ಒಟ್ಟು 36 ಕಡೆಗಳಲ್ಲಿ , 12 ದಾಸರು , 35 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅ) ಶ್ರೀಹರಿಸ್ತುತಿಗಳು ಮಾನಸಗಣ್ಯ ಚಿನ್ಮಯನ ಪ ವನಮಾಲಿಕಾಗಳನ ಮಿಂಚನು ಸೋಲಿಸುತಿಹನ 1 ಹೃದಯಾತಂಕಮೋಚನನ ಜನನೀ ಕುಚಕುಂಕುಮಾಂಕಿತನ 2 ಗುಣವೃಂದಪೂರಿತನ ಚಕೋರಾನಂದ ಚಂದಿರನ 3 ಭೂಷಣನಿಕರ ಭೂಷಿತನ ನಿತ್ಯದಿ ಸುಖದಾಯಕನ 4 ಶರಣೆಂದು ಕರದಿ ತೋರುವನ ಧರಣೀನೀಳೆಯರಿಹ ಕೆಲನ ಪುಲಿಗಿರಿಯೊಳು ನೆಲಸಿಹ ವರದವಿಠಲನ 5
--------------
ವೆಂಕಟವರದಾರ್ಯರು
(ಮನೆಬಾಗಿಲ ಮೇಲೆ ಶ್ರೀನಿವಾಸ ಮೂರ್ತಿ) ಮಾಧವ ನಿಧಿಗಿರಿನಾಯಕ ಪದಕಮಲಾಶ್ರಿತ ಪರುಷಸುಖದಾಯಕ ಪ. ಬಲಿಯ ದೃಢಕೆ ಮೆಚ್ಚಿ ಬಾಗಿಲ ಕಾಯ್ದನಿ- ರ್ಮಲ ಕರುಣಾಮೃತ ವಾರಿಧೆ ಸುಲಭದಿ ಮುಂದಿನ ವಲಭಿತ್ಪದವನು ಸಲಿಸುತ ನೀನೀ ನಿಲಯದಿ ಸೇರಿದಿ 1 ಮಾಕಳತ್ರ ಮಮತಾನರಮೋಹ ನಿ- ರಾಕರಿಸಖಿಳ ಸುಖಾಕರನೆ ಸ್ವೀಕರಿಸೆನ್ನಯ ಸರ್ವ ಸಮರ್ಪಣ ಬೇಕು ಸರ್ವದಾ ತ್ವಜನ ತರ್ಪಣ 2 ಭೂರಮೇಶ ಗೃಹದ್ವಾರದಿ ನೀ ನೆಲೆ- ದೋರಲು ದುರಿತವು ಸೇರದಲೆ ದೂರೋಡುವದೆಂದರಿತು ನಂಬಿದೆನು ನೀರಜಾರಮಣ ಶೇಷ ಗಿರೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
3. ನವಗ್ರಹ ಸಕಲಗ್ರಹಬಲವು ನೀನೆ ಶ್ರೀನಿವಾಸ ಸುಖದಾಯಕನೇ ಅಖಿಲೇಶ್ವರ ಪ ಆರ್ತರ ಸಲಹುವ ಮಾರ್ತಂಡ ಬಲವು ಕೀರ್ತಿಯನೀಯುವ ಚಂದ್ರನ ಬಲವು ಪಾರ್ಥಿವರಗೈವ ಭೂ ಪುತ್ರ ಬಲವು 1 ವಿದ್ಯಾದಾಯಕನಾದ ಬುಧನ ಬಲ ಅದ್ಭುತ ಭಯಹರ ಶ್ರೀಗುರುವೊಲವು ಶುದ್ಧ ಸತ್ವದ ಶುಕ್ರನ ನಲಿವು 2 ಅನವರತವು ಶುಭದಾಯಕ ಶನಿಫಲ ಅನಿಷ್ಟಹಾರಕ ರಾಹುಕೇತು ಬಲ ಅನುದಿನ ಧ್ಯಾನಿಪೆ ಜಾಜೀಕೇಶವ 3
--------------
ಶಾಮಶರ್ಮರು
ಗುಣಾತೀತ ಸದ್ಗುರು ಗಣನಾಥ ಘನಸುಖದಾಯಕ ಸದೋದಿತ ಧ್ರುವ ಅನುದಿನ ಮಾಡುವೆ ಮನೋಹರ ಅಣುರೇಣುದೊಳು ನೀ ಸಾಕ್ಷಾತ್ಕಾರ ಮುನಿಜನರಿಗಾಗುವಿ ಸಹಕಾರ ನೀನಹುದೋಭಕ್ತರ ವಿಘ್ನಹರ 1 ನಿಮ್ಮ ಭೋಧಗುಣವೆ ಸರಸ್ವತಿ ಸಮ್ಯಜ್ಞಾನ ಬೀರುವ ನಿಜಸ್ಥಿತಿ ಬ್ರಹ್ಮಾದಿಗಳೊಂದಿತ ನಿಜಖ್ಯಾತಿ ಬ್ರಹ್ಮಾನಂದ ದೋರುವ ಫಲಶ್ರುತಿ 2 ಬೇಡಿಕೊಂಬೆ ನಿಮಗೆ ಅನುದಿನ ಕುಡುವವರಿಗೆ ನೀ ನಿಧಾನ ಮೂಢ ಮಹಿಪತಿ ಒಡೆಯ ನೀ ಪೂರ್ಣ ಮಾಡುತಿಹ ನಿತ್ಯವು ನಾ ನಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಚೌತಿಯ ದಿವಸ ರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ- ಮೌರಿ ರಭಸದಿ ಲಕ್ಷ್ಮೀಕಾಂತ ಭೂರಿ ವೈಭವದಿ ಪೊರಟನೆತ್ತ ಯಾವ ಕಾರಣವೆಂದು ಪೇಳೆಲೆ ಸತ್ಯ 1 ಊರ್ವಶಿ : ದೇವಿ ಕೇಳೆಲೆ ಸುಮ್ಮಾನದಿಂದ ಕುಲ- ದೇವರ ಪೂಜೆಗೋಸುಗ ಬಂದ ಪಾವನಮೂರ್ತಿಯಾದುದರಿಂದ ನಮ್ಮ ಕಾವನು ಕರುಣಾಕಟಾಕ್ಷದಿಂದ2 ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ- ನ್ನಾಥನಿಗ್ಯಾವ ಕುಲವು ಕಾಣೆ ರೀತಿಯನರುಹಬೇಕೆಲೆ ಬಾಲೆ ಸರ್ವ ಚೇತನಾತ್ಮನ ನಾಟಕದ ಲೀಲೆ3 ಊರ್ವಶಿ : ಪಾಂಡವರಾಯುಧಗಳನ್ನೆಲ್ಲ ಪೊತ್ತು- ಕೊಂಡ ಕಾರಣದಿ ಪೂಜೆಗಳೆಲ್ಲ ಕಂಡು ಪೊಗಳಲು ಕವಿಗು ಸಲ್ಲ ಇನ್ನು ಪುಂಡರೀಕಾಕ್ಷನವನೆ ಬಲ್ಲ4 ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ- ಭೋಜನಾಭನು ತಾಕ್ಷ್ರ್ಯನ ಮೇಲೆ ರಾಜಬೀದಿಯೊಳ್ ಬರುವದೇನೆ ಇಂಥ ಸೋಜಿಗವೇನು ಪೇಳೆಲೆ ಜಾಣೆ5 ಊರ್ವಶಿ : ಪಟಹ ಡಿಂಡಿಮವಾದ್ಯರವದಿಂದ ತಂ- ಬಟೆನಿಸ್ಸಾಳರವದಿ ಬರುವ ಚಂದ ಸಟೆಯಲ್ಲ ಕೇಳು ಕರುಣದಿಂದ ನಮ್ಮ ಕಟಕ ರಕ್ಷಿಸಲು ಬರುವ ಗೋವಿಂದ6 ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ- ಗಲಭೆಗಳಿಂದ ಪೋಗುವದೇನೆ ನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ- ಜಲಜನಾಭನ ಮಹಿಮೆಯ ಜಾಣೆ7 ಊರ್ವಶಿ :ಚಾಪಲನೇತ್ರೆ ಚೌತಿದಿನದಿ ಕೆರೆ- ದೀಪವೆಂದೆನುತ ಭಕ್ತರು ಮುದದಿ ಶ್ರೀಪರಮಾತ್ಮ ವಿಲಾಸದಿ ಭಕ್ತ- ರಾಪೇಕ್ಷೆಗಳನು ಸಲ್ಲಿಸುವಂದದಿ8 ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ- ಸ್ತೋಮ ಜೇನುಂಡೆ ಬಿರುಸು ಮಿಗಿಲು ವ್ಯೋಮಕೇಶಗಳ ಪೊಗಳತೀರದು ಸರಿ ಭೂಮಿಯೊಳ್ ಕಾಣೆನೆಂಬಂತಾದುದು9 ಅಮಮ ಇದೇನೆ ಇಂದಿನ ಲೀಲೆ ಜನ- ರಮರಿಕೊಂಡಿಹರೇನಿದು ಬಾಲೆ ಸಮವಿಲ್ಲ ಇಂತೀ ವೈಭೋಗಕ್ಕೆಲೆ ನ- ಮ್ಮಮರಾವತಿಗಿಂತಧಿಕ ಬಾಲೆ10 ಊರ್ವಶಿ : ಸಾರ್ಥಕಾಗುವದು ಜನ್ಮವು ಕಾಣೆ ಸಕ- ಲಾರ್ತಿ ಹರಣವಾಗ್ವದು ಜಾಣೆ ಕೀರ್ತಿತರಂಗಮಾಗಿಹುದೇನೆ ಶೇಷ- ತೀರ್ಥವೆಂದರೆ ಕೇಳಿದು ಪ್ರವೀಣೆ11 ರಂಭೆ : ಏಸು ದೊಡ್ಡಿತೆ ಕೇಳಲೆ ಬಾಲೆ ಅನಂ- ತಾಸನದಂತೆ ಮರೆವುದಲ್ಲೇ ನಾಸಿರ ದೀಪಸೋಪಾನದಲೆ ಮಹಾ- ಶೇಷನಿಹನು ಮಧ್ಯದೊಳಿಲ್ಲೇ12 ಊರ್ವಶಿ : ಕರುಣಾಕರನು ನಮ್ಮೆಲ್ಲರನು ನಿತ್ಯ ಪೊರೆಯಲೋಸುಗ ಬಂದನು ತಾನು ಸುರುಚಿರ ಮಂಟಪವೇರಿದನು ಭೂ- ಸುರರಿಂದ ವೇದಘೋಷವ ಕೇಳ್ವನು13 ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮ ಸೃಷ್ಟಿಗೆ ಪೊಸತಾಗಿಹುದು ಕಾಣೆ ಕಟ್ಟಿಸಿದವನು ಪುಣ್ಯೋತ್ತಮನು ಪರ- ಮೇಷ್ಠಿ ಜನಕನ ಕೃಪೆಯಿನ್ನೇನು14 ಭಜಕರ ಮುಖದಿಂದೆಲ್ಲ ತಾನು ಭೂ- ಭುಜನಾಗಿ ನಡೆಸುವನಿದನೆಲ್ಲನು ನಿತ್ಯ ಸಾಕಾರವನು ತೋರಿ ತ್ರಿಜಗವನೆಲ್ಲ ರಕ್ಷಿಸುತಿಹನು15 ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ- ದೊಡೆಯ ಪೊರಡುವ ಕಾಲದಿ ಭಾರಿ ಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥ ಕಡು ಬೆಡಗನು ಉಸುರೆಲೆ ಬಾಲೆ16 ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮ ತನುವಿಗೆ ಸೋಂಕಲದನೆಲ್ಲವ ಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ- ಧ್ವನಿಯೆಸಗಿದರು ಕೇಳಿದರಂದವ17 ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು- ಬರುವನು ವೇದನಿನಾದದಲಿ ವರರತ್ನ ಖಚಿತ ಮಂಟಪದಲ್ಲಿ ನಿಂತ ನಿರವದಿ ಸುಖದಾಯಕನಲ್ಲಿ18 ಶರಣರ ಪಾಪ ಮನಕೆ ತಾರ ದುಡಿದ ವರ ಭೇರಿಗೆರೆವ ಬಿಸಿನೀರ ವರಲಕ್ಷ್ಮೀನಾರಾಯಣಧೀರ ಸುರು- ಚಿರ ಸಿಂಹಾಸನವೇರಿದ ವೀರ19
--------------
ತುಪಾಕಿ ವೆಂಕಟರಮಣಾಚಾರ್ಯ
ಚ್ಚಂದಿರವದನೆ ಶಾರದೆ ಪ ಇಂದೀವರಾಕ್ಷಿ ಶತಾನಂದನ ಪ್ರಿಯೆ ದೇವಿ ಕುಂದು ನೋಡದೆ ಶ್ರುತಿವಂದೆ ಜ್ಞಾನವ ನೀಡೆ ಅ.ಪ. ಸಿತಾಬ್ಜಾಸನೆ ಸುಖದಾಯಕಿ ಸುರ ನಾಥಾರಾಧಿತೆ ವಿಶ್ವನಾಯಕೀ ವೀತದುರಿತೆ ಶಿವ ಮಾತೆ ಸದ್ಗುಣಮಣಿ ವಾಗ್ದೇವಿ ಮಾತೆ 1 ಕೋಕಿಲವಾಣಿ ಕವಿಸೇವಿತೆ ಎನ್ನ ವಾಕು ಲಾಲಿಸೆ ಮನಿವಂದಿತೆ ತೋಕನೆಂದು ಸುವಿವೇಕ ಬುದ್ಧಿಯನಿತ್ತು ವಾಕು ಮನ್ನಿಸು ತಾಯೆ 2 ಪಾತಕಿಗಳೊಡನಾಡಿ ನಾ ನಿನ್ನ ಪೋತಾಬ್ಜಪದ ಭಜಿಸದ್ಹೋದೆ ನಾ ಪಾತಕವೆಣಿಸದೆ ಸೀತಾರಮಣ ಜಗ ನ್ನಾಥವಿಠ್ಠಲನಘ್ರಿ ಗೀತಾಮೃತವನುಣಿಸು 3
--------------
ಜಗನ್ನಾಥದಾಸರು
ಜಯ ಜಯ ಶ್ರೀ ಸದ್ಗುರುನಾಥ ದಯಗುಣದಲಿ ನಿಸ್ಸೀಮ ನೀ ಪ್ರಖ್ಯಾತ ಧ್ರುವ ಸ್ವಯಂಭು ಸ್ವತಂತ್ರ ಸ್ವಪ್ರಕಾಶ ಸ್ವಯಂಜ್ಯೋತಿಸ್ವರೂಪ ಸ್ವವಿಕಾಸ ದ್ವೈತಾದ್ವೈತಕೆ ಸಹಿತ ಸ್ವವಿಲಾಸ ಶ್ರೇಯ ಸುಖದಾಯಕನಹುದೋ ನೀ ಪರೇಶ 1 ಸ್ವಭಾವ ಸ್ವಸಿದ್ಧ ಸರ್ವಾಧಾರ ಸ್ವಭಾಸ ಸ್ವತೇಜ ಸಹಜ ನಿರ್ಧಾರ ಸ್ವಬೋಧ ಸ್ವಬ್ರಹ್ಮ ಸಾಕ್ಷಾತಾರ ಸ್ವಭಕ್ತಜನರಿಗೆ ನೀನೆ ಸಹಕಾರ 2 ಸ್ವಾನಂದ ಸದೋದಿತ ಸ್ವಯಂ ಭಾನು ಸ್ವಾನಭವಲಾದಯ್ಯ ತಾನೆ ತಾನು ಅನುದಿನ ಭೋರ್ಗರೆವ ನೀ ಕಾಮಧೇನು ದೀನಮಹಿಪತಿ ಸ್ವಾಮಿ ನೀನೆ ನೀನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಜಗನ್ನಾಥ ದಯಗುಣದಲಿ ಪರಿಪೂರ್ಣ ಶ್ರೀಗುರು ಮನ್ನಾಥ ಧ್ರುವ ಅಂದಿಗಿಂದಿಗೆ ನೀನೆ ನಿತ್ಯನುಭವದಿಂದ ತಂದಿ ತಾಯಿ ನೀನೆ ಶ್ರೀಹರಿ ಮುಕುಂದ ಬಂಧುಬಳಗ ನೀನೆ ಕುಲಕೋಟಿಗಳಿಂದ ಎಂದೆಂದೆನಗೆ ನೀನೆ ಫಲದೊಲವಿಂದ 1 ಸೃಷ್ಟಿ ಜನ ಪಾಲಕ ನೀನೆ ಸದ್ಗುರು ರನ್ನ ಸೃಷ್ಟಿಯಲಿ ಪೊಗಳುತಲಿ ಶ್ರುತಿಸ್ಮøತಿಗಳು ನಿನ್ನ ಇಷ್ಟ ಕುಲದೈವಗಳೆಂಬುದು ನೀ ಎನ್ನ ದೃಷ್ಟಿಸಿ ಮಾಡುವ ಭಕ್ತಜನರಿಗೆ ಪಾವನ್ನ 2 ಮನೋಹರ ಮಾಡುವ ಮಂಗಳಕರಮೂರ್ತಿ ಘನ ಸುಖದಾಯಕ ನೀನೆ ಜ್ಞಾನದ ನಿಜಸ್ಫೂರ್ತಿ ಭಾನುಕೋಟಿತೇಜ ನೀನೆ ಸಕಲಸಾರ್ಥಿ ಅನುದಿನ ಮಾಡೊ ಮಹಿಪತಿ ಶ್ರೀಪಾದಕೆ ಆರ್ತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯದೇವ ಜಯದೇವ ಜಯ ವಾಸುದೇವ ಭಾಸುವ ಭಾಸ್ಕರಕೋಟಿತೇಜನ ಮನದೈವ ಧ್ರುವ ಪ್ರಾರ್ಥಿಸುವದರ್ತಿ ಆರ್ಥಿಯ ಘನ ಸ್ಫೂರ್ತಿ ಸ್ಪೂರ್ತಿಗೆ ಸುಸ್ಥಾನಾಗಿಹ ನೀ ಘನಗುರು ಮೂರ್ತಿ ಮೂರ್ತಿ ನಿಮ್ಮ ಕೀರ್ತಿ ಬೆಳಗುದು ಭಾವಾರ್ತಿ ಅರ್ತಿ ಬೆಳಗುವ ಕಂಗಳಿಗ್ಯಾಗಿಹ ನೀ ಸಾರ್ಥಿ 1 ಸುಗುಣ ನಿರ್ಗುಣ ನೀನೆ ಪರಿಪೂರ್ಣ ಯೋಗಿಯ ಮಾನಸಹಂಸನಾಗುವೆ ನೀ ಪೂರ್ಣ ಬಗೆ ಬಗೆ ಭಾಸುವ ಭಕ್ತವತ್ಸಲ ಗುಣ ಸುಗಮಾಗೂದಕೆ ನಿಮ್ಮ ದಯ ಆಧಿಷ್ಠಾನ 2 ಮುನಿಜನಕಾಗುವ ಖೂನ ಸ್ವಾನುಭದ ಜ್ಞಾನ ಸನಕ ಸನಂದನ ವಂದಿತ ನೀನೆ ಅನುದಿನ ಘನಸುಖದಾಯಕ ಸದ್ಗುರು ನೀ ನಿಧಾನ ದೀನ ಮಹಿಪತಿ ಸ್ವಾಮಿ ನೀ ಸನಾತನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯದೇವ ಜಯದೇವ ಜಯ ವೆಂಕಟೇಶಾ| ಶ್ರಯ ಸುಖದಾಯಕ ಸ್ವಾಮಿ ಉರಗಾಚಲವಾಸಾ ಪ ಕರುಣಾಕರ ರತ್ನಾಕರ ಕನ್ಯಾ ಮನೋಹಾರಿ| ಸುರವರ್ಧನ ಮುರಮರ್ದನ ಗೋವರ್ಧನಧಾರಿ| ವರಮಂದಿರ ಧೃತಕುಂದರ ಸುಂದರ ಸಹಕಾರಿ| ಶೌರಿ 1 ಜಗಕಾರಣ ಪರಿಪೂರಣ ಸುಂದರಸಾಕಾರಾ| ಅಘಹರಣಾ ಮುನಿ ಸ್ಫರಣಾತ್ರಯ ಭುವನಾಧಾರಾ| ನಗಧರಣಾ ತವಶರಣಾಭರಣಾ ಮಯೂರಾ| ಭೃಗುಚರಣಾಂಕಿತ ಚರಣಾಂಬುಜ ಶೋಭಿತ ಧೀರಾ 2 ಸುಖಕರ್ತಾ ದುಃಖಹರ್ತಾ ಸರಸೀರುಹ ನಯನಾ| ಸಕಲಾತ್ಮ ಪರಮಾತ್ಮಾ ಫಣಿಕುಲವರ ಶಯನಾ| ನಿಖಿಲಾಸುರ ತಮಭಾಸುರ ದುರಿತಾವಳಿ ಶಮನಾ| ಮಕರಾಂಕಿತ ಪಿತಮಹೀಪತಿ ನಂದನಪಾಲನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ಜಯದೇವಿ ಜಯಭಗವದ್ಗೀತೆ | ಶ್ರಯ ಸುಖದಾಯಕಮಾತೇ ಶೃತಿ ಸ್ಮøತಿ ವಿಖ್ಯಾತೇ ಪ ಮೋಹ ಕಡಲೋಳಗರ್ಜುನ ಮುಳುಗುತ ತೇಲುತಲಿ | ಸೋಹ್ಯವ ಕಾಣದೆತನ್ನೊಳು ತಾನೇ ಮರೆದಿರಲೀ| ಬೋಧ ಪ್ರತಾಪದಲೀ| ಮಹಾ ಸುಜ್ಞಾನದ ತೆಪ್ಪದಿ ದಾಟಿಸಿದವನಿಯಲಿ 1 ಅಂದಿಗಿಂದಿಗೆ ಋಷಿ ಮುನಿ ಸಜ್ಜನ ಮೊದಲಾಗಿ | ಕುಂದದಿ ಪಂಡಿತರೆಲ್ಲರು ಮತಿ ಯುಕ್ತಿಯಲೊದಗಿ | ಸುಂದರ ಟೀಕೆಯ ಮಾಡುತ ಪಾಡುತ ಅನುವಾಗಿ | ಚಂದದಿ ನಿಂತರು ಅನುಭವದಲಿ ವಿಸ್ಮಿತರಾಗಿ 2 ಆವನು ಭಾವದಿ ಪೂಜಿಸಿ ಓದಿಸಿ ಕೇಳುವನು| ಸಾವಿರ ಸಾಧನವೇತಕೆ ಜೀವನ್ಮುಕ್ತವನು | ದೇವಮನುಜರಿಗೆ ತಿಳಿಯದು ಪದಪದ ಮಹಿಮೆಯನು | ಆವಗು ಸ್ಮರಿಸುವ ಮಹೀಪತಿ ನಂದನು ನಿಮ್ಮವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೇವಾಧಿದೇವ ನೀನಹುದೊ ಶ್ರೀಹರಿ ಕಾವಕರುಣ ನೀನೆ ಮುರಾರಿ ಧ್ರುವ ಕಮಲಭವಾರ್ಜಿತ ಕಾರುಣ್ಯ ಶೀಲ ವಿಮಲ ವಿರಾಜಿತ ಮದನಗೋಪಾಲ 1 ಕನಕಾಂಬರಧರ ಕಸ್ತೂರಿತಿಲಕ ಸನಕಾದಿವಂದ್ಯ ಶರಣ ರಕ್ಷಕ 2 ಅಗಣಿತ ಮಹಿಮ ಅವರುಜ ನೇತ್ರ ನೀನಹುದೊ ನಿಸ್ಸೀಮ 3 ಮುನಿಜನ ಪಾಲಕ ಮಾಮನೋಹರ ಘನಸುಖದಾಯಕ ಸು ಜನ ಸಹಕಾರ 4 ಭಾನುಕೋಟಿತೇಜ ನೀನೆ ಸುಹೃದಯ ದೀನದಯಾಳು ನೀನಹುದೊ ಮಹಿಪತಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಂದಕಂದ ಬಾಲಮುಕುಂದ ನಂದಕಂದ ಧ್ರುವ ನಂದಕಂದಾ ನಂದ ಘನ ನಿ ದ್ರ್ವಂದ್ವ ನಿರ್ಗುಣ ನಿಜಸ್ವರೂಪ 1 ವಿದುರವಂದ್ಯ ವಿರಾಜಿತರೂಪ ಮದನಮೋಹನ ಮಾಮನೋಹರ 2 ಮಾಧವ ಕರುಣಾಕರ ಗುರು ಶ್ರೀವರ ಪೂರ್ಣ ಸದಾ ಸಹಕಾರಿ 3 ಶರಣರಕ್ಷಕ ಸುಜನರ ಪಾಲಕ ಸರಸಿಜೋದ್ಭವನುತ ಶ್ರೀ ಹರಿ 4 ಶ್ರೇಯ ಸುಖದಾಯಕ ಸದೋದಿತ ಸಾಂದ್ರ ಮಹಿಪತಿ ಸ್ವಾಮಿ ಸದ್ಭನ ಚಿದ್ರೂಪ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಂಬಿದವರ ಕಾವ ದೈವ ಅಂಬುಜಾಕ್ಷನೀತನೆಂದು ಧ್ರುವ ನಂಬಿದ ಪ್ರಲ್ಹಾದಗ ತಾಂ ಸ್ತಂಭದೊಳು ಮೂಡಿ ಬಂದು ಹಂಬಲಿಸಿ ದಲ್ಲ್ಯೊದಗಿ ಇಂಬವಾದನೀತನೆಂದು 1 ನಾಮ ನಂಬಬಾರದೆ ನೀ ಕಾಮಧೇನುವೆಂದು ಪೂರ್ಣ ನೇಮದಿಂದ ಸಲಹುತಿಹ್ಯ ಸ್ವಾಮಿ ಸರ್ವೋತ್ತಮನೆಂದು 2 ದೀನ ಮಹಿಪತಿಸ್ವಾಮಿ ಭಾನುಕೋಟಿತೇಜಪೂರ್ಣ ಮನದಪೇಕ್ಷೆ ಪೂರೈಸುವ ಘನಸುಖದಾಯಕನೆಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಗಮ ಗೋಚರಾನಂತ ಮಹಿಮ ಶ್ರೀದೇವ ಸಗುಣ ನಿರ್ಗುಣನಾಗಿ ತೋರುವ ಸುಗಮಲಿಹ್ಯ ಸುಖದಾಯಕ ಧ್ರುವ ಅಗಣಿತ ಗುಣಗಮ್ಯನುಪಮ ಶ್ರೀನಾಥ ನಿಗಮ ತಂದು ನೀ ಪ್ರಕಟದೋರಿದೆ ನಗವು ಬೆನ್ನಿಲಿ ತಾಳಿದೆ ಮಣಿ ಮಾಧವ ಶ್ರೀ ಕಾಂತ ಜಗವನುಳಹಿದೆ ನೆಗಹಿದಾಡಿಲೆ ಭಗತಗೊಲಿದು ನೀ ಕಾಯಿದೆ 1 ಹರಿ ಸರ್ವೋತ್ತಮ ಪರಮಪುರಷ ಶ್ರೀ ವೇಷ ಧರಿ ಮೂರಡಿ ಮಾಡಿದೆ ನೀ ಪರಶುಧರನಾಗ್ಯಾಡಿದೆ ಪರಿಪರ್ಯಾಡುವಾ ನಂದಸ್ವರೂಪ ಶ್ರೀಧರ ಶರಣ ರಕ್ಷಕನಾಗಿ ನೇಮದಿ ತುರುಗಳನ ನೀ ಕಾಯಿದೆ 2 ಸಾಮಜ ಪ್ರಿಯ ಶ್ರೀನಿಧೆ ಹಯವನು ತೋರುವೆ ಸರಸಿಜೋಧ್ಬವನುತ ಸಿರಿಲೋಲ ಎನ್ನಯ ಅನುದಿನ ಸೂರ್ಯಕೋಟಿ ಪ್ರಕಾಶನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು