ಒಟ್ಟು 74 ಕಡೆಗಳಲ್ಲಿ , 38 ದಾಸರು , 67 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಗ್ರ ನರಸಿಂಹ ಜ್ವಾಲಾ ಉಗ್ರನರಸಿಂಹಶೀಘ್ರದಿ ಬಂದು ಪ್ರಹ್ಲಾದನ ಮೊರೆಯನುಕೇಳ್ವ ಅಸುರನ ಸೀಳ್ವಾ ಪ ಫಳ ಫಳಯೆನುತಾರ್ಭಟಿಸುತ ಕುಂಭದ ಲೊಡೆದು ಕೋಪವ ಝಡಿದು ಛಿಳಿ ಛಿಳಿಛಿಳಿರನೆ ಕಣ್ಣಲಿ ಕೆಂಗಿಡಿಯುಗುಳೇ ದಿವಿಜರು ಪೊಗಳೇಭಳಿ ಭಳಿ ಭಳಿರೆಂದಬ್ಬರಿಸುತ ದುಂದುಭಿ-ಯೊದರೇ ಅಸುರರು ಬೆದರೇಝಳಪಿಸಿ ಖಡುಗದಿ ರಕ್ಕಸ ಬಲವನು ತರಿದಾ ಶಿಶುವನು ಪೊರೆದಾ 1 ಭುಗು ಭುಗಲೆನೆ ನಾಸಿಕದಿ ಉಸುರ್ಹೊಗೆ ಹೊರಟು ಖಳನುದ್ದುರುಟುಜಿಗಿ ಜಿಗಿದವನನು ಕೆಡಹಿ ತೊಡೆಯೊಳಗಿಟ್ಟು ರೋಷವ ತೊಟ್ಟುಬಗೆದುದರವ ರಕ್ತವ ನೊಕ್ಕುಡಿತೆಯಲಿ ಸುರಿದು ತಾ ಚಪ್ಪರಿದುಸೊಗಸು ಉರಕೆ ಕರುಳ ಮಾಲೆಯ ಹಾಕಿದ ದೇವ ಭಕ್ತರಕಾಯ್ವ2 ಹಿರಣ್ಯಕಶಿಪನ ಹತ ಮಾಡಿದ ಭಕ್ತ ಪ್ರಹ್ಲಾದನಿಗೆ ಆಹ್ಲಾದದವರವನು ಪಾಲಿಸಿ ಸುರರನು ಪೊರೆದುಕರುಣದಿ ಸುರಿದು ಧರಣಿಯೊಳಗೆ ಪೆ-ಸರಾಗಿಹ ಅಹೋಬಲ ಸ್ಥಳದಿ ನೀನಾ ನೆಲದಿಗುರು ಚಿದಾನಂದ ಅವಧೂತರೆನಿಪ ದಾತಾ ಸಜ್ಜನ ಪ್ರೀತಾ 3
--------------
ಚಿದಾನಂದ ಅವಧೂತರು
ಸುರಾಸುರಾರ್ಚಿತ ಸರೋಜಲೋಚನ ಸರಾಗದಿಂದೆನ್ನನೀಕ್ಷಿಸೈ ಪರಾಪರೇಶನೆ ಪರಾತ್ಪರನೆ ನೀ ಪರಾಕುಮಾಡದೆ ಪಾಲಿಸೈ ಪ ವಿರಾಜಮಾನ ಸುವಿರಾಜವಾಹನ ವಿರಾಟ್ಪುರುಷ ವಿಶ್ವಂಧರ ಕರಾರವಿಂದದಿ ಕರಾದಿಗಳ ಪಿಡಿ ಧರಾತಿಮರ್ದನ ಧುರಂಧರ 1 ಧರಾಧರಣಿಪಟು ಧರಾಧರಾಧಿಪ ಧುರಾವಹನ ದುರ್ಧರ್ಷಣ ಧರಾಮರರ ಬಹುಪರಾಭವವ ಬಲು ಸರಾಗದಲಿ ನಿರ್ವಾಪಣ 2 ಜರಾಮರಣಗಳ ನಿರಾಕರಿಸಿ ವಸುಂಧರಾಭರಣ ಗುಣಭೂಷಣ ಸುರಾರಿಮರ್ದನ ಶರಾಸನಾಂಚಿತ ಕರಾನಿಹಿತ ಮಣಿಕಂಕಣ 3 ಶಿರೀಷ ಕುಸುಮದ ಸರಿಸುಕೋಮಲಶರೀರ ನಿನ್ನದು ಈ ಪರಿ ಸಿರಿಯುದರದೊಳೇ ಸಿರಿಯಧರಿಸಿದ ಪರಿಯದೆಂತುಟೋ ಕೇಳ್ ಹರಿ 4 ಪಯೋಧಿತನಯಾ ವಯೋಸುರೂಪನೆ ದಯಾನಿಧೇ ಧರ್ಮಾತ್ಮನೆ ದಯಾರಸದಿ ಹೃತ್ಪಯೋಜಮಧ್ಯದಿ ನಿಯಾಮಿಸುವ ನಿರ್ಮಾಯನೆ 5 ವರೇಣ್ಯ ಸಜ್ಜನ ಶರಣ್ಯ ಪುಲಿಗಿರಿಯರಣ್ಯ ಮಧ್ಯವಿರಾಜಿತ ಹಿರಣ್ಮಯಾಂಬರ ಹಿರಣ್ಯಕಾಂತಕ ಹಿರಣ್ಯಗರ್ಭಸುಪೂಜಿತ 6 ವ್ಯಾಘ್ರನೆಂಬುವತ್ಯುಗ್ರ ದೈತ್ಯನಂ ನಿಗ್ರಹಗೈದ ಮಹಾತ್ಮನೆ ಶೀಘ್ರದಿ ಭಕ್ತಾನುಗ್ರಹಮಾಳ್ಪ ಸುರಾಗ್ರಗಣ್ಯ ಪುಣ್ಯಾತ್ಮನೆ 7 ಸುರರು ನರರು ನಿನ್ನರಿಮೆಯನರಿಯದೆ ನಿರುತವು ಸನ್ನುತಿಗೈವರೆ ಪರಮಪುರುಷ ಸುಖಕರ ನೀನೆನ್ನುತ ಪರಿಪರಿ ನಿನ್ನನೆ ಪೊಗಳ್ವರೆ 8 ಮೂಜಗ ಮಾಡುವ ಪೂಜೆಯಿಂದ ನೀನೀ ಜಗದಲಿ ಒಲಿದಿರ್ಪೆಯ ಮೂಜಗ ಪೂಜಿಪ ವ್ಯಾಜದಿಂದ ನಿಜಪೂಜೆಯ ನೀ ಕೈಗೊಂಬೆಯ 9 ನಿಜಪದದೊಳು ನೀನಜಭವ ಮುಖಸುರವ್ರಜಗೋಚರನಾಗಿಲ್ಲವೈ ಸುಜನರ ಪೊರೆಯವ ನಿಜಮತಿಯಿಂದಲಿ ತ್ರಿಜಗಕ್ಕೆ ಗೋಚರನಾಗಿಹೈ10 ನಿತ್ಯತೃಪ್ತ ನೀನತ್ಯುತ್ತಮ ನಿಜಭೃತ್ಯನಮತ್ರ್ಯನು ಮೋದದಿ ನಿತ್ಯದಿ ನಿನ್ನತ್ಯುತ್ತಮ ಪದದೊಳು ಭಕ್ತಿಯ ಪಾಲಿಸು ನೇಮದಿ 11 ಧರಣಿಯೊಳುರುತರ ಮೆರೆಯುವ ಫಣಿಭೂ ಧರದೊಳು ನಿರುತವು ಭಕ್ತರ ಸಿರಿವಲ್ಲಭ ವರದ ವಿಠಲ ಕರುಣಾಕರ 12
--------------
ವೆಂಕಟವರದಾರ್ಯರು
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(ಆ) ಶ್ರೀರಾಮಸ್ತುತಿಗಳು ರಾಮನ ನೆನೆ ಮನವೆ ಹೃದಯಾರಾಮನ ನೆನೆ ಮನವೆ ಪ ಸದ್ಗುಣಧಾಮನ ಸೀತಾ ಅ.ಪ ದಶರಥ ನಂದನನಾ ಧರಣಿಯೊಳಸುರರÀ ಕೊಂದವನ ವಸುಮತೀಸುತೆಯಂ ಒಲಿದೊಡಗೂಡಿ 1 ತಂದೆಯಮಾತಲಿವನಕೈತಂದುಸರಾಗದಲಿಬಂದವಿರಾಧನ ಕೊಂದು ನಿಶಾಚರಿಯಂದವಳಿದು ಖಳವೃಂದವ ಸವರಿದ 2 ಸೀತೆಯನರಸುತಲಿ ಕಬಂಧನ ಮಾತನನುಸರಿಸುತ ಸುತನ ಘಾತಿಸಿ ದಾತನ 3 ವಿಲಾಸದಿಂದ ತರುಣಿಯನರಸಲು ಮರುತನ ಮಗನಿಗೆ ಬೆರಳುಂಗುರವನು ಗುರುತಾಗಿತ್ತನ 4 ಧರಣಿಜೆಯನುಕಂಡುವನವನುಮುರಿದುಗುರುತುಗೊಂಡು ಅರಿಪುರವನು ಸುಟ್ಟುರುಹಿದ ವಾನರವರನಿಗೆ ಸೃಷ್ಟಿಪ ಪದವಿತ್ತಾತನ 5 ಶರಣನ ಲಂಕೆಗೆ ದೊರೆಯನು ಮಾಡಿ ಸಿರಿಯನಯೋಧ್ಯೆಗೆ ಕರೆತಂದಾತನ6 ಧರಣಿಯ ಪಾಲಿಸುತ ಧರ್ಮದ ಸರಣಿಯ ಲಾಲಿಸುತ ವರದವಿಠಲದೊರೆ ಪರಮೋದಾರನ 7
--------------
ವೆಂಕಟವರದಾರ್ಯರು
(ಶುಕಾಚಾರ್ಯರ ಸ್ತೋತ್ರ) ಆಚಾರ್ಯನ ನೋಡಿ ಸುಮ್ಮನೆ ಪೇಚಾಡಲು ಬ್ಯಾಡಿ ಪಡದ ಮೃಡಾತ್ಮನ ಪಾಡಿ ಪ. ಬಾಲಕರಂತಿರುವ ಧೂಸರ ಧೂಳಿಯ ಧರಿಸಿರುವಾ ಕೇಳಿದವರಿಗೊರೆವಾ ಭಗವನ್ಮೂಲ ತತ್ವದಿರವಾ ಪರೀಕ್ಷಿತ ಲಾಲಿಸುವಂತೆರ- ಮಾಲಯ ಗುಣವರುಣಾಲಯ ತಿಳಿಸಿದ 1 ವ್ಯಾಪಿಸಿ ಕೊಂಡಿರುವಾ ಸಂಸೃತಿ ತಾಪತ್ರಯ ಭರವಾ ತಾಪಕ ಮತ್ಸರವಾ ಮೋಹ ಮಹಾಪರಾಧದಿರವಾ ದೀಪವು ತಿಮಿರವ ಕಳವಂದದಿ ನಿ- ಲೋಪಗೊಳಿಸುವ ಪರೋಪಕಾರಿಯನು 2 ಭಾಗವತಾಮೃತವಾ ಮುಖದಿ ಸರಾಗದಿ ಧರಿಸಿದನಾ ವಾಗೀಶಾಂಶಕನಾ ಹೊಂದಿರೊ ಗುರುಮುನಿ ಶುಕನಾ ತಾಗುಬಾಗುವೊಳಗಾಗದ ತೆರದಲಿ ನಾಗ ಗಿರೀಂದ್ರನು ನಲಿವನು ಮನದಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ರಾಘವೇಂದ್ರ ಪ್ರಾರ್ಥನೆ) ರಾಘವೇಂದ್ರ ತೀರ್ಥ ಬೋಧಿಸು ಭಾಗವತಗತಾರ್ಥ ರಾಘವ ಪಾದಾಂಬುಜ ಲಬ್ದಾರ್ಥ ಸರಾಗದಿ ಪಾಲಿಸು ನಿಜಪುರುಷಾರ್ಥ ಪ. ತುಂಗಾ ತಟವಾಸಾ ರಾಘವಶಿಂಗನ ನಿಜದಾಸ ಪಂಗುಬಧಿರ ಮುಖ್ಯಾಂಗ ಹೀನರ- ನಪಾಂಗನೋಟದಿ ಶುಭಾಂಗರ ಮಾಡಿಪ 1 ಪಾದೋದಕ ಸೇವಾರತರಿಗಗಾಧ ಫಳಗಳೀವ ಬೂದಿ ಮುಖದ ದುರ್ವಾದಿಗಳೋಡಿಸಿ ಸಾಧುಜನರಿಗಾಲ್ಹಾದ ಬಡಿಸುತಿಹ 2 ಸುಜನ ಶಿರೋಮಣಿಯೆ ವಿಜಯದನೆನಿಸುವ ದ್ವಿಜಕುಲನಂದನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇಕ್ಕೊ ಇಲ್ಲೆ ಹರಿ ಇದ್ದಾನೆ | ಸಿಕ್ಕುವಾ ಸದ್ಗುರು ಕರುಣದಲಿ ಧ್ರುವ ಆದಿ ಅನಾದಿಯ ಹಾದಿ ವಿಡಿದು | ಸಾಧಿಸಿ ನೋಡಿರಯ್ಯ ಸಜ್ಜನರು | ವೇದಾಂತದ ಸುಸಾರವಿದು | ಭೇದಿಸಿದವರಿಗೆ ಭಿನ್ನವಿಲ್ಲ 1 ತನ್ನೊಳಗಾಗಿರಲಿಕ್ಕೆ ಭಿನ್ನವ್ಯಾಕೆ | ಚೆನ್ನಾಗಿ ನೋಡುವದು ಉನ್ಮನದಲಿ | ಇನ್ನೊಬ್ಬರಿಗೆ ತಾ ತಿಳಿಯದು | ಧನ್ಯವಾದರು ಅನುಭವಿಗಳು2 ಸೆರಗು ಸಿಲ್ಕಲಿಲ್ಲ ನಾಲ್ಕರಲಿ | ಅರಹು ಆಗಲಿಲ್ಲ ಆರರಲಿ | ಪೂರಿಸಲಿಲ್ಲ ಭಾವ ಮೂರಾಗಲಿ | ತೋರಿದ ಸದ್ಗುರು ಎನ್ನೊಳಗೆ 3 ಮೋಸಹೋಯಿತು ಜಗ ವೇಷದಲಿ | ವಾಸತಿಳಿಯದೆ ವಾಸುದೇವನ | ಕಾಸಿನ ಆಶೆಗೆ ದಾಸರಾಗಿ | ಘಾಸಿ ಆಯಿತು ಭವಪಾಶದಲಿ 4 ಸಣ್ಣದೊಡ್ಡದರೊಳು ಸಾಕ್ಷವಾಗಿ | ಬಣ್ಣ ಬಣ್ಣದಲಿ ತಾ ಭಾಸುತಿಹ್ಯ | ಕಣ್ಣಾರೆ ಕಂಡು ಗುರು ಕೃಪೆಯಿಂದ | ಧನ್ಯವಾದ ಮೂಢ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸಾರ್ಥಕವಾಯ್ತು ಹಿಂದೆ ಮಾಡಿದ ಪೂಜೆ ಪ ಬಂದು ಗುರುವರ್ಯರ ಬೃಂದಾವನವ ನೋಡಿ ಅ.ಪ ಮಂಗಳತರಂಗಿಣಿಯ ತಂಗಾಳಿ ಸೇವಿಸುತ ತುಂಗ ಫಣಿಶಾಯಿಯ ಅಪಾಂಗಪಾತ್ರರ ಕಂಡು1 ಜ್ಞಾನ ವೈರಾಗ್ಯ ಭಕ್ತಿಗಳ ಮೂರ್ತಿಗಳಂತೆ ನಾನಾಭರಣ ಸೇವೆ ಅರ್ಪಿಸಿದವರ ಕಂಡು 2 ಸ್ವಾಂತವನು ಗೆಲಿದು ಪ್ರಸನ್ನ ಮಾನಸರಾಗಿ ಶಾಂತಿಯನು ಪಡೆದ ಏಕಾಂತ ಭಕುತರ ನೋಡಿ 3
--------------
ವಿದ್ಯಾಪ್ರಸನ್ನತೀರ್ಥರು
ಇಷ್ಟಾರ್ಥ ಪಾಲಿಸಯ್ಯ ಪ ಭೃಷ್ಟನಾದೆನು| ಧರಣಿಯೊಳಗತಿ| ದುಷ್ಟಜನ ಸಂಸರ್ಗದಿಂದಲಿ| ಕೃಷ್ಣನಿನ್ನಯ| ದಾಸರಾಗಿಹ| ಶ್ರೇಷ್ಠ ಜನರನು| ಪೊರೆವ ತೆರದಿ 1 ಗತಿಹೀನನಾದೆನಯ್ಯ|| ಮತಿಯ ಪಾಲಿಸಿ | ಕರುಣದಿ ಸ| ದ್ಗತಿಯು ದೊರಕುವ| ತೆರದಿ ನಿನ್ನನು| ಪತಿಕರಿಸಿ ಪಿತ| ನಂತೆ ಪೊರೆವ 2 ಪಂಕಜನಾಭ ದೇವ| ವೆಂಕಟರಾಯ| ಕಿಂಕರರನು ಪೊರೆವ| ಕಿಂಕರಗೆ ಮತಿ| ದೋರಿ ಪೊರೆಯೈ| ಪಂಕಜಾಂಬಕ | ಪರಮಪಾವನ 3
--------------
ವೆಂಕಟ್‍ರಾವ್
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಕಮಲ | ಭಜಿಸಿ ಬದುಕಿರೋನಿಜ ಸುಜ್ಞಾನ ಹರಿಭಕ್ತಿ | ನಿಜಕೆ ತರುವರೋ ಪ ಸಂತ ಶ್ರೀನಿವಾಸನಹಂ | ಮತಿಯ ವಿಚಾರಾಚಿಂತಿಸದೆ ಒಲಿದಂಥ | ಶಾಂತ ಚಿತ್ತರಾ ||ಕಂತುಹರ ಸುತನಂಶ | ಜಾತರಿಹರಾಅಂತೆ ತೋರಿ ದಾಸ ದೀಕ್ಷೆ | ಪಂಥ ವಿತ್ತರಾ 1 ಮಂಗಳದುತ್ಸವಕಾಗಿ | ಸಂಘ ಬರ್ಲಾಗಿಮಂಗಳ ಭಕ್ಷವು ಮಂಡಿಗಿ | ಮಾಳ್ಪರಿಲ್ಲಾಗಿಭಂಗ ಭೀತಿ ಅಧಿಪಗೊದಗಿ | ಚಿಂತಿಸಲಾಗಿಅಂಗ ವೇಷ ಬದಲಾಗಿ | ಬಂದ ತಾನಾಗಿ2 ಗ್ರಂಥ ಸುಧಾಭಿಧ ಬಲ್ಲ | ಸಂತ ಸುಬ್ಬಣ್ಣಸಂತ ವಿಜಯದಾಸಗಿಂಥ | ಗ್ರಂಥವೆಲ್ಲಣ್ಣಅಂತೆ ದಾಸಗಪರೋಕ್ಷ | ಕಂತೆ ಕಾಣಣ್ಣಚಿಂತಿಸುತ್ತ ಪ್ರವಚನ | ಭ್ರಾಂತ ನಿದ್ದನ 3 ಬಂದು ವಿಜಯದಾಸರಾಗ | ತೊಂದರೆ ಯೋಗ ಛಂದದಿಂದ ನೀಗಿ ಭಕ್ಷ | ಮಾಡಿದ ರಾಗ |ಬಂದು ಸುಧಾ ಕೇಳುತಿರಲು | ಆಚಾರ್ಯರಾಗ ಸಂದೇಹವ ಪಡುತಲಿ | ಮೌನವಿರಲಾಗ 4 ಪಾಚಕನ ತೆರ ಬಂದ | ಭೃಗುವಿನಂಶನುನೀಚ ನೀರಿನವನ ಶಿರದಿ | ಚಾಚಿ ಕೈಯ್ಯನ್ನುಬಾಚಿ ಬಿಡಿಸೆಂದ ಅವರ | ಸಂಶಯವನ್ನುವಾಚೀಸೀದ ಅನುವಾದ | ನೀರಿನವನೂ5 ಪೇಚಿಗೆ ಸುಬ್ಬಣ್ಣ ಸಿಕ್ಕಿ | ಮನದಿ ತಪಿಸೀ |ಯಾಚಿಸೀದ ಕ್ಷಮೆಯನ್ನು | ಬಹಳ ಪ್ರಾರ್ಥಿಸಿ ||ಸೂಚಿಸಲು ಶೈವನಿದ್ದ | ಬೇಲೂರು ವಾಸಿಪ್ರಾಚೀನದ ಸ್ಮøತಿ ಬಂತು | ನಂಜುಂಡ ನೆನಿಸಿ 6 ಪಾಣಿ ಇಟ್ಟು ಶಿರದಲ್ಲಿ | ಆಶೀರ್ವದಿಸಿವೇಣುಗೋಪ ದಾಸರಲ್ಲಿ ಅಂಕಿತ ಕೊಡಿಸಿ ||ಸಾಣೆ ಇಟ್ಟಂತಾಯಿತವನ | ಜ್ಞಾನದ ಅಸಿಮಾಣದಲೆ ವಿಜಯ ಕವಚ | ಮಾಡಿದ ಸೂಸಿ 7 ದಾಸಕೂಟ ಜನರೆಲ್ಲ | ಬಿಡದೆ ಪಾಡುವವ್ಯಾಸವಿಠಲ ರಚಿತೆನ್ನ | ವಿಜಯ ಕವಚವಲೇಸು ನೆರೆ ನಂಬಿದೆನ್ನ | ವಿಠಲ ಸ್ತೋತ್ರವಮೀಸಲಾಗಿ ಪಾಡುವರು | ಸ್ತೋತ್ರವೆಲ್ಲವ 8 ವರ್ಷ ಸೌಮ್ಯ ಕಾರ್ತೀಕದಿ | ಸೇವಿಸುತ್ತಿರೆದರ್ಶನಿತ್ತು ಸ್ವಪ್ನದಲ್ಲಿ | ಧೈರ್ಯಕೊಟ್ಟಾರೆಹರ್ಷವಿತ್ತು ದಾಸಕಾರ್ಯ | ಸಾಗಿಸುತ್ತಾರೆದರ್ಶದಿನ ಪುಷ್ಯ ನೃಹರಿ | ಯಾತ್ರೆಯಿತ್ತಾರೆ 9 ವಿತ್ತ ನಿತ್ಯ | ಇಲ್ಲದಿನ ವೊಲ್ಲೆ ||ಮೂರ್ತಿ ಬಿಂಬ ತೋರಿ ಎಂದು | ಕೇಳುವ ಸೊಲ್ಲೆಸಾರ್ಥಕವ ಮಾಡಿರೆಂದು | ಪ್ರಾರ್ಥಿಸೆ ಬಲ್ಲೆ 10 ಸುಜನ ಸಂಗ | ವಿತ್ತು ಸುಶೀಲಕಾವ ದಾಸ ಜನರನ್ನು | ಹೃದಯ ವಿಶಾಲಗೋವ ಪರಿಪಾಲ ಗುರು | ಗೋವಿಂದ ವಿಠಲನತೀವರದಿ ಭಜಿಸಿ ಕಳೆದ | ಮಾಯಾಪಟಲ11
--------------
ಗುರುಗೋವಿಂದವಿಠಲರು
ಕೊಡು ತೊಡಿಯ ಮೇಲೆ ನೋಡು ಗಿಣಿಯು ತನ್ನಗೂಡಿನೊಳಗೆ ಹ್ಯಾಂಗೆ ಆಡುತಲಿಹುದು ಪ ಅತ್ತರೆ ನೀನು ಎನ್ಹತ್ತಿರನಿರುವನು ಗುಮ್ಮಾಪಟ್ಟಣದೊಳಗೆ ಪುತ್ರರನೊಯ್ಯುವನು 1 ಓಡಿ ಬರುತಲುಣ್ಣು ಜೋಡು ಮಾವಿನ ಹಣ್ಣುನೀಡುವೆ ರಂಗಣ್ಣಿ ನೋಡು ಬಾ ಸಖಿಯೆ 2 ಬುತ್ತಿ ಉಣ್ಣಿಸುವೆನು ವಕ್ರ ತೇಜಿಯನೇ ಎನ್ನಹಿತ್ತಲ ಗುಬ್ಬಿಯೇ ಎನ್ನ ಹತ್ತಿರ ಕೂಡೋ 3 ಪುಟ್ಟ ಮಗುವೆ ನೀರು ಗುಟುಕು ಕುಡಿದು ಉಣ್ಣುಕೊಟ್ಟು ಹೋಗೆಲೋ ಉಮ್ಮ ಅಷ್ಟು ಹುಡುಗರೊಳು 4 ಕೂಸು ಪಡೆದವಳಿಂಥಾ ಏಸು ತಪಸು ಮಾಡಿಬೇಸರಾಗದೆ ಇಂದಿರೇಶನ ಸಲಹುವಳು 5
--------------
ಇಂದಿರೇಶರು
ಗಾನಮಾಳ್ಪ ಧೀರನಾವನೋ ಪ ತಾಳ ತಂಬೂರಿಗಳನು ಮೇಳವಿಸಿ ಸರಾಗದಿಂದ 1 ಹಿಂಗದೆ ಮೃದಂಗದಿಂದ ಸಂಗಡಿಸಿ ಸುಲಲಿತವಾಗಿ2 ಗುಂಬವಾದ್ಯವನು ಪರಮಸಂಭ್ರಮದಲ್ಲಿ ಬಾರಿಸುತ್ತ 3 ಜೊತೆಗೆ ಸೇರಿದವರ ಕೂಡಿ ಶ್ರುತಿಲಯಗಳಿಂದ ಪಾಡಿ4 ಪರಮಪುರುಷ ವ್ಯಾಘ್ರಗಿರಿಯ ವರದವಿಠಲನೆಂದು ಮುದದಿ 5
--------------
ವೆಂಕಟವರದಾರ್ಯರು
ಚರಣಕೆರಗುವೆ ಕೃಷ್ಣಾ ಪರಿಹರಿಸು ಜನ್ಮವನುಶರಣಜನಬಂಧು ನೀನು ಕೃಷ್ಣಾ ಪಕರುಣನಿಧಿಯಡಿಗೊಮ್ಮೆ ಶಿರವೆರಗಿದವರು ಭವಶರಧಿಯೊಳು ಬೀಳರೆಂದೂ ಕೃಷ್ಣಾ ಅ.ಪಹಲವು ದೇಹಂಗಳಲಿ ಮಾಡಿದಘ ವೃಂದಗಳುಬಲವಂದಡವಕೆ ಲಯವು ಕೃಷ್ಣಾಜಲಜಸಂಭವ ತೊಡಗಿ ಶಲಭಾಂಕದೊಳಗೊಂದನುಳಿಯದೇ ಪ್ರಾಣಿಗಳಲಿ ಕೃಷ್ಣಾತೊಳಲಿ ಬಂದೆನು ನೀನು ನಿರ್ಮಿಸಿದ ಪರಿಯಲ್ಲಿತೊಲಗಿಸಿನ್ನೀ ಭವವನು ಕೃಷ್ಣಾನಳಿನಾಕ್ಷ ನಿನ್ನ ಪ್ರಾದಕ್ಷಿಣವು ಬಳಿಕಾಯ್ತುನಿಲಿಸೆನ್ನ ನಿನ್ನಡಿಯೊಳು ಕೃಷ್ಣಾ 1ಜನನ ಜನನಗಳಲ್ಲಿ ಕಿವಿಮುಚ್ಚಿ ತಲೆವಾಗಿನಿನಗೆರಗಿದವನಾದೆನು ಕೃಷ್ಣಾಗಣನೆುಲ್ಲದ ಜನ್ಮಗಳಲಿನಿತು ನಮಿಸಿದರೆಗಣನೆಗೊಳದಿಪ್ಪುದೇನು ಕೃಷ್ಣಾಅಣು ಮಾತ್ರದವನಾಗಿ ಘನತರದವಿದ್ಯೆಯಲಿಮನಮುಳುಗಿ ಬಹು ನೊಂದೆನೋ ಕೃಷ್ಣಾಯೆಣಿಸದಪರಾಧ ಕೋಟಿಗಳ ಭವ ಭೀತನನುಅನುಪಮನೆ ಕೊಡು ಗತಿಯನು ಕೃಷ್ಣಾ 2ಮರೆಯೊಕ್ಕವರ ಕಾಯ್ವ ಬಿರಿದು ನಿನ್ನದು ದೇವಮರೆಯೊಕ್ಕೆನೆಂದೆನೀಗ ಕೃಷ್ಣಾಮರಳಿ ನುಡಿವರೆ ಗುಣಗಳಡಿಮೆಟ್ಟುತಿವೆ ಬೇಗಸ್ಮರಣೆದೊರಕೊಳ್ಳದಾಗ ಕೃಷ್ಣಾಸೆರೆಯವನ ಬಂಧುಗಳು ಬಿಡಿಸುವರು ಕಂಡಾಗಸೆರೆಯವನಿಗುಂಟೆ ಯೋಗ ಕೃಷ್ಣಾತಿರುಪತಿವಿಹಾರಿ ದುರಿತಾರಿ ವೆಂಕಟರಮಣಕರವಿಡಿಯೆ ಸದ್ಗತಿ ಸರಾಗ ಕೃಷ್ಣಾ 3ಓಂ ವಿದುರಾಕ್ರೂರಾಯ ನಮಃ
--------------
ತಿಮ್ಮಪ್ಪದಾಸರು