ಒಟ್ಟು 14 ಕಡೆಗಳಲ್ಲಿ , 9 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೃಷ್ಟ ಅದೃಷ್ಟದ ಬಲವು ನೊಡಿ ವಿಸ್ತಾರ ಸೃಷ್ಟಿಯಲಿ ಮುಟ್ಟಿ ಮುದ್ರಿಸಿದ ವಾಕ್ಯಂಗಳು ಕೇಳಿ ಆತ್ಮನಿಷ್ಠ ಜನರು 1 ದೃಷ್ಟಿ ಪುರುಷನ ಸೈನ್ಯಗಳು ಕೇಳಿ ಚಿತ್ತದಲಿ ಮಾನವರು ಅಜ್ಞಾನವೆಂಬಾಶ ಗತಿಯು ಮಾಯಾಮೋಹಕವೆಂಬ ಸುತರು 2 ಬಂಟ ಜನರು ಪ್ರಪಂಚ ಸೈನ್ಯಾಧಿಪತಿ ಸುಖ ದು:ಖದಳ ಭಾರಗಳು3 ಚಂಚಲವಂಚಲಶ್ವಗಳು ಅಹಂ ಮಮತಾ ಗಜಗಳು ಅವಸ್ಥೆಗಳು ಕಾಲಾಳುಗಳು ಮನ್ನೆವಾರರು ಕರಣಗಳು4 ಮೆರೆಯುತಿಹರು ಪಂಚೇಂದ್ರಿಯಗಳು ಸೂಸುತಲಿಹ ಬೇಹಿನವರು ಮೊದಲಾದ ದಶವಾಯುಗಳು 5 ಸುತ್ತಲಿಹ ಪರಿವಾರಗಳು ಸಪ್ತವ್ಯಸನ ಭೂಷಣಂಗಳು ಪಂಚಾಗ್ನಿಗಳು ಪಂಜಿನವರು ಅಷ್ಟಮದವು ಕಾವಲಿಗಳು 6 ಮೂರು ಪರಿಯ ತ್ರಿಗುಣಗಳು ಸೈನ್ಯದ ಪಾರುಪತ್ಯದವರು ಜಾಗ್ರಸ್ವಪ್ನ ಸುಷುಪ್ತಿಗಳು ಛತ್ರ ಚಾಮರ ಭೂಷಣಗಳು 7 ಸಪ್ತಧಾತುದ ಸುಖಾಸನವು ಪಂಚಾತ್ಮಗಳು ನಿಶ್ಯಾನಿಗಳು ತಾಮಸವೆಂಬ ಭೇರಿಗಳು ಅಹಂಕಾರವು ಕಹಳೆಗಳು 8 ಪರಿ ಚಂದ ಚಂದದಲಿ ಇಳಿದಿಹ ಸೈನ್ಯ ಭಾರಗಳು 9 ಜನನ ಮರಣದ ಮಂಟಪವು ಕಟ್ಟಿಹರು ವಿಸ್ತಾರದಲಿ ಚಿಂತಿ ಮುಪ್ಪಳಿಯು ಭ್ರಾಂತಿಗಳಲಿ ಸ್ಥಿತಿ ಸ್ಥಳಲಿಹ ದ್ವಾರಗಳು 10 ದುರ್ಮೋಹ ಬಲದಲಿ ತನುವೆಂಬ ದುರ್ಗಬಲದಲಿ ಕದನ ಮಾಡುವರನುದಿನದಲಿ 11 ಇನ್ನು ಅದೃಷ್ಟದ ಬಲವು ಕೇಳಿ ಚೆನ್ನಾಗಿ ಮನದಲಿ ಸಮ್ಯಜ್ಞಾನೆಂಬಾಶಗತಿಯ ಜ್ಞಾನ ವೈರಾಗ್ಯಸುತರು 12 ಬಂಟ ಜನರು ಬೋಧ ಸೈನ್ಯಾಧಿಪತಿಯ ದೃಢ ನಿಶ್ಚಯ ದಳ ಭಾರಗಳು 13 ನಿರ್ಮಳ ನಿಶ್ಚಳಶ್ವಗಳು ವಿವೇಕವೆಂಬ ಗಜಗಳು ಮಗುಟ ವರ್ಧನರು 14 ಶೂರತನದ ಪ್ರರಾಕ್ರಮರು ಸ್ಮರಣೆ ಚಿಂತನೆ ಧ್ಯಾನಗಳು ಸೂಸುತಲಿಹ ಬೇಹಿನವರು ಯೋಚನೆ ಅವಲೋಕನೆಗಳು 15 ಸುತ್ತಲಿಹ ಪರಿವಾರಗಳು ರತಿಪ್ರೇಮ ಸದ್ಭಾವನೆಗಳು ಲಯ ಲಕ್ಷ್ಯಗಳು ಪಂಜಿನವರು ಮೌನ್ಯ ಮೋನವೆ ಕಾವಲಿಗಳು 16 ನಾದ ಬಿಂದು ಕಳೆಯಗಳು ಸೈನ್ಯದ ಪಾರುಪತ್ಯವರು ಅನಿಮಿಷ ಛತ್ರ ಚಾಮರವು ಏಕಾಕಾರವೆ ನಿಶ್ಯಾನಿಗಳು 17 ಅನುಭವ ಸುಖಾಸನಗಳು ತೂರ್ಯಾವಸ್ಥೆಯ ಭೂಷಣಗಳು ಆನಂದಮಯವೆ ಭೇರಿಗಳು ನಿಶ್ಚಿಂತವೆ ಕಹಳೆಗಳು 18 ಸುಜ್ಞಾನದ ಮೊದಲಾದ ಅಂಗಡಿಯು ಇಳಿದಿಹ ಸಾಲವರಿಯಲಿ ಚಂದ ಚಂದ ಶೃಂಗಾರದಲಿ ಇಳಿದಿಹ ಸೈನ್ಯ ಭಾರಗಳು 19 ಸದ್ಗತಿ ಮುಕ್ತಿ ಮಂಟಪವು ಹೊಳೆಯುತಿಹದು ಸ್ಯೆನ್ಯದೊಳಲಿ ಶೋಭಿಸುವದು ಶೃಂಗಾರದಲಿ 20 ನಿರಾಶವೆಂಬ ಪ್ಯಾಟಿಯಲಿ ಇಳಿದಿಹದು ಸಂತೋಷದಲಿ ದೃಷ್ಟಿ ಪುರುಷನ ಅಟ್ಟಲೆಯ ಕೇಳಿ ನಡೆಯಿತು ಮಾರ್ಬಲವು 21 ಧಿಮಿ ಧಿಮಿಗುಡುತ ನಾದ ಮಾಡಿದರಾನಂದಲ ಗ್ಹೇಳೆನಿಸುತ್ತ ಕಹಳೆಗಳು ಭೋರ್ಗರೆಯುತಲಿ ನಡೆದರು 22 ನಡೆವರು ಅತಿಶಯ ಶೀಘ್ರದಲಿ ಬಾಣ ಬಾಣಗಳು ಮಾಡುತಲಿ ದಣಿದಣಿಸುತಲಿ ನಡೆದರು 23 ತುಂಬಿದ ಸೈನ್ಯ ಭಾರಗಳು ಉಬ್ಬು ಕೊಬ್ಬಿ ನಡೆದವು ನಗುತ ಗೆಲವಿಂದಶ್ವಗಳು ಏರಿ ಹಾರಿಸುತ ನಡೆದರು 24 ಮಗುಟ ವರ್ಧನರು ನಡೆದರು ಅತಿ ಹರುಷದಲಿ ಕಾಲಾಳುಗಳು ಮುಂದೆ ಮಾಡಿ ನಡೆಯಿತು ದಳ ಭಾರಗಳು 25 ಶೂರತನದ ಪರಾಕ್ರಮರು ಮುಂದಾಗಿ ಬ್ಯಾಗೆ ನಡೆದರು ಅಬ್ಬರಿಸುತಲಿ ಮಾರ್ಬಲವು ನಡೆಯಿತವರ ಸೈನ್ಯ ಮ್ಯಾಲೆ 26 ವಿವೇಕವೆಂಬ ಗಜಗಳು ವಾಲ್ಯಾಡುತಲಿ ನಡೆದರು ರಗಡಿಸುತ ಡೋಲಿಸುತಲಿ ನಡೆದರು ಪರಚಕ್ರ ಮ್ಯಾಲೆ 27 ನಡೆವ ಮಾರ್ಬಲದ ಧೂಳಿಗಳು ಮುಸುಕಿತು ಸುವಾಸನೆಗಳು ಗರ್ಜಿಸುವ ಧ್ವನಿಗೇಳಿ ಹೆದರಿತು ಶತ್ರು ಮಾರ್ಬಲವು 28 ಕಂಡು ದೃಷ್ಟರ ಸೈನ್ಯದವರು ಸಿದ್ದವಾದರು ಸಮಸ್ತದಲಿ ತಮ್ಮ ತಮ್ಮೊಳು ಹಾಕ್ಯಾಡುತಲಿ ನಡೆದುಬಂದರು ಸನ್ಮುಖಕೆ 29 ಚಿಂತಿಸುತಲಿ ಪರಾಕ್ರಮರು ಬಂದರು ವೀರ ಕಾಳಗಕೆ ಕಾಳಿ ಭೇರಿಗಳು ಬಾರಿಸುತ ಬಂದರು ಮಹಾಜನರು 30 ಕೂಗಿ ಚೀರುತ ಒದರುತಲಿ ಬಂದು ನಿಂದರು ಪರಾಕ್ರಮರು ಅಹಂ ಮಮತಾ ಗಜಗಳು ನಡೆದು ಬಂದವು ಎದುರಾಗ 31 ಕಾಲಾಳು ಸಹ ಕೂಡಿಕೊಂಡು ರಚಿಸಿ ಬಂದರಶ್ವಗಳು ಕೂಡಿತು ಉಭಯ ದಳವು 32 ಸುವಾಸನೆ ಧೂಳಿಯೊಳಗೆ ಅಡಗಿತು ದುರ್ವಾಸನೆಯು ಅಹಂ ಮಮತಾ ಗಜಗಳು ಕಂಡು ಓಡಿದವು ಹಿಂದಾಗಿ33 ಬೆನ್ನಟ್ಟಿ ವಿವೇಕ ಗಜವು ಹೊಡೆದು ಕೆಡವಿದವು ಧರೆಗೆ ಅವಸ್ಥೆಗಳು ಕಾಲಾಳುಗಳು ಜಗಳ ಮಾಡಿದವು ನಿಮಿಷವು 34 ವಿಚಾರ ಕಾಲಾಳು ಮುಂದೆ ಓಡಿದರು ದೆಸೆದೆಸೆಗೆ ಚಂಚಳವೆಂಚಳಶ್ವಗಳು ಏರಿ ಬಂದರು ರಾವುತರು 35 ಯುದ್ದಮಾಡಿದರರಗಳಿಗೆಯು ಶುದ್ಧಿ ಇಲ್ಲದೆ ಓಡಿದರು ನಿರ್ಮಳ ನಿಶ್ಚಳಶ್ವಗಳು ಏರಿ ಬೆನ್ನಟ್ಟಿ ನಡೆದರು 36 ಚಂಚಳ ವೆಂಚಳಶ್ವಗಳ್ಹರಿಗಡೆದರು ಕಾಲು ಬಲ ರಾಹುತರ ಸಹವಾಗಿ ಕಡೆದೊಟ್ಟಿದರು ಶಿರಸವನು 37 ವೀರರು ಕಾಮಕ್ರೋಧಗಳು ಬಂದರು ಅತಿಶಯಉಗ್ರದಲಿ ಶಮೆ ದಮೆ ವೀರಗಳೊಡನೆ ಕಾದಿ ಮಡಿದರು ಆ ಕ್ಷಣದಲಿ 38 ಬಂಟ ಜನರು ಬಂದರು ಸಿಟ್ಟು ಕೋಪದಲಿ ಭಾವ ಭಕ್ತಿಯ ಬಂಟರೊಡನೆ ಕಾದಿ ಕಾಲಾಳು ಮಡಿದರು 39 ಪ್ರಪಂಚ ಸೈನ್ಯಾಧಿಪತಿಯ ಕೈಸೆರೆಯಲಿ ಹಿಡಿದರು ಬೋಧ ಸೈನ್ಯಾಧಿಪತಿಯು ನಾದಘೋಷವು ಮಾಡಿಸಿದನು 40 ಉಲ್ಹಾಸವೆಂಬ ಸರವರಿಯು ಹಚ್ಚಿಸಿದರು ಸೈನ್ಯದೊಳಲ್ಲಿ ದಯ ಕರುಣ ಭಾಂಡಾರಗಳು ಒಡೆದು ಧರ್ಮ ಮಾಡಿದರು 41 ಪಂಚೇಂದ್ರಿಯಗಳ ಪರಾಕ್ರಮರ ಹಿಡಿದು ಕಟ್ಟಿದರು ಪಾಶದಲಿ ಸ್ಮರಣಿ ಚಿಂತನೆ ಪರಾಕ್ರಮರು ಉಬ್ಬಿದರು ಹರುಷದಲಿ 42 ದಶವಾಯುಗಳ ಬೇಹಿನವರ ಹಿಡಿದು ಬಂಧನವ ಮಾಡಿದರು ಅವಲೋಕನೆ ಬೇಹಿನವರ ಸದ್ಬ್ರಹ್ಮದಲಿ ಸುಖಿಸಿದರು 43 ಸಪ್ತವ್ಯಸನ ಪರಿವಾರಗಳು ರತಿಪ್ರೇಮರೊಡನೆ ಕೂಡಿದರು ಪಂಚಾಗ್ನಿಗಳು ಪಂಜಿನವರು ಪಂಚ ಪಾಲದಿ ಅಡಗಿದರು 44 ಲಯ ಲಕ್ಷಗಳು ಪಂಜಿನವರು ಸಂಜೀವದಂತೆ ಹೊಳೆವರು ಅಷ್ಟಮದವು ಕಾವಲಿಗಳು ಅಡಗಿದವು ಸ್ಥಳ ಸ್ಥಳಲಿ 45 ಮೌನ್ಯ ಮೋನವೆ ಕಾವಲೆಗಳು ತಾವೆ ತಾವಾಗಿ ದೋರಿದರು ತ್ರಿಗುಣರ ಪಾರುಪತ್ಯದವರು ಒಂದು ಸ್ಥಳದಲಿರಿಸಿದರು 46 ನಾದ ಬಿಂದು ಕಳೆಯಗಳು ಮುಟ್ಟಿ ಪಾರುಪತ್ಯ ಮಾಡುವರು ಶತ್ರುರಾಘನ ಭೂಷಣಗಳು ಸೆಳೆದುಕೊಂಡರು ಗಳಿಗೆಯೊಳು 47 ಅವಿದ್ಯ ಮೊದಲಾದಾಗದರಿಂದ ಚೋಳಿಯು ಮಾಡಿದರು ಜನನ ಮರಣದ ಮಂಪಟವು ಸುಟ್ಟು ಸಂಹಾರ ಮಾಡಿದರು 48 ಚಿಂತೆ ಭ್ರಾಂತಿಯ ದ್ವಾರಗಳು ಕಿತ್ತಿ ಬೀಸಾಟಿದರು ಆಶಾಪ್ಯಾಟಿಗೆ ಧಾಳಿನಿಕ್ಕಿ ಲೂಟಿಸಿದರು ನಿಮಿಷದಲಿ 49 ತನು ದುರ್ಗ ವಶಮಾಡಿಕೊಂಡು ಇಳಿಯಿತು ಸೈನ್ಯ ಸುಖದಲಿ ಸದ್ಗತಿ ಮುಕ್ತಿ ಮಂಟಪವು ಕೊಟ್ಟರು ಅಚಲದಲಿ 50 ಯೋಗ ಭೋಗದ ದ್ವಾರದಿಂದ ನಡೆದರು ಮಹಾ ಭಕ್ತಜನರು ಮನ್ನೆವಾರರು ಕರಣಗಳು ಅಭಯವ ಕೊಂಡು ನಡೆದರು 51 ಅಜ್ಞಾನವೆಂಬಾಶಾಗತಿಯು ಮುಕ್ತವಾದಳು ಸುಜ್ಞಾನz ಮಾಯವಾದರು ವೈರಾಗ್ಯದಲಿ52 ದೃಷ್ಟ ಪುರುಷನ ತಂದಿನ್ನು ಇಟ್ಟುಕೊಂಡರು ತಮ್ಮೊಳಲಿ ತನು ದುರ್ಗ ವಶಮಾಡಿಕೊಂಡು ಮುಂದೆನಡೆದರಾನಂದದಲಿ 53 ಅಧಾರ ಪುರ ಬೆನ್ನಮಾಡಿ ನಡೆದರು ಬ್ರಹ್ಮಾಂಡಪುರಕೆ ವಿಘ್ನಹರನ ಬಲಗೊಂಡು ಮ್ಯಾಲೆ ಮಣಿಪುರಕೆ ನಡೆದರು 54 ಅನಾಹತಪುರ ದಾಟಿ ಮುಂದೆ ನಡೆದರು ವಿಶುದ್ಧ ಪುರಕೆ ಸ್ಥಳ ಸ್ಥಳ ಹರುಷ ನೋಡುತಲಿ ನಡೆದರಗ್ನಿ ಚಕ್ರಪುರಕೆ 55 ಮ್ಯಾಲಿಹ ಬ್ರಹ್ಮಾಂಡ ಪುರವು ಹೊಳೆಯುತಿಹದು ಪರಿಪರಿಲಿ ಸಹಸ್ರದಳ ಕಮಲಗಲು ಥಳಥಳಿಸುವದದರೊಳು 56 ಘನ ಬೆಳಗಿನ ಪ್ರಭೆಯುಗಳು ಹೊಳಯುತಿಹುದು ಕಿರಣಗಳು ಹರಿ ಬ್ರಹ್ಮಾದಿಗಳು ವಂದಿಸುವ ಸ್ಥಳ ನೋಡಿ ಗುರು ಕರುಣದಲಿ 57 ಪಿಂಡ ಬ್ರಹ್ಮಾಂಡೈಕ್ಯಪುರದಿ ಒಳಗಿಹ ಹಂಸಾತ್ಮಗತಿಯು ಸಹಸ್ರ ರವಿಕೋಟಿ ತೇಜ ಭಾಸುವಾ ವಸ್ತುಗತಿಯು 58 ವಿಶ್ವ ವ್ಯಾಪಕನೆಂಬ ಸ್ಥಿತಿಯು ಮಹಿಮಾನಂದ ಸ್ಫೂರ್ತಿಯು 59 ದೃಷ್ಟಾದೃಷ್ಟಗತಿಯು ದೋರಿದ ಗುರು ಸದೃಷ್ಟದಲಿ ಗುರು ಕರುಣದ ಕಟಾಕ್ಷದಲಿ ಬೆರೆಯಿತು ಮನ ಹರುಷದಲಿ 60 ಕಂಡು ಮಹಿಪತಿಯ ಜೀವನವು ಧನ್ಯವಾಯಿತು ದೃಷ್ಟದಲಿ ಪರಮಾನಂದ ಸುಪಥದಲಿ ಜೀವನ ಮುಕ್ತ್ಯದರಲ್ಲಿ 61
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಷ್ಟು ಚಲುವರೋ ರಾಮಕೃಷ್ಣರೆಷ್ಟು ಚಲುವರೊಎಷ್ಟು ಚಲುವರಿವರ ಶಿರದಿ ಬಿಟ್ಟ ಜುಲುಪಿ ಕೇಶ ಚಂದ ಪುಟ್ಟ ಬಾಲಕಾರು ಕೂಡಿ ಗೋಷ್ಟದೊಳಗೆ ಚಲಿಸಿದಾರೊ ಪ ನಿನಗು ಇದ್ದವೋ ಈ ಜುಲುಪಿ ನಿನ್ನನುಜಗಿದ್ದವೊಮುನಿಯ ಕೂಡಿ ಪೋಗುವಾಗ ವನದಿ ನಾಲ್ಕು ಹತ್ತು ವರುಷಜನತೆಗಾದ ನಯನ ಸುಖದ ಘನತೆ ನೀನು ತಿಳಿದು ಪೇಳೋ 1 ಬಹಳ ಶೂರನೋ ತಥೋಪಿ ಧೈರ್ಯಶೀಲನಾಮನೋಶೂಲ ಪಾಣಿ ಧನದ ಭೂಮಿ ಪಾಲು ಸಾಧಿಸಿ ಮುರಿದು ನಿಂತಬಾಲಕೃಷ್ಣ ಶತ್ರುಗಣದಿ ಬಾಲೆಯೆತ್ತಿಕೊಂಡು ಪೋದ 2 ಕಾಲ ಎತ್ತಜೀವ ಎತ್ತಕಾಯಪುತ್ರ ವೃತ್ತಿ ಮಾತೆ ಗುರು ಸುಪಾತ್ರರನ್ನು ಸುಖಿಸಿದಾರು 3 ಪಿತೃನಾಗ್ಞದಿ ನೋಡುತಲೆ ವನದೊಳ್ಹೆತ್ತೆ ಮಾಡಿದೆಮತ್ತ ಆನೆಯಮಲ್ಲ ಕಂಸನೊತ್ತಿ ತುಳಿದು ಮಧುರೆಯಲ್ಲಿಹತ್ತು ಒಂದು ವಯದ ಬಾಲ ಮುತ್ಯಾ ಮಾತೆಯರನು ಕಾಯ್ದ 4 ಕೂಸುಪಿಡಿಯಿತು ಪೂಥಣಿಯ ಮೊಲೆಯ ತಾಸು ತಿಂದಿತುಈ ಶರೀರದೊಳಗೆ ತಾಟಕಾಸುರೀಯ ಕೊಂದ ಇಂದಿರೇಶಅದ್ಭುತಾವದಿದರೊಳಾರು ಪೇಳೊ ದಾಶರಥಿಯೆ 5
--------------
ಇಂದಿರೇಶರು
ಗಿರಿವರ ತನಯೆ ಮುರರಿಪು ಸಿರಿಯೆ ಪ ಶರಣು ಬಂದವರನ್ನು ಮರೆವುದು ಥರವೆ ಅ.ಪ. ತುಟಿಯಲಿ ಸೌಭಾಗ್ಯ ಹಣದಿ ಗೆಲಿಯೆ ಸದಾಪಠಿಸಿ ಭುಂಜಿಸಿದೆಯೇ 1 ಯಕ್ಷ ಪೋಗಲು ಅವಸಾಕ್ಷಿ ಬರಲು ಸಹಈಕ್ಷಿಸಿ ಹರಿಯ ಸ್ತುತಿಸಿ ಶಿಕ್ಷೆ ನೀಡಿದೆಯೇ 2 ಆ ಸುಮುಖಗೆ ಹರ ಭೂಷಿತ ಶ್ರುತಿ ಸ್ಮøತಿರಾಶಿ ಗ್ರಂಥವ ಪೇಳಿ ನೀ ಸುಖಿಸಿದೆಯೇ ಇಂದಿರೇಶನಸೊಸೆಯೇ 3
--------------
ಇಂದಿರೇಶರು
ಗುಲ್ಲು ಹುಟ್ಟಿತು ಗ್ರಾಮದೊಳಗೆ ಗಲಿಬಿಲಿಯಾಯಿತು ನೀವು ಕೇಳಿಖುಲ್ಲರು ಕುಲಸಹ ಕೂಡೆ ಮಡಿದರು ನೀವು ಕೇಳಿ ಪ ಮರ ಮುರಿದೊರಗಿತು ನೆರಳೆ ನೆಲೆಯಾಯಿತು ನೀವು ಕೇಳಿಕುರಿತಳೇ ಸತ್ತವು ನರಿ ಮಾಳಿಗೆ ಏರಿತು ನೀವು ಕೇಳಿ 1 ಅತ್ತೆಯು ಅಳಿದಳು ಸೊಸೆಯು ಸುಖಿಸಿದಳು ನೀವು ಕೇಳಿಮುತ್ತೈದೆಯಾದಳು ರಂಡೆ ತಾನೀಗ ನೀವು ಕೇಳಿ2 ಕೊಡವೊಡೆಯಿತು ಕಳ್ಳರ ತಲೆ ಹೋದವು ನೀವು ಕೇಳಿನಡೆದುಹೋದರು ಬಯಲೂರಿಗೆ ಗೂಳೆಯ ನೀವು ಕೇಳಿ 3 ಮಂಡೆಗೆ ಕೈ ಬಂದಿತು ಮುರುಕು ಆಯಿತು ಹುಟ್ಟು ನೀವು ಕೇಳಿರುಂಡವಿಲ್ಲದೆ ತಲೆ ಬಂದು ಹತ್ತಿತು ನೀವು ಕೇಳಿ 4 ಗುಡ್ಡದ ಸಂದಿಯ ನೀರನೆ ಕುಡಿದು ನೀವು ಕೇಳಿದೊಡ್ಡ ಚಿದಾನಂದ ಗುರುವ ಸೇರಿದರು ನೀವು ಕೇಳಿ 5
--------------
ಚಿದಾನಂದ ಅವಧೂತರು
ತ್ರಾಣಿ ಶ್ರೀ ಕೃಷ್ಣವೇಣಿ ಪ್ರಾಣಪತಿ ಪದಕಮಲ ಕಾಣಿಸು ಹೃದಯದಿ ತ್ರಾಣಿ ಶ್ರೀ ಕೃಷ್ಣ ವೇಣಿ ಪ ಯಮಧರ್ಮತನಯೆ ಶ್ರೀ ಕೃಷ್ಣ ಸಂಗದಿ ಜನಿಸಿ ಕಮಲ ಸಂಭವನ ಲೋಕದಲಿ ಮೆರೆದೆ ಸುಮನಸರ ನುಡಿಗೇಳಿ ಲೋಕಗಳ ದುರಿತೋಪ ಶಮನ ಗೊಳಿಸಲು ಬಂದೆ ತುಮಲ ಹರುಷದಲಿ 1 ಭೂತನಾಥನ ಜಟಾಜೂಟದಿಂದುದ್ಭವಿಸಿ ಶ್ವೇತಪಿಂಗಳ ಶೈಲಶಿಖರಕಿಳಿದೇ ಭೂತಳಕೆ ಭೂಷಣಳೆನಿಸಿ ಪೂರ್ವವನಧಿ ನಿ ಕೇತನವನೈದಿ ಸುಖಿಸಿದಿ ನಿನ್ನ ಪತಿಯೊಡನೇ 2 ಪ್ರಾಣಿಗಳು ನಿನ್ನ ಜಲಪಾನವನು ಗೈಯೆ ನಿ ತ್ರಾಣ ಸಂಹಾರ ವ್ಯಾಧಿಗೆ ಭೇಷಜಾ ಪ್ರಾಣ ಪ್ರಯಾಣ ಪಾಥೇಯವೆಂದರಿಯೆ ನಿ ರ್ವಾಣಪದವಿತ್ತು ಕಲ್ಯಾಣವಂತರ ಮಾಳ್ಪೆ 3 ಜನಪದಗಳಾಗಿ ಕಾನನವಾಗಿ ಮನ್ವಾದಿ ದಿನಗಳಲ್ಲಾಗಿ ಮತ್ತೇನಾಗಲೀ ಮನುಜ ಮಜನಗೈಯೆ ವಾಜಪೇಯಾದಿ ಮಖ ವನುಸರಿಸಿದಕೆ ಫಲವೇನು ತತ್ಪಲವೀವೆ 4 ಅರವತ್ತು ಸಹಸ್ರ ವರುಷಂಗಳಲ್ಲಿ ನಿ ರ್ಜರ ತರಂಗಿಣಿಯ ಮಜ್ಜನದ ಫಲವು ಗುರುವು ಕನ್ಯಸ್ಥನಾಗಿರಲು ಒಂದಿನ ಮಿಂದ ನರರಿಗಾ ಪುಣ್ಯಸಮನೆನಿಸಿ ತತ್ಫಲವೀವೇ 5 ಮನನಶೀಲ ಸುಯೋಗಿಗಳಿಗಾವ ಗತಿಯು ಇಹ ವನುದಿನದಿ ನಿನ್ನ ತೀರದಲಿ ಇಪ್ಪಾ ಮನುಜೋತ್ತಮರಿಗೆ ಆ ಗತಿಯಿತ್ತು ಪಾಲಿಸುವೆ ಅನುಪಮ ಸುಕಾರುಣ್ಯಕೆಣೆಗಾಣಿ ಜಗದೊಳಗೆ 6 ತಾಯೆ ಎನ್ನನುದಿನದಿ ಹೇಯ ಸಂಸಾರದೊಳ ಗಾಯಾಸ ಗೊಳಿಸದಲೆ ಕಾಯಬೇಕೊ ವಾಯುಪಿತ ಶ್ರೀ ಜಗನ್ನಾಥ ವಿಠ್ಠಲ ಹೃ ತ್ತೋಯಜದೊಳಗೆ ಕಾಂಬುಪಾಯ ಮಾರ್ಗವ ತೋರೆ 7
--------------
ಜಗನ್ನಾಥದಾಸರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ಧ್ಯಾನವನು ಮಾಡಿ ತ್ರಿವೇಣಿ ಕ್ಷೇತ್ರವ ಬಿಡದೆ | ಙÁ್ಞನಭಕ್ತಿ ವೈರಾಗ್ಯ ನಾನಾ ಸತ್ಕರ್ಮ ನಿ | ಸಿರಿ | ಪ್ರಾಣೇಶ ಕುಣಿಯುವನಯ್ಯಾ ಅಯ್ಯಯ್ಯಾ ಪ ಹರಿವೀರ ದ್ರುಪದನುದ್ಧರಿಸಿವಾಗಲು ತನ್ನ | ಶರೀರದಿಂದಲಿ ಅಷ್ಟಕೇತ್ರಗಳ ಪುಟ್ಟಿಸಿ | ವರದೇಶ ವೈಕುಂಠದಲ್ಲಿಟ್ಟನು ಸಪ್ತ | ಪಿರಿಸಹಿತ ತೀರ್ಥರಾಜಾ || ಮೆರೆವದಿದೆ ಪುಂ ಕ್ಷೇತ್ರ ಉಳಿದವೇಳು ಸ್ತ್ರೀ | ಇರುತಿಪ್ಪವಲ್ಲಿ ಮಿಗಿಲಿದಾದಕೆ ಅತಿಶಯವೊ | ಧರಣಿಯೊಳಗಿದಿ ಕಾಲಾಂತರಕೆ ಹರಿತಂದ ವಟ | ತರು ಸಹವಾಗಿ ಅಯ್ಯಾ ಅಯ್ಯಾ ಅಯ್ಯಾ 1 ತರಣಿಸುತೆ ಮಾನಸೋತ್ತರ ಶೈಲದಲಿ ಕುಳಿತು | ವರರಾಜ ತೀರ್ಥ ಮಾಧವನ ಸಾರುವೆನೆಂದು | ಭರದಿಂದ ತಪವು ಮಾಡೆ ಸರಸಿಜೋದ್ಭವನೊಲಿದು | ವರವಿತ್ತ ಮುಂದೆ ನೀನು ಧರೆಯೊಳು ಕಾಳಿಂ || ದ ರಾಯಗೆ ಕುವರಿ ಎನಿಸಿ ಮಹಾಸರತಿಯಾಗಿ ಪೋಗಿ | ಸಿರಿ ಮಾಧವನ ಚರಣ | ನೆರೆ ಮೆರೆದಳೈಯ್ಯಾ ಅಯ್ಯಾ ಅಯ್ಯಾ ಅಯ್ಯಾ 2 ತುರುಗಮ ನೆವದಿಂದ ಅರವತ್ತು ಸಾವಿರ ಸ | ಗರನ ಕುಲದವರು ಕಪಿಲಾಖ್ಯಾ ಹರಿ ಮುನಿಯಿಂದ | ಉರಿದು ಪೋಗೆನಲಾಗಿ ಭಗೀರಥ ಭೂಪತಿ ಉಗ್ರ | ಧುರಧಿ ತಪವನ್ನೆ ಮಾಡೇ | ಹರಿ ನಿರೂಪವ ತಾಳಿ ಗಿರಿಗಹ್ವರವನೊಡದು | ಸಿರಿ | ಚರಣದೆಡೆಯಲ್ಲಿ ನಿಂದು ಯಮುನೆ ವಡಗೊಡಿ ಬಾ | ಮರವಾದವಳಂದು ಅಯ್ಯ ಅಯ್ಯಾ ಅಯ್ಯಾ3 ಸರಸ್ವತಿಯ ಬೆರೆದು ತ್ರಿವೇಣಿ ಸಂಗಮವೆಂದು | ಕರಿಸಿಕೊಂಡಿತು ವಿಕರ ಸೋಮೇಶ್ವರನ ತನಕ | ಪರಮೇಷ್ಠಿಯಿಲ್ಲಿಗೈತಂದು ಬೊಮ್ಮಾಂಡವನು | ಸರಿ ಮಾಡಿ ತೊಲಗಲಾಗೀ || ಸುರರು ಶಿರದೂಗುತಿರೆ | ವರರಾಜತೀರ್ಥ ಮಹಾಭಾರವಾಗಲು ಇದಕೆ | ಸರಿ ಮಿಗಿಲು ಇಲ್ಲೆನುತ ಪೊಗಳಿ ಕರದರು ಮಹ | ವರದ ಪ್ರಯಾಗವೆಂದಯ್ಯಾ ಅಯ್ಯಾ ಅಯ್ಯಾ 4 ಪುರವೈರಿ ನಟಣೆ ಪೂ ತುಲಸಿ ಸುರಪತಿ ವೈಶ್ವಾ | ನರನು ತಿಲ ಹೋಮ ಯಮರಾಯಕಿಂಚಿತು ದಾನ | ನಿಋರುತಿತ ಪೈತೃಕಕರ್ಮ ವರುಣ ಜಲದಾನಸ್ತುತಿ | ಮರುತ ಭೂತನು ಕುಬೇರ || ಅರಗಳಿಗೆ ವಸತಿ ಈ ವಟನಿಕಟ್ಟಿಯಲಿಯಿದ್ದು | ಪರಿಪರಿಯಿಂದಲಿ ಒಲಿಸಿ ಮಾಧವನಿಂದ | ಪುರಷಾರ್ಥ ಪಡೆದು ಸುಖಿಸಿದರು ಸಮಸ್ತ ಬಗೆ | ಅರಿತು ಕೊಂಡಾಡಿ ಜನರೈಯ್ಯ ಅಯ್ಯಾ ಅಯ್ಯಾ5 ಎರಡೊಂದು ಮೂರು ಕುಲದ ಮಧ್ಯ ನಿಂದು | ಕರ್ತಾರಿಯೊಳಗೆ ಮಿಂದು ಸತ್ಕರ್ಮವನೆಸಗಿ ಭೂ | ಸುರರ ಮೆಚ್ಚಿಸಿ ಮನದಿ ಪಾಪಗಳ ಉಚ್ಚರಿಸಿ | ಕರಣ ನಿರ್ಮಲಿನರಾಗಿ | ವಿಪ್ರ ಚಂಡಾಲ || ಪರಿಯಂತ ವಪನವೆ ಮುಖ್ಯವೆಂದು ತಿಳಿದು | ಚರಿಸಿದರೆ ಅನಂತ ಜನ್ಮಕ್ಕೆ ಮಹಾಸೌಖ್ಯ | ಬರಿದೆ ಆಗದು ಕಾಣಿರೈಯ್ಯ ಅಯ್ಯ ಅಯ್ಯಾ6 ಧರೆಯ ಮೇಲೆ ಬಿದ್ದ ಶಿಶುಗಳ ತಂದು ಮುಂಡಣವ | ಉರುತರ ಬುದ್ದಿಯಿಂದ ಮಾಡಿಸಲಿ ಬೇಕು ವಿ | ಸ್ತರಿಸುವೆನಯ್ಯಾ ಯೌವನ ವಾರ್ಧಿಕರಿಗೆ ನಿಜ | ವರನಾರಿಯರಿಗೆ ವೇಣಿ ಸರಿ ಎನ್ನಿ ಸಾತ್ವೀಕ || ಪುರಾಣದಲಿ ಪೇಳಿದ ಎರಡು ಭುಜದಲಿ ತಪ್ತ ಚಕ್ರ | ವಿರಹಿತರಾಗಿ ಬರಲು ಷಣ್ಮುತ ಜನಕ ಗತಿಯಿಲ್ಲ ಮತಿಯಿಲ್ಲ | ಸ್ಥಿರವಾಕ್ಯ ಲಾಲಿಪುದು ಅಯ್ಯಾ ಅಯ್ಯಾ ಅಯ್ಯಾ 7 ಎರಡೈದು ತುರಗ ಕೃತು ಮೊದಲಾದ ತೀರ್ಥಗಳು | ಪರಿಪರಿ ದೇವ ಮುನಿಗಳು ನಾಮದಲಿ ಉಂಟು | ಪರಮಭಕುತಿಯಿಂದ ಮಜ್ಜನಾದಿಯ ಮಾಡೆ | ಪರಲೋಕ ಕರತಳದೊಳು || ಇರುತಿಪ್ಪದು ನಿತ್ಯಾ ಪ್ರಯಾಗರಾಜನ | ಸ್ಮರಣೆ ಮಾಡಿದ ಮನುಜನು ಆವಾವಲ್ಲ್ಯಾದರು ಇರಲು | ಮಾಧವ ವೊಳಗೆ ಮೊಳೆವ | ದರುಶನವ ಕೊಡುತಲಯ್ಯ ಅಯ್ಯಾ ಅಯ್ಯಾ 8 ಅರುಣೋದಯಲೆದ್ದು ಶುದ್ಧಾತ್ಮರಾಗಿ | ಪರಿಪರನೆಂಬೊ ಙÁ್ಞನದಲಿ ಹಾಡಿಪಾಡಿದವರ | ದುರಿತ ರಾಸಿಗಳ ದಹಿಸಿ ನಿಂ | ದಿರದೆ ಸಂತರ ಕೊಡಿಸಿ || ಮೊರೆವುತಿಪ್ಪುದು ಗಡಾ ಸಿದ್ದಾರ್ಥ ಕ್ಷೇತ್ರವಿದು | ನೆರೆನಂಬಿ ಮಾನವನು ಮಾನಸದಲಿ ಭಜಿಸಿ | ಸಿರಿ ವಿಜಯವಿಠ್ಠಲ ಕರುಣವುಳ್ಳವನಿಗೆ | ದೊರಕುವದು ದೊರಕುವದಯ್ಯಾ ಅಯ್ಯಾ ಅಯ್ಯಾ 9
--------------
ವಿಜಯದಾಸ
ಶರಧಿ ಸುಖಾತ್ಮಜೆ ಪ ಶರಣು ತವ ಚರಣಾರವಿಂದಕೆ ಶರಣು ಸುರನುತ ಜಂಘಕೇಶರಣು ಕರಿಕರಭೋರು ಯುಗಳಕೆ ಶರಣು ಸುಟೊಂಕಕೆ1 ಕರ ಕಣ್ಣು ಮೂಗು ಭ್ರೂಲತೆ ಕರಣಾಭರಣಕೆ 2 ಶರಣು ಸಾಲಕ ಬಿಂಬ ಫಾಲಕೆ ಶರಣು ಕುಸುಮಿತ ವೇಣಿಗೆಶರಣು ಮಾಧವನಂಕ ಬಿಂಬದಿ ಮೆರೆವ ಸುಖ ಮುತ್ತೈದಿಗೆ 3 ಕಾಲ ಸ್ವಭರ್ತೃಸುಮಜಿತೆ ಭಕ್ತಪೋಷಣೆಕೃತ್ಯ ಕರುಣಾ ಸಾರಸಾಂಡ ಸುಪಾಸ್ತ ಸಂಸಿತಳೆ ನೀ4 ಸೊಲ್ಲು ಪೇಳುವೆ ಸ್ನೇಹದಿಂದಲಿಪುಲ್ಲನಾಭನ ಪರಿಚಿಸೀ ಈಗವನಲ್ಲಿ ನೀ ಪೇಳೆ 5 ದೇವಶರ್ಮನು ನಿನ್ನ ಚರಣಾಧ್ಯಾನದಲಿ ಸನ್ನುತಿಸಿ ಕರುಣತೋಯಜಾಕ್ಷನ ಕಂಡು ಸುಖಿಸಿದುಪಾಯವ ಬಲ್ಲವನು 6 ಸುಂದರಾಂಗಿಯೆ ಸಾರಸಾಕ್ಷಿಯೆ ಮಂದಹಾಸಿನಿ ಮಾರಮೋಹಿನಿಇಂದಿರೇಶನ ಮಾನಿನಿಯೆ ತವಕದಿಂದ ನಿಂತಿಹೆನು 7
--------------
ಇಂದಿರೇಶರು
ಸಮೀರನ ಮಹಿಮೆ ಪೇಳುವೆವಾಸುದೇವ ವಿಧೀರ ಮುಖಸುರರಾಶಿತಸ್ತ್ರೀ ಮುನಿಯತೀಶ ಸು-ದಾಸರಭಿ ನಮಿಪೆ ಪ ವಾರಿಧಿಯನು ದಾಟುಲೋಸುಗಶ್ರೀ ರಮೇಶನ ನಮಿಸಿ ಗಿರಿಯನುಚಾರು ಚರಣದಿ ಮೆಚ್ಚಿ ಮೇಲಕೆ ಹಾರಿದನು ಹನುಮಾ 1 ಹರಿಯ ಬಲವನು ಸರಿಸಿ ಪೋದುವುತರುಗಳಬ್ಧಿಯು ಯಾದಸಂಗಳುಶರಧಿ ತಳಗತ ಕಪಿಯಗೋಸುಗಗಿರಿಯು ಎದ್ದಿಹನು 2 ಧರಣಿಧರ ಪಕ ನಾಶ ಕಾಲದಿಮರುತ ರಕ್ಷಿತ ಪಕ್ಷ ಹೈಮನುಶರಧಿ ಭೇದಿಸಿ ಹನುಮ ವಿಹೃತಿಗೆತ್ವರದಿ ಬಂದಿಹನು 3 ಪರಮ ಪೌರುಷ ಬ ಲನು ಕಪಿವರಚರಿಸದಲೆ ವಿಶ್ರಮವನದರೊಳುಹರುಷದಿಂದಪ್ಯವನ ಕಂಡನುಉರಗ ಮಾತೆಯನು 4 ಸುರಸೆಯೆಂಬುವ ನಾಗಮಾತೆಗೆವರವ ನೀಡುತ ಕಪಿಯ ಬಲವನುಅರಿಯಲೋಸುಗ ಕಳುಹಿಸೀದರುಸುರರು ಶರಧಿಯಲಿ 5 ಯಾವ ವಸ್ತುವ ತಿನ್ನೋ ಇಚ್ಛೆಯು ೀವಿ ನಿನಗಾಗುವದೊ ಅದು ತವಬಾಯಿಗನ್ನಾಗಿರಲಿ ಎಂದರುದೇವತೋತ್ತುಮರು 6 ಸುರರ ವರವನು ಕಾಯೊಗೋಸುಗಸುರಸೆ ಮುಖದೊಳು ಹೊಕ್ಕು ಹೊರಡುತಪರಮಮಣು ರೂಪದಲಿ ದಿವಿಜರಹರುಷ ಬಡಿಸಿದನು 7 ಅಸುವರಾತ್ಮಜನುರು ಪರಾಕ್ರಮಹೃಷಿತರಾಗುತ ನೋಡಿ ದಿವಿಜರುಕುಸುಮವೃಷ್ಟಿಯ ಮಾಡುತವನಲಿಯಶಸು ಪಾಡಿದರು 8 ಛಾಯಾ ಪ್ರಾಣಿಗಳನ್ನು ಹಿಡಿಯುವಮಾಯಾ ಸಿಂಹಕೆ ನಾಮ ಕಸುರಿಯವಾಯುಸುತ ನೋಡಿದನು ಎದುರೆ ವಿಹಾಯ ಮಾರ್ಗದಲಿ 9 ವಿಧಿಯು ಲಂಕೆಯ ಕಾಯಲೋಸುಗಸುತಿಗ್ವರಗಳನಿತ್ತು ಕಾದಿಹಾಮದದಿ ಅಸುರಿಯು ತನ್ನ ಛಾಯವವದಗಿ ಪಿಡಿದಿಹಳು 10 ಆಗ ಆಕೆಯ ಪೊಕ್ಕು ಪೊಟ್ಟೆಯಯೋಗದಿಂದಲಿ ಪಾವಮಾನಿಯುಬೇಗ ಬಂದನು ಹೊರಗೆ ತತ್ತನುಭಾಗ ಮಾಡುತಲೆ 11 ಆತ್ಮಬಲವಮಿತೆಂದು ತೋರಿವಿಧಾತೃ ವರವುಳ್ಳವಳ ಕೊಲ್ಲುತವಾತನಂತೆ ತ್ರಿಕೂಟ ಪರ್ವತಕೀತ ಹಾರಿದನು 12 ಬೆಕ್ಕಿನಂದದಿ ಹನುಮ ತನ್ನಯಚಿಕ್ಕ ರೂಪವ ಮಾಡಿ ಲಂಕೆಯಪೊಕ್ಕು ನಿಶಿಯಲಿ ಮಧ್ಯಮಾರ್ಗದಿರಕ್ಕಸಿಯ ಕಂಡಾ 13 ಬಟ್ಟಿಯಲಿ ಬಂದಡ್ಡಗಟ್ಟುವದುಷ್ಟ ರಾಕ್ಷಸೀಯನ್ನು ಗೆಲ್ಲುತಮುಷ್ಟಿಯಿಂದಲಿ ಹೊಡೆದು ಲಂಕಾಪಟ್ಟಣವ ಪೊಕ್ಕಾ 14 ಪುರದ ಹೊರಗೊಳಗ್ಹೊಕ್ಕು ರಾಮನತರುಳೆ ಕಾಣದೆ ಹನುಮ ಶಿಂಶುಪತರುನ ಮೂಲದಿ ಕಂಡ ಸೀತೆಯಉರುತರಾಕೃತಿಯಾ 15 ನರಜನಂಗಳ ಮೋಹ ಮಾಡುವಪರಮ ಪುರುಷನ ಚೇಷ್ಟೆಗಳನನುಸರಿಸಿ ನಡೆಯುವ ದೇವಿ ಚರಿಯನುಸರಿಸಿ ಚೇಷ್ಟಿಸಿದಾ 16 ರಾಮನಿಂದಲಿ ಅಂಗುಲಿಯನುಪ್ರೇಮದಿಂದಲಿ ಕೇಸರಿಯ ಸುತಾಭೂಮಿ ಜಾತೆಗೆ ಕೊಟ್ಟು ಸುಖಿಸಿದಾನಾಮ ಹದ್ದನದಿ 17 ರುಚಿ ನೀಡಿದವು ರಾವಣನ್ಹರಣ ಕಾಲದಲಿ 18 ಧರಣಿದೇವಿಯ ಸುತೆಯ ತನ್ನಯಪರಮ ಚೂಡಾಮಣಿಯನಿತ್ತಳುಗುರುತು ತೋರಿಸು ರಾಮದೇವಗೆಮರುತಾ ಸುತನೆಂದು 19 ಸೀತೆ ಹನುಮರದೀ ವಿಡಂಬನಯಾತು ಧಾನರಿಗಲ್ಲಾ ನಾಕಗಭೂತ ವಿಡಂಬನ ಧೈತ್ಯವಂಚನಹೇತು ಆಗುವದು 20 ಇಂಥ ಕಾರ್ಯವ ಮಾಡಿ ತನ್ನಯಾನಂಥ ಪೌರುಷ ಪ್ರಕಟ ಮಾಡುವದಿಂತು ಮನವನು ಮಾಡಿದನು ಮತಿವಂತ ವಾನರನು 21 ಚಾರು ಶಿಂಶುಪ ಬಿಟ್ಟು ರಾಕ್ಷಸವಾರ ವಳಿಸುವ ಮನದಿ ಹನುಮನುಭೂರಿವನವನು ಮುರಿದು ಲಂಕೆಯತೋರಣೇರಿದನು 22 ಭೃತ್ಯ ಜನರಿಗೆಕಟ್ಟಿ ಹಾಕಿರಿ ಕಪಿಯನೆಂದನುರುಷ್ಟನಾಗುತಲೆ 23 ಹರನ ವರದಲಿ ಮರಣ ವರ್ಜಿತಸರವ ಭೃತ್ಯರು ರಾಕ್ಷಸೇಶನಮರುತ ಸೂನುನ ಮೇಲೆ ಬಂದರುಪರಮ ವೇಗದಲಿ 24 ಹತ್ತು ಒಂದು ಕೋಟಿ ಯೂಥವತತ್ಸಮಾನ ಪುರಃ ಸರಾನ್ವಿತಎತ್ತಿ ಆಯುಧ ಸೈನ್ಯ ಹನುಮನಸುತ್ತಿಕೊಂಡಿಹುದು 25 ಹಿಡಿದು ಕರದಲಿ ಆಯುಧಂಗಳಹೊಡೆವ ಸೈನ್ಯವ ನೋಡಿ ಹನುಮನುಹೊಡೆದು ಕರತಳದಿಂದಲೆಲ್ಲರಪುಡಿಯ ಮಾಡಿದನು 26 ನೀಲಕಂಠನ ವರಗಿರಿಪ್ರಭಏಳುಮಂದಿಯ ಮಂದಿ ಪುತ್ರರಕಾಲಿನಿಂದಲಿ ಒದ್ದು ಕೆಡಹಿದನಾಳು ಮಾಧವನಾ 27 ಧುರದಿ ಮುಂಭಾಗದಲಿ ಪೋಗುವಗರುವ ಮಾಡುವ ರಾಕ್ಷಸಂಗಳಮುರಿದು ಸೈನ್ಯದ ತೃತೀಯ ಭಾಗವಹರಿಯು ಕೊಂದಿಹನು 28 ಪೋರ ಬಲವನು ಕೇಳಿ ಹನುಮನಚಾರ ಮುಖದಲಿ ಸ್ವಾತ್ಮ ಸದೃಶರುಮಾರ ಕಾಕ್ಷಾಭಿಧನ ಕಳುಹಿದ ವೀರ ರಾವಣನು 29 ಉತ್ತುಮಾಸ್ತ್ರಗಳಿಂದ ಮಂತ್ರಿತವೆತ್ತಿ ಬಾಣಗಳ್ಹೊಡೆದು ಹನುಮನಕೆತ್ತಿ ಹಾಕಲು ಅಕ್ಷ ಸಾಲದೆಶಕ್ತಿ ನಿಂತಿಹನು 30 ಮಂಡ ಮಧ್ಯೆಯ ತನಯ ಅಕ್ಷನುಪುಂಡ ರಾವಣ ಸಮನು ಸೈನ್ಯದಹಿಂಡಿನೊಳು ತೃತೀಯಾಂಶ ಯಂದುದ್ದಂಡ ಚಿಂತಿಸಿದಾ 31 ಹತ್ತು ತಲೆಯವನನ್ನೆ ಕೊಲ್ಲುವದುತ್ತಮಾತ್ಮವು ಆದರೀತನುತುತ್ತು ರಾಮಗೆ ಕಾರಣಿಂಥಾಕೃತ್ಯ ಥರವಲ್ಲಾ 32 ಇಂದ್ರಜಿತನನು ನಾನು ಈಗಲೆಕೊಂದು ಹಾಕಿದರಿವನ ಕೃತಿಗಳಛಂದ ನೋಡುವುದಿಲ್ಲಾ ಕಪಿಗಳವೃಂದ ಯುದ್ಧದಲಿ 33 ತತ್ಸಮಾಗಿಹ ಮೂರನೆಯವನ್ಹತ್ಯೆ ಮಾಡುವೆನೆಂದು ಹನುಮನುಚಿತ್ತದಲಿ ಚಿಂತಿಸುತ ತತ್ವದ ವೆತ್ತಿ ಹಾರಿದನು 34 ತಿರುಹಿ ಚಕ್ರದ ತೆರನೆ ರಾಕ್ಷಸರರಸೀನಾತ್ಮಜನನ್ನು ಕ್ಷಣದಲಿಧರಿಯ ಮೇಲಪ್ಪಳಿಸಿ ಒಗೆದನುಮರುತನಾತ್ಮಜನು 35 ಹನುಮನಿಂದಲಿ ತನ್ನ ಕುವರನುಹನನ ಪೊಂದಲು ನೋಡಿ ರಾವಣಮನದಿ ಶೋಕಿಸುತಾತನಣ್ಣನರಣಕೆ ಕಳುಹಿದನು36 ಇಂದ್ರಜಿತು ಪರಮಾಸ್ತ್ರಯುತ ಶರವೃಂದದಲಿ ಹೊಡೆದು ಹನುಮನಹಿಂದಕಟ್ಟಲು ಶಕ್ತಿ ಸಾಲದೆನಿಂದು ಚಿಂತಿಸಿದಾ 37 ಸರವ ದುಃಸಹವಾದ ಬ್ರಹ್ಮನಪರಮಮಸ್ತ್ರವ ಬಿಡಲು ರಾವಣಿಹರಿಯು ವ್ಯಾಕುಲನಾಗದಲೆ ಈಪರಿಯ ಚಿಂತಿಸಿದಾ 38 ವಾಣಿನಾಥನ ಎಷ್ಟೊ ವರಗಳನಾನು ಮೀರಿದೆ ದುಷ್ಟ ಜನದಲಿಮಾನಿನೀಯನು ಕಾರಣಾತನಮಾನ ಮಾಡುವೆನು 39 ದುಷ್ಟ ರಾಕ್ಷಸರೆಲ್ಲ ಎನ್ನನುಕಟ್ಟಿ ಮಾಡುವದೇನು ಪುರಿವಳಗಿಷ್ಟು ಪೋಗಲು ರಾಕ್ಷಸೇಶನಭೆಟ್ಟಿಯಾಗುವದು 40 ಹೀಗೆ ಚಿಂತಿಸಿ ಹನುಮನಸ್ತ್ರಕೆಬಾಗಿ ನಿಲ್ಲಲು ಅನ್ಯ ಪಾಶಗಳಾಗೆ ಬಿಗಿದರು ಬ್ರಹ್ಮನಸ್ತ್ರವುಸಾಗಿತಾಕ್ಷಣದಿ 41 ಕಟ್ಟಿ ಕಪಿಯನು ರಾಕ್ಷಸೇಶನ ಭೆಟ್ಟಿಗೊಯ್ಯಲು ಆತನೀತನದೃಷ್ಟಿಯಿಂದಲೆ ನೋಡಿ ಪ್ರಶವನೆಷ್ಟೊ ಮಾಡಿದನು 42 ಕಪಿಯೆ ನೀನು ಕುತೋಸಿ ಕಸ್ಯವಾಕೃತಿಯ ಮಾಡಿದಿ ಯಾತಕೀಪರಿಕಿತವ ಕೇಳಲು ರಾಮನೊಂದಿಸಿ ಚತುರ ನುಡಿದಿಹನು 43 ಹೀನ ರಾವಣ ತಿಳಿಯೇ ಎನ್ನನು ಮಾನವೇಶ್ವರ ರಾಮದೂತನುಹಾನಿಮಾಡಲು ನಿನ್ನ ಕುಲವನುನಾನು ಬಂದಿಹೆನು 44 ಜಾನಕೀಯನು ರಾಮದೇವಗೆಮಾನದಿಂದಲಿ ಕೊಡದೆ ಹೋದರೆಹಾನಿ ಪೊಂದುವಿ ಕೇಳೊ ನೀ ನಿಜಮಾನವರ ನೀ ಕೂಡಿ 45 ಶಕ್ತರಾಗರು ಸರ್ವ ದಿವಿಜರುಮತ್ರ್ಯನಾತನ ಬಾಣ ಧರಿಸಲುಎತ್ತೋ ನಿನಗಿವಗಿನ್ನು ಧರಿಸಲುಹತ್ತು ತಲೆಯವನೆ 46 ಸಿಟ್ಟು ಬಂದರೆ ಆತನೆದುರಿಲಿಘಟ್ಟಿನಿಲ್ಲುವನಾವ ರಾಕ್ಷಸಇಷ್ಟು ಸುರದಾನವರೊಳಾತನದೃಷ್ಟಿಸಲು ಕಾಣೆ 47 ಇಂಥಾ ಮಾತನು ಕೇಳುತಾತನಅಂತ ಮಾಡಿರಿಯನ್ನೆ ವಿಭೀಷಣಶಾಂತ ಮಾಡಲು ಪುಚ್ಛ ದಹಿಸಿರಿಯಂತ ನುಡಿದಿಹನು 48 ಅರಿವೆಯಿಂದಲಿ ಸುತ್ತಿ ಬಾಲಕೆಉರಿಯನ್ಹಚ್ಚಲು ಯಾತುಧಾನರುಮರುತ ಮಿತ್ರನು ಸುಡದೆ ಹನುಮಗೆಹರುಷ ನೀಡಿದನು 49 ಯಾತುಧಾನರು ಮಾಡಿದಂಥಪಘಾತವೆಲ್ಲವ ಸಹನ ಮಾಡಿದವಾತಪೋತನು ಲಂಕೆ ದಹಿಸುವಕೌತುಕಾತ್ಮದಲಿ 50 ತನ್ನ ತೇಜದಿ ವಿಶ್ವಕರ್ಮಜಘನ್ನಪುರಿಯನು ಸುಟ್ಟು ಬಾಲಗವನ್ಹಿಯಿಂದಲೆ ಸರ್ವತಃ ಕಪಿಧನ್ಯ ಚರಿಸುತಲೆ 51 ಹೇಮರತ್ನಗಳಿಂದ ನಿರ್ಮಿಸಿದಾಮಹಾ ಪುರಿಯನ್ನು ರಾಕ್ಷಸಸ್ತೋಮದಿಂದಲಿ ಸಹಿತ ಸುಟ್ಟುಸುಧಾಮ ಗರ್ಜಿಸಿದಾ 52 ಹನುಮಸಾತ್ಮಜ ರಾಕ್ಷಶೇಶನತೃಣ ಸಮಾನವ ಮಾಡಿ ನೋಡಲುದನುಜರೆಲ್ಲರ ಭಸ್ಮ ಮಾಡುತಕ್ಷಣದಿ ಹಾರಿದನು 53 ಕಡಲ ದಾಟುತ ಕಪಿಗಳಿಂದಲಿಧಡದಿ ಪೂಜಿತನಾಗಿ ಮಧುವನುಕುಡಿದು ರವಿಜನ ವನದಿ ರಾಘವನಡಿಗೆ ಬಂದಿಹನು 54 ಸೀತೆ ನೀಡಿದ ಚೂಡಾರತ್ನವನಾಥನಂಘ್ರಿಯೊಳಿತ್ತು ಸರ್ವಶಗಾತ್ರದಿಂದಲಿ ನಮಿಸಿ ರಾಮಗೆಶಾತ ನೀಡಿದನು 55 ರಾಮನಾದರು ಇವಗೆ ನೀಡುವಕಾಮ ನೋಡದೆ ಭಕ್ತಿಭರಿತಗೆಪ್ರೇಮದಿಂದಲಿ ಅಪ್ಪಿಕೊಂಡನುಶ್ರೀ ಮನೋಹರನು 56 ಇಂದಿರೇಶನೆ ಎನ್ನ ಚಿತ್ತದಿನಿಂದುಮಾಡಿದ ನೀಸುಕವನವನಿಂದು ಭಕ್ತಿಲಿ ತತ್ಪುದಾಂಬುಜದ್ವಂದ್ವಕರ್ಪಿಸುವೆ 57 ಇತಿ ಶ್ರೀ ಸುಂದರ ಕಾಂಡಃ ಸಮಾಪ್ತಃ (ಪ್ರಾಕೃತ)ಶ್ರೀ ಗುರುವರದ ಇಂದಿರೇಶಾರ್ಪಣಮಸ್ತು ನೋಡುವೆನು ನೋಡುವೆನು ತೋರಿಸುನಿಮ್ಮ ನೋಡುವೆ ಪ ನೋಡುವೆ ಮಾಡು ದಯ ಎನ್ನೊಳುರೂಢಿಯೊಳಗೆ ನಿಮ್ಮ ಪಾಡುತ ಮಹಿಮೆ ಅ.ಪ. ಮದನ ಜನಕನೊಳು ಕದನ ಮಾಡಿದ ದು-ರ್ಯೋಧನನ ಶಿರದೊಳಿಟ್ಟ ಪದುಮ ಪಾದಗಳನು 1 ನೂರುಗಾವುದ ಜಲ ಹಾರುವಾಗಲೆ ದಿವ್ಯಭೂರುಹ ಕೆಡದಿಹ ಊರುಗಳನ್ನು ಸ್ವಾಮಿ 2 ಕೆಟ್ಟ ಬಕನ ಕೊಂದು ಅಷ್ಟು ಅನ್ನವನುಂಡಹೊಟ್ಟಿ ನೋಡುವೆ ದಿವ್ಯ ದೃಷ್ಟಿ ನೀಡಿರಿ ಸ್ವಾಮಿ 3 ಭೂಮಿ ಸುತೆಯ ವಾರ್ತೆ ರಾಮನು ಕೇಳಿದಾಪ್ರೇಮಾಲಿಂಗನವಿತ್ತ ಆ ಮಹಾವುರವನ್ನೆ 4 ಮದಗಜಗಳ ಕೂಡ ಕದನ ಮಾಡಿದ ದಿವ್ಯಗದೆಯ ಪಿಡಿದ ಕರವದು ಮಗಳನು ಸ್ವಾಮಿ 5 ಅಜಗರ ನಹುಷನ ವಿಜಯ ಸಹೋದರ ಪದುಮನಾಭನ ಗುಣಮುದದಿ ಸಾರುತ ದೈತ್ಯ ಕದನಗೆಳೆದ ನಿನ್ನ ವದನಕಮಲವನ್ನು 6 ವೇದ ಶಾಸ್ತ್ರಗಳನ್ನು ಓದಿ ಹೇಳುತ ಶಿಷ್ಯಮೋದಗರೆವ ನಿನ್ನ ವಾಣಿ ಸ್ವಾದು ಕೇಳುವೆ ನಿನ್ನ 7 ಇಂದಿರೇಶನ ದಯದಿಂದ ಗೆಲಿದಿ ಇಪ್ಪ-ತ್ತೊಂದು ಮತವ ಆನಂದ ತೀರ್ಥರೆ ನಿಮ್ಮ 8
--------------
ಇಂದಿರೇಶರು
ಸಾಕು ಬಿಡು ಭಾವೆ ಸಾಕು ಬಿಡು ನಿನ್ನ ಹೋಕೆ ಮಾತುಗಳೆಷ್ಟುಸಾಕು ಬಿಡು ಪ ಮದಗಜಗಮನೆ ನೀ ಒದೆವೋದ್ಯಾತಕೆ ಕಲಿತೆಬದಿಯಲಿದ್ದವರು ಇದಕೆ ನಗರೇನೆ ಸಖಿಯೆ ಬದಿಯಲಿದ್ದವರು ನಗರೇನೆ ನಿನ್ನ ಬುದ್ದಿಅದ್ಬುತವಾಗಿ ಈಗ ಬೆಳೆದಿದೆ ಸಖಿಯೆ1 ಸುದತಿ ಸುಭದ್ರಾಗೆ ಕದನ ಕಠೋರಿ ಸರಿಯೇನ ಸಖಿಯೆ2 ಎತ್ತಿ ಒಯ್ದವ ನಿನ್ನ ಅತ್ಯಂತ ಸುಖಿಸಿದ ಲತ್ತಿತಿಂದೊಬ್ಬ ಬಳಲುವಲತ್ತಿತಿಂದೊಬ್ಬ ಬಳಲುವ ನಿನ್ನ ನಡತೆವಿಸ್ತಾರವಾಗಿ ಈಗ ತಿಳಿಸಿದೆ ಸಖಿಯೆ3 ತಾಯಿ ಮಕ್ಕಳೊಳು ನ್ಯಾಯವನಿಕ್ಕುವಿಮಾಯಗಾರುತಿಯೆ ಬಲು ಮೂದೇವಿಮಾಯಗಾರುತಿಯೆ ಬಲು ಮೂದೇವಿ ನಿನಕಂಡುಬಾಯಿ ಬಿಡುತಾರೆ ಜನರೆಲ್ಲ ಸಖಿಯೆ4 ಖ್ಯಾತ ರಾಮೇಶ ಈಗ ಈ ಮಾತೆಲ್ಲಿ ಕಲಿತೆಂದ ಚಾತುರ್ಯದಲ್ಲಿ ಚಪಲನೆಚಾತುರ್ಯದಲ್ಲಿ ಚಪಲ ಚನ್ನಿಗನೆಂಬೊಪಾರ್ಥನು ನಿನಗೆ ಗುರುವೇನ ಸಖಿಯೆ 5
--------------
ಗಲಗಲಿಅವ್ವನವರು
ಹಮ್ಮನಳಿದು ನಮ್ಮ ಮತವ- ನೆಮ್ಮ ಜಯಮುನೀಂದ್ರ ಕೃತಿಯ ರಮ್ಯರಸವ ಸವಿದು ಸವಿದು ನಿಮ್ಮ ದುರ್ಮತಗಳನೆ ಬಿಡಿರೊ ಪ. ಸುಖಮುನಿ ಚತುರ್ಮುಖರು ಕುಮತ ನಿಕರವ ನೋಡಿ ಮನಕೆ ತಂದು ಪಾದ ತೊಳೆಯಲು ಭಕುತಿಭರದಿ ಗಿರೀಶಮುಖ್ಯ ಸುರರು ಶಿರದ ಮೇಲೆ ಲಕುಮಿ ಆತ್ಮಕರಾಗಿ ಧರಿಸಿ ಸುಖಿಸಿದ ಕಥೆ ಸ್ಮøತಿಯೊಳಿರಲು 1 ಯೋಗಿ ಜಯಮುನೀಂದ್ರ ಕೃಪಾ- ಸಾಗರನಾಗಿ ಧರೆಗೆ ಬಂದು ಈ ಗುರುಕೃತಿಗಂಗೆಯ ಬೇಗ ತಾನು ತುತಿಸಿ ಮೈಯ ಯಾಗಗೊಳಿಸಿ ಸಹಸ್ರ ಮುಖದಿ ಭಾಗವತರೆಂಬ ಬುಧರಿಗಿತ್ತ ಭಾಗ್ಯವ ನೀವೆಲ್ಲ ನೋಡಿರೊ 2 ಶ್ರುತಿಮಯವಾದ ಬಹಳ ಬಲು ಯು ಕುತಿಯನೆ ಅಳವಡಿಸಿ ಸು- ಮಂದರ ಹೂಡಿ ಮಥಿಸಿ ಮಧ್ವಮತಾಬ್ಧಿಯ ಯತಿಶಿರೋಮಣಿ ಜಯಮುನಿ ಶ್ರೀ- ಪತಿ ಹಯವದನ್ನ ಬಲದಿ ಶ್ರುತಿಯಮೃತವ ರಚಿಸಿದ ನಮ್ಮ ಕ್ಷಿತಿಸುರರೆ ಕುಡಿದು ನೋಡಿರೋ3
--------------
ವಾದಿರಾಜ
ಹೋದ್ಯಾ ಶೇಷಗಿರಿದಾಸ ಸುಲಭ ಹಾದಿಯನು ಮೆಟ್ಟಿ ನಮ್ಮನು ಭವಾಬ್ದಿಯೊಳಿಟ್ಟು ಪ ಸಲಹಿದೆನು ಸಾಕಿದೆನು ಕಾಲಕಾಲಕೆ ನೋಡಿ ತಿಳಿಸಿದೆನು ತತ್ವಗಳು ನಿರುತ ಬಿಡದೆ ಬಳಿವಿಡಿದು ತಿರುಗಿ ಉಣಿಸಿದೆನು ಉಡಿಸಿದೆನು ವೆ- ಗ್ಗಳವಾಗಿ ನೋಡಿ ಸುಖಿಸಿದೆನೊ ಮಾತಾಡಿ 1 ನಿನ್ನ ಮ್ಯಾಲಿನ ಕರುಣ ಕಮಲಾಕ್ಷ ವೇಗದಲಿ ಎನ್ನಮ್ಯಾಲೆ ಇನ್ನು ಮಾಡಲಿಲ್ಲ ಮುನ್ನೆ ಸಾಧನ ಪೂರ್ತಿ ನಿನಗಾಯಿತೇನೋ ಸಂ ಪನ್ನಮತಿ ಉಳ್ಳವನೆ ಸಜ್ಜನ ಶಿರೋಮಣಿ 2 ಧಿಕು ಎನ್ನ ಜನುಮ ನಿನ್ನಂಥ ಪ್ರಿಯನ ಬಿಟ್ಟು | ಅಕಟಕಟ ಭೂಮಿಯೊಳು ಬದುಕುವದೂ | ಸಿರಿ ವಿಜಯವಿಠ್ಠಲ ನಿನ್ನ ಭಕುತಿಗೆ ಮೆಚ್ಚಿ ತಡಮಾಡದಲೆ ಕರದೊಯ್ದು 3
--------------
ವಿಜಯದಾಸ
ಗಂಭೀರೆಯರ ನಿಲ್ಲಿಸಿದಿಪೋರಬುದ್ಧಿಯ ಬಾಲೆನೀರೆಮನಕೆ ತಾರೆ ಪ.ನೀರಜಾಕ್ಷೆಯರ ನಿನ್ನದ್ವಾರದಿ ನಿಲ್ಲಿಸಿದಿಪೋರಬುದ್ಧಿಯನೆಲ್ಲತೋರಿಸಿದೆ ಈಗ 1ನೋಡಿ ನಮ್ಮನು ಕರೆಯದೆಓಡಿದೆ ಒಳಗಿನ್ನುಮಾಡಿದ ಕಪಟದ ಸೇಡುತೆಗೆಯುವೆ ನೀಗ 2ಮೂಡಲಗಿರಿವಾಸನೋಡುವಂತೆಮಾರಿಬಾಡಿಸಿ ಕಳಿಸುವೆನೋಡಿಕೊ ರುಕ್ಮಿಣಿ 3ಹೀನಗುಣದ ಬಾಲೆಮಾನವು ನಿನಗಿಲ್ಲಶ್ರೀನಿವಾಸನು ನಿನ್ನಏನೆಂದು ಮದುವೆಯಾದ 4ರಜವೆಂಬೊಗುಣಸೇರಿರಾಜ್ಯ ಭೋಗವಬಟ್ಟೆತ್ರಿಜಗವಂದನ ಕೂಡಭುಜಗಾಲಿಂಗನೆಯಾಕೆ 5ಸತ್ವಗುಣವ ಸೇರಿಅತ್ಯಂತ ಸುಖಿಸಿದಿಚಿತ್ತಜನಯ್ಯಗೆಪತ್ನಿ ತಕ್ಕವಳಲ್ಲ 6ತಮವೆಂಬೊ ಗುಣಗಳಸುಮ್ಮನೆ ಗುತ್ತಿಗೆ ಹೊತ್ತಿರಮಿ ಅರಸನ ಕೂಡರಮಿಸೋದು ತರವಲ್ಲ 7
--------------
ಗಲಗಲಿಅವ್ವನವರು
ರಂಗ ಒಲಿದ ದಾಸರಾಯರ - ಪಾದಯುಗ್ಮಕಂಗಳಿಂದ ನೋಡಿದಾವರÀ - ಪಾಪಂಗಳೆಲ್ಲಹಿಂಗಿಪೋಪವಲ್ಲೊ ಸತ್ವರ - ಏನು ಪೇಳಲೀವರಾ ಪತುಂಗಮಹಿಮೆ ತೋರಿ ಜನಕೆಮಂಗಳಾವ ಕೊಡುವರಿಂಥಾ ಅ.ಪಬ್ಯಾಗವಾಟನಾಮ ಗ್ರಾಮದಿ - ನಾರಸಿಂಹಭಾಗವತಆದಿ ಶಾಸ್ತ್ರಭೋಗಿಶಯನ ಕರುಣದಿಂದಆಗ ಈಗ ಎನದೆ ಸದಾನುರಾಗ ತೋರುವಂಥ 1ಮುದದಿ ದಾಸ್ಯಭಾವದಿಂದಲಿ - ಜಗದಿ ಜನರಹೃದಯಭಾವಪೂರ್ತಿಯಿಂದಲಿ- ಪ್ರೀತಿಗೈದುಪದುಮನಾಭನ ಪ್ರೀತಿಯಿಂದಲಿ - ಗುಣಗಳನ್ನುಭುಧರಮ್ಯಾಳಸಂಗದಿಂದಮುದದಿ ಮನವ ಧರಿಸಿನಿತ್ಯಪದುಮನಾಭನ ಭಜನಿಗೈಯುತ - ತತ್ವಸಾರವದನದಿಂದುಚ್ಭಾರ ಗೈಯುತ - ತೀರ್ಥಯಾತ್ರೆಮುದದಿಕಾಯಧರಿಸಿ ಹರಿಯ ಭಜನೆಗೈದು ಸುಖಿಸಿದಂಥ2ಖ್ಯಾತ ಶುಕ್ಲ ಬಾದ್ರಪದದಿ ನವಮಿ ಜಗ -ನ್ನಾಥ ವಿಠಲಪಾದಪದುಮದಿ ಮನವೆ ಮೊದಲುಭೂತಕಾಶಮಾರ್ಗ ಸಂಗದಿ - ಹೃದಯ ಮಂಡಲಧಾತನಿಂದ ಕೂಡಿ ವಿ -ಧಾತನಾಂಡ ಭೇಧಿಸಿ ಗುರುಜಗ -ನ್ನಾಥ ವಿಠಲಪಾದಪೊಂದಿದಾ - ಈತನಂಥಆತುರಾದಿ ಕೊಡುವ ನಂದನ - ಏನು ಮಹಿಮೆವಾತದೇವನ ನಿಜಾವೇಶದಿಂದ ಯುಕ್ತರಾದ 3
--------------
ಗುರುಜಗನ್ನಾಥದಾಸರು