ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳ ಜಯಮಂಗಳ ಶುಭ ಮಂಗಳ ಶ್ರೀ ಗುರುಮೂರ್ತಿಗೆ ಧ್ರುವ ವೇದೋದ್ಧಾರ ಶ್ರೀಮತ್ಸ್ಯಗೆ ಮಂಗಳ ಮೇದಿನಿಯ ಪೊತ್ತ ಕೂರ್ಮಗೆ ಮಂಗಳ ಕಾದಿ ಗೆದ್ದ ಶ್ರೀವರಾಹಗೆ ಮಂಗಳ ಒದಗಿ ಮೂಡಿದ ನರಸಿಂಹಗೆ ಮಂಗಳ 1 ಧರಿಯೆ ದಾನವಕೊಂಡ ವಾಮನಗೆ ಮಂಗಳ ಶೂರ ಪರಶುರಾಮಗೆ ಮಂಗಳ ಶರಣ ರಕ್ಷಕ ಶ್ರೀರಾಮಗೆ ಮಂಗಳ ಸಿರಿಯನಾಳುವ ಶ್ರೀಕೃಷ್ಣಗೆ ಮಂಗಳ 2 ಗುಹ್ಯ ಗೋಪ್ಯದಲಿಹ ಬೌದ್ದಗೆ ಮಂಗಳ ಹಯವನೇರಿದ ಕಲ್ಕಿಗೆ ಮಂಗಳ ಜಯ ಜಯ ಮಹಿಪತಿಸ್ವಾಮಿಗೆ ಮಂಗಳ ದಯುವುಳ್ಳ ಶ್ರೀದೇವಿದೇವಗೆಮಂಗಳ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೋಲುಹಾಡುಕೋಲು ಕಾಮನ ಗೆದ್ದ ಕೋಲು ಮಾಯ್ಗಳನೊದ್ದಕೋಲು ಆನಂದಮುನಿ ಪಿಡಿದಿಹ ಕೋಲೆ ಪ.ತಮನೆಂಬುವನ ಕೊಂದು ಕಮಲಜನಿಗೆ ವೇದಕ್ರಮದಿಂದ ಕೊಟ್ಟು ಜಗವನು ಕೋಲೆಕ್ರಮದಿಂದ ಕೊಟ್ಟು ಜಗವನು ರಕ್ಷಿಸಿದವಿಮಲ ಶ್ರೀಮತ್ಸ್ಯಮನೆದೈವ ಕೋಲೆ1ಸುರಪನ ವಿಭವೆಲ್ಲ ಶರಧೀಲಿ ಮುಳುಗಿರೆಗಿರಿಗಹಿ ಸುತ್ತಿ ಕಡೆಯಲು ಕೋಲೆಗಿರಿಗಹಿ ಸುತ್ತಿ ಕಡೆಯಲುನಗಜಾರೆಧರಿಸಿದ ಶ್ರೀಕೂರ್ಮಮನೆದೈವ ಕೋಲೆ2ಹೊಂಗಣ್ಣಿನವನು ಭೂವೆಂಗಳನೆಳೆದೊಯ್ಯೆಮಂಗಳಮಹಿಮ ದಯದಿಂದ ಕೋಲೆಮಂಗಳ ಮಹಿಮ ದಯದಿಂದ ನೆಗಹಿದ್ಯಜ್ಞಾಂಗ ಶ್ರೀವರಾಹ ಮನೆದೈವ ಕೋಲೆ 3ಒಂದೆ ಮನದೊಳಂದು ಕಂದ ನೆನೆಯಲಾಗಬಂದವನಯ್ಯನ್ನೊದೆದನು ಕೋಲೆಬಂದವನಯ್ಯನ್ನೊದೆದನು ಅನಿಮಿತ್ತಬಂಧು ನರಹರಿಯು ಮನೆದೈವ ಕೋಲೆ 4ಎದುರಿಲ್ಲವೆನಗೆಂದು ಮದವೇರಿದವನ ತ್ರಿಪದ ಭೂಮಿ ಬೇಡಿ ಗೆಲಿದನು ಕೋಲೆಪದ ಭೂಮಿ ಬೇಡಿ ಗೆಲಿದಾ ತ್ರಿವಿಕ್ರಮಮುದದ ವಾಮನ ಮನೆದೈವ ಕೋಲೆ 5ಕುಜನರಳಿದು ಭಾಗ್ಯ ಸುಜನರಿಗೊಲಿದಿತ್ತನಿಜ ತಾತನಾಜÕ ಸಲಹಿದ ಕೋಲೆನಿಜ ತಾತನಾಜÕ ಸಲಹಿದ ಶುಭಗುಣದ್ವಿಜರಾಮ ನಮ್ಮ ಮನೆದೈವ ಕೋಲೆ 6ಕೌಸಲ್ಯೆ ಗರ್ಭದಿ ಜನಿಸಿದ ಕೃಪೆಯಲ್ಲಿಕೌಶಿಕಕ್ರತುವ ಕಾಯ್ದನು ಕೋಲೆಕೌಶಿಕಕ್ರತುವ ಕಾಯ್ದ ರಾವಣಾಂತಕಶ್ರೀ ಸೀತಾರಾಮ ಮನೆದೈವ ಕೋಲೆ 7ಗೋಕುಲದಲಿ ಬೆಳೆದುಪೋಕದನುಜರ ಅನೇಕ ಪರಿಯಲಿ ಸದೆದನು ಕೋಲೆ ಅನೇಕ ಪರಿಯಲಿ ಸದೆದ ಪಾಂಡವಪಾಲಶ್ರೀಕೃಷ್ಣ ನಮ್ಮ ಮನೆದೈವ ಕೋಲೆ 8ಮಿಥ್ಯಾವಾದಿಗಳಿಗೆ ಮಿಥ್ಯವನೆ ಕಲಿಸಿಸತ್ಯವಾದಿಗಳ ಪೊರೆದನು ಕೋಲೆಸತ್ಯವಾದಿಗಳ ಪೊರೆದನು ಅಜವಂದ್ಯಕರ್ತಬೌದ್ಧನು ಮನೆದೈವ ಕೋಲೆ9ಸ್ವಾಹಾ ಸ್ವಧಾಕಾರವು ಮಹಿಯೊಳಿಲ್ಲದಾಗೆಸುಹಯವೇರಿ ಕಲಿಯನು ಕೋಲೆಸುಹಯವೇರಿ ಕಲಿಯನೆಳೆದು ಕೊಂದಮಹಾಕಲ್ಕಿ ನಮ್ಮ ಮನೆದೈವ ಕೋಲೆ 10ಹತ್ತವತಾರದಿ ಭಕ್ತಜನರ ಹೊರೆದಮತ್ತಾವಕಾಲದಿ ರಕ್ಷಿಪ ಕೋಲೆಮತ್ತಾವ ಕಾಲದಿ ರಕ್ಷಿಪ ಪ್ರಸನ್ವೆಂಕಟಕರ್ತನ ನಂಬಿ ಸುಖಿಯಾದೆ ಕೋಲೆ 11
--------------
ಪ್ರಸನ್ನವೆಂಕಟದಾಸರು
ದಾಸರಿಗೆ ದುರಿತದೋರದುಶೇಷಾಧೀಶ ಶ್ರೀ ಶ್ರೀನಿವಾಸನದ್ವೇಷಖಳ ಮೋಳಿಗೆಯ ನಿ:ಶೇಷವೆನಿಸಿ ನಿಜಜನರ ವರ್ಧಿಪನ ಸುರಾಧಿಪನ ಸುಪ್ರತಾಪನ ಪ.ಅವನಿಯ ಕೊಂಡಿಳಿದವನ ಕೊಂದವನಿ ತಂದ ವನಜಭವ ಸನಕಾದ್ಯರಿಗೊಲಿದನಕುವರ ತನ್ನವರಿದ್ದಾಟವಿಯಲಿದ್ದವನ ಭಯವ ನಿವಾರಿಸಿ ಕುವರಗೆ ವರದನ ಪೊರೆದನ ಮೆರೆದನ 1ವಿಧಿಪದಕರ್ತರ ಗುರುಸುಖತೀರ್ಥರಹೃದಯ ಮಂಗಳ ಮಾನಸದ ಮರಾಳನಪದಸೋಂಕಿಸಿ ಪಾರಾಕಿಯನು ತ್ವರಿಯದಿಸುದತಿಯ ಮಾಡಿದುದರಿಯಾಘಹಾರಿಯ ಅರಿದಾರಿಯಮುರಾರಿಯ 2ಕಿರುಗೆಜ್ಜೆ ನೂಪುರ ವರಜಾಂಬೂನದಾಂಬರದಾಮಕೌಸ್ತುಭಸಿರಿವತ್ಸ ಕೇಯೂರಹಾರ ಕರವಲಯಕುಂಡಲಮಣಿಮಕುಟಾಭರಣಭೂಷಿತ ಘನಗಾತ್ರನಬ್ಜನೇತ್ರನ ಮಾಕಳತ್ರನ ಖಗಪತ್ರನ3ಸಿರಿದೊರೆತಿರೆ ಬೆರೆತಿರದೆ ಆ ಹರಿಶರಣರವೆರೆಸಿ ಗರ್ವಜರಿದು ಶ್ರೀಹರಿಯಗುರುನಿರೂಪದಪರಿಅರಿದೆಡರದರಿದುಅರಿಅರುವರಿಗಂಜದಿಹ ಅಳುಕದಿಹ ದೃಢದಲ್ಲಿಹ ಮುಕ್ತನಾಗಿಹ4ಪಂಚಬೇಧ ವಿವರ ತಿಳಿದು ತತ್ವ ಜಪಿಸಿಪಂಚರಾತ್ರಾಗಮ ತಂತ್ರಸಾರಾರ್ಥಗಳಿಂಮಿಂಚುವ ಭಕ್ತಿ ಪಥದಲಿ ನಿಜಾಯುವಹಿಂಚುಮಾಡುವ ಭವಾರ್ಣವವನೀಸಾಡುವ ಕಡೆಗೋಡುವನಲಿದಾಡುವ 5ವೆಂಕಟೇಶನ ನಾಮ ಪಾಡಿಕೊಂಡಾಡುವವೆಂಕಟೇಶನಾಕೃತಿ ನೋಡೊಲೆದಾಡುವವೆಂಕಟೇಶನ ಕಥಾಮೃತಕೇಳಿಬಾಳುವವೆಂಕಟೇಶನ ಚರಣವೆ ಶರಣೆನುವ ಕಾರಣೆನುವ ಪೂರಣೆನುವ 6ಮೊದಲೆ ಸ್ವಾಮಿ ಪುಷ್ಕರಣಿ ಶ್ರೀವರಾಹನಸದಮಲ ಸುವಿಮಾನ ಶ್ರೀನಿವಾಸನಇದೀಗೆ ಭೂವೈಕುಂಠವೆನಿಪಾನತರಾದರ ಪ್ರಸನ್ವೆಂಕಟೇಶನ ಕಾಣುವ ಶಮಮಾಣುವ ಕೊಬ್ಬಿಕುಣಿವ 7
--------------
ಪ್ರಸನ್ನವೆಂಕಟದಾಸರು
ಶ್ರೀವರಾಹನರಹರಿ ಧನ್ವಂತರಿ15ಶರಣು ಶರಣು ಶರಣು ಭೂವರಾಹ ಮೂರುತಿಶರಣು ಶರಣು ಧನ್ವಂತರಿಶರಣು ಭಾರತೀರಮಣವಂದ್ಯನೆ ಶರಣು ನೃಹರೆ ಕೃಪಾನಿಧೆ ಪವಾರಿಧಿಯಿಂದ ಕ್ರೂರ ಅಸುರನಮುರಿದು ಧರೆಯನುದ್ಧರಿಸಿದೆಘೋರವ್ಯಾಧಿಸಮುದ್ರದಿಂದು-ದ್ಧರಿಸೊ ಎನ್ನ ಕೃಪಾನಿಧೆ 1ಸುರರ ಪೊರೆಯಲು ಅಮೃತ ತಂದೆಪರಮಪೂರುಷಭೇಷಜಶಿರ ಉರಾದಿ ಸರ್ವ ಅಂಗದಿಸುರಿದು ಅಮೃತವಪೊರೆಎನ್ನ2ಮೃತ್ಯು ಮೃತ್ಯುವೆ ದಯದಿ ಎನ್ನಪ -ಮೃತ್ಯು ತರಿದು ಪಾಲಿಸೊನಿತ್ಯಸುಖಮಯ ವಿಧಿಯತಾತಪ್ರಸನ್ನ ಶ್ರೀನಿವಾಸನೆ 3
--------------
ಪ್ರಸನ್ನ ಶ್ರೀನಿವಾಸದಾಸರು