ಒಟ್ಟು 21 ಕಡೆಗಳಲ್ಲಿ , 16 ದಾಸರು , 19 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೋಗಣೆಯ ಮಾಡು ಸಾರಸುಖದೊಡೆಯ ಪ. ಸತ್ಯವಾದ ಜಗಕೆ ಕರ್ತುಕಾರಣ ನೀನೆ ಮುಕ್ತಿದಾಯಕ ನಿತ್ಯತೃಪ್ತನಹುದೈ ಸತ್ಯವಾದವತಾರ ಸಕಲಗುಣ ಪರಿಪೂರ್ಣ ಸಿರಿ ಪರಮ ದಯಾಳು1 ಅಣುರೋಮಕೂಪದಲಿ ಅಂಡಜಾಂಡಗಳಿರಲು ಘನಕೃಪಾಂಬುಧಿ ನಿಮ್ಮ ಪೊಗಳಲಳವೆ ಫಣಿಶಾಯಿಯಾಗಿದ್ದ ಭುವನವ್ಯಾಪಕ ಹರಿಯ ಘನಭಕುತಿಲ್ಯಜಭವರು ಪೂಜೆಮಾಡುವರು 2 ಗಂಗೆಗೋದಾವರಿ ತುಂಗಭದ್ರೆ ಯಮುನೆ ರÀಂಗಸನ್ನಿಧಿಯಾದ ಕಾವೇರಿಯು ಮಂಗಳ ಭೀಮರಥಿ ನಿಮಗೆ ಮಜ್ಜನಕೆ ಅಣಿಮಾಡಿ ಅಂಗಜನಯ್ಯ ಭಾಪೆಂದು ಪೊಗಳೆ 3 ರನ್ನಮಯವಾಗಿರ್ದ ಹೊನ್ನಮಂಟಪದೊಳಗೆ ಸ್ವರ್ಣಪಾತ್ರೆಗಳಲ್ಲಿ ಸ್ವಯಂಪಾಕವು ನಿನ್ನ ಸೊಸೆ ವಾಣಿ ಭಾರತಿದೇವಿ ಕಡುಜಾಣೆ ಚೆನ್ನಾಗಿ ನೈವೇದ್ಯವನ್ನೆ ಮಾಡುವರು 4 ಗಂಧ ಕಸ್ತೂರಿ ಪುನುಗು[ಚಂದನ] ಜವ್ವಾಜಿ ಮುಂದೆ ಕುಂಕುಮದ ಕೇಸರಿಯ ಲೇಪ ಚೆಂದದ ಕೇದಿಗೆ ಮುಡಿವಾಳ ಸಂಪಿಗೆ ಕಂದರ್ಪನಯ್ಯಗೊಪ್ಪಿತು ಮಲ್ಲಿಗೆ 5 ದೆಸೆದೆಸೆಗೆ ಪರಿಮಳಿಪ ಕುಶಲದ ಚಿತ್ರಾನ್ನ ಬಿಸಿದೋಸೆಗೆ ಬೆಣ್ಣೆ ಲೇಹ್ಯಪೇಯ ಬಸಿರೊಳಗೆ ಈರೇಳು ಜಗವನಿಂಬಿಟ್ಟವಗೆ ನಸುನಗುತ ಇಂದಿರಾದೇವಿ ಬಡಿಸೆ 6 ನೂರು ಯೋಜನದಗಲ ಸರಸಿಜ ಬ್ರಹ್ಮಾಂಡ ಹದಿ ನಾರು ಬಣ್ಣದ ಚಿನ್ನದ್ಹರಿವಾಣವು ಸಾರೆಯಲಿ ಪೊಂಬಟ್ಟಲೆಂಬ ಸಾಗರದೊಳಗೆ ಮೇರುಗಿರಿಯೆಂಬೊ ದೀಪಗಳು ಬೆಳಗೆ 7 ಘೃತ ಸೂಪ ಲೋಕಪತಿಗನುವಾದ ದಿವ್ಯಾನ್ನವು ಬೇಕಾದ ಪಂಚಭಕ್ಷ್ಯ ರಸಾಯನವ ಏಕಾಂತದಲ್ಲಿ ನಿಮ್ಮ ದೇವಿ ಬಡಿಸೆ 8 ಖಳರಕುಲವೈರಿಗೆ ತಿಳಿನೀರುಮಜ್ಜಿಗೆ ಎಳನೀರು ಪಾನಕ ಸೀತಳುದಕ ಬಳಲಿದಿರಿ ಬಳಲಿದಿರಿ ಎನುತ ಹಯವದನಗೆ ನಳಿನಾಕ್ಷಿ ಕರ್ಪೂರವೀಳ್ಯವನೆ ಕೊಡಲು 9
--------------
ವಾದಿರಾಜ
ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನುದೋಷ ರಾಶಿ ನಾಶ ಮಾಡು ಶ್ರೀಶ ಕೇಶವ ಪ ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿ ನಿನ್ನಚರಣ ಸ್ಮರಣೆ ಕರುಣಿಸಯ್ಯ ನಾರಾಯಣ1 ಕಲುಷ ಮಾಧವ 2 ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನುಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ 3 ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ 4 ಪಾದ ಪೂಜೆ ಮುದದಿ ಗೈವೆನಯ್ಯ ನಾನುಹೃದಯದೊಳಗೆ ಒದಗಿಸಯ್ಯ ಮಧುಸೂದನ 5 ಕವಿದುಕೊಂಡು ಇರುವ ಪಾಪ ಸವೆದು ಹೋಗುವಂತೆ ಮಾಡಿಜವನ ಬಾಧೆಯನ್ನು ಬಿಡಿಸೊ ಘನ ತ್ರಿವಿಕ್ರಮ 6 ಕಾಮಜನಕ ನಿನ್ನ ನಾಮ ಪ್ರೇಮದಿಂದ ಪಾಡುವಂಥನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ 7 ಸದನ ಮಾಡು ಮುದದಿ ಶ್ರೀಧರ 8 ಹುಸಿಯನಾಡಿ ಹೊಟ್ಟೆ ಹೊರೆವ ವಿಷಯದಲ್ಲಿ ರಸಿಕನೆಂದುಹುಸಿಗೆ ನನ್ನ ಹಾಕದಿರೋ ಹೃಷಿಕೇಶನೆ 9 ಅಬ್ಧಿಯೊಳಗೆ ಬಿದ್ದು ನಾನು ಒದ್ದುಕೊಂಬೆನಯ್ಯ ಭವದಿಗೆದ್ದು ಪೋಪ ಬುದ್ಧಿ ತೋರೊ ಪದ್ಮನಾಭನೆ10 ಕಾಮಕ್ರೋಧ ಬಿಡಿಸಿ ನಿನ್ನ ನಾಮ ಜಿಹ್ವೆಯೊಳಗೆ ನುಡಿಸುಶ್ರೀಮಹಾನುಭಾವನಾದ ದಾಮೋದರ 11 ಪಂಕಜಾಕ್ಷ ನೀನು ಎನ್ನ ಮಂಕುಬುದ್ಧಿ ಬಿಡಿಸಿ ನಿನ್ನಕಿಂಕರನ್ನ ಮಾಡಿಕೊಳ್ಳೊ ಸಂಕರುಷಣ12 ಏಸು ಜನ್ಮ ಬಂದರೇನು ದಾಸನಲ್ಲವೇನೊ ನಿನ್ನಘಾಸಿ ಮಾಡದಿರೋ ಎನ್ನ ವಾಸುದೇವನೆ 13 ಬುದ್ಧಿ ಶೂನ್ಯನಾಗಿ ನಾನು ಕದ್ದ ಕಳ್ಳನಾದೆನಯ್ಯತಿದ್ದಿ ಹೃದಯ ಶುದ್ಧಿ ಮಾಡೊ ಪ್ರದ್ಯುಮ್ನನೆ 14 ಜನನಿ ಜನಕ ನೀನೆ ಎಂದು ಎನುವೆನಯ್ಯ ದೀನಬಂಧುಎನಗೆ ಮುಕ್ತಿ ಪಾಲಿಸಿಂದು ಅನಿರುದ್ಧನೆ 15 ಹರುಷದಿಂದ ನಿನ್ನ ನಾಮ ಸ್ಮರಿಸುವಂತೆ ಮಾಡು ನೇಮಇರಿಸು ಚರಣದಲ್ಲಿ ಕ್ಷೇಮ ಪುರುಷೋತ್ತಮ 16 ಅಧೋಕ್ಷಜ 17 ಚಾರುಚರಣ ತೋರಿ ಎನಗೆ ಪಾರುಗಾಣಿಸಯ್ಯ ಕೊನೆಗೆಭಾರ ಹಾಕಿ ಇರುವೆ ನಿನಗೆ ನಾರಸಿಂಹನೆ 18 ಸಂಚಿತಾರ್ಥ ಪಾಪಗಳನು ಕಿಂಚಿತಾದರುಳಿಯದಂತೆಮುಂಚಿತಾಗಿ ಕಳೆದು ಪೊರೆಯೊ ಸ್ವಾಮಿ ಅಚ್ಯುತ19 ಜ್ಞಾನ ಭಕ್ತಿ ಕೊಟ್ಟು ನಿನ್ನ ಧ್ಯಾನದಲ್ಲಿ ಇಟ್ಟು ಎನ್ನಹೀನ ಬುದ್ಧಿ ಬಿಡಿಸೊ ಮುನ್ನ ಜನಾರ್ದನ 20 ಜಪತಪಾನುಷ್ಠಾನ ನೀನು ಒಪ್ಪುವಂತೆ ಮಾಡಲಿಲ್ಲತಪ್ಪ ಕೋಟಿ ಕ್ಷಮಿಸಬೇಕು ಉಪೇಂದ್ರನೆ 21 ಮೊರೆಯನಿಡುವೆನಯ್ಯ ನಿನಗೆ ಸೆರೆಯ ಬಿಡಿಸು ಭವದ ಎನಗೆಇರಿಸು ಭಕ್ತರೊಳಗೆ ಪರಮಪುರುಷ ಶ್ರೀಹರೇ22 ಪುಟ್ಟಿಸಲೇ ಬೇಡವಿನ್ನು ಪುಟ್ಟಿಸಿದಕೆ ಪಾಲಿಸಿನ್ನುಇಷ್ಟು ಬೇಡಿಕೊಂಬೆ ನಾನು ಶ್ರೀಕೃಷ್ಣನೆ23 ಸತ್ಯವಾದ ನಾಮಗಳನು ನಿತ್ಯದಲ್ಲಿ ಪಠಿಸುವವರಅರ್ತಿಯಿಂದ ಕಾಯದಿರನು ಕರ್ತೃ ಕೇಶವ 24 ಮರೆತು ಬಿಡದೆ ಹರಿಯ ನಾಮ ಬರೆದು ಓದಿ ಕೇಳುವರಿಗೆಕರೆದು ಮುಕ್ತಿ ಕೊಡುವ ಬಾಡದಾದಿಕೇಶವ 25
--------------
ಕನಕದಾಸ
ಉ. ತತ್ವ ವಿವೇಚನೆ ಹರಿಯಾದರೇನು ತಾ ಹರನಾದರೇನು ಮೂರ್ತಿ ದೊರಕಿ ಫಲವೇನು ಪ ಪಿತನೊಳಗೆ ಸೇರದಿಹ ಸುತನಿಂದ ಫಲವೇನು ಸತಿ ಇದ್ದರೇನು ಮತಿಹೀನ ಗುರು ತಾನು ಜೊತೆಯಾಗಿ ಇದ್ದರೇನು ಮತ ಮೀರಿ ನಡೆವಾತ ಯತಿಯಾದರೇನು 1 ಸಾಯವಿಲ್ಲದ ನ್ಯಾಯ ಸತ್ಯವಾದರೆ ಏನು ಬಾಯಸವಿಯಿಲ್ಲದ ರಸಾಯನದಲೇನು ಕಾಯ ಕುಂದಿದ ಮೇಲೆ ಜೀವದಾಶೆಯದೇನು ಮಾಯವಾದಿಯ ಮಾತು ಮತ್ತೆ ದೃಢವೇನು 2 ಋಣವ ಮಾಡಿದ ತಾತ ಗುಣವಂತನಾದರೇನು ಭಣಿತೆ ತಪ್ಪಿದ ತಾಯಿ ರಕ್ಷಿಣಿಯು ಆದರೇನು ಎಣಿಕೆ ಬಾರದ ಮನುಜ ಕರಣಿಕನಾದರೇನು ಫಣಿರಾಜನೊತ್ತಿನೊಳು ಹಣವಿದ್ದರೇನು 3 ವಿಪ್ರ ವೇದ ಓದಿದರೇನು ಮಾದಿಗನು ತಾ ಮಡಿಯನುಟ್ಟರೇನು ಬೂದಿಮುಚ್ಚಿದೆ ಕೆಂಡವಾದ ಸೋದರವೇನು ಸಾಧಿಸುವ ಊರೊಳಗೆ ಆದ ಫಲವೇನು 4 ಹರಿಯನರ್ಚಿಸದಿರ್ದ ಕರವಿರ್ದು ಫಲವೇನು ಹರಿಯ ಸ್ಮರಣೆಯ ಮಾಡದರಿಯದವನೇನು ಸಿರಿಯು ನಿಲ್ಲದ ಗೃಹದ ಪರಿಯ ಸೌಖ್ಯವದೇನು ಮರೆಯಾದ ಮನುಜನೊಳು ವ್ಯವಹಾರವೇನು 5 ವಾರಿಯಿಲ್ಲದ ಊರ ಸೇರಿರ್ದು ಫಲವೇನು ಚೋರನೊಡನೇ ದಾರಿ ನಡೆವುದೇನು ಬೇರು ಇಲ್ಲದ ವೃಕ್ಷ ಏರಿ ನೋಡುವುದೇನು ಮಾರಿ ಮನೆಯೊಳಗಿರಲು ಸಾಕಾರವೇನು 6 ಲಕ್ಷಣದ ಮೂರ್ತಿಯಿರಲಕ್ಷಯವ ತೋರುವುದು ಪಕ್ಷಿವಾಹನ ಲಕ್ಷ್ಮ್ಯಪೇಕ್ಷೆಯಾಗಿಹರು ಲಕ್ಷಣವಿರಹಿತ ನರ ಪ್ರದಕ್ಷಿಣದಿ ಬಳಲಿದರು ಭಿಕ್ಷುಕನೇ ಸರಿಯಾತನೀಕ್ಷಿಸರು ಜನರು 7 ಬುದ್ದಿವಂತರ ಕೈಯ ಶುದ್ಧವಾದೆರಕದಲಿ ತಿದ್ದಿರ್ದ ಮೂರ್ತಿಯನು ಕದ್ದುಕೊಂಡು ಹೊದ್ದಿ ಬಲವಂತನೊಳು ಬದ್ದವಾಗಿರುತಿರ್ದು ಎದ್ದು ಹೋಗದ ಸ್ಥಳದಿ ಮುದ್ದನಾಗಿಹುದು 8 ಕಾಮಿತಾರ್ಥನೀವ ಸೀಮೆಯಲಿ ಕೌರವನು ರಾಮರಾಜ್ಯದಿ ಬೇಡಿಕೊಳಲು ಕೊಡುತಿಹನು ಪ್ರೇಮದೊಳು ವರಾಹತಿಮ್ಮಪ್ಪ ಮನದಣಿಯೆ ಸೌಮನಸ್ಯವೀವ ಬರಿದೆ ಬಳಲದಿರು 9
--------------
ವರಹತಿಮ್ಮಪ್ಪ
ಕೊಳಲೂದೋ ರಂಗಯ್ಯ ರಂಗ ನೀ ಕೊಳಲೂದೋ ಕೃಷ್ಣಯ್ಯ ಪ ಕೊಳಲೂದೋ ಗೋವಳರೊಡಗೂಡಿ ಚೆಲುವ ಶ್ರೀ ವೇಣುಗೋಪಾಲ ಕೃಷ್ಣ ನೀ 1 ಕಡಲೊಳಗಿದ್ದು ಬಂದ್ಹಡಗದಿಂದಲಿ ಕಡಗೋಲ ಪಿಡಿದ ಉಡುಪಿಯ ಕೃಷ್ಣ ನೀ 2 ಎಂಟು ಮಂದ್ಯತಿವರ್ಯರು ನಿನ್ನ ಸೇವೆಗೆ ಬಂಟರಾಗಿಹರ್ವೈಕುಂಠಪತಿ ಕೃಷ್ಣ ನೀ 3 ನಿಜಭಕ್ತರು ಕೈಬೀಸಿ ಕರೆಯಲು ರಜತಪೀಠದ ಪುರವಾಸ ಕೃಷ್ಣ ನೀ 4 ಸತ್ಯವಾದ ಜ್ಞಾನ ಪೂರ್ಣಾನಂದ- ತೀರ್ಥರ ಕರವಶವಾದ ಕೃಷ್ಣ ನೀ 5 ಅಂದಿಗೆ ಕಿರುಗೆಜ್ಜೆ ಘಲ್ಲು ಘಲ್ಲೆನುತ ಕಾ- ಳಿಂಗನ್ನ್ಹೆಡೆಯಲಿ ಕುಣಿದಾಡೊ ಕೃಷ್ಣ ನೀ 6 ದಾಸರ ಮನದಭಿಲಾಷೆ ಪೊರೈಸಿ ಭೀ- ಮೇಶಕೃಷ್ಣನೆ ದಯ ಮಾಡೊ ರಂಗ ನೀ 7
--------------
ಹರಪನಹಳ್ಳಿಭೀಮವ್ವ
ಗುರು ಚರಣವನು ಸಂಸ್ಮರಿಸಿರೋ ಪಗುರು ಲಕ್ಷ್ಮಿ ವರಜಾತ | ಗುರು ಲಕ್ಷ್ಮಿಪ್ರಿಯ ತೀರ್ಥ ಚರಣ ಸರಸಿಜ ಭಜಿಸೆ | ಕರಣದಂತರ ಬಾಹ್ಯ ಪರಿಶುದ್ಧಿಯನೆ ಗೈದು | ಜ್ಞಾನ ಭಕ್ತಿಯನಿತ್ತು ಹರಿ ಪೊರೆವ ಸಂತತದಲಿ ಅ.ಪ. ಪೂರ್ವಾಶ್ರಮಾ ನಾಮ | ಭೂವಿಬುಧ ಕೃಷ್ಣಾಖ್ಯ ದೇವರಾಯನ ದುರ್ಗ | ದಾವ ನರಸೀಪುರದಿಆವಾಸಿಸುತ್ತಿರಲು | ಓರ್ವ ಸಖನಿವರ ಜ್ಞಾನಾನುಸಂಧಾನದಾ |ಭಾವ ತಿಳಿಯುತ ಮನದ | ಯಾವ ದೊಂದಭಿಲಾಷೆನೀವು ಸಲಿಸುವುದೆನ್ನೆ | ಆವುದೆನುತಲಿ ಕೇಳೆಯಾವ ಪನಸದ ಫಲವ | ಆಸ್ವಾದು ಮಧು ಒಡನೆಓವಿ ಕರಡಿಯು ಕಲಸಿದ 1 ಅದರ ಪ್ರಾಪುತಿಗಾಗಿ | ಬದಿವನನೊಂದಿನವುಬೆದರದಲೆ ಪೊಗುತಿರಲು | ಎದುರೊಂದು ಶಿಲೆ ಮೇಲೆವದಗಿ ಕಲಸಿದ ಕಂಡು | ಅದರೊಡನೆ ಮರನೇರೆ ಬಂದಿತದು ಮರಿಗಳೊಡನೆ |ಅದಕು ಇವರಿಂಗಾಯ್ತು | ಕದನವೂ ಕೆಲಕಾಲ ಒದಗೆ ಜಯ ವಿಬುಧರಿಗೆ | ಹದುಳದಲಿ ಗೃಹಸೇರಿಮುದದಿಂದ ಶ್ರೀಹರಿಯ | ಪದ ಸ್ಮರಣೆಯಲ್ಲವರು ದಿನಗಳನೆ ಕಳೆಯುತಿಹರು 2 ಯತಿ ಲಕ್ಷ್ಮಿ ವರರಿಂದ | ಯತಿಗಳಾಶ್ರಮ ಪೊಂದಿಹಿತದಿಂದಲಾ ಬೂದಿ | ನೆತ್ಯಾಖ್ಯ ಗ್ರಾಮದಲಿಸ್ಥಿತರಾಗಿ ಶಿಷ್ಯರಿಗೆ | ಹಿತದ ಉಪದೇಶವ ಪ್ರೀತಿಯಲಿ ಮಾಡುತಿರಲು |ಯತಿಗಳಾಶ್ರಮದಲ್ಲಿ | ಮತಿ ವಂತ ವಿಪ್ರೋರ್ವಕ್ಷಿತಿಯೊಳಾ ನಾಕನಿಭ | ಮಂತ್ರ ಮಂದಿರ ಸೇವೆ ಅತಿಹಿತದಲೆಸಗುತಿರೆ | ಯತಿಗಳಾಶೀರ್ವದಿಸೆ ಪಥವಾಯ್ತು ಪ್ರಿಯರಲ್ಲಿಗೇ 3 ಪತಿ ಸೇವೆ | ಯುಕುತನಾಗಿರಲ್ವೊರೆದು ನಾಲ್ವತ್ತು ದಿನ ಮಿತಿಯಲಿ |ಕಕುಲಾತಿ ತೊರೆದು ನಿಜ | ಭಕುತಿಯಿಂ ಗೈವುತಿರೆಲಕುಮಿ ಪ್ರಿಯರಾಚಾರ | ಉಕುತಿಯಲಿ ದುರ್ಭಾವಪ್ರಕಟವಾಗಲು ಮನದಿ | ಬಂಕಪುರ ಮಾರ್ಗವನೆ ತೆರಳಲನುವಾದನೂ 4 ಮತ್ತೆ ನರಹರಿ ತಾನು | ವ್ಯಕ್ತಯಿಂತೈಜಸನುಒತ್ತಿಪೇಳಲು ಬುಧನು | ಮತ್ತೆ ಗುರುಪದಕೆರಗಿಬಿತ್ತರಿಸೆ ತನ್ನಸ್ವಪ್ನ | ವಾರ್ತೆಗಳ ವಿಶ್ವಮಿತ್ರನ ಭಾವವನೆ ತೋರುತ |ಇತ್ತಲಿಂದೆರಡೊರ್ಷ | ಕಿತ್ತಪೆವು ಆಶ್ರಮವಆರ್ಥಿಯಿಂದಿರುತಿರ್ದು | ಹಸ್ತಿವರದನ ಸೇವೆಉತ್ಸಹದಲೆಸಗುವುದೆ | ನುತ್ತಲಾಶೀರ್ವದಿಸಿ ಚಿಂತಿಸುತ್ತಿರೆ ಹರಿಯನು 5 ಗ್ರಾಮದೊಳಗುಳ್ಳ ಖಲ | ಸ್ತೋಮ ಬಂದಡರುತ್ತಭೂಮಿ ಗೋಸುಗ ಕಲಹ | ಸೀಮೆ ಮೀರುತ ಗೈಯ್ಯೆಅ ಮಹಾಯತಿವರ್ಯ | ಭೂಮಿ ಕೃಷ್ಣಾಂಕಿತವುಕಾಮನೆಯ ಬಿಡಿರೆನುತಲಿ | ನೇಮದಲಿ ಘರ್ಜಿಸಲು |ಆ ಮಹಾ ದುಷ್ಟಜನ ಈ ಮರದ ಸಂಪದವ ಕಾಮಿಸುತ ಮನದಲ್ಲಿನೇಮದಿಂ ಪತ್ರೋರ್ವ | ಪಾಮರನ ಒಡನವರು ಯಾಮ ಸಂಜೆಲಿ ಕಳುಹಲು 6 ಪರಿವಾರ ಜನಕೆಲ್ಲ | ಇರುವ ನೆಲೆ ಬಿತ್ತರಿಸಿಸರಿಯುತಲಿ ಸುಕ್ಷೇಮ | ನೆರೆಯ ಸಾರುವುದೆನುತಒರೆಯಲೂ ಕೆಲವರು | ಮರೆಮಾಡಿ ತೃಣ ಬಣವಿ ನೆರೆ ಬಿಡದೆ ಸಾರುತಿರಲು |ವರನಿಶೀ ಸಮಯದಲಿ | ದುರುಳರೆಲ್ಲರು ಮಠಕೆಬರಬರುತ ಕವಣೆಕಲ್ | ನೆರೆಬೀರ್ವ ಜನಗಳೂಉರಿವ ತೃಣ ಬಣವಿಯಂ | ದುರೆ ಜ್ವಾಲೆ ಪರಿಕ್ರಮಣ ಭಯ ಭ್ರಾಂತಿಯಿಂದಿರುತಿರೆ 7 ಸಿರಿ ಹರಿಯ ನಮಿಸುತಿರಲು 8 ಪರಿ | ಚರರಿಘರಸುತ್ತ ಬಲುಪರಿಯ ಹರಿ ಮಹಿಮೆಗಳ | ಒರೆಯುತಾನಂದಾಶ್ರೂ ಸುರಿಸುತವ ಶೇಷನಿಶಿ | ಹರಿಕರುಣ ಸ್ಮರಣೆಯಲಿ ಸರಿಸಿದರು ಶಿಷ್ಯರೊಡನೇ 9 ಗರ ಮಿಶ್ರ | ಯತಿಗೆ ಬಡಿಸೇ ಜೀರ್ಣಿಸುತ ಪಾಪಿ ವಿಪ್ರರ್ಗೆ | ಗತಿಸಿದವು ಅಕ್ಷಿಗಳು ಮೃತ್ಯಂತಲಂದರಾಗಿ 10 ಗರ ಮಿಶ್ರ | ಸತ್ಯವಾದುದ ಕಂಡು ಪ್ರೋಕ್ಷಿಸಲು ಶಂಖದುದಕ |ವ್ಯಕ್ತವಾಯಿತು ಇವರ | ಉತ್ತುಂಗ ಮಹಿಮೆಗಳುಹಸ್ತಿವರದನು ಭೋಜ್ಯ | ವಸ್ತುಗಳ ಸ್ವೀಕರಿಸಿದತ್ತ ಮಾಡಲು ಪುನಃ | ಮತ್ತೆ ಜೀರ್ಣಿಸಿಕೊಂಡು ಹರಿಯನ್ನೆ ಚಿಂತಿಸುತಲಿ 11 ನೆಲೆಸಿರಲ್ಲಬ್ಬುರೊಳು | ಗಳ ಗ್ರಾಹಕರು ಮತ್ತೆಮಿಳಿತರಾಗುತ ರಾತ್ರಿ | ಛಲವ ಸಾಧಿಸೆ ನಿಶಿತಅಲಗು ಕತ್ತಿಯ ಪಿಡಿದು | ನೆಲಕೆ ಯತಿ ಶಿರವನ್ನು ಇಳಹುವ ಮತಿ ಮಾಡಲೂ |ಒಲವಿನಿಂ ಯತಿಯಕುಲ | ತಿಲಕ ವೃಂದಾವನವ ಬಳಸಿ ನಮಿಸಲು ಸಂಜೆ | ಯಲಿ ಪೇಳ್ದ ಬ್ರಹ್ಮಣ್ಯಒಳ ಪೊಗುತಲಾರಾಮ | ನೆಲೆಸೇರಿ ಮಠಸಾರಿ ಎಂದೆನುತ ಎಚ್ಚರಿಸಿದರ್12 ಮತ್ಸರಿಗಳಿನ್ನೊಮ್ಮೆ | ಕುತ್ಸಿತದ ಬುದ್ಧಿ ಮಹಉತ್ಸವದ ಸಮಯದಲಿ | ಹೆಚ್ಚು ಜನ ಸಂಧಿಸಿರೆನೆಚ್ಚಿದ್ದ ಪಾಚಕರು | ಉಚ್ಚಳಿಸಿ ಕೆಲಸಾರೆ ಕೆಚ್ಚಿದೆಯನೇ ತೋರುತ |ಮುಚ್ಚಿಮಠದ್ವಾರಗಳ | ಹೆಚ್ಚುತಲಿ ಪಲ್ಯಗಳ ಮತ್ಸಕೇತನ ಪಿತನು | ಮೆಚ್ಚುವಂದದಿ ಪಾಕಪೆಚ್ಚಿಸುತಲಿ ಹರಿಯ | ಅರ್ಚನೆಯ ಕೈಕೊಂಡು ಮೆಚ್ಚಸಿದರು ಸುಜನರ 13 ಜ್ವರತಾಪದಿಂದೊಮ್ಮೆ | ನೆರೆ ಬಳಲು ವಂತಿರ್ಪಗುರುವರರ ಕಂಡೋರ್ವ | ವರ ಶಿಷ್ಯ ಪ್ರಶ್ನಿಸಲುನೆರೆ ಬದುಕ ಬೇಕೆಂಬ | ಶರಿರವನೆ ತೊರೆವೆ ನೆಂಬೆರಡುಕ್ತಿ ಸಲ್ಲದಿದಕೊ |ನರರಾಡಿ ಕೊಳದಂತೆ | ವರ ಭಿಷಜ ತಾಕೊಟ್ಟವರಗುಳಿಗೆ ನುಂಗುವೆವು | ಹರಿ ಪೂಜೆ ವಿರುದ್ಧಜ್ವರ ಕುಂಟಿ ಧನ್ವಣತ್ರಿ | ವರಮಂತ್ರ ಕೈ ಸೇರಿ ಪರಿಪರಿ ಮೆರೆಯುತಿರಲು 14 ಯತಿವರರ ಮಹಿಮೆಗಳ | ತುತಿಸಲೆನ್ನಳವಲ್ಲಯುಕ್ತಿಯಲಿ ಅಪವಾದ | ಹೊತ್ತು ಕೊಳದಲೆ ಅವರು ಜಿತ ಇಂದ್ರಿಯತ್ವವನು | ಮತಿಮತಾಂ ಸುಜನಕ್ಕೆ ಪ್ರತಿರಹಿತದಿಂ ತೋರುತ |ಹಿತದಿಂದ ಲಾರಾಮ | ಸೇತು ಯಾತ್ರೆಯ ಗೈದುಕ್ಷಿತಿ ಚರಿಸಿ ಬರಬರುತ | ಹಿತಶಿಷ್ಯ ವ್ಯಾಜದಿಂಸತ್ಯ ಧೀರ್ರನು ಚರರ | ಕೃತ ಬಹಿಷ್ಕರ ಗೆಲ್ದು ಶಾಂತತೆಯನೇ ತೋರ್ದರು 15 ವರಲಕ್ಷ್ಮಿ ಪ್ರಿಯ ತೀರ್ಥ | ಕರಗಳಿಂದರ್ಚಿತವುಪರಿಸರಾರ್ಚಿತ ಯೋಗ | ನರಹರಿಯು ವ್ಯಾಸಮುನಿವರದ ಗೋಪತಿ ಕೃಷ್ಣ | ಸಿರಿವ್ಯಾಸಯತಿ ರಚಿತ ಎರಡೇಳು ರಜತ ಪ್ರತಿಮೆ |ಗುರುವರ ಬ್ರಹ್ಮಣ್ಯ | ವರದ ವಿಠ್ಠಲದೇವಸರ್ವಜ್ಞರರ್ಚಿಸಿದ | ವರ ಶರಣ್ಯ ವಿಠಲನುನಿರುತ ಪೂಜಿತವಾಗಿ | ಶರಿರ ಭೌತಿಕ ಬಿಡುವ ವರ ಸಮಯ ತಾನುಸುರಿರೆ16 ಸಂತೈಸಿ ಇತ್ತರಾಶಿಷವ 17 ನೀಲ ಕಾಲ | ವರುಷವನು ಪೈಂಗಳವು | ಎರಡೊಂದನೇ ಮಾಸವರಶುಕ್ಲ ಹರಿದಿನದಿ | ಸರಿತು ವರ ಕಣ್ವತಟಪರಮ ಸುಕ್ಷೇತ್ರದಲಿ | ವರಯೋಗ ಮಾರ್ಗದಲಿ ದೇಹ ಹರಿಗರ್ಪಿಸಿದರು 18 ಜಯ ಜಯತು ಶುಭಕಾಯ | ಜಯಜಯತು ತಪಶೀಲಜಯ ಶಮೋದಮವಂತ | ಜಯ ಶಾಪನುಗ್ರಹನೆಜಯಲಕ್ಷ್ಮಿ ವರಜಾತ ಜಯಲಕ್ಷ್ಮಿ ಪ್ರಿಯ ತೀರ್ಥ ಜಯ ಜಯತು ವಿಶ್ವಮಿತ್ರ |ಪ್ರಿಯ ಗುರುಗಳಾಂತರ್ಯ | ಜಯ ದೇವ ನೋಳ್ಪರಮಪ್ರಿಯನಾದ ತಂದೆ ಮುದ್ದು | ಮೋಹನ್ನ ವಿಠಲಾತ್ಮಜಯ ಗುರೂ ಗೋವಿಂದ | ವಿಠ್ಠಲನ ಭಜಿಸಿದರೆ ನಯಸುವನು ಪರಮಗತಿಗೆ 19
--------------
ಗುರುಗೋವಿಂದವಿಠಲರು
ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ ಪ ನಾನು ಎಂಬುದ ಬಿಟ್ಟ ಮೇಲೆ ನರಕವ್ಯಾತಕೆ ಅ.ಪ. ಮೃತ್ತಿಕೆ ಶೌಚ ಮಾಡದವನ ಆಚಾರವ್ಯಾತಕೆಸತ್ಯವಾದಿ ಆಗದವನ ನಂಬಿಗೆ ಯಾತಕೆ ||ಚಿತ್ತಶುದ್ಧಿ ಇಲ್ಲದವನ ವೈರಾಗ್ಯವ್ಯಾತಕೆಉತ್ತಮ ಹಿರಿಯರಿಲ್ಲದಂಥ ಸಭೆಯು ಯಾತಕೆ 1 ಪತಿಯ ಆಜ್ಞೆ ಮೀರಿದವಳ ವ್ರತಗಳ್ಯಾತಕೆಸತಿಗೆ ಅಳುಕಿ ನಡಿಯುವವನ ಸಾಹಸವ್ಯಾತಕೆ ||ಯತಿಯ ನಿಂದೆ ಮಾಡುವವನ ಮತಿಯು ಯಾತಕೆಅತಿ ವಿರೋಧ ಬಡಿಸುವಂಥ ಅಣ್ಣನ್ಯಾತಕೆ 2 ಹರಿಕಥೆಯ ಕೇಳದವನ ಕಿವಿಯು ಯಾತಕೆಮುರಹರನ ಮೂರ್ತಿಯ ನೋಡದಂಥ ಕಂಗಳ್ಯಾತಕೆ ||ಮರುತ ಮತವ ಪೊಂದದವನ ಬಾಳ್ವೆ ಯಾತಕೆಎರಡಾರು ನಾಮವಿಡದ ಶರೀರವೇತಕೆ3 ತಂದೆ ತಾಯಿ ಮಾತು ಕೇಳದ ಮಕ್ಕಳ್ಯಾತಕೆಬಂಧು ಬಳಗ ಉಳ್ಳದವನ ಭಾಗ್ಯವ್ಯಾತಕೆ ||ಬಂದ ಅತಿಥಿಗನ್ನವನಿಕ್ಕದ ಸದನವೇತಕೆ ಗೋ-ವಿಂದನಂಘ್ರಿ ಸ್ಮರಿಸದಂಥ ನಾಲಿಗ್ಯಾತಕೆ 4 ಮಕ್ಕಳನ್ನ ಮಾರಿಕೊಂಬ ತಂದೆಯಾತಕೆರೊಕ್ಕಕಾಗಿ ಬಡಿದಾಡುವ ತಮ್ಮನ್ಯಾತಕೆ ||ಕಕ್ಕುಲಾತಿ ಬಡುವ ಸಂನ್ಯಾಸವ್ಯಾತಕೆಠಕ್ಕು ಭಕುತಿ ಮಾಡುವಂಥ ದಾಸನ್ಯಾತಕೆ 5 ಆಗಿ ಬರದವರ ಅನ್ನ ಉಣ್ಣಲ್ಯಾತಕೆರೋಗವಾದ ನರಗೆ ಹೆಣ್ಣಿನ ಭೋಗವ್ಯಾತಕೆ ||ಯೋಗಿಯಾದ ಮೇಲೆ ದ್ರವ್ಯದ ಆಶೆಯಾತಕೆಭಾಗೀರಥಿಯ ಮಿಂದ ಮೇಲೆ ಪಾಪವ್ಯಾತಕೆ 6 ವೇದವನ್ನು ಓದದಂಥ ವಿಪ್ರನ್ಯಾತಕೆಕಾದೊ ರಣಕೆ ಅಂಜುವಂಥ ಕ್ಷತ್ರಿಯನ್ಯಾತಕೆ ||ವಾದವನ್ನು ಮಾಡುವಂಥ ಬಂಟನ್ಯಾತಕೆಸಾಧುಗಳಿಗೆ ಎರಗದವನ ಶಿರವಿದ್ಯಾತಕೆ 7 ಯಾತ್ರೆ ತೀರ್ಥ ಮಾಡದಂಥ ಪಾದವ್ಯಾತಕೆಪಾತ್ರರ ಸಂಗವಾಗದವನ ಜನ್ಮವ್ಯಾತಕೆ ||ಸ್ತೋತ್ರಕೆ ಮರುಳಾಗುವವಗೆ ಸಾಧನ್ಯಾತಕೆಪಾರ್ಥ ಸಖನ ತಿಳಿಯದವನ ಜ್ಞಾನವ್ಯಾತಕೆ 8 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆಅರಿತು ವಿದ್ಯ ಪೇಳದ ಉಪಾಧ್ಯನ್ಯಾತಕೆ ||ಹರುಷವನ್ನು ತಾಳದಂಥ ಜ್ಞಾನಿ ಯಾತಕೆಕರಣ ಶುದ್ಧಿ ಇಲ್ಲದವನ ಸ್ನೇಹವ್ಯಾತಕೆ 9 ಗಾಣ ಕಟ್ಟಿದೆತ್ತಿಗೆ ಗೆಜ್ಜೆಯಾತಕೆ ||ರಾಣಿ ಇಲ್ಲದವನು ಮಾಡುವ ಬದುಕು ಯಾತಕೆತಾನು ಉಣ್ಣದೆ ಪರರಿಗಿಕ್ಕದ ಧನವಿದ್ಯಾತಕೆ 10 ಧರ್ಮವಿಲ್ಲದೆ ರಾಜ್ಯ ಆಳುವ ಪ್ರಭುವಿದ್ದ್ಯಾತಕೆಮರ್ಮವರಿತು ನಡೆಯದಂಥ ಹೆಣ್ಣು ಯಾತಕೆ ||ನಿರ್ಮಲಾಂಗನಾದ ಮೋಹನ ವಿಠಲನ ಗುಣಕರ್ಮ ಕ್ರಿಯಾ ತಿಳಿದ ಮ್ಯಾಲೆ ನಿರ್ಣಯವ್ಯಾತಕೆ 11
--------------
ಮೋಹನದಾಸರು
ತೀರ್ಥವು ಬೇಡಾ ಕ್ಷೇತ್ರವು ಬೇಡಾ ಜಪ ತಪ ಯೋಗವು ಬೇಡಾ ಪ ಪರ ಉಪಕಾರ ಶಾಸ್ತ್ರ ಪುರಾಣಗಳು ಬೇಡಾ | ಸ್ವಾಮಿ ಸದ್ಗುರು ಭವತಾರಕನ ಭಜಕರ ಪಾದವ ನೀ ಬಿಡಬೇಡಾ 1 ಸತ್ಯವು ಸಂಸಾರವು ಜಗವಿದು ಮಾಡೆಂಬರು ನೋಡೀಜನರು | ಮಿಥ್ಯವು ಸರ್ವವು ಜಗದೀಶನನು ತಿಳಿಯೆಂಬುವರಾ ಸಜ್ಜನರು || ಜಾಗ್ರದಿ ಸ್ವಪ್ನದಿ ಬಳಲುತ ನಲಿವುತ ಚರಿಸುವರಾ ಕಾರ್ಮಿಕರು | ತುರ್ಯಾವಸ್ಥೆಯೋಳ್ ಮರೆದು ತಮ್ಮನು ಇರುತಿಹರಾ ಸಾಧುವರು2 ಸಾರ ನಿವೃತ್ತಿಯ ಅರಿವುದೆ ಜೀವನ್ಮುಕ್ತಿ || ಇದರ ಹಂಚಿಕೆ ಮಾಡುತ್ತಿಹುದೇ ಅದುವೆ ಶಾಸ್ತ್ರದ ಯುಕುತೀ | ಸದಮಲ ಬೋಧಾನಂದವೆ ಬಲಿದರೆ ನಿಜವೇ ತಾ ಅವ್ಯಕ್ತಿ 3 ಅನುದಿನ ಮೂರ್ತಿ ಭವತಾರಕ ಭಜಕರ ಕೇಳೋ ನಿನ್ನ ಖೂನಾ 4 ಸಂಸಾರವ ಸದ್ಧರ್ಮದಲಿ ಸಾಧು ಸಂತರಂತೆ ನೀ ಮಾಡೊ | ಸಂಶಯವಳಿದು ಸರ್ವವು ಶಿವನೆಂದರಿದು ಅವರೊಳು ಕೂಡೊ | ಸತ್ತು ಹುಟ್ಟುವ ಕಟ್ಟಳೆಗಳನು ಕಿತ್ತಿ ಈಡ್ಯಾಡೊ | ನಿತ್ಯದಿ ಭವತಾರಕನ ಭಜಕರ ಸಂಗದಲಿ ಲೋಲ್ಯಾಡೊ 5 ಗುರು ವರನಲಿ ಸತ್ಪುರುಷರ ಬಳಿಯಲಿ ಅರಸಬಾರದು ಇಷ್ಟಾ | ಕುಲ ವಯ ಕ್ರಿಯಾ ಕರ್ಮವ ತಾಪತ್ರಯಗಳನೆಣಿಸುವ ಭ್ರಷ್ಟಾ | ಅನುಭವ ಜ್ಞಾನದಿ ಬೋಧದಿ ಲಕ್ಷ್ಯವೀಕ್ಷಿಸುವವನೆ ಶ್ರೇಷ್ಠಾ | ಇನಿತನು ಬಿಟ್ಟು ನಿಂದಿಸುವವನೆ ಭವದಲಿ ಬಡುವನು ಕಷ್ಟಾ 6 ಮೂರ್ತಿ ಭವತಾರಕ ಭಜಕರ ಸೂರ್ಯನ ಬಲ್ಲದೆ ಗೂಗಿ 7 ಭವ ದೋಷವು ಅಳಿವಹುದೇ? | ಗುರು ಭವತಾರಕ ಭಜಕರ ಬೋಧವು ಧರೆಯೊಳು ನರರಿಗೆ ಇಹುದೇ ? 8 ಮಾತು ಸತ್ಯವಾದರೆ ಆತಗೆ ಶಿವನೆನು- ತಿಹರೀ ಜಗ ಜನರೂ | ಭೂತಭವಿಷ್ಯತ್ ಹೇಳಲು ಭಕ್ತಿಯೊಳಾತಗೆ ನಡಕೊಂಬುವರೂ | ಭೂತಳದೊಳು ಭವತಾರಕ ಭಕ್ತರ ನೀತಿ ಮರೆತ ಪಾಮರರೂ | ನೂತನ ಖ್ಯಾತಿಯ ಕೊಂಡಾಡುತ ಬಹು ಪಾತಕಕೆಳಿ ಎಂಬುವರೂ 9 ಕರ ಭವ ಮೂರ್ತಿ ಭವತಾರಕ ಭಜಕರು ಇದ್ದ ಸ್ಥಿತಿಯನರಿಯರು 10 ಆಡುವರಾಟವ ಬಾಲರ ಮನೆಯಲಿ ಮಾಡುತ ಬ್ರಹ್ಮಾಂಡವನೂ |ನೋಡರು ಹಿರಿಯರು ಸಟೆಯೆಂದೇ ದಿಟ ಮಾಡುವರಿಹದಾಟವನೂ | ಪಾಡಲ್ಲೆನುತಲಿ ತಿಳಿದವರೊಳು ಬೇಡುವರಾ ನಾಕವನೂ | ರೂಢಿಯೊಳಗೆ ಭವತಾರಕ ಭಜಕರು ನೋಡರು ಪುಸಿಯೆಂದದನೂ 11 ನಿತ್ಯ ಪೂರ್ಣ ಭವತಾರಕನಂಘ್ರಿಯ ಹೊಂದದೆ ತಿಳಿಯದು ಗುಟ್ಟೂ 12 ಸಂಚಿತ ಪ್ರಾರಬ್ಧ ಕ್ರಿಯಮಾಣಾ ಜನರಿಗೆ ಬರೆದನು ಬ್ರಹ್ಮಾ | ಮುಂಚೆ ಶಿರವನು ನೀಗಿದಾ ಬರದವರಾರೊ ಆತಗೆ ತಮ್ಮಾ | ಮಿಂಚಿನಂತೆ ಜೀವನಕೆ ತಗಲುವಾ ಮಾಡುವ ಕರ್ಮಾ ಧರ್ಮಾ | ಹಂಚಿಕೆ ತಿಳಿಯದೆ ನುಡಿವರು ಮರುಳರು ವಂಚನೆ ಬಿಡು ಇದು ವರ್ಮಾ 13 ದೇವ ನೈವೇದ್ಯವು ಖೊಬ್ಬರಿ ಸಕ್ಕರಿ ಪನಿವಾರವು ನೋಡಿ | ಆವ ಕುಲದವನಾದರೂ ಏನು | ಇಲ್ಲದ ಹಂಚಿಕೆ ಮಾಡೀ ಭಾವಿಸಿ ಮೃಷ್ಟಾನ್ನವನಿಟ್ಟರೂ ಕುಲಧರ್ಮದಲ್ಲಿ ನೋಡೀ | ಕೇವಲ ಭವತಾರಕನ ಭಜಕರ ಮುಂದೆ ರಹಸ್ಯವ ಮಾಡೀ 14
--------------
ಭಾವತರಕರು
ದೇವ ಗುರುಸ್ತುತಿ ಅಂಗವೇ ಶ್ರೀ ಮಹಾಂಗಿರೀಶ ಲಿಂಗವಾದುದು ಸಂಗ ಸುಖದ ದುರಿತವೆಲ್ಲ ಹಿಂಗಿ ಪೋದುದು ಪ ನಿರ್ಮಲಾತ್ಮ ಗುರುಕಟಾಕ್ಷ ಮರ್ಮಸಿಕ್ಕಿತು ಕರ್ಮ ಹರಿದು ಜ್ಞಾನಜ್ಯೋತಿ ಬೆಳಕು ಮಿಕ್ಕಿತು ಧರ್ಮ ತತ್ವದಮೃತವೆಂಬ ಶರಧಿಯುಕ್ಕಿತು ಪ್ರೇಮದಿಂದ ಪ್ರಕಟವಾದ ಬ್ರಹ್ಮ ದಕ್ಕಿತು 1 ಮಾಯೆಯಿಂದ ಮಮತೆಯೆಲ್ಲ ಸತ್ಯವಾದುದು ನ್ಯಾಯಪಥವ ತಿಳಿಯೆ ಸರ್ವ ಮಿಥ್ಯವಾದುದು ಸಾಯುತೊಡನೆ ಹುಟ್ಟುವುದರ ಭೀತಿಪೋಪುದು ಕಾಯದೊಳಗೆ ದಿವ್ಯಜ್ಯೋತಿ ಪಥ್ಯವಾದುದು 2 ಪರಶಿವಾತ್ಮಲಿಂಗವೆನ್ನ ಮನಕೆ ಸಾರಿತು ತುಂಬಿ ತುಳುಕಿ ಬೀರಿತು ಪರಮಾನಂದರಸದ ಲಹರಿ ಉಕ್ಕಿ ಹರಿಯಿತು 3
--------------
ಭಟಕಳ ಅಪ್ಪಯ್ಯ
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಬಾ ಬಾ ಬಾ ಹರಿಯೇ ಮೂರ್ಲೋಕದ ದೊರೆಯೇ ಪ. ಸರ್ವೋತ್ತಮ ಸರ್ವಾಂತರ್ಯಾಮಕ ಸರ್ವಾಧಾರ ಪ್ರವೀರ ಶೂರವರ 1 ನಿತ್ಯಮುಕ್ತ ಪರಿಪೂರ್ಣಗುಣಾರ್ಣವ ಸತ್ಯನಿಯಾಮಕ ಸತ್ಯವಾದರೆ ತ್ವರೆ 2 ರೂಪತ್ರಯ ಭವತಾಪಶಮನ ಸ- ದ್ವ್ಯಾಪಕ ಸ್ಥಾಪಕ ಶ್ರೀ ಪುರುಷೋತ್ತಮ 3 ಭಜಕರ ಭಾಗ್ಯನಿಧಿಯು ನೀನೆಂಬುದು ನಿಜವಾಗಿರೆ ಶ್ರೀ ರುಜುಗಣೇಶಪತಿ 4 ಶ್ರೀಲಕ್ಷ್ಮೀನಾರಾಯಣ ನಿರ್ಗುಣ ಮೂಲೇಶ ಮುಕುಂದ ಮುನೀಂದ್ರವಂದಿತ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಾಯಿ ನಾರಿದ ಮೇಲೆ ಏಕಾಂತವೆತಾಯಿ ತೀರಿದ ಮೇಲೆ ತೌರಾಸೆಯೆ ಪ ಕಣ್ಣು ಕೆಟ್ಟ ಮೇಲೆ ಕಡುರೂಪು ಚೆಲ್ವಿಕೆಯೆಬಣ್ಣಗುಂದಿದ ಮೇಲೆ ಬಹುಮಾನವೆಪುಣ್ಯ ತೀರಿದ ಮೇಲೆ ಪರಲೋಕ ಸಾಧನವೆಸುಣ್ಣವಿಲ್ಲದ ವೀಳ್ಯವದು ಸ್ವಾದುಮಯವೆ 1 ಕಿಲುಬಿನಾ ಬಟ್ಟಲೊಳು ಹುಳಿ ಕಲಸಿ ಉಣಬಹುದೆಚಳಿಜ್ವರಕೆ ಚಂದನದ ಲೇಪ ಹಿತವೆಮೊಲೆಬಿದ್ದ ಹೆಣ್ಣಿನೊಳು ಮೋಹಕ್ಕೆ ಸೊಗಸಹುದೆಬೆಲೆಬಿದ್ದ ಸರಕಿನೊಳು ಲಾಭ ಉಂಟೆ 2 ನಿತ್ಯ ಸುಖವೆನಬಹುದೆಸತ್ತ್ವ ತಗ್ಗಿದ ಮೇಲೆ ಸಾಮಥ್ರ್ಯವೆಪೃಥ್ವಿಯೊಳು ಕಾಗಿನೆಲೆಯಾದಿಕೇಶವ ನಿನ್ನಸತ್ಯವಾದ ಭಕ್ತಿ ಇರದವಗೆ ಮುಕ್ತಿಯುಂಟೆ 3
--------------
ಕನಕದಾಸ
ಶ್ರೀರಾಘವೇಂದ್ರರು ಸಂತಜನರ ಪ್ರಿಯ ಸಂತತಕರುಣಿಸು ಮಂತ್ರಾಲಯ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ ಪ ಬಾಗಿವಂದಿಪೆ ದಯಾಸಾಗರ ನಿಜಯತಿ ರಾಘವೇಂದ್ರ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 1 ಜ್ಞಾನಕವಚ ತೊಟ್ಟು ಕ್ಷೋಣಿಯೊಳ್ ಅವತರಿಸಿದಿ ಜ್ಞಾನಶರಧಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 2 ಮೇದಿನ್ಯುದ್ಧರಿಸಿದಿ ವೇದವೇದಾಂತದ ಸ್ವಾದವರಿದು ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 3 ವಾದಿಮತರ ಕುವಾದ ಮುರಿದು ಸು ಮಂತ್ರಮೂರ್ತಿ ಗುರುನಾಥ 4 ಜಗದೊಳಗನುಪಮ ಭಗವದ್ಭಕ್ತಿ ಘನ ಮಿಗಿಲೆನಿಸಿದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 5 ನಿತ್ಯ ನೆನಿಪ ನಿಜ ತತ್ತ್ವದಾದಿ ಜಗ ಕುತ್ತರಿಸಿದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 6 ಸತ್ಯವಾದ ಪರಮಾರ್ಥಪಥದಿ ನಿಂತು ನಿತ್ಯದಾಡಿದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 7 ಪೃಥ್ವಿಯೊಳು ನಿಮ್ಮ ಭಕ್ತಜನರ ಬಿಡ ಗುರುನಾಥ 8 ಕೂಡಿಸಿ ದ್ವಿಜವೃಂದಾಡುತಲನುದಿನ ಮಂತ್ರಮೂರ್ತಿ ಗುರುನಾಥ 9 ನಿರುತ ಭೂಸುರಗಣಕ್ಹರುಷವಿತ್ತು ಸದಾ ಮಂತ್ರಮೂರ್ತಿ ಗುರುನಾಥ 10 ಬೇಡಿದವರಿಗೆ ಬೇಡಿದ ವರಗಳ ಮಂತ್ರಮೂರ್ತಿ ಗುರುನಾಥ 11 ಗಾಢಮಹಿಮೆ ತೋರಿ ರೂಢಿಜನರ ಕಾ ಪಾಡ್ಹಿದ್ಹಿತದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 12 ಧರೆಯೊಳು ನರಹರಿ ಶರಣಜನರ ಕೂಡಿ ಮಂತ್ರಮೂರ್ತಿ ಗುರುನಾಥ 13 ಮುಳುಗಿರ್ದ ಪುಣ್ಯಮಯದಿಳೆಯನು ನಿಮ್ಮೊಳು ಗುರುನಾಥ 14 ಧರ್ಮಗೆಟ್ಟಿಳಗೆ ಸದ್ಧರ್ಮ ಬಿತ್ತಿದಿ ಸ್ಥಿರ ಮಂತ್ರಮೂರ್ತಿ ಗುರುನಾಥ 15 ಸಾಧಿಸಿ ಮಹ ತಪದಾದಿ ಮೂರ್ತಿಯಿಂ ಮಂತ್ರಮೂರ್ತಿ ಗುರುನಾಥ 16 ನಿಗಮಾತೀತನೊಳ್ ಬಗೆಬಗೆಯಾಟವ ಮಂತ್ರಮೂರ್ತಿ ಗುರುನಾಥ 17 ಮಂಗಳಮೂರ್ತಿಯ ಕಂಗಳಿಂದ ಕಂಡು ಭವ ಮಂತ್ರಮೂರ್ತಿ ಗುರುನಾಥ 18 ತುಂಗನಿವಾಸ ಮಹ ಮಂಗಳಾಂಗ ಸುಜ ಮಂತ್ರಮೂರ್ತಿ ಗುರುನಾಥ 19 ನಿತ್ಯ ನಿಮ್ಮಪಾದ ಭಕ್ತಿಯಿಂ ಭಜಿಸಲು ಮಂತ್ರಮೂರ್ತಿ ಗುರುನಾಥ 20 ಮುಕ್ತಿದಾಯಕ ಜಗದಾಪ್ತ ಶ್ರೀರಾಮನಂ ಮಂತ್ರಮೂರ್ತಿ ಗುರುನಾಥ 21
--------------
ರಾಮದಾಸರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಭೂರಮಣಗೆ ಸುವ್ವಿ ಸುವ್ವಿ ಎಂದು ಪಾಡಿ ಸಜ್ಜನರೆಲ್ಲ ಕೇಳಿ ಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ವರ ವಾಣಿರಮಣಗೆ ಶರಣೆಂಬೆ ಸುವ್ವಿ ವರ ವಾಣಿರಮಣಗೆ ಶರಣೆಂದು ಪೇಳಿದ ಗುರುವಾದಿರಾಜೇಂದ್ರನ ಕೃತಿಯೆಂದು ಸುವ್ವಿ 1 ¥ಕ್ಕಿವಾಹನ್ನ ಜಗಕ್ಕೆ ಮೋಹನ್ನ ರಕ್ಕಸದಾಹನ್ನನಿವ ಸುವ್ವಿ ರಕ್ಕಸದಾಹನ್ನನಿವ ತನ್ನ ಮರೆ- ಹೊಕ್ಕರ ಕಾಯ್ವ ಪ್ರಸನ್ನನಿವ ಸುವ್ವಿ 2 ಯಶೋದೆಯ ಕಂದ ತನ್ನ ವಿಷವನುಣ್ಣೆಂದ ಕರ್ಕಶದ ಪೂತನಿಯ ಶಿಶುವಾಗಿ ಸುವ್ವಿ ಕರ್ಕಶದ ಪೂತನಿಯ ಶಿಶುವಾಗಿ ಕೊಂದ ನಮ್ಮ ಎಸೆವ ಗೋವಿಂದ ಪಾಲಿಸ ಬಂದ ಸುವ್ವಿ 3 ಶಕಟಾಸುರನ್ನ ಮೆಟ್ಟಿ ಕೊಂದ ಬಲು ವಿಕಟ ದೈತ್ಯನ್ನ ಕೊರಲೆತ್ತಿ ಸುವ್ವಿ ವಿಕಟದೈತ್ಯನ್ನ ಕೊರಲೆತ್ತಿ ಕೊಂದು ಸರ್ಪನ ಮ- ಸ್ತಕದಮೇಲೆ ನಲಿವುತ ನಿಂದ ಸುವ್ವಿ4 ಕರುಗಳ ಕಣ್ಣಿಯ ಬಿಡುವಾಗ ನಾರಿಯರೆಲ್ಲರು ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುವ್ವಿ ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುರಿದು ಅವರ್ಬರಲು ಬೆಣ್ಣೆಯ ಕೊಂಡೋಡುವ ಸುವ್ವಿ 5 ಮತ್ತಿಯ ಮರಗಳ ಕಿತ್ತುವಾಗ ಅಲ್ಲಿ ಭೃತ್ಯರಿಗೊಲಿದು ವರವಿತ್ತ ಸುವ್ವಿ ಭೃತ್ಯರಿಗೊಲಿದು ವರವಿತ್ತ ತನ್ನ ಮಿತ್ರಜನಕಾಗಿ ಗಿರಿಯೆತ್ತಿದನೆ ಸುವ್ವಿ 6 ವೃಂದಾವನದಿ ನಿಂದು ಚಂದದಿ ನಲಿವಾಗ ತನ್ನ [ಕೊಂದಪೆ]ನೆಂದು ಬಂದ ಬಕನ ಸುವ್ವಿ [ಕೊಂದಪೆ]ನೆಂದು ಬಂದ ಬಕನ ಸೀಳಿ ಪುಲ್ಲಂದದಿ ಕೊಂದು ಬಿಸುಟಾನೆ ಸುವ್ವಿ 7 ಕಲ್ಪತರುವಂತೆ ನಮ್ಮ ತನ್ನಧರಿಂದ ಕೊಳಲನೂದುವ ಚೆಲುವಗೆ ಸುವ್ವಿ ಕೊಳಲನೂದುವ ಚೆಲುವ ಗಾನಲೋಲ ಗೋ- ಪಾಲಕೃಷ್ಣನಿಗೆ ಶರಣೆಂಬೆ ಸುವ್ವಿ 8 ರಂಗ ರಾಸಕ್ರೀಡೆಯೆಂಬ ಶೃಂಗಾರರಸ ಬಸಿವ ಮಂಗಳ ವಿಲಾಸವನು [ರಚಿಸಿದ]ಸುವ್ವಿ ಮಂಗಳ ವಿಲಾಸವನು ರಚಿಸಿದಾತನ ಕಂಡು ದೇ ವಾಂಗನೆಯರೆಲ್ಲರು ತನುವ ಮರೆತರು ಸುವ್ವಿ 9 ಮಧುರೆಗೆ ಪೋಗಿ ಮಲ್ಲರಸುವ ನೀಗಿ ಮದಾಂಧ ಮಾವನ್ನ ಮಡುಹಿದ ಸುವ್ವಿ ಮದಾಂಧ ಮಾವನ್ನ ಮಡುಹಿದ ಶ್ರೀಕೃಷ್ಣ ಮುದದಿ ತನ್ನವರ ಮುದ್ದಿಸಿದ ಸುವ್ವಿ 10 ಧರ್ಮವ ಬಿಡಬೇಡ ದುಷ್ಕರ್ಮ ಮಾಡಬೇಡ ದುರ್ಮನವ ಬಿಡದೆ ಹರಿಯಲಿಡು ಸುವ್ವಿ ದುರ್ಮನವ ಬಿಡದೆ ಹರಿಯಲಿಡು ಮನವ ಕಾಮಿನಿಯೊಳಾಡಿ ಕೆಡಬೇಡ ಸುವ್ವಿ 11 ದುರುಳರ ನೋಡಿ ದೂರಕ್ಕೋಡು ಹರಿ- ಶರಣಡಿಗೆ ಪೊಡಮಡು ಸುವ್ವಿ ಶರಣರಡಿಗೆ ಪೊಡಮಡು ಶ್ರೀಕೃಷ್ಣನ ಸು- ಚರಿತವ ಪಾಡುವರೊಳಗಾಡು ಸುವ್ವಿ 12 ಏರಲರಿಯದವ ಮರನೇರಿ ಬಿದ್ದು ಸಾವಂತೆ ನೀರ ಮೀನುಗಳು ಕರಗುವಂತೆ ಸುವ್ವಿ ನೀರ ಮೀನುಗಳು ಕರಗುವಂತೆ ಮನುಜ ನೀ ಬಾರದ ಭಾಗ್ಯಕ್ಕೆ ಹೋರಬೇಡ ಸುವ್ವಿ 13 ಹಿಂದೆ ಪುಣ್ಯದ ಬೀಜವ ಕುಂದದೆ ಬಿತ್ತಿದರೆ ಇಂದು[ಬಾಹದೈಶ್ವರ್ಯ ಮುಂದಿಪ್ಪೋದು] ಸುವ್ವಿ ಇಂದು [ಬಾಹದೈಶ್ವರ್ಯ ಮುಂದಿಪ್ಪೋದು] ಬರಿದೆ ನೀ ನೊಂದು ವಿಧಿಯ ಬೈದರೆ ಎಂದೆಂದು ಕೆಡುವೆ ಸುವ್ವಿ 14 ದುರುಳ ಕೀಚಕ ಕೆಟ್ಟ ಪರಧನಕೆ ಮರುಳಾಗಿ ಕುರುರಾಯ ಸುವ್ವಿ ಪರಧನಕೆ ಮರುಳಾಗಿ ಕುರುರಾಯ ಕೆಟ್ಟನೆಂದು ಒರೆವ ಭಾರತವ ನಿರುತ ಕೇಳು ಸುವ್ವಿ 15 ವಾದಿಯೂ ಹರಿಯಾದ ಪ್ರತಿವಾದಿಯೂ ಹರಿಯಾದ ಭೇದವಿಲ್ಲವೆಂಬ ಮತದಲ್ಲಿ ಸುವ್ವಿ ಭೇದವಿಲ್ಲವೆಂಬ ಮತದಲ್ಲಿ ತಾನೊಬ್ಬನೇ ಕಾದಿ ಗೆದ್ದಾನೆಂತು ಬಿದ್ದಾನೆಂತು ಸುವ್ವಿ 16 ಎಲ್ಲ ಒಂದಾಂದರೆ ಶಾಲ್ಯಾನ್ನನುಂಬುವರು ಪುಲ್ಲನ್ಯಾಕೆ ಮೆದ್ದು ಬದುಕರು ಸುವ್ವಿ ಪುಲ್ಲನ್ಯಾಕೆ ಮೆದ್ದು ಬದುಕರು ಸ್ಥಳಚರರು ಜಲದೊಳು ಚರಿಸೆ ಅಳುವದ್ಯಾಕೆ ಸುವ್ವಿ 17 ವರ್ತಿಯ ಸಂಸಾರ ವ್ಯವಹಾರಕ್ಕೀಗ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಸುವ್ವಿ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಭೇದ ಸತ್ಯವಾದರೈಕ್ಯ ಎತ್ತಿಹೋದು ಸುವ್ವಿ 18 ಅತ್ತೆ ಸೊಸೆಯರಿದ್ದಾಗ ಮನೆಯೊಳು ಮತ್ಸರವು ಕತ್ತೆನಾಯಿಗಳಂತೇಕೆ ಬೆರಸರು ಸುವ್ವಿ ಕತ್ತೆನಾಯಿಗಳಂತೇಕೆ ಬೆರಸರು ಅದರಿಂದ ಪ್ರತ್ಯೇಕ ಜೀವರ ಇರವು ಸುವ್ವಿ 19 ಮಿಥ್ಯಾ ಭೇದಾದರೆ ಅದು ಶುಕ್ತಿರೂಪದಂತೆ ತ- ನ್ನರ್ಥವ ತಾ ಕಾಣಲರಿಯನು ಸುವ್ವಿ ತ- ನ್ನರ್ಥವ ತಾ ಕಾಣಲರಿಯನು ಅದರಿಂದ ನಾ- ವೆತ್ತಿದ ದೂಷಣೆಗೆ ಉತ್ತರವಿಲ್ಲ ಸುವ್ವಿ 20 ಬೊಮ್ಮ ಮಿಥ್ಯವಲ್ಲವೋ ನಿನ್ನ ಮಿಥ್ಯ ಶಶಶೃಂಗ ಸತ್ಯವಲ್ಲ ಸುವ್ವಿ ಮಿಥ್ಯಶ ಶಶೃಂಗ ಸತ್ಯವಲ್ಲ ಶೃಂಗ್ಯೆರಡು ಜ- ಗತ್ತಿನೊಳು ಕೂಡವು ಕುಯುಕ್ತಿಯ ನಿನಗಾವ ಕಲಿಸಿದ ಸುವ್ವಿ 21 ಸತ್ತ ಪೆಣನುಂಟು ಸಾಯದ ವಸ್ತುಂಟು ಸತ್ತು ಸಾಯದ ಮತ್ರ್ಯರಿಲ್ಲ ಸುವ್ವಿ ಸತ್ತು ಸಾಯದ ಮತ್ರ್ಯರಿಲ್ಲ ಮತ್ರ್ಯನಾಗಿ ನಿನ್ನ [ಮಿಥ್ಯಾವಾದ]ವೆಂತು ನಿತ್ಯವಹುದು ಸುವ್ವಿ 22 ಸತ್ಯವೆಂದರುಂಟು ಮಿಥ್ಯವೆಂದರಿಲ್ಲ ಎಂ- ಬರ್ಥ ತಾ ಕೂಡಲರಿಯದು ಸುವ್ವಿ ಎಂ- ಬರ್ಥ ತಾ ಕೂಡಲರಿಯದು ಅದರಿಂದ ಅರ್ಥವಪೇಳೆ ಮಿಥ್ಯಕೆ ನಾಮಾಂತರ ಸುವ್ವಿ23 ಭರ್ತೃಯಿಲ್ಲದವಳ ಮುತ್ತೈದೆಯೆಂಬಂತೆ ನಿನ್ನ ಮಿಥ್ಯಜಗಕಿಟ್ಟ ಸತ್ಯನಾಮ ಸುವ್ವಿ ಮಿಥ್ಯಜಗಕಿಟ್ಟ ಸತ್ಯನಾಮ ನಿನ್ನ ಯುಕ್ತಿಶೂನ್ಯನೆಂದು ಸುತ್ತ ನಗುತಿಪ್ಪುದು ಸುವ್ವಿ 24 ಇಲ್ಲ ಜಗವೆಂಬುದನು ಈಗ ಕಂಡದ ಕಾರಣ ಇಲ್ಲವಾತನ ವಾದಕ್ಕೆ ಪೊಗಳಲರಿಯದು ಸುವ್ವಿ ಇಲ್ಲವಾತನ ವಾದಕ್ಕೆ ಪೊಗಳಲರಿಯದ ಹೊಲೆಯನ [ಎಲ್ಲರರಿಯದಿದ್ದರೆ] ಹೊಲೆಜಾತಿ ಹೋಕ ಸುವ್ವಿ 25 ಗಿರಿಯ ಪಿರಿಯ ಗುಹೆಯೊಳು ದಳ್ಳುರಿಯ ಬೇಗೆಗೆ ಬೆಂದ ಕರಿಯನರಿಯದ ಕಾರಣ ಮರನ ಮುರಿವುದೆ ಸುವ್ವಿ ಕರಿಯನರಿಯದ ಕಾರಣ ಮರನ ಮುರಿವುದೆ ವಾದಿಯೀ ಪರಿಯಲಿ ನಿನ್ನ ಮಿಥ್ಯದಿ ಕಾರ್ಯವಾಗದು ಸುವ್ವಿ 26 ಹಳೆಯ ಮಲವೆಲ್ಲವು ಮಲವೆ ಅಲ್ಲದೆ ಮತ್ತೆ ಜಲಜಾಕ್ಷಿಯರ ಸಂಗಕ್ಕೆ ಪರಿಮಳವೀವುದೆ ಸುವ್ವಿ ಜಲಜಾಕ್ಷಿ ್ಷಯರ ಸಂಗಕ್ಕೆ ಪರಿಮಳವೀವುದೆ ಶೂಲದಿ ಸತ್ತ[ಪೆಣನು] ಸುಳಿವುತಿಪ್ಪುದೆ ಸುವ್ವಿ 27 ನಾಸ್ತಿಯೆಂಬ ವಸ್ತುವ ನಾಸ್ತಿಯೆಂದರಿಯದೆ ಆಸ್ತಿಯೆಂದು ಕಂಡರೆ ಅತಿಮೂರ್ಖ ಸುವ್ವಿ ಆಸ್ತಿಯೆಂದು ಕಂಡರೆ ಅತಿಮೂರ್ಖ ಅಕಟಕಟ ಜ- ಗತ್ತಿನ ಮಹಂತರ ಉನ್ಮತ್ತರ ಮಾಡಿದ ಸುವ್ವಿ 28 ಏಕಾಕಿ ನ ರಮತೆಯೆಂಬ ವೇದವಾಕ್ಯ ವಿ- ವೇಕಿಗಳೆಲ್ಲ ಬಲ್ಲರು ಸುವ್ವಿ ವಿ- ವೇಕಿಗಳೆಲ್ಲ ಬಲ್ಲರು ಅದರಿಂದ ನಿನ್ನ ಮುಕ್ತಿ ಏಕಾಕಿಯಾದರೆ ಶೋಕಕ್ಕೊಳಗಾದೆ ಸುವ್ವಿ 29 ಲೋಕದೊಳು ಹಾಳೂರ ಹಂದಿಯ ಬೇಸರದೆ ನೋಡೊ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ಸುವ್ವಿ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ನಮ್ಮ ಶ್ರೀ ವೈಕುಂಠದ ವಾಸನೆ ಲೇಸು ಸುವ್ವಿ 30 ಅಲ್ಲಿ ಸಹಬ್ರಹ್ಮಣಾ ಸರ್ವಕ ಮಂಗಳೆಂಬಾರಂತೆ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ಸುವ್ವಿ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ನೀ ಕೇಳು ಎಲ್ಲ ಮತ್ರ್ಯರಲ್ಲಿ ಹರಿಯನುವ್ರತರಂತೆ ಸುವ್ವಿ 31 ಅಲ್ಲಿ ನರ ನಾರಿಯರು ಚಿನುಮಯ ಚೆಲುವರಂತೆ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಸುವ್ವಿ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಅವರ ಶ್ರೀ- ವಲ್ಲಭ ಲಾಲಿಸಿ ಪಾಲಿಸುವನಚಿಂತೆ ಸುವ್ವಿ 32 ನಗರ ಕೃಷ್ಣಗೆ ಘನೋದಕದ ಮೇಲೆ ಮಿಂಚುತಿಪ್ಪುದು ಸುವ್ವಿ ಘನೋದಕದ ಮೇಲೆ ಮಿಂಚುತಿಪ್ಪುದು ಅಲ್ಲಿ ಮನೆ ಮನೆಯಲಿ ಮುಕ್ತರ ಸಂದಣಿ ಸುವ್ವಿ34 ಇಂತು ಹಯವದನ ನಿಶ್ಚಿಂತ ಜಗತ್ಕಾಂತ ಸಂತರನು ಸದಾ ಸಲಹುವ ಸುವ್ವಿ ಸಂತರನು ಸದಾ ಸಲಹುವ ಮಾರಾಂತರ ಕೃ- ತಾಂತನ ಬಳಿಗೆ ಕಳುಹುವ ಸುವ್ವಿ 35
--------------
ವಾದಿರಾಜ
ಸ್ಮರಿಸಿ ಸುಖಿಸೆಲೊ ಮಾನವಾ ಪ ಸ್ವಾನುಭಾವದಿಂದ ಸುಖವಬಡಿಪ ಗೋಪಾಲದಾಸ ರಾಜರಡಿಗಳನುದಿನಾ ಅ.ಪ. ಅಪಾರ ಜನುಮದ ದಾಸ್ಯಹರಿಸಿ ಸುಖಸಾರ ಸುರಿಪರನುದಿನಾ 1 ಸತ್ಯವಾದ ವಚನ ಸತ್ವಜೀವರಿಷ್ಟಗರೆವ ಚಿತ್ತದೊಳಗನುದಿನಾ 2 ಸರ್ವ ವಿಧದಿ ತೋಷಬಡಿಪ ತಂದೆವರದಗೋಪಾಲವಿಠಲನೇ ಸಾಕ್ಷಿಯಾಗಿಪ್ಪನನುದಿನಾ 3
--------------
ತಂದೆವರದಗೋಪಾಲವಿಠಲರು
ಸ್ವಸ್ತ ಮಾಡಿಕೊಳ್ಳಬೇಕು ವಸ್ತು ತನ್ನೊಳಾಗದ ಹಸ್ತ ನೀಡಲಿಕ್ಕೆ ಸ್ವಾಮಿ ವಿಸ್ತರಿಸಿ ತೋರುತದೆ ಧ್ರುವ ಸಾವಧಾನವಾಗಲಿಕ್ಕೆ ಸಾಧಿಸಿ ಬರುತದೆ ಭಾವ ಬಲಿದು ನೋಡಲಿಕ್ಕೆ ಕಣ್ಣಮುಂದೆ ಭಾಸುತದೆ ನಿವಾತ ಕೂಡಲಿಕ್ಕೆ ತಾನೆ ತಾನಾಗ್ಯದೆ ಆವಾಗ ನೋಡಿ ನಿಜ ಠವಠವಿಸುತದೆ 1 ಆರೇರಿವೆರದು ನೋಡಿ ಗುರುವಾಕ್ಯ ಮಿರಬ್ಯಾಡಿ ಸಾರವೆ ಆದೆ ನೋಡಿ ಗುರುಸೇವೆ ಪೂರ್ಣಮಾಡಿ ದೂರ ಹೋಗಿ ನೋಡಬ್ಯಾಡಿ ತಿರುಗಿ ನಿಮ್ಮೊಳು ನೋಡಿ2 ಇದ್ದಲ್ಲೆ ಅದ ಪೂರ್ಣ ಸದ್ಗುರು ಕರುಣ ಬಿದ್ದಲ್ಲೆ ಬಿದ್ದು ಘನ ಸತ್ಯವಾದ ನಿಜಘನ ಬುದ್ಧಿವಂತರ ಮನ ಗೆದ್ದು ಅಯಿತುನ್ಮನ ಸಿದ್ಧರ ನಿಜಸ್ಥಾನ ಶುದ್ಧ ಮಹಿಪತಿ ಸುಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು