಜಲುಂಡವ ದೊರೆಯೆ ಅಣ್ಣ ತಮ್ಮಂದಿರಲಿ ಕಲಹವನು ವÀಡ್ಡುತಲಿ ನುಣ್ಣ ಗೆಲ್ಲರ ಮಾಡಿ ನಿಷ್ಕಪಟಿಯೆನಿಸಿದೆಯೊ 3 ಅನ್ಯರಿಗೆ ಉಪಕಾರಿ ಅನನ್ಯರಾ ಶತ್ರುವು ಭವ ಭ್ರಷ್ಟತ್ವ ನೀಡುವೆಯೊ ನಿನ್ನಾಳ ನಿಖಿಳರಿಗು ತೊರ್ಗೊಡದ ಬಹುಗೂಢ ಕಣ್ಣು ಕೈ ಕಾಲೆಲ್ಲ ಸಮವೇನೆ ನಿನಗಯ್ಯ 4 ದೊಡ್ಡ ದೇವನು ಎನಿಸಿ ಗುಡ್ಡವೇತಕೆ ಹೊಕ್ಕೆ ಗಿಡ್ಡರೂಪವ ತೋರಿ ದೊಡ್ಡದಾಗುತ ಎಂದು ಅಡ್ಡಿಯಿಲ್ಲದೆ ಬಲಿಯ ಹೆಡ್ಡನೆನಿಸಲು ಬಹುದೆ ಗುಡ್ಡೆಯಿಲ್ಲದೆ ಚರಿಪ ವಡಲು ಬಗೆದಾ ಘೋರ 5 ಪೂಡವಿಗೊಡೆಯನು ಎನಿಸಿ ಹಡೆದ ಮಾತೆಯ ಕಡಿದೆ ಅಡವಿ ಬೇರನು ತಿಂದೆ ಕಡಲೊಳಗೆ ಸಂಚರಿಪೆ ಮಡದಿಯನು ಕಳಕೊಂಡು ಹುಡುಕುತಲಿ ತಿರುಗಿದೆಯೋ ಸಡಗರದಿ ಹಯವೇರಿ ಕೆಡುಕು ಕಡಿಯುವೆಯಂತೆ 6 ನಾಮಕುಲಗೋತ್ರಗಳ ನೆಲೆಯಕಂಡವರಿಲ್ಲ ಸಾಮಸರಿ ನಿರ್ಗುಣವು ಪೂರ್ಣಗುಣ ನೀನಂತೆ ವಾಮನೀನಾವರಿಸಿ ವಳ ಹೊರಗೆ ಲೋಕಗಳ ನೇಮದಿಂ ಕಾಯುವನು ಪುಡುಕಿದರು ಸಿಗೆಯೇಕೇ 7 ಮಂಗಳಾಂಗನು ಅಂತೆ ಲಿಂಗವರ್ಜಿತನಂತೆ ಶೃಂಗಾರರಸನಂತೆ ಭಂಗರಹಿತನು ಅಂತೆ ಲಿಂಗವೆರಡೂ ಅಂತೆ ಸಿಸ್ಸಂಗ ನೀನಾಗಿ ಅಂಗದಲಿ ಅಂಗನೆಯ ಧರಿಸಿ ಮೆರೆಯುವೆಯೇಕೆ 8 ವೇದ ಬೋಧೆಯನಿತ್ತಗಾಧ ವರ್ಜಿತ ಮಹಿಮ ಮೋದ ಮಯ ನೀ ನಿನ್ನ ನಾದಿನಿಯ ಬೆರೆದೇಕೆ ಸಾಧುಗುಣಪೂರ್ಣ ಭಾನುವನು ಮರೆ ಮಾಡಿ ಮೈದುನನ ಸಲಹಿದ್ದು ಬಹುನ್ಯಾಯ ವೇನೈಯ್ಯ 9 ಹಾಲು ಕೊಟ್ಟವಳನ್ನು ಲೀಲೆಯಿಂದಲಿ ಕೊಂದೆ ಶೀಲಸತಿಯಳ ಬೆರದು ವ್ರತವಳಿದು ಪರವಿತ್ತೆ ಕಾಲನಾಮಕನಾಗಿ ಜಗವೆಲ್ಲ ನುಂಗುವನೆ ಹೇಳುವರು ಕೇಳುವರು ನಿನಗಿಲ್ಲವೇನೈಯ್ಯಾ 10 ಏನೆಂದು ವರ್ಣಿಸಲಿ ನಿನ್ನಯ ವಗತನವ ಸತಿ ಚಂಚಲೆಯು ಮಗಳ ಮಾರ್ಗವುಡೊಂಕು ಮಾನಾಭಿಮಾನಗಳ ಬಿಟ್ಟವರೆ ಪರಿವಾರ ನೀನಿರದಠಾವಿಲ್ಲ ನಿನಗಿಲ್ಲ ತುದಿಮೊದಲು 11 ಸರ್ವಜ್ಞನಾದವಗೆ ಸಾಂದೀಪ ಗುರುವೇಕೆ ಸರ್ವ ನಾಮವು ಕೂಡೆ ನಾಮಕರಣವು ಏಕೆ ಸರ್ವಸ್ವಾಮಿಯು ಎನಿಸಿ ಸಾರಥಿಯು ಆದೇಕೆ ಸರ್ವ ತೋಮುಖ ನೀನು ಜಗವಿಲಕ್ಷಣ ನೈಯ್ಯಾ12 ಒಬ್ಬರಲಿ ನೀಜನಿಸಿ ಮತ್ತೊಬ್ಬರಲಿ ನೀ ಬೆಳೆದೆ ತಬ್ಬಲಿಯೆ ವಾಸ್ತವದಿ ಉಬ್ಬಿಳಿತವರ್ಜಿತವೆ ಅಬ್ಬಬ್ಬ ಬ್ರಹ್ಮಾಂಡ ಹಬ್ಬಿ ನಡೆಸುವ ಧೀರ ಕೊಬ್ಬಿದಾ ಖಳಗಂಜಿ ಮಧುರೆಯನು ತೊರೆದೇಕೊ 13 ಮೇದಿನಿಗೆ ನೀ ಸ್ವಾಮಿ ಮದುವಾದೆ ಮಗಳನ್ನು ಬೈದವಗೆ ಗತಿಯಿತ್ತೆ ಭಕ್ತರಿಗೆ ಕೂಳಿಲ್ಲ ಮೋದ ಮಯ ನುಂಡುಣಿಸಿ ನಿರ್ಲೇಪನೀ ನಿರ್ಪೆ ವಿದುರ ನೌತಣ ಕೊಂಡೆ ಕನ್ಯೆಯಲಿ ನೀ ಬಂದೆ 14 ಜಯ ಮುನಿ ಹೃದಯದಲಿ ವಾಯುವಿನಂತರ ದಿರ್ಪ ಶ್ರೀಯರಸ ತಾಂಡವ ಕೃಷ್ಣವಿಠಲನೆ ನೀನು ಮಾಯಾವಿ ತೋರಗೊಡೆ ನಿಜಮರ್ಮಖಳಜನಕೆ ಜೀಯನೆ ಮೊರೆಹೊಕ್ಕೆ ನಿನ್ನಿರವ ತೋರೈಯ್ಯಾ 15
--------------
ಕೃಷ್ಣವಿಠಲದಾಸರು
ಬಾಯಿಂದಾಗುವುದು ಭವಾಭವ ತಿಮ್ಮ ರಾಯನ ನಾಮವ ನುಡಿಯುತಲಿರು ಜೀವಾ ಪ. ರಸನೆಯ ಗೆಲಿದರೆ ವಿಷಯ ನಿವರ್ತಿಸಿ ವಶವಾಹುದಿತರೇಂದ್ರಿಯಗಳೆಂದು ವಸುದೇವ ಸುತನು ವಾಸವಿಗೆಂದು ನುಡಿಯ ಧ್ಯಾ- ನಿಸುತ ಜಾಗೃತನಾಗು ಮುಸುಕಿನೊಳಿಹ ಜೀವಾ 1 ಭವ ಕಂಡು ನಿಂದೆಯ ಮಾಡಿ ಪಿಕವದು ಕೊಂಡಾಡುವುದಾ ಮಾಡದಿದ್ದರೆ ನಗೆಗೀಡಾಹುದಿದರಿಂದ 2 ಮಧ್ವವಲ್ಲಭನಿಗರ್ಪಿತವಾದ ನೈವೇದ್ಯ ಶುದ್ಧ ತೀರ್ಥ ತುಳಸಿಯ ಸಹಿತ ಮೆದ್ದರೆ ಬಹಿರಂತಃ ಶುದ್ಧಿಯಾಗುವುದು ನಿ- ಷಿದ್ಧ ಭಕ್ಷಣದಿಂದ ನೀಚನೆಂದೆನಿಸುವ 3 ಶ್ರೀಯರಸನ ಜಿಹ್ವೆಯಲಿ ಪೊಗಳಲು ಯಮ ರಾಯನಾಳ್ಗಳು ನೋಡಲಂಜುವರು ಮಾಯಾ ಪ್ರಪಂಚದಿ ಮರುಳಾದ ಜನರೊಳು ನ್ಯಾಯವಾಡಲು ನಾನಾಪಾಯವ ಘಟಿಸುವ 4 ಕ್ಷೇತ್ರ ಕಳತ್ರಾದಿಗಳ ಬಿಟ್ಟು ತಿರುಗುವ ತೀರ್ಥಯಾತ್ರೆಯ ಮಾಡುವುದಕಧಿಕಾ ಸ್ತೋತ್ರದಿಂದ ಶ್ರೀ ಕಳತ್ರನ ಕರುಣೈಕ ಪಾತ್ರರ ಮಾಳ್ಪ ವಿಚಿತ್ರ ಸನ್ನಹವಾದ 5 ಹಲವು ಕರ್ಮದ ಶಾಸ್ತ್ರ ನೆಲೆಯರಿಯದೆ ತ- ತ್ಫಲವಾಗಬೇಕೆಂಬ ಛಲವಿಡೀವ ಕಲಿಯೊಳಗುದಿಸಿದ ಜನರಿಗೆ ಗತಿಯಾಗಿ ಜಲಜನಾಭನ ನಾಮ ನೆಲೆಯಾಗಿ ನುಡಿವಂಥ 6 ನಾಮಕೀರ್ತನೆಗೈಯ್ಯೆ ನಲಿವುತ ಬಹ ನಮ್ಮ ಶ್ರೀಮಹೀಯರಸ ವೆಂಕಟರಾಜನು ಕಾಮಿತಾರ್ಥವ ನೀಡಲ್ಲಧಿಕ ಸಾಧನವಿದು ಪಾಮರತೆಯ ಬಿಟ್ಟು ಪರಮಾರ್ಥದ ಗುಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ
ಬಾಯೊಳು ಉಂಗುಷ್ಟವನಿಟ್ಟಮಾಯವ ನÉೂೀಡಮ್ಮಾ ಪ ಶ್ರೀಯರಸನೀಲಮೇಘಛ್ಛಾಯ ಕೃಷ್ಣರಾಯತನ್ನ ಅ.ಪ. ನಿರಂಜನ ತಾ ಲೀಲೆಯಿಂದ1 ಪುಟಿತ ಹಾಟಕ ಮಣಿಘಟಿತ ಕಂಕಣಾಂಗದಕಟಿಸೂತ್ರಗಳನಿಟ್ಟು ನಟನಂದದಿವಟಪತ್ರ ಶಾಯಿ ಓಷ್ಠಪುಟದಿ ಪಾದವನಿಕ್ಕಿಕಟಬಾಯೊಳಮೃತವ ಸ್ಫುಟವಾಗಿ ಸುರಿಸುತ 2 ನಿತ್ಯ ಮಂಗಳ ದೇವಿಯರಗಂಗೆಯ ಪಡೆದ ಶಿವನಂಗ ಶುದ್ಧಿಗೈಸಿದಾತನ3 ಗೋಪಿ ಗೃಹಕರ್ಮರತಳಾಗಿರಲು ಒಮ್ಮನದಿಂದಅಮರಗಣಾರಾಧೀತ ಕ್ಷಮೆಯನಳೆದ ಪಾದಸುಮ್ಮನೆ ಕರದೊಳೆತ್ತಿ ಕಮ್ಮಗಿಹದೆಂದು ತನ್ನ 4 ಕರಪಲ್ಲವಾಮೃತ ಲೋಕವಂದ್ಯರೂಪ ಫಣಿಶೇ-ಖರಾದ್ರಿವಾಸ ಭಕ್ತನಾಕ ಭೂರುಹ ನೀಕರೆಸಿ ದುರಿತವ ಸೋಕದಂತೆ ನಮ್ಮನೀಗಸಾಕುವ ಪರಮ ಕರುಣಾಕರ ಶ್ರೀಕೃಷ್ಣ 5
--------------
ವ್ಯಾಸರಾಯರು
ಮಾಯಾ ನೋಡಮ್ಮ ಶ್ರೀಯರಸ ನೀಲಮೇಘ ಛಾಯ ಕೃಷ್ಣರಾಯ ತನ್ನ ಪ. ಕಾಶೀಶ ಮೃತ್ಯುಂಜಯಾಯಿ ವಿಷವಲ ಭಂಜನಾದಿಗಳೀತನಿಗಂಜಿ ಕೊಂಬುವರು ಮಂಜುಳಾತ್ಮ ನಿಜಕರಕಂಜದಿಂದ ಪಾದವೆತ್ತಿ ನಿರಂಜನ ತಾ ಲೀಲೆಯಿಂದ 1 ಪುಟಿತಹಾಟಕ ಮಣಿಘಟಿತ ಕಂಕಣಾಂಗದ ಕಟಿಸೂತ್ರಗಳನಿಟ್ಟು ನಟನಂದದೀ ವಟಪತ್ರಶಾಯಿವೋಷ್ಠಪುಟದಿ ಪಾದವನಿಕ್ಕಿ ಕಟಬಾಯೊಳಮೃತವಾ ಸ್ಫುಟವಾಗಿ ಸುರಿಸುತ 2 ಲಿಂಗದೇಹಭಂಗತಾಗಿನಂಗವನ್ನು ದೂರಗೈಸಿ ತುಂಗಮತಿವಂತ ಋಷ್ಯ ಶೃಂಗಾದಿಗಳು ನಿತ್ಯ ಮಂಗಳ ದೇವಿಯರ ಗಂಗೆಯ ಪಡೆದು ಶಿವಂಗ ಶುದ್ಧಿಗೈಸಿ 3 ಗೋಪಿ ಗೃಹ ಕರ್ಮರತಳಾಗಿರಲು ಒಮ್ಮನದಿಂದ ಅಮ್ಮರ ಗಣಾರಾಧಿತ ಕ್ಷಮೆಯನಳದ ಪಾದ ಸುಮ್ಮಗೆ ಕರದೊಳೆತ್ತಿ ಖಮ್ಮಗಿಹದೆಂದು ತನ್ನ 4 ಕರಪಲ್ಲವಾಧೃತ ಲೋಕವಂದ್ಯರೂಪ ಫಣಿ- ಶೇಖರಾದ್ರಿವಾಸ ಭಕ್ತನಾಕ ಭೂರುಹ ನೀಕರಿಸಿ ದುರಿತವ ಸೋಕದಂತೆ ನಮ್ಮನೀಗ ಸಾಕುವ ಪರಮ ಕರುಣಾಕರ ಶ್ರೀ ಕೃಷ್ಣ ತನ್ನ 5
--------------
ತುಪಾಕಿ ವೆಂಕಟರಮಣಾಚಾರ್ಯ