ಒಟ್ಟು 1785 ಕಡೆಗಳಲ್ಲಿ , 108 ದಾಸರು , 1465 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
ನನ್ನದೇನಿದೆಯೊ ದೇವ ನಿನ್ನದೆ ಎಲ್ಲವೂ ಪ ಪನ್ನಗಾಸನ ಧೊರೆಯೆ ಸನ್ನುತಾಂಘ್ರಿಯ ಹರಿಯೆ ಅ.ಪ. ಅವನಿಯೊಳು ಪುಟ್ಟಿಸುವ ಭವದೊಳಗೆ ನೂಕುವವಕಿವಿ ಮೂಗು ಕಣ್ಣಿವದನವ ತ್ವಚೇಂದ್ರಿಯದಿ ಅವಿತು ವ್ಯಾಪ್ತತನಾಗಿ ವ್ಯವಹರಿಸುವವ ನೀನೇಅವಸರದಿ ಕಾಯುವ ದೇವ ನೀನೆಯೊ 1 ತಿಳಿಯುವವ ನೀನೆಯೊ ತಿಳಿಸುವವ ನೀನೆಯೊಗಳಿಸುವವ ನೀನೆಯೊ ಬಳಸುವವ ನೀನೆಯೊಬೆಳಿಸುವವ ನೀನೆಯೊ ಕಳೆಯುವವ ನೀನೆಯೊಕೊಳುವವನು ನೀನೆಯೊ ಕಸಿಯುವವ ನೀನೆಯೊ 2 ಅಂತರಂಗದಿ ಅಡಗಿನಿಂತು ಪ್ರೇರಿಸುವನಂತದ್ವಂದ್ವದ ನಟನೆ ಸ್ವಂತತನವೆನಗೆಲ್ಲಿಸಂತರನು ಉದ್ಧರಿಸಲಿಂತು ಭೂಮಿಗೆ ಬಂದುನಿಂತ ಗದುಗಿನ ವೀರನಾರಾಯಣನು ನೀನೆ 3
--------------
ವೀರನಾರಾಯಣ
ಆನಂದ ಚಂದಿರನೇ ದಾಸನನೇಕಿಂತು ಮರೆವೇ ಪ ದೀನ ದಯಾಪರ ನೀನು ಮನುಜಾಧಮ ನರ ನಾನು ಅ.ಪ ತ್ರಿಜಗಾಧಿಪ ಸುಪೂಜ್ಯನೇ | ಗಜರಾಜ ನತ ಪಾದನೇ ಅಜಸನ್ನುತ ವೈಭವನೇ | ಸುಜನಾವಳಿ ಸನ್ನುತನೇ 1 ಕರುಣಾಮಯ ಸಾಗರನೇ | ಪುರುಷೋತ್ತಮ ಮಾಧವನೇ ಉರಗಾಧಿಪ ಭೂಷಿತನೇ | ಗರುಡಧ್ವಜ ಕೇಶವನೇ2 ಕಡಲವಾಸ ದುರಿತನಾಶ | ಒಡಲ ಬೇಗೆ ಮನದ ಕ್ಲೇಶ ದಡಕೆಸೆಳೆದ ಬಂಧುನಾಶ | ಬಿಡಿಸಿ ಕಾವವ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಂಡೆ ಕಂಡೆ ಮುಚುಕುಂದವರದ ಮು- ಕುಂದ ಮೂಡಲಗಿರಿ ಗೋವಿಂದನ ಪ ಶರಧಿ ಬಿಟ್ಟು ಈ ಗಿರಿಯಲ್ಯಾಕೊ ನೀ ತೆರೆದ ಕಣ್ಣು ನಾರುವಮೈಗೆ ಬಿಳಿಯ ಕರ್ಪುರ ಪರಿಮಳದ ಸುವಾಸನೆಗೆ ಜರಿದು ಬಂದೆ ನಿನ್ನ ಪರಿಯ ನಾ ಬಲ್ಲೆ 1 ಛಲನ ಮೇಲೆ ನಿನ್ನ ಛಲವು ಯಾಕೊ ನೀ ಸುರರಸುರರ ಕೈಯಲಿ ಸಿಕ್ಕು ಭಾರ ತಿರುಗನುಪಕಾರ ಗಿರಿರಾಜನು ನಿನ್ನ ಸರಿಯೆಂದೆನಿಸುವ 2 ಬಲ್ಲೆ ಬಲ್ಲೆ ಕೋರ್ಹಲ್ಲುಗಳಿಂದ ಮೆಲ್ಲುತ ಬೇರನವಲ್ಯವನು ಎಲ್ಲ ನೀಗಿ ದಧ್ಯಾನ್ಯ ನೈವೇದ್ಯ ಚೆಲ್ವ ಧರಣಿಪತಿ ಬಲ್ಲಿದ ವರಾಹನ 3 ಕಂಬ ಒಡೆದು ಕರುಳ್ಹಾರವಲ್ಲದೆ ಕಂಡು ಅಜನ ಕಂಠಾಭರಣ ನೊಂದ ಮೈಗೆ ಪುನುಕಾಪು ಮಜ್ಜನ ತಾಂಬೂಲ ಮಂಚ ಸುಪ್ಪತ್ತಿಗೆಶಯನ 4 ದಾನ ಬೇಡಿದ ನೆಲ ಭೂಮಿಯ ಬಿಟ್ಟುರ- ಗಾದ್ರಿಯಲಿರುವುದು ಉಚಿತವಲ್ಲ ಸಾಧಿಸಿ ಬಲಿಯ ಪಾತಾಳಕೆ ಮೆಟ್ಟಿದ ಪಾದ ತೋರದಲಾಚ್ಛಾದನ ಮಾಡಿದಿ 5 ಪೊಡವಿದಾನ ನೆಲಬಿಡದೆ ಕೊಟ್ಟು ಅಡವಿ ಗುಡ್ಡದಲ್ಲಾವಾಸ ಕೊಡಲಿಪಿಡಿದು ತನ್ನ ಹಡೆದ ಮಾತೆಶಿರ ಕಡಿದ ಕೈ ಕೆಳಗೆ ಮಾಡ್ಹಿಡಿದಸುರನ 6 ಹೆತ್ತಜನಕ ಮನೆಬಿಟ್ಟು ಹೊರಡಿಸೆ ಉಟ್ಟ ನಾರ್ವಸÀ್ತ್ರ ಸಹಿತಾಗಿ ಲಕ್ಷ್ಮಿ ಲಕ್ಷಿಟ್ಟು ಬಂದ್ವಕ್ಷ ಸ್ಥಳದಲ್ಲಿರೆ ಅಷ್ಟಪದವಿಗಧಿಕಾರಿ ಎನಿಸಿದಿ 7 ಗೊಲ್ಲರೇಶ ಎಲ್ಲರಿಗುತ್ತಮನೆಂದು ಬಲ್ಲಿದಮುನಿ ಪಾದದ್ವೊದೆಯೆ ಕೊಲ್ಲಾಪುರ ಮನೆಮಾಡೆ ಮಹಾಲಕ್ಷುಮಿ ನಿಲ್ಲದೆ ಬಂದ್ವಾಲ್ಮೀಕವ ಸೇರಿದೆ 8 ಸಾರಿ ಹೇಳಿ ನೀ ನಿಗಮವ ನಿಂದ್ಯಮಾಡಿ ನಾರಿಯರ ವ್ರತವಳಿದು ಮಾರಜನಕ ಅಭಿಮಾನ ಬಿಟ್ಟರೆ ಅ- ಪಾರಮಹಿಮ ನಿನ್ನ ನೋಡಿ ನಗುವರೊ 9 ದೊರೆ ನಿನ್ನ ದರುಶನಕೆ ತ್ವರಿತದಿ ಜನರು ಮೂವತ್ತು ಗಾವುದ ಮೂರ್ಹೆಜ್ಜೆಯ ಮಾಡಿ ತುರಗನೇರ್ಹಾರಿಸಿ ಗಿರಿಯ ಬಿಟ್ಟೂ ್ಹೀದರೆ ವರದ ವೆಂಕಟನ್ಹಿಂದೆ ತಿರುಗುವರ್ಯಾರೊ 10 ನಿನ್ನ ನಾಮವ ತಂದೆನ್ನ ಜಿಹ್ವಕೆ ಚೆನ್ನವಾಗಿ ಬಂಧನ ಮಾಡೆ ಘನ್ನ ಮಹಿಮ ಭೀಮೇಶಕೃಷ್ಣ ಬಂದು ಕಣ್ಣಿಗೆ ಸುಳಿವ ಪ್ರಸನ್ನವೆಂಕಟನ 11
--------------
ಹರಪನಹಳ್ಳಿಭೀಮವ್ವ
ದಯಕಿಂತ ಗುಣವಿಲ್ಲ ನರಗೆ ದಯಕೆ ನಿರ್ಬಂಧವಿಲ್ಲಣ್ಣ ಜಗದಿ ಪ ಹೃದಯ ಮಂದಿರದಲಿ ನೆಲೆಸಿಹ ದಯೆಯು ಮೃದು ಮಳೆಹನಿ ತೆರದಲಿ ಸುರಿಯುವುದು ಅ.ಪ ಬಾರಿಯ ಸ್ಥಾನಕೆ ಈ ದಯೆ ಗುಣವು ಭಾರಿಯ ಶಕುತಿಯ ನೀಡುವುದು ಚಾರು ಕಿರೀಟವ ಮೀರಿದ ಕಾಂತಿಯ ಬೀರುವುದೀ ದಯೆ ನರಪತಿಗೆ 1 ರಾಜನ ದಂಡವ ನೋಡುತ ನೋಡುತ ಈ ಜಗವೆಲ್ಲವು ನಡುಗುವುದು ರಾಜನ ಕಾರ್ಯಗಳೆಲ್ಲಕೆ ದೈವಿಕ ತೇಜವ ಕೊಡುವುದು ದಯೆ ಗುಣವು 2 ನಶ್ವರವೆಲ್ಲವು ಪ್ರಾಕೃತವು ಈಶ್ವರ ಧರ್ಮವೆ ಈ ದಯೆಯು ಶಾಶ್ವತ ಧರ್ಮಗಳೆಲ್ಲವು ದಯದಿ ಮಿಶ್ರಿತವಾದರೆ ಸುಖಮಯವು 3 ಪರಮ ಪುರುಷ ದಯೆ ತೋರದಿರೆ ವರಗತಿ ಪಡೆಯಲು ನರಗಳವೆ ಕರುಣೆ ಪ್ರಸನ್ನನ ಮೊರೆ ಹೋಗದೆ ನೀ ಅರಿಯಲು ಸಾಧ್ಯವೆ ಕರುಣೆಯ ಬೆಲೆಯ 4
--------------
ವಿದ್ಯಾಪ್ರಸನ್ನತೀರ್ಥರು
ನಿನ್ನಂಥ ಕರುಣಿಗಳಿನ್ನುಂಟೆ ಭುವಿಯಲ್ಲಿ _ ಧನ್ವಂತರೇ ಪ ಚೆನ್ನ ಪ್ರಸನ್ನ ನೀನಾಗುತ ಇವಗಿನ್ನುಘನ್ನ ರೋಗವ ಕಳೆದುನ್ನುತ ಸುಖವೀಯೋ ಅ.ಪ. ಉಪಟಳ - ಕತ್ತರಿಸು ಶೀಘ್ರದೀಹಸ್ತ ಕಲಶಾಮೃತ - ಸ್ರವಿಸಿ ವೇಗದಿ ಅಪಮೃತ್ಯುವ ಹರಿಸಯ್ಯ - ಭಕ್ತಳ ಭರ್ತುವಿನ1 ಆರ್ತರುದ್ಧಾರಿಯೆ - ಭಕ್ತರ ಪರಿಪಾಲಕರ್ತ ಸಂಹರ್ತ - ಮೂರ್ಜಗಕೆಲ್ಲ ನೀನೇನಿತ್ಯಾನಿತ್ಯದ - ಜಗಕೆಲ್ಲ ಸ್ವಾಮಿಯೆಭೃತ್ಯಳ ಮಾಂಗಲ್ಯ - ಘಟ್ಟಿಯೆಂದೆನಿಸೋ 2 ಪ್ರಾಣ ಗುರು ಜಯ - ವಿಠಲ ದಾಸಿಯಪ್ರಾಣನಾಥನ ಪ್ರಾಣ - ಉಳಿಸುವುದೆನುತಪ್ರಾಣ - ಪ್ರಾಣನೆ ಎನ್ನ - ಬಿನ್ನಪವ ಜಗತ್ರಾಣ ಗುರು ಗೋವಿಂದ ವಿಠಲ - ಸಲ್ಲಿಸೋ 3
--------------
ಗುರುಗೋವಿಂದವಿಠಲರು
ನೋಡಿರಿ ರಾಘವೇಂದ್ರರ ಮಾಡಿರಿ ನಮಸ್ಕಾರ ಬೇಡಿದ ಇಷ್ಟ ವರ ನೀಡುವರು ನಮ್ಮ ಯತಿವರ ಪ ಮಂತ್ರಾಲಯದಿ ನಿಂತಿಹ ಚಿಂತೆಗಳ ಪರಿಹರಿಸುವ ಕಂತುಪಿತನನಂತಗುಣ ತನ್ನಂತರಂಗದಿ ಸ್ತುತಿಸುವ ಇಂಥ ಯತಿಗಳ ಕಾಣೆ ಹರಿಯೇಕಾಂತ ಭಕ್ತರೆನಿಸಿಕೊಂಡು ಮಂತ್ರಾಕ್ಷತೆ ಫಲ ನೀಡಿ ತಾ ಸಂತಾನ ಸಂಪತ್ತು ಕೊಡುವರ 1 ವಾತ ಪಿತ್ತ ವ್ಯಾಧಿಗಳ ಸೇತು (ಶ್ವೇತ?) ಕುಷ್ಠರೋಗಗಳ ಪಾತಕಿಯರ ಪಾಪಗಳ ಪ್ರೀತಿಲಿಂದ ಕಳೆವರೊ ಪ್ರಖ್ಯಾತರಾಗಿ ಬೆಳೆವರೊ ಭೂತಳದಿ ಸನ್ನೀತ (ಸನ್ನಿಹಿತ?) ರಾದ ಸೀತಾಪತಿ ನಿಜದೂತರೆನಿಸೋರು 2 ಭಜಸÉ ಭಕ್ತರ ನೋಡುವ ಸದನಕೆ ಬಂದುಕೂಡುವ ಒದಗಿದಾಪತ್ತು ದೂಡುವ ಬಂದು ಮುದದಿ ತಾ ದಯಮಾಡುವ ಅಜನಯ್ಯನ ಕೊಂಡಾಡುತ ತುಂಗಾನದಿಯ ತೀರ ವಾಸವಾಗಿ ಹೃದಯದೊಳು ಭೀಮೇಶ ಕೃಷ್ಣನ ಪದವ ಭಜಿಸಿ ಪಡೆವರಾನಂದವ3
--------------
ಹರಪನಹಳ್ಳಿಭೀಮವ್ವ
ಬಯಸೋದು _ ಉತ್ತಮ ಸಂಗ - ಬಯಸೋದು ಪ ಬಯಸೂವುದುತ್ತಮ ಸಂಗ | ಭವಭಯ ಪರಿಹರಿಸೂವ ಸಂಗ | ಆಹಭಯ ದೂರಾಭಯಪ್ರದ | ದಯ ಪೂರ್ಣ ಹರಿಯ ಹೃ-ದಯ ವ್ಯಾಪ್ತವಾದಂಥ | ವಿಯದೊಳು ಕಾಂಬಂಧ ಅ.ಪ. ವಿಭವ | ಹೇತು ಇವರೆಂದು ಖ್ಯಾತಿಲಿ ಇರುವ | ಬೊಮ್ಮದಿವಿಜೇಡ್ಯ ವೈಕುಂಠನವ | ಮೃಗ್ಯನವರಿಂದನಾಗುತಲಿರುವ | ಆಹಅವನ ಪದ ಕಮಲದಿ | ಧೃವ ಚಿತ್ತ ಉಳ್ಳವರವರಿಗೆಂಬರು ವೈ | ಷ್ಣವಾಸ್ಯರೆಂದೆನುತಲಿ 1 ತಾಪ ಶಮನ | ಸೇವಿಪರ ಹೃದಯಾಂತಃಕರಣ | ಆಹದಿರುತ ತೋರಿಕೊಳ್ಳೆ | ತಾರೇಶನಂದದಿಪರಿತಾಪವಿನ್ನುಂಟಿ | ಮರಳಿ ಅಂಥವನಿಗೆ 2 ಶುದ್ಧಾಂತಃಕರಣರ ಭಕ್ತಿ | ಪಾಶಬದ್ದನಾಗಿಹ ಹರಿಮೂರ್ತಿ | ಇಂಥಶುದ್ಧರ ವಸ ಹರಿಕೀರ್ತಿ | ಇಂದದಗ್ದ ಪಾಪದ ಮೂಟೆ ಭರ್ತಿ | ಆಹಊಧ್ರ್ವ ಪುಂಡ್ರವು ಶಂಖ | ಮುದ್ರಾದಿ ಚಿನ್ಹಿತಶಬ್ದರಿವರು ಪ್ರ | ಸಿದ್ಧ ಭಾಗ್ವತರೆಂದು 3 ಕಾಮ ಕಾರ್ಮಾಅವಿದ್ಯದಿಂದ | ದೇಹಭೂಮಿಯೊಳುತ್ಪನ್ನದಿಂದ | ಜಾತಿಬ್ರಾಹ್ಮಣಾಹಂಭಾವದಿಂದ | ಶೂನ್ಯಶ್ರೀಮನೋಹರ ಜೀವರಿಂದ | ಆಹಸಾಮಸನ್ನುತ ಭಿನ್ನ | ನೇಮ ತಿಳಿದು ತಾರ-ತಮ್ಯವ ತಿಳಿದವ | ಪ್ರೇಮ ಭಕ್ತನವನು 4 ನೋವು ಸಂತೋಷಗಳೆಂಬ | ದ್ವಯಭಾವಗಳ್ಸಮತೇಲಿ ಉಂಬ | ಜ್ಞಾನಿದೇವ ದೇವಗೆ ಪ್ರಿಯನೆಂಬ | ಬುದ್ಧಿಲೋಪಿ ಅವರ ಭಜಿಸೆ ತುಂಬ | ಆಹಗೋವ ಪಾಲಕ ಗುರು | ಗೋವಿಂದ ವಿಠ್ಠಲಕಾವನು ಬೆಂಬಿಡದೆ | ಈ ವಿಧ ಭಕುತರ 5
--------------
ಗುರುಗೋವಿಂದವಿಠಲರು
ಭಜ ಭಜ ಮಾನಸ ಗರುಡತುರಂಗಂ ಅಜ ಸುರಸೇವಿತ ಪಾಂಡುರಂಗಂ ಪ ಗಜರಾಜಾನತ ಮೋಹನರಂಗಂ ವಿಜಯಧ್ವಜ ಶ್ರೀಪಾವನರಂಗಂ ಅ.ಪ ಗಿರಿಧರ ಮುರಹರ ಭೂವರ ರಂಗಂ ನರಕೇಸರಿ ಮುಖರಾಜಿತ ರಂಗಂ ವರಶುದ್ಧಾಚ್ಚುತ ಸುರುಚಿರ ರಂಗಂ ಪರಶಿವ ದಾನವ ವಿನಮಿತ ರಂಗಂ 1 ಸನಕ ಸನಂದನ ಮುನಿನುತ ರಂಗಂ ಹನುಮ ವಿಭೀಷಣ ಸನ್ನುತ ರಂಗಂ ಘನಮಣಿ ಮೌಕ್ತಿಕ ಶೋಭಿತ ರಂಗಂ ಜನಕ ಧರಾವಿವ ಪೂಜಿತ ರಂಗಂ 2 ಮಂಗಳದಾಯಕ ಶುಭಕರ ರಂಗಂ ಸಂಗರ ಧೀರ ಸುಧಾಕರ ರಂಗಂ ಗಂಗಾಜನಕ ಕೃಪಾಂಬುಧಿ ರಂಗಂ ಅಂಗಜ ಜನಕ ಶ್ರೀ ಮಾಂಗಿರಿ ರಂಗಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾಕೆನ್ನ ದೂರುವರೆ ಪೇಳಮ್ಮಯ್ಯ ಪೋಕಬುದ್ಧಿಯ ಗೊಲ್ಲತಿ ಪೋಕ ಲೋಕಲೋಕದಿ ನೋಡೆ ನಾಕಾಣೆನೆಲ್ಲೆಲ್ಲೂ ಪ ಅಮ್ಮಯ್ಯ ನೀನಿಡುವೊ ಪಾಲ್ಬೆಣ್ಣೆಯ ಕಣ್ಣಿಂದ ನೋಡುವೆನೆ ಅಣ್ಣ ರಾಮರ ಕೇಳೆ ಎನ್ನಾಣೆ ಹುಸಿಯಲ್ಲ ಎನ್ನ ಪಣೆಯ ಲಿಖಿತ ಮುನ್ನ ಮಾಡಲಿ ಏನೆ 1 ದುಷ್ಟಹೆಂಗಳೇರಾಡುವೊ ಮಾತೊಂದು ನೀ ಗೊತ್ತು ಹಿಡಿಯ ಬ್ಯಾಡಮ್ಮ ಚಟ್ಟಿಗೆ ಬೆಣ್ಣೆಯ ಮೆಲುವೋದುಂಟಾದರೆ ಪುಟ್ಟಕೂಸಿನ ಹೊಟ್ಟೆಗೆ ದೃಷ್ಟಿತಾಗದು ಏನೆ 2 ಚೆಂಡನಾಡುವಾಗ ಇವರು ಎನ್ನ ಮುಂಗೈಯ ಪಿಡಿದುಕೊಂಡು ಗಂಡರಂಜಿಕೆಯಿಲ್ಲ ಗಾಡಿಕಾರ್ತಿಯರೆಲ್ಲ ಬಂಡು ಮಾತುಗಳಾಡಿ ಬಂದು ದೂರಿದರೇನೆ 3 ಸಣ್ಣ ಮಕ್ಕಳೊಡನೆ ಅಂಗಳದಿ ನಾ- ಚಿಣ್ಣಿಯನಾಡುವಾಗ ಬೆಣ್ಣೆಕೊಡುತೇವೆಂದು ಬಣ್ಣ ಬಣ್ಣದಿ ಎನ್ನ ಕಣ್ಣು ಸನ್ನೆಯ ಮಾಡಿ ಕರೆದರ್ಯಾತಕೆ ಕೇಳೆ 4 ಗೋಲಿ ಗುಂಡುಗಳಾಡುತ ನಿಂತಿರಲೆನ್ನ ಲೀಲೆಯಿಂದಲಿ ನೋಡುತ ಭೀಮೇಶಕೃಷ್ಣ ಬಾರೆಂದೆನ್ನ ಬಿಗಿದಪ್ಪಿ ಬಾಯ ತಂಬುಲಗಳ ಬೇಡಿ ಮಾತಾಡೋರು 5
--------------
ಹರಪನಹಳ್ಳಿಭೀಮವ್ವ
ರಕ್ಷಿಸೊ ಎನ್ನ ರಕ್ಷಿಸೋ ಪ ರಕ್ಷಿಸು ಎನ್ನನು ಅಕ್ಷಯಗುಣಪೂರ್ಣ ಲಕ್ಷುಮಿರಮಣನೆ ಪಕ್ಷಿವಾಹನನೇ ಅ.ಪ ಪಾದವಿಲ್ಲದೆ ಜಲದೊಳು ಮುಳುಗಾಡಿ ವೇದಚೋರಕನನ್ನು ಸೀಳಿ ಬೀಸಾಡಿ ವೇದಾಚಲದೊಳು ನಿಂತು ಕೈ ನೀಡಿ ಸಾಧು ಸಜ್ಜನಪಾಲ ನೀ ದಯಮಾಡಿ 1 ವಾರಿಧಿ ಮಥನದಿ ಸುರರಿಗೆ ಒಲಿದು ಮೇರು ಮಂದರವನ್ನು ನೀ ಹೊತ್ತೆ ಒಲಿದು ವಾರಿಜಾಕ್ಷನೆ ವೈಕುಂಠದಿಂದಿಳಿದು ಊರಿದೆ ಚರಣವ ಗಿರಿಯೊಳು ನಲಿದು 2 ಧರಣಿಯ ಒಯ್ದ ದಾನವಗಾಗಿ ನೀನು ಹರಣದ ಸೂಕರನಂತಾದುದೇನು ಚರಣ ಸೇವಕರಿಗೆ ನೀ ಕಾಮಧೇನು ಕರುಣದಿ ಸಲಹೆನ್ನ ನಂಬಿದೆ ನಾನು 3 ತರಳನು ಕರೆಯೆ ಕಂಬದೊಳುದಿಸಿದೆಯೊ ದುರುಳ ದಾನವರ ಪ್ರಾಣವ ವಧಿಸಿದೆಯೊ ಕರಳಮಾಲೆಯ ಕೊರಳೊಳು ಧರಿಸಿದೆಯೊ ಮರಳಿ ಬಂದವ ಫಣಿಗಿರಿಯನೇರಿದೆಯೊ 4 ಕೋಮಲ ರೂಪದಿ ಭೂಮಿಯನಳೆದೆ ಆ ಮಹಾಬಲಿಯ ಪಾತಾಳಕ್ಕೆ ತುಳಿದೆ ಸ್ವಾಮಿ ಪುಷ್ಕರಣಿಯ ತೀರದಿ ಬೆಳೆದೆ ಪ್ರೇಮದಿ ಭಕ್ತರ ಕಾಮಿಸಿ ಪೊರೆದೆ 5 ತಾತನಪ್ಪಣೆಯಿಂದ ಮಾತೆಗೆ ಮುನಿದೆ ಜಾತಿಕ್ಷತ್ರಿಯರ ವಿಘಾತಿಸಿ ತರಿದೆ ನೂತನವಾಗಿಹ ನಾಮದಿ ಮೆರೆದೆ ಧಾತುಗೆಟ್ಟೆನು ಸ್ವಧೈರ್ಯಗಳಿರದೆ 6 ದಶರಥನುದರದಿ ಶಿಶುವಾಗಿ ಬಂದೆ ವಸುಮತಿ ತನುಜೆಯ ಕುಶಲದಿ ತಂದೆ ಅಸುರರ ಹೆಸರನುಳಿಸದೆ ನೀ ಕೊಂದೆ ಕುಸುಮನಾಭನೆ ಶೇಷಗಿರಿಯಲ್ಲಿ ನಿಂದೆ 7 ಮಧುರೆಯೊಳುದಿಸಿ ಗೋಕುಲದಲ್ಲಿ ಬೆಳೆದೆ ಉದಧಿಯ ಮಧ್ಯದಿ ದುರ್ಗವ ಬಲಿದೆ ಹದಿನಾರು ಸಾವಿರ ಸತಿಯರ ನೆರೆದೆ ಉದಯವಾದೆಯೊ ವೇದಗಿರಿಯೊಳು ನಲಿದೆ 8 ಶಶಿಮುಖಿಯರನು ಮೋಹಿಸುವಂಥ ಬಗೆಗೆ ವ್ಯಸನವ ಬಿಡುವುದುಚಿತವೇನೊ ನಿನಗೆ ವಸುಧೆಗುತ್ತಮವಾಗಿ ಎಸೆವಂಥ ಗಿರಿಯೊಳು ಹಸನಾಗಿ ನಿಂತಿಹ ಚರಣ ಸನ್ನಿಧಿಯೊಳು 9 ವಾಜಿಯನೇರಿಯೆ ನೇಜಿಯ ಪಿಡಿದೆ ಮಾಜುವ ಕಲಿಯನ್ನು ಕಡೆಯೊಳು ಕಡಿದೆ ಮೂಜಗದೊಡೆಯನ ಮನದೊಳು ಇಡುವೆ ಮಾಜ ಬೇಡೆಲೊ ವೇಂಕಟೇಶ ಎನ್ನೊಡವೆ 10 ಹತ್ತವತಾರದ ವಿಸ್ತಾರದಿಂದ ಕರ್ತು ವರಾಹತಿಮ್ಮಪ್ಪನು ನಿಂದ ಭೃತ್ಯವತ್ಸಲನಾಗಿ ಭೂಮಿಗೆ ಬಂದ ಅರ್ಥಿಯೋಳ್ಭಕ್ತರ ಸಲಹುವೆನೆಂದ 11
--------------
ವರಹತಿಮ್ಮಪ್ಪ
ರಾಘವೇಂದ್ರ ಯತಿಸಾರ್ವಭೌಮ ದುರಿ ತೌಗಘದೂರ ತೇ ನಮೋ ನಮೋ ಪ ಮಾಗಧರಿಪು ಮತಸಾಗರ ಮೀನ ಮ ಮಾಘ ವಿನಾಶಕ ನಮೋ ನಮೋ ಅ.ಪ. ಶ್ಲಾಘಿತ ಗುಣಗಣ ಸೂರಿಪ್ರಸಂಗ ಸ ದಾಗಮಜ್ಞ ತೇ ನಮೋ ನಮೋ ಮೇಘ ಶ್ಯಾಮಲ ರಾಮಾರಾಧಕ ಮೋಘ ಬೋಧತೇ ನಮೋ ನಮೋ 1 ತುಂಗಭದ್ರ ಸುತರಂಗಿಣಿ ತೀರಗ ಮಂಗಳಚರಿತ ಶುಭಾಂಗ ನಮೋ ಇಂಗಿತಜ್ಞ ಕಾಳಿಂಗ ಮರ್ದ ಯದು ಪುಂಗವ ಹೃದಯ ಸುಸಂಗ ನಮೋ ಸಂಗಿರ ಚಿಹ್ನಿತ ಶೃಂಗಾರಾನನ ತಿಂಗಳ ಕರುಣಾಪಾಂಗ ನಮೋ ಗಾಂಗೇಯ ಸಮಾಭಾಂಗ ಕುಮತ ಮಾ ತಂಗ ಸಿಂಗ ಶಿತ ಪಿಂಗ ನಮೋ 2 ಶ್ರೀ ಸುಧೀಂದ್ರ ಕರಜಾತ ನಮೋ ನಮೋ ಭೂಸುರ ನುತ ವಿಖ್ಯಾತ ನಮೋ ದೇಶಿಕ ವರ ಸಂಸೇವ್ಯ ನಮೋ ನಮೋ ದೋಷವಿವರ್ಜಿತ ಕಾವ್ಯ ನಮೋ ಕ್ಲೇಶಿತಜನ ಪರಿಪಾಲ ನಮೋ ನಮೋ ಭಾಸಿತ ಕರುಣಾಶೀಲ ನಮೋ ವ್ಯಾಸ ರಾಮ ಪದ ಭಕ್ತ ನಮೋ ನಮೋ ಶಾಶ್ವತ ಕರುಣಾಸಕ್ತ ನಮೋ 3 ಮಣಿ ಸಂ ಭಾವಿತ ಮಹಿಮ ಪಾಲಯ ಮಾಂ ಸೇವಾಪರ ಸರ್ವಾರ್ಥಪ್ರದ ವೃಂ ದಾವನ ಮಂದಿರ ಪಾಲಯ ಮಾಂ ಮಾರ್ಗಣ ಭುಜಗ ವಿನಾಯಕ ಭಾವಜ್ಞ ಪ್ರಿಯ ಪಾಲಯ ಮಾಂ ಕೇವಲ ನತಜನ ಪಾವನರೂಪ ಸ ದಾ ವಿನೋದಿ ಹೇ ಪಾಲಯ ಮಾಂ 4 ಸನ್ನುತ ಮಹಿಮ ಜಗನ್ನಾಥ ವಿಠಲ ಸನ್ಹಿತ ಮಾನಸ ಜಯ ಜಯ ಭೋ ಚಿಹ್ನಿತ ದಂಡಕಮಂಡಲ ಪುಂಡ್ರ ಪ್ರ ಪನ್ನೆ ಭಯಾಪಹ ಜಯ ಜಯ ಭೋ ಮಾನ್ಯ ಮಹಾತ್ಮ ಪ್ರಸನ್ನ ವದನ ಕಾ ರುಣ್ಯ ಪ್ರಯೋದಧೆ ಜಯ ಜಯ ಭೋ ಧನ್ಯ ಕ್ಷಮಾಸಂಪನ್ನ ಬುಧಜನ ಶ ರಣ್ಯ ಸದಾರ್ಚಿತ ಜಯ ಜಯ ಭೋ 5
--------------
ಜಗನ್ನಾಥದಾಸರು
ಶ್ರೀ ಗಣಪತಿಗೆ ವಂದಿಸಿ ಕೆಳದಿಯ ಪುರದಭೋಗಮಂದಿರ ರಾಮೇಶ್ವರನ ರಂಭೋಗಮಂದಿರ ರಾಮೇಶ್ವರನ ಸನ್ನುತಿಸುತರಾಗದಿ ಪಾಡಿ ಪೊಗಳುವೆ ರಂ1 ವಾಣಿ ಪುಸ್ತಕ ವೀಣಾಪಾಣಿ ಪನ್ನಗನಿಭವೇಣಿ ಕಲ್ಯಾಣಿ ಶುಕ ರಂ-ವಾಣಿ ಶುಕವಾಣಿ ಬೊಮ್ಮನರಾಣಿ ಸನ್ಮತಿಯ ಕರುಣಿಸು ರಂ 2 ಧೃವ ಅಟ್ಠ ರೂಪಕ ಏಕತಾಳವು ಝಂಪೆತ್ರಿವಡೆ ತಾಳಗಳೊಡಂಬಡಲು ರಂ-ತ್ರಿವಡೆ ತಾಳಗಳೊಡಂಬಡೆ ಹೊಸ ಹರೆಯದಯುವತಿಯರೊಲಿದು ಹಾಡಿದರು ರಂ 3 ಗಂಗಾಧರ ಜಯ ಗೌರೀಪ್ರಿಯ ಜಯಅಂಗಜಹರ ಜಯವೆನುತ ರಂ-ಜಯವೆನುತಲಂಗನೆಯರುಪೊಂಗೋಲ ಪೊಯಿದು ಪಾಡಿದರು ರಂ 4 ಕಪ್ಪುಗೊರಳ ಜಯ ಸರ್ಪಭೂಷಣ ಜಯಮುಪ್ಪುರವನು ಜಯಿಸಿದವನೆ ರಂ-ಜಯಿಸಿದನೆ ಜಯವೆಂದುಒಪ್ಪದೆ ಪಾಡುತಾಡಿದರೆ ರಂ5 ದಿಮಿದಿಮಿ ದಿಮಿಕೀಟ ತಕಕಿಟನ ಕಕಿಟಕ್ರಮದಿ ನರ್ತಿಸುತಬಲೆಯರು ರಂ-ಅಬಲೆಯರು ಚಿನ್ನದ ಕೋಲಪ್ರಮುದದೊಳಾಡುತೊಪ್ಪಿದರು ರಂ6 ಅಚ್ಚ ಮುತ್ತಿನ ನಿಚ್ಚಳ ಸುಲಿಪಲ್ಲಒಚ್ಚೇರೆಗಣ್ಣು ಬಾಲೆಯರು ರಂ-ಬಾಲೆಯರು ಸಂಭ್ರಮದಿ ಮೈಮೆಚ್ಚುತ ಕೋಲನಾಡಿದರು ರಂ 7 ಭೃಂಗ ಕುಂತಳದ ಮತಂಗಜ ಗಮನದರಂಗುದುಟಿಯ ರಮಣೆಯರು ರಂರಮಣಿಯರು ಸೊಬಗನಾಂತುಹೆಂಗಳು ಪಾಡುತೊಪ್ಪಿದರು ರಂ8 ಜಲಜಗಂಧದ ನಳಿತೋಳ್ಗಳ ರಿಂಕಿದನೆಲೆಮೊಲೆಗಳ ತುಂಬಿಗುರುಳ ರಂಕರುಳ ಪದ್ಮಿನಿಯರುಚಳಕದಿ ಪಾಡುತಾಡಿದರು ರಂ9 ಪೊಂಬೊಗರಿಯ ತೆರದಿ ತುಂಬಿದ ಕುಚಗಳಬಿಂಬಾಧರದ ಕಂಬುಗಳದ ರಂಬಿಂಬಾಧರದ ಕಂಬುಗಳದ ಪದ್ಮಿನಿಯರುಸಂಭ್ರಮದಿಂದ ಪಾಡಿದರು10 ತೆಳುವಸುರಿನ ಕೊಬ್ಬಿದ ಕುಚಯುಗಳದಕಲಹಂಸಗತಿಯ ಮೋಹನದ ರಂಮೋಹನದ ಚಿತ್ತಿನಿಯರುಒಲಪಿನಂ ಪಾಡುತಾಡಿದರು ರಂ11 ಚಿನ್ನದ ಲತೆಯಂತೆ ಚೆನ್ನಾಗಿ ಬಳುಕುವಸನ್ನುತಾಂಗದ ಶಂಖರವದ ರಂರವದ ಶಂಖಿನಿಯರುಚೆನ್ನಾಗಿ ಪಾಡುತಾಡಿದರು ರಂ 12 ಅಪಳ್ಗಣ್ಣ ಮಂದಗತಿಯ ಮದಗಂಧದಶರೀರದ ಕೊಬ್ಬಿದ ಕೊರಳ ರಂಕೊರಳಿನ ಹಸ್ತಿನಿ(ಯರು)ತರುಣಿಯರೊಲಿದು ಪಾಡಿದರು ರಂ 13 ಸಿರಿಮೊಗದೊಳು ಬೆಮರೊಗೆಯೆ ಮೇಲುದುಜಾರೆ ಕರದ ಕಂಕಣ ಝಣರೆನಲು ರಂಕರದ ಕಂಕಣ ಝಣಝಣಝಣಝಣರೆನೆತರಳೆಯರ್ಪಾಡುತಾಡಿದರು ರಂ14 ದುಂಡುಮುತ್ತಿನ ಹಾರವಲುಗಲು ವಜ್ರದಕುಂಡಲಗಳು ನರ್ತಿಸಲು ರಂನರ್ತಿಸಲಂಗನೆಯರತಂಡ ಸಂಭ್ರಮದೊಳಾಡಿದರು ರಂ 15 ಕರುಣಸಾಗರ ಜಯ ಕರಿಚರ್ಮಾಂಬರ ಜಯವರದ ರಾಮೇಶ ಜಯವೆಂದು ರಂ-ವರದ ರಾಮೇಶ್ವರ ಪಾರ್ವತಿ ಜಯವೆಂದುಹರುಷದಿ ಕೋಲನಾಡಿದರು 16
--------------
ಕೆಳದಿ ವೆಂಕಣ್ಣ ಕವಿ
ಸಕಲವೆಲ್ಲವು ಶಿವನ ಲಿಂಗದೊಳಗಡಗಿದುದು ಲಿಂಗವೆ ಮಾಲಿಂಗವಾಗಿ ತೋರುವುದು ಪ ಭಕುತಿಕರು ಮಮತೆಯೊಳು ಸ್ಥಾಪಿಸಿಯೆ ಅರ್ಚಿಸಲು ಸುಕೃತಫಲವನು ಅಳೆವ ಕೊಳಗವನು ಕಾಣೆ ಅ.ಪ ಆ ಮಹಾ ಸಹಸ್ರನಾಮದೊಳಗತ್ಯದಿಕ ಸೊಮೇಶನೆಂದೆಂಬ ಸ್ವಾಮಿಯನು ಕಂಡು ಸೋಮವಾರದ ದಿವಸ ಸಾಮರುದ್ರವ ಜಪಿಸಿ ನೇಮದಿಂ ಪೂಜಿಸಲು ಕಾಮಿತದ ಫಲವು 1 ಇನ್ನೇನ ವರ್ಣಿಸುವೆ ಈಶ ನಿನ್ನಯ ಮಹಿಮೆ ಉನ್ನಂತವಾಗಿ ಜಗದೊಳು ಚರಿಸಿತು ಪನ್ನಗೇಶನ ಬಲದ ಪಶ್ಚಿಮದ ದೆಸೆಯೊಳ್ ಪ್ರ- ಸನ್ನವಾದನು ಸೋಮನಾಥನೆಂದೆನುತ2 ಪಾದ ಪ್ರತ್ಯಕ್ಷವಾಗಿಯೆ ಸೋಮೇಶನೆಂದೀಗ ತಾ ಮೆರೆದುದು ಭುಕ್ತಿ ಮುಕ್ತಿಯನಿತ್ತು ಪ್ರೇಮದಿಂ ಸಲಹುತ್ತ ಕಾಮಿತಾರ್ಥವನೀವ 3 ಲೋಕೋಪಕಾರಕ್ಕೆ ಸೋಮೇಶ ನೀ ಬಂದೆ ಗೋಕರ್ಣ ಶ್ರೀಶೈಲ ಕಾಶಿ ರಾಮೇಶ್ವರವು ಬೇಕೆಂಬುದಿಲ್ಲಿನ್ನು ಎನ್ನ ಭೀತಿಯ ಗಿರಿಯ ಕುಲಿಶ ನೀನು ಜಗದೀಶ 4 ಜೋಕೆಯೊಳು ಮನದೊಳಗೆ ಅಡಗಿಸಿಯೆ ಭಜಿಸಿದರೆ ಯಾಕೆ ಮನದೊಳು ಬಿಡುವೆ ಶಿವನಾಮವನು ನೀನು ಏಕೆ ಕಡೆಯಲಿ ಕೆಡುವೆ ಮರುಳು ಜೀವನವೆ 5 ಸಡಗರದಿ ಸರ್ವವೂ ನಿನ್ನಲ್ಲಿ ಅಡಗಿದುದು ಜಡೆಯೊಳಗೆ ಅಡಗಿದುದು ಪೊಡವಿಗುತ್ತಮ ನದಿಯು ಉಡುಪತಿಯು ಅಡಗಿದನು ಊಧ್ರ್ವ ಫಣೆಯೊಳಗೆ ಪಿಡಿಯೊಳಗೆ ಅಡಗಿದುದು ವೇದ ಮೃಗರೂಪಾಗಿ 6 ಕಿಚ್ಚು ಅಡಗಿತು ಅವನ ಅಚ್ಚ ಹಣೆಗಣ್ಣಿನೊಳು ಮುಚ್ಚಿ ತೆರೆವಕ್ಷಿಯೊಳು ಮೂಜಗದ ಬೆಳಕು ಬಿಚ್ಚಿಟ್ಟಿ ವಿಷಕಂಠದೊಳು ಲೋಕವನು ಎಚ್ಚರಿಪ ಮಂತ್ರಗಳು ಬಾಯೊಳಗಡಗಿದುದು 7 ಶುದ್ಧ ಸ್ಫಟಿಕ ಥರದ ಕಾಯಕಾಂತಿಗಳುಳ್ಳ ಬದ್ಧುಗೆಯ ದಾರದಂದದಿ ಉರಗನೊಪ್ಪುಗಳು ಉದ್ದಿಶ್ಯವಾಗಿ ಭಜಿಸಿದ ಭಕ್ತರುಂಡಗಳು ತಿದ್ದಿಟ್ಟಿ ಆಭರಣ ತಿರಿಶೂಲಧರಣ 8 ಪುಲಿಕರಿಯ ಪೊಳವುಗಳು ನಳನಳಿಪ ವಸನಗಳು ಹೊಳೆವ ಮುಖತೇಜಗಳು ನಳಿನನೇತ್ರಗಳು ನಲಿವಗಣ ಕೋಟಿಗಳ ಮಧ್ಯದೊಳು ಕೈಲಾಸ ಇಳಿದು ಬಂದನು ನಮ್ಮ ಬಳಿಗೆ ಸೋಮೇಶ 9 ನಾಸಿಕದಿ ಕೌಮಾರಿಗವಧಿಯಾಗಿಹ ಸ್ಥಳ ವಿ- ಶೇಷವಾಗಿಹ ಶುದ್ಧ ರೌಪ್ಯಪುರದೊಳಗೆ ಭೂಸುರೋತ್ತಮಗೊಲಿದು ಭೂರಿಭಾಗ್ಯವನಳೆದು ವಾಸವಾದೆಯೊ ಜಗದೀಶ ಸೋಮೇಶ 10 ಭಾಳನೇತ್ರನೆ ನೀಲಕಂಠ ಶೂಲಾಸ್ಥಿಧರ ಕಾಲರುದ್ರ ವ್ಯಾಳಭೂಷ ಸರ್ವೇಶ ಲಾಲಿಸೈ ಬಿನ್ನಪವ ಪಾಲಿಸೆನ್ನನು ಬೇಗ ಬಾಲಕನು ಅಲ್ಲವೇ ಭಕ್ತಸುರಧೇನು 11 ಸಾರಿ ನೋಡಿರೊ ಮೂರು ಲಿಂಗವನು ನೀವೀಗ ಧಾರುಣಿಯಳೊಂದು ಶಿವಲಿಂಗವನು ಬೇಗ ಮೇರುವಿಗೆ ಸಮವಾದ ಹೇಮವನು ವಿಪ್ರರಿಗೆ ಧಾರೆಪೂರ್ವಕವಾಗಿ ಇತ್ತ ಫಲ ಒದಗುವುದು 12 ಶಿವನ ಪೂಜೆಯೆ ಭಕ್ತಿ ಶಿವನ ಪೂಜೆಯೆ ಮುಕ್ತಿ ಶಿವಮಂತ್ರವೆ ಶಕ್ತಿ ಶಿವನೆ ಪರಶಕ್ತಿ ಶಿವನಾಮವನು ಭಜಿಸಿ ಸಿರಿಯ ಪಡೆದನು ಹರಿಯು ಶಿವನ ಮರೆಯದೆ ಭಜಿಸು ಇಹಪರವ ಸೃಜಿಸು13 ನಿನ್ನನೇ ನಂಬಿದೆನು ಉನ್ನತಾನಂತೇಶ ಮನ್ನಿಸಿ ದಯದೋರು ಚಂದ್ರಮೌಳೀಶ ಇನ್ನು ಭಯವಿಲ್ಲೆನೆಗೆ ಹರಸೆನ್ನ ಸೋಮೇಶ ಎನ್ನೊಡೆಯ ಶ್ರೀಕೃಷ್ಣ ವರಾಹತಿಮ್ಮಪ್ಪ 14
--------------
ವರಹತಿಮ್ಮಪ್ಪ
ಸುರಾಸುರಾರ್ಚಿತ ಸರೋಜಲೋಚನ ಸರಾಗದಿಂದೆನ್ನನೀಕ್ಷಿಸೈ ಪರಾಪರೇಶನೆ ಪರಾತ್ಪರನೆ ನೀ ಪರಾಕುಮಾಡದೆ ಪಾಲಿಸೈ ಪ ವಿರಾಜಮಾನ ಸುವಿರಾಜವಾಹನ ವಿರಾಟ್ಪುರುಷ ವಿಶ್ವಂಧರ ಕರಾರವಿಂದದಿ ಕರಾದಿಗಳ ಪಿಡಿ ಧರಾತಿಮರ್ದನ ಧುರಂಧರ 1 ಧರಾಧರಣಿಪಟು ಧರಾಧರಾಧಿಪ ಧುರಾವಹನ ದುರ್ಧರ್ಷಣ ಧರಾಮರರ ಬಹುಪರಾಭವವ ಬಲು ಸರಾಗದಲಿ ನಿರ್ವಾಪಣ 2 ಜರಾಮರಣಗಳ ನಿರಾಕರಿಸಿ ವಸುಂಧರಾಭರಣ ಗುಣಭೂಷಣ ಸುರಾರಿಮರ್ದನ ಶರಾಸನಾಂಚಿತ ಕರಾನಿಹಿತ ಮಣಿಕಂಕಣ 3 ಶಿರೀಷ ಕುಸುಮದ ಸರಿಸುಕೋಮಲಶರೀರ ನಿನ್ನದು ಈ ಪರಿ ಸಿರಿಯುದರದೊಳೇ ಸಿರಿಯಧರಿಸಿದ ಪರಿಯದೆಂತುಟೋ ಕೇಳ್ ಹರಿ 4 ಪಯೋಧಿತನಯಾ ವಯೋಸುರೂಪನೆ ದಯಾನಿಧೇ ಧರ್ಮಾತ್ಮನೆ ದಯಾರಸದಿ ಹೃತ್ಪಯೋಜಮಧ್ಯದಿ ನಿಯಾಮಿಸುವ ನಿರ್ಮಾಯನೆ 5 ವರೇಣ್ಯ ಸಜ್ಜನ ಶರಣ್ಯ ಪುಲಿಗಿರಿಯರಣ್ಯ ಮಧ್ಯವಿರಾಜಿತ ಹಿರಣ್ಮಯಾಂಬರ ಹಿರಣ್ಯಕಾಂತಕ ಹಿರಣ್ಯಗರ್ಭಸುಪೂಜಿತ 6 ವ್ಯಾಘ್ರನೆಂಬುವತ್ಯುಗ್ರ ದೈತ್ಯನಂ ನಿಗ್ರಹಗೈದ ಮಹಾತ್ಮನೆ ಶೀಘ್ರದಿ ಭಕ್ತಾನುಗ್ರಹಮಾಳ್ಪ ಸುರಾಗ್ರಗಣ್ಯ ಪುಣ್ಯಾತ್ಮನೆ 7 ಸುರರು ನರರು ನಿನ್ನರಿಮೆಯನರಿಯದೆ ನಿರುತವು ಸನ್ನುತಿಗೈವರೆ ಪರಮಪುರುಷ ಸುಖಕರ ನೀನೆನ್ನುತ ಪರಿಪರಿ ನಿನ್ನನೆ ಪೊಗಳ್ವರೆ 8 ಮೂಜಗ ಮಾಡುವ ಪೂಜೆಯಿಂದ ನೀನೀ ಜಗದಲಿ ಒಲಿದಿರ್ಪೆಯ ಮೂಜಗ ಪೂಜಿಪ ವ್ಯಾಜದಿಂದ ನಿಜಪೂಜೆಯ ನೀ ಕೈಗೊಂಬೆಯ 9 ನಿಜಪದದೊಳು ನೀನಜಭವ ಮುಖಸುರವ್ರಜಗೋಚರನಾಗಿಲ್ಲವೈ ಸುಜನರ ಪೊರೆಯವ ನಿಜಮತಿಯಿಂದಲಿ ತ್ರಿಜಗಕ್ಕೆ ಗೋಚರನಾಗಿಹೈ10 ನಿತ್ಯತೃಪ್ತ ನೀನತ್ಯುತ್ತಮ ನಿಜಭೃತ್ಯನಮತ್ರ್ಯನು ಮೋದದಿ ನಿತ್ಯದಿ ನಿನ್ನತ್ಯುತ್ತಮ ಪದದೊಳು ಭಕ್ತಿಯ ಪಾಲಿಸು ನೇಮದಿ 11 ಧರಣಿಯೊಳುರುತರ ಮೆರೆಯುವ ಫಣಿಭೂ ಧರದೊಳು ನಿರುತವು ಭಕ್ತರ ಸಿರಿವಲ್ಲಭ ವರದ ವಿಠಲ ಕರುಣಾಕರ 12
--------------
ವೆಂಕಟವರದಾರ್ಯರು