ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆ ರಕ್ಷಿಸಬೇಕು ಹೀನಬುದ್ಧಿಯ ನರನ ಪಯೇನೆಂಬೆ ವಿಷಯಗಳೊಳು ಮನಮುಳುಗಿ ಧ್ಯಾನವನೊಮ್ಮೆಯು ಮಾಡದ ಮರುಳ ಅ.ಪಕಂಡುದನೆಲ್ಲವ ಬಯಸಿ ದಂಡಿಸಲಾರದೆ ಮನವಕೆಂಡಕೆ ಮುತ್ತುವ ಶಲಭನ ತೆರದಿ ಕಂಡು ನೊಂದು ಮತ್ತದ ಬಿಡದಿರಲು 1ಕಾಯವ ನಿತ್ಯವಿದೆಂದು ಹೇಯದಿ ತೋರಲು ಕಂಡು ನೋಯದೆ ತಾಪತ್ರಯಗಳನುಂಡು ಆಯಸಗೊಳುತಿರಲಿದ ನೀ ಕಂಡು 2ದುಃಖದಿ ನೋವರ ನೋಡಿ ಸುಕ್ಕುತಲಾಕ್ಷಣದೊಳಗೆದುಃಖವು ಬಂದರೆ ಪರಿಹರವಾಗದೆ ಸಿಕ್ಕಿರೆ ಬಲೆಯೊಳು ದುಃಖಿಸುತಿರಲು 3ಪ್ರಾಚೀನ ಕರ್ಮಗಳು ವೀಚಿಗಳಂದದಿ ಬರಲುಸೂಚಿಸಿ ಶಿಕ್ಷಿಪ ಶಾಸ್ತ್ರದ ನೆಳಲೊಳು ಚಾಚದೆ ತಾವೆ ತಾವಾಗಿರಲು 4ದುರಿತಗಳೆ ಬಹುವಾಗಿ ಸ್ಫುರಿಸುತ್ತಲಿರಲಾಗಿಮರುಗುವ ರಕ್ಷಕ ನೀನಿರಲಾಗಿ ಮರೆಯೊಗದಿರಲೀ ದುರಿತವ ನೀಗಿ 5ದ್ವಂದ್ವಗಳೊಂದೆಂದೊಮ್ಮೆ ನಿಂದಿರೆ ಕರ್ಮದ ಹೆಮ್ಮೆಹೊಂದದು ಎಂದಿಗು ಅದು ತನ್ನ ಸೊಮ್ಮೆಯೆಂದಿಗೆ ಹೃದಯದಿ ನಿಲುವೆ ನೀನೊಮ್ಮೆ 6ಮಾನವ ಬಿಟ್ಟರೆ ಬುದ್ಧಿ ಜ್ಞಾನದ ಸಾಧನ ಸಿದ್ಧಿತಾನೇ ಬರುವುದು ಪುಣ್ಯಸಮೃದ್ಧಿ ಜ್ಞಾನಾತ್ಮಕ ಕೃಷ್ಣ ನೀನಿರು ಹೊದ್ದಿ 7ಭಜಿಸಿದನೆ ಭಕ್ತಿಯಲಿ ಯಜಿಸಿದನೆ ಯಾಗದಲಿದ್ವಿಜತನವನ್ನಾದರು ಬಿಡದಿದ್ದನೆ ಅಜಮಿಳನೆ ನಿನ್ನೊಲವಿಗೆ ಸಾಕ್ಷಿ 8ಕರುಣಕಟಾಕ್ಷವ ನೀನು ುರಿಸಲು ಧನ್ಯನು ನಾನುತಿರುಪತಿ ನಿಲಯ ಶ್ರೀ ವೆಂಕಟ ಕಾಣು ಗುರು ವಾಸುದೇವರೂಪಿನ ಚಿದ್ಭಾನು 9ಓಂ ದಾನವೇಂದ್ರ ವಿನಾಶಕಾಯ ನಮಃ
--------------
ತಿಮ್ಮಪ್ಪದಾಸರು
ಸ್ಥಿರವೆಂದು ನಂಬಿ ಕೆಡಬೇಡ ಮನುಜಾ ಧರಣಿ [ಬಾಳು] ಕರುಣೆಯಿಹುದು ಮಾ[ಂಗಿರೀಶನ] [ನಂಬಿದರೆ] ಪ ಕ್ಷೀರಾಬ್ಧಿಗೈದು ಮುದದಿ ಪೊರೆವನು ಸ್ತನ್ಯದಿಂ ಹೀರಿ ತೇಲುತ ಬೆಳೆದು ತೋರಮುತ್ತುಗಳಾ ಹಾರ ಪದಕಗಳಿಂದ ಚಾರುಭೂಷಣದಿಂದ ಮಾರಸುಂದರನೆನಿಪ | ಮೂರು ದಿನದ ಬಾಲ 1 ಬಾಲತನ ಪೋಗಲು ಮೇಲೆ ಯೌವನವೊದಗಿ ಬಾಲೆಯೋರ್ವಳಕರವ ಘಳಿಲದೊಳು ಹಿಡಿದು ಮೇಲಾದ ಸೌಭಾಗ್ಯವಲ್ಪಕಾಲವಿರುವಾಗ ಕಾಲದೂತರು ಪಿಡಿಯಲೊಡನೆ ಬ[ರುವ]ವರಿಲ್ಲ 2 ಉಕ್ಕುವ ಯೌವನದ ಸೊಕ್ಕಿಲ್ಲ ಮರುದಿನ ಉಕ್ಕುಕ್ಕಿ ಬಸವಳಿದು ಶಕ್ತಿಗುಂದಿ ಸುಕ್ಕು ಸುಕ್ಕಿನ ದೇಹ[ಭಾ]ವವಿಲ್ಲದ ಬಾಳ ಭಕ್ತಿಗೆ ಮನಮರೆಯೆ ಭಕ್ತಗತಿಯದರಿಂದ 3 ಧನವ ದಾಯಾದಿಗಳು ಮನವ ಕಾಮಾದಿಗಳು ಸನುಮತ ಜ್ಞಾನವನ್ನು ದುರಿತಕಾರ್ಯ ತನುಜ ತನುಜೆಯರೆಲ್ಲರವರವರ ಸೌಖ್ಯವನು ಸನಿಹದಿಂ ಸೂರೆಗೈವರಿನ್ನೇತರಾಸೆ 4 ಕುಂಟು ಜೀವವಿರುವನಕ ನೆಂಟರಿಷ್ಟರು ಹಣವ ಗಂಟನುಂಗಲು ಬರುತಲೆಂಟೆಂಟುದಿನವಿಹರು ಗಂಟು ತೀರಿದ ಬಳಿಕ ಪಾಪಪುಣ್ಯಗಳ ಹೊರತು [ಏ ನುಂಟು ಈಭವದ ನಂಟಿನಲಿ ಯದರಿಂದ 5 ಜೀವ ತಾ ಜನಿಪಂದು ರವೆಯಷ್ಟು ತರಲಿಲ್ಲ ಅವನಿಯಾ ಬಿಡುವಂದು ಜವೆಯಷ್ಟ ಹೊರಲಿಲ್ಲ ಭಾವಶುದ್ಧಿ ಬೇಕನಿಶ ಮಾವಿನಾಕೆರೆರಂಗನ ಸೇವಿಸಿದೊಡಾ ರಂಗ ಭವವೆಲ್ಲ ಕಳೆವಾ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್