ಒಟ್ಟು 16 ಕಡೆಗಳಲ್ಲಿ , 11 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮದ್ರಾಮಾಯಣ ಮಂಗಳಂ ಮಂಗಳಂ ಮಹಾನುಭಾವಗೆ ಮಂಗಳಂ ಲೋಕಮಾತೆ ಸೀತೆಗೆ ಮಂಗಳಂ ಶತ್ರುಘ್ನ ಭರತಗೆ ಮಂಗಳಂ ಸೌಮಿತ್ರಿರಾಮಗೆ ಪ ದಶರಥನ ಉದರದಲಿ ಜನಿಸುವೆನೆಂದು ವರವನಿತ್ತ ರಾಮಚಂದ್ರಗೆ 1 ಭರತಸಹವಾಗಿ ಜನಿಸಿದ ರಾಮಚಂದ್ರಗೆ 2 ಜಾತಕರ್ಮವು ನಾಮಕರಣವು ಚೌಲ ಉಪನಯನಗಳ ಮಾಡಿ ವಿಶ್ವಾ ಮಿತ್ರರೊಡನೆ ಸಕಲ ವಿದ್ಯವ ಕಲಿಯೆ ಪೊರಟ ರಾಮಗೆ3 ಬಲ ಅತಿಬಲವೆಂಬ ವಿದ್ಯವ ವಿಶ್ವಾಮಿತ್ರರೊಡನೆ ಕಲಿತು ಅಶ್ವಿನಿದೇವತೆಗಳಂದದಿ ಬಂದ ಸೌಮಿತ್ರಿರಾಮ್ರಗೆ 4 ಭರದಲಿ ಅನಂಗನಾಶ್ರಮವನು ಪೊಕ್ಕು ಸರಯು ನದಿಯನು ದಾಟಿ ಬರದೂಷಣಜಾ ದೇಶದೊಳಗುಳ್ಳ ತಾಟಕಾಂತಕ ರಾಮಚಂದ್ರಗೆ 5 ಅಸ್ತ್ರವನ್ನು ಗ್ರಹಿಸಿ ಬೇಗನೆ ಸಿದ್ಧಾಶ್ರಮಕ್ಕೆ ನಡೆತಂದು ಸುಭಾಹುವ ನು ಸಂಹರಿಸಿ ಭರದಿ ಮಾರೀಚನ ಹಾರಿಸಿದ ರಾಮಗೆ 6 ವಿಶ್ವಾಮಿತ್ರರ ಯಜ್ಞ ಪಾಲಿಸಿ ಕುಶನ ವಂಶವಿಸ್ತಾರವ ಕೇಳಿ ಆಸರ [ಯು]ನದಿಯ ದಾಟಿ ಭರದದಿತಿಯಾಶ್ರಮಕೆ ಬಂದ ರಾಮಗೆ 7 ಮರುತ್ತ ಜನ್ಮವ ಕೇಳಿ ಅಹಲ್ಯೆಯನ್ನು ಪಾವನ ಮಾಡಿ ಬಂದ ರಾಮಗೆ 8 ಜನಕ ವಂದಿಸಿ ಧನ್ಯನೆನ್ನಲು ವಿಶ್ವಾಮಿತ್ರರು ವೃತ್ತಾಂತ ಹೇಳಿ ಧನುವ ತರಿಸಲು ನೋಡಿ ಕ್ಷಣದಿಮುರಿದಾ ರಾಮಚಂದ್ರಗೆ 9 ಕರವ ಪಿಡಿದು ಪೊರಟ ರಾಮಗೆ 10 [ಬೇಗ]ಮಾತಾಪಿತರ ಮಾತನಡೆಸಿ ಪ್ರೀತಿತೋರಿದ ಸೀತಾರಾಮಗೆ 11 ಕಂಡವರ ಮನದಲ್ಲಿ ರಮಿಸುವ ಪುಂಡರೀಕಾಕ್ಷನಿಗೆ ರಾಜ್ಯವ ಕೊಡುವೆನೆ[ನುತ] ದಶರಥ ವ್ರತವನಾಚರಿಸಿದ ರಾಮಚಂದ್ರಗೆ 12 ಕೈಕೆ ಪೂರ್ವದ ವರವ ಸ್ಮರಿಸಿ ಭರತನಿಗೆ ರಾಜ್ಯವನು ಬೇಡಿ ರಾಮನರ ಣ್ಯಕ್ಕೆ ಪೋಗೆನೆ ಬೇಗ ಪೊರಟ ಶ್ರೀರಾಮಚಂದ್ರಗೆ 13 ಮಾತೆಯನು ಬಹುವಿಧದಿ ಮನ್ನಿಸಿ ಪಿತನ ಪ್ರತಿಜ್ಞೆಯನು ಪಾಲಿಸಿ ಸೀತೆಲಕ್ಷ್ಮಣರೊಡನೆ ವನವಾಸಕ್ಕೆ ಪೊರಟ ರಾಮಚಂದ್ರಗೆ 14 ಪುರದ ಜನರನು ಸಂತವಿಟ್ಟು ಗುಹನ ಸಖ್ಯದಿ ನದಿಯ ದಾಟಿ ಭರದಿ ಭಾರದ್ವಾಜರ ಕಂಡು ಚಿತ್ರಕೂಟಕ್ಕೆ ಬಂದ ರಾಮಗೆ 15 ಅರಸು ಸ್ವರ್ಗವನೈದೆ ಭರತನಕರಸಿ ಕರ್ಮವನೆಲ್ಲ ಕಳೆದು [ವರ] ಮಾತೆಗೆ ಭಾಷೆ ಕೊಟ್ಟು ತಮ್ಮನಾಲಿಂಗಿಸಿದ ರಾಮಗೆ 16 ಭರತನಂಕದೊಳಿಟ್ಟು ಪ್ರೇಮದಿ ಮನ್ನಸಿ ಮೃದುವಾಕ್ಯದಿಂದ ಗುರುಗಳನುಮತದಿಂದ ಪಾದುಕೆಯಿತ್ತು ಕಳುಹಿದ ರಾಮಚಂದ್ರಗೆ 17 ಬೇಗನೆ ಚಿತ್ರಕೂಟವ ಬಿಟ್ಟು ಅತ್ರಿ ಯಾಶ್ರಮಕೆ ಬಂದು ಅಂಗರಾಗಾರ್ಪಣವನೆಲ್ಲ ಅಂಗೀಕರಿಸಿದ ರಾಮಚಂದ್ರಗೆ 18 ದಂಡಕಾರಣ್ಯವನ್ನು ಪೊಕ್ಕು ಉದ್ದಂಡವಿರಾಧನ್ನ ಕೊಂದು ಕಂಡು ಇಂದ್ರನ ಶರಭಂಗರಿಗೆ ಮುಕ್ತಿಯನಿತ್ತ ಶ್ರೀರಾಮಚಂದ್ರಗೆ 19 ಋಷಿಗಳಿಗೆ ಅಭಯವನು ಇತ್ತು ಲೋಕಮಾತೆಯ ನುಡಿಯ ಕೇಳಿ ಋಷಿಮಂಡಲವನು ಪೊಕ್ಕು ಬಂದು ಸುತೀಕ್ಷ್ಣರ ಕಂಡ ರಾಮಗೆ 20 ಅಸ್ತ್ರವನು ಕೊಡಲು ಗ್ರಹಿಸಿ ಪಂಚವಟಿಗೆ ಬಂದ ರಾಮಗೆ 21 ಶೂರ್ಪನಖಿ ರಘುಪತಿಯ ಮೋಹಿಸೆ ಕರ್ಣನಾಸಿಕವನ್ನು ಛೇದಿಸಿ ದುರುಳ ಖರದೂಷಣರ ಕೊಂದು ಸತಿಯನಾಲಿಂಗಿಸಿದ ರಾಮಗೆ 22 ದುರುಳ ಖಳನು ಜಾನಕಿಯ ಕದ್ದೊಯ್ಯೆ ಮಾರಿಚನ್ನ ಕೊಂದು ಬರುತ ಮಾರ್ಗದಿ ಗೃಧ್ರರಾಜಗೆ ಮುಕ್ತಿಯಿತ್ತ ಶ್ರೀರಾಮಚಂದ್ರಗೆ 23 ಕಬಂಧನಾ ವಾಕ್ಯವನು ಕೇಳಿ ಮಾರ್ಗದಲಿ ಅಯಮುಖಿಯ ಭಂಗಿಸಿ ಶಬರಿ ಭಕ್ತಿಯೊಳಿತ್ತ ಫಲವನು ಸವಿದು ಮುಕ್ತಿಯನಿತ್ತ ರಾಮಗೆ 24 ಸೀತೆಯರಸುತ ಮಾರ್ಗದಲಿ ಋಷ್ಯಮೂಕಪರ್ವತವ ಸೇರಿ ಪಂ ಪಾತೀರದಿ ತಮ್ಮನೊ[ಂದಿ]ಗೆ ನಿಂತ ಶ್ರೀರಘುರಾಮಚಂದ್ರಗೆ 25 ಪಂಪಾಪುಳಿನದ ವನವಕಂಡು ಪಂಕಜಾಕ್ಷಿಯ ನೆನೆದು ವಿರಹ [ತಾಪದರೆ] ಬಂದ ಆಂಜನೇಯಗೆ ಸಖ್ಯ ನೀಡಿದ ರಾಮಚಂದ್ರಗೆ 26 ಅಭಯವನು ಇತ್ತು ರವಿಜಗೆ ಏಳು ತಾಳೇಮರವ ಛೇದಿಸಿ ದುಂ ದುಭಿಯ ಕಾಯವನು ಒಗೆದ ಇಂದಿರಾಪತಿ ರಾಮಚಂದ್ರಗೆ 27 ಇಂದ್ರಸುತನು ರವಿಜನೊಡನೆ ದ್ವಂದ್ವಯುದ್ಧವ ಮಾಡುತಿರಲು ಒಂದುಬಾಣದಿಂದ ವಾಲಿಯ ಕೊಂದು ಕೆಡಹಿದ ರಾಮಚಂದ್ರಗೆ 28 ಮುದ್ರೆಯುಂಗುರವಿತ್ತು [ಅ]ಸಾಧ್ಯ ಇವನೆಂತೆಂದ ರಾಮಗೆ 29 ಬೆಳೆದ ಹನುಮಗೆ 30 ಶತ್ರುಪಟ್ಟಣವ ಕಂಡು ಛಾಯೆಯ ಕುಟ್ಟಿ ಸುರಚಿಯುಪಾಯದಿಮನ್ನಿ ಸುತ್ತ ಮೈನಕನ ಭರದಲಿ ಲಂಕಿಣಿಯನಡಗಿಸಿದ ಹನುಮಗೆ 31 [ವೀರ] ಹನುಮಗೆ 32 ದುರುಳ ರಾ ವಣನ ನಿಂದಿಸಿ ಪುರವಸುಟ್ಟಾ ವೀರಹನುಮಗೆ 33 ಸೀತೆಯೊಡನೆ ಗುರುತಕೇಳಿ ಸಮುದ್ರತೀರಕೆ ಬಂದು ಬೇಗನೆ ಜಾಂಬ ವಂತ ಅಂಗದರ ಕೂಡಿ ಮಧುವನವ ಭಂಗಿಸಿದ ಹನುಮಗೆ 34 ಕಂಡೆ ಲೋಕಮಾತೆಯನನ್ನೆನ್ನುತ ಬಂದು ಮುದದಿ ವಂದಿಸಿ ಇತ್ತ ಹನುಮನನಾಲಿಂಗಿಸಿದವಗೆ 35 ಬಂದ ರಾಮಗೆ 36 [ಭಕ್ತ] ವಿಭೀಷಣಗೆ ಅಭಯವನಿತ್ತು ಶರಧಿಗೆ ಸೇತುವೆಯನ್ನು ಬಂಧಿಸಿ ಮುತ್ತಿ ಲಂಕಾಪುರವ ಸಂಧಿಗೆ ಅಂಗದನ ಕಳುಹಿಸಿದ ರಾಮಗೆ 37 ಇಂದ್ರ[ಜಿತ್ತು]ವೊಡನೆ ಕಾದಿ ಸರ್ಪಾಸ್ತ್ರದಿಂದ ಬಿಡಿಸಿಕೊಂಡು [ಆ]ದುರುಳ ರಾವಣನ ನಡುಗಿಸಿ ಕಿರೀಟವನು ಭಂಗಿಸಿದ ರಾಮಗೆ 38 ಕುಂಭಕರ್ಣನ ತುಂಡುತುಂಡಾಗಿ ಕೊಂದುಕೆಡಹಿದ ರಾಮಚಂದ್ರಗೆ 39 ಕೊಂದು ವಜ್ರದಂಷ್ಟ್ರ ಆಕಂಪ ದೇವಾಂತಕ ನರಾಂತಕರನ್ನು ಮ ಹೋದರ ಮಹಾಪಾಶ್ರ್ವ ಅತಿಕಾಯ ತ್ರಿಶಿರಸ್ಸನ್ನು ಕೊಂದ ರಾಮಗೆ 40 ಮಾಯೆಯುದ್ಧದಿ ಮೇಘನಾಥನು [ಅನುಜನ] ಬ್ರಹ್ಮಾಸ್ತ್ರದಲಿ ಕಟ್ಟಲು ವಾಯುನಂದನನಿಂದ ಸಂಜೀವನವ ತರಿಸಿದ ರಾಮಚಂದ್ರಗೆ 41 ಮಾಯಾಸೀತೆಯ ಶಿರವನರಿಯಲು ವಿಭೀಷಣನ ಉ ಪಾಯದಿಂದ ಇಂದ್ರಜಿತ್ತು ಶಿರವಕಡಿದ ತಮ್ಮನಾಲಂಗಿಸಿದ ರಾಮಗೆ 42 ಮೂಲಬಲವನು ಕಡಿದು ರಾವಣನೊಡನೆ ಯುದ್ಧವ ಯೋಚಿಸೆ ಕಡಿದ ರಾಮಗೆ 43 ರಾವಣಾನೆಂಬ ಗಂಧಹಸ್ತಿಯ ರಾಮಕೇಸರಿ ಬಂದು ಮುರಿಯಲು ಸುರರು ಶಿರದಿ ಧರಿಸಿದ ರಾಮಚಂದ್ರಗೆ 44 ವಿಭೀಷಣಗೆ ಪಟ್ಟವನು ಕಟ್ಟಿ ಸೀತೆಯೊಡನೆ ಪ್ರತಿಜ್ಞೆ ಮಾಡಿ ರೆ ಬ್ರಹ್ಮರುದ್ರಾದಿಗಳು ಸ್ತುತಿಸಲು ತಂದೆಗೆರಗಿದ ರಾಮಚಂದ್ರಗೆ 45 ಸೀತೆಯಂಕದೊಳಿಟ್ಟು ಕಪಿಗಳಸಹಿತ ಪುಷ್ಪಕವೇರಿ ಭರದಿ [ಬ ರುತ್ತ] ಭಾರದ್ವಾಜರಿಗೆರಗಿ ಭರತನ ಮನ್ನಿಸಿದ ರಾಮಗೆ 46 ಕೈಕೆಸುತ ಕೈಮುಗಿದು ಕಿಶೋರ ಭಾರವ ತಾಳಲಾಗದೆಂದಾ ಳುತ [ಲಾ]ಯಿತ್ತ ರಾಜ್ಯವನ್ನು ಕೊಡಲು ಗ್ರಹಿಸಿದ ರಾಮಚಂದ್ರಗೆ 47 ಉಟ್ಟ ಮಡಿಯ ಜಟೆಯನುತಾ ಶೋಧಿಸೆ ಸೀತೆ ಸಕಲಾಭರಣ ತೊಟ್ಟು ಸುಗ್ರೀವ ಸಕಲರೊಡನೆ ರಥವನೇರಿದ ರಾಮಚಂದ್ರಗೆ 48 ಸರಮೆಪತಿ ಸೌಮಿತ್ರಿ ಚಾಮರ ಪಿಡಿಯೆ ಶತ್ರುಘ್ನ ಛತ್ರಿಯನು ಭರತ ಸಾರಥ್ಯವನು ಮಾಡಲು ಪುರಕೆತೆರಳಿದ ರಾಮಚಂದ್ರಗೆ 49 ರಾಜಗೃಹವನು ತೋರಿ ರವಿಜಗೆ ಶರಧಿಯುದಕಗಳೆಲ್ಲ ತರಿಸಿ [ವಿ ರಾಜಿಸಿ] ಪೀಠದಿ ಸೀತೆಯೊಡನೆ ವೊಪ್ಪಿದಾ ರಘುರಾಮಚಂದ್ರಗೆ 50 ವಸಿಷ್ಠ ಮೊದಲಾದ ಸಪ್ತ ಋಷಿಗಳು ಲಕ್ಷ್ಮೀಪತಿಗಭಿಷೇಕ ಮಾಡಲು ರಾಮಚಂದ್ರಗೆ 51 ಪಾದ ಪಿಡಿದಿಹ ರಾಮಚಂದ್ರಗೆ
--------------
ಯದುಗಿರಿಯಮ್ಮ
(ಗ) ನದಿಸರೋವರಗಳು ನದನದಿಗಳನು ಸ್ಮರಿಸಿರೋ ನದನದಿಗಳನು ಸ್ಮರಿಸಿ ಹೃದಯ ನಿರ್ಮಳರಾಗಿ ಮುದದಿಂದ ನಿಮ್ಮ ಮನದಧಮತನ ಬಿಟ್ಟ ಸಂ ಪದವಿಗೆ ಸೋಪಾನದಂತಾಗುವದು ಶ್ರೀ ಪದುಮನಾಭನು ವೊಲಿವನು ಪ ಸಿಂಧು ಮರುಧೃತಿ ಹೇಮವತಿ ನೇಮಿ ನೇತ್ರವತಿ ತರಣಿಸುತೆ ನರ್ಮದಾ ಗಾಯತ್ರಿ ಗೋಮತಿ ಗರುಡ ಸಾಧರ್ಮಾ ಸರಸ್ವತಿ ಮಣಿಮುಕ್ತ ಮುಕ್ತನದಿಯು ಪ್ರಣತ ವರದಕಾಗಿಣಿ ಕೃಷ್ಣವೇಣಿ ವೇದವತಿ ಹರಿಧೃತಿ ಇಂದ್ರಾಣಿ ಪುನಃ ಪುನಃ ವಾಣಿವಂ ಜರಫಣಿ ಭೀಮರಥಿನೀ 1 ಧಾರಿ ತುಂಗಾ ಭದ್ರಿಗಣಪತಿ ಶತಭಾಗ ನಾರದಿ ಉಭಯಪಿನಾಕಿ ಚಿತ್ರವತೀ ಮೂರು ಲೋಕೋದ್ಭವ ಭವಾನೀ ಚಾರು ಗಂಡಿಕೆ ಸರಯು ಶ್ರೋಣಿ ಭದ್ರನೀಲ ಕ್ಷೀರನದಿ ಪಾಪಘ್ನ ಮಹಾನದಿ ಅಘನಾಶಿ ವಾರಿಜಾಪ್ತಾವತಿ ಸುರ್ವಣ ಮುಖರೀ ವಿಸ್ತಾರ ಹಾಟಕ ಅತ್ರಿಣೀ 2 ಸುಲಭ ಮಂದಾಕಿನಿ ಕೌಮೋದಕಿ ಶಾಂತಿ ಕಪಿಲ ಚಂದ್ರಭಾಗ ಅರುಣೀ ಪೊಳೆವ ಕಾಳಾವತಿ ತ್ರಿಪಥಿ ಗೌರಿ ಕುಂತಿ ಅಳಕನಂದನ ಅಮಲವತಿ ಭೀಮಸಂಭೆ ಸಿ ತಾಂಬ್ರ ಪರ್ಣಿಯು ಜಯ ಮಂ ಸತಿ ಸತ್ಯವತಿ ವೈಷ್ಣವೀ 3 ಕನಿಕ ಶುಕ್ಲಾವತೀ ಬಾಹುನದಿಗೋವಿಂದ ಮಿನಗುವ ಭೋಗವತಿ ಕಾಶ್ಯಪಿಂಕಾಳಿಂದಿ ಅನುಸಿಂಧು ಐರಾವತಿ ಋಣ ವಿಮೋಚನ ಮಯೂರ ಸಂಭವೆ ನಿತ್ಯ ಪುಷ್ಕರಣಿ ಪಯೋ ಶ್ವಿನಿ ಮಹಾಪಗ ಭದ್ರ ಭೈರವಿ ವಿಚಿತ್ರ ನದಿಗಳನು 4 ಅರುಣೋದಯಲೆದ್ದು ಧರೆಯೊಳುಗಳ್ಳ ಬಲು ಸರಿತಗಳ ನೆನೆದು ಪುಳಕೋತ್ಸವದಲಿ ಪರಮ ಧನ್ಯರಾಗಿ ಪಾಪಗಳ ಪೋಗಾಡಿ ನಿರುತ ಮಾರುತ ಮತದಲೀ ಚರಿಸಿ ನಿಜಭಕುತಿಯಲಿ ಹಗಲು ಇರಳು ಇನಿತು ಸಿರಿಯರಸ ವಿಜಯವಿಠ್ಠಲನ ಚರಣಾಂಬುಜವ ಸರಸದಿಂದಲಿ ಧ್ಯಾನಗೈದು ಈ ನದಿಗಳಲಿ ಕರಣದಲಿ ತಿಳಿದು ನಿತ್ಯಾ5
--------------
ವಿಜಯದಾಸ
ಕರುಣ ವಂದಿರೆ ಸಾಕಿನ್ನು ಪ. ಕರುಣ ವಂದಿರೆ ಸಾಕು ಸಿರಿಯರಸನೆ ನಾನಾ ಪರಿಯೊಳನ್ಯರ ಬೇಡಿ ತಿರುಗಲಾರೆನು ಕೃಷ್ಣ ಅ.ಪ. ಪರಮಾಣು ತ್ರುಟಿಲವ ನಿಮಿಷ ಮಾತ್ರ ಯುಗ ಗುರು ಪ್ರಾಣ ಒಳನಾಡಿ ಮುಹೂರ್ತ ಪ್ರಹರ ಮಾಸ ಋತ್ವಯನ ವ- ತ್ಸರಯುಗ ಮಾನವೆಂಬ ಉಪಾದಿಗ ಳಿರಿಸಿ ಭೋಗಗಳನುಂಬ ಮಹಾಕಾಲ ಧುರವಹ ತಾನೆಯೆಂಬಾ ಧೀರತೆಯಿಂದ ಲಿರುವಿ ಲೋಕದಲಿ ತುಂಬಾ ಪಾದ ಪದ್ಮ 1 ತೃಣತರು ಕ್ರಿಮಿಪಕ್ಷಿ ಪಶುನರ ದೇವಕ್ಕ ಳೆಣಿಕಿಯಿಲ್ಲದ ದಿತಿಜಾರಿ ಜೀವರನೆಲ್ಲ ಕುಣಿಸುವ ಬೊಂಬೆಯಂದದಲಾಡಿಸುತ ಲೇಶ ದಣಿವಿಲ್ಲದೆ ಭಕ್ತ ಜನರಿಗೆ ಸುಖಸಾರ ಉಣಿಸಿ ಮದಾಂಧರ ಹಣಿದು ಹಣಿದು ಕುಟ್ಟಿ ಒಣಗಿಸಿ ಬಿಸುಟು ತಿನ್ನುವತ್ತಿದುವಿ ಮೇಲಣ ದುರ್ಗಪತಿಗಳನು ಮನ್ನಣೆಯಿಂದ ತಣಿಸಿ ಕಾಪಾಡುವನು ನೀನಹುದೆಂದು ಮಣಿದು ಬೇಡುವೆ ನಿನ್ನ ಮುರಹರ ಸಲಹಿನ್ನು 2 ಮಾಧವ ಮಂಗಲದಾಯಕ ತವ ಪದ್ಮ ಪಾದ ಸೇವೆಯ ಮಾಡುವಲ್ಲಿಗೆ ಜಾಹ್ನವಿ ಗೋದಾವರಿ ತುಂಗ ಕಾವೇರಿ ಕಲುಷಾವ ನೋದದಿ ಕೃಷ್ಣ ಸರಸ್ವತಿ ಗೋಮತಿ ವೇದವತಿ ಮೊದಲಾದ ನದಿಗಳೆಲ್ಲ ಸಾದರದಲಿ ಸೇರುತ ಬಂದಿಹರೆಂಬ ಗಾಧವಚನ ನಂಬುತ ನಿಂದಿಹೆನು ಕ್ಷೀ ರೋದಧಿ ಗೃಹನಿರತ ಸಾಕಿದೆ ಮುಂದಿ- ನ್ಹಾದಿ ತೋರಿಸು ಸ್ವರತ ಶ್ರೀದ ವೆಂಕಟರಾಜ ಸೇವಕನಾನೆಂದು 3
--------------
ತುಪಾಕಿ ವೆಂಕಟರಮಣಾಚಾರ್ಯ
ದ್ವಾದಶನಾಮ ಸ್ತುತಿ ನಿನ್ನ ನೋಡಿ ಧನ್ಯನಾದೆನು ಶ್ರೀರಂಗನಾಥ ಪ ನಿನ್ನ ನೋಡಿ ಧನ್ಯನಾದೆ ಪನ್ನಗಶಯನ ರಂಗ ಮನ್ನಿಸಿ ರಕ್ಷಿಸು ಎನ್ನ ಮುನ್ನಜನ್ಮ ಬಾರದಂತೆ ಅ.ಪ. ಅರ್ಚ ಶೇಷಶಯನ ಲಕ್ಷ್ಮಿಗೆರಗಿ ಕೇಶವ ನಿಮ್ಮ ಸ್ತುತಿಸುವೆ 1 ಆದಿಸೃಷ್ಟಿಯಲ್ಲಿ ಬ್ರಹ್ಮನ ನಾಭಿಕಮಲದಲ್ಲಿ ಸೃಷ್ಟಿಸಿ ವೇದಸಾರವಾದ ಪ್ರಣವ ಓದಿ ಪೇಳಿದ ನಾರಾಯಣ 2 [ಆರ್ತಿ]ಯಿಂದ ಅಜನು ನಿಮ್ಮ ಮೂರ್ತಿಗಾಗಿ ತಪವ ಮಾಡೆ ಮಧುವೈರಿ ಮಾಧವಾ 3 ಪ್ರಣವಾಕಾರ ವಿಮಾನದಲ್ಲಿ ನಾಲ್ಕು ವೇದಶೃಂಗವಿರಲು [ವಿಷ್ಣು] ಪರವಾಸುದೇವರಿಂದ ಬಂದ ಶ್ರೀಗೋವಿಂದ 4 ಸತ್ಯಲೋಕದಲ್ಲಿ ನಿಂತು ನಿತ್ಯಪೂಜೆಯನ್ನು ಗ್ರಹಿಸಿ ಮತ್ತೆ ಇಕ್ಷ್ವಾಕುಗೊಲಿದ ವಿಶ್ವಮೂರುತಿ ವಿಷ್ಣುವೇ 5 ಸರಯು ತಮಸ ತೀರಮಧ್ಯದಿ ಹರಿಯೆ ನಿಮ್ಮನಿರಿಸಿ ದೊರೆಯು ಪರಮಪುರುಷನಿಂದ ಪೂಜೆ ಗ್ರಹಿಸಿದ ಮಧುಸೂದÀನ 6 ರಾಜ್ಯಾಭಿಷೇಕ ಕಾಲದಲ್ಲಿ ರಾಮಚಂದ್ರರು ರಾಕ್ಷಸೇಂದ್ರಗೆ ಕೊಡಲು [ರಾಜ್ಯವ] ಕಾವೇರಿ ಮಧ್ಯದಿನಿಂದು ತ್ರಿಜಗವಳೆದ ತ್ರಿವಿಕ್ರಮ 7 ಫಾಲ್ಗುಣ ಮೀನ ಉತ್ತರ ಫಲ್ಗುನೀ ನಕ್ಷತ್ರದಲ್ಲಿ ಬಾಲನಾಗಿ ಚಂದ್ರಪುಷ್ಕರಿಣಿ ತೀರದಿ ನಿಂದ ವಾಮನ 8 ಜಾಮಾತನೆನಿಸಿ ಗ್ರಹಿಸಿ[ದ] ಶ್ರೀದೇವಿ ಸಹಿತ ಶ್ರೀಧರ 9 ಮಳೆಯನಿಟ್ಟು ಧ್ವಜವಕಟ್ಟಿ ಸುರರ ಕರದು ಯಾಗವ ಮಾಡಿ ಯಾತ್ರದಾನದ [ತಳೆದ] ಹೃದಯವಾಸ ಹೃಷಿಕೇಶವ 10 ವೀರ ಮರುದಿನದಿ ಜಟಾಶೋಧಕರ ಮಂಟಪದಿ ನಿಂದು (?) [ಧೀರ] ಮುದುಕಿಗೊಲಿದು ದಧ್ಯಾನ್ನವ ಉಂಡ ಶ್ರೀಪದ್ಮನಾಭ 11 ನಾಲ್ಕು ದಿವಸದಲ್ಲಿ ನಾಗವೈರಿಯನ್ನು ಏರಿಬಂದು ಕಲ್ಪವೃಕ್ಷವು ಸರ್ಪವಾಹನ ಏರಿದ ದಾಮೋದರ 12 ಆರು ದಿವಸದಲ್ಲಿ ವರಿಯೂರಿಗೆ ಹೋಗಿ ನಿಮ್ಮ ಸಂತೈಸಿ ಮಾಲೆಧರಿಸಿದ ಸಂಕರ್ಷಣ 13 [ಮಾರನೆ] ದಿವಸದಲಿ ಚೂರ್ಣಾಭಿಷೇಕವನು ಧರಿಸಿ ವಾಸುದೇವ 14 ಎಲ್ಲೇಕೆರೆಗೆ ಪೋಗಿ ಭೂಮಿಯೆಲ್ಲ ನೋಡಿ ಹರುಷದಿಂದ ಅ[ಲ್ಲೆ] ತೇಜಿಯನೇರಿ ತೇರಿನೆದುರೆ ಪೇರಿಬಿಟ್ಟ ಪ್ರದ್ಯುಮ್ನ 15 ಪಂಗುನ್ಯತ್ತರವು ಬರಲು ಉಂಗುರವನು ಬೇಡಿತಂದು ಅನಿರುದ್ಧ 16 ತಿಂದ ಪಂಜಿನಪ್ರಹಾರ ಹರುಷದಿಂದ ಪುರುಷೋತ್ತಮ 17 ಪತ್ನಿಯೊಡನೆ ಪ್ರೇಮಕಲಹ ಅರ್ತಿಯಿಂದ ಮಾಡುತಿರಲು ವಿಷ್ಣು ಚಿತ್ತರ ವಾಕ್ಯದಿಂದ ಅರಸಿಗೇರಿದಾ ಅಧೋಕ್ಷಜಾ 18 ಮಂದರೋದ್ಧರ ತನ್ನ ಇಂದಿರೆಸಹಿತವಾಗಿ ಬಂದು ಗೋರಥವನೇರಿ ನಾಲ್ಕುಬೀದಿ ಮೆರೆದ ನಾರಸಿಂಹ 19 ವಾರಿಜಾಕ್ಷ ರಥವನಿಳಿದು ಕಾವೇರಿಯಲ್ಲಿ ತೀರ್ಥವಿತ್ತು ದರ್ಪಣದ ಗೃಹದಿ ನಿಂದ ಅರ್ತಿಯಿಂದ ಅಚ್ಚುತ 20 ಸಪ್ತ ಆವರಣವೆಲ್ಲ ಶಬ್ದವಿಲ್ಲದೆ ಸುತ್ತಿ ಬಂದು ಭಕ್ತ ಭಾಷ್ಯಕಾರರಿಗೊಲಿದ ದುಷ್ಟಮರ್ದನ ಜನಾರ್ಧನ 21 ಪೃಥವಿಯೊಳಗಾಶ್ಚರ್ಯವಾದ ಪ್ರತಿಯಿಲ್ಲದ ಪಲ್ಲಕ್ಕಿಯೇರಿ ಅತಿಶಯದಿಂದ ಬಂದ ಉರಗಶಯನ ಉಪೇಂದ್ರ 22 ಅಂದು ಸುರರ ಛಂದದಿಂದ ಮಂದಿರಕ್ಕೆ ಕಳುಹಿ ರಂಗ ಬಂದು ಭಕ್ತರ ಪಾಪ[ವ] ಪರಿಹರಿಸಿದಾ ಶ್ರೀಹರಿ 23 ಅಷ್ಟು ಚರಿತ್ರೆಯನ್ನು ಕೇಳಿ ಕಟ್ಟಿದ ಕಂಕಣವ ಬಿಚ್ಚಿ ಶ್ರೇಷ್ಠವಾದ ಸ್ಥಾನದಲ್ಲಿ ಮಂತ್ರಿ ಸಹಿತನಿಂದ ಶ್ರೀಕೃಷ್ಣ 24 ದಕ್ಷಿಣಗಂಗೆಯಾಗಿ ನಿಂದು ಭಕ್ತನ ದ್ವೀಪವನ್ನು ನೋಡುತ ಮುಕ್ತಿಮಾರ್ಗವನ್ನು ತೋರಿದ ಭಕ್ತವತ್ಸಲ ವೆಂಕಟರಂಗ 25
--------------
ಯದುಗಿರಿಯಮ್ಮ
ನಂದ ವೃಜ ಮಧುರಿ ದ್ವಾರಕೀಯೊಳಾಡಿದ ಕೂಸೆಎಂದು ಬಾಹುವಿ ಇಲ್ಲಿಗೆ ಪ ಮಧುರೆಯಲಿ ನೀಪುಟ್ಟಿ ಪಿತೃಗಳ ರಕ್ಷಿಸಿದಿಹಿತದಿಂದ ಯಾದವರ ತಲೆಯ ಕಾಯ್ದಿಮೃತವಾದ ಮಗುವನು ಗುರುಸತಿಯ ಮಾತಿಗೆ ಕೊಟ್ಟೆಪ್ರತಿಗಾಣೆನೊ ನಿನ್ನ ಬಲಕೆ ಛಲಕೆ 1 ವೈರಿ ಬಾಧೆಯ ಬಿಡಿಸಿಭೂರಿ ಸುಖವಿತ್ತು ಪೊರೆದಿ ಭರದಿ 2 ಸರಯು ತೀರದಿ ಅಯೋಧ್ಯಾ ಪುರದೊಳಗೆ ಕಾಂಚನದಪರಮ ಪೀಠದಿ ಕುಳಿತು ಸೀತೆಯೊಡನೆಹರಳು ಕೆತ್ತಿದ ನಾನಾ ಭೂಷಣಂಗಳನಿಟ್ಟುಮರುಳು ಮಾಡುವಿ ನಮ್ಮನೂ ನೀನು 3 ನಂದ ಗೋಕುಲದಿ ರವಿ ನಂದನೀಯ ತೀರದಲ್ಲಿಚಂದದಿಂದಲಿ ನಿಂತು ಕೊಳಲನೂದಿಮಂದಗಮನಿಯರ ಮನಸು ಮರುಳು ಮಾಡುತ ಸುಖವು ದ್ವಂದ್ವಲೋಕದಿ ಕೊಟ್ಟಿ ಭೆಟ್ಟಿ 4 ಸಿರಿ ಸಂಪತ್ತು ಬಲ್ಲೆಇಂದಿರೇಶನೆ ಎನ್ನ ಚಿತ್ತ ಮಂದಿರದೊಳು ನಿನ್ನಸುಂದರಾನನ ತೋರೋ ಬಾರೋ5
--------------
ಇಂದಿರೇಶರು
ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ನದೀಸ್ತೋತ್ರವು ಕೃಷ್ಣ ಗೋದಾವರೀ ನಂದಿನೀ ನಳಿನೀ ಹೇಮಾವತಿ ಸಿಂಧು ಸರಯು ನೇತ್ರಾವತಿ ಕುಮದ್ವತೀ ಭಾಗೀರಥೀ ಭೋಗವತಿ ಜಾಹ್ನವೀ ಜಯಮಂಗಲಿ ತ್ರಿಜಗತ್ವಾವನೀ ವಿಷ್ಣು ಪಾದೋದ್ಭವೆ ದೇವಿ ಕೃಷ್ಣವೇಣಿ ಅಘನಾಶಿನೀ ಗಂಗಾ ಯಮುನಾ ತ್ರಿವೇಣೀ ದಕ್ಷಿಣ ಪಿನಾಕಿನೀ ನರ್ಮದಾ ಸಾವಿತ್ರೀ ಗಾಯತ್ರೀ ಸರಸ್ವತೀ ಸೀತಾ ಮಾಲತೀ ಚಮಲಾಪಹ ವಾರಾಹೀ ವೈಷ್ಣವೀ ಸುಜ್ಯೋತಿ ಶಿವಗಂಗಾ ಪಂಚಗಂಗೀ ತ್ರಿಪದಗಾಮಿನೀ ಬ್ರಹ್ಮಪುತ್ರಾ ತುಂಗಭದ್ರಾ ಭೀಮರಥೀ ಗೋಮತೀ ಶರಾವತೀ ಸ್ವಾಮಿ ಪುಷ್ಕರಿಣೀ ವರಹ ಪುಷ್ಕರಿಣಿ ಪಾಂಡುತೀರ್ಥ ಪಾಪನಾಶಿನೀ ಆಕಾಶಗಂಗಾಧವಳ ಗಂಗಾ ಶಾಲ್ಮಲೀ ಲೋಕಪಾವನೀ ಕುಮಾರ ತೀರ್ಥ ವಿಷ್ಣುತೀರ್ಥ ನಾರಾಯಣತೀರ್ಥ ಕೌಮೋದಕೀ ಕಪಿಲತೀರ್ಥ ಅಲಕನಂದ ವರದಾ ಪಶ್ಚಿಮವಾಹಿನೀ ಸಿಂಧು ನದಿ ಶೋಣನದಿ ಚಂದ್ರಭಾಗ ಅರ್ಕಾವತೀ ಸುವರ್ಣ- ಮುಖರೀ ಗೋಗರ್ಭ ಶಿಂಶಾಕಾಗಿನೀ ಮಂದಾಕಿನೀ ಪ್ರಾತ:ಕಾಲೇ ಪಠÉೀನ್ನಿತ್ಯಂ ದು:ಖದಾರಿದ್ರನಾಶನಂ ಸ್ಮರಾಮಿ ನಿತ್ಯಂ ಭವದುಃಖ ದೂರಾ ಶ್ರಿ ಕಮಲನಾಭ ವಿಠ್ಠಲೋ ವಿಜಯತೇ ಶುಭಂ
--------------
ನಿಡಗುರುಕಿ ಜೀವೂಬಾಯಿ
ನಮಿಪೆ ನದಿ ದೇವತೆಗಳೇ | ನಿಮಗೆ ಪ. ನಮಿಪೆ ನದಿ ದೇವತೆಗಳೇ ನಿಮ್ಮ ಚರಣಕ್ಕೆ ಕಮನೀಯ ಗಾತ್ರೆಯರೆ ಕಂಜದಳ ನೇತ್ರೆಯರೆ ಸುಮನರ ವಂದಿತರೆ ಸುಗುಣ ಸಂಪನ್ನೆಯರೆ ಅಘ ಹರೆಯರೇ ಕಮಲನಾಭನ ಅಂಗೋಪಾಂಗ ಸಂಜಾತೆಯರೇ ಅಮರ ಭೂ ಪಾತಾಳ ಲೋಕ ಸಂಚರೆಯರೆ ನಮಿಸಿ ಸ್ನಾನವಗೈವ ನರರ ಪಾವನಗೊಳಿಪ ಅಮಿತ ಪಾವಿತ್ರತರರೇ 1 ಗಂಗೆ ಗೋದಾವರಿ ಯಮುನೆ ಸರಸ್ವತಿ ಸಿಂಧು ಮಂಗಳಾಂಗೆ ಕೃಷ್ಣ ಭೀಮರಥಿ ಪಲ್ಗುಣಿ ಸಂಗಮ ತ್ರೀವೇಣಿ ಸರಯು ಗಂಡಿಕಿ ಸೀತ ತುಂಗಭದ್ರಾ ನಾಮರೇ ಅಂಗ ಮಾಲಾಪಾರಿ ಕಾವೇರಿ ಕಪಿಲೆ ನರ ರಂಗ ಪಾವನ ಗೈವ ಪುಷ್ಕರಗಳಭಿಮಾನಿ ಅಂಗನೆಯರೆÀಲ್ಲರಿಗೆ ಅಭಿವಂದಿಸುವೆ ಅಘವ ಹಿಂಗಿಸುವುದೆಂದು ಮುದದೀ 2 ಬಂದು ಸ್ವಪ್ನದಿ ಮಾಘ ಶುದ್ಧ ನವಮೀ ಭರಣಿ ಸಂಯೋಗದ ಪರ್ವವೆಂದು ಭದ್ರೆಲಿ ಸ್ವಾನ ವಿಂದು ಗೈದೆವು ಎಂದು ಮುಂದೆ ಕುಳ್ಳಿರೆ ನಾನಾ ನಂದದಿಂ ಕಂಡು ನಿಮ್ಮಾ ಸುಂದರಿಯರೇ ನಿಮ್ಮ ಸಂದರ್ಶನದಿ ಫಲವು ಬಂದುದೆನಗೆಂದು ನಾನಂದ ವಚನಕೆ ನಲಿದು ಒಂದು ಅರಿಯದ ಎನಗೆ ತಂದು ಕೊಟ್ಟಿರಿ ಸ್ನಾನ ದಿಂದ ಬಹು ಪುಣ್ಯ ಫಲವಾ 3 ಹರದಿಯರೆ ಕಂಡೆ ನಿಮ್ಮರವಿಂದ ಮುಖ ಶುಭ್ರ ಸರಿತು ದೇವತೇಗಳೇ ಗುರು ಕೃಪೆಯ ಬಲದಿಂದ ಸಿರಿ ನದಿಗಳೇ ಜಗದಿ ಭರದಿಂದ ಪರಿದು ಸಾಗರವ ಕೂಡುವ ತ್ವರದಿ ಪರಿಪರಿಯ ಜಲ ಜಂತು ಸಂಸಾರಿ ಸಂಗೆಯರೆ ನರರು ಬಣ್ಣಿಸಲಳವೆ ಕರುಣಿ ನಿಮ್ಮಯ ಮಹಿಮೆ ಸಿರಿಕಾಂತ ಪ್ರಿಯಸುತೆಯರೇ 4 ಶ್ರೇಷ್ಟನದಿ ಅಭಿಮಾನಿ ಸತಿಯರೇ ಎನ್ನ ಅಘ ಸುಟ್ಟು ನಿರ್ಮಲ ಭಾವ ಕೊಟ್ಟು ಹೃತ್ಪದದಲಿ ವಿಷ್ಣು ಮೂರ್ತಿಯ ಕಾಂಬ ಶ್ರೇಷ್ಟ ಜ್ಞಾನದ ಮಾರ್ಗ ಕೊಟ್ಟು ಸದ್ಭಕ್ತಿ ಭರದೀ ಚಿಟ್ಟನೇ ಚೀರಿ ದಾಸ್ಯದ ಭಾವದಲಿ ಕುಣಿದು ಶ್ರೇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲನ ಪದ ಮುಟ್ಟುವೊ ವಿಜ್ಞಾನ ಪ್ರವಹ ರೂಪದಿ ವಲಿದುದಿಟ್ಟಿಯರ ಸಂತೈಸಿರಿ 5
--------------
ಅಂಬಾಬಾಯಿ
ಬಡವನ ಮನೋರಥ ಪೂರೈಸು ಸಿರಿಕೃಷ್ಣ ಒಡೆಯ ನೀನಲ್ಲದೆ ಪೂರೈಸುವರಿಲ್ಲ ಪ ಕಿವಿಯು ನೀಡಿದುದಕೆ ಎನಗೊಮ್ಯಾದರು ಮನೋ ಕುವರಿಯ ಭೃತ್ಯತನ ಕೊಡು ಕಂಡ್ಯ ಸುವಿಮಲತರ ಮತಿಯಾದ ವಿಷ್ಣುರಾತೋ ದ್ಭವನ ಬಳಿಯಲೊಮ್ಮೆ ನಿಲಿಸಯ್ಯಾ ಹರಿಯೆ 1 ನಯನವು ಕೊಟ್ಟದಕೆ ಎನ್ನೊಮ್ಮೆ ರಣದಿ ವಿ ಜಯನ ಬಳಿಯಲೊಮ್ಮೆ ನಿಲಿಸಯ್ಯಾ ಭಯದಿ ಸೂತರ ಸುಮ್ಮನಿಹ ಭೀಷ್ಮಕ ಕುರುಪ ತಿಯರ ಸಭೆಯಲೊಮ್ಮೆ ನಿಲಿಸಯ್ಯ ಹರಿಯೆ 2 ರಸನವು ಎನಗಿನ್ನು ಕೃಪೆಮಾಡಿದುದಕೆ ಗೋ ರಸವ ಕದ್ದು ಮೆಲುವ ಕಾಲದಲ್ಲಿ ಇಸಕೊಂಬ ಗೋವಳರ ಒಳಗೆ ಎನ್ನನು ಒಬ್ಬ ಶಿಶುವಿನ ಮಾಡಿ ಪುಟ್ಟಿಸು ಕಂಡ್ಯ ಹರಿಯೆ 3 ಎನಗೆ ತ್ವಗೇಂದ್ರಿಯವ ದಯಮಾಡಿದದಕಿನ್ನು ಕರ ಕಂಜರದಿ ಅನುವಾದಿಷ್ಟಕ ಭಾವ ಸರಯು ಯಮುನಾ ತೀರ ಜನಿತವಾಳುಕ ಭಾವವನು ಕೊಡು ಹರಿಯೆ 4 ನಾಶಿಕವು ಇತ್ತದಕೆ ಗೋಪಿಯ ವಿಹಾರದಿ ವಾಸುದೇವವಿಠಲ ನಿನ್ನ ಕೊರಳೊಳಿದ್ದ ಸೂಸಿ ಬಿದ್ದ ಮಾಲಿಕೆಯ ಕುಸುಮಂಗಳ ಬಲು ವಾಸನ ಲÉೂೀಲುಪ ಮಧುಕರ ಭಾವ ನೀಡೊ 5
--------------
ವ್ಯಾಸತತ್ವಜ್ಞದಾಸರು
ರಾಮಾ ನಿನ್ನಯ ದಿವ್ಯ ನಾಮಾ ನೆನೆವೆನು ರಾಮಾ ನಿನ್ನಯ ದಿವ್ಯ ನಾಮಾ ಪ್ರೇಮವ ಕೊಟ್ಟನ್ನಾ ನೇಮದೊಳಿರಿಸೊ ನೀ ಕರುಣದಿ ಪ ಚಿತ್ತ ಶುದ್ಧವ ಮಾಡಿ ಮತ್ತೆ ನಿನ್ನಯ ಪಾದ ನಿತ್ಯದಿ ನೆನೆವಂತೆ ಭಕ್ತಿಯೊಳಿರಿಸೊ ನೀ ಎನ್ನನು 1 ದಶರಥನುದರದಿ ಶಿಶುವಾಗಿ ಜನಿಸಿದೆ ಹೊಸ ಆಭರಣವಿಟ್ಟು ಕುಶಲಮಾತೆಯನು ನೋಡುವ 2 ಛಂದದಿಂದಲಿ ಆನಂದದೊಳಿಹ ರಾಮಾ ಚಂದ್ರನ ಮೊಗ ಅತಿ ಸುಂದರವಾಗಿರುವವನೇ 3 ಬಿಲ್ಲ ಬಾಣವಪಿಡಿದು ಎಲ್ಲಾ ದೈತ್ಯರ ಕೊಂದು ಅಲ್ಲೇ ಕೌಶಿಕಯಾಗ ಎಲ್ಲ ಸಲಹಿದೆ ಧೀರನೇ 4 ವಿಥುಳಾಪುರದಿ ಬಂದು ಅತುಳ ಧನುವ ಮುರಿದು ಸತಿ ಸೀತಾ ಸಹಗೂಡಿ ಪಿತನಾ ಪಟ್ಟಣವನು ಸೇರಿದೆ 5 ಮಾತೆಯ ವರ ಕೇಳಿ ನೀತಿಯಿಂದಲಿ ಅನು ಜಾತನ ಒಡಗೂಡಿ ಖ್ಯಾತಿಯಿಂದಲಿ ಪೋದಂತಹ 6 ಸರಯು ತೀರದಿ ಬಂದು ಪುರದ ಜನರ ಬಿಟ್ಟು ಭರದಿ ನಾವೆಯನೇರಿ ತ್ವರಿತದಿಂ ದಾಟಿ ನೀ ಪೋದೆ 7 ಭಕ್ತಿಯಿಂದಲಿ ಆ ಸಕ್ತ ಭರತನ ಕಂಡು ಯುಕ್ತಿಯಿಂದಲಿ ತೇಜೋಯುಕ್ತಪಾದುಕವನು ಕೊಟ್ಟೆನೀ 8 ಪುಸಿಯತಿಯಾಗಿ ಶೀತೆಯ ಅಸುರ ಕೊಂಡೊಯ್ದನೆಂದು ವ್ಯಸನದಿಂದಲಿ ಪೋಗಿ ಪಕ್ಷಿಯುದ್ಧರಿಸಿದೆ ಘಮ್ಮನೆ 9 ಶಾಂತಮೂರುತಿ ಹನುಮಂತರೆಲ್ಲರು ಕೂಡಿ ಅಂತರದಲಿ ಸೇತು ನಿಂತು ನೋಡುವೆ ನೀ ಛಂದದಿ 10 ಶರಣ ಬಂದ್ವಿಭೀಷಣನ ಕರುಣದಿಂದಲಿ ಕಾಯ್ದೆ ಸ್ಥಿರದಾಪಟ್ಟವಗಟ್ಟಿ ಹರುಷದೋಳ್ ನಿಲಿಸಿದೆ ಅವನನು 11 ವಾನರರೊಡಗೊಂಡು ಸೇನೆ ಸಹಿತಲೇ ದಶಾ ನನ ರಾವಣನಕೊಂದು ಮಾನಿನೀ ಸಹಿತನೀ ಬಂದಿಹೆ 12 ಪುಷ್ಪಕವನೆ ಏರಿ ಅಕಸ್ಮಾತದಲಿ ಬಂದು ಆಕ್ಷಣದಲಿ ಭರತ ರಕ್ಷಣ ಮಾಡಿದ ದೇವನೇ 13 ಪಟ್ಟಣದಲಿ ಮಾಹಾ ಪಟ್ಟವನೇರಿಸಿ ಶಿಷ್ಟ ಅಯೋಧ್ಯೆಯ ಪಟ್ಟಣವಾಳಿದೆ ರಾಮನೆ 14 ಬ್ರಹ್ಮಮೂರುತಿ ರಾಮಾಗಮನ ಚರಣದಿ ಸುಮ್ಮಾನದಲಿ ಶಾಂತಿ ತನ್ಮಯಗೊಳಿಸಾನಂದದಿ 15
--------------
ಶಾಂತಿಬಾಯಿ
ವಂದಿಸುವೆನು ರಘುವರನಾ ಸುರವಂದಿತ ಚರಣಾಂಬುಜನ ಪ ತಂದೆ ಮಾತಿಗೆ ವನಕ್ಹೋಗಿ ಬಂದವನಾಸುಂದರ ಸಹ ಸೀತೆಯಿಂದ ಅನುಜನಾ ಅ.ಪ ಚಾಪ ಭಂಜಕನಾ 1 ವಾರಿಧಿ ಸೇತು ಬಂಧಕನಾ ಸೀತಾ -ಚೋರನ ಶಿರವಳಿದವನಾಚಾರು ಸಿಂಹಾಸನವೇರುತ ಸರಯು -ತೀರದ ಅಯೋಧ್ಯಾ ವಿಹಾರ ಸುಂದರನಾ2 ಕೇಸರಿ ಸುತಗೆ ತನುಧನಮಣಿಆಶ್ರಯವನು ಕೊಟ್ಟವನಾಕೋಸಲ ಜನರಿಗೆ ಮೋಕ್ಷವವಿತ್ತವನಾಇಂದಿರೇಶ ಸುಖಾತ್ಮ ನಿರ್ದೋಷ ಪುರುಷನಾ 3
--------------
ಇಂದಿರೇಶರು
ಸ್ಮರಿಸಿ ತೀರ್ಥಕ್ಷೇತ್ರ ಸಜ್ಜನರು ನಿತ್ಯದಲಿ ಅರಣೋದಯದಲೆದ್ದು ಭಕ್ತಿಪೂರ್ವಕವಾಗಿ ಕಠಿಣಶ್ರಮದಿ ಮಾಳ್ಪ ಪಾಪರಾಶಿಗಳ ಪರಿಹರಿಸುತ್ತ ಸಂತ್ಯೆಸುವಾ ಪ ಭಾಗೀರಥಿ ಸರಸ್ವತಿ ಯಮುನಾ ವಾರಾಣಾ ಶ್ರೀ ಗೋದ ಫಲ್ಗುಣಿ ಶೋಣಭದ್ರಾ ನರ್ಮ ದಾ ಗಂಡಕಿ ಭಿಮರಥಿ ತುಂಗಭದ್ರೆ ಪ್ರಯಾಗ ತ್ರಿವೇಣಿ ಹೇಮಾ ವೇಗವತಿ ಗಾಯತ್ರೀ ಕಾಶಿಮಣಿಕರ್ಣಿ ಕಾ ಗೌತಮಿ ವಿಯದ್ಗಂಗಾ ಕುಮುದ್ವತೀ ಸಿಂಧು ಪಾಪಾಘನಾಶಿನೀ 1 ಸರಯು ಜಯಮಂಗಳ ಜಮದಗ್ನಿ ವರತಾಮ್ರ ಪರಣಿ ಯೋಗಾನಂದ ಕೃತಮಾಲಕುಹು ಮಹೇ ಧುನಾಶಿ ಗರುಡ ಮದಿರಾ ಮರುದ್ವತಿ ಸ್ವರ್ಣಮುಖರಿ ವರ ಝರತಾಪಿನಿ ಕಾಳಿ ಸೌ ಪರಣಿ ದಕ್ಷಿಣೋತ್ತರಪಿನಾಕಿ ಕಪಿಲ ಶೀತಳ ಕಾನಂದ ಕುರಮುಖಿ ಪ್ರಣವಸಿದ್ಧ 2 ಕಾವೇರಿ ಸಿಧು ಮಾಲತಿ ಗಾರ್ಗಿಣಿ ಹರಿ ಕುಂದ ಕುಂದಿನಿ ಶೈವ ದೇವವತಿ ಪಾತಾಳ ಗಂಗಾ ಪುನಹ ನೀರಾ ಕುಮಾರಧಾರಾ ಸಾವಿತ್ರಿ ದಾನ್ಯಮಾಲಾ ಪುಷ್ಪವತಿ ಲೋಕ ಸಿಂಧು ಧರ್ಮಕು ಭವ ನಾಶಿನಿ ವರದಾ ಮಲಾಪಹಾರಿ 3 ಸ್ವಾಮಿ ಪುಷ್ಕರಣಿ ಮಾನಸ ಚಂದ್ರ ಪುಷ್ಕರಣಿ ಭೂಮಂಡಲದೊಳುತ್ತಮೋತ್ತಮ ತ್ರಿಪುಷ್ಕರಣಿ ನಿತ್ಯ ಪದ್ಮಸರ ಚಂದ್ರಭಾಗತೀರ್ಥ ವಾಮನ ಮಯೂರ ಪಂಪಾಸರೋವರ ಪುಣ್ಯ ಧಾಮ ವ್ಯಾಸ ಸಮುದ್ರ ಧವಳಗಂಗಾ ಸುಸಾ ರೋಮಹರ್ಷತೀರ್ಥ 4 ದ್ವಾರಕಾನಗರ ಸಾಲಗ್ರಾಮ ಟರರ ಬದರಿ ಕೇ ದಾರ ನರನಾರಾಯಣ ಶ್ರೀ ಮಜ್ಜಗನ್ನಾಥ ಶ್ರೀ ಮುಷ್ಣ ಮಂದರ ಮೈನಾಕ ಕೈಲಾಸ ಕಂಚಿ ಶ್ರೀರಂಗನಾಥ ನೈಮಿಷ ದ್ವೈತವನ ಚಂಪ ಕಾರುಣ್ಯ ಕಾಶಿ ಪಂಪಾವಂತಿಕಾ ಪುರಿ ಹರಿದ್ವಾರ ಛಾಯಾಪಿಪ್ಪಲ 5 ಕೇದಾರ ಸಾಗರ ಮಂದಾಕಿನಿ ಕುಸುಮವತಿ ಆದಿಸುಬ್ರಹ್ಮಣ್ಯ ಕೋಟೇಶ್ವರ ನಂದಿ ವೇದಪಾದ ಯಯಾತಿ ಗಿರಿ ಕಾಲಹಸ್ತಿ ಕೌ ಮೋದಕೀ ಪಾಡುರಂಗ ಕ್ಷೇತ್ರ ಶ್ರೀ ವಿಷ್ಣು ಪಾಟಲೀ ಮಂತ್ರಾಲಯ6 ಮಂದರ ಮಲಯ ಕೈವಲ್ಯನಾಥ ಕಾಶೀರ ಜಾಂಬವತಿ ವೃಂ ಶ್ರೀ ವಿರೂಪಾಕ್ಷ ಕುಂದರ ನಂದಪುರಿ ಮಾಯಾ ಶ್ರೀವತ್ಸ ಗಂಧಮಾದನ ಚಿತ್ರಕೂಟ ದ್ವಾ ನರಾಚಲಾಸೌಭದ್ರಿ ಆದಿನಾಥ 7 ಈ ಮಹಿಮಂಡಲದೊಳಿಪ್ಪ ತೀರ್ಥಕ್ಷೇತ್ರ ನಾಮಗಳ ಕಾಲತ್ರಯದಲ್ಲಿ ಸರಿಸುತಿಹ ಧೀಮಂತರಿಗೆ ಸಂಚಿತಾಪ ಪರಿಹರದಾನಂತರದಲಿ ಸೋಮಾರ್ಕರುಳನಕ ಸಕಲ ಭೋಗಗಳ ಸು ತ್ರಾಮಲೊಕದ ಲುಣಿಸಿ ಕರುಣಾಳು ಪ್ರಾತ್ಯಕೆ ಸ್ವ ಅಹುದೆಂದು ಸೂತ ಶೌನಕಣೆ ಪೇಳ್ದ8 ಈ ಭರತ ಖಂಡದೊಳಗುಳ್ಳ ತೀರ್ಥಕ್ಷೇತ್ರ ವೈಭವಾಬ್ಜ ಭವಾಂಡ ಪಾರನದೊಳಗೆ ಹರಿ ಪರಮಕಾರುಣ ದಿಂದ ಸ್ತ್ರೀಬಾಲ ಗೋವಿಪ್ರಮಾತ ಪಿತೃಗಳ ಧನ ಲೋಭದಿಂದಲಿಕೊಂದ ಪಾತಕವ ಪರಿಹರಿಸಿ ಬೇಡಿದಿಷ್ಟಾರ್ಥಗಳನು 9
--------------
ಜಗನ್ನಾಥದಾಸರು
ಹನುಮಂತ ಬಲವಂತ ಅತಿ ದಯವಂತಾ | ಘನವಂತ ಕೀರ್ತಿವಂತ ಅತಿ ಜಯವಂತಾ || ಅನುದಿನದಲಿ ನಿನ್ನ ನೆನೆಸುವೆ ಎನ್ನ ಮನದಾಸೆ | ಯ ನೀಯೋ ದನುಜ ಕೃತಾಂತಾ ಪ ಪಾವಮಾನಿ ಸತತ ಪಾವನ್ನ ಚರಿತಾ | ಪಾವಕಾಂಬಕನುತಾ ಪ್ಲವಂಗನಾಥಾ || ದೇವ ಕರುಣಪಾಂಗಾ ಭಾವುಕತುಂಗಾ | ಗ್ರೀವಾ ಶತಶೃಂಗ ಗ್ರಾವವೆ ಭಂಗಾ || ಕಾವಾ ವರವೀವಾ ಭೋದೇವ ಸಂಭವಾ | ಸು | ಗ್ರೀವ ಸಹಾಯ ಸರ್ವ ದೇವನರಸಿ ಯತಿವರ ಹಾರಿದಾ | ಕೋವಿದಾ ಕಪಿವರ ದೇವಕಿ ತನುಜನಾ || ಮಾವನ ಮಾವನಾ | ಜೀವಕೆ ಮುನಿದನೆ | ಜೀವೇಶ ಮತವನ ಪಾವಕಾ ಜಯ ಜಯ 1 ಧರಣಿಜಾತಿಗೆ ಭದ್ರಕರವಾದ ಮುದ್ರಾದರದಿಂದ ಇತ್ತ ನಿದ್ರಾ | ಗರಳ ದುರುಳರ ವರವದ್ದಾ | ನೆರದಲ್ಲಿ ಶಲ್ಯ ಎದುರ ಬರಲಾಗಿ ಗೆದ್ದಾ | ಮರುತಾ ಸುಖ ಗುರುವೆ ಸುರತರುವೆ | ಫಲ | ನಿರ್ಜರ ಗಣದಲ್ಲಿ ಇಹ | ಪರದಲಿ ದೇವ | ಶರಧೀ ಬಾಗಿದ ಧೀರಾ | ಸೂನು ಆವಾಸ ಯೋಗಕೆ ಸಂ | ಸುರನದಿ ದಾಟಿದಾ ಪರಮಹಂಸ 2 ಕರಡಿ ವಾನರಬಲಾ ನೆರಹಿ ಮಹಾ ಪ್ರಬಲ | ಶಿರ ಹತ್ತುವುಳ್ಳವನ ಕುಲ ವರಿಸಿದಾ ಸುಬಲಾ | ಕುರುಪತಿ ನಿಜ ತಮ್ಮ ಬರಲವನ ಹಮ್ಮು | ಬೊಮ್ಮ ಪೊರೆವನೆ ನಮ್ಮ | ಮರುತಾ ಸುಖ ಭರಿತಾ ಸಂಹರಗೈಸುವ | ಸಂ | ಕರ ಗರ್ವಹರ ಸರಯು ತೀರದಲ್ಲಿದ್ದಾ | ಪುರದಲ್ಲಿ ಮೆರದನೆ | ಕರ ಕಮಲೋದ್ಭವ | ವರ ವೃಕೋದರನೆ ವಿಜಯವಿಠ್ಠಲನ |ಶರಣರ ಪಾಲಾ ಬದರಿವಾಸಾ ಯಂತ್ರೇಶಾ 3
--------------
ವಿಜಯದಾಸ
ಉಪ್ಪವಡಿಸಯ್ಯ ಕೃಷ್ಣ ಪ.ಉಪ್ಪವಡಿಸೈ ಬೊಮ್ಮನಪ್ಪ ಭುವನಾವಳಿಯಸ್ವಪ್ಪನಾದಿ ತ್ರಯವನಪ್ಪಿ ಪಾಲ್ಗಡಲ ಮಗಳಪ್ಪಿ ಅಹಿವರನ ಸುಪ್ಪತ್ತಿಗೆಲಿ ಒರಗಿಪ್ಪತಿಮ್ಮಪ್ಪವ್ರಜದಿ ದಯದಿಅ.ಪ.ಅರುಣಮೂಡಣವೇರೆ ತ್ವರಿತ ತಮಕುಲ ಜಾರೆಹರಿದವಭ್ರದ ತಾರೆ ತರಣಿಕರ ಬಳಿ ಸಾರೆಸರಸಿಜವಿಕಸತೋರೆ ಮರುತ ಪರಿಮಳ ಬೀರೆ ನೆರೆದುಹರುಷ ದಿವಿಗಣ ಬೀರೆ ಮೊರೆಯುತಿವೆ ಸುರಭೇರೆಪರಮಹಂಸರು ಮೇರೆ ಮರೆದು ಸ್ಮರಿಸುತಲೈದಾರೆಸರ್ವವೇದ ಘೋಷ ಹರಿಪರವೆನುತಲೈದಾರೆ ಕರುಣದಲಿವಸುಧ್ಯೆರೆದಕಾಷ್ಠಗಂಧಕುಸುಮಸರ ತಂದಿಹಳುಬಿಸಜಲೋಚನ ನಿಮ್ಮ ಸೊಸೆ ವಾಣಿ ಭಾರತಿಯುಲ್ಲಸದಿ ಪೊಂಭಾಂಡದಲಿ ಬಿಸಿನೀರು ತುಂಬಿಹರುಪಶುಪಸುಸುಪರ್ಣವಸನಉರಗೇಶ ರತುನನಾಸನಮಾಲ್ಯಸುರಪತಿಕಲಶ ವಹಿಸಿ ವರುಣಸ್ಮರತಿಲಕಹಸನ ಮಾಡುವ ಪಾವುಗೆಶಶಿಧರಿಸಿ ನಿಂದ ಸಂತಸದಿಸ್ವರ್ಧುನಿಯು ಗೋದೆ ಗೋವರ್ಧಿನಿಯು ಗಾತ್ರೆಅಜನರ್ಧಾಂಗಿ ಸರಸ್ವತಿ ಶ್ರೀವರ್ಧಿನಿಯು ಕಾವೇರಿನಿರ್ದೋಷಿ ಸರಯು ತುಂಗಭದ್ರೆ ಕಾಳಿಂದಿ ನರ್ಮದ್ಯೆಮರ್ದಿತಘೌಘೆಯು ಕುಮುದ್ವತಿ ವಂಜರೆ ಭೀಮೆನಿರ್ಧೂತಕಲಿಮಲಕಪರ್ದಿನಿಯು ತಾಮ್ರಪರ್ಣಿಊಧ್ರ್ವಗತಿಪ್ರದ ನದಿ ಬಂದಿರ್ದವಿದೆ ತೀರ್ಥ ಕ್ರಮಕಿನ್ನರರು ಸುರನಾಯಕ ಮನ್ನೆಯರು ಸಲೆ ದೇವಗನ್ನೆಯರುಕಿಂಪುರುಷಪನ್ನಗರು ವಿದ್ಯಾಧರನಿಕರ ತುಂಬುರರು ನಿನ್ನಗುಣಕೀರ್ತನೆಯ ಮಾರ್ಗೋನ್ನತದಚೆನ್ನ ಭೂಪಾಳಿ ದೇವ ಧನಶ್ರೀ ದೇಶಾಕ್ಷಿಸನ್ನುತವಸಂತ ಮಲಹ ನವೀನ ಮಾಳ್ಪ ಶ್ರೀಘನ್ನ ಸ್ವನಾಮಂಗಳನು ಪಾಡುವರಿದಕೋ ಧನ್ಯ ಸಂಗೀತಲೋಲ4ಸುರಮುನಿ ಭೃಗು ವಸಿಷ್ಠ ನರಪಋಷಿ ಸನಕಾದ್ಯಮರೀಚ್ಯತ್ರಿ ಪುಲಸ್ತ್ಯ ಆಂಗಿರ ಚ್ಯವನ ಸೌಭರಿಯು ಭಾರಧ್ವಾಜಗಸ್ತ್ಯ ಪರಾಶರ ಕಶ್ಯಪ ಜಮದಗ್ನಿ ಗಾಗ್ರ್ಯಮಾರ್ಕಂಡೇಯ ಬಕದಾಲ್ಭ್ಯ ಕರಂಧಮೋದ್ಧಾಲಕನುವರದಾಂಕ ಜಹ್ನುಮುನಿ ವರ್ಣಿಕುಲದಗಣಿತರುನೆರೆನೆರೆದುತುತಿಸಿಸುಖಭರಿತರಾಗುತ ನಿಮ್ಮ ಚರಣದೂಳಿಗಕ್ಷಿತಿಪರೊಳು ಮರುತ ಪ್ರಿಯವ್ರತ ಪ್ರಾಚೀನ ಬರ್ಹಿಪ್ರಥು ಗಯ ಧ್ರುವಿಕ್ಷ್ವಾಕು ದಿತಿಜಸುತ ಮಾಂಧಾತಪ್ರತಿಸಗರ ನಹುಷಬಲಿಶತಧನ್ವಿದೇಹಿ ದಶರಥಶ್ರುತಕೀರ್ತಿ ಶಿಬಿ ದೇವವ್ರತ ಅಂಬರೀಷನು ಭರತದ್ವಯ ಪುರೂರವ ಯಯಾತಿ ರಂತಿದೇವ ಪರೀಕ್ಷಿತನು ಮುಚುಕುಂದ ನಳ ಶತಪುಣ್ಯಶ್ಲೋಕ ನೃಪರತಿನಂದಗೋಕುಲದ ಗೋವಿಂದಗಾರ್ತರು ನಿದ್ರೆಹೊಂದೆದ್ದಾನಂದದಿಂ ದೀಪಗಳ ಪ್ರಜ್ವಲಿಸಿಮಿಂದು ಬ್ರಾಹ್ಮಿಯಲುಟ್ಟು ಪೊಂದೊಡಿಗೆ ಮಣಿದೊಡಿಗೆವಂದಿಸುತ ಗೃಹದೇವರ ದಧಿಮಥಿಸಿ ಬೆಣ್ಣೆಯಇಂದಿರೆರಮಣ ಮೆಲ್ಲಲೆಂದು ತೆಗೆದಿಡಲರುಹಬಂದಿಹರು ಗೋವಳರು ಮುಂದೆದ್ದು ತಮ್ಮ ಏಳೆಂದುಶ್ರೀಪತಿಯೆ ಬ್ರಹ್ಮಾದಿ ತಾಪಸರ ಪ್ರಭು ಏಳುದ್ವೀಪ ದ್ವೀಪಾಂತರದ ಭೂಪರರಸನೆ ಏಳುಕಾಪುರುಷ ಕಾಳ ಕುಮುದಾಪಹರಹರಿಏಳು ಕೋಪಹೇಪಾರ್ಥಸಖಸುಪ್ರತಾಪ ಜಗ ಎರಡೇಳುವ್ಯಾಪಕನೆ ವಿಬುಧಕುಲಸ್ಥಾಪಕನೆ ಮೂರೇಳುಕೂಪಕುಲನಾಶಕ ಚಮೂಪ ಸಂಹರ ಏಳು ದ್ರೌಪದೀ ಬಂಧು ಏಳು 8ಶ್ರುತಿಯ ತರಲೇಳು ಭೂಭೃತವ ಹೊರಲೇಳುಶುಭಧೃತಿಯನಾಳೇಳು ದುರ್ಮತಿಯ ಸೀಳೇಳಮರತತಿಯ ಸಲಹೇಳು ನಿಜಪಿತನ ಕಾಯೇಳು ಮಹಿಸುತೆಗೆಸತಿಯರಾಳೇಳು ಪತಿವ್ರತೆರ ಗೆಲಲೇಳುಕಲಿಖತಿಯ ಕಳಿಯೇಳು ಪಂಡಿತರುಳುಹಲೇಳು ನಮಗತಿಶಯ ಪ್ರಸನ್ನವೆಂಕಟಪತಿ ಕೃಷ್ಣ ಸದ್ಗತಿದಾತ ತಾತಯೇಳೈ 9
--------------
ಪ್ರಸನ್ನವೆಂಕಟದಾಸರು
ನದೀದೇವತೆಗಳ ಸ್ತುತಿ116ಸ್ಮರಿಸುವೆನನುದಿನ ಮುದದಿಂದ | ಈಧರಿಯ ಮ್ಯಾಲುಳ್ಳ ಮಹಾ ನದಿಗಳ ಪಗೌತಮನಘ ಪರಿಹಾರ ಮಾಡಿದ ಗೋದಾ |ಮಾತೆ ಶ್ರೀ ಕೃಷ್ಣವೇಣೀ ಸರಸ್ವತೀ ||ಆ ತರೂವಾಯ ಶ್ರೀ ಕಾವೇರಿ, ಸರಿಯು ಶ್ರೀ ಯಮುನಾ |ಧೌತ ಪಾತಕೆ ಶ್ರೀ ನರ್ಮದ ತುಂಗಾ 1ಸಿಂಧೂ ಭವನಾಶಿನಿ ಕುಮದ್ವತಿ ಶ್ರೀ ವಂಝಾರ |ಸುಂದರ ಭೀಮಾ ತಾಮ್ರಪರಣೀ ಮಲಹಾ ||ಮಿಂದರೆ ಪಾವನ ಮಾಡುವ ಬಹು ನದಿಗಳ |ಒಂದೇ ಮನಸಿಲಿಂದಾ ಪೊಗಳುವೆ 2ವಾರಣೀ ಫಲ್ಗುಣೀ ಶ್ರೋಣ ಭದ್ರಾ ಗಂಡಕಿಹೇಮ|ಮೂರುವೇಣಿಗಾಯತ್ರಿ ವೇಗವತೀ ||ಸೂರಿಗಮ್ಯ ಕೌಸಿಕ ಮಣಿಕರಣಿಕ ಗೌತಮಿ ಭಾ |ಗೀರಥಿ ಕಾಗಿನಿ ಶ್ರೀ ವೇತ್ರವತೀ3ಹೇಮವತಿ ನೇತ್ರವತಿ ಪಾಪನಾಶಿ ಶ್ರೀ ಸೀತಾ |ಆ ಮಹಾಳಕನಂದಾ ಹಯಗ್ರೀವ ||ಹೇಮಮುಖರ ತಾಪಿನಿ ಕಾಳಿ ಸೌಪರಣಿ ಪಿನಾಕೀ |ಶ್ರೀ ಮತ್ಕಪಿಲ ಜಮದಗ್ನಿಪ್ರಣವಸಿದ್ಧ4ಮರುದ್ವತಿ ಮದಿರ ಮೇನುಕಾ ಸೂನಾಸಿ ಚಕ್ರವತಿ |ಗರುಡ ಶಂಖವತೀ ಕುಹು ಮಹೇಶ್ವರೀ ||ಸರಯು ಜಯ ಮಂಗಳ ಯೋಗಕೃತು ಮಾಲಾ ಗದಾ |ಧರಿ ಮಾಲಿನೀ ಗಾರ್ಗಿಣೀ ದೇವವತಿ5ಸಾವಿತ್ರಿ ಧನ್ಯಮಾಲಾ ಧರ್ಮ ಚಕ್ರತೀರ್ಥಹರಿ|ದ್ರಾವತಿ ಇಂದ್ರಾಣಿ ಪಾತಾಳಗಂಗಾ ||ಶೈವಕುಂಡ ಕುಂಡಿನಿ ನೀರ ಕುಮಾರ ಧಾರೀ ಶು |ಶಾವರ್ತಿ ಮೌಳೀ ಲೋಕಪಾವನೀ 6ಸ್ವಾಮಿ ಪುಷ್ಕರ್ಣಿ ಚಂದ್ರ ಪುಷ್ಕರ್ಣಿ ಮಾನಸ ಪುಷ್ಕರ್ಣಿ |ಶ್ರೀ ಮಧ್ವ ಸರೋವರ ಪದ್ಮ ಸರಾ ||ಸೋಮಭಾಗಾ ವ್ಯಾಸಸಿಂಧುಶ್ರೀ ಪಂಪಾ ಸರೋವರ |ವಾಮನ ಶ್ರೀ ಮಯೂರ ಸರೋವರ 7ರೋಮ ಹರ್ಷಣ ತೀರ್ಥ ಸೀತಾ ಸರೋವರ ಪುಣ್ಯ |ಧಾಮಾ ಶ್ರೀ ಕಪಿಲತೀರ್ಥ ಧವಳಗಂಗಾ ||ಭೀಮಸೇನ ತಟಾಕಬ್ರಹ್ಮಜ್ಞಾನಕನ್ಯಹೃದಯ |ಶ್ರೀ ಮದ್ವಿಶಿಷ್ಟ ತೀರ್ಥ ತಾರಾ ತೀರ್ಥ 8ಈ ತೀರ್ಥಗಳ ದಿವ್ಯನಾಮನಿತ್ಯಪಠಿಸಲು |ಯಾತಕ್ಕಾದರೂ ವಿಘ್ನ ಬಾರದು ||ಮಾತರಿಶ್ವಪ್ರೀಯ ಪ್ರಾಣೇಶ ವಿಠಲನು ಬಹು |ಪ್ರೀತನಾಗಿ ಬಿಡದೆ ಪೊರೆವನು 9
--------------
ಪ್ರಾಣೇಶದಾಸರು