ಒಟ್ಟು 20 ಕಡೆಗಳಲ್ಲಿ , 6 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೃತಿನಾಥ ಸ್ಮøತಿಯಿತ್ತು ಸತತ ಪೊರೆಯೋಗತಿ ಗೋತ್ರ ನೀನೆಂದು | ಸತತ ತುತಿಸುವೆನೋ ಪ ನಿಚ್ಚ ಸೇವೆಯ ಕೊಳ್ಳೋ 1 ಪತಿ ಸಖನೇ |ನ್ಯೂನಾತಿರೇಕಗಳ | ನೀನಾಗಿ ಮನ್ನಿಸುತಮಾನನಿಧಿ ಗುಣಪೂರ್ಣ | ನೀನೆನ್ನ ಪೊರೆಯೋ 2 ಭಾವದಲಿ ನೀನಿರಲು | ಅವ ಭಯವಿಲ್ಲೆನಗೆಶ್ರೀವರನೆ ಸರ್ವೇಶ | ಸರ್ವಜ್ಞ ಮೂರ್ತೇ |ಕಾವ ಕರುಣಿಯೆ ಗುರು | ಗೋವಿಂದ ವಿಠಲ ಬಾಗೋವತ್ಸ ಧ್ವನಿ ಕೇಳಿ | ಧಾವಿಸುವ ಪರಿಯಂತೆ 3
--------------
ಗುರುಗೋವಿಂದವಿಠಲರು
ಆನಂದವಾಹನ ವಿಠಲ ನೀನಿವಳ ಕಾಯಬೇಕೋ |ಜ್ಞಾನಪೂರ್ಣನೆ ನಿನ್ನ ಸುಜ್ಞಾನ ಪಾಲಿಸುತ ಹರಿಯೆ ಪ ನಿಗಮವೇದ್ಯನೆ ದೇವ ಜಗದಂತರಾತ್ಮನೆಬಗೆಬಗೆಯ ಲೀಲೆಗಳ ನಗುನಗುತ ತೋರೀ ಬಗೆಹರಿಸು ಭವರೊಗ ಭಿನ್ನೈಪೆ ನಾನಿದನನಗಚಾಪ ಪರಿಪಾಲ ಖಗವಹನೆ ದೇವಾ1 ಪಂಚರೂಪಾತ್ಮಕನೆ ಪಂಚ ಬಾಣನ ಪಿತನೆಪಂಚ ಭೇದ ಜ್ಞಾನ ಸಂಚಿಂತನೆಯನಿತ್ತು |ವಾಂಚಿತಾರ್ಥದ ಹರಿಯೆ ವೈರಾಗ್ಯ ಸದ್ಭಕುತಿವಾಂಚಿಪಳಿಗೀಯೊ | ನಿಷ್ಕಿಂಚನರ ಪ್ರೀಯಾ 2 ಪತಿಸುತರು ಹಿತದಲ್ಲಿ ಮತಿ ಮತಾಂವರರಲ್ಲಿಕೃತಿಪತಿಯೆ ನಿನವ್ಯಾಪ್ತಿ ಅತಿಶಯದಿ ತೋರುತಲಿಹಿತದಿಂದ ಸೇವಿಸುವ ಮತಿಯಿತ್ತು ನೀನಿವಳ ಗತಿಗೆ ಸಾಧನನೆನಿಸು ಪ್ರತಿರಹಿತ ದೇವಾ 3 ನಾಮ ಮಹಿಮೆಯ ತಿಳಿಸಿ ಪ್ರೇಮದಿಂದಲಿ ನಿನ್ನನಾಮದುಚ್ಛಾರಣೆಯ ನೇಮವನೆ ಪಾಲಿಸುತ |ಕಾಮಿತವ ಸಲಿಸುವುದು ಭೂಮ ಗುಣ ನಿಸ್ಸೀಮರಾಮಚಂದ್ರನೆ ಸರ್ವ ಸ್ವಾಮಿ ಎನಿಸುವನೇ 4 ಶ್ರೀವರನೆ ಭವವನಧಿ ನಾವೆ ಎಂದೆನಿಸಿಹನೆಕಾವುದಿವಳನು ಸತತ ಸರ್ವಾಂತರಾತ್ಮ |ನೀವೊಲಿಯದಿನ್ನಾರು ಕಾವವರ ನಾಕಾಣೆದೇವವರ ವಂದ್ಯ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಇದನೆ ಪಾಲಿಸು ಪಾಲಿಸೆನಗೆ ದೇವಾ ಪ ಸನ್ನುತ ಮಹಿಮ ಪದೋಪದಗೆ ಬಿನ್ನೈಪೆ ಅ ಶ್ರೀವಿರಿಂಚಾದ್ಯಖಿಳ ಚೇತನಾಚೇತನವು ಶ್ರೀವರನೆ ನಿನಗಧಿಷ್ಠಾನವೆಂದೂ ಸ್ಥಾವರಗಳೊಳಗೆ ನೈಜನುಯೆನಿಸಿ ಪರಿಣಾಮ ನೀವೆ ವೃದ್ಧಿ ಹ್ರಾಸ ಸರ್ವಕಾಲದ ವೆಂಬೋ 1 ಪ್ರಕೃತಿ ಗುಣಗಳ ಪ್ರವೇಶಿಸಿ ಬಾಧ್ಯ ಬಾಧಕನು ಅಕೃತಜ್ಞ ನೀನೆನಿಸಿ ಭಕತಾ ಜನರಾ ಕರ್ಮ ಸಕೃತ ನಿನ್ನನು ಸ್ಮರಿಸಿ ಹಿಗ್ಗುವರ ಸಂಗ ಸುಖ 2 ಕರ್ತು ಕಾರ್ಯರ್ತು ಪ್ರೇರಕ ಪ್ರೇರ್ಯ ಸುಖ ಸಾಕ್ಷಿ ಕ್ಷೇತ್ರ ಧನಧಾನ್ಯಹಿಕ ಪಾರತ್ರಿಕಾ ಮಿತ್ರ ತಮ ಶ್ರೀ ಜನಗನ್ನಾಥ ವಿಠಲನೆ ಸ ರ್ವತ್ರ ವ್ಯಾಪಕ ಮಮಸ್ವಾಮಿಯೆಂಬೋ ಜ್ಞಾನ3
--------------
ಜಗನ್ನಾಥದಾಸರು
ಉಪೇಂದ್ರ ಹರಿ ವಿಠಲ ಕೃಪೆಯಲಿಂದಲಿ ಇವನಕಾಪಾಡ ಬೇಕೆಂದು ಪ್ರಾರ್ಥಿಸುವೆ ಹರಿಯೇ ಅ.ಪ. ಹರಿಗುರೂ ಭಕ್ತಿಯುತ | ತರಳ ನಿರುವನು ಹರಿಯೆಸುರರಾಜ ಭೋಗಗಳ | ಕರುಣಿಸುತ ಇವಗೇ |ಒರೆದು ತತ್ವ ಜ್ಞಾನ | ಮರಳಿ ಭಕ್ತ್ಯಭಿವೃದ್ಧಿಕರುಣಿಸುತ ಕಾಪಾಡೊ | ಕರಿವರದ ಹರಿಯೆ 1 ವಿಯದಧಿಪ ಸುತನಿಗೆ | ಭಯವ ಪರಿಹರಗೈದುದಯದಿಂದ ಪೊರೆದಂತೆ | ಕಾಯಬೇಕೋಹಯವೇರಿ ಇಂದ್ರಿಯದ | ಜಯಸೂಚಿ ಸ್ವಪ್ನದಲಿಭಯಕೃತೂ ಭಯನಾಶ | ಅಭಯನೀಯೋ2 ಪಿತೃ ಮಾತೃ ಸೇವೆಯಲಿ | ರತನನ್ನ ಮಾಡುತಲಿಹಿತ ಆಹಿತ ವೆರಡನ್ನು | ಸಮತೆಯಲಿ ಉಂಬಾಮತಿಯನ್ನೆ ಕರುಣಿಸುತ | ಕೃತಕಾರ್ಯನೆಂದೆನಿಸಿಸತತ ತವ ಸಂಸ್ಕøತಿಯ | ಇತ್ತು ಪೊರೆ ಇವನಾ 3 ಕಾಕು ಪಾದ | ಪಂಕಜವ ತೋರೋ 4 ಪಾವಮಾನಿಯ ಪ್ರೀಯ | ಶ್ರೀವರನೆ ಈಶಿಯವಕೋವಿದನ ಗೈಯ್ಯತ್ತ | ಭುವಿಯೊಳಗೆ ಮೆರೆಸೋಗೋವಿದಾಂಪತಿಯೆ ಗುರು | ಗೋವಿಂದ ವಿಠ್ಠಲನೆನೀ ವೊಲಿಯದಿನ್ನಾರು | ಕಾವರನು ಕಾಣೇ 5
--------------
ಗುರುಗೋವಿಂದವಿಠಲರು
ಚಂದ್ರಭಾಗ ಹರಿ ವಿಠಲ | ಸಲಹ ಬೇಕಿವಳಾ ಪ ಇಂದೀವರಾಕ್ಷ ಹರಿ | ಮಂದರೋದ್ಧಾರೀ ಅ.ಪ. ಮೋದ ಬಡಿಸುವ ಭಾರಮೋದ ಮಯ ನಿನಗಲ್ಲ | ದಧಾರಿಸಿಹುದೋಆದಿ ಮೂರುತಿ ಹರಿಯೆ | ಸಾಧನ ಸಾಧ್ಯವಾಗಿಕಾದುಕೋ ಬಿಡದಿವಳ | ಮಾಧವನೆ ದೇವಾ 1 ತರತಮಾತ್ಮಕ ಜ್ಞಾನ | ಅರುಹುತಿವಳಿಗೆ ಭೇದಎರಡು ಮೂರರ ಅರಿವು | ನೆರೆ ಕೈಗೂಡಲೀಹರಿಯೆ ಸರ್ವೋತ್ತಮನು | ಸುರಪಾದಿ ಸುರರೆಲ್ಲಹರಿಯ ಕಿಂಕರರೆಂಬ | ವರಜ್ಞಾನ ವಿರಲಿ 2 ಆಗು ಹೋಗುಗಳಲ್ಲಿ | ವೇಗ ಸಮತೆಯು ಬರಲಿಜಾಗು ಮಾಡದೆ ದ್ವಂದ್ವ | ಸಹನೆ ಬರುತಿರಲೀನಾಗಾರಿ ವಾಹನನ | ನಾಮ ಸುಧೆ ಸರ್ವದಾಸಾಗಿ ಮನ ಸವಿವಂತೆ | ಹಗಲಿರುಳು ಇರಲೀ 3 ಕಾಲ | ಮೋದದಿಂ ಕಳೆವಂತೆನೀ ದಯದಿ ಪಾಲಿಸುತ | ಕಾದುಕೋ ಇವಳಾಬೋಧ ಮೂರುತಿಯಾಗಿ | ಹೇ ದಯಾಕರ ಕೃಷ್ಣಾಆದರದಿ ಸುಜ್ಞಾನ | ಭಕ್ತಿಯನ್ನೀಯೋ 4 ಭವ ಬಂಧ ಬಿಡಿಸುವುದುಶ್ರೀವರನೆ ಶ್ರೀಗುರೂ | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಜಯ ಜಯವೆಂಬೆ ನಾನು ಶ್ರೀವರ ನಿನಗೆ ಪ ಜಯವೆಂಬೆ ಶ್ರೀವರನೆ ಭಯ ದೋಷವರ್ಜಿತನೆ ಅಯನ ವತ್ಸರಗಳೆಂಬ ನಿಯಮವು ಇಲ್ಲದವನೆ ಅ.ಪ. ತಿರುಗಿಣಿ ಪಾಲಿಸುವಿ ಪಾಲಗಡಲಿನಲ್ಲಿ ಆಲದೆಲೆಯಮೇಲೆ ಕಾಲನು ನೀಡಿ ನೀ ಮಲಗಿರುವಿ 1 ಸೃಷ್ಟಿಕರ್ತನು ಸೃಷ್ಟಿಪಾಲಕ ನೀನು ಶಿಷ್ಟ ಜನರಭಿಪ್ರದ ನೀನು ಕಷ್ಟಲೇಶವಿಲ್ಲದೆ ಶಿಷ್ಟ ಜನರುಗಳರಿಷ್ಟವೆಲ್ಲವ ನೀ ಕಟ್ಟಿ ಕೆಡಹುವಿ 2 ದೇವ ಶ್ರೀವತ್ಸಾಂಕಿತನೆ3
--------------
ಸಿರಿವತ್ಸಾಂಕಿತರು
ನಮೋ ನಮೋ ನಾರಾಯಣನೇ ಓಂ ನಮೋ ಚನ್ನಕೇಶವನೆ ಪ ಅಚ್ಯುತ ಪಾದದಿ ಸೇರಿಸೊ ಅನಂತ ಅ.ಪ ನಮೋ ನಮೋ ವೆಂಕಟರಮಣನೆ ಸಂಕಟಹರಿಸೋ ಶ್ರೀವರನೆ 1 ನಮೋ ನಮೋ ವರದರಾಜನೆ ವರವ ನೀಡೋ ಪುರುಷೋತ್ತಮನೆ 2 ನಮೋ ನಮೋ ಶ್ರೀರಂಗನಾಥನೆ ಸುರಕ್ಷೆಯ ಕೊಡೊ ಭಕ್ತವತ್ಸಲನೆ 3 ನಮೋ ನಮೋ ಸಂಪತ್ಕುಮಾರನೆ ಸಂಪತ್ತನು ಹರಿಸೋ ಶ್ರೀಹರಿಯೆ 4 ನಮೋ ನಮೋ ಮುದಿಗೆರೆ ರಂಗನೆ ಮುದದಿ ಕಾಪಾಡೋ ಮಾಧವನೆ 5 ನಮೋ ನಮೋ ಯದುಗಿರಿ ಚಲುವನೆ ಸದಯದಿ ಸಲಹೋ ದಾಮೋದರನೆ 6 ನಮೋ ನಮೋ ಜಾಜಿಪುರೀಶನೆ ನೀ ಜೋಪಾನಮಾಡೆನ್ನ ಪರಮಪಾವನನೆ 7
--------------
ನಾರಾಯಣಶರ್ಮರು
ಪ್ರಭು ಪಾಂಡುರಂಗ ವಿಠಲ | ಅಭಯಪ್ರದಾತಾ ಪ ಇಭವರದ ನೀನಾಗಿ | ಪೊರೆಯ ಬೇಕಿವನಾ ಅ.ಪ. ಮರ್ಮಗಳ ನರಿಯದಲೆ | ಕರ್ಮೂನುಭವದೊಳಗೆಪೇರ್ಮೆಯಲಿ ಸಿಲ್ಕಿ ಬಲು | ನೊಂದಿಹನೊ ಬಹಳಾಧರ್ಮಕೃದ್ಧರ್ಮಿ ಹರಿ | ಧರ್ಮಸೂಕ್ಷ್ಮವ ತಿಳಿಸಿನಿರ್ಮಮನ ಮಾಡಿವನ | ಕರ್ಮನಾಮಕನೇ 1 ಮಧ್ವರಾಯರ ಕರುಣ | ಬದ್ಧ ನಿರುವನು ಈತಸಿದ್ದಾಂತ ತತ್ವಗಳು | ಬುದ್ದಿಗೇ ನಿಲುಕೀಅದ್ವಯನು ನೀನೆಂಬ | ಶುದ್ಧಬುದ್ಧಿಯನಿತ್ತುಉದ್ಧಾರಮಾಡೊ ಹರಿ | ಕೃದ್ಧಖಳಹಾರೀ 2 ನಾನು ನನ್ನದು ಎಂಬ | ಹೀನಮತಿಯನು ಕಳೆದುನೀನು ನೀನೇ ಎಂಬ | ಸುಜ್ಞಾನವಿತ್ತುದಾನವಾರಣ್ಯ ಕೃ | ಶಾನು ಶ್ರೀ ಹರಿಯೇಸಾನುರಾಗದಿ ಪೊರೆಯೊ | ದೀನವತ್ಸಲ್ಲಾ 3 ಹರಿ ನಾಮ ವೆಂತೆಂಬೊ | ವಜ್ರಕವಚವತೊಡಿಸಿದುರಿತಾಳಿ ಅಟ್ಟುಳಿಯ | ದೂರಗೈ ಹರಿಯೇಸರುವ ಕಾರ್ಯಗಳಲ್ಲಿ | ಹರಿಯು ಓತಪ್ರೋತನಿರುವ ನೆಂಬುದ ತಿಳಿಸಿ | ಪೊರೆಯ ಬೇಕಿವನಾ 4 ಪಾದನಾತ್ಮಕನೆನಸಿ | ಪಾವ ಮಾನಿಯ ಪ್ರೀಯಧೀವರನೆ ಶ್ರೀವರನೆ | ಕಾವ ಕರುಣಾಳುಗೋವುಗಳ ಕಾವ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಿಲ್ಲ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು
ಪ್ರಾಣಪತಿ ಶ್ರೀನಿವಾಸ ವಿಠಲ ಪೊರೆ ಇವಳ ಪ ಆನತೇಷ್ಟ ಪ್ರದನು | ನೀನೆಂದು ಬಿನ್ನವಿಪೆಜ್ಞಾನ ಗಮ್ಯನೆ ದೇವ | ನೀನಾಗಿ ಪೊರೆಯೋ ಅ.ಪ. ಮಾನ್ಯ ಮಾನದ ಹರಿಯೆ | ಕನ್ಯೆಗಭಯದನಾಗಿಪುಣ್ಯ ಜೀವಿಯ ಸಲಹೆ | ಬಿನ್ನೈಪೆ ನಿನಗೇ |ನಿನ್ಹೊರತು ಜಗದೊಳಗೆ | ಅನ್ಯರನು ಕಾಣೆ ಕಾರುಣ್ಯ ನಿಧಿ ದಾನವಾ | ರಣ್ಯ ದಾವನಲಾ 1 ಭಾವಿಭಾರತಿ ಪತಿಯ | ಸೇವೆಯನೆ ಕೊಂಬಹಯಗ್ರೀವನೆ ನಿನ್ನ ಪದ | ತಾವರೆಯ ದಾಸ್ಯಾ |ಓದಿ ಬೇಡುತ್ತಿಹಳ | ತೀವರದಿ ಕೈ ಪಿಡಿಯೆದೇವ ನಿನ್ನಡಿಗಾನು | ಧಾವಿಸುತ ಬೇಡ್ವೇ 2 ಮಾರುತಾಂತರ್ಗತನೆ | ತಾರತಮ್ಯ ಜ್ಞಾನಮೂರೆರಡು ಭೇದಗಳ | ದಾರಿಯನೆ ತೋರೀ |ಸಾರತಮ ನೀನು ನಿ | ಸ್ಸಾರ ಜಗವೆಂತೆಂಬ ಚಾರುಮತಿಯನೆ ಇತ್ತು | ಪಾರು ಮಾಡಿವಳಾ 3 ವಿಷಯಗಳ ಅನುಭವದಿ | ಎಸೆವ ನಿನ್ನಯ ಸ್ಮರಣೆಹಸನಾಗಿ ನೀನಿತ್ತು | ಕೆಸರ ಕಳೆಯೋ |ಕುಶಲ ಕ್ಲೇಶಾದಿ ನಿ | ನ್ನೊಶವೆಂಬ ಧೃಡವಿರಲಿಬಿಸಜಾಕ್ಷ ಶ್ರೀರಾಮ | ಪ್ರಸರಿಸೋ ಜ್ಞಾನ 4 ದೇವ ದೇವೇಶ ಗುರು | ಸಾರ್ವಬೌಮರ ಪಾಲಶ್ರೀವರನೆ ಸರ್ವಜ್ಞ | ದುರ್ವಿಬಾವ್ಯಾ |ನೀವೊಲಿಯುತಿವಳಿನ್ನು | ಸಾರ್ವ ಕಾಲದಿ ಪೊರೆಯೊಗೋವಳರ ಪಾಲ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪ್ರಿಯ ಹಯಾಸ್ಯವಿಠಲ | ದಯದಿ ಪೊರೆ ಇವನಾ ಪ ನಯವಿನಯದಿಂ ಬೇಡ್ವ | ದಾಸತ್ವ ದೀಕ್ಷಾ ಅ.ಪ. ದಾಸರಾಯರ ಕರುಣ | ಪಾತ್ರ ನಿರುವನು ಈತಸೂಸಿದತಿಭಕುತಿಯಿಂ | ಸೇವೆಯನು ಗೈವಾ |ಏಸೊ ಜನ್ಮದ ಪುಣ್ಯ | ರಾಶಿ ಬಂದೊದಗುತಲಿಆಶಿಸುತ್ತಿರುವನೂ | ದಾಸದೀಕ್ಷೆಯನು 1 ಅಂಕಿತವ ನಿತ್ತಿಹೆನೊ | ಪಂಕಜಸನ ವಂದ್ಯಶಂಕೆಯಿಲ್ಲದೆ ಸ್ವಪ್ನ | ಸೂಚ್ಯದಂತೇವೆಂಕಟೇಶನೆ ಇವನಾ | ಮಂಕುಮತಿಯನೆ ಕಳೆದುಬಿಂಕದಿಂ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 2 ಶ್ರದ್ಧೆಯಿಂದಲಿ ಇವನು | ಮಧ್ವಮತ ದೀಕ್ಷೆಯಲಿಬದ್ಧವಾಗಲಿ ಹರಿಯೆ | ಸಿದ್ದ ಮುನಿವಂದ್ಯಾಶುದ್ದ ತತ್ವಗಳೆಲ್ಲ | ಬುದ್ದಿಗೇ ನಿಲುಕಿಸುತಶುದ್ದೋದ ನೀನು ತವ | ಪ್ರಧ್ವಂಸಗೊಳಿಸೊ 3 ಹರಿಯರಲಿ ಸದ್ಭಕ್ತಿ | ಕರುಣಿಸುತ ತೋಕನಿಗೆ ಪರಿಪರಿಯಲಿಂ ಕೀರ್ತಿ | ಸಂಪನ್ನನೆನಿಸೋಮರುತಂತರಾತ್ಮ ಹರಿ | ದುರಿತಾಳಿ ಪರಿಹರಿಸಿಕರುಣದಿಂ ಕೈಪಿಡಿದು | ಉದ್ದರಿಸೊ ಹರಿಯೇ 4 ಕೈವಲ್ಯದರಸಾಗಿ | ಭಾವಮೈದುನಗೊಲಿದುಬೋವ ಬಂಡಿಗೆ ಆದೆ | ಶ್ರೀವರನೆ ಹರಿಯೇಗೋವತ್ಸದನಿ ಕೇಳಿ | ಆವು ಧಾವಿಸುವಂತೆನೀವೊಲಿದು ಪೊರೆಯೊ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮೋಹನ ಕೃಷ್ಣವಿಠಲ | ಸಲಹ ಬೇಕಿವಳಾ ಪ ದೇಹ ಮಮತೆಯ ಕಳೆದು | ವೈರಾಗ್ಯವಿತ್ತೂ ಅ.ಪ. ವನಧಿ ಉತ್ತರಿಪ | ನವಪೋತ ಹರಿಯಾ |ಸ್ತವನ ಗೈಯುವ ಭಕ್ತಿ | ಪ್ರವಹ ಕೊಟ್ಟಿವಳಿಗೆಹವಣಿಸೋ ಸಾಧನವ | ಶ್ರೀವರನೆ ಕೃಷ್ಣಾ 1 ಭಾರತೀ ಪತಿಯಾದ | ಮಾರುತದ ಮತದಲ್ಲಿಸಾರತತ್ವವ ತಿಳಿಸಿ | ತೋರೋ ಸುಜ್ಞಾನ |ಮಾರುತಾಂತಾರ್ಗತನೆ | ಧೀರ ಸುಜನರ ಸಂಘಸಾರುವಂತೆಸಗೊ ಹರಿ | ಕಾರುಣ್ಯ ಮೂರ್ತೇ 2 ಪತಿಸುತರು ಹಿತರಲ್ಲಿ | ವ್ಯಾಪ್ತ ಶ್ರೀ ಹರಿಯೆಂಬಗುಪ್ತ ಮಹಿಮೆಯ ತಿಳಿದು | ಸೇವೆ ಸಲ್ಲಿಸುತಾ |ಅತಿಶಯದ ಆನಂದ | ಗತಿಯ ಸೇರುವ ಹವಣೆಕೃತಿಪತಿಯ ತೋರೆಂದು | ಪ್ರಾರ್ಥಿಸುವೆ ಹರಿಯೇ 3 ಗುರುಕರುಣವಿಲ್ಲದಲೆ | ಹರಿಯೊಲಿಯನೆಂದೆಂಬವರತತ್ವ ಸಾರವನೆ | ಕರುಣಿಸುತ ಹರಿಯೇ |ಹರಿಗುರು ಸೇವೆಯನು | ಕರಣತ್ರಯದಲಿ ಮಾಳ್ದವರಮತಿಯ ಪಾಲಿಸುತ | ಪೊರೆಯ ಬೇಕಿವಳಾ 4 ಸೃಷ್ಠಿ ಸ್ಥಿತಿ ಲಯ ಕರ್ತ | ವಿಷ್ಣು ಲೀಲಾಮೃತವಸುಷ್ಟುಸಂತತ ಸವಿವ | ಶ್ರೇಷ್ಠ ಸಾಧನವಾಕೊಟ್ಟು ಪಾಲಿಪುದೆಂಬ | ಇಷ್ಟವನೆ ಸಲಿಸೆಂದುಕೃಷ್ಣ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಮನೋಜ್ಞ ವಿಠಲ | ಕಾಪಾಡೊ ಇವಳಾ ಪ ಪಕ್ಷೀಂದ್ರವಹ ಹರಿಯೆ | ಇಕ್ಷುಶರ ಪಿತನೇ ಅ.ಪ. ಸುಕೃತ | ದಿಂದ ಫಲ ತೊರೆತಿಹುದುಮಂದಾಕೀನಿ ಜನಕ | ಇಂದಿವಳ ಪೊರೆಯೆ 1 ಹರಿಯೆ ಪರತರನೆಂಬ | ಸುರರ ಮನೊ ಭಾವದಲಿಹರಿ ಗುರು ಹಿರಿಯರಲಿ | ವರಭಕ್ತಿಯುತಳೂತರತಮದ ಸುಜ್ಞಾನ | ವರಭೇದ ಪಂಚಕದಅರಿವಿತ್ತು ಪೊರೆ ಇವಳ | ಮರುತಾಂತರಾತ್ಮ 2 ಕಂಸಾರಿ ಪೂಜೆ ಎಬಂಶವನು ತಿಳಿಸುತ್ತ | ಕಾಪಾಡೊ ಹರಿಯೇಸಂಶಯವುರಹಿತ ತ | ತ್ವಾಂಶ ದರಿವಿತ್ತು ವಿಪಾಂಸಗನು ಹರಿಯಪದ | ಪಾಂಸುವನೆ ತೊಡಿಸೋ 3 ಅಕ್ಷಯ ಫಲದಾತಈಕ್ಷಿಸೋ ಇವಳ ಕರು | ಣೇಕ್ಷಣದಿ ಹರಿಯೇ 4 ಗೋವತ್ಸ ದನಿಕೇಳಿ | ಧಾವಿಸುವ ಪರಿಯಂತೆಶ್ರೀವರನೆ ನೀನಾಗಿ | ಓವಿ ಪೊರೆ ಎಂಬಾಆವ ಈ ಬಿನ್ನಪವ | ನೀವೊಲಿದು ಸಲಿಸುವುದುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾಯುವಂದಿತ ವಿಠಲ | ಪೊರೆಯ ಬೇಕಿವನಾ ಪ ಪಾದ | ಭಜಕನಾದವನಾಅ.ಪ. ಗುರುಹಿರಿಯರಾ ಸೇವೆ | ನಿರುತ ಗೈಯುವ ಮನವಕರುಣಿಸುವುದಿವ ನೀಗೆ | ಮರುತಾಂತರಾತ್ಮಗರುಡ ಗಮನನೆ ದೇವ | ಗರ್ವಗಳ ಪರಿಹರಿಸಿಸರ್ವಾಂತರಾತ್ಮಕನೆ | ಕಾಪಾಡೊ ಇವನಾ 1 ಹರಿಯೆ ಪರನೆಂಬಂಥ | ವರಸುಜ್ಞಾನವ ಕೊಟ್ಟುತರತಮಂಗಳು ಅಂತೆ | ಎರಡು ಮೂರುರ್ಭೇದಾಪರಮ ಸತ್ಯವು ಎಂಬ | ವರಜ್ಞಾನ ಪಾಲಿಸುತಪರಿಪರಿಯ ಭವಭಂದ | ಪರಿಹರಿಸೊ ಹರಿಯೇ 2 ಕಾಕು ಸಂಗಮಕೆಡಿಸೊಪ್ರಾಕ್ಕುಕರ್ಮವ ಕಳೆಯೊ | ಶ್ರೀ ಕರಾರ್ಚಿತನೆ 3 ದುರಿತವನ ಕುಠಾರ | ಶರಣಜನ ವತ್ಸಲನೆದುರಿತಾಳಿ ದೂರೈಸಿ | ಪೊರೆಯೊ ಹರಿಯೇಕರುಣ ನಿಧಿ ನೀನೆಂದು | ಮರೆಹೊಕ್ಕೆ ತವಪಾದಚರಣ ದಾಸನ ಪೊರೆಯೊ | ಹರಿಯೆ ಪರಮಾಪ್ತ 4 ಶ್ರೀವರನೆ ಸರ್ವೇಶ | ಭಾವದಲಿ ಮೈದೋರಿಭಾವುಕನ ಪೊರೆ ಎಂದು | ದೇವ ಪ್ರಾರ್ಥಿಸುವೇಈ ವಿಧದ ಬಿನ್ನಪವ | ನೀವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೇಷನುತ ಗೋಪ ವಿಠ್ಠಲ | ನೀ ಸಲಹೊ ಇವಳಾ ಪ ವಾಸದೇವನೆ ನಿನ್ನ | ಪ್ರಾರ್ಥಿಸುವೆ ಹರಿಯೇ ಅ.ಪ. ಕನ್ಯೆ ಬಹು ಭಾವುಕಳು | ನಿನ್ನೆಯಿಂ ಪ್ರಾರ್ಥಿಪಳುಘನ್ನ ಹರಿದಾಸ್ಯದಲಿ | ಮುನ್ನಮನವಿರಿಸೀ |ಇನ್ನು ತೈಜಸರೂಪ | ಚೆನ್ನ ಶೇಷನು ಆಗೆಮಾನ್ಯರೂ ಪರಮಗುರೂ | ವನ್ನೆ ಕಂಡಿಹಳೋ 1 ಗುರುತರೂಪಿ ತೈಜಸನು | ವ್ಯಾಸಪೀಠದ ಮುಂದೆಇರುತ ಗುರು ರಾಜರ | ಮಹಿಮೆ ಪೇಳುತಲೀ |ಹರಿಸುತಲಿ ಕನ್ಯೆಗೇ | ಫಲಪುಷ್ಪ ತಾಂಬೂಲದೊರಕಿಸಿಹ ಅದರಿಂದೆ | ಉಪದೇಶವಿತ್ತೇ 2 ಪತಿಸೇವೆ ದೊರಕಿಸುತ | ಕೃತ ಕಾರ್ಯಳೆಂದೆನಿಸೊಹಿತವಹಿತವೆರಡರಲಿ | ರತಿ ಇಡದೆ ಉಂಬಾ |ಮತಿಯನ್ನೇ ಕರುಣಿಸುತಾ | ಮತಿಮತಾಂವರರಂಘ್ರಿಶತಪತ್ರ ಸೇವೆಯಲಿ | ರತಳು ಎಂದೆನಿಸೊ 3 ಭವ | ಸಾಗರದ ಬತ್ತಿಪುದುಮರುತಾಂತರಾತ್ಮ ಹರಿ | ವೇಣುಗೋಪಾಲಾ 4 ಭಾವ ಮೈದುನಗೊಲಿದ | ಶ್ರೀವರನೆ ಮೈದೋರಿಭಾವುಕಳೆ ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ |ಸಾರ್ವಭೌಮನೆ ಹರಿಯೆ | ಕೋವಿದೋತ್ತಂಸ ಗುರುಗೋವಿಂದ ವಿಠ್ಠಲನೆ | ನೀವೊಲಿಯ ಬೇಕೋ 5
--------------
ಗುರುಗೋವಿಂದವಿಠಲರು
ಶ್ರೀ ವೆಂಕಟಾಚಲ ನಿವಾಸ ನಿನ್ನ ಸೇವಾನುಸೇವಕರ ದಾಸಾ ಎನಿಸಿ ಜೀವಿಸುವ ನರಗೆ ಆಯಾಸಾ ಯಾಕೆ ಶ್ರೀವರನೆ ಕೊಡು ಎಮಗೆ ಲೇಸಾ 1 ಕಂಸಾರಿ ಪ್ರಭು ನಿನ್ನ ದಿವ್ಯ ನಾಮ ಒದಗಲು ಜಿಹ್ವೆಗೆನ್ನಾ ದೋಷ ಸೀಮೆಗಾಣದಿದ್ದರೆನ್ನ ಸ್ವಾಮಿ ನೀ ಮರೆಯಲಾಗದು ಸುಪ್ರಸನ್ನ 2 ನೀಚ ಯೋನಿಗಳಲ್ಲಿ ಬಂದೆ ಇನ್ನು ನಾಚಿಕಿಲ್ಲವೊ ಎನಗೆ ತಂದೆ ನೀನೆ ಮೋಚಕನು ಬಿನ್ನಪ ವಿದೆಂದೆ ಸವ್ಯ ಸಾಚಿಸಖ ಕೈಪಿಡಿಯೋ ತಂದೆ 3 ನಾನೊಬ್ಬನೇ ನಿನಗೆ ಭಾರವಾದೆ ನೇನೊ ಸಂತತ ನಿರ್ವಿಕಾರ ಎನ್ನ ಹೀನತ್ವ ನೋಡಲ್ಕಪಾರ ಚಕ್ರ ಪಾಣಿ ಮಾಡಿದಿರೆನ್ನ ದೂರ 4 ಕಂಡ ಕಂಡವರಿಗಾಲ್ಪರಿದು ಬೇಡಿ ಬೆಂಡಾದೆ ನಿನ್ನಂಘ್ರಿ ಮರೆದು ದಿಟ ತೊಂಡವತ್ಸಲನೆಂಬ ಬಿರುದು ಕಾಯೊ ಪುಂಡರೀಕಾಕ್ಷ ನೀನರಿದು 5 ಈ ಸಮಯದೊಳೆನ್ನ ತಪ್ಪ ನೋಡಿ ನೀ ಸಡಿಲ ಬೇಡುವರೇನಪ್ಪ ನಿನ್ನ ದಾಸರ್ಪೆಸರ್‍ಗೊಳಲು ಬಪ್ಪಾ ದೋಷ ನಾಶವಾಗೋದು ತಿಮ್ಮಪ್ಪ 6 ಕಾಮಾದಿಗಳ ಕಾಟದಿಂದ ನಿನ್ನ ನಾ ಮರೆದೆ ಸಚ್ಚಿದಾನಂದ ಎನ್ನ ಈ ಮಹಾ ದೋಷಗಳ ವೃಂದ ನೋಡದೆ ನೀ ಮನ್ನಿಸೆನ್ನ ಮುಕುಂದ 7 ನೀ ಪಿಡಿದವÀರ ಸಹಸ್ರಾರ ಸುಜನ ಪಾಪಾಟವಿಗೆ ಸುಕುಠಾರಾ ಜಗ ದ್ವ್ಯಾಪಕನೆ ಎನ್ನ ಸಂಸಾರ ಘೋರ ಕೊಪದಿಂದೆತ್ತಯ್ಯ ಧೀರ 8 ಸಿಂಧೂರ ರಾಜ ಪರಿಪಾಲ ಕೋಟಿ ಕಂದರ್ಪ ಲಾವಣ್ಯ ಶೀಲ ಧರ್ಮ ಮಂದಾರ ಭೂಜಾಲಪಾಲ ಯೋಗಿ ಸಂದೋಹ ಹೃತ್ಕುಮುದ ಶೀಲಾ 9 ಶಿವನ ವೈರಿಯ ಕೊಂದ ಶಕ್ತ ಪುಣ್ಯ ಶ್ರವಣ ಕೀರ್ತನ ನಿನ್ನ ಭಕ್ತಾ ಜನರ ಭವದೊಳಗೆ ದಣಿಸುವುದು ಯುಕ್ತವೇನೊ ಭುವನ ಪಾವನ ನಿತ್ಯಮುಕ್ತ 10 ಶ್ರೀಕರ ಶ್ರೀಮದಾನಂತ ನಿಖಿಳ ಲೋಕೈಕನಾಥ ನಿನ್ನಂಥ ಸಖರ ನಾ ಕಾಣೆನೆಲ್ಲಿಯೂ ಮಹಂತಾ ಎನ್ನ ನೀ ಕಾಯೋ ಕಂಡ್ಯ ಭೂಕಾಂತಾ 11 ಕರ್ಮ ಚಿತ್ರತ್ವಗ್ರಸನ ಕಾಯ ಕರಣ ಮನಹಂಕಾರ ಘ್ರಾಣಾ ಬುದ್ದಿ ಚರಣ ಪಾಯೂಪಸ್ಥ ನಯನಜಾತ ಉರುಪಾಪ ಕ್ಷಮಿಸು ಶ್ರೀ ರಮಣಾ 12 ಅನಿಮಿತ್ತ ಬಂಧು ನೀಯೆನ್ನ ಬಿಡುವು ದನುಚಿತವೋ ಲೋಕಪಾವನ್ನ ಚರಿತ ಮನ ವಚನ ಕಾಯದಲಿ ನಿನ್ನ ಪಾದ ವನಜ ನಂಬಿದೆ ಸುಪ್ರಸನ್ನಾ 13 ನೀನಲ್ಲದೆನಗೆ ಗತಿಯಿಲ್ಲ ಪವ ಮಾನವಂದಿತ ಕೇಳೋ ಸೊಲ್ಲ ಎನ್ನ ಜ್ಞಾನೇಚ್ಛೆ ಕ್ರಿಯಂಗಳೆಲ್ಲಾ ನಿನ್ನ ಧೀನವಲ್ಲವೆ ಲಕ್ಷ್ಮೀನಲ್ಲಾ 14 ಪ್ರಾಚೀನ ಕರ್ಮಾಂಧ ಕೂಪದೊಳಗೆ ಯೋಚಿಸುವ ನರರ ಸಂತಾಪ ನಿನಗೆ ಗೋಚರಿಸದೇನೋ ಬಹುರೂಪ ವೆಂಕ ಟಾಚಲನಿಲಯ ಪಾಹಿ ಶ್ರೀಪಾ 15 ಯಾಕೆ ದಯ ಬಾರದೆನ್ನಲ್ಲಿ ನರಕ ನಾಕ ನರಕ ಭೂ ಲೋಕಂಗಳಲ್ಲಿ ಚರಿಸಿ ನಾ ಕಷ್ಟಪಟ್ಟ ಬಗ್ಗೆ ನೀ ಬಲ್ಲಿ ವೀತ ಶೋಕ ಕೊಡು ಭಕುತಿ ನಿನ್ನಲ್ಲಿ 16 ಬನ್ನ ಬಡಿಸುವರೇನೋ ಬಿಡದೆ ನಾನು ಮುನ್ನ ಮಾಡಿದ ಪಾಪ ಕೆಡದೆ ನೀ ಪ್ರ ಪನ್ನ ವತ್ಸಲನೆಂದು ನುಡಿದೆ 17 ತಾಪತ್ರಯಗಳಿಂದ ನೊಂದೆ ಮಹಾ ಪಾಪಿಷ್ಠರಲ್ಲನ್ನ ತಿಂದೆ ಇನ್ನು ಆಪರೇತೇಶ್ವರನ ಮುಂದೆ ಪೋಗಿ ನಾ ಪೇಕೊಳಲೇನು ತಂದೆ 18 ದೇಹ ಸಂಬಂಧಿಗಳ ಸಹಿತವಾಗಿ ನಾ ಹೊಂದಿದೆನು ಲೋಕಮೋಹಿತ ಎನ್ನ ಮೋಹಿಪ್ರದು ನಿನ್ನಗೇನು ವಿಹಿತ ಹೃದಯ ಬಾಹಿರಂತರದಿ ಸನ್ನಿಹಿತ 19 ಪೋಗುತಿದೆ ದಿವಸ ಕಮಲಾಕ್ಷ ಪರಮ ಅಪರೋಕ್ಷ ಎನಗೆ ಹೇಗಾಗುವುದೊ ಸುರಾಧ್ಯಕ್ಷ ದುರಿತ ನೀನು ಕಾಮಿತ ಕಲ್ಪವೃಕ್ಷ 20 ಗತಿಯಾರು ನಿನ್ನುಳಿದು ದೇವ ರಮಾ ಸಂಜೀವ ಎನ್ನ ಸತಿಸುತರ ಅನುದಿನದಿ ಕಾವ ಭಾರ ಸತತ ನಿನ್ನದು ಮಹಾನುಭಾವ 21 ದೊಡ್ಡವರ ಕಾಯ್ವುದೇನರಿದು ಪರಮ ದಡ್ಡರನು ಕಾಯ್ವದೇ ಬಿರುದು ಎನ್ನ ಗುಡ್ಡದಂತಹ ಪಾಪ ತರಿದು ಕಾಯೋ ವಡ್ಡಿ ನಾಯಕ ಸಾರೆಗರದೊ 22 ಜ್ಞಾನಿಗಳು ನೀಚರಲಿ ಕರುಣಾ ಮಾಡ ರೇನೋ ಬಿಡುವರೇ ರಥಚರಣ ಪಾಣಿ ಭಾನು ಚಂಡರವಿಕಿರಣ ಬಿಡದೆ ತಾನಿಪ್ಪನೆ ರಮಾರಮಣ23 ಆಡಲ್ಯಾತಕೆ ಬಹಳ ಮಾತಾ ಪರರ ಬೇಡಲಾರೆನೋ ಜಗತ್ರಾತಾ ಹೀಗೆ ಮಾಡುವರೇ ಕೆಳೆನ್ನ ಮಾತ ನೀನೆ ನೀಡೆನಗೆ ಪುರುಷಾರ್ಥ ದಾತಾ 24 ಬೇಡಲೇತಕೆ ಬಹಳ ಮಾತಾ ಎನ್ನ ಕೇಡು ನಿನ್ನದಲ್ಲೇ ಬಲಿದೌತ ಪಾದ ಬೇಡಿಕೊಂಬುವೆ ನಾನನಾಥ ದೂರ ನೋಡಲಾಗದು ಪಾರ್ಥಸೂತ 25 ನಿತ್ಯ ಬಿಡದೆ ಶಾರದೇಶನ ನುತಿಪ ಭಕ್ತ ಜನರ ಪಾರ ಸಂತೈಸುವುದು ಮಿಥ್ಯವಲ್ಲ ಶ್ರೀರಮಣ ಸಾಕ್ಷಿದಕೆ ಸತ್ಯಾ 26 ಪರಿಯಂತ ಶಯನ ಪ್ರಣತಾರ್ತಿ ಹರನೆಂಬೊ ಅಂಕಾ ಕೇಳಿ ಮಣಿದ ನಿನ್ನಂಘ್ರಿಗೆ ಶಶಾಂಕಾ ಭಾಸ ದಣಿಸಲಾಗದು ನಿಷ್ಕಳಂಕಾ27 ಕಾರ್ತವೀರ್ಯಾಜುನನ ಕೊಂದ ಭವ್ಯ ಕೀರ್ತಿ ನಿನ್ನಾನಂದ ವೃಂದ ಸತತ ಕೀರ್ತಿಸುವ ನರರ ಬಹುಕುಂದ ನೋಡ ದಾರ್ತನ್ನ ಪೊರೆಯೊ ಗೋವಿಂದ 28 ದಯದಿಂದ ನೋಡೆನ್ನ ಹರಿಯೆ ಜಗ ನ್ಮಯನೆ ಜ್ಞಾನಾನಂದ ವೃಂದ ಸಿರಿಯೆ ಮನಾ ಭಯದೂರರಿನ್ನೊಬ್ಬರರಿಯೇ 29 ನರಸಿಂಹ ನಿನ್ನುಳಿದು ಜಗವ ಕಾಯ್ವ ಪರಮೋಷ್ಠಿ ರಾಯನು ನಗುವ ನಿತ್ಯ ನಿರಯಾಂಧ ರೂಪದೊಳು ಹುಗಿವಾ 30 ದಾಸ ದಾಸರ ದಾಸನೆಂದು ಬಿಡದೆ ನೀ ಸಲಹೋ ಎನ್ನನೆಂದೆಂದೊ ನಿನ್ನ ನಾ ಸೇವಿಸುವೆ ಕೃಪಾಸಿಂಧು ಎಮ್ಮನು ದಾಸಿಸದÀನಿಮಿತ್ತ ಬಂಧೂ 31 ಎಂದೆಂದು ನೀ ಬಡವನಲ್ಲ ನಿನ್ನ ಮಂದಿರದೊಳಗೆ ಬಲ್ಯಲ್ಲಾ ಚಿದಾ ನಂದ ನೀ ಭಕ್ತ ವತ್ಸಲ್ಲಾ 32 ಕಾಮಿತಪ್ರದನೆಂಬ ಬಿರಿದು ಕೇಳಿ ನಾ ಮುದದಿ ಬಂದೆನೋ ಅರಿದು ಎನ್ನ ತಾಮಸ ಮತಿಗಳೆಲ್ಲ ತರಿದು ಮಮ ಸ್ವಾಮಿ ನೋಡೆನ್ನ ಕಣ್ದೆರದು33 ಹಿತವರೊಳು ನಿನಗಧಿಕರಾದ ತ್ರಿದಶ ತತಿಗಳೊಳು ಕಾಣೆನೋ ಪ್ರಮೋದ ನೀನೆ ಗತಿಯೆಂದು ನಂಬಿದೆ ವಿವಾದವ್ಯಾಕೊ ಪತಿತಪಾವನ ತೀರ್ಥಪಾದ 34 ಮಡದಿ ಮಕ್ಕಳು ತಂದೆ ತಾಯಿ ಎನ್ನ ಒಡಹುಟ್ಟಿದವರ ನೀ ಕಾಯಿ ಲೋಕ ದೊಡೆಯ ನೀನಲ್ಲದಿನ್ನಾರೈ ಎನ್ನ ನುಡಿ ಲಾಲಿಸೋ ಶೇಷಶಾಯಿ 35 ಅನುಬಂಧ ಜನರಿಂದ ಬಪ್ಪ ಕ್ಲೇಶ ವನುಭವಿಸಲಾರೆ ಎನ್ನಪ್ಪ ಉದಾ ಸೀನ ಮಾಡಿ ದಯಮಾಡದಿಪ್ಪರೇನೋ ಘನ ಮಹಿಮ ಫಣಿರಾಜತಲ್ಪ 36 ಹದಿನಾಲ್ಕು ಲೋಕಂಗಳನಾಳ್ವ ಬ್ರಹ್ಮ ಮೊದಲಾದವರು ನಿನ್ನ ಚಲ್ವನಖದ ವಿಧಿಸಲಾಪೆನೆ ನಿನ್ನ ಸಲ್ವಾ 37 ಧನ ಧಾನ್ಯ ಪಶು ಪತ್ನಿ ಗೇಹ ಜನನೀ ಜಾಮಾತ ಸಖ ನೇಹ ಅನುಜ ತನುಜಾಪ್ತವರ್ಗದಿಂದಾಹ ಸೌಖ್ಯ ನಿನಗರ್ಪಿಸಿದೆ ಎನ್ನ ದೇಹಾ 38 ನೀನಿತ್ತ ಸಂಸಾರದೊಳಗೆ ಸಿಲುಕಿ ನಾನೊಂದೆ ಕರೆ ನಿನ್ನ ಬಳಿಗೆ ಚರಣ ಧ್ಯಾನ ದೊರಕಲು ಭವದಿ ಮುಳುಗೆ ನಿನ್ನ ಕಾಣದಿರಲಾರೆನರ ಘಳಿಗೆ 39 ಸಲುಗೆ ಬಿನ್ನಪವ ನೀ ಕೇಳೋ ಎನ್ನ ಬಲು ದುರುಳತನವ ನೀ ತಾಳೋ ನೀನೆ ನೆಲೆಯಲ್ಲದೆನಗಾರು ಪೇಳೋ ಎನ್ನ ಕುಲದೈವ ಬಹುಕಾಲ ಬಾಳೋ40 ಸಾಂದೀಪ ನಂದನನ ತಂದ ನಂದ ಭವ ವೃಂದ ಕಳೆದು ಎಂದೆಂದು ಕುಂದದಾನಂದವೀಯೋ ಇಂದಿರಾರಮಣ ಗೋವಿಂದ41 ತೈಜಸ ಪ್ರಾಜ್ಞ ತುರಿಯಾ ಎನ್ನ ದುಸ್ವಭಾವವ ನೋಡಿ ಪೊರೆಯದಿಹರೆ ನಿಸ್ಪøಹ ನಾನಿನ್ನಂಘ್ರಿ ಮೊರೆಯ ಪೊಕ್ಕೆ ಅಸ್ವತಂತ್ರನ ಕಾಯೋ ಪಿರಿಯಾ42 ಇಹಪರದಿ ಸೌಖ್ಯ ಪ್ರದಾತ ನೀನೆ ಅಹುದೋ ಲೋಕೈಕ ವಿಖ್ಯಾತ ಮಹಾ ಮಹಿಮ ಗುಣಕರ್ಮ ಸಂಜಾತ ದೋಷ ದಹಿಸು ಸಂಸಾರಾಬ್ದಿ ಪೋತಾ 43 ಲೋಕಬಾಂಧವನೆಂಬ ಖ್ಯಾತಿಯನ್ನು ನಾ ಕೇಳಿದೆನು ಖಳಾರಾತಿ ಮನೋ ಶೋಕ ಮೋಹಾಜ್ಞಾನ ಭೀತಿ ಬಿಡಿಸು ಶ್ರೀ ಕರಾರ್ಚಿತ ಸ್ವಯಂ ಜ್ಯೋತಿ44 ಒಂದು ಗೇಣೊಡಲನ್ನಕಾಗಿ ಅಲ್ಪ ಮಂದಭಾಗ್ಯರ ಮನೆಗೆ ಪೋಗಿ ದೈನ್ಯ ದಿಂದ ಸತ್ಕರ್ಮಗಳ ನೀಗಿ ಕಂದಿ ಕುಂದಿದೆನೋ ಸಲಹೋ ಲೇಸಾಗಿ45 ಪಾತಕರೊಳಗಧಿಕ ನಾನಯ್ಯ ಜಗ ತ್ಪಾತಕವ ಕಳೆವ ಮಹಾರಾಯ ನಿನ್ನ ದೂತನಲ್ಲವೆ ಜೀಯ ಜಗ ನ್ನಾಥ ವಿಠ್ಠಲ ಪಿಡಿಯೋ ಕೈಯಾ 46
--------------
ಜಗನ್ನಾಥದಾಸರು