ಒಟ್ಟು 5 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡು ನಮಿಸಿದೆ ಸತ್ಯಬೋಧ ಮುನಿಯ ಮಂಡೆ ಬಾಗುತ ದೇಹ ದಂಡವಿಕ್ಕುತಲಿ ಪ. ಭವ್ಯ ಬೃಂದಾವನದಿ ವೈಭವದಿ ಮೆರೆವವರ ಸವ್ಯಸಾಚಿಯ ಸಖನ ಪ್ರಿಯ ಪಾತ್ರರ ದಿವ್ಯ ಕೂರ್ಮಾಸನದಿ ಕುಳಿತು ತಪಚರಿಸುವರ ಅವ್ಯಯಾತ್ಮನ ಚರಣ ಧ್ಯಾನ ಮಾಳ್ಪವರ 1 ವಿಷವಿಡಲು ಪಾಪಿಗಳು ರಾಮಗರ್ಪಿಸಿ ಭುಜಿಸೆ ನಿಶಿಯಲ್ಲಿ ನಿದ್ರೆ ಜೈಸುತ ನಿತ್ಯದಲಿ ಹಸನಾಗಿ ದೇವತಾರ್ಚನೆ ಭೋಜನವಗೈಯೆ ದೂಷಿಸಿದ ಕುಜನರಿಗೆ ರಾತ್ರೆ ಸೂರ್ಯನ ತೋರ್ದ 2 ಕಾಶಿಗ್ಹೋಗುವೆನೆಂಬ ಆಸೆ ಪೂರೈಸುವೊಡೆ ತಾ ಸ್ವಪ್ನದಲಿ ಬಂದು ಜಾಹ್ನವಿಯು ಪೇಳೆ ರಸರಹಿತವಾದ ವೃಕ್ಷದಿ ಗಂಗೆಯನೆ ತರಿಸಿ ತಾ ಸ್ನಾನಗೈದು ಭಾಗೀರಥಿಯ ಪೂಜಿಸಿದ3 ಪೇಳಲಳವಲ್ಲದಿಹ ಬಹಳ ಕೌತುಕ ಮಹಿಮೆ ಕಾಲಕಾಲಕೆ ತೋರಿ ಭಕ್ತರನು ಕಾಯ್ದು ಮೇಲಾದ ಮಧ್ವ ಶಾಸ್ತ್ರಾರ್ಣವದಿ ಈಜುತಲಿ ಲೀಲೆಯಿಂದಲಿ ಮಾಯ್ಗಳನೆ ಗೆದ್ದ ಮಹಿಮ 4 ಪ್ರತಿವರ್ಷ ಪಾಲ್ಗುಣದಿ ದ್ವಿತೀಯ ಪಕ್ಷದಿ ದ್ವಿತೀಯ ತಿಥಿಯಲ್ಲಿ ದಿವ್ಯ ಉತ್ಸವ ಕೊಳುತ ಸತತ ಈ ಸವಣೂರು ಕ್ಷೇತ್ರದಲಿ ನೆಲಸುತಲಿ ಚ್ಯುತರಹಿತ ಗೋಪಾಲಕೃಷ್ಣವಿಠ್ಠಲನ ಭಜಿಪೆ5
--------------
ಅಂಬಾಬಾಯಿ
ಶ್ರೀ ವಿಷ್ಣು ತೀರ್ಥರು (ಮಾದನೂರು) ಶ್ರೀ ವಿಷ್ಣು ತೀರ್ಥರೆ ನಮೋ ಪ ತಾಮರಸ ಭ್ರಮರರೆಂದನಿಸೂವಲೌಕಿಕ ಸುವೈದಿಕ ಸುಶಬ್ದ ಜಾತವಸಾರ್ವಭೌಮ ಹರಿಗನ್ವಯಿಪರಂ ಭಜಿಸುತ್ತ ಇಷ್ಟಾರ್ಥವಂ ಪಡೆಯಿರೊ ಅ.ಪ. ಸವಣೂರು ಸನಿಯ ಸಿದ್ಧಾಪುರದ ಸೀಮೆಯಲಿಅವಸಿತರು ಬಾಲ ಆಚಾರ್ಯ ಭಾಗೀರ್ಥಿ ಎಂಬುವರು ಸದ್ಧರ್ಮರತರೆನಿಸಿ ಜಯತೀರ್ಥರಂ ಸೇವಿಸಲು ಬಹು ಭಕುತಿಲಿ |ಅವರನುಗ್ರಹ ಜಾತ ವರಶಿಶುವಿಗವರ ನಾಮವನಿಟ್ಟು |ಕಾಲದೊಳಗುಪನಯ ನವಂ ಮಾಡಿ ಸರ್ವ ವೇದ ವೇಂದಾಗ ಪಾರಂಗತರು ಐಜಿ ಆಚಾರ್ಯರಲಿ ಬಿಡಲು 1 ಕುಶಲತೆಯು ಮತ್ತೆ ಸೌಶೀಲ್ಯ ಗುಣನಿಧಿ ಎನಿಪಶಿಷ್ಯನಿಗೆ ಸಚ್ಛಾಸ್ತ್ರ ಪಾರಂಗತನು ಎನಿಸಿಒಸೆದು ದ್ವಿತಿಯಾಶ್ರಮಕೆ ಚೋದಿಸಿ ಕಳುಹಲವ ಗೃಹಧರ್ಮ ಸ್ವೀಕರಿಸುತ |ಎಸೆವ ಕೀರ್ತಿಲಿ ಮೆರೆದು ಶಿಷ್ಯರಿಗೆ ಶಾಸ್ತ್ರ ಬೋ-ಧಿಸುತಲಿರಲು ಸತ್ಸಂತಾನವಂತರಾಗುತಎಸೆವ ಹಂಸತೂಲಿಕ ತಲ್ಪದೊಳು ಪವಡಿಸಿರೆ ಅಪರಾಹ್ನ ರೋಗಾರ್ತರು 2 ಪತಿ ಪುರಂದರ ಸುದಾಸಾರ್ಯ ನುಡಿದುದನುಅಂತೆ ಮಂಚ ಬಾರದು ಮಡದಿ ಬಾರಳು ಎಂಬಪಿಂತಿನ್ವಚನವ ಕೇಳಿ ಚಿಂತಿಸುತ್ತಿರೆ ತಮಗೆ ಜಾತಿ ಸ್ಮøತಿ ಒದಗುತಿರಲು 3 ಘನವಾದ ಐಶ್ವರ್ಯ ಸತಿಸುತರು ಬಂಧುಗಳತೃಣಕೆ ಸಮ ತಿಳಿಯುತ್ತ ಜಯ ಗುರೂ ಹೃದ್ಗತವಅನು ಸರಿಸೆ ಅಜ್ಞಾತ ಬಗೆಯಲಿರುತಿಹನೆಂದು ವೈರಾಗ್ಯವನೆ ಪೊಂದುತ ||ಮನೆಯಿಂದ ಹೊರ ಹೊರಟು ಅನತಿ ದೂರವಸಾಗೆಘನ ಸರ್ಪ ರೂಪದಿಂ ತೋರಿ ಕೊಳೆ ಜಯತೀರ್ಥ ಮುನಿವರ್ಯ ಹೃದ್ಗತವ ತಿಳಿದು ವಸುಮತಿ ವ್ಯರ್ಥ ಸಂಚರಣೆ ಸಂತ್ಯಜಿಸುತ 4 ಶೃತಿ ಸ್ಮøತಿಗೆ ಸಮ್ಮತವು ದಶಮತಿಯ ಸಮಯವೆನುತತಿ ಹಿತದಿ ಪ್ರವಚನೆಗೆ ಪ್ರೇರಿಸಿಹ ಗುರುಮತವ ಸತ್ಕರಿಸಿ ಕಾರುಣ್ಯ ಕೊಂಡಾಡಿ ಸಾಧಿಸಲು ತೃತಿಯಾಶ್ರಮವನು ||ಹಿತದಿ ಕೈಕೊಂಡು ಮಲವ ತಾನಪಹರಿಪಸರಿತೃತಟದಲಿ ಇರುವ ಮನುವಳ್ಳಿ ಪಳ್ಳಿಯಲಿ ನೆಲಿಸುತಲಿ ವಿಹಿತ ಕರ್ಮಾಚರಿಸಿ ಸಿರಿಮತ್ಸು ಮಧ್ವ ವಿಜಯವ ಪಠಿಸುತಿಹರು 5 ಸಂಚಿತ ಸಿರಿ ವಿಷ್ಣುತೀರ್ಥರೆಂಬಂಕಿತದಿ ಮೆರೆಯುತಿಹರು 6 ಭಾಗವತ ಸಾರದುದ್ಧಾರವನುಮುಂತಾದ ಮುಕುತಿ ಸತ್ಪಂಥಗಳ ಬೋಧಿಪಗ್ರಂಥಗಳ ರಚಿಸಿ ಸುಜನೋದ್ಧಾರವನೆ ಗೈದು ಶೋಭಿಸುವರವನಿಯಲ್ಲಿ 7 ಲಕ್ಷುಮಿಯು ನರೆಯಣರನುಗ್ರಹವನೇ ಪಡೆದುದಕ್ಷಿಣದಿ ಬದರಿಕಾಶ್ರಮವೆನುತಿರೆ ಮೆರೆವತ್ರಕ್ಷ್ಯ ಮೋದೇಶ್ವರ ಪುರದಲಿ ನೆಲಿಸಿ ನೂರೆಂಟು ಸಲ ಸುಧೆ ಪ್ರವಚಿಸುತಲಿ ||ಕುಕ್ಷಿಯೊಳಗುಳ್ಳ ಸು ಕ್ಷೇತ್ರಗಳ ಸಂಚರಿಸಿ ಲಕ್ಷಿಸುತ || ಯೋಗ್ಯ ಜನಕುಪದೇಶ ಚರಿಸಲುಸ್ವಕ್ಷೇತ್ರಕೇ ಮರಳಿ ಕುಶಸರಿತು ತೀರದಲಿ ಪರ್ಣ ಶಾಲೆಯಲಿ ವಸಿಸಿ 8 ಕಾಲ ತಾ ತಿಳೀಯುತ್ತ ಶಿಷ್ಯಜನಕರಿವಿತ್ತು ಶಾಲಿವಾನ ಸಹಸ್ರ ಷಟ್ಯತೊತ್ತರವಷ್ಟಸಪ್ತತಿಯು ಮಾಘಾಸಿತ ಪಕ್ಷ ತ್ರಯೋದಶಿ ಸುಮೂಹೂರ್ತದಿ ||ಸುರರು ಭೂಸುರರೆಲ್ಲ ಜಯಘೋಷ ಗೈಯ್ಯುತಿರೆವರ ಮಹಾತ್ಮರು ಆಗ ಹೊಗಲು ವೃಂದಾವನವಪರಿಜನರು ಮುಳುಗಿದರು ದುಃಖ ಆನಂದ ಸಾಗರದಲದನೇನೆಂಬನು 9 ಅವತಾರಮಾರಭ್ಯ ಐದು ದಶ ವರ್ಷಗಳುಅವನಿಜನ ದೃಗ್ವಿಷಯರೀ ಮಹಾತ್ಮರು ತಾವುಅವಧೂತ ವೇಷದಿಂ ಭವನ ಪಾವನವೆನಿಸಿ ಪಿಂತೆ ಶುಕಮುನಿಯಂದದಿ ||ಪವನ ಮತ ಶರನಿಧಿಗೆ ಶಶಿಯು ಇಪ್ಪತ್ತೆಂಟುಪವಿತರ ಸುಲಕ್ಷಣ ಸುತನುವಿಂದುರೆ ಮೆರೆದುಅವನಿಸುರ ಶಿಕ್ಷಣ ಸದುಪದೇಶನುಷ್ಠಾನದಿಂ ಗೈದ ಕೀರ್ತಿಯುತರು 10 ಇವರ ನಾಮಸ್ಮರಣೆ ಕಲಿಮಲದ ಅಪಹರಣೆಇವರ ಸೇವೆಯ ಫಲವು ಸರ್ವಾಮಯ ಹರವುಇವರುನುಗ್ರಹವಿರಲು ವಾದಿನಿಗ್ರಹವಹುದು ಇದಕೆ ಸಂಶಯ ಸಲ್ಲದು ||ಇವರಿಹರು ಸುರತರುವಿನಂದದಲಿ ಶರಣರಿಗೆಇವರೆ ಚಿಂತಾಮಣಿಯು ಸರ್ವ ಭಯ ಹರಿಸುವರು ಇವರ ಗುಣಕೊಂಡಾಡಿ ಇವರೊಲಿಮೆ ಅರ್ಜಿಸಲು ಸರ್ವಕಾಮವು ಲಭ್ಯವು 11 ಸರ್ವಕ್ಷೇತ್ರಾಧಿಕದಿ ಭೂವರಹ ನಿಲ್ಲಿರುವಸರ್ವಭಯ ನಾಶನಕೆ ನರಹರಿಯು ಅರಿರೂಪಸರ್ವಭಕ್ತರ ಭೀಷ್ಟ ವರ್ಷಣಕೆ ಗೋಪಾಲಕೃಷ್ಣರೂಪದಿ ಇರುವನು ||ಇವರ ವೃಂದಾವನದೊಳೀ ಪರೀ ಹರಿರೂಪಪವನ ರೂಪಗಳಿಹವು ಶಿರದೊಳಗೆ ಜಯ ಮುನಿಯುಸರ್ವಋಷಿ ದೇವತೆಗಳಿಹರು ವೃಕ್ಷರೂಪದಿ ಈ ಪವಿತರ ಕ್ಷೇತ್ರದಿ 12 ಭಾಗವತ ನಿಷ್ಠಾತರೆ ||ನಮೊ ನಮೋ ಭಕ್ತಜನ ಕಾಮಧುಕ್ ಭವ್ಯಾತ್ಮನಮೋ ಶ್ರೀ ಮದಾನಂದ ಮುನಿಚರಣ ಮಧುಪರೆನಮೊ ಗುರೂ ಗೋವಿಂದ ವಿಠಲ ಪಾದಾಶ್ರಿತರೆ ನಮೊ ವಿಷ್ಣುತೀರ್ಥ ಪಾಹಿ ||
--------------
ಗುರುಗೋವಿಂದವಿಠಲರು
ಶ್ರೀ ವಿಷ್ಣು ತೀರ್ಥವಿಜಯ130ಪ್ರಥಮ ಕೀರ್ತನೆಶ್ರೀ ಹರಿಪಾದಾಬ್ಜರತ ಶ್ರೀ ವಿಷ್ಣು ತೀರ್ಥವನ-ರುಹಅಂಘ್ರಿಯುಗ್ಮದಲಿ, ಶರಣಾದೆ ಸತತಪಮಹಾಕರುಣಿಯು ಪರಮಹಂಸ ಕುಲತಿಲಕರುಅಹರ್ನಿಶಿಒದಗುವರು ಶರಣು ಸುಜನರಿಗೆಅ ಪನಿರ್ದೋಷಗುಣಪೂರ್ಣಶ್ರೀ ರಮಣ ಹಂಸನಿಗೆವಿಧಿಸನಕ ಮೊದಲಾದ ಗುರುಪರಂಪರೆಗೆ,ಯತಿವರ್ಯ ಅಚ್ಚುತ ಪ್ರೇಕ್ಷರಿಗೆ ಆನಂದತೀರ್ಥರ ಪದಾಂಬುಜಗಳಿಗೆ ಆನಮಿಪೆ 1ಪಂಕೇರುಹನಾಭ ನರಹರಿಮಾಧವಅಕ್ಷೋಭ್ಯ ಜಯತೀರ್ಥ ವಿದ್ಯಾಧಿರಾಜವಾಗ್ವಜ್ರ ರಾಜೇಂದ್ರ ಕವಿವರ ಕವೀಂದ್ರವಾಗೀಶರಿಗೆ ನಮೋ ರಾಮಚಂದ್ರರಿಗೆ 2ಶ್ರೀರಾಮ ಪ್ರಿಯ ರಾಮಚಂದ್ರರ ಕರಜರುಸೂರಿಗಳುವಿಭುದೇಂದ್ರ ವಿದ್ಯಾನಿಧಿಗೆಎರಗಿ ವಿದ್ಯಾನಿಧಿಯ ಸುತ ರಘುನಾಥರಿಗುಕರುಣಾಳು ರಘುವರ್ಯರಿಗು ಆನಮಿಪೆ 3ವೇದಾಂತಕೋವಿದರಘೂತ್ತಮ ತೀರ್ಥರಿಗೆವೇದವ್ಯಾಸಾಭಿದ ಯತಿಗಳಿಗೆ ನಮಿಪೆವೇದವ್ಯಾಸ ತೀರ್ಥರ ಕರಕಮಲ ಸಂಜಾತವಿದ್ಯಾಧೀಶರ ಚರಣಕಾ ನಮಿಪೆ 4ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯ -ನಾಥ ಸತ್ಯಾಭಿನವ ಸತ್ಯಪೂರ್ಣರಿಗೆಸತ್ಯವಿಜಯ ಸತ್ಯಪ್ರಿಯ ಸತ್ಯಬೋಧರಿಗೆಸತ್ಯಸಂಧ ಈ ಸರ್ವ ಗುರುಗಳಿಗೆ ನಮಿಪೆ 5ಸತ್ಯವರ ತೀರ್ಥರ ಚರಣಕಾ ನಮಿಸುವೆಸತ್ಯವರ ಕರಕಂಜ ಸಂಜಾತರಾದಸತ್ಯರಮಣ ಪ್ರಿಯ ಶ್ರೀ ವಿಷ್ಣುತೀರ್ಥರವೃತತಿಜಾಂಘ್ರಿಗಳಲ್ಲಿ ಶರಣಾದೆ ಸತತ 6ಶ್ರೀ ತ್ರಿವಿಕ್ರಮಪಾದಅಬ್ಜಜಾಸರಿತವಶಿರದ ಮೇಲ್ ಧರಿಸಿದ ಗಿರಿಜೇಶನಂತೆಹರಿಭಕ್ತಾಗ್ರಣಿ ವೈರಾಗ್ಯ ನಿಧಿಯು ಈಸೂರಿಕುಲತಿಲಕ ಶ್ರೀ ವಿಷ್ಣು ತೀರ್ಥಾರ್ಯ7ಸವಣೂರು ಪ್ರಾಂತದ ಸಿದ್ಧಾಪುರದವರುಮಾಧ್ವದಂಪತಿ ಭಾಗೀರಥಿ ಬಾಳಾಚಾರ್ಯಸೇವಿಸಿದರು ಟೀಕಾಚಾರ್ಯರ ಭಕ್ತಿಯಿಂದೇವಸ್ವಭಾವ ಮಗ ಪುಟ್ಟಬೇಕೆಂದು 8ರಾಘವಾನಂದ ಮುನಿ ಅಕ್ಷೋಭ್ಯ ತೀರ್ಥರಾ -ನುಗ್ರಹ ಸದಾಪೂರ್ಣ ಜಯತೀರ್ಥ ಮುನಿಯುಬಾಗಿ ಬೇಡಿದ ಈ ಸಾಧುದಂಪತಿಗೊಲಿದುಯುಕ್ತ ಕಾಲದಿ ದೊರೆಯಿತು ಪುತ್ರ ಭಾಗ್ಯ 9ಸ್ಪಟಿಕನಿಭ ಅಕಳಂಕ ಕಾಂತಿಯುಕ್ ಮಗನಿಗೆಇಟ್ಟು ಜಯತೀರ್ಥನಾಮವ ಮುಂಜಿ ಮಾಡಿಪಾಠ ಓದುವುದಕ್ಕೆ ಐಜಿ ಆಚಾರ್ಯರಲಿವಟುವ ಕಳುಹಿಸಿದರು ಕೃತಕೃತ್ಯ ತಂದೆ 10ಜಯತೀರ್ಥರನುಗ್ರಹದಿ ಜಯತೀರ್ಥ ವಟುವುವಿದ್ಯಾಭ್ಯಾಸ ಐಜಿ ಆರ್ಯರಲ್ಲಿಗೈಯುವಾಗ ಇತರ ವಿದ್ಯಾರ್ಥಿಗಳಿಗಧಿಕದಿವ್ಯ ಪ್ರತಿಭಾವನ್ನ ತೋರಿಸುತ್ತಿದ್ದ 11ಶ್ರೀದ ಒಲಿದಿಹ ಇವನ ಯೋಗ್ಯತೆ ದೊಡ್ಡದು,ವೈದಿಕ ಸುಪೂರ್ಣ ಬೋಧರ ಶಾಸ್ತ್ರವೆಲ್ಲ,ಓದಿ ಶ್ರೀ ಐಜಿ ವೇಂಕಟರಾಮಾರ್ಯರಲ್ಲಿಉತ್ತಮ ಜ್ಞಾನಿಯು ಆದ ಜಯತೀರ್ಥ 12ಸುರವೃಂದದಲಿ ದೊಡ್ಡ ಸ್ಥಾನದವ ಇವನೆಂದುಹರಿಯೇ ಈ ಜಯತೀರ್ಥನಲಿ ತೋರಿಹನುಗುರುಐಜಿಯರ ಸುತನ ಅಪಮೃತ್ಯು ತರಿದಿಹನುಭಾರಿತರ ಆಶ್ಚರ್ಯ ಇನ್ನೂ ತೋರಿಹನು 13ಬೃಹತಿಸಹಸ್ರಪ್ರಿಯ ಮಹಿದಾಸ ಜಗದೀಶಬ್ರಹ್ಮಪಿತ ಭಕ್ತಪಾಲಕ ಪರಮಹಂಸಮಹಿಶಿರಿಕಾಂತ `ಶ್ರೀ ಪ್ರಸನ್ನ ಶ್ರೀನಿವಾಸ'ಮಹಾಭಕ್ತ ಶ್ರೀ ವಿಷ್ಣು ತೀರ್ಥಾಯಶರಣು 14 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಧರ್ಮತೀರ್ಥರ ಚರಿತ್ರೆ128ಶ್ರೀ ಸತ್ಯಧರ್ಮ ತೀರ್ಥರ ಪಾದಯುಗ್ಮದಲಿನಾ ಶರಣು ಎನ್ನ ಪಾಲಿಪರು ಎಡಬಿಡದೆಅಸಮ ಅನುಪಮ ಸರ್ವಗುಣ ಗುಣಾರ್ಣವಅನಘಬಿಸಜಜಾಂಡದ ಒಡೆಯ ಶ್ರೀಶನಿಗೆ ಪ್ರಿಯರು ಪಹಂಸನಾಮಕ ವಿಷ್ಣುವನರುಹಾಸನಸನಕದೂರ್ವಾಸಮೊದಲಾದ ಗುರುವಂಶಜಾತದಶಪ್ರಮತಿಸರಸಿಜನಾಭನರಹರಿ ತೀರ್ಥಬಿಸಜಚರಣಂಗಳಲಿ ಸತತ ನಾ ಶರಣು1ಮಾಧವಅಕ್ಷೋಭ್ಯಜಯ ವಿದ್ಯಾಧಿರಾಜರಾಜೇಂದ್ರ ಕವೀಂದ್ರವಾಗೀಶರಾಮಚಂದ್ರವಿಭುದೇಂದ್ರ ವಿದ್ಯಾನಿಧಿಗಳು ಈ ಸರ್ವಸುತಪೋನಿಧಿ ಯತಿವರ್ಯರಿಗೆ ನಮಿಪೆ 2ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯ ತತ್ವಜÕ ರಘೂತ್ತಮಾರ್ಯರಿಗೆವೇದಾವ್ಯಾಸಾಭಿದ ಗುರುವಿದ್ಯಾಧೀಶರಿಗೆವೇದನಿಧಿಗಳಿಗೆ ಬಾಗುವೆ ಶಿರವ 3ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಭಿನವಸತ್ಯಪೂರ್ಣರಿಗೆ ನಮಿಪೆಸತ್ಯವಿಜಯರಿಗೆ ಸತ್ಯಪ್ರಿಯಸತ್ಯಬೋಧರಿಗೆಸತ್ಯ ಸಂಧರಿಗೆ ನಾ ಶರಣಾದೆ ಎಂದೂ 4ಸತ್ಯವರತೀರ್ಥರಿಗೆ ಸತ್ಯವರ ಕರಜಾತಸತ್ಯಧರ್ಮರಿಗೆ ನಾ ಮನಸಾ ಆನಮಿಪೆಸತ್ಯಧರ್ಮರ ಮಹಿಮೆ ಬಹು ಬಹು ಬಹಳವುಕಿಂಚಿತ್ತು ಅಂಶಮಾತ್ರ ಸೂಚಿತವು ಇಲ್ಲಿ 5ಉದ್ದಾಮ ಪಂಡಿತರು ನವರತ್ನ ವಂಶಜರುವಿದ್ವತ್ ಶಿರೋಮಣಿ ಅಣ್ಣ ಆಚಾರ್ಯರುವೈದಿಕ ಸದಾಚಾರಿ ತ್ರಿಕರಣದಿ ಶುದ್ದರುನಂದಿನಿಧರ ಮಧ್ವಮಾಧವ ಪ್ರಿಯರು 6ವಿತ್ತಸಂಗ್ರಹದಲ್ಲಿ ಚಿತ್ತವನು ಇಡದಲೆಸತ್ಯಧರ್ಮದಿರತರು ಸಂತತ ಇವರುಸದಾಗಮಿಕಭಾಗವತಮಾಧ್ವ ಸಚ್ಛಾಸ್ತ್ರದಿಮುದದಿಂದಕಾಲಉಪಯೋಗ ಮಾಡುವರು7ಇಂಥಾ ಭಾಗವತರಲ್ಲಿ ಗಂಗಾಧರನೇವೇಬಂದು ಔತಣ ಉಂಡು ಉಡುಗೊರೆಯಕೊಂಡುಸಂತತ ತಾ ಧ್ಯಾನಿಸುವ ರಾಮನ್ನ ಇವರುಮುಂದು ಪೂಜಿಪ ಯೋಗ ಅನುಗ್ರಹ ಮಾಡಿದರು 8ಅಣ್ಣಾಚಾರ್ಯರ ಮನೆಯಲ್ಲಿ ಅಕ್ಕಿಉಣಲಿಕ್ಕೆ ಸಾಲದೆ ಇರುವಾಗ ಬಂದಬ್ರಾಹ್ಮಣ ಓರ್ವನು ಭಸ್ಮಧರ ಅವನುಅನ್ನಬೇಕೆಂದನು ಮಧ್ಯಾಹ್ನಕಾಲ 9ಅನ್ನ ಅನ್ನದ ಅನ್ನಾದನ್ನ ಸ್ಮರಿಸುತ್ತಅಣ್ಣಾಚಾರ್ಯರು ಅಡಿಗೆ ತಾಮಾಡಿಬ್ರಾಹ್ಮಣನಿಗೆ ಬಡಿಸಿ ಧೋತ್ರಗಳ ಕೊಟ್ಟರುಪೂರ್ಣ ಉಂಡು ಪೋದ ವಿಪ್ರನು ತುಷ್ಟಿಯಲ್ಲಿ 10ಹಿಂದೆ ಆಚಾರ್ಯರು ಪೋಗಿ ನೋಡಲು ಶಿವನಮಂದಿರದಿವಿಪ್ರಅಂತರ್ಧಾನನಾದಮಂದಾಕಿನಿಧರನ ಮೂರ್ತಿಯಲಿ ಧೋತ್ರಗಳುಚಂದದಿ ಇದ್ದವು ದಕ್ಷಿಣೆ ಸಮೇತ 11ಸವಣೂರು ರಾಜ್ಯದ ಮಂತ್ರಿ ಖಂಡೇರಾಯದಿವಿಜರ ಲೋಕಯಾತ್ರೆಯು ಮಾಡಲಾಗದೇವರ ನೈವೇದ್ಯಯಕ್ಕಾದರಣೆ ತಪ್ಪಲುಸವಣೂರು ಪ್ರಾಂತವ ಬಿಟ್ಟು ತೆರಳಿದರು 12ದೇವತಾಂಶರು ಇವರು ಮಾನುಷ ಜನ್ಮವಭೂಮಿಯಲ್ಲಿ ಕೊಂಡು ಮಾನುಷ್ಯ ಜನರಂತೆಭವಣೆಗಳ ಹರಿಸ್ಮರಣೆಯಿಂ ತಾಳಿ ತಪ್ಪಸ್ಸಂತೆದಿವ್ಯ ಮಂತ್ರಾಲಯ ಕ್ಷೇತ್ರ ಐದಿದರು 13ಔದಾರ್ಯಗುಣನಿಧಿ ಶ್ರೀ ರಾಘವೇಂದ್ರತೀರ್ಥರ ವೃಂದಾವನ ಸೇವೆ ಮಾಡಿಕೃತಕೃತ್ಯರಾದರು ಅಣ್ಣಾಚಾರ್ಯರುಒದಗಿ ಅನುಗ್ರಹಿಸಿದರು ಗುರುಗಳು ಬೇಗ 14ಶ್ರೀ ರಾಘವೇಂದ್ರ ತೀರ್ಥಾರ್ಯಕರುಣಿಗಳುತೋರಿ ಸ್ವಪ್ನದಿ ಸತ್ಯವರರಲ್ಲಿ ಪೋಗೆದೊರೆಯುವುದು ಇಷ್ಟಾರ್ಥ ಎಂದು ಪೇಳಿದರುಹೊರಟರು ಆಚಾರ್ಯರು ಸತ್ಯವರರಲ್ಲಿ 15ಆ ಸಮಯ ಶ್ರೀ ಸತ್ಯವರ ತೀರ್ಥರ ಮಠದಿಂಶ್ರೀ ಸ್ವಾಮಿ ಮಂಜೂಶ ಕಳವು ಆಗಿವ್ಯಸನದಲಿ ಉಪೋಶಣದಿ ಸತ್ಯವರರಿದ್ದರುಭಾಸವಾಗದೆ ಮೂರ್ತಿಗಳಿರುವ ಸ್ಥಳವು 16ಮಾರ್ಗದಲಿ ಅಣ್ಣಾಚಾರ್ಯರು ಮೂರ್ತಿಗಳಝಗ ಝಗಿಪ ಕಾಂತಿಯ ತಾ ಕಂಡು ಮಠಕ್ಕೆಪೋಗಿ ಶ್ರೀ ಸತ್ಯವರರಲ್ಲಿ ಪೇಳಿದರುಹೇಗೆ ವರ್ಣಿಸುವೆ ಆ ಗುರುಗಳ ಆನಂದ 17ನಿಗಮಘೋಷಂಗಳು ವಿಪ್ರಜನ ಮುಖದಿಂದಮಂಗಳ ಧ್ವನಿ ಮೇಳ ತಾಳವಾದ್ಯಗಳುಕಂಗೊಳಿಸುವ ಮೆರವಣಿಗೆ ಮಠಮಂದಿರಕ್ಕೆಗಂಗಾಜನಕನ ಮೂರ್ತಿಗಳ ತಂದರು 18ಯುಕ್ತಕಾಲದಿ ಅಣ್ಣಾಚಾರ್ಯಸೂರಿಗಳುಸತ್ಯವರರ ಅಮೃತ ಹಸ್ತಾಭಿಷೇಕಯತಿ ಆಶ್ರಮ ಸತ್ಯಧರ್ಮತೀರ್ಥರೆಂದು ನಾಮಾಪ್ರಣವಉಪದೇಶಕೊಂಡರು19ಪ್ರಣವೋಪದೇಶಗುರುಹಸ್ತದಿಂ ಅಭಿಷೇಕಘನಮಹಾವೇದಾಂತ ಪೀಠವು ಲಭಿಸಿಈ ನಮ್ಮ ಸತ್ಯಧರ್ಮರ ದೇಶದಿಗ್ವಿಜಯಜ್ಞಾನೋಪದೇಶ ಹರಿಪೂಜಾ ಮಾಡಿದರು 20ಭಾವುಕರ ಪ್ರಿಯತಮಸನತ್ಸುಜಾತೀಯವುಭಾವದೀಪಿಕ ಶ್ರೀಮದ್ ಭಾಗವತಕೆತತ್ವಸಂಖ್ಯಾನ ಶ್ರೀ ವಿಷ್ಣು ತತ್ವನಿರ್ಣಯಇವು ಎರಡಕ್ಕೂ ಟಿಪ್ಪಣಿ ಬರೆದು ಇಹರು 21ವಾಗ್ವಜ್ರ ಧಾರಾವುದುರ್ವಾದಿಗಿರಿಕುಲಿಶಜಗತಲ್ಲಿ ಹೋದಕಡೆ ಎಲ್ಲೂ ಮರ್ಯಾದೆಬಾಗುವ ಯೋಗ್ಯರಿಗೆ ಸತ್ತತ್ವ ಉಪದೇಶಜಗಕ್ಷೇಮಕರ ಪೂಜಾ ವರವು ದೀನರಿಗೆ 22ಮೂವತ್ತು ಮೇಲ್ಮೂರು ವತ್ಸರವು ಶ್ರೀಮಠಸುವಿತರಣಿಯಿಂದ ಆಡಳಿತ ಮಾಡಿಸುವರ್ಣ ರತ್ನಾಭರಣ ಮಠತೋಟಂಗಳದೇವಪ್ರೀತ್ಯರ್ಥ ಸೇರಿಸಿದರು ಮಠಕೆ 23ಹದಿನೇಳನೂರು ಐವತ್ತೆರಡು ಶಾಲಿಶಕತ್ರಯೋದಶಿಶ್ರಾವಣಕೃಷ್ಣಪಕ್ಷಇಂಥಾ ಸುಪುಣ್ಯ ದಿನದಲ್ಲಿ ಶ್ರೀ ಹರಿಯಪಾದವನೈದಿದರು ಹರಿಯಧ್ಯಾನಿಸುತ 24ಮತ್ತೊಂದು ಅಂಶದಲಿ ವೃಂದಾವನದಲ್ಲಿಬಂದು ಸೇವಿಸುವವರ ವಾಂಛಿತವೀಯುತ್ತನಂದಿನಿಧರ ಮಧ್ವ ಮಾಧವನ ಒಲಿಮೆಯಿಂನಿಂತಿಹರು ಸ್ಮರಿಪರ ಗೋಕಲ್ಪತರುವು 25ಕನ್ನಡಪ್ರದೇಶದಲಿ ಮಹಿಷೂರು ರಾಜ್ಯ ಹೊಳೆಹೊನ್ನೂರು ಕ್ಷೇತ್ರದಲಿ ವೃಂದಾವನಅಹ್ನುಕನ್ಯಾ ಬಿಂದು ರೂಪದಲಿ ವರ್ಷಿಪಳುಜಾಹ್ನವಿಧರ ಉಸುವು ಕಣರೂಪದೊಳಗೆ 26ಒಲಿವ ಶಿವ ಸತ್ಯ ಧರ್ಮರ ನಾವು ಸ್ಮರಿಸಲುಒಲಿವರು ಮಧ್ವಮುನಿ ಶಿವನು ನಮಗೊಲಿಯೆಒಲಿವನುಅಜಪಿತ`ಶ್ರೀ ಪ್ರಸನ್ನ ಶ್ರೀನಿವಾಸನು'ಒಲಿವ ಬೋಧರು ಮಧ್ವಮುನಿ ಒಲಿದರೇವೇ 27 ಪ|| ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು