ಒಟ್ಟು 12 ಕಡೆಗಳಲ್ಲಿ , 10 ದಾಸರು , 12 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಜಯಜಯ ಜಲದುರ್ಗೆ ತ್ರಿಜಗನ್ಮಯೆ ಸದ್ಗುಣವರ್ಗೆ ಪ. ದಯಾಸಾಗರೆ ದಾರಿದ್ರ್ಯದುಃಖ ಭವ- ಭಯನಾಶಿನಿ ಮಣಿಮಯಕೃತಭೂಷಿಣಿಅ.ಪ. ಗಜವದನನ ಮಾತೆ ಸುಜನ- ವ್ರಜಸತ್ಫಲದಾತೆ ಕುಜನಭಂಜನಿ ನಿರಂಜನಿ ಶೈಲಾ- ತ್ಮಜೆ ಮಹೋಜೆ ನೀರಜದಳಲೋಚನಿ1 ಇಂದ್ರಾದ್ಯಮರನುತೆ ಪೂರ್ಣಾ ನಂದೆ ನಂದಜಾತೆ ಚಂದ್ರಾಸ್ಯೇ ಯೋಗಿವೃಂದವಂದಿತೆ ಮೃ- ಗೇಂದ್ರವಾಹಿನಿ ಮದಾಂಧರಿಪು ಮಥನಿ2 ಅಂಗಜಶತರೂಪೆ ಸದಯಾ- ಪಾಂಗೆ ಸುಪ್ರತಾಪೆ ಗಂಗಾಧರವಾಮಾಂಗಶೋಭೆ ಸಾ- ರಂಗನೇತ್ರೆ ಶ್ರೀರಂಗಸಹೋದರಿ3 ದಾಸಜನರ ಪೋಷೆ ರವಿಸಂ- ವಾಸುದೇವನ ಸ್ಮರಣಾಸಕ್ತಿಯ ಕೊಡು ಭಾಸುರಜ್ಞಾನಪ್ರಕಾಶವಿಲಾಸಿನಿ4 ಸೌಖ್ಯವು ಭಕ್ತರ್ಗೆ ಸಲಿಸಲು ಸೌಖ್ಯವು ನೀ ಭರ್ಗೆ ಲಕ್ಕುಮಿನಾರಾಯಣನ ಭಗಿನಿ ನಿ- ರ್ದುಃಖಪ್ರದಕಟಿಲಾಖ್ಯಪುರೇಶ್ವರಿ5
--------------
ತುಪಾಕಿ ವೆಂಕಟರಮಣಾಚಾರ್ಯ
ಜಯತೀರ್ಥ ಮುನಿವರ್ಯ ಪ ದಯತೋರಿ ಪೊರೆಯಯ್ಯ ವಿಜಯಸಾರಥಿಪ್ರಿಯ ಅ.ಪ ಶ್ರೀಶಶಯನಾವೇಶ ಮಹೇಶ ಪ್ರತಿಬಿಂಬ ಸು ರೇಶ ಯತಿಕುಲಾಧೀಶ ಪಾಲಿಸಯ್ಯ ಏಸು ನಿನ್ನಯ ಕರುಣರಾಶಿ ಎಂತಿಹುದಯ್ಯ ಆಸೆ ಸಲಿಸಲು ಮನೆಗೆ ಲೇಸಾಗಿ ನೀ ಬಂದೆ 1 ಪಶುಪತಿಯ ಮತ ದಹಿಸಿ ಅಸುಪತಿಯ ಮತ ಮೆರೆದೆ ವಸುಮತಿಯ ಸುರನಾಗಿ ಬಂದು ನಿಂದೆ ಪಶುಪ್ರಾಯನೆಂದೆನ್ನ ಉದ್ಧರಿಸಲೋಸುಗದಿ ಬಿಸಜತವಪಾದ ಪಾಂಸವನಿತ್ತೆ 2 ಜಯಗುರುವೆ ಶ್ರೀ ವಿಜಯದಾಸರಲ್ಲೆನ್ನ ಮನೋ ಜಯವು ಪುಟ್ಟಿಸಿದ ನಿನ್ನ ಕರುಣವೆಂತೊ ಸೃಜಿಸಿ ತೋರಿದ ಸ್ವಪ್ನ ನಿಜವು ಆಗಲಿ ಎಂದು ಬಿಜಯ ಮಾಡಿದೆ ನಿನ್ನ ನಿಜದಾಸರೊಡನೆ 3 ಜಯಗುರುವೆ ನಿಮ್ಮ ಹುದ್ಗುಹದಲಿ ನಲಿಯುತಿಹ ವಾಯುವಂತರ್ಗತ ಕೃಷ್ಣನ ತೋರೋ ಜಯತು ಶ್ರೀ ವೇಣುಗೋಪಾಲ ಮೂರ್ತೇ ಜಯತು ಶ್ರೀ ವೇಣುಗೋಪಾಲನೆಂದೆನಿಸಿಯ್ಯ 4 ಸೃಷ್ಟಿಗೆ ಬಂದು ನಾನೆಷ್ಟು ಜನ್ಮವ ಕಳೆದೆ ಪುಟ್ಟಿದೆನೋ ನಾನೀಗ ಈ ಜನ್ಮದಿ ಪುಟ್ಟಲಿಲ್ಲವೋ ಜ್ಞಾನ ಹರಿ ಗುರುಸ್ಮರಣೆಗೆ ಇಟ್ಟಕಡೆಗಣ್ಣÂನೋಳಿಷ್ಟು ನೋಡಯ್ಯ5 ವಾದಿಮಸ್ತಕ ಭೇದಿ ಮೋದತೀರ್ಥರ ತತ್ತ್ವ ಛೇದಿಸಿ ವಾಕ್ ಯುದ್ದ ಯೂಥಪಗಳನೆಲ್ಲ ಗೆದ್ದು ಸತ್ತತ್ತ್ವದಾ ಸಿಂಹನಾದವ ಮಾಡ್ದೆ 6 ಮಧ್ವರಾಯರಿಗೆ ನೀ ಮುದ್ದುಮೊಮ್ಮಗನಯ್ಯ ಸದ್ವಿದ್ವದ್ಗ್ರಂಥ ಭಾರವನೆ ವಹಿಸಿ ಮುದ್ದು ತೊತ್ತೆನಿಸಿ ಎತ್ತಾಗಿ ಸೇವಿಸಿ ಯತಿಯಾಗಿ ನಿಂದ ತತ್ತ್ವಮುತ್ತಿನ ಖಣಿಯೆ 7 ಇಳೆಯೊಳಗೆ ನಿನ್ನಂಥ ಕರುಣಾಳುಗಳ ಕಾಣೆ ಅಳವಲ್ಲ ವರ್ಣಿಸಲು ನಿನ್ನ ಗುಣಗಳನು ಮಳಖೇಡವಾಸ ಯತಿಕುಲಾಧೀಶಾ 8 ಗುರುವೆ ನಿನ್ನಯ ಕರುಣಕವಚ ತೊಟ್ಟವರ ಚರಣಕಮಲದೊಳಿಹ ಮಧುಪನೆಂದೆನಿಸೋ ನಿರುತ ದೃಢಭಕುತಿ ಶ್ರೀ ವೇಂಕಟೇಶನೊಳಿಟ್ಟುಪೊರೆಯೊ ಶ್ರೀ ಗುರುವರಾಗ್ರಣಿಯೆ ನಮೋ ಎಂಬೆ9
--------------
ಉರಗಾದ್ರಿವಾಸವಿಠಲದಾಸರು
ಧನ್ಯಧನ್ಯನೊ ಶ್ರೀ ಗುರುರಾಯಾಧನ್ಯ ಶ್ರೀ ರಾಘವೇಂದ್ರ ಯತಿವರ್ಯಾ ಪ ವೀಣಾಪಾಣಿಯ ಆಣತಿಯಂತೆಮಾಣದೆ ಸನ್ಯಾಸವ ಗ್ರಹಿಸಿದೆವೇಣುಗೋಪಾಲನು ತಪದ ಕಾಣಿಕೆಗೆಕಾಣಿಸಿಕೊಂಡನೆ ಓ ಮಾರಾಯಾ 1 ಕರ ಕಮಲಾಸಂಜಾತನೆಏಸು ಜನ್ಮದ ಸುಕೃತವೊ ಜೀಯಾ 2 ಉನ್ನತ ಗದುಗಿನ ವೀರನಾರಾಯಣಸನ್ನಿಧಿಯೊಳು ನರಸಿಂಹನೆದುರಿನಲಿಸನ್ನಿಹಿತನು ನೀನಾಗಿ ಕುಳಿತೆಯೋಆದರಿಸಿನ್ನು ಸಲಿಸಲು ನಿನ್ನ ಭಕ್ತಿಯಾ 3
--------------
ವೀರನಾರಾಯಣ
ಪ್ರೆಮಾಂಬುಧಿ ಶುಭದಾಯಕ ಜಯ ಜಯ 1 ಪ್ರಹ್ಲಾದಾವರ ಜಾತನೆ ಜಯಯ ಶಲ್ಯ ನೃಪಾಲಕ ಯೋಧನೆ ಜಯ ಜಯ 2 ಪುರುಹೂತಾರ್ಯ ಪೋತನೆ ಜಯ ಜಯ ಮರುತ ಪದಾರ್ಹರ ಪ್ರೀತನೆ ಜಯ ಜಯ 3 ನರಸಿಂಹಾರ್ಯರ ಪುತ್ರನೆ ಜಯ ಜಯ ಗುರುವರದೇಂದ್ರರ ಛಾತ್ರನೆ ಜಯ ಜಯ 4 ತುರುರಕ್ಷಕ ವಿಜಯಾರ್ಯರ ಜಯ ಜಯ ಕರುಣ ಪೂರ್ಣ ಪಡೆದಾತನೆ ಜಯ ಜಯ 5 ಪಂಕಜವೈರಿಯ ಭಾಗದಿ ಜಯ ಜಯ ಅಂಕಿತ ಪಡೆದ ಅಕಳಂಕನೆ ಜಯ ಜಯ 6 ಪಂಢರಿನಾಥನ ಮೂರುತಿ ಜಯ ಜಯ ಕಂಡು ಕೊಂಡಾಡಿದ ಧೀರನೆ ಜಯ ಜಯ 7 ರಂಗವಲಿದ ದಾಸ್ತೋತಮ ಜಯ ಜಯ ತುಂಗ ಮಹಿಮ ಶುಭಾಂಗನೆ ಜಯ ಜಯ 8 ನತಜನ ತತಿ ಮಂದಾರನೆ ಜಯ ಜಯ ಕೃತ ಹರಿಕಥಾಸುಧೆ ಸಾರವ ಜಯ ಜಯ 9 ಮೂಕರ ಮುಖದಿಂ ಕರುಣದಿ ಜಯ ಜಯ ವಾಕು ಪೇಳಿಸಿದ ಗುಣನಿಧಿ ಜಯ ಜಯ 10 ಮಾನವಿ ಮಂದಿರ ಮಾನಿತ ಜಯ ಜಯ ಕ್ಷೋಣಿ ವಿಬುಧ ಗಣ ಸೇವಿತ ಜಯ ಜಯ 11 ಕುಂಭಿಣಿನಾಥ ದಾಸಾಗ್ರಣಿ ಜಯ ಜಯ ನಂಬಿದೆ ನಿನ್ನ ಪದಾಂಬುಜ ಜಯ ಜಯ 12 ಸಾಧು ವರಿಯ ಪ್ರಹ್ಲಾದನೆ ಜಯ ಜಯ ಭೇದಜ್ಞಾನ ಸುಬೋಧಕ ಜಯ ಜಯ 13 ಭೂಸುರ ಕುಮುದಕೆ ಭೇಶನೆ ಜಯ ಜಯ ಭಾಸುರ ಸ್ತಂಭ ನಿವಾಸನೆ ಜಯ ಜಯ 14 ಪವನಾಗಮ ಪ್ರವೀಣನೆ ಜಯ ಜಯ ಸನ್ನುತ ಮಹಿಮನೆ ಜಯ ಜಯ 15 ತಂದೆ ನಮಗೆ ನೀನೆಂದಿಗು ಜಯ ಜಯ ಕುಂದು ಕ್ಷಮಿಸಿ ದ್ವಿಜ ವಂದ್ಯನೆ ಜಯ ಜಯ 16 ಕಂಸಾರಿಯ ಪ್ರೀಯ ಸಾಂಶನೆ ಜಯ ಜಯ ಭವ ಹಿಂಸೆಯ ಜಯ ಜಯ 17 ನಿನ್ನ ತಾಣ ಸುಕ್ಷೇತ್ರವು ಜಯ ಜಯ ನಿನ್ನ ಕವನ ಶೃತ್ಯರ್ಥವು ಜಯ ಜಯ 18 ಕಲುಷ ಕುಲಾದ್ರಿಗೆ ಕುಲಿಶನೆ ಜಯ ಜಯ ವಲಿದು ಕರಪಿಡಿದು ಸಲಹೈ ಜಯ ಜಯ 19 ಆರ್ತರಿಷ್ಟಾರ್ಥವ ಸಲಿಸಲು ಜಯ ಜಯ ಸ್ವಾರ್ಥರಹಿತರಿಗೆ ಕೀರ್ತಿಯು ಜಯ ಜಯ 20 ಎನ್ನವವ ಚನವಿದಲ್ಲವು ಜಯ ಜಯ ನಿನ್ನನು ಭವಕಿದು ಬಂದದು ಜಯ ಜಯ 21 ಮಂದ ಬುದ್ಧಿಯಲಿ ನಿಮ್ಮನು ಜಯ ಜುಯ ನಿಂದಿಪ ಮನುಜ ದಿವಾಂಧನು ಜಯ ಜಯ 22 ಧರ್ಮದ ಮಾರ್ಗವ ತೋರಿಸು ಜಯ ಜಯ ಕರ್ಮಜ ದೇವನೆ ಕೈಪಿಡಿ ಜಯ ಜಯ 23 ಅನಿಲ ಮತಾಂಬುಧಿ ಮೀನನೆ ಜಯ ಜಯ ಪ್ರಣತಾಮರಮಣಿಧೇನುವೆ ಜಯ ಜಯ 24
--------------
ಶಾಮಸುಂದರ ವಿಠಲ
ಬಾ ದೀನವತ್ಸಲ ಲಕ್ಷ್ಮೀನಿವಾಸ ಶ್ರೀವೆಂಕಟೇಶ ಮಾಧವ ಮಧುರಿಪು ಮಾನುಷವೇಷ ಶರಣಾಗತಪೋಷಪ. ವೇದಾಗಮ್ಯ ದಯೋದಧಿ ಗೈದಪ- ರಾಧ ಕ್ಷಮಿಸಿ ಸುಗುಣೋದಯನಾಗುತಅ.ಪ. ಅನಾಥ ಜನರ ಕಾಮಧೇನು ಕಾಯೊ ಎಮ್ಮನು ದಾನವಕಾನನಕಲ್ಪಕೃಶಾನು ಸರ್ವೋತ್ತಮ ನೀನು ಆನತಜನ ಸುತ್ರಾಣಿಸುವಂತೆ ಪ್ರ- ದಾನಿಯಂತೆ ಶತಭಾನು ಪ್ರಕಾಶದಿ1 ಕೋಟಿ ಬ್ರಹ್ಮಾಂಡವ ಕಾಯುವ ಮಹಿಮ ಸದ್ಗುಣಗಣಧಾಮ ಹಾಟಕವಸನ ಕೈರವಶ್ಯಾಮ ಮುನಿಮನವಿಶ್ರಾಮ ಕಾಟಕ ಮನಸಿನ ಮಾಟವ ನಿಲ್ಲಿಸಿ ಘೋಟಕಾಸ್ಯ ನರನಾಟಕಧಾರಿ2 ಸೇನಾನಾಯಕನಿಲ್ಲದ ಸೇನೆ ಕಂಡರೆ ತಾನೆ ಭೂನಾಥಗಿಲ್ಲವೇನು ಬೇನೆ ಉಂಟೆಂಬುದು ನೀನೆ ಕಾಣಿಸದೆಮ್ಮಲಿ ಮೌನವ ಮಾಳ್ಪರೆ ದೀನಜನರ ದುಮ್ಮಾನಗೊಳಿಸುವರೆ 3 ಹಿಂದೆಮ್ಮ ಕಾಯ್ದವ ನೀನೆ ಹರಿ ಸುರನರ ಕೈವಾರಿ ಮಂದಜ್ಞಾನಿಗಳ ತಪ್ಪನು ಮಾರಿ ಮೂರ್ಲೋಕೋದ್ಧಾರಿ ಹೊಂದಿದವರಿಗೆಂದೆಂದಿಗು ಬಿಡನೆಂ- ಬಂದವ ತೋರಿ ಆನಂದವ ಬೀರುತ 4 ಸರ್ಪಾದ್ರಿಯಿಂದ ಓಡಿಬಂದ ಕಾರ್ಕಳದೊಳು ನಿಂದ ಚಪ್ಪರ ಶ್ರೀನಿವಾಸ ಮುಕುಂದ ಪರಿಪೂರ್ಣಾನಂದ ಒಪ್ಪಿಸಿದೆಮ್ಮಭಿಪ್ರಾಯವ ತಿ- ಮ್ಮಪ್ಪ ಲಕ್ಷ್ಮೀನಾರಾಯಣ ಸಲಿಸಲು 5
--------------
ತುಪಾಕಿ ವೆಂಕಟರಮಣಾಚಾರ್ಯ
ಭಜನೆಯ ಪದ ಭಕ್ತ ವತ್ಸಲ ಸ್ವಾಮಿ ಭಯನಿವಾರಣ ದೇವ ಭರದಿಂದ ಬಂದುದ್ಯಾಕೆ ಪೇಳಯ್ಯಾ ಪ ಭಾರ ಹೊತ್ತು ಬಂದೆಯಾ ಕೋರೆದಾಡಿಗಳಿಂದ ಧಾರೂಣಿ ಎತ್ತೀ ತಂದು ಭಾರ ವಾಯಿತೆಂದು ಬಂದೆಯಾ 1 ಬಾಲಕಾನಾ ನುಡಿಯ ಕೇಳಿ | ಬೇಗದಿಂದಾ ಬಂದೆಯಾ ದುರುಳನ್ನ ಕೊಂದು ಕರುಳ ಮಾಲೆಯಧರಿಸಿ ನೀ ತರಳಗಭಯವಿತ್ತು ಬಂದೆಯಾ2 ಬಲಿಯ ದಾನಾಬೇಡಿ ನೀನು ಕೊಡಲಿ ಪಿಡಿದೂ ನಿಂತೆಯಾ ಮಡದಿಯಾ ಕದ್ದವನ ಬಿಡದೆ ಬೆನ್ನಟ್ಟಿಕೊಂಡು ಸಡಗರದಲಿ ನೀ ಬಂದೆಯಾ 3 ಮಧರೇಲಿ ಹುಟ್ಟಿ ಮಲ್ಲಾರ ಮಡುಹೀ ಮಾವ ಕಂಸನ ಕೊಂದು ಬಂದೆಯಾ ಆನಂದಿಂದಿಲ್ಲಿ ಬಂದೆಯಾ 4 ವಸನಾ ವಿಲ್ಲದೆ ನೀನು ಪಶುವನ್ನೇರಿಕೊಂಡು ವಸುಧೆಯ ಒಳಗೆಲ್ಲಾ ತಿರುಗೀದೆಯಾ ನೀ ಬಂದೆಯಾ5 ಕರಿಯಾ ಮೊರೆಕೇಳಿ ನೀ ತ್ವರಿತಾದಿಂದಾ ಬಂದೆಯಾ ಮ ಕರಿವರದನೆಂದೆನಿಸಿಕೊಂಡೆಯಾ 6 ಕಷ್ಟ ಪಡುವಾ ಜನರ ಕಂಡು ಕಡುದಯದಿಂ ಬಂದಿಯಾ ಪಕ್ಷಿವಾಹನನೇ | ಲಕ್ಷಮಿರಮಣನೆ | ಕಟಾಕ್ಷವನೇ ಬೀರುವಿಯಾ 7 ಹತ್ತವತಾರವ ಎತ್ತಿ ಬೇಸತ್ತು ನೀ ಮತ್ತೆ ನೀನಿಲ್ಲ ಬಂದಿಹೆಯಾ ಬರುವರು ಕಂಡೆಯಾ 8 ಲಕ್ಷ್ಮಿ ಇಲ್ಲದೆ ನಾನಿರೆನೆನುತಲಿ ವೈಕುಂಠ ಬಿಟ್ಟು ಬಂದೆಯಾ ಭಕ್ತಾರ ಸಲಹಲು ಬಂದಿಹೆಯಾ 9 ಹುಡುಕೀಕೊಂಡಿಲ್ಲೇ ಬಂದಿಹೆಯಾ 10 ಪಾಪನಾಶಿನಿ ಸ್ನಾನ ಮಾಡೋರು | ನಿನ್ನ ಧ್ಯಾನ ಬೇಡೋರು ಮನದಿಕ್ಷ್ಟಾರ್ಥಗಳ ಸಲಿಸಲು | ಆತೂರದಿಂದಲಿ ಬಂದೆಯಾ 11 ರೀತಿಗಳಿಂದ ಸೇವಿಸುವರು ನಿನ್ನ ಕೆರಂಡಾಡುವರು 12 ಬಳಿ ಬಂದಿಹರು ಬೇಡುತಾ ನಿಂದಿಹರೂ13 ಪಡುತಲಿ ಬಂದಿಹರು ಸಂತಯಿಸಬೇಕೆನುತ ಬಂದಿಹೆಯಾ14 ಬಳಿ ಬಂದಿಹರೂ ಬೀಸಾಡಲೂ ಬಂದಿರುವಿಯಾ 15 ಬಂದಿಹರೂ ನಿನಗೊಂದಿಸುವರೂ 16 ಹೆಜ್ಜೆಗೆ ನಿನ್ನ ವಂದಿಸುತಲೀ ಬಾಷ್ಟಗಳ ಸುರಿಸುವರೂ 17 ನಲಿಯುವರೂ ಕುಣಿ ದಾಡುವರೂ 18 ದೋಬಿಕೊಳ್ಳುತ ನೀ ನಿಂತಿರುವೇ ಯಲ್ಲಾನುಕಸಕೊಂಡು ಕಳುಹುವಿಯೇ 19 ತೀರೀತೆಂದು ತಿಳಿಯುತಲೀ ಧನ್ಯರಾದೇವೆನುತ ತೆರಳುತಿಹರೂ 20 ಮೇಲಾದ ಭಕ್ಷಗಳ ಬಡಿಸುವೋರು
--------------
ರಾಧಾಬಾಯಿ
ಮಂಗಳಾಂಗನ ಭಜಿಸೆ ಹಿಂಗಿಸುವ ಭವವ ಎನ್ನಂಗದೊಳಡಗಿಹನೊ ಶ್ರಿಂಗಾರ ಮೂರುತೀ ಪ. ಧ್ಯಾನಕೆ ತಂದು ನಿಧಾನದಲಿ ಯೋಚಿಸು ಜ್ಞಾನಿಗಳರಸನ ಮಾನಸದೊಳಗೆ ಕಾನನದೊಳು ವೃದ್ಧ ಶಬರಿಯೆಂಜಲನುಂಡು ದಾನಶೀಲನು ರಾಮ ಕೈವಲ್ಯವನಿತ್ತಾ 1 ದುಷ್ಟ ಕಂಸನ ಹರಿಸಲು ಉತ್ಕøಷ್ಟ ಕೃಷ್ಣ ಬರೆ ಸೃಷ್ಟಿಗೊಡೆಯಗೆ ಗಂಧವಿತ್ತಳಾ ಕುಬ್ಜಿ ದಿಟ್ಟ ರೂಪವ ಉಂಗುಷ್ಠದಿಂದೊತ್ತುತ್ತ ಭಕ್ತ ರಿಷ್ಟವನು ಸಲಿಸಲು ಕಷ್ಟವೇ ಹರಿಗೆ 2 ಯಾವಾಗ ಸ್ತುತಿಸಿದರು ಮತ್ತಾವಲ್ಲಿ ಕರೆದರೂ ಧಾವತಿಗೊಂಡು ಬಹ ಶ್ರೀ ಶ್ರೀನಿವಾಸ ಹಾವಭಾವದ ತೆರದಿ ದೇವ ಬಂದೊದಗುವ ಮತ್ತಾವ ದೇವರ ಕಾಣೆ ಶ್ರೀವರನಲದೇ 3
--------------
ಸರಸ್ವತಿ ಬಾಯಿ
ಮಾರನಯ್ಯನ ಚದುರನ ತಂದುತೋರು ವೆಂಕಟರಮಣನ ಪ. ನಲ್ಲ ನುಡಿದರೆ ನುಡಿದರಗಿಣಿಯನು ನಾಚಿಸುವಚೆಲ್ವಮೊಗದಿ ಶಶಿಯನುಗೆಲ್ವ ಭಾರಿಯ ಸೊಬಗ ತೋರಿಫುಲ್ಲಬಾಣನ ಜರೆವನೊ 1 ಕಂಬನಿಯ ತೊಡೆದು ತನ್ನ ಮೊಗವಚುಂಬಿಸಲು ತರುಣಿ ತನ್ನ ಬಾಯತಾಂಬೂಲವನಿತ್ತು ಎನ್ನಮನ ದ್ಹಂಬಲ ಸಲಿಸಲು ಪೂರ್ಣ 2 ಇಂದೆನ್ನನಗಲಿದರೆ ಮನದಕುಂದು ಬಿಡಿಸುವನದಾರೆಇಂದುಮುಖಿ ಕರೆದು ತಾರೆ ಹಯವದನನಬಂದು ಬೇಗದಲಿ ಸಾರೆ 3
--------------
ವಾದಿರಾಜ
ರಥವನೇರಿದ ರಥಿಕನಾರೇ ಪೇಳಮ್ಮಯ್ಯ ಕಥಿತಧ್ಯಾತ ಸಂಸ್ತುತ ವಿತತಾನತ ಹಿತಕರ ದಿವಿಷÀತ್ಪತಿ ಕಾಣಮ್ಮ ಪ ಕೋಟಿ ಭಾಸ್ಕರ ಪ್ರಭಾಟೋಪದಿ ರಾಜಿಸುವ ಪೇಳಮ್ಮಯ್ಯ ಅ.ಪ. ತಾಟಂಕಯುತ ವಧೂಟಿಯರಿಕ್ಕೆಲದಲಿಹ ನೋಡಮ್ಮಯ್ಯ ಆಟದೆ ಕುರುಜ ಮಹಾಟವಿ ಸವರಿ ಕಿ ರೀಟಯ ಸಲಹಿದ ಖೇಟವಾಹನನೇ ಕೇಳಮ್ಮಯ್ಯ 1 ಭುಜಗರಾಜ ಫಣಿಮಣಿ ಮಂಡಲ ಮಂಡಿತನೇ ನೋಡಮ್ಮಯ್ಯ ವಿಜಯವರದ ಅರಿಗದಾಂಬುಜಧರ ಭುಜನೇ ನೋಡಮ್ಮಯ್ಯ ಗಜಚರ್ಮಧರಾದ್ಯನಿಮಿಷಗಣಸೇವಿತನ ನೋಡಮ್ಮಯ್ಯ ಅಜನ ನಾಭಿಯಲಿ ಪಡೆದು ಚರಾಚರ ಸೃಜಿಸಿ ಪೇಳ್ದ ನೀರಜಲೋಚನ ಕಾಣಮ್ಮ 2 ಏತಾದೃಶ ಮಹಾಮಹಿಮ ರಮಾವಲ್ಲಭನೆ ಪೇಳಮ್ಮಯ್ಯ ಶ್ವೇತ ದ್ವೀಪಾನಂತಾಸನ ವೈಕುಂಠನುಳಿದು ಪೇಳಮ್ಮಯ್ಯ ವೀತಭಯ ಜಗನ್ನಾಥವಿಠಲ ಬರಲೇಕೆ ಪೇಳಮ್ಮಯ್ಯ ಭೂತಳ ಜನರಭಿಲಾಷೆ ಸಲಿಸಲು ವಾತಾಶನ ಗಿರಿಗಿಳಿದ ಕಾಣಮ್ಮಯ್ಯ 3
--------------
ಜಗನ್ನಾಥದಾಸರು
ಜಯಜಯ ಜಲದುರ್ಗೆ ತ್ರಿಜಗನ್ಮಯೆ ಸದ್ಗುಣವರ್ಗೆ ಪ.ದಯಾಸಾಗರೆ ದಾರಿದ್ರ್ಯದುಃಖ ಭವ-ಭಯನಾಶಿನಿ ಮಣಿಮಯಕೃತಭೂಷಿಣಿ ಅ.ಪ.ಗಜವದನನ ಮಾತೆ ಸುಜನ-ವ್ರಜಸತ್ಫಲದಾತೆಕುಜನಭಂಜನಿ ನಿರಂಜನಿ ಶೈಲಾ-ತ್ಮಜೆ ಮಹೋಜೆ ನೀರಜದಳಲೋಚನಿ 1ಇಂದ್ರಾದ್ಯಮರನುತೆ ಪೂರ್ಣಾನಂದೆ ನಂದಜಾತೆಚಂದ್ರಾಸ್ಯೇ ಯೋಗಿವೃಂದವಂದಿತೆ ಮೃ-ಗೇಂದ್ರವಾಹಿನಿ ಮದಾಂಧರಿಪು ಮಥನಿ 2ಅಂಗಜಶತರೂಪೆ ಸದಯಾ-ಪಾಂಗೆ ಸುಪ್ರತಾಪೆಗಂಗಾಧರವಾಮಾಂಗಶೋಭೆ ಸಾ-ರಂಗನೇತ್ರೆ ಶ್ರೀರಂಗಸಹೋದರಿ 3ದಾಸಜನರ ಪೋಷೆ ರವಿಸಂ-ಕಾಶೆ ತ್ರಿಜಗದೀಶೆವಾಸುದೇವನ ಸ್ಮರಣಾಸಕ್ತಿಯ ಕೊಡುಭಾಸುರಜ್ಞಾನಪ್ರಕಾಶವಿಲಾಸಿನಿ 4ಸೌಖ್ಯವು ಭಕ್ತರ್ಗೆ ಸಲಿಸಲುಸೌಖ್ಯವು ನೀ ಭರ್ಗೆಲಕ್ಕುಮಿನಾರಾಯಣನ ಭಗಿನಿ ನಿ-ರ್ದುಃಖಪ್ರದಕಟಿಲಾಖ್ಯಪುರೇಶ್ವರಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಾ ದೀನವತ್ಸಲ ಲಕ್ಷ್ಮೀನಿವಾಸ ಶ್ರೀವೆಂಕಟೇಶಮಾಧವಮಧುರಿಪು ಮಾನುಷವೇಷ ಶರಣಾಗತಪೋಷಪ.ವೇದಾಗಮ್ಯ ದಯೋದಧಿ ಗೈದಪ-ರಾಧ ಕ್ಷಮಿಸಿ ಸುಗುಣೋದಯನಾಗುತ ಅ.ಪ.ಅನಾಥ ಜನರ ಕಾಮಧೇನು ಕಾಯೊ ಎಮ್ಮನುದಾನವಕಾನನಕಲ್ಪಕೃಶಾನು ಸರ್ವೋತ್ತಮ ನೀನುಆನತಜನ ಸುತ್ರಾಣಿಸುವಂತೆ ಪ್ರ-ದಾನಿಯಂತೆ ಶತಭಾನು ಪ್ರಕಾಶದಿ 1ಕೋಟಿ ಬ್ರಹ್ಮಾಂಡವ ಕಾಯುವ ಮಹಿಮ ಸದ್ಗುಣಗಣಧಾಮಹಾಟಕವಸನ ಕೈರವಶ್ಯಾಮ ಮುನಿಮನವಿಶ್ರಾಮಕಾಟಕ ಮನಸಿನ ಮಾಟವ ನಿಲ್ಲಿಸಿಘೋಟಕಾಸ್ಯ ನರನಾಟಕಧಾರಿ 2ಸೇನಾನಾಯಕನಿಲ್ಲದ ಸೇನೆ ಕಂಡರೆ ತಾನೆಭೂನಾಥಗಿಲ್ಲವೇನು ಬೇನೆ ಉಂಟೆಂಬುದು ನೀನೆಕಾಣಿಸದೆಮ್ಮಲಿ ಮೌನವ ಮಾಳ್ಪರೆದೀನಜನರ ದುಮ್ಮಾನಗೊಳಿಸುವರೆ 3ಹಿಂದೆಮ್ಮ ಕಾಯ್ದವ ನೀನೆಹರಿಸುರನರ ಕೈವಾರಿಮಂದಜ್ಞಾನಿಗಳ ತಪ್ಪನುಮಾರಿಮೂರ್ಲೋಕೋದ್ಧಾರಿಹೊಂದಿದವರಿಗೆಂದೆಂದಿಗು ಬಿಡನೆಂ-ಬಂದವ ತೋರಿ ಆನಂದವ ಬೀರುತ 4ಸರ್ಪಾದ್ರಿಯಿಂದ ಓಡಿಬಂದ ಕಾರ್ಕಳದೊಳು ನಿಂದಚಪ್ಪರ ಶ್ರೀನಿವಾಸ ಮುಕುಂದ ಪರಿಪೂರ್ಣಾನಂದಒಪ್ಪಿಸಿದೆಮ್ಮಭಿಪ್ರಾಯವ ತಿ-ಮ್ಮಪ್ಪ ಲಕ್ಷ್ಮೀನಾರಾಯಣ ಸಲಿಸಲು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ