ಒಟ್ಟು 22 ಕಡೆಗಳಲ್ಲಿ , 5 ದಾಸರು , 22 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರಾಣವಿಷಯ ಶ್ರೀವೆಂಕಟೇಶ ಕಲ್ಯಾಣ ಇನ್ನೆಂದಿಗೋ ನಿನ್ನದರುಶನ ಶೇಷಾದ್ರಿವಾಸ ಪ ಪನ್ನಂಗಶಯನ ಪ್ರಸನ್ನರ ಪಾಲಿಪ ಘನ್ನಮಹಿಮ ನೀನೆನ್ನನುದ್ಧರಿಸೂಅ.ಪ ವರ ಸುರಮುನಿಗಳ ವೃಂದ ನೆರಹಿದ ಯಾಗಗಳಿಂದ ಪರಮಾದರದಿಂದಿರುವ ಸಮಯದಿ ನಾರದ ಮುನಿ ಬಂದೊದಗಿ ನಿಂದ ಇ- ಸುರಮುನಿವಚನದಿ ಭೃಗುಮುನಿವರ ಪೋಗಿ ಹರುಷದಿ ಶ್ರೀಹರಿ ಉರಗಶಯನನಾಗಿ ಹರುಷದಿ ಮುನಿಪಾದ ಕರದಲಿ ಒತ್ತುತ ಕರುಣದಿ ಸಲಹಿದೆ ದುರಿತವ ಹರಿಸಿ ಹರಿಭಕುತರ ಅಘಹರಿಸಿಕಾಯುವಂಥ ಕರುಣಿಗಳುಂಟೇ ಶ್ರೀಹರಿ ಸರ್ವೋತÀ್ತುಮಾ 1 ಸ್ವಾಮಿ ನೀನಿಜಧಾಮವನೇ ತೊರೆದೂ ಸ್ವಾಮಿಕಾಸಾರ ತೀರದಿ ನಿಂದೂ ಧಾಮವನರಸಿ ವಲ್ಮೀಕವನೆ ನೋಡಿ ಸನ್ಮುದವನ್ನೇ ತೋರುತ ಕಮಲ ಭವಶಿವ ತುರುಕರುರೂಪದಿ ಕಾಮಧೇನು ಪಾಲ್ಗರೆಯುತಾ ಈ ಮಹಿಮೆಯನ್ನೇ ಬೀರುತಾ ಭೂಮಿಗೊಡೆಯ ಚೋಳನೃಪಸೇವಕನು ಧೇನುವನ್ನು ತಾ ಹೊಡೆಯಲು ಕಾಮನಯ್ಯ ನೀನೇಳಲು ಭೀಮವಿಕ್ರಮವ ತೋರಲು ಕ್ಷಮಿಸಿದೆ ನೃಪನ ದಯಾಳು ಅಮಿತ ಸುಗುಣಪೂರ್ಣ ಅಜರಾಮರಣ ನೀ ಮಸ್ತಕಸ್ಪೋಟನ ವ್ಯಾಜವ ತೋರಿ ಪ್ರೇಮದಿ ಗುರುಪೇಳ್ದೌಷಧಕಾಗಿ ನೀ ಮೋಹವ ತೋರಿದೆ ವಿಡಂಬನಮೂರ್ತೇ 2 ಮಾಯಾರಮಣನೆ ಜೀಯಾ ಕಾಯುವೆ ಜೀವನಿಕಾಯಾ ತೋಯಜಾಂಬಕ ಹಯವನೇರಿ ಭರದಿ ತಿರುಗಿತಿರುಗೀ ವನವನೆÀಲ್ಲ ಮೃಗನೆವನದಿ ನಿಂದು ನೋಡಿದೇ ಪ್ರಿಯಸಖಿಯರ ಕೂಡಿ ಪದುಮಾವತಿಯು ತಾ ಹಯದಿ ಕುಳಿತ ನಿನ್ನ ನೋಡಲು ಪ್ರಿಯಳಿವಳೆನಗೆಂದು ಯೋಚಿಸಿ ಕಾಯಜಪಿತ ನಿನ್ನ ಹಯವನೆ ಕಳಕೊಂಡು ಮಾಯದಿಂದ ನೀ ಮಲಗಿದೆ ತೋಯಜಮುಖಿಯಳ ಬೇಡಿದೇ ಆ ಯುವತಿಯನ್ನೇ ಸ್ಮರಿಸುತಾ ಶ್ರೀಯರಸನೆ ನೀನು ಸ್ತ್ರೀರೂಪದಿ ಹೋಗಿ ಶ್ರೀಯಾಗಿಹಳಿನ್ನು ಶ್ರೀಹರಿಗೀಯಲು ಶ್ರೇಯವೆಂದು ಆಕಾಶನನೊಪ್ಪಿಸಿ ತಾಯಿಯಭೀಷ್ಟವನಿತ್ತೆ ಸ್ವರಮಣಾ 3 ಸಕಲಲೋಕೈಕನಾಥಾ ಭಕುತರಭೀಷ್ಟಪ್ರದಾತಾ ಭಕುತನಾದ ಆಕಾಶನೃಪತಿಯು ಬಕುಳೆ ಮಾ- ತ ಕೇಳಿ ಅಭಯವಿತ್ತು ಮನ್ನಿಸಿ ಪದುಮಾವತಿಯ ಪರಿಣಯ ಶುಕರ ಸನ್ಮುಖಹಲ್ಲಿ ಅಕಳಂಕ ಮಹಿಮ- ಗೆ ಕೊಟ್ಟನು ತಾ ಲಗ್ನಪತ್ರಿಕಾ ಸ್ವೀಕರಿಸುವದೀ ಕನ್ನಿಕಾ ಈ ಕಾರ್ಯಕೆ ನೀವೆ ಪ್ರೇ ಸಕಲಸಾಧನವಿಲ್ಲಿನ್ನು ಲೋಕೇಶಗರುಹಬೇಕಿನ್ನು ಲೋಕಪತಿಯೆ ಸುರಕೋಟಿಗಳಿಂದಲಿ ಈ ಕುವಲಯದಿ ನಿನ್ನಯ ಪರಿಣಯವೆಸಗಲು ಭಕುತಜನಪ್ರಿಯ ಶ್ರೀವತ್ಸಾಂಕಿತ 4 ಖಗವರವಾಹನ ದೇವಾ ಅಗಣಿತಮಹಿಮ ಗೋಮಯನೆನಿಸಿ ಸುರರ ಪೊರೆಯುತಾ ಅಗಣಿತ ಸುರಗಣ ಕಿನ್ನರರು ಸಾಧ್ಯರು ತರು ಫಲ ಖಗಮೃಗ ರೂಪವ ಬಗೆಬಗೆ ಇಹೆ ಪೊಗಳಲಳವೇ ಗಿರಿವರವು ಹಗಲು ಇರುಳು ಭಗವಂತನೆ ನಿನ್ನನ್ನು ಪೊಗಳುತಿಹರು ನಿನ್ನ ಭಕುತರು ಮೊಗದಲಿ ನಿನ್ನ ದಾಸರು ಗೋವಿಂದ ಮುಕುಂದ ಎನ್ನುತಾ ಯುಗ ಯುಗದೊಳು ನೀನಗದೊಳು ನೆಲಸಿಹೆ ಜಗದ ದೇವ ರಾಜಿಸುವವನಾಗಿಹೆ ಮಿಗಿಲೆನಿಸಿದ ಶ್ರೀ ವೆಂಕಟೇಶಾ ಸದ್ಗುಣ ಸಚ್ಚಿದಾನಂದ ಮುಕುಂದ ಗೋವಿಂದಾ 5
--------------
ಉರಗಾದ್ರಿವಾಸವಿಠಲದಾಸರು
(ಆ) ದೇವ, ಗುರುಸ್ತುತಿ ಅವತಾರತ್ರಯ ಪ್ರಾಣಪತಿ ಕಾಯೊ ನೀ ಜಾಣ ಜಗತ್ರಾಣಾ ಕಾಣದೆ ನಿನ್ನ ಮಹಿಮೆ ಧ್ಯಾನಿಸದೆ ಮರುಳಾದೆ ಪ ಸೂತ್ರ ನಾಮಕ ನೀನು ಛತ್ರಪುರದೊಳು ನೆಲೆಶಿ ಶತ್ರು ಪುಂಜವ ನಿಮಿಷ ಮಾತ್ರದಲಿ ತುಳಿದಿ ಗಾತ್ರದಲಿ ನೀ ಲಾಲಿಸು ಪಾತ್ರನೆಂದೆನಿಸೆನ್ನ ಕೃತ್ರಿಮದ್ವಿಜ ಸ್ತೋತ್ರ ಪಾತ್ರ ಕೃಷ್ಣನ ದಾಸ 1 ಕಾಮನೃಷನು ಹಿಂದೆ ರಾಮನಾಜ್ಞವ ತರಿಸಿ ಆ ಮಹಾಸುರರೇ ಮಧಾಮವನು ಸಾರೆ ಈ ಮಹಿಯೊಳಗೆ ನಿಸ್ಸೀಮನೊಬ್ಬನೆ ಯೆಂದು ಭೂಮಿಯಲಿ ನಿನ್ನ ಗುಣ ಸ್ತೋಮವನು ತೋರಿಸಿದೆ 2 ಅವತಾರ ತ್ರಯಗಳಲಿ ಸ್ವವಶವ್ಯಾಪಿ ಲಕ್ಷ್ಮೀ - ಧವನ ಮನವರಿತು ನೀ ಅವತರಿಸಿದೆ ಯುವತಿ ವೇಷದಿ ಗೌರೀಧವನ ಮೋಹಸಿದಂಥ ಶ್ರೀವತ್ಸಾಂಕಿತನಾದ ಅವನಿಗೊಡೆಯನ ದಾಸ 3
--------------
ಸಿರಿವತ್ಸಾಂಕಿತರು
(ಮೂಲ್ಕಿಯ ನರಸಿಂಹದೇವರು) ನಂಬಿದೆ ನಿನ್ನ ಇಂಬಿದೆಯೆಂದು ಸನ್ನುತ ಪ. ಕಂಬದಿಂದ ಕಾಣಿಸಿದ ಗಂಭೀರಗುಣಾಂಭೋನಿಧಿ ಡಿಂಬೋದ್ಧರ ನರಮೃಗವರ ಅ.ಪ. ಭಾನುಕೋಟಿ ಭಾಸ್ಕರ ಪವ- ಮಾನನಯ್ಯ ಪ್ರಾಣದ ಸುತ್ರಾಣ ಸುಗುಣ ದೀನಜನಸಂತಾನ ಮಾನದ ಆನಂದ ಗುಣಾನಂತ ವಿತಾನಾಬ್ಧಿಶಯ ಹರಿ 1 ಎಷ್ಟೊ ಪಾಪಿ ಕನಿಷ್ಠನೆಂದು ಬಿಟ್ಟರೇನು ಬಿರುದು ಹಿರಿದು ಬರುವುದು ಸೃಷ್ಟಿಕರ್ತರಿಷ್ಟಹರ್ತ ಮುಷ್ಟಿಕಭಿದ ತುಷ್ಟಿಪ್ರದ ವಿಠಲ ಕೈಗೊಟ್ಟುಳುಹು 2 ಚಿತ್ತಸಾಕ್ಷಿ ಚಿನುಮಯಾತ್ಮ ಸತ್ಯರೂಪ ಸದಯೋದಯ ಸದುಪಾಶ್ರಯ ದೈತ್ಯಭಂಜನ ಸತ್ಯರಂಜನ ಕ್ಷೇತ್ರಜ್ಞ ಪವಿತ್ರಕಥಾಸ್ತೋತ್ರಾರ್ಹ ಶ್ರೀವತ್ಸಾಂಕಿತ 3 ಮೂಲಿಕಾಪುರ ಮೌಳಿರುತುನ ನೀಲೇಂದೀವರಶ್ಯಾಮಲ ಕಲಿಮಲಭೀಷಣ ಕಾಲಕಾಲ ವಿಶಾಲ ಭುಜಬಲ ಮೂಲೇಶಮುನೀಂದ್ರಾರ್ಚಿತ ಶ್ರೀಲಕ್ಷುಮಿನಾರಾಯಣ 4
--------------
ತುಪಾಕಿ ವೆಂಕಟರಮಣಾಚಾರ್ಯ
ಇಲ್ಲಿಲ್ಲ ಸ್ವಾಮಿ ಅಲ್ಲಿಲ್ಲ ಎಲ್ಲವೂ ಸುಳ್ಳೆಂಬ ಖುಲ್ಲ ಜನರುಗಳಿಗಿಲ್ಲಿಲ್ಲ ಪ ಸತಿಸುತರುಗಳೆಲ್ಲ ಅತಿಹಿತರೆನ್ನುತ ರತಿಪತಿಪಿತನ ಮರೆತು ಇಪ್ಪ ಜನರಿಗೆ 1 ಮಿಗಿಲಾದ ಮಹಿಮೆಯ ಜಗದೊಳು ತೋರುವ ಅಗಣಿತ ಮಹಿಮಗೆ ಸೊಗಸದ ಜನರಿಗೆ 2 ಶರಧಿಶಯನನಾದ ಶ್ರೀವತ್ಸಾಂಕಿತನನ್ನು ಮರೆತು ಮರಳುಗೊಂಡು ಕರಗಿ ಕುಂದುವ ಜನರಿಗಿಲ್ಲಿಲ್ಲ 3
--------------
ಸಿರಿವತ್ಸಾಂಕಿತರು
ಉಡಪಿಯ ಕೃಷ್ಣ ಯನ್ನ ನುಡಿ ಲಾಲಿಸೋ ಪ ಸಡಗರದಲಿ ನೀನು ಮಡದಿವೃಂದ ಬಿಟ್ಟು ಕಡಲಪಯಣದಿಂದಲಿ ವಂದು ಬಿಡದೆ ಭಕ್ತರಿಗೆಲ್ಲ ವಡೆಯನಾಗಿ ನೀನು ಷಡುರಸ ಅನ್ನವ ಕೊಡುತನಿಂತಿಹೆ 1 ಪ್ರಾಣಪತಿಯು ಅತಿ ಜಾಣನೆಂದೆನಿಶಿÉ ನೀ ಕಾಣಿಸುವಿ ನರಪ್ರಾಣಿಗೆ ಮಾಣವಕನೆ ನೀ ಜಾಣನೆಂದೆನುತಲಿ ಧ್ಯಾನಮಾಡಿ ಮೋದಿಸುವರು 2 ಧರೆಯೊಳು ರಜತಪೀಠ ಪುರದೊಳೂ ನೆಲೆಸಿಪ್ಪ ಸುರವೃಂದನುತ ಬೇಗ ಸಲಹೆನ್ನ ವರಮಧ್ವ ಮುನಿನುತ ಸರಸಿಜಭವ ವಂದ್ಯ ಶ್ರೀವತ್ಸಾಂಕಿತ ವೆಂಕಟಪತಿಯೇ 3
--------------
ಸಿರಿವತ್ಸಾಂಕಿತರು
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕರುಣದಿ ಬಂದು ನಿನ್ನ ಚರಣ ಕಮಲವೆನ್ನ ಶಿರದ ಮೇಲಿಟ್ಟು ನೀ ಪೊರಿಯೊ ಕೃಪಾರಸ ಸುರಿಯೋ ಗರುಡಧ್ವಜ ನೀನು ಸ್ಮರಮಣ ನಿನ್ನ ಭಕುತರ ಸುರಧೇನೆಂದು ಕರೆವರು ನಿನ್ನನು ಪ ಸರಸಿಯೊಳ್ಕರಿರಾಜ ಭರದಿಂದ ತನ್ನವುದ್ಧರಿಸೆಂದು ಮೊರೆಯಿಡೆ ಪೊರೆದೆಯಲ್ಲೊ ಶಿರಿಯೊಳುನುಡಿಯದೋ ಶರಣಾಗತರನ್ನು ಪೊರೆವೆನೆಂಬ ನಿಜ ಬಿರಿದನು ಮೆರಿಸಿದಿ1 ಆಗಮವಂದಿತ ನಾಗಭೂಷಣ ತಾತ ಮೇಘವಾಹನ ಸುತನ ಬ್ಯಾಗ ರಕ್ಷಿಸಿದಿ ಜಾಗುಮಾಡದೆ ಎನ್ನ- ದಾಗಲು ರಕ್ಷಿಸೆಂದು ಬಾಗಿ ಬೇಡುವೆನು 2 ಕಾವನು ನೀನಲ್ಲದೆ ಯಾವ ದೇವರನು ನಾ ಆವಲ್ಯು ಕಾಣೆನು ಭಾವಜಜನಕನೆ ಶ್ರೀವಾಸುದೇವನ ಗೋವೃಂದ ರಕ್ಷಕನೆ ಪತಿ ಶ್ರೀವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಕಾಯೋ ಬಾರೋ ಹರಿ ಈಯ್ಯೋ ವರ ಥೋರೀ ಜಾರಚೋರಖರ ಅರಿನಾಶಕಾರಿ ಪ ವಾಯುದೇವಪಿತ ತೋಯಜಾಕ್ಷಿ ಸೀತಾ ಪ್ರಿಯ ನೀನು ತ್ರಾತ ರಾಯ ಜಗನ್ನಾಥ 1 ಕಾಮನಯ್ಯ ನೀನು ಮಾಮನೋಹರನು ವಾಮನಾದಿ ನೀನು ರಾಮನಾಮಕನು 2 ಕರಿರಾಜನನ್ನು ತ್ವರಿತಾದಿ ಕಾಯ್ದಿ ಶ್ರೀವತ್ಸಾಂಕಿತ ಹರಿ ವೆಂಕಟೇಶ3
--------------
ಸಿರಿವತ್ಸಾಂಕಿತರು
ಗೋಪಾಲಕೃಷ್ಣರಾಯ ತಾಪತ್ರಯಗಳೆಲ್ಲ ನೀ ಪರಿಹರಿಸು ಜೀಯ್ಯಾ ಪ ವಿದ್ಯಾಶ್ರೀ ಸಿಂಧುತೀರ್ಥ ಶುದ್ಧ ಪದ್ಧತಿಯಿಂದ ಶುದ್ಧ ಪೂರ್ವಕ ನಿನ್ನ ಭಜಿಪೆನು ಅನುದಿನ ಮುದ್ದುಮೋಹನ ನೀನು ತಿದ್ದಿ ಸರ್ವರ ಹೃದಯ ಬದ್ಧನಾಗಿರುತಿ ಪ್ರಸಿದ್ಧ ಮೂರುತಿ ವೇಣು 1 ಸುರಪನ ಗರ್ವವ ಹರಣವ ಮಾಡಿ ನೀ ವರವಿತ್ತೆ ಕಾಳಿಂಗ ಉರಗನಿಗೆ ಸುರರ ವೃಂದಗಳೆಲ್ಲ ಪೊರೆವುತ ಸರ್ವದಾ ವರ ಕಲ್ಪತರುವೆಂದು ಮೆರೆಯುವಿ ಧರೆಯೊಳು 2 ಗಿರಿಯನು ಪೊತ್ತು ನೀ ಪೊರೆದಿಹ ತುರುಗಳ ಮರೆಯೋದು ಯನ್ನನು ಸರಿಯೆನೊ ಹರಿಯೆ ಶರಣ ರಕ್ಷಕ ಬೇಗ ಕರುಣಾಳು ಕಾಯಯ್ಯ ಶ್ರೀವತ್ಸಾಂಕಿತನಾದ ವರಜಾರಚೋರ ವೇಣು 3
--------------
ಸಿರಿವತ್ಸಾಂಕಿತರು
ಜಯ ಜಯವೆಂಬೆ ನಾನು ಶ್ರೀವರ ನಿನಗೆ ಪ ಜಯವೆಂಬೆ ಶ್ರೀವರನೆ ಭಯ ದೋಷವರ್ಜಿತನೆ ಅಯನ ವತ್ಸರಗಳೆಂಬ ನಿಯಮವು ಇಲ್ಲದವನೆ ಅ.ಪ. ತಿರುಗಿಣಿ ಪಾಲಿಸುವಿ ಪಾಲಗಡಲಿನಲ್ಲಿ ಆಲದೆಲೆಯಮೇಲೆ ಕಾಲನು ನೀಡಿ ನೀ ಮಲಗಿರುವಿ 1 ಸೃಷ್ಟಿಕರ್ತನು ಸೃಷ್ಟಿಪಾಲಕ ನೀನು ಶಿಷ್ಟ ಜನರಭಿಪ್ರದ ನೀನು ಕಷ್ಟಲೇಶವಿಲ್ಲದೆ ಶಿಷ್ಟ ಜನರುಗಳರಿಷ್ಟವೆಲ್ಲವ ನೀ ಕಟ್ಟಿ ಕೆಡಹುವಿ 2 ದೇವ ಶ್ರೀವತ್ಸಾಂಕಿತನೆ3
--------------
ಸಿರಿವತ್ಸಾಂಕಿತರು
ದಯಮಾಡೋ ರಂಗ ಹೇ ಕೃಪಾಂಗ ಪ ದಯಮಾಡಿ ನೀಯೆನ್ನ ಭಯವ ಪರಿಹರಿಸು ಚಿ- ನ್ಮಯ ಮೂರುತಿ ಸುಖಮಯ ಮಂದರಧರ ಅ.ಪ. ಪತಿತ ಪಾವನ ನೀನು ಪತಿತಾಗ್ರೇಸರ ನಾನು ಜತನದಿ ಭಕುತಿಯ ಪಥವ ತೋರಿ ನೀನು 1 ಮುಕ್ತಿ ಫಲಪ್ರದ ಶಕ್ತಿಯು ನಿನ್ನ ವ್ಯತಿರಿಕ್ತವಲ್ಲವೆಂದು ಭಕ್ತಿಯುವರವಳು...[?] 2 ಕಾಮಧೇನು ನೀನು ಕಾಮನಯ್ಯನು ನೀನು ಕಾಮಿತಫಲದಾತ ಮಾಮನೋಹಕ ತ್ರಾತ 3 ಸೃಷ್ಟಿಪಾಲಕ ನಿನ್ನ ಯಷ್ಟೆಂತವರ್ಣಿಪೆ ಅಷ್ಟು ಕರ್ತೃತ್ವಕ್ಕೆ ಶಿಷ್ಟಮೂರುತಿ ನೀನೆ 4 ಭಾರಿಭಾರಿಗೆ ನಿನ್ನ ಆರಾಧಿಸುವರ ಚಾರುಚರಣವನು ತೋರೊ ಮಾರಜನಕ 5 ಸಕಲಕ್ಕು ನೀ ಮುಖ್ಯ ಶಕಟಭಂಜನ ಕೇಳು ಪ್ರಕಟನಾಗಿಯೆನಗೆ ಶಕ್ತಿಯ ನೀಡೋ6 ಭೂವಲಯದೊಳು ನಾ ಆವಲ್ಯಪೋಗಲು ಕಾವಲು ನೀನೇ ಶ್ರೀವತ್ಸಾಂಕಿತನೇ 7
--------------
ಸಿರಿವತ್ಸಾಂಕಿತರು
ಧರೆಯೊಳು ನಾ ಬಂದು ಇರುಳು ಹಗಲು ನಿನ್ನ ಸ್ಮರಣೆಯ ಮಾಡದೆ ಪರರ ಬಾಗಿಲ ಕಾಯ್ದೆ ಮುರಲೀಧರ ಶ್ರೀಕೃಷ್ಣ ಪೊರಿಯೊ ತಪ್ಪನು ಕ್ಷಮಿಸಿ ಗೊಲ್ಲರ ಸಖದವನೇ ಶ್ರೀವತ್ಸಾಂಕಿತನೇ ನಾರದನಂದನ ನೀನು ಗಾರುಮಾಡಿಯೆನ್ನ ದೂರಗ್ರಹಿಸಲು ಈಗ ಆರು ಕಾಯರೋ ಜಾರ ಚೋರ ಕೃಷ್ಣ ಮಾರಜನಕ ನೀನು ಪಾರಗಾಣಿಸು ದೇವ ಶಿರಿವತ್ಸಾಂಕಿತನೇ
--------------
ಸಿರಿವತ್ಸಾಂಕಿತರು
ನೋಡಿರಯ್ಯ ಶ್ರೀರಾಮನ ಮೂರ್ತಿಯ ಪಾಡಿರೊ ಮಹಿಮೆಯನು ಪ ಅಗಣಿತ ಮಹಿಮನು ತ್ರಿಗುಣ ವರ್ಜಿತನು ಸುಗುಣೇಂದ್ರತೀರ್ಥರಿಂದ ಬಗೆಬಗೆ ಪೂಜೆಗೊಂಬ 1 ಸಂಜೀವವನು ತಂದ ಅಂಜನಸುತನಯ್ಯ ನಂಜನಗೂಡೊಳಿಪ್ಪ ಕಂಜಾಕ್ಷಕರುಣಿಯ 2 ವಾರಿಜ ಭವಪಿತ ಮಾರುತ ಗತಿಪ್ರಿಯ ವಾರಿಧಿಬಂಧಕ ಶ್ರೀರಮಾಧವನನ್ನು ಮಂಗಳ ಪುರದೊಳು ಮಂಗಳವಾರದಿ ಮಂಗಳದಿ ಮೆರೆದನಂಗನಪಿತನನ್ನು 3 ವರ ರಾಘವೇಂದ್ರರ ಕರುಣಾಗ್ರೇಸರ ಶ್ರೀವತ್ಸಾಂಕಿತನಾದ ಅರವಿದೂರನನ್ನು 4
--------------
ಸಿರಿವತ್ಸಾಂಕಿತರು
ಮಂದರಧರ ಗೋವಿಂದ ಜಯ ನಂದನ ಕಂದ ಬಾಲಕುಲದಾಸಾನಂದ ಪ ಬೃಂದಾವನ ಗೋಪೀಜನ ವೃಂದ ಸುಂದರ ಮುರಳೀ ಗೀತಾನಂದ ಅ.ಪ ಶ್ರೀವತ್ಸಾಂಕಿತ ಪಾವನಚರಣ ದೇವ ದೇವಾನತ ದೇವಕಿತರುಣ ಭಾವ ಸಂಭವಪಿತ ರಾಧಾರಮಣ ಭಾವುಕ ಸೇವಿತ ಕರುಣಾಭರಣ1 ಮಂಗಳನಾಮಾ ಯದುಕುಲಸೋಮಾ ಸಂಗರಭೀಮ ಜಗದಭಿರಾಮ ಭೃಂಗಕುಂತಳ ಮಾಲಿಂಗನಿಸ್ಸೀಮ ರಂಗರಥಾಂಗ ಮಾಂಗಿರಿವರಧಾಮ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್